Girl in a jacket

Author kendhooli_editor

ವಿಜ್ಞಾನ-ತಂತ್ರಜ್ಞಾನದ ಪ್ರಗತಿ ಮೂಲಕ ವೈಜ್ಞಾನಿಕ ಭಾರತದ ನಿರ್ಮಾತೃ ನೆಹರೂ : ಸಿ.ಎಂ*

ಬೆಂಗಳೂರು ಮೇ 27: ನೆಹರೂ ಹಾಕಿದ ಅಡಿಪಾಯಗಳಿಂದ ಭಾರತ ವಿಶ್ವದ ಐದನೇ ದೊಡ್ಡ ಆರ್ಥಿಕ ಶಕ್ತಿಯಾಗಿದೆ. ಅಪಾರ ಶಿಕ್ಷಣ ಮತ್ತು ಜ್ಞಾನ ಹೊಂದಿದ್ದ ನೆಹರೂ ಆಧುನಿಕ‌ ಭಾರತದ ನಿರ್ಮಾಣಕ್ಕೆ ಭದ್ರವಾದ ಅಡಿಪಾಯ ಹಾಕಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವರಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಆಧುನಿಕ ಭಾರತದ ನಿರ್ಮಾತೃ ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದೇಶದಲ್ಲಿ ಭಾರತೀಯರ ಕಣ್ಣೀರು ಒರೆಸುವ, ನೋವುಗಳಿಗೆ ಪರಿಹಾರ ಒದಗಿಸುವುದು ನಮ್ಮ ಕೆಲಸ ಎಂದು ಆರಂಭದಲ್ಲಿ ಘೋಷಣೆ ಮಾಡಿ ನೆಹರೂ…

ಕನ್ನಡ ಅಂತಃಸತ್ವದ ಅನಾವರಣಕ್ಕೆಗಮಕ ಕಲೆ ಸಹಕಾರಿ

ಚಿತ್ರದುರ್ಗ,ಮೇ, 26–ಚಿತ್ರದುರ್ಗದ ಗಮಕ ಕಲಾಭಿಮಾನಿಗಳ ಸಂಘವು ಎಷ್ಟೇ ಅಡೆ ತಡೆಗಳು ಬಂದರೂ ಕಷ್ಟ ಕಾರ್ಪಣ್ಯಗಳು ಉಂಟಾದರೂ ನಿರಂತರವಾಗಿ ಗಮಕ ಕಲೆಯ ಪ್ರಚಾರ ಹಾಗೂ ಪ್ರಸಾರಕ್ಕಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಸ್ಥಳೀಯ ಬಾಪೂಜಿ ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿಗಳು ಹಾಗೂ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷಕೆ.ಎಂ. ವೀರೇಶ್ ಅವರು ಅಭಿಪ್ರಾಯಪಟ್ಟರು. ಅವರು ಇಲ್ಲಿನ ಗಮಕ ಕಲಾಭಿಮಾನಿಗಳ ಸಂಘವು ಜೆ ಸಿ ಆರ್ ಗಣಪತಿ ದೇವಾಲಯದಲ್ಲಿ ಏರ್ಪಡಿಸಿದ್ದ ಸಂಘದ ನಲವತ್ತನೇ ವಾರ್ಷಿಕೋತ್ಸವದ ನೆನಪಿಗಾಗಿ  22ನೇ ಮಾಸಿಕ ಗಮಕ ವಾಚನ ವ್ಯಾಖ್ಯಾನದಲ್ಲಿ…

ಕೊರೊನಾ ಪರಿಸ್ಥಿತಿ ಎದುರಿಸಲು ಸನ್ನದ್ದರಾಗಲು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸಿ.ಎಂ ಸೂಚನೆ

ಬೆಂಗಳೂರು, ಮೇ,26-ಕೋವಿಡ್ ಸಂಬಂಧಿಸಿದಂತೆ ಯಾವುದೇ ಪರಿಸ್ಥಿತಿ ಬಂದರೂ ಎದುರಿಸಲು ಅಧಿಕಾರಿಗಳು ಸಿಬ್ಬಂದಿಗಳು ಸನ್ನದ್ದರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸಿ ಸೂಚಿಸಿದರು. ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್,…

ಅನಿಯಂತ್ರಿತ ಮೂರ್ಛೆ ರೋಗ ಹೊಂದಿದ್ದ 21 ವರ್ಷದ ಯುವಕನಿಗೆ ಯಶಸ್ವಿ ಡೀಪ್ ಬ್ರೈನ್ ಸ್ಟಿಮ್ಯುಲೇಶನ್ ಚಿಕಿತ್ಸೆ

