Girl in a jacket

Author kendhooli_editor

ಚಿತ್ರರರಂಗದ ಕಲಾವಿದರ ಕುರಿತ ಹೇಳಿಕೆ- ಡಿಕೆಶಿ ವಿರುದ್ಧ ಅಶೋಕ್ ವಾಗ್ದಾಳಿ

ಚಿತ್ರರರಂಗದ ಕಲಾವಿದರ ಕುರಿತ ಹೇಳಿಕೆ- ಡಿಕೆಶಿ ವಿರುದ್ಧ ಅಶೋಕ್ ವಾಗ್ದಾಳಿ by-ಕೆಂಧೂಳಿ ಬೆಂಗಳೂರು, ಮಾ,೦೨-ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಲನಚಿತ್ರ ಕಲಾವಿದರಿಗೆ ದಮ್ಕಿ ಹಾಕಿದ ವಿಚಾರ ಈಗ ಎಲ್ಲಡೆ ತೀವ್ರ ವಿರೋಧವಾಗುತ್ತಿದೆ ಅದರಲ್ಲೂ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಈ ಕುರಿತು ತೀವ್ರ ವಾಗ್ದಾಳಿ ನಡೆಸಿದ್ದಾರೆ ಈ ಕುರಿತು ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಆರ್.ಅಶೋಕ್ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಕಾಂಗ್ರೆಸ್ ಪಕ್ಷದ ರಾಜಕೀಯ ಪಾದಯಾತ್ರೆಗೆ ಸಿನಿಮಾ ಕಲಾವಿದರು ಬರುವುದು ಬಿಡುವುದು ಅವರವರ ವಿವೇಚನೆಗೆ ಬಿಟ್ಟಿದ್ದು. ಕಾಂಗ್ರೆಸ್ ಪಕ್ಷಕ್ಕೆ ನಡೆದುಕೊಳ್ಳುವ…

ನಾಳೆಯಿಂದ ವಿಧಾನಮಂಡಲ ಅಧಿವೇಶನ ಶುರು-ಬಿಸಿಬಸಿ ಚರ್ಚೆಗೆ ವೇದಿಕೆ

ನಾಳೆಯಿಂದ ವಿಧಾನಮಂಡಲ ಅಧಿವೇಶನ ಶುರು-ಬಿಸಿಬಸಿ ಚರ್ಚೆಗೆ ವೇದಿಕೆ by-ಕೆಂಧೂಳಿ ಬೆಂಗಳೂರು,ಮಾ,೦೨- ನಾಳೆಯಿಂದ(ಸೋಮವಾರ) ವಿಧಾಮಂಡಲ ಅಧಿವೇಶನ ಆರಂಬವಾಗಲಿದ್ದು ಈ ಬಾರಿ ಪ್ರತಿಪಕ್ಷಗಳಿಗೆ ಸರ್ಕಾರವನ್ನು ತರಾಟೆಗೆ ತಗೆದುಕೊಳ್ಳಲು ಸಾಕಷ್ಟು ವಿಷಯಗಳಿಗೆ ಈ ವಿಷಯಗಳ ಮೇಲೆ ತೀವ್ರ ಚಚೆ ವಾಗ್ವಾದಗಳಿಗೂ ಕಾರಣವಾಗುವ ಸಾಧ್ಯತೆಗಳಿವೆ. ಇದು ಬಜೆಟ್ ಅಧಿವೇಶನವಾಗಿರುವುದರಿಂದ ೭ ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆ ಬಜೆಟ್ ಮಂಡಿಸಲಿದ್ದಾರೆ ಅದಕ್ಕಿಂತಲೂ ಮುನ್ನ ನಡೆಯುವ ಈ ವಿಷಯಗಳ ಮೇಲಿನ ಚರ್ಚೆಗಳು ತೀವ್ರ ವಾದ-ವಾಗ್ವಾದಗಳಿಗೆ ವೇದಿಕೆಯಾಗಲಿದೆ. ಅಧಿವೇಶನಕ್ಕೂ ಮುನ್ನ ಈ ಗುತ್ತಿಗೆದಾರರು ಕೂಡ ಈಗ ಕಮಿಷನ್…

ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ  ನಿರ್ಮಾಣ- ಸಿ.ಎಂ ಘೋಷಣೆ

ಮೈಸೂರಿನಲ್ಲಿ ವಿಶ್ವದರ್ಜೆಯ ಫಿಲ್ಮ್ ಸಿಟಿ  ನಿರ್ಮಾಣ- ಸಿ.ಎಂ ಘೋಷಣೆ by-ಕೆಂಧೂಳಿ ಬೆಂಗಳೂರು ಮಾ1-ವಿಶ್ವದರ್ಜೆಯ ಫಿಲ್ಮ್ ಸಿಟಿ ಮೈಸೂರಿನಲ್ಲಿ ನಿರ್ಮಿಸುತ್ತೇವೆ. ಇದಕ್ಕಾಗಿ ಈಗಾಗಲೇ 150 ಎಕರೆ ಜಾಗವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ನ ಸಂಭ್ರಮದ ಕಾರ್ಯಕ್ರಮದಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.ಅಂತಾರಾಷ್ಟ್ರೀಯ ಚಿತ್ರೋತ್ಸವ ವಿಶ್ವ ಸಮುದಾಯದ ಸಂಸ್ಕೃತಿಯ ಪ್ರತಿಬಿಂಬ. ಇದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕರೆ ನೀಡಿದರು. ಕರ್ನಾಟಕವೇ ಒಂದು ಜಗತ್ತು. ಇಲ್ಲಿ ಎಲ್ಲ ಅವಕಾಶಗಳನ್ನು ಸೃಷ್ಟಿಸಬಹುದು.…

ಅಂದದೂರಿನಲ್ಲಿ ಅಲoಕೃತ ಕುಂಭಮೇಳ ಶ್ರೀ ಬೀರಲಿಂಗೇಶ್ವರನ ಗದ್ದುಗೆ ಕಳಸ ಪ್ರಾಣ ಪ್ರತಿಷ್ಠಾಪನೆ

ಅಂದದೂರಿನಲ್ಲಿ ಅಲoಕೃತ ಕುಂಭಮೇಳ ಶ್ರೀ ಬೀರಲಿಂಗೇಶ್ವರನ ಗದ್ದುಗೆ ಕಳಸ ಪ್ರಾಣ ಪ್ರತಿಷ್ಠಾಪನೆ by-ಕೆಂಧೂಳಿ ಚಿತ್ರದುರ್ಗ ಮ 1ಮಾಯಕೊಂಡ ಸಮೀಪದ ಅಂದನೂರಿನಲ್ಲಿ ಧಾರ್ಮಿಕವಾಗಿ ಹಲವಾರು ನಾಡಿನ ಖ್ಯಾತ ಮಠಾಧಿಪತಿಗಳ ಸಮ್ಮುಖದಲ್ಲಿಶ್ರೀ ಬೀರಲಿಂಗೇಶ್ವರ ದೇವರ ಗದ್ದುಗೆ ಮತ್ತು ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ವೈಭವ ಭಿನ್ನವಾಗಿ ಜರುಗಿತು. ನಡೆದಾಡುವ ಜಾನಪದ, ಕರ್ನಾಟಕ ರಾಜ್ಯ ಪ್ರಶಸ್ತಿ ವಿಜೇತ ಯುಗ ಧರ್ಮ ರಾಮಣ್ಣನವರ ಜಾನಪದ ಹಾಡುಗಳು, ರಾಷ್ಟ್ರ ಪ್ರಶಸ್ತಿ ವಿಜೇತ ಗಾಯಕ ಹನುಮಂತ ನಾಯಕ್, ಚಿರಡೋಣಿಯ ಅಂದಹಾಡುಗಾರ, ರುದ್ರೇಶ್, ಹಲವಾರು ಜನಪದ ಹಾಡುಗಳು, ಜನಜಾಗೃತಿ…

ಆಪಲ್ ಕಟ್’ ಚಿತ್ರದ ಟ್ರೇಲರ್ ಬಿಡುಗಡೆ

‘ಆಪಲ್ ಕಟ್’ ಚಿತ್ರದ ಟ್ರೇಲರ್ ಬಿಡುಗಡೆ by-ಕೆಂಧೂಳಿ ಸಾನ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ರಾಜಕಿಶೋರ್ ಅವರ ಪುತ್ರಿ ಸಿಂಧುಗೌಡ ನಿರ್ದೇಶನದ “ಆಪಲ್ ಕಟ್ ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ನಟ ಗೋಲ್ಡನ್ ಸ್ಟಾರ್ ಗಣೇಶ್ ಟ್ರೇಲರ್ ಅನಾವರಣ ಮಾಡಿದರು. ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ದಾಸೇಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಟ್ರೇಲರ್ ಅನಾವರಣ ಮಾಡಿ ಮಾತನಾಡಿದ ನಟ ಗಣೇಶ್, ಟ್ರೇಲರ್ ತುಂಬಾ ಚೆನ್ನಾಗಿದೆ. ನಾನು…

