Girl in a jacket

Author kendhooli_editor

ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಅದರ ವಿರುದ್ಧ ಧ್ವನಿ ಎತ್ತಬೇಕು: ಆರ್‌.ಅಶೋಕ

ಬೆಂಗಳೂರು, ಆ, 2-ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಅದರ ವಿರುದ್ಧ ಧ್ವನಿ ಎತ್ತಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಕರೆ ನೀಡಿದರು. ರಾಜ್ಯ ಒಕ್ಕಲಿಗರ ಜಾಗೃತಿ ಸಂಘದಿಂದ ಕುವೆಂಪು ಕಲಾಕ್ಷೇತ್ರದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು. ಅಂದರೆ ಮಾತ್ರ ಸಮುದಾಯಕ್ಕೆ ನ್ಯಾಯ ದೊರೆಯುತ್ತದೆ. ನಾಡಪ್ರಭು ಕೆಂಪೇಗೌಡರು ಯಾರ ಮೇಲೂ ದಂಡೆತ್ತಿ ಹೋಗಿ ಸಾಮ್ರಾಜ್ಯ ಸ್ಥಾಪಿಸಲಿಲ್ಲ. ಅವರು ಎಲ್ಲರನ್ನೂ ಸಮಾನತೆಯಿಂದ ಕಂಡು ಬೆಂಗಳೂರನ್ನು ಕಟ್ಟಿದ್ದರು. ಮಾಜಿ ಸಿಎಂ ಎಸ್‌.ಎಂ.ಕೃಷ್ಣ,…

ಅತ್ಯಾಚಾರ ಪ್ರಕರಣ;ಪ್ರಜ್ವಲ್ ರೇವಣ್ಣಗೆ ಜೀವಾವಧಿಶಿಕ್ಷೆ ವಿಧಿಸಿದ ನ್ಯಾಯಾಲಯ

ಬೆಂಗಳೂರು,ಆ,02 -ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ತೀರ್ಪುನೀಡಿದೆ. ಮೈಸೂರಿನ ಕೆ.ಆರ್,ನಗರದಲ್ಲಿ ಮನೆ ಕೆಲಸಕ್ಕೆ ಸೇರಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿನ್ನೆ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪುನೀಡಿದ್ದು ಶಿಕ್ಷೆಯ ತೀರ್ಪು ಇಂದು ಪ್ರಕಟಿಸಿತು. ಪ್ರಜ್ವಲ್ ರೇವಣ್ಣಗೆ ಜೀವಾಧಿ ಶಿಕ್ಷೆ ಒಟ್ಟು 11ಲಕ್ಷ ರೂ ದಂಡ ವಿಧಿಸಿ ಆದೇಶ ಹೊರಡಿಸಿದೆ, ಐಪಿಸಿ ಸೆಕ್ಷನ್ ೩೭೬(೨)(ಕ) ಅಡಿ ಜೀವಾವಧಿ ಶಿಕ್ಷೆ…

ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ಉಲ್ಲಂಘನೆಗೆ ಕಠಿಣ ಕ್ರಮ

ಬೆಂಗಳೂರು, ಆ, 02-ರಾಜ್ಯ ಕೃಷಿ ಇಲಾಖೆಯು ರಾಜ್ಯದಾದ್ಯಂತ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಡೆಯುತ್ತಿರುವ ಉಲ್ಲಂಘನೆಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಮಾನ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ಮಾರ್ಗದರ್ಶನದಲ್ಲಿ, ಇಲಾಖೆಯು ರಾಜ್ಯದ ವಿವಿಧ ಭಾಗಗಳಲ್ಲಿ ದಾಳಿ ನಡೆಸಿ, ಫರ್ಟಿಲೈಸರ್ ಕಂಟ್ರೋಲ್ ಆರ್ಡರ್ (FCO) ಉಲ್ಲಂಘನೆ ಮತ್ತು ಅನಧಿಕೃತ ಕೀಟನಾಶಕ ತಯಾರಿಕೆಯನ್ನು ಪತ್ತೆಹಚ್ಚಿದೆ. *ಬನ್ನೂರಿನಲ್ಲಿ ಜಪ್ತಿ ಕಾರ್ಯಾಚರಣೆ* ಚಾಮುಂಡೇಶ್ವರಿ ಟ್ರೇಡರ್ಸ್ ಮತ್ತು ಗ್ರೀನ್‌ವೇ ಎಂಟರ್ಪ್ರೈಸಸ್, ಬನ್ನೂರು ಇಲ್ಲಿ FCO ಉಲ್ಲಂಘನೆ ಮಾಡಿ ಮಾರಾಟ ಮಾಡುತ್ತಿದ್ದ ಅಂದಾಜು ಒಟ್ಟು ₹5,29,900…

ಅರ್ಜುನನ ಹೆಸರಿನಲ್ಲಿ ವಾರ್ಷಿಕ ಪ್ರಶಸ್ತಿ-ಈಶ್ವರ ಖಂಡ್ರೆ

ಬೀದರ್, ಆ.೨- ಹಾಸನದ ಯಸಳೂರು ಬಳಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮವಾದ ದಸರಾ ಆನೆ ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸಲಾಗಿದ್ದು, ಆ.೪ರಂದು ಗಜಪಯಣದ ವೇಳೆ ಮಾವುತ,ಸಿಬ್ಬಂದಿಗೆ ಪ್ರಥಮ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ. ಕೋಟೆ ಶಾಸಕ ಅನಿಲ್ ಕುಮಾರ್ ಸಿ. ಅವರು ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸುವ ಸಲಹೆ ನೀಡಿದ್ದರು. ಈ ಸಲಹೆ ಪುರಸ್ಕರಿಸಿ, ಮಾನವ-ವನ್ಯಜೀವಿ…

ನಟಿ ರಮ್ಯಾಗೆ ಅಶ್ಲೀಲ ಸಂದೇಶ ರವಾನಿಸಿದ್ದ ಇಬ್ಬರ ಬಂಧನ

ಬೆಂಗಳೂರು,ಆ,೦೨- ನಟಿ ರಮ್ಯಾ ವಿರುದ್ಧ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶಗಳು ಮಾಡಿದ ಸಂಬಂಧ ಇಬ್ಬರನ್ನು ಪೊಲಿಸರು ಬಂಧಿಸಿದ್ದಾರೆ. ರಮ್ಯಾ ಅವರಿಗೆ ಸಮಾಜಿಕ ಜಾಲ ತಾಣಗಳಲ್ಲಿ ಅಶ್ಲೀಲ ಸಂದೇಶಗಳನ್ನರು ರವಾನಿಸದವರೆಲ್ಲರೂ ದರ್ಶನ್ ಅಭಿಮಾನಿಗಳು ಎಂದು ಹೇಳಲಾಗಿತ್ತು ಸೈಬರ್ ಪೊಲೀಸರು ನಟಿ ರಮ್ಯಾ ನೀಡಿದ ದೂರಿನ ಆಧಾರದ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ರವಾನಿಸಿದ ಇಬ್ಬರನ್ನು ಬಂಧಿಸಿದ್ದಾರೆ. ರಮ್ಯಾ ಅವರು ಇತ್ತೀಚೆಗೆ ರೇಣುಕಾಸ್ವಾಮಿ ಪರ ಮಾತನಾಡಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯುವಾಗ ‘ರೇಣುಕಾಸ್ವಾಮಿ…

ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು ಜು 31- ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿರುವ ಸಂದರ್ಭದಲ್ಲಿ ಕಾಳಸಂತೆಕೋರರು ತಲೆ ಎತ್ತದಂತೆ ತೀವ್ರ ನಿಗಾ ವಹಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಅಸಹಾಕಾರದ ನಡುವೆಯೂ ರಾಜ್ಯದ ರೈತರಿಗೆ ಅನಾನುಕೂಲ ಆಗದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ನಡುವೆ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿಸಿ ದುರ್ಲಾಭ ಮಾಡಿಕೊಳ್ಳಲು ಕಾಳಸಂತೆಕೋರರು ಪ್ರಯತ್ನಿಸುತ್ತಿರುವ ಬಗ್ಗೆ ತೀವ್ರ ನಿಗಾ…

ಧರ್ಮಸ್ಥಳ ಹೂತಿಟ್ಟ ಶವ ಪ್ರಕರಣ ; ರವಿಕೆ ಪತ್ತೆ

ಧರ್ಮಸ್ಥಳ, ಜು,30-ನಿಗೂಢ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಐಟಿ ನಡೆಸುತ್ತಿರುವ ಶೋಧ ಕಾರ್ಯದಲ್ಲಿ ಮಹಿಳೆ ರವಿಕೆ ಪತ್ತೆಯಾಗಿದ್ದು ಮಹತ್ವದ ಸುಳಿವು ದೊರೆತಂತಾಗಿದೆ. ಕಳೆದ ಎರಡು ದಿನಗಳಿಂದ ಇಲ್ಲಿ ನಡೆಯುತ್ತಿರುವ ಶೋಧ ಕಾರ್ಯದಲ್ಲಿ ಗುಂಡಿ ಅಗೆದರೂ ಯಾವುದೆ ಸುಳಿವು ಸಿಕ್ಕಿರಲಿಲ್ಲ ಈಗ ದೊರೆತಿರುವ ರವಿಕೆ ಮಹತ್ವದ ಸುಳಿವು ದೊರೆತಂತಾಗಿದೆ. ಸೈಟ್ ನಂ.1ರಲ್ಲಿ 2.5 ಅಡಿ ಆಳದಲ್ಲಿ ಹರಿದ ಕೆಂಪು ರವಿಕೆ, ಪಾನ್ ಕಾರ್ಡ್, ಎಟಿಎಂ ಕಾರ್ಡ್ ಪತ್ತೆಯಾಗಿವೆ. ಸೈಟ್ ನಂ.1ರಲ್ಲಿ ಪತ್ತೆಯಾದಿರುವಂತ ಎಟಿಎಂ ಕಾರ್ಡ್ ನಲ್ಲಿ ಪುರುಷನ ಹೆಸರು…

ರಾಹುಲ್ ಗಾಂಧಿ ಪಾದಯಾತ್ರೆಗೆ ಯಾವ ನಿಯಮದಡಿ ಅವಕಾಶ: @ ಆರ್‌.ಅಶೋಕ ಪ್ರಶ್ನೆ

ಬೆಂಗಳೂರು, ಜು, 30-ಬುದ್ಧಿ ಕಡಿಮೆ ಇರುವ ರಾಹುಲ್‌ ಗಾಂಧಿಯವರ ಪಾದಯಾತ್ರೆಗೆ ಯಾವ ನಿಯಮದಡಿ ಅವಕಾಶ ನೀಡುತ್ತಾರೆ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ನಡೆದಾಗ ಕಾಂಗ್ರೆಸ್‌ ಅಧಿಕಾರದಲ್ಲಿತ್ತು. ಆಗ ಚುನಾವಣೆಯಲ್ಲಿ ಅಕ್ರಮ ಆಗಿದ್ದರೆ ಚುನಾವಣಾ ಆಯೋಗಕ್ಕೆ ದೂರು ನೀಡಬಹುದು ಎಂಬ ಕಾಮನ್‌ಸೆನ್ಸ್‌ ರಾಹುಲ್‌ ಗಾಂಧಿಗೆ ಇಲ್ಲ. ಅದಕ್ಕಾಗಿಯೇ ಅವರು ರಾಜ್ಯಕ್ಕೆ ಬಂದು ಪಾದಯಾತ್ರೆ ಮಾಡುತ್ತಿದ್ದಾರೆ. ಯಾವುದೇ ಯಾತ್ರೆಗೆ ಅನುಮತಿ ನೀಡಬಾರದು ಎಂದು ಕೋರ್ಟ್‌ ಆದೇಶ ಇರುವಾಗ ಅನುಮತಿ…