ಬೆಂಗಳೂರು,ಮೇ,26-: ಪದೇಪದೇ ಮೂರ್ಛೆರೋಗಕ್ಕೆ ತುತ್ತಾಗುತ್ತಿದ್ದ 21 ವರ್ಷದ ಯುವಕನಿಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ರಾಜ್ಯದಲ್ಲೇ ಮೊದಲ ಉದ್ದೇಶಿತ ಡೀಪ್ ಬ್ರೈನ್ ಸ್ಟಿಮ್ಯುಲೇಶನ್ (ಡಿಬಿಎಸ್) ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಫೋರ್ಟಿಸ್‌ ಆಸ್ಪತ್ರೆಯ ನರಶಸ್ತ್ರಚಿಕಿತ್ಸೆಯ ಹೆಚ್ಚುವರಿ ನಿರ್ದೇಶಕ ಡಾ. ರಘುರಾಮ್ ಜಿ ಮತ್ತು ನರವಿಜ್ಞಾನದ ಹೆಚ್ಚುವರಿ ನಿರ್ದೇಶಕ ಡಾ. ಗುರುಪ್ರಸಾದ್ ಹೊಸೂರ್ಕರ್ ವೈದ್ಯರ ತಂಡ ಈ ಚಿಕಿತ್ಸೆ ನಡೆಸಿದೆ. ಈ ಕುರಿತು ಮಾತನಾಡಿದ ಡಾ. ರಘುರಾಮ್ ಜಿ, ಯೆಮನ್‌ ಮೂಲದ 21 ವರ್ಷದ ಮೊಹಮದ್ ಎಂಬ ಯುವಕ ಕಳೆದ 12 ವರ್ಷಗಳಿಂದ…

ಸಿವಿಲ್ ಪ್ರಕರಣಗಳಲ್ಲಿ ರಾಜಿ ಸಂಧಾನ ಕಡ್ಡಾಯ ಕೇಂದ್ರ ಕಾನೂನು ಸಿಪಿಸಿಗೆ ರಾಜ್ಯ ತಿದ್ದುಪಡಿ – ಎಚ್.ಕೆ ಪಾಟೀಲ

ಬೆಂಗಳೂರು,ಮೇ,26-ನ್ಯಾಯದಾನ ಪದ್ಧತಿಯಲ್ಲಿ ಸುಧಾರಣೆಗಾಗಿ ಕೇಂದ್ರದ ಕಾನೂನಾದ ಸಿವಿಲ್ ಪ್ರಕ್ರಿಯಾ ಸಂಹಿತೆಗೆ(ಸಿಪಿಸಿ)ಗೆ ಕರ್ನಾಟಕ ತಿದ್ದುಪಡಿಗಳನ್ನು ಮಾಡಿತ್ತು. ಈ ತಿದ್ದುಪಡಿಗಳು ರಾಷ್ಟ್ರದ ಕಾನೂನಿನಲ್ಲಿ ರಾಜ್ಯವ್ಯಾಪಿ ಜಾರಿಯಲ್ಲಿರುತ್ತವೆ. ಶಾಸಕಾಂಗ ಮಾಡಿದ ಈ ತಿದ್ದುಪಡಿಗೆ ರಾಷ್ಟ್ರಪತಿಗಳ ಅಂಕಿತ ದೊರಕಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು. ಸಿವಿಲ್ ನ್ಯಾಯಾಲಯಗಳಲ್ಲಿ ದಾಖಲಾಗುವ ಪ್ರಕರಣಗಳಿಗೆ ದಶಕಗಟ್ಟಲೇ ಕಾಯುವ / ವಿಳಂಬಕ್ಕೆ ಮುಕ್ತಿ ನೀಡಲು ಕರ್ನಾಟಕ ಯಶಸ್ವಿಯಾದ ದಿಟ್ಟಹೆಜ್ಜೆಯನ್ನಟ್ಟಿದೆ. ಕರ್ನಾಟಕ ಸರ್ಕಾರ ಕ್ರಾಂತಿಕಾರಕ ತಿದ್ದುಪಡಿಯನ್ನು…

