Girl in a jacket

Author kendhooli_editor

ಹುಬ್ಬಳ್ಳಿ ಇನ್ಫೋಸಿಸ್‌ ಇನ್ನೂ ಹತ್ತು ಪಟ್ಟು ಬೆಳೆಯಲಿ: ಎಂ ಬಿ ಪಾಟೀಲ ಆಶಯ

ಹುಬ್ಬಳ್ಳಿ,ಆ,06-ಕರ್ನಾಟಕ ಮೂಲದ ಇನ್ಫೋಸಿಸ್ ಸಂಸ್ಥೆಯ ಸ್ಥಳೀಯ ಘಟಕವು ಈಗಿನ ಪ್ರಮಾಣಕ್ಕಿಂತ ಇನ್ನೂ ಹತ್ತು ಪಟ್ಟು ಬೆಳೆಯಬೇಕು. ಈ ಮೂಲಕ ಕಂಪನಿಯ ಹುಬ್ಬಳ್ಳಿ ಕೇಂದ್ರವೇ ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುವಂತಹ ಪ್ರಧಾನ ತಾಣವಾಗಿ ಅಭಿವೃದ್ಧಿ ಹೊಂದಬೇಕು. ಜತೆಗೆ ಕಂಪನಿಯು ಉತ್ತರ ಕರ್ನಾಟಕ ಭಾಗದ ಇತರ ಜಿಲ್ಲೆಗಳಲ್ಲೂ ನೆಲೆಯೂರಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಆಶಿಸಿದ್ದಾರೆ. ಅವರು ಬುಧವಾರ ಇಲ್ಲಿನ ಇನ್ಫೋಸಿಸ್‌ ಹುಬ್ಬಳ್ಳಿ ಡೆವಲಪ್‌ಮೆಂಟ್‌ ಸೆಂಟರ್‌ನಲ್ಲಿ ಸಂಸ್ಥೆಯ ಸಿಬ್ಬಂದಿ ವರ್ಗವನ್ನು ಉದ್ದೇಶಿಸಿ ಮಾತನಾಡಿದರು.…

ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಆ.06-“ಮತಗಳ್ಳತನ ವಿಚಾರವನ್ನು ನಮ್ಮ ಹೈಕಮಾಂಡ್ ನಾಯಕರು ಗಂಭೀರವಾಗಿ ಪರಿಗಣಿಸಿದ್ದು, ಮತದಾರರ ಹಕ್ಕಿನ ರಕ್ಷಣೆ ಮಾಡಬೇಕಾಗಿರುವುದು ರಾಜಕೀಯ ಪಕ್ಷಗಳ ಕರ್ತವ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿ ಆವರಣದಲ್ಲಿ ಬುಧವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದರು. ಆಗಸ್ಟ್ 8ರಂದು ನಡೆಯಲಿರುವ ಪ್ರತಿಭಟನೆ ಬಗ್ಗೆ ಕೇಳಿದಾಗ, “ನಮ್ಮ ಮೈತ್ರಿ ನಾಯಕ ಶಿಬು ಸೊರೇನ್ ಅವರ ನಿಧನವಾದ ಕಾರಣಕ್ಕೆ ಆಗಸ್ಟ್ 5ರಂದು ನಡೆಸಬೇಕಾಗಿದ್ದ ಪ್ರತಿಭಟನೆಯನ್ನು ಆಗಸ್ಟ್ 8ಕ್ಕೆ ಮುಂದೂಡಲಾಯಿತು. ಲೋಕಸಭೆ…

ವೈದ್ಯರು ಸಹನೆಯಿಂದ ಕೆಲಸ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಆ, 8-ವೈದ್ಯರು ರೋಗಿಗಳನ್ನು ಸಹಾನುಭೂತಿಯಿಂದ ಕಾಣಬೇಕು. ಉಚಿತ ಚಿಕಿತ್ಸೆ ಇರುವುದರಿಂದ ಒತ್ತಡವೂ ಹೆಚ್ಚಿರುತ್ತದೆ. ವೈದ್ಯರು ಸಹನೆಯಿಂದ ಕೆಲಸ ಮಾಡಬೇಕು. ಯಾರ ಬಳಿಯೂ ಹಣ ಪಡೆಯಬಾರದು ಎಂದು ವೈದ್ಯರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕೊಪ್ಪಳ ಕಾರ್ಯಕ್ರಮ ಇಂದು ಮಳೆ ಕಾರಣದಿಂದ ತೆರಳಲಿಲ್ಲ. ಆದ್ದರಿಂದ ವಿಕ್ಟೋರಿಯಾ ಆಸ್ಪತ್ರೆಗೆ ಇಂದು ಅನಿರೀಕ್ಷಿತ ಭೇಟಿ ನೀಡಲಾಗಿದೆ ಎಂದರು. ಆಸ್ಪತ್ರೆಯಲ್ಲಿ ವಾಹನ ನಿಲುಗಡೆಗೆ ಹಣ ಪಡೆಯುತ್ತಿರುವ…

