ಭೂಕಬಳಿಕೆದಾರರಿಂದ ಶೀಬಿ ಅರಣ್ಯಭೂಮಿ ರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ
ತುಮಕೂರು, ಮೇ3: ಶೀಬಿ ಅರಣ್ಯ ಪ್ರದೇಶದಲ್ಲಿ ಆಗಿರುವ ಅಕ್ರಮ ಮಂಜೂರಾತಿ ರದ್ದು ಪಡಿಸಲು ಮತ್ತು ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುತ್ತಿರುವವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಂಡು, ಅಮೂಲ್ಯವಾದ ಅರಣ್ಯ ಭೂಮಿಯನ್ನು ಸಂರಕ್ಷಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ ಸೂಚನೆ ನೀಡಿದ್ದಾರೆ. ತುಮಕೂರು ಜಿಲ್ಲೆ ಕಳ್ಳಂಬೆಳ್ಳ ಹೋಬಳಿ ಶೀಬಿ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದ ಸಚಿವರು. ಬೆಂಗಳೂರು-ಪುಣೆ ಹೆದ್ದಾರಿಯ ಪಕ್ಕದಲ್ಲೇ…