ಅತ್ಯಾಚಾರ ಆರೋಪಿ ಮಡೆನೂರು ಮನುಗೆ14 ದಿನ ನ್ಯಾಯಾಂಗ ಬಂಧನ

ಬೆಂಗಳೂರು,ಮೇ,26-ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ನಟ ಮಡೆನೂರು ಮನುಗೆ 14ದಿನಗಳ ಕಾಲ ನ್ಯಾಯಂಗ ಬಂಧನಕ್ಕೊಳಪಡಿಸಿ  3 ನೇ ಎಸಿಎಂಎಂ ನ್ಯಾಯಾಲಯ ಆದೇಶಿದೆ. ಮನು ವಿರುದ್ದ ಸಹಕಲಾವಿದೆ ಅತ್ಯಾಚಾರ ಆರೋಪ ಮಾಡಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಪೊಲೀಸರು ಕೆಲ ದಿನಗಳ ಹಿಂದಷ್ಟೆ ಮಡೆನೂರು ಮನುವನ್ನು ಬಂಧಿಸಿದ್ದರು. ಪೊಲೀಸರು ಎರಡು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದ್ದರು. ಎರಡು ದಿನಗಳ ತನಿಖೆ, ಮಹಜರು, ಹೇಳಿಕೆ ದಾಖಲು ಇತ್ಯಾದಿಗಳ ಬಳಿಕ ಇಂದು ಪೊಲೀಸರು ಮಡೆನೂರು…

ಸ್ವಚ್ಛವಾಹಿನಿ ಚಾಲಕಿಯರ ವೇತನ ಹಾಗೂ ಸೌಲಭ್ಯಗಳ ನಿರ್ವಹಣೆಗೆ ಪ್ರತ್ಯೇಕ ಅಧಿಕಾರಿ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು, ಮೇ,26-ಗ್ರಾಮೀಣ ಮಹಿಳೆಯರನ್ನು ಔದ್ಯೋಗಿಕವಾಗಿ ತೊಡಗಿಸುವ ಉದ್ದೇಶದೊಂದಿಗೆ ಹಾಗೂ ಮಹಿಳೆಯರಿಗೆ ಸಮಾನ ಅವಕಾಶ ಒದಗಿಸುವ ಮತ್ತು ಆತ್ಮವಿಶ್ವಾಸವನ್ನು ತುಂಬುವ ನಿಟ್ಟಿನಲ್ಲಿಗ್ರಾಮ ಪಂಚಾಯತಿಗಳಲ್ಲಿ ಆರಂಭಿಸಿರುವ ‘ಸ್ವಚ್ಛ ವಾಹಿನಿʼ ಗ್ರಾಮೀಣ ನೈರ್ಮಲ್ಯದ ಯೋಜನೆಯಡಿ ಕಾರ್ಯನಿರ್ವಹಿಸುತ್ತರುವ ಮಹಿಳಾ ಚಾಲಕಿಯರ ವೇತನ, ಸುಸಜ್ಜಿತ ಸ್ಥಿತಿಯಲ್ಲಿ ವಾಹನಗಳ ನಿರ್ವಹಣೆ, ಇಂಧನ ಮುಂತಾದ ಅವಶ್ಯಕತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಒಬ್ಬ ಪ್ರತ್ಯೇಕ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಸ್ವಚ್ಛ ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ…

ಕೆಎಸ್ಡಿಎಲ್ ಮೇಲೆ ಟೀಕೆ: ವಿಜಯೇಂದ್ರ ವಿರುದ್ಧ ಎಂ ಬಿ ಪಾಟೀಲ ಕಿಡಿ

ಬೆಂಗಳೂರು,ಮೇ,26-ಕೆಎಸ್ಡಿಎಲ್ ಸಂಸ್ಥೆಯ ವಿಚಾರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕನ್ನಡ ಅಸ್ಮಿತೆಯ ಬಗ್ಗೆ ಮಾತನಾಡುತ್ತಿದ್ದಾರೆ. ಹಿಂದೆ ಬಿಜೆಪಿ ಸರಕಾರವಿದ್ದಾಗ ಸಂಸ್ಥೆಯ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವ್ಯವಹಾರ ನಡೆಸಿ ಜೈಲಿಗೆ ಹೋಗಿದ್ದರು. ಆಗ ತೆಪ್ಪಗಿದ್ದ ವಿಜಯೇಂದ್ರ ಅವರಿಗೂ ಮಾಡಾಳ್ ಗೂ ವ್ಯವಹಾರ ಇತ್ತೇನೋ. ಆಗ ಏಕೆ ಇವರಿಗೆ ಕನ್ನಡ ಅಸ್ಮಿತೆ ನೆನಪಾಗಲಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಸೋಮವಾರ ಕಿಡಿ ಕಾರಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಲ್ಲಿ ಮಾತನಾಡಿದ ಅವರು, ಕಳೆದ…