ಬೆಂಬಲ ಬೆಲೆಯಲ್ಲಿ ಕುಸುಬೆ ಖರೀದಿ:  ಶಿವಾನಂದ ಎಸ್‌.ಪಾಟೀಲ

ಬೆಂಬಲ ಬೆಲೆಯಲ್ಲಿ ಕುಸುಬೆ ಖರೀದಿ:  ಶಿವಾನಂದ ಎಸ್‌.ಪಾಟೀಲ by-ಕೆಂಧೂಳಿ ಬೆಂಗಳೂರು,ಮಾ,01-ರಾಜ್ಯ ಸರ್ಕಾರದ ಕೋರಿಕೆ ಮೇರೆಗೆ ಕೇಂದ್ರ ಸರ್ಕಾರ ಕುಸುಬೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಸಮ್ಮತಿಸಿದ್ದು, ಕ್ವಿಂಟಾಲ್‌ಗೆ ರೂ 5,940 ನಿಗದಿಪಡಿಸಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌.ಪಾಟೀಲ ತಿಳಿಸಿದ್ದಾರೆ. ಮಾರುಕಟ್ಟೆಯಲ್ಲಿ ಕುಸುಬೆ ಬೆಲೆ ಕುಸಿದಿರುವ ಕಾರಣ ಬೆಂಬಲ ಬೆಲೆಯಲ್ಲಿ ಖರೀದಿಗೆ ರಾಜ್ಯ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಗೆ ಅನುಮೋದನೆ ನೀಡಿದ್ದು, ಸಂಬಂಧಪಟ್ಟವರಿಗೆ ಖರೀದಿ ಪ್ರಕ್ರಿಯೆ ಆರಂಭಿಸಲು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಬೀದರ್‌, ಧಾರವಾಡ, ದಾವಣಗೆರೆ,…

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರತ್ಯೇಕ ಜಂಟಿ ಕೃಷಿ ನಿರ್ದೇಶಕರ ಕಚೇರಿ ಮಂಜೂರು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರತ್ಯೇಕ ಜಂಟಿ ಕೃಷಿ ನಿರ್ದೇಶಕರ ಕಚೇರಿ ಮಂಜೂರು by-ಕೆಂಧೂಳಿ ಬೆಂಗಳೂರು, ಮಾ, 01ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರತ್ಯೇಕ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸ್ಥಾಪಿಸಬೇಕೆಂಬ ರೈತರ ಬಹುದಿನಗಳ ಬೇಡಿಕೆಯನ್ನು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಈಡೇರಿಸಿದ್ದು, ಈ ಬಗ್ಗೆ ಆದೇಶ ಹೊರಡಿಸಿದ್ದಾರೆ. ಸಚಿವರ ಸೂಚನೆ ಮೇರೆಗೆ ಕೃಷಿ ಇಲಾಖೆಯಲ್ಲಿನ ಕರ್ನಾಟಕ ಅಂತರಗಂಗಾ ಸೂಕ್ಷ್ಮ ನೀರಾವರಿ ನಿಗಮ ನಿಯಮಿತ ಸಂಸ್ಥೆ (ಕೆಮಿಕ್) ಸಮಾಪನಗೊಳಿಸಿದಾಗ ಲಭ್ಯವಾದ ಜಂಟಿ ಕೃಷಿ ನಿರ್ದೇಶಕರ ಹುದ್ದೆಯನ್ನು ಪೂರಕ ಸಿಬ್ಬಂದಿಯೊಡನೆ ಜಂಟಿ ಕೃಷಿ…

ಗ್ರಾಮ ಪಂಚಾಯತಿಗಳು ಮಾರ್ಚ್‌ 10ರ ಒಳಗೆ ಜನಸ್ನೇಹಿ ಆಯವ್ಯಯ ಮಂಡಿಸಲು  ಪ್ರಿಯಾಂಕ್‌ ಖರ್ಗೆ ನಿರ್ದೇಶನ