ಕೇಂದ್ರದಿಂದ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ .ಎನ್ ಚಲುವರಾಯಸ್ವಾಮಿ

ಬೆಂಗಳೂರು, ಜು 30-ಕೇಂದ್ರ ಸರ್ಕಾರದಿಂದ ಯೂರಿಯಾ ಪೂರೈಕೆ ಕೊರತೆಯಾದ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿತರಣೆಯಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿಭಾಯಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗೊಂದಲಗಳು ಬಗೆಹರಿಯಲಿವೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಸ್ಫಷ್ಟಪಡಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ ಸಚಿವರು ರಾಜ್ಯದಲ್ಲಿ ಕಳೆದ 2ವರ್ಷಗಳಲ್ಲಿ 3 ಮುಂಗಾರು ಹಂಗಾಮಿನಲ್ಲಿ ಇದೇ ಸರ್ಕಾರ ಅಧಿಕಾರದಲ್ಲಿದೆ. ನಾನೇ ಕೃಷಿ ಸಚಿವನಾಗಿ ಇದ್ದೇನೆ. ಈ ವರಗೆ ಉಂಟಾಗದ ಸಮಸ್ಯೆ ಈಗೇಕೆ ಎಂಬುದನ್ನು ವಿಶ್ಲೇಷಿಸಬೇಕಾಗಿದೆ ಎಂದು…

ಕಾಂಗ್ರೆಸ್ ಬಳಿ ಪುರಾವೆ ಇದ್ದರೆ ನ್ಯಾಯಾಲಯಕ್ಕೆ ಸಲ್ಲಿಸಲು ವಿಜಯೇಂದ್ರ ಸವಾಲು

ಬೆಂಗಳೂರು,ಜು,30 ಕೇಂದ್ರದಲ್ಲಿ ಅಧಿಕಾರಕ್ಕೆ ಬರಲಾಗದೆ ಸೋಲಿನ ಹತಾಶೆಯಲ್ಲಿರುವ ಕಾಂಗ್ರೆಸ್ ಪಕ್ಷವು ಚುನಾವಣಾ ಅಕ್ರಮದ ಹೊಸ ಕಪಟ ನಾಟಕ ಮಾಡುತ್ತಿದೆ. ರಾಹುಲ್ ಗಾಂಧಿಯವರು ಕರ್ನಾಟಕದಲ್ಲಿ ಈ ಕಪಟ ನಾಟಕ ಮಾಡಲು ಮುಂದಾದಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ಆಗಸ್ಟ್ 4 ಅಥವಾ 5ರಂದು ಬೆಂಗಳೂರಿಗೆ ಬಂದು ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆ; ಪಾದಯಾತ್ರೆ ಅಥವಾ…