ನಾಯಕನಹಟ್ಟಿ; ಸ್ಥಳೀಯ ವ್ಯಾಪಾರಸ್ಥರಿಗೆ ಆದ್ಯತೆ ನೀಡಲು ಒತ್ತಾಯ

ವರದಿ :- ಅಂಜನೇಯ ನಾಯಕನಹಟ್ಟಿ ನಾಯಕನಹಟ್ಟಿ ,ಆ,05-ಹೊರರಾಜ್ಯದ ವ್ಯಾಪಾರಸ್ಥರ ಬದಲಾಗಿ ಸ್ಥಳೀಯ ವ್ಯಾಪಾರಸ್ಥರಿಗೆ ಮೊದಲ ಆದ್ಯತೆ ನೀಡುವಂತೆ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀನಿವಾಸ್ಅವರಿಗೆ ವಿವಿಧ ಸಂಘಟನೆಗಳು ಮನವಿ ಸಲ್ಲಿಸಿದವು. ಪಟ್ಟಣದ ಕರ್ನಾಟಕ ರಾಜ್ಯ ರೈತ ಹಸಿರು ಸೇನೆ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‌ಕುಮಾರ್ (ಶೆಟ್ಟಿಬಣ), ಕರ್ನಾಟಕ ರಕ್ಷಣ ವೇದಿಕೆ ಕನ್ನಡ ಸೇನೆ ಹಾಗೂ ಕರುನಾಡ ನವ ನಿರ್ಮಾಣ ವೇದಿಕೆ ನಾಯಕನಹಟ್ಟಿ ವರ್ತಕರ ಸಂಘದಿಂದ ಮಂಗಳವಾರ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀನಿವಾಸ್‌ರವರಿಗೆ ಮನವಿ ಸಲ್ಲಿಸಿದರು. ನಾಯಕನಹಟ್ಟಿ ಪಟ್ಟಣದಲ್ಲಿ ವಿವಿಧ…

ನವರಂಗಿ ಆಟ ಆಡಬೇಡಿ ಅಶೋಕ್ ಹೇಳಿಕೆಗೆ ಸಿಎಂ ತಿರುಗೇಟು

ಬೆಂಗಳೂರು, ಆ,05-ಅಧಿಕಾರ ಇದ್ದಾಗ ನವರಂಗಿ ಆಟ,ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ..!ಅಧಿಕಾರ ಇದ್ದಾಗ ಹಗಲುವೇಷ,ವಿರೋಧಪಕ್ಷದಲ್ಲಿದ್ದಾಗ ರೋಷಾವೇಶ..!ಸನ್ಮಾನ್ಯ ಆರ್ ಅಶೋಕ್ ಅವರೇ,ಈ ಬಣ್ಣನೆ ನಿಮ್ಮ ಆತ್ಮವಂಚಕ ವ್ಯಕ್ತಿತ್ವಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ ಸಾರಿಗೆ ನೌಕರರು ಮೊದಲ ಬಾರಿ ವೇತನ‌ ಪರಿಷ್ಕರಣೆಗಾಗಿ ಮುಷ್ಕರ ನಡೆಸಿದಾಗ ಸಾರಿಗೆ ಸಚಿವರಾಗಿದ್ದವರು ನೀವೇ ಅಲ್ಲವೇ? ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ 15 ದಿವಸಗಳ‌ ಸುದೀರ್ಘ ಮುಷ್ಕರ ನಡೆದಾಗಲೂ ಸಾರಿಗೆ ಸಚಿವರಾಗಿ ಕೈಕಟ್ಟಿ ಕೂತು ತಮ್ಮ ಅಸಾಮರ್ಥ್ಯ ಪ್ರದರ್ಶಿಸಿದ್ದೂ ನೀವೇ…