ರಾಜ್ಯದಲ್ಲಿ ಭಾರಿ ಮಳೆ, ಇನ್ನೂ ಐದು ದಿನ ಮಳೆ ಮುನ್ಸೂಚನೆ

ಬೆಂಗಳೂರು,ಮೇ,೨೬- ಕಳೆದ ಎರಡು ದಿನಗಳಿಂದ ರಾಜ್ಯದ ಹಲವಾರು ಕಡೆ ಸುರಿಯುತ್ತಿರುವ ಮಳೆಯಿಂದ ಹಲವಾರು ಜಾಶಯಗಳು ತುಂಬಿದ್ದು, ಹಲವು ಪ್ರದೇಶದಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಕಳೆದ ರಾತ್ರಿ ಬೆಳಗಾವಿಯಲ್ಲಿ ಮನೆ ಕುಸಿದು ಬಾಲಕನೊಬ್ಬ ಸಾವನ್ನಪ್ಪಿದ್ದರೆ,ಬೆಂಗಳೂರಿನಲ್ಲು ಮಳೆಗೆ ಇಬ್ಬರು ಬಲಿಯಾಗಿದ್ದಾರೆ. ಬೆಳಗಾವಿ,ಮಂಗಳೂರು ಉತ್ತರ ಕನ್ನಡ,ಸೇರಿದಂತೆ ರಾಜ್ಯದ ವಿವಿಧ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದ್ದು ಮಳೆ ನೀರಿನಿಂದ ಜನ ಜೀವನ ಅಸ್ತವ್ಯಸ್ತವಾಗಿದೆ, ಬೆಂಗಳೂರಿನಲ್ಲಿ ಹಲವಾರು ಪ್ರದೇಶಗಳು ಜಲಾವೃತವಾಗಿವೆ, ಇಂದು ಬೆಳಿಗ್ಗೆ ಸುರಿದ ಮಳೆಗೆ ರಸ್ತೆಯಲ್ಲಿ ನೀರು ಹರಿಯುತ್ತಿರುವ ಕಾರಣ ವಾಹನ ಸಂಚಾರಕ್ಕೂ…

ಬಿಜೆಪಿಯ ೧೮ ಶಾಸಕರ ಅಮಾನತು ರದ್ದು ವಾಪಾಸ್ ಪಡೆದ ಸ್ಪೀಕರ್

ಬೆಂಗಳೂರು,ಮೇ, ೨೫- ಶಿಸ್ತು ಪಾಲನೆ ಮಾಡದೆ ಅಶಿಸ್ತು ವರ್ತಿಸಿದರು ಎನ್ನುವ ಕಾರಣಕ್ಕೆ ಬಿಜೆಪಿಯ ೧೮ ಶಾಸಕರನ್ನು ಅಮಾನತು ಮಾಡಿದ್ದ ಆದೇಶವನ್ನು ವಿಧಾನಸಭಾಕ್ಷ ಯು.ಟಿ.ಖಾದರ್ ಹಿಂಪಡೆದಿದ್ದಾರೆ. ಈ ಕುರಿತು ಅಧಿಕೃತ ಆದೇಶವನ್ನು ಬಿಡುಗಡೆಗೊಳಿಸಿದ್ದು ಎಲ್ಲಾ ೧೮ ಶಾಸಕರ ಅಮಾನತುನ್ನು ರದ್ದು ಪಡಿಸಲಾಗಿದೆ ಎಂದು ಉಲ್ಲೇಖಿಸಲಾಗಿದೆ.ಕಳೆದ ಅಧಿವೇಶನದ ಅವಧಿಯಲ್ಲಿ ಸಭಾದ್ಯಕ್ಷರ ಪೀಠದ ಆದೇಶವನ್ನು ಲೆಕ್ಕಿಸದೇ ಸದನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಾ, ಅಶಿಸ್ತಿನಿಂದ ಹಾಗೂ ಅಗೌರವದಿಂದ ನಡೆದುಕೊಂಡಿದ್ದರಿಂದ ಮಾನ್ಯ ವಿಧಾನಸಭಾ ಸದಸ್ಯರಾದ ದೊಡ್ಡನಗೌಡ ಹೆಚ್. ಪಾಟೀಲ್, (ವಿರೋಧ ಪಕ್ಷದ ಮುಖ್ಯ ಸಚೇತಕರು),…