ಗ್ರಾಮ ಪಂಚಾಯತಿಗಳು ಮಾರ್ಚ್‌ 10ರ ಒಳಗೆ ಜನಸ್ನೇಹಿ ಆಯವ್ಯಯ ಮಂಡಿಸಲು  ಪ್ರಿಯಾಂಕ್‌ ಖರ್ಗೆ ನಿರ್ದೇಶನ by-ಕೆಂಧೂಳಿ ಬೆಂಗಳೂರು, ಮಾ,01- ಗ್ರಾಮ ಸ್ವರಾಜ್ ಹಾಗೂ ಪಂಚಾಯತ್‌ ಅಧಿನಿಯಮ 1993 ರ ಪ್ರಕರಣ 241 ಉಪ ಪ್ರಕರಣ (1) ರಡಿ ಗ್ರಾಮ ಪಂಚಾಯಿತಿಗಳು ತಮಗೆ ಮುಂದಿನ ಆರ್ಥಿಕ ವರ್ಷದಲ್ಲಿ ವಿವಿಧ ಬಾಬುಗಳಡಿ ಲಭ್ಯವಾಗುವ ಅನುದಾನ ಹಾಗೂ ಕೈಗೊಳ್ಳಬೇಕಾದ ಅಭಿವೃದ್ಧಿ ಯೋಜನೆಗಳನ್ನೊಳಗೊಂಡಂತೆ ಆಯವ್ಯಯ ತಯಾರಿಸಿ ಮಾರ್ಚ್ 10 ನೇ ತಾರೀಖಿನ ಒಳಗೆ ಗ್ರಾಮ ಪಂಚಾಯಿತಿಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ…

ಜಾತಿ ಹೆಸರಿನಲ್ಲಿ ಸಮಾವೇಶ ಬೇಡ- ಬೆಂಬಲಿಗರಲ್ಲಿ ವಿಜಯೇಂದ್ರ ಮನವಿ

ಜಾತಿ ಹೆಸರಿನಲ್ಲಿ ಸಮಾವೇಶ ಬೇಡ- ಬೆಂಬಲಿಗರಲ್ಲಿ ವಿಜಯೇಂದ್ರ ಮನವಿ by-ಕೆಂಧೂಳಿ ಬೆಂಗಳೂರು, ಮಾ.1 – ಜಾತಿ ಹೆಸರಿನಲ್ಲಿ ಸಮಾವೇಶ ನಡೆಸುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಈ ಕೂಡಲೇ ಸಮಾವೇಶ ಮಾಡದಂತೆ ತಮ್ಮ ಹಿತೈಷಿಗಳು ಹಾಗೂ ಬೆಂಬಲಿಗರಿಗೆ ಮನವಿ ಮಾಡಿದ್ದಾರೆ. ಬಿಜೆಪಿ ಭಿನ್ನಮತೀಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪರ್ಯಾಯವಾಗಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ನೇತೃತ್ವದಲ್ಲಿ ವೀರಶೈವ – ಲಿಂಗಾಯತ ಸಮಾವೇಶ ನಡೆಸಲು ಮುಂದಾಗಿದ್ದ ಬೆನ್ನಲ್ಲೇ, ವಿಜಯೇಂದ್ರ ಅವರು ತಕ್ಷಣವೇ…