ಬೆಂಗಳೂರಿನಲ್ಲಿ ಆಲ್ ಖೈದಾ ಉಗ್ರ ಸಂಘಟನೆ ನಾಯಕಿ ಯ ಬಂಧನ

ಬೆಂಗಳೂರು, ಜು,30-ಭಯೋತ್ಪಾದನಾ ಸಂಘನೆಗಳೊಂದಿಗೆ ಸಂಬಂಧ ಹೊಂದಿರುವವರ ವಿರುದ್ಧ ಸಮರ ಸಾರಿರುವ ವಿಶೇಷ ತನಿಖಾ ದಳ ಬೆಂಗಳೂರಿನಲ್ಲಿ ನೆಲಸಿದ್ದನ್ನು ಪತ್ತೆ ಹಚ್ಚಿದೆ. ಆಪರೇಷನ್ ಸಿಂಧೂರ ನಂತರ ದೇಶದಲ್ಲಿ ಉಗ್ರರ ಜೊತೆ ನಂಟು ಹೊಂದಿ ವಿವಿಧ ರಾಜ್ಯಗಳಲ್ಲಿ ನೆಲಸಿ ಮಾಹಿತಿ ಸಂಗ್ರಹಿದ್ದವರನ್ನು ಬಂಧಿಸುತ್ತಾ ಬಂದಿದೆ. ಗುಜರಾತ್ ಎಟಿಎಸ್ ಬೆಂಗಳೂರಿನ ಮಹಿಳೆಯನ್ನು ಬಂಧಿಸಿದೆ, ಅವರು ಭಯಾನಕ ಭಯೋತ್ಪಾದಕ ಸಂಘಟನೆ ಅಲ್ ಖೈದಾ ಜೊತೆ ಸಂಬಂಧ ಹೊಂದಿದ್ದಾರೆಂದು ಹೇಳಲಾಗುತ್ತದೆ. ಮಹಿಳೆಯ ಹೆಸರು ಶಮಾ ಪರ್ವೀನ್, ಈಕೆಗೆ 30 ವರ್ಷ. ಗುಪ್ತಚರ ಮಾಹಿತಿಯ ಆಧಾರದ…

ಫಿಡೆ ಮಹಿಳೆಯರಚೆನ್ ವಿಶ್ವಕಪ್ ಮತ್ತೇ ಡ್ರಾ

ಬಟುಮಿ(ಜಾರ್ಜಿಯಾ), ಜು. ೨೭-ಬಹು ನಿರೀಕ್ಷಿತ ಫಿಡೆ ಮಹಿಳೆಯರ ಚೆನ್ ವಿಶ್ವಕಪ್ ಫೈನಲ್‌ನ ೨ನೇ ಗೇಮ್ ಕೂಡ ಡ್ರಾನಲ್ಲಿ ಕೊನೆಗೊಂಡಿದೆ.ಇಬ್ಬರು ಸ್ಟಾರ್‌ಗಳಾದ ಕೊನೆರು ಹಂಪಿ ಹಾಗೂ ದಿವ್ಯಾ ದೇಶಮುಖ್ ಅವರ ಆಟ ಈಗ ಎಲ್ಲರ ಗಮನಸೆಳೆದಿದ್ದಿ ಪೈನಲ್ ಟ್ರೈಬ್ರೇಕರ್ ಪಂದ್ಯವು ಇಂದು ನಡೆಯಲಿದೆ. ಈ ಟೈ ಬ್ರೇಕರ್ ಪಂದ್ಯವು ಸೋಮವಾರ ನಡೆಯಲಿದೆ. ಮೊದಲ ರ್ಯಾಪಿಡ್ ಪಂದ್ಯದಲ್ಲಿ ಹಂಪಿ ಅವರು ಕಪ್ಪು ಕಾಯಿಯೊಂದಿಗೆ ಆಡಲಿದ್ದಾರೆ.ರವಿವಾರದ ಪಂದ್ಯದಲ್ಲಿ ೩೮ರ ವಯಸ್ಸಿನ ಕೊನೆರು ಹಂಪಿ ಅವರು ೧೯ರ ವಯಸ್ಸಿ ದಿವ್ಯಾ ವಿರುದ್ಧ ಬಿಳಿ…