ಸಮಾನತೆಗಾಗಿ ಕ್ರಾಂತಿ ನಡೆದಿದ್ದು ಕಲ್ಯಾಣದಲ್ಲಿ ಮಾತ್ರ: ಈಶ್ವರ ಖಂಡ್ರೆ

ಮೈಸೂರು,ಮೇ,25-ಜಗತ್ತಿನಲ್ಲಿ ಹೆಣ್ಣಿಗಾಗಿ, ಹೊನ್ನಿಗಾಗಿ, ಮಣ್ಣಿಗಾಗಿ ಕ್ರಾಂತಿಗಳು ನಡೆದಿವೆ ಆದರೆ, ಸಮಾನತೆಗಾಗಿ, ಸಮಸಮಾಜದ ನಿರ್ಮಾಣಕ್ಕಾಗಿ ಕ್ರಾಂತಿ ನಡೆದಿದ್ದು ಕಲ್ಯಾಣದಲ್ಲಿ ಮಾತ್ರ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಮೈಸೂರು ಕಲಾಮಂದಿರದಲ್ಲಿಂದು ಆಯೋಜಿಸಿದ್ದ ಬಸವಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೌಢ್ಯ, ಅಸ್ಪೃಶ್ಯತೆ, ಶ್ರೇಣಿರಹಿತ, ಜಾತಿ ರಹಿತ ಸಮಾಜ ಬಸವಾದಿ ಶರಣರ ಕಲ್ಪನೆಯಾಗಿತ್ತು. 800 ವರ್ಷಗಳು ಕಳೆದರೂ ಅದು ಸಾಕಾರವಾಗಿಲ್ಲ ಎಂದರು. ಮಹಿಳೆಯರಿಗೆ ಸಮಾನತೆ ನೀಡಿದ್ದೇ ಬಸವಾದಿ ಶರಣರು. ಅಕ್ಕನಿಗೆ ಮಹಾದೇವಿ ಎಂದು ಹೇಳುವ ಮೂಲಕ…

ಆಪರೇಷನ್ ಸಿಂಧೂರ ಭಯೋತ್ಪಾದನೆ ಹೋರಾಟಕ್ಕೆ ಹೊಸ ವಿಶ್ವಾಸ ಮೂಡಿಸಿದೆ-ಮೋದಿ

ನವದೆಹಲಿ,ಮೇ೨೫- ಭಯೋತ್ಪಾದನೆಯನ್ನು ನಿರ್ಮೂಲನೆ ಮಾಡುವ ಭಾರತದ ಅಚಲ ಬದ್ದತೆಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಒತ್ತಿ ಹೇಳಿದ್ದು, ಆಪರೇಷನ್ ಸಿಂಧೂರ್ ಪ್ರಪಂಚದಾದ್ಯಂತ ಭಯೋತ್ಪಾದನೆಯ ವಿರುದ್ಧದ ಹೋರಾಟಕ್ಕೆ ಹೊಸ ವಿಶ್ವಾಸ ಮತ್ತು ಉತ್ಸಾಹವನ್ನು ನೀಡಿದೆ. ಇದು ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ನಮ್ಮ ದೃಢನಿಶ್ಚಯ, ಧೈರ್ಯ ಮತ್ತು ಬದಲಾಗುತ್ತಿರುವ ಭಾರತದ ಚಿತ್ರವಾಗಿದೆ. ಈ ಚಿತ್ರವು ಇಡೀ ದೇಶವನ್ನು ದೇಶsಕ್ತಿಯ ಭಾವನೆಗಳಿಂದ ತುಂಬಿಸಿ ತ್ರಿವರ್ಣ ಧ್ವಜದಲ್ಲಿ ಅಲಂಕರಿಸಿದೆ ಎಂದಿದ್ದಾರೆ ಆಪರೇಷನ್ ಸಿಂಧೂರ್ ಯಶಸ್ಸಿನ ನಂತರದ ಮೊದಲ ಬಾರಿಗೆ ತಮ್ಮ ಮಾಸಿಕ ರೇಡಿಯೋ…