ವಿಜಯನಗರ ಗತವೈಭವ ನೆನಪಿಸಿದ ಹಂಪಿ ಉತ್ಸವ

ವಿಜಯನಗರ ಗತವೈಭವ ನೆನಪಿಸಿದ ಹಂಪಿ ಉತ್ಸವ ವರದಿ- ಅರುಣ್ ಕುಮಾರ್ ಯಾದವ್ ವಿಜಯನಗರ,ಮಾ,01-ಮೂರು ದಿನಗಳ ಕಾಲ ನಡೆಯುವ ಅದ್ದೂರಿ ಹಂಪಿ ಉತ್ಸವಕ್ಕೆ ಚಾಲನೆ ಸಿಕ್ಕಿದ್ದು ಸಾವಿರಾರು ಜನ ಉತ್ಸವದಲ್ಲಿ ಭಾಗಿಯಾಗಿ ಸಂಭ್ರಮಿಸುತ್ತಿದ್ದಾರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ವಿಜಯನಗರ ಜಿಲ್ಲಾಡಳಿತ ಜಂಟಿಯಾಗಿ ಸೇರಿ ಮೂರು ದಿನಗಳ ಅದ್ಧೂರಿ ಹಂಪಿ ಉತ್ಸವನನ್ನು ಆಯೋಜಿಸಿದೆ. ವಿಜಯನಗರ ಸಾಮ್ರಾಜ್ಯದ ಗತವೈಭವ ಮರುಸೃಷ್ಟಿಯಾಗಿದೆ. ಕಲ್ಲು ಕಲ್ಲಿನಲ್ಲೂ ಸಂಗೀತ ಮಾರ್ದನಿಸುತ್ತಿದೆ. ಒಂದೊಂದು ಶಿಲ್ಪ ಕಲಾಕೃತಿ ಒಂದೊಂದು ಕತೆ ಹೇಳುತ್ತಿವೆ. ವಿಜಯನಗರ ಹಂಪಿಯಲ್ಲಿ…

ಕಾರು ಟಿಪ್ಪರ್ ನಡುವೆ ಡಿಕ್ಕಿ -ಐವರು ಸಾವು

ಕಾರು ಟಿಪ್ಪರ್ ನಡುವೆ ಡಿಕ್ಕಿ -ಐವರು ಸಾವು by-ಕೆಂಧೂಳಿ ಚಾಮರಾಜನಗರ, ಮಾ,01-ಮಲೇಮಾಹಾದೇಶ್ಚರ ಬೆಟ್ಟಕ್ಕೆ ತೆರಳುತ್ತಿದ್ದ ಕಾರಿಗೆ ಟಿಪ್ಪರ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಳ್ಳೇಗಾಲ ತಾಲೂಕಿನಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಕಾರಿನಲ್ಲಿದ್ದ ಮೂವರು ಪುರುಷರು ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಅವರು ಮಂಡ್ಯ ಮೂಲದವರು ಎಂದು ಹೇಳಲಾಗುತ್ತಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಶಿವರಾತ್ರಿ ಜಾತ್ರಾ ಮಹೋತ್ಸವದ ಮಹಾ ರಥೋತ್ಸವದಲ್ಲಿ ಪಾಲ್ಗೊಳ್ಳಲು ಇವರು ಕಾರಿನಲ್ಲಿ ತೆರಳುತ್ತಿದ್ದರು…

ಕಾಂಗ್ರೆಸ್ ನಲ್ಲಿ ಕ್ಷಿಪ್ರರಾಜಕೀಯ ಬೆಳವಣಿಗೆಯಾಗಲಿದೆ- ವಿಜಯೇಂದ್ರ

ಕಾಂಗ್ರೆಸ್ ನಲ್ಲಿ ಕ್ಷಿಪ್ರರಾಜಕೀಯ ಬೆಳವಣಿಗೆಯಾಗಲಿದೆ- ವಿಜಯೇಂದ್ರ by-ಕೆಂಧೂಳಿ ಹಾಸನ,ಮಾ,01- ಯಾವುದೇ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯುವ ಮನ್ಸೂಚನೆ ಸಿಕ್ಜಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇದ್ರ ಹೇಳುದರು ಚಿಕ್ಕಮಗಳೂರಿಗೆ ತೆರಳುವಾಗ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಕ್ಷಿಪ್ರ ರಾಜಕೀಯ ಬೆಳವಣೆಗಳು ನಡೆಯಲಿವೆ ಎಂದು ನಾನು ಈ ಹಿಂದೆಯೇ ಹೇಳಿದ್ದೆ. ಅದರಂತೆ ಈಗ ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ದಿನೇ ದಿನೇ ಒಳ ಜಗಳಗಳು ಹೆಚ್ಚಾಗಿವೆ. ಇದು ಕ್ಷಿಪ್ರ ರಾಜಕೀಯ…

ಅಮೆರಿಕ ಉಕ್ರೇನ್ ಅಧ್ಯಕ್ಷ ರ ಮಾತಿನ ಸಮರ- ಮೂರನೇ ಯುದ್ದದ ಮುನ್ನಡಿ..