ಸಾರಿಗೆ ನೌಕರರ ಮುಷ್ಕರ ಮುಂದೂಡಿಕೆ; ಬಸ್ ಸಂಚಾರ ಆರಂಭ

ಬೆಂಗಳೂರು, ಆ-ಹೈಕೋರ್ಟ್ ಸೂಚನೆಯ ಮೇರೆಗೆ ಸಾರಿಗೆ ನೌಕರರು ಆರಂಭಿಸಿದ್ದ ಮುಷ್ಕರವನ್ನು ಮುಂದೂಡಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣದಿದಂದಲೇ ಬಸ್ ಸಂಚಾರ ಆರಂಭವಾಗಿದೆ.ಕರ್ನಾಟಕ ಹೈಕೋರ್ಟ್ ಸೂಚನೆಯ ಮೇರೆಗೆ ಸಾರಿಗೆ ನೌಕರರ ಮುಷ್ಕರವನ್ನು ಮುಂದೂಡಿಕೆ ಮಾಡುತ್ತಿರುವುದಾಗಿ ಸಾರಿಗೆ ಸಂಘಟನೆಗಳ ಜಂಟಿ ಕ್ರಿಯಾಸಮಿತಿಯ ಅಧ್ಯಕ್ಷ ಅನಂತ ಸುಬ್ಬಾರಾವ್ ಘೋಷಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ರಾಜ್ಯಾಧ್ಯಂತ ಈ ಕ್ಷಣದಿಂದಲೇ ಹೈಕೋರ್ಟ್ ಸೂಚನೆಯ ಮೇರೆಗೆ ನಾವು ಸಾರಿಗೆ ನೌಕರರ ಮುಷ್ಕರವನ್ನು ಮುಂದೂಡಿಕೆ ಮಾಡುವುದಾಗಿ ಘೋಷಿಸಿದರು. ಜನರಿಗೆ ನಿಮ್ಮ ಮುಷ್ಕರದಿಂದ ಸಮಸ್ಯೆ ಆಗಬಾರದು. ಮುಷ್ಕರ ನಿಂತಿರುವ…

ಆ.10ರಂದು ಪ್ರಧಾನಿಗಳಿಂದ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು, ಆ.05-“ಮೆಟ್ರೋ ಯೋಜನೆ ಕೇವಲ ಕೇಂದ್ರ ಸರ್ಕಾರದ ಯೋಜನೆಯಲ್ಲ. ಇದರಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪಾಲುದಾರಿಕೆ ಇದೆ. ಇದರಲ್ಲಿ ಜನರ ಸೇವೆ ಮುಖ್ಯವೇ ಹೊರತು, ಕ್ರೆಡಿಟ್ ರಾಜಕಾರಣವಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಶಿವಕುಮಾರ್ ಅವರು, ಮೆಟ್ರೋ ‌ಹಳದಿ ಮಾರ್ಗದಲ್ಲಿ ಮಂಗಳವಾರ ಸಂಚರಿಸಿ ಪರಿಶೀಲನೆ ನಡೆಸಿದರು. ಈ ವೇಳೆ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಉದ್ಘಾಟನಾ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ ನಿಗದಿ…

ಬೆಂಗಳೂರು ನಗರ ವಿಶ್ವವಿದ್ಯಾನಿಲಯ; *ಕಣ್ಮನ ಸೂರೆಗೊಂಡ ವಿನ್ಯಾಸ ವೈಭವ-2 ಫ್ಯಾಷನ್ ಶೋ

ಬೆಂಗಳೂರು,ಆ,-04-  ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಫ್ಯಾಷನ್ ಮತ್ತು ಉಡುಪು ವಿನ್ಯಾಸ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ “ವಿನ್ಯಾಸ ವೈಭವ-2” ಫ್ಯಾಷನ್ ಶೋ ನೆರೆದಿದ್ದ ಪ್ರೇಕ್ಷಕರ ಮನಸೂರೆಗೊಂಡು ಅಪಾರ ಮೆಚ್ಚುಗೆಗೆ ಪಾತ್ರವಾಯಿತು. ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ಒಟ್ಟು 12 ತಂಡಗಳ 64 ವಿದ್ಯಾರ್ಥಿಗಳು ವಿವಿಧ ಪರಿಕಲ್ಪನೆಗಳನ್ನು ಆಧರಿಸಿದ ವರ್ಣರಂಜಿತ ಉಡುಪು ವಿನ್ಯಾಸ ಪ್ರದರ್ಶಿಸುತ್ತಾ ಆಕರ್ಷಕ ಹಾವಭಾವಗಳ ಬಿಂಕದ ನಡಿಗೆಯ ಮೂಲಕ ಸಭಿಕರನ್ನು ಬೆರಗುಗೊಳಿಸಿದರು. ಝಗಮಗಿಸುವ ಬೆಳಕಿನ ಚಿತ್ತಾರಗಳ ಹಿನ್ನೆಲೆಯ ವೇದಿಕೆಯ ಮೇಲೆ ಸಾಂಪ್ರದಾಯಿಕ…

KRS ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಸಾಗರ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಹುನ್ನಾರ: ಆರ್.ಅಶೋಕ್