ಅಭಿವೃದ್ಧಿ ಕೆಲಸದಲ್ಲಿ ಶಾಸಕ ಶಿವಲಿಂಗೇಗೌಡರು ದಾಖಲೆ ನಿರ್ಮಿಸಿದ್ದಾರೆ: ಸಿ.ಎಂ ಸಿದ್ದರಾಮಯ್ಯ

ಅರಸೀಕೆರೆ ಜು 27-ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಕ್ಷೇತ್ರದ ಜನಪರ ಅಭಿವೃದ್ಧಿ ಕೆಲಸ ಮಾಡುವುದರಲ್ಲೇ ಇರಲಿ, ವಿಧಾನಸಭೆಯಲ್ಲಿ ಪಕ್ಷ ಮತ್ತು ಸರ್ಕಾರದ ಜನಪರ ಕಾರ್ಯಗಳನ್ನು ಸಮರ್ಥವಾಗಿ ಮಂಡಿಸುವುದರಲ್ಲೂ ಮುಂದಿದ್ದಾರೆ. ನಾಲ್ಕು ಬಾರಿ ಶಾಸಕರಾಗಿರುವ ಶಿವಲಿಂಗೇಗೌಡರು ಮುಂದಿನ…

ಧರ್ಮಸ್ಥಳ ಪ್ರಕರಣ-ಅನಾಮಿಕ ತಂದುಕೊಟ್ಟ ಬುರುಡೆ ಸುತ್ತ ಎಸ್‌ಐಟಿ ತನಿಖೆ ಆರಂಭ

ಉಡುಪಿ,ಜು,೨೬-ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೇಮಿಸಿರುವ ಎಸ್‌ಐಟಿ ತಂಡ ಇಂದು ವಿಚಾರಣೆ ಆರಂಭಿಸಿತು, ಈ ನಡುವೆ ಮುಸುಕು ದಾರಿವ್ಯಕ್ತಿಯೊಬ್ಬನನ್ನು ವಿಚಾರಣೆ ಮಾಡುವ ವೇಳೆ ಅನಾಮಿಕನೊಬ್ಬ ತಂದ ಕೊಟ್ಟ ಬರುಡೆ ಸುತ್ತ ಈಗ ತನಿಖೆ ಆರಂಬಿಸಿದೆ. ೩೦ ವರ್ಷಗಳ ಹಿಂದಿನ ಈ ಪ್ರಕರಣ ಈಗ ಹಲವು ತಿರುವುಗಳನ್ನು ಪಡೆದುಕೊಂಡಿದೆ ಎಸ್‌ಐಟಿ ತಂಡ ಇಂದು ಬೆಳಗಿನಿಂದಲೇ ವಿಚಾರಣೆ ಆರಂಭಿಸಿದ್ದು ,ಇದಕ್ಕಾಗಿ ಹಲವಾರು ಪ್ರಶ್ನೆಗಳನ್ನು ಸಿದ್ದತೆ ಮಾಡಿಕೊಂಡು ಮಾಹಿತಿಗಾಗಿ ಸನ್ನದ್ಧವಾಗಿದೆ ,ಅಲ್ಲದೆ ದೂರದಾರನಿಂದಲೂ ಮಾಹಿತಿ ಪಡೆದುಕೊಳ್ಳುತ್ತಿದ್ದು ಅತನ…