ಅಮೆರಿಕ ಉಕ್ರೇನ್ ಅಧ್ಯಕ್ಷ ರ ಮಾತಿನ ಸಮರ- ಮೂರನೇ ಯುದ್ದದ ಮುನ್ನಡಿ.. by-ಕೆಂಧೂಳಿ ವಾಷಿಂಗ್ಟನ್, ಮಾ,01-ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಉಕ್ರೇನ್ ಅಧ್ಯಕ್ಚ  ಝೆಲೆನ್ಸ್ಕಿಯವರ ನಡುವೆ ನಡೆದ ಮಾತಿನ ಸಮರ ಮೂರನೇ ಮಹಾಯುದ್ಧದ ಪ್ರಸ್ತಾಪ ಮುನ್ನಲೆಗೆ ಬಂದಿದೆ ಓವಲ್ ಕಚೇರಿಯಲ್ಲಿ ನಡೆದ ಈ ಭೇಟಿಯಲ್ಲಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಝೆಲೆನ್ಸ್ಕಿಯವರನ್ನು ಕೆಣಕಿದರು ಮತ್ತು ಉಕ್ರೇನ್ “ಮೂರನೇ ಮಹಾಯುದ್ಧದೊಂದಿಗೆ ಜೂಜಾಡುತ್ತಿದೆ” ಎಂದು ಹೇಳಿದರು. ರಷ್ಯಾದೊಂದಿಗಿನ ಯುದ್ಧದ ನಂತರ ಉಕ್ರೇನ್ ಚೇತರಿಸಿಕೊಳ್ಳಲು ಸಹಾಯ ಮಾಡುವ ಒಟ್ಟಾರೆ…

ಬಿ ವೈ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ

ಬಿವೈ ವಿಜಯೇಂದ್ರ ಕಾರಿಗೆ ಲಾರಿ ಢಿಕ್ಕಿ by-ಕೆಂಧೂಳಿ ಚಿಕ್ಕಮಗಳೂರು,ಮಾ,೦1-ರಭಸದಿಂದ ಬಂದ ಲಾರಿಯೊಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ನಜ್ಜು ಗುಜ್ಜಾದ ಘಟನೆ ತಾಲ್ಲೂಕಿನ ಲಕ್ಯಾ ಕ್ರಾಸ್ ಬಳಿ ಜರುಗಿದೆ. ಶುಕ್ರವಾರ ಬಸವ ತತ್ವ ಕಾರ್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಇನ್ನು ಅಪಘಾತದಲ್ಲಿ ಅದೃಷ್ಟವಶಾತ್​ವಿಜಯೇಂದ್ರ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಜಯೇಂದ್ರ…

ಗಂಗೆ ಎಂಬ ನೀರ ಜೋಳಿಗೆಯ ಎದುರು

ಗಂಗೆ ಎಂಬ ನೀರ ಜೋಳಿಗೆಯ ಎದುರು ಗಂಗೆ  ಎಂಬ ನೀರಿನ ಪದವು ಒಂದು ಕಡೆ ಸಾಮಾಜಿಕ ಕಥನಗಳ ದಾಖಲೆಗಳಿಗೆ ಕಾರಣವಾದರೆ ಮತ್ತೊಂದು ಕಡೆಗೆ ಧಾರ್ಮಿಕ ಸಂಕಥನಗಳನ್ನು ಸೃಷ್ಟಿಸುವ ಆವರಣಗಳ ಸೃಷ್ಟಿಗೆ ಕಾರಣವಾಗಿದೆ.ಗಂಗೆ ಎಂಬುವ ನೀರಿನ ಚರ್ಚೆಯು ಎರಡು ಸ್ಥರಗಳನ್ನು ,ಎರಡು ಭಿನ್ನ ಧೋರಣೆಗಳನ್ನು ರೂಪಿಸುವಂತೆಯೇ ಎರಡು ತಾತ್ವಿಕ ಸಂಘರ್ಷಗಳ ನೋಟಗಳನ್ನು ಹುಟ್ಟುಹಾಕಿದೆ.ಗಂಗೆ ಎಂಬ ನೀರ ಪದವು ನಮ್ಮೊಳಗೆ ತಾಯಾಗಿ,ದೇವಿಯಾಗಿ,ಮಾಯೆಯಾಗಿ ಕಾಣಿಸುವ ಸರಳ ನೋಟಗಳನ್ನೂ ನೀಡಿದೆ. ಇಲ್ಲಿ ʼನೀರುʼ ಎಂಬ ಪದಕ್ಕೆ ʼಗಂಗೆʼ ಎಂಬ ಪದವು ತಾಕಿದೊಡನೆಯೇ ಅದಕ್ಕೆ…