ಮಾಜಿ ಡಿಜಿಪಿ ಓ ಪ್ರಕಾಶ್ ಹತ್ಯೆ ಪ್ರಕರಣ- ಕೌಟಂಬಿಕ ಕಲಹವೇ ಕಾರಣ

ಬೆಂಗಳೂರು, ಮೇ,25-ಮಾಜಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಓಂಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವುದಾಗಿ ಸಿಸಿಬಿ ತನಿಖೆಯಲ್ಲಿ ತಿಳಿಸಿದ್ದಾರೆ. ಗಂಡನ ಮೇಲೆ ಪತ್ನಿ ಪಲ್ಲವಿ ವಿಪರೀತ ಕೋಪ ಹೊಂದಿದ್ದರು. ಮಗಳಿಗೆ ಮದುವೆ ಮಾಡ್ತಿಲ್ಲ ಅಂತಾ ಕೋಪಗೊಂಡಿದ್ದರಂತೆ. ಅಲ್ಲದೇ ಅಷ್ಟು ದೊಡ್ಡ ಮನೆಯಲ್ಲಿದ್ರೂ ಪಲ್ಲವಿ ಕೈಯಲ್ಲಿ ಹಣ ಕೊಡ್ತಿರಲಿಲ್ಲ.. ಹಣದ ವ್ಯವಹಾರ ಎಲ್ಲಾ ತಾನೇ ನೋಡಿಕೊಳ್ತಿದ್ದರಂತೆ. ಅಲ್ಲದೇ ತನ್ನ ಸ್ವಂತ ಕುಟುಂಬಕ್ಕಿಂತಲೂ ತಂಗಿ ಕುಟುಂಬಕ್ಕೆ ಓಂಪ್ರಕಾಶ್ ಹೆಚ್ಚು ಒತ್ತು ಕೊಡ್ತಿದ್ದರಂತೆ. ಹೀಗಾಗಿ…

ಬಾಲಕಿ ಮೇಲೆ ಅತ್ಯಾಚಾರ ಆರೋಪ ;ಲೋಕೇಶ್ವರ ಸ್ವಾಮೀಜಿ ಬಂಧನ

ಬೆಳಗಾವಿ,ಮೇ,೨೪-ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ರಾಯಭಾಗ ತಲ್ಲೂಕಿನ ಮೇಖಳಿಯ ರಾಮಮಂದಿರದ ಲೋಕೇಶ್ವರ ಸ್ವಾಮೀಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ನಗರದ ಲಾಡ್ಜ್‌ನಲ್ಲಿ ಅತ್ಯಾಚಾರ ಎಸಗಿ ಬಳಿಕ ಮಹಾಲಿಂಗಪುರ ಬಸ್ ನಿಲ್ದಾಣದಲ್ಲಿ ಬಾಲಕಿಯನ್ನು ಬಿಡಲಾಗಿತ್ತು. ಬಾಗಲಕೋಟೆಯ ನವನಗರದ ಮಹಿಳಾ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾದ ನಂತರ ಬೆಳಗಾವಿಯ ಮೂಡಲಗಿಗೆ ವರ್ಗಾವಣೆಯಾಗಿತ್ತು. ಬಾಲಕಿಗೆ ೧೭ ವರ್ಷ ಆಗಿದ್ದು ಆಕೆ ಹುಷಾರಿಲ್ಲದೇ ಇದ್ದಾಗ ಪೋಷಕರು ಆಕೆಯನ್ನು ಆಗಾಗ ಮಠಕ್ಕೆ ತಂದು ಬಿಟ್ಟು ಹೋಗುತ್ತಿದ್ದರು. ವಾರಗಟ್ಟಲೇ ಮಗಳನ್ನು ಸ್ವಾಮೀಜಿಯ ಸುಪರ್ದಿಗೆ ಒಪ್ಪಿಸಿ ಮಠದಲ್ಲೇ…

ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ವೀರಶೈವ ಲಿಂಗಾಯತ ಸಮಾಜ: ಲಕ್ಷ್ಮೀ ಹೆಬ್ಬಾಳಕರ್

* *ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ಚಿಕ್ಕಮಗಳೂರು,ಮೇ,24-ದಯೆಯೇ ಧರ್ಮದ ಮೂಲ ಎಂದು ಸಾರಿದವರು ವೀರಶೈವ- ಲಿಂಗಾಯತರು , ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ನಮ್ಮದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಚಿಕ್ಕಮಗಳೂರಿನ ಶ್ರೀ ವೀರಶೈವ ಲಿಂಗಾಯತ ಸಮುದಾಯ ಭವನದಲ್ಲಿ ಶನಿವಾರ ನಡೆದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ವಿಶ್ವ ಗುರು ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಸಮಾಜದ ಮಗಳಾಗಿ ಕಾರ್ಯಕ್ರಮಕ್ಕೆ ಬಂದಿರುವೆ. ಬೇರೆ…