ಆಂಧ್ರಪ್ರದೇಶದಲ್ಲಿ ಬೆಂಗಳೂರು ಮೂಲದ ಬಿಜೆಪಿ ಮುಖಂಡರ ಬರ್ಭರ ಹತ್ಯೆ

ಬೆಂಗಳೂರು ,ಜು,23-ಬಿಜೆಪಿ ಮುಖಂಡರಾದ ತಂದೆ- ಮಗನನ್ನು ಅಪಹರಿಸಿ ಕತ್ತು ಸೀಳಿ ಆಂದ್ರಪ್ರದೇಶದ  ಬಾಪಟ್ಲ ಜಿಲ್ಲೆಯಲ್ಲಿ ನಡೆದಿದೆ. ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಕೇಸಿಗೆ ತೆರಳಿದ್ದ ತಂದೆ ವೀರಸ್ವಾಮಿರೆಡ್ಡಿ ಹಾಗೂ ಅವರ ಪುತ್ರ ಪ್ರಶಾಂತ್ ರೆಡ್ಡಿಯನ್ನು ಅಪಹರಿಸಿದ ದುಷ್ಕರ್ಮಿಗಳು ಇಬ್ಬರ ಕತ್ತು ಸೀಳಿ ಬರ್ಬರವಾಗಿ ಹತ್ಯೆಯಾದ ಘಟನೆ ನಡೆದಿದೆ. ಕೊಲೆಯಾದ ತಂದೆ ಮಕ್ಕಳು ಬಿಜೆಪಿ ಮಾಜಿ ಸಚಿವ ಅರವಿಂದ ಲಿಂಬಾವಳಿ ಆಪ್ತರಾಗಿದ್ದರು. ವೀರಸ್ವಾಮಿ ರೆಡ್ಡಿ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧತೆ ನಡೆಸಿದ್ದು ಪ್ರಶಾಂತ್ ರೆಡ್ಡಿ ಮಹದೇವಪುರ…

ಉಪರಾಷ್ಟ್ರಪತಿ ರೇಸ್‌ನಲ್ಲಿರುವ ಪ್ರಮುಖ ಹೆಸರು ಹರಿವಂಶ್ ನಾರಾಯಣ್

ನವದೆಹಲಿ,ಜು,೨೪-ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಆ ಸ್ಥಾನಕ್ಕೆ ಯಾರು ಎನ್ನುವ ಕುತೂಹಲಗಳು ಇವೆ ಈ ಮಧ್ಯೆ ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ಹೌದು.. ಹರಿವಂಶ್ ನಾರಾಯಣ್ ಸಿಂಗ್ ಅವರು ರಾಷ್ಟ್ರಪತಿ ದ್ರೌಪತಿ ಮುರ್ಮ ಅವರನ್ನು ಭೇಟಿ ಮಾಡಿ ಬಂದಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದ್ದು ಬಹುತೇಕ ಇವರನ್ನು ಉಪರಾಷ್ಟ್ರಪತಿಯನ್ನಾಗಿ ನೇಮಕ ಮಾಡುವ ಸಾದ್ಯತೆಳು ಹೆಚ್ಚಾಗಿವೆ ಎನ್ನುತ್ತವೆ ಮೂಲಗಳು ಬಿಹಾರ ಮೂಲದ ಹರಿವಂಶ್‌ಗೆ ಅಪಾರ ರಾಜಕೀಯ ಅನುಭವವಿದೆ.…

ಅಕ್ರಮ ಹಣ ವರ್ಗಾವಣೆ ಪ್ರಕರಣ-ರಿಲಿಯನ್ಸ್ ಗ್ರೂಪ್ ಮೇಲೆ ಇಡಿ ದಾಳಿ

ನವದೆಹಲಿ,ಜು,೨೪-ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಬಂಧಿಸಿದಂತೆ ಜಾರಿ ನಿರ್ದೆಶನಾಲಯ(ಇಡಿ) ದೆಹಲಿ ಮತ್ತು ಮುಂಬೈನಲ್ಲಿರುವ ರಿಲಯನ್ಸ್‌ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ನಡೆ ನಡೆಸಲಾಗಿದೆ. ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ್ದ ಎರಡು ಎಪ್‌ಐಆರ್ ಪ್ರಕರಣಕ್ಕೆ ಕುರಿತಂತೆ ಈ ದಾಳಿ ನಡೆಸಲಾಗಿದೆ ಎನ್ನುವ ಮಾಹಿತಿಗಳು ಲಭ್ಯವಾಗಿವೆ ಕಾರ್ಯಾಚರಣೆಯ ಭಾಗವಾಗಿ, ಇಡಿ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ೫೦ ಕ್ಕೂ ಹೆಚ್ಚು ಅನಿಲ್ ಅಂಬಾನಿ ಅವರ ಸಂಸ್ಥೆಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದರು. ೨೫ ಕ್ಕೂ ಹೆಚ್ಚು…