ರಾಜ್ಯದ ತೆರಿಗೆ ಪಾಲನ್ನು ಕಡಿತಗೊಳಿಸಲು ಯತ್ನಿಸುತ್ತಿರುವ ಕೇಂದ್ರದ ನಡೆಗೆ ಸಿಎಂ ಸಿದ್ದರಾಮಯ್ಯ ಅಕ್ರೋಶ

ರಾಜ್ಯದ ತೆರಿಗೆ ಪಾಲನ್ನು ಕಡಿತಗೊಳಿಸಲು ಯತ್ನಿಸುತ್ತಿರುವ ಕೇಂದ್ರದ ನಡೆಗೆ ಸಿಎಂ ಸಿದ್ದರಾಮಯ್ಯ ಅಕ್ರೋಶ by-ಕೆಂಧೂಳಿ ಬೆಂಗಳೂರು, ಫೆ,28-ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ ಪಾಲನ್ನು ಇನ್ನಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಕರ್ನಾಟಕ ವಿರೋಧಿ ಮಾತ್ರವಲ್ಲ ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾರುವ ಸಂವಿಧಾನಕ್ಕೆ ಕೂಡಾ ವಿರುದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಅವರು,ರಾಜ್ಯದ ತೆರಿಗೆ ಪಾಲನ್ನು ಶೇಕಡಾ 41ರಿಂದ 40ಕ್ಕೆ ಇಳಿಸಲು ಶಿಫಾರಸು ಮಾಡುವಂತೆ ಹಣಕಾಸು ಆಯೋಗಕ್ಕೆ ಕೇಂದ್ರದ ಎನ್‌ಡಿಎ ಸರ್ಕಾರ ಸಿದ್ಧತೆ…

ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚು ಅನುದಾನ ಕೊಡಿ- ಬಿ.ವೈ.ವಿಜಯೇಂದ್ರ

ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚು ಅನುದಾನ ಕೊಡಿ- ಬಿ.ವೈ.ವಿಜಯೇಂದ್ರ by-ಕೆಂಧೂಳಿ ಬೆಂಗಳೂರು: ಬೆಂಗಳೂರು ಮಹಾನಗರದ ಅಭಿವೃದ್ಧಿ ದೃಷ್ಟಿಯಿಂದ ಶಾಸಕರಿಗೆ ಹೆಚ್ಚು ಅನುದಾನವನ್ನು ನೀಡಬೇಕೆಂದು ಆಗ್ರಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇದ್ರ ನೇತೃತ್ವದಲ್ಲಿ ಬೆಂಗಳೂರು ಶಾಸಕರು ಸಂಸದರ ನಿಯೋಗ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೇಟಿ ಮಾಡಿ ಮನವಿ ಸಲ್ಲಿಸಿದರು. ಬೇಟಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ವಿಜಯೇದ್ರ ಸಿಲಿಕಾನ್ ಸಿಟಿ ಬೆಂಗಳೂರಿನ ಮೂಲಸೌಕರ್ಯ ವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗೆ ಹಣ ಕೊಡಬೇಕಿದೆ. ಫ್ಲೈಓವರ್, ವಿವಿಧ ಯೋಜನೆಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಅವುಗಳಿಗೆ ಹೆಚ್ಚು ಅನುದಾನ…

ಹೆತ್ತವರನ್ನು ಕಳೆದುಕೊಂಡ  ಹುಡುಗನ  ಕನಸಿನ ಕಥೆ “ಮಿಥ್ಯ”