ಗ್ರಾಮ ಮಟ್ಟದಲ್ಲಿ ವಿಪತ್ತು ನಿರ್ವಹಣಾ ಸಮಿತಿಗಳನ್ನು ರಚಿಸಲು ರಾಜ್ಯಪಾಲ ಥಾವರಚ ಚಂದ್ ಸಲಹೆ

ಬೆಂಗಳೂರು ,ಮೇ,24- “ವಿಪತ್ತು ನಿರ್ವಹಣೆಯ ಪ್ರಮುಖ ಆಧಾರಸ್ತಂಭವೆಂದರೆ ಸ್ಥಳೀಯ ಸಮುದಾಯ. ಸ್ಥಳೀಯ ಜನರಿಗೆ ಸಬಲೀಕರಣ, ಅರಿವು ಮತ್ತು ತರಬೇತಿ ನೀಡಿದರೆ, ವಿಪತ್ತಿನ ಪರಿಣಾಮವನ್ನು ಬಹಳ ಮಟ್ಟಿಗೆ ಕಡಿಮೆ ಮಾಡಬಹುದು” ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಅಭಿಪ್ರಾಯಪಟ್ಟರು. ಬೆಂಗಳೂರಿನ ಜವಾಹರಲಾಲ್ ನೆಹರು ಸುಧಾರಿತ ವೈಜ್ಞಾನಿಕ ಸಂಶೋಧನಾ ಕೇಂದ್ರದಲ್ಲಿ ಆಯೋಜಿಸಿದ್ದ ವಿಶ್ವ ವಿಪತ್ತು ನಿರ್ವಹಣಾ ಸಮ್ಮೇಳನದಲ್ಲಿ ಮುಖ್ಯಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ” ಶಾಲಾ ಹಂತದಿಂದಲೇ ವಿಪತ್ತು ಜಾಗೃತಿ ತರಬೇತಿಯನ್ನು ಪ್ರಾರಂಭಿಸಬೇಕು. ಗ್ರಾಮ…

ರೈತರ ಸಬಲೀಕರಣದಿಂದ ದೇಶದ ಅಭಿವೃದ್ಧಿ ಸಾಧ್ಯ – ಕೃಷಿ ಸಚಿವ ಚಲುವರಾಯಸ್ವಾಮಿ

ಬೆಂಗಳೂರು, ಮೇ 24- “ರೈತರ ಸಬಲೀಕರಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯವಾಗಿದೆ. ಒಬ್ಬ ಕೃಷಿಕ ಯಶಸ್ಸನ್ನು ಕಂಡರೆ, ಅದರಿಂದ ಕನಿಷ್ಠ 50 ಜನರಿಗೆ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಜೀವನೋಪಾಯ ಕಟ್ಟಿಕೊಳ್ಳಲು ಸಾಧ್ಯವಿದೆ,” ಎಂದು ಹೇಳಿದರು.ಸುದ್ದಿವಾಹಿನಿ  ಆಯೋಜಿಸಿದ್ದ “ಕೃಷಿ ದೇವೋಭವ” ವಿಚಾರ ಸಂಕಿರಣದ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿಯವರುಮಾತನಾಡಿದರು,”ನಾನು ಸಚಿವನಾದ ಬಳಿಕ ರಾಜ್ಯದ ಹಲವು ಕೃಷಿಕರ ಮನೆಗೆ ಭೇಟಿ ನೀಡಿ, ಪ್ರಗತಿಪರ ರೈತರ ಹೊಲಗಳನ್ನು ವೀಕ್ಷಿಸಿದ್ದೇನೆ,” ಎಂದು ತಿಳಿಸಿದರು. ಮಾಧ್ಯಮಗಳು ರೈತರ ಸಬಲೀಕರಣದ ಬಗ್ಗೆ ತೋರುತ್ತಿರುವ…