ಆರ್‌ಸಿಬಿ.ಕೆಎಸ್‌ಸಿಎ ವಿರುದ್ಧ ಕ್ರಿಮಿನಲ್ ಕೇಸ್‌ಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು,ಜು,೨೪-ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ, ಮೈಕೆಲ್ ಡಿ. ಕುನ್ಹಾ ವಿಚಾರಣಾ ಆಯೋಗದ ವರದಿಯನ್ನು ರಾಜ್ಯ ಸಚಿವ ಸಂಪುಟವು ಅಂಗೀಕರಿಸಿದೆ, ಈ ಮೂಲಕ ಆಯೋಗದ ಶಿಫಾರಸಿನಂತೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ, ಮೈಕೆಲ್ ಡಿ ಕುನ್ಹಾ ಆಯೋಗದ ವರದಿಯ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ದುರಂತಕ್ಕೆ ಕಾರಣವಾದ ಅಂಶಗಳು ಮತ್ತು ಅದಕ್ಕೆ…

ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಹಿಂಪಡೆದು, ಮಹದಾಯಿ ಯೋಜನೆ ಕಾಮಗಾರಿ ಶೀಘ್ರ ಪ್ರಾರಂಭ ಮಾಡುತ್ತೇವೆ: ಡಿ.ಕೆ. ಶಿವಕುಮಾರ್ ಗುಡುಗು

ಬೆಂಗಳೂರು, ಜು. 24-ಮಹದಾಯಿ ಯೋಜನೆಗೆ ಕೇಂದ್ರ ಅರಣ್ಯಇಲಾಖೆ ಅನುಮತಿ ನೀಡುವುದಿಲ್ಲ ಎಂಬ ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಹೇಳಿಕೆ ಖಂಡನೀಯ. ಸುಪ್ರೀಂ ಕೋರ್ಟ್ ನಲ್ಲಿ ನಾವು ಸಲ್ಲಿಸಿರುವ ಅರ್ಜಿ ಹಿಂಪಡೆದು, ಶೀಘ್ರವೇ ಕಾಮಗಾರಿ ಆರಂಭಿಸುತ್ತೇವೆ. ಅವರು ಅದನ್ನು ತಡೆಯಲಿ, ನಾನೂ ನೋಡುತ್ತೇನೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಗುಡುಗಿದ್ದಾರೆ. ನೀರಾವರಿ ಸಚಿವರೂ ಆಗಿರುವ ಶಿವಕುಮಾರ್ ಅವರು ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಕೇಂದ್ರ ಸರಕಾರ ಯಾವುದೇ ಕಾರಣಕ್ಕೂ ಮಹದಾಯಿ…

ದರ್ಶನ್ ಜಾಮೀನು ಅರ್ಜಿ ; ಆದೇಶ ಕಾಯ್ದಿರಿಸಿದ ಸುಪ್ರೀಂ

ನವದೆಹಲಿ,ಜು,24-ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ 7 ಮಂದಿ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಸುಪ್ರೀಂಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆ.ಬಿ ಪರ್ದೀವಾಲ ನೇತೃತ್ವದ ಪೀಠ ವಿಚಾರಣೆ ನಡೆಸಿತು. ಎರಡು ಕಡೆ ವಾದ ಆಲಿಸಿದ ನ್ಯಾಯಪೀಠ ಅಂತಿಮ ಆದೇಶವನ್ನ ಕಾಯ್ದಿರಿಸಿದ್ದು, ನಟ ದರ್ಶನ್ ಪರ ವಕೀಲರಿಗೆ ಒಂದು ವಾರದಲ್ಲಿ ಲಿಖಿತ ವಾದ ಸಲ್ಲಿಸಲು ಸೂಚನೆ ನೀಡಿತು. 3 ಪುಟದೊಳಗೆ ವಾದಾಂಶ…

1 2 3 121
Girl in a jacket