ಹೆತ್ತವರನ್ನು ಕಳೆದುಕೊಂಡ  ಹುಡುಗನ ಕನಸಿನ ಕಥೆ “ಮಿಥ್ಯ” by-ಕೆಂಧೂಳಿ ತಮ್ಮ ಅಭಿನಯದ ಮೂಲಕ‌‌ ಅಭಿಮಾನಿಗಳ ಮನ ಗೆದ್ದಿರುವ ರಕ್ಷಿತ್ ಶೆಟ್ಟಿ ಪರಂವಃ ಸ್ಟುಡಿಯೋಸ್ ಮೂಲಕ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಿಸಿದ್ದಾರೆ. ಆ ಸಾಲಿಗೆ ಮತ್ತೊಂದು ಸೇರ್ಪಡೆ ಮಿಥ್ಯ. ಪ್ರಸ್ತುತ ವಿಭಿನ್ನ ಕಥಾಹಂದರ ಹೊಂದಿರುವ “ಮಿಥ್ಯ” ಚಿತ್ರದ ಟ್ರೇಲರ್ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಚಿತ್ರ ಮಾರ್ಚ್ 7 ರಂದು ಬಿಡುಗಡೆಯಾಗುತ್ತಿದೆ.” ಏಕಂ” ಎಂಬ ವೆಬ್ ಸಿರೀಸ್ ಸೇರಿದಂತೆ ಅನೇಕ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಸುಮಂತ್ ಭಟ್ ಅವರಿಗೆ “ಮಿಥ್ಯ”, ಬೆಳ್ಳಿತೆರೆಯಲ್ಲಿ ಮೊದಲ…

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಕಪಟಿ”

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ “ಕಪಟಿ” by-ಕೆಂಧೂಳಿ “ಹಗ್ಗದ ಕೊನೆ”, “ಆ ಕಾರಾಳ ರಾತ್ರಿ” ಸೇರಿದಂತೆ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ದಯಾಳ್ ಪದ್ಮನಾಭನ್ ಅವರು ಡಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಿಸಿರುವ, ರವಿಕಿರಣ್ – ಚೇತನ್ ಎಸ್ ಪಿ ನಿರ್ದೇಶಿಸಿರುವ ಹಾಗೂ ಸುಕೃತ ವಾಗ್ಲೆ, ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್ ಪ್ರಮುಖಪಾತ್ರದಲ್ಲಿ ನಟಿಸಿರುವ ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಕಪಟಿ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಹೆಸರಾಂತ ನಿರ್ಮಾಪಕರಾದ ಕೆ.ಮಂಜು, ರಮೇಶ್ ಯಾದವ್ ಹಾಗೂ ಅವಿನಾಶ್…

ಅರಮನೆ ಮೈದಾನ ಭೂಮಿ ಸ್ವಾಧೀನಕ್ಕೆ ಠೇವಣಿ ಇಡಲು ಸುಪ್ರೀಂ ತಾಕೀತು

ಅರಮನೆ ಮೈದಾನ ಭೂಮಿ ಸ್ವಾಧೀನಕ್ಕೆ ಠೇವಣಿ ಇಡಲು ಸುಪ್ರೀಂ ತಾಕೀತು    by-ಕೆಂಧೂಳಿ ನವದೆಹಲಿ,ಫೆ,೨೮- ಬೆಂಗಳೂರಿನ ಅರಮನೆ ಮೈದಾನದ ಭೂಮಿ ಸ್ವಾದೀನಪಡಿಸಿಕೊಳ್ಳುವ ಸಂಬಂಧ ಕರ್ನಾಟಕ ಸರ್ಕಾರ ೩೪೦೦ ಕೋಟಿಗೂ ಹೆಚ್ಚಿನ ವರ್ಗಾವಣೆ ಮಾಡಬಹುದಾದ ಅಭಿವೃದ್ಧಿಹಕ್ಕು (ಟಿಡಿಆರ್) ಪ್ರಮಾಣಪತ್ರವನ್ನು ಒಂದುವಾರದೊಳಗೆ ಠೇವಣಿ ನೀಡುವಂತೆ ಸುಪ್ರೀಂಕೋರ್ಟ್ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಗುರುವಾರ ಬೆಂಗಳೂರಿನ ರಮನೆ ಮೈದಾನದ ಬಳ್ಳಾರಿ ರಸ್ತೆ ಮತ್ತು ಜಯಮಹಲ್ ರಸ್ತೆಗಳ ವಿಸ್ತರಣೆಗಾಗಿ ಸ್ವಾದೀನ ಪಡಿಸಿಕೊಳ್ಲುವ ಸಂಬಧ ಸುಪ್ರೀಕೋರ್ಟ್ ಈ ಆದೇಶ ನೀಡಿದೆ ನ್ಯಾಯಮೂರ್ತಿಗಳಾದ ಎಂ.ಎಂ.ಸುಂದರೇಶ್ ಮತ್ತು…

1 9 10 11 12 13 103
Girl in a jacket