ಮುಂದಿನ ವರ್ಷ 600 ಕೋಟಿ ವೆಚ್ಚದ ಅನುಭವ ಮಂಟಪ ಲೋಕಾರ್ಪಣೆ ಮಾಡ್ತೇವೆ: ಸಿ.ಎಂ ಭರವಸೆ

ಮೈಸೂರು ಮೇ 24-ನಮ್ಮ ಸರ್ಕಾರ ಆರಂಭಿಸಿರುವ 600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಆಯೋಜಿಸಿದ್ದ “ಬಸವ ಜಯಂತಿ-2025 ನಮ್ಮ ನಡೆ ಅನುಭವ ಮಂಟಪದ ಕಡೆ” ಕಾರ್ಯಕ್ರಮ ಉದ್ಘಾಟಿಸಿ ಮಾನಾಡಿದರು. ಸಕಲ ವೃತ್ತಿಗಳೂ ಪವಿತ್ರ ಎನ್ನುವ ಮಹಾನ್ ಮಾನವೀಯ ಸಂದೇಶವನ್ನು ಜಗತ್ತಿಗೆ ನೀಡಿದ ಬಸವಣ್ಣನವರು ಕ್ರಾಂತಿಪುರುಷ ಮಾತ್ರವಲ್ಲ, ವಿಶ್ವ ವಿಖ್ಯಾತ ಆರ್ಥಿಕ ತಜ್ಞರೂ ಆಗಿದ್ದರು. ಕಾಯಕ…

ಸಿಇಟಿ ಫಲಿತಾಂಶ ಪ್ರಕರಟ-ಇಂಜಿನಿಯರಿಂಗ್‌ನಲ್ಲಿ ಭವೇಶ್ ಜಯಂತಿ ಮೊದಲ ರ‍್ಯಾಂಕ್

ಬೆಂಗಳೂರು,ಮೇ,೨೪-ವಿವಿಧ ವೃತ್ತಿ ಪರಕೋರ್ಸ್‌ಗಳ ಪ್ರವೇಶಕ್ಕಾಗಿ ಬರೆದಿದ್ದ ಸಿಇಟಿ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಸರ್ಕಾರ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ ಫಲಿತಾಂಶವನ್ನು ಇಂದು ಉನ್ನತ ಸಚಿವ ಡಾ.ಎಂ.ಸಿ. ಸುಧಾಕರ್ ಪ್ರಕಟಿಸಿದರು. ಕೆಇಟಿ ಅಧಿಕೃತವೆಬ್‌ಸೈಟ್‌ಗಳಾದ ಛಿeಣoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ ಮತ್ತು ಞಚಿಡಿಡಿesuಟಣs.ಟಿiಛಿ.iಟಿ ನಲ್ಲಿ ಫಲಿತಾಂಶ ಲಭ್ಯವಿರಲಿದೆ. ಏಪ್ರಿಲ್ ೧೬, ೧೭ರಂದು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆದಿತ್ತು. ಸಿಇಟಿ ಪರೀಕ್ಷೆಗೆ ೩.೩೦ ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದರು. ಆ ಪೈಕಿ ೩,೧೧,೦೦೦ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ಹಾಜರಾಗಿದ್ದರು. ಸಿಇಟಿ ಎಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ…

ಹಂತ ಹಂತವಾಗಿ ಹಿನಕಲ್ ನ ಸಂಪೂರ್ಣ ಅಭಿವೃದ್ಧಿಗೆ ಸಿದ್ದ: ಸಿ.ಎಂ

ಮೈಸೂರು ಮೇ 24-ಹಿನಕಲ್ ಗ್ರಾಮ ನನಗೆ ರಾಜಕೀಯವಾಗಿ ಶಕ್ತಿ ಕೊಟ್ಟ ಗ್ರಾಮ,ಹಂತ ಹಂತವಾಗಿ ಹಿನಕಲ್ ನ ಸಂಪೂರ್ಣ ಅಭಿವೃದ್ಧಿಗೆ ನಾನು ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಹಿನಕಲ್ ನಲ್ಲಿ 9 ಇಂದಿರಾ ಕ್ಯಾಂಟೀನ್ ಗಳನ್ನು ಜನಾರ್ಪಣೆಗೊಳಿಸಿ ಮಾತನಾಡಿದರು.ಮೊದಲ ಬಾರಿ ಮುಖ್ಯಮಂತ್ರಿಯಾಗಿ ಇಂದಿರಾ ಕ್ಯಾಂಟೀನ್ ಗಳನ್ನು ಬಡವರು, ಕೂಲಿ ಕಾರ್ಮಿಕರು, ಆಸ್ಪತ್ರೆಗಳಿಗೆ ಬರುವ ಜನರ ಹಸಿವನ್ನು ಕಡಿಮೆ ದರದಲ್ಲಿ ನೀಗಿಸುವ ಉದ್ದೇಶದಿಂದ ಆರಂಭಿಸಿದೆ. 2017 ರಲ್ಲಿ ರಾಹುಲ್ ಗಾಂಧಿಯವರನ್ನು ಕರೆಸಿ ಇಂದಿರಾ ಕ್ಯಾಂಟೀನ್ ಆರಂಭಿಸಿದೆವು. ಆದರೆ…

1 10 11 12 13 14 120
Girl in a jacket