ಮಂಡ್ಯ, ಆ, 4-ಕೆ ಆರ್ ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಸಾಗರ ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದರು. ಟಿಪ್ಪು ಸುಲ್ತಾನ್ 1799ರಲ್ಲಿ ಮೃತಪಟ್ಟಿದ್ದು, ಕೆಆರ್‌ಎಸ್ ಜಲಾಶಯದ ನಿರ್ಮಾಣ 1911ರಲ್ಲಿ ಆರಂಭವಾಯಿತು. ಬರೋಬ್ಬರಿ 112 ವರ್ಷಗಳ ನಂತರ ಡ್ಯಾಂ ಕಟ್ಟಲಾಗಿದ್ದು, ಟಿಪ್ಪು ಶಂಕುಸ್ಥಾಪನೆ ಮಾಡಿದ್ದರೆ ಆಗಲೇ ಈ ಹೆಸರು ಇಡಬೇಕಿತ್ತಲ್ವ? ಎಂದು ಪ್ರಶ್ನಿಸಿದರು. ಕೃಷ್ಣರಾಜ ಸಾಗರ ಡ್ಯಾಂಗೆ ಟಿಪ್ಪು ಹೆಸರು ತಳಕು…

ಪೂಜೆಯ ಬಳಿಕ ಕಾಡಿನತ್ತ ಮೊದಲ ತಂಡದ ಗಜಪಯಣ • ಆನೆ ಕಂದಕ, ಸೌರಬೇಲಿಗಳ ಸಮರ್ಪಕ ನಿರ್ವಹಣೆಗೆ ಖಂಡ್ರೆ ಸೂಚನೆ

ವೀರನಹೊಸಹಳ್ಳಿ, (ಹುಣಸೂರು) ಆ.4- ಸಫಾರಿಯಲ್ಲಿ ವನ್ಯಜೀವಿಗಳನ್ನು, ದಸರಾ ಜಂಬೂಸವಾರಿಯಲ್ಲಿ ಅಲಂಕೃತ ಆನೆಗಳನ್ನು ನೋಡಿ ಆನಂದಿಸುವ ನಾವು ಅವುಗಳ ಸಂರಕ್ಷಣೆಗೂ ಮುಂದಾಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಹುಣಸೂರು ತಾಲೂಕು ವೀರನಹೊಸಹಳ್ಳಿಯಲ್ಲಿಂದು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ 14 ಆನೆಗಳ ಪೈಕಿ 9 ಆನೆಗಳ ಮೊದಲ ತಂಡಕ್ಕೆ ಸಾಂಪ್ರದಾಯಿಕವಾಗಿ ಪೂಜೆ ನೆರವೇರಿಸಿ, ಕಬ್ಬು, ಅಕ್ಕಿ, ಬೆಲ್ಲ ತಿನ್ನಿಸಿ ಗಜಪಯಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಕೃತಿ ಪರಿಸರದ ಸಮತೋಲನಕ್ಕೆ ವನ್ಯಜೀವಿಗಳು ಅತ್ಯವಶ್ಯಕವಾಗಿದ್ದು,…

ಬೆಂಗಳೂರು ವಿ.ವಿ.ಯಲ್ಲಿ ಆತ್ಮೀಯ ಬಿಳ್ಕೊಡಿಗೆ ಸಮಾರಂಭ

ಬೆಂಗಳೂರು ,ಆ,02- ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಎಸ್.ಹರಿಪ್ರಸಾದ್ ಹಾಗೂ ಆಡಳಿತ ವಿಭಾಗದ ಅಧೀಕ್ಷಕರಾದ ಟಿ.ಪದ್ಮಮ್ಮನವರಿಗೆ ಆತ್ಮೀಯ ಬೀಳ್ಕೊಡುಗೆ ನೀಡಿ ಅಭಿನಂದಿಸಲಾಯಿತು. ಸೆಂಟ್ರಲ್ ಕಾಲೇಜಿನ ಸರ್ ಸಿ.ವಿ.ರಾಮನ್ ಹಾಲ್ ನಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಪ್ರಭಾರ ಕುಲಪತಿಗಳಾದ ಪ್ರೊ. ಕೆ.ಆರ್.ಜಲಜಾ, ನೂತನ ಕುಲಸಚಿವರಾದ ನವೀನ್ ಜೋಸೆಫ್, ಕುಲಸಚಿವ (ಮೌಲ್ಯಮಾಪನ) ಪ್ರೊ. ಬಿ.ರಮೇಶ್ ಹಾಗೂ ವಿತ್ತಾಧಿಕಾರಿಗಳಾದ ಎಂ.ವಿ. ವಿಜಯಲಕ್ಷ್ಮಿ ಉಭಯತ್ರರನ್ನು ಸನ್ಮಾನಿಸಿ ಅಭಿನಂದಿಸಿದರು. ವಿಶ್ವವಿದ್ಯಾನಿಲಯದ ಪ್ರಗತಿಯ ಹಾದಿಯಲ್ಲಿ ಇದರಿಬ್ಬರ ಅತ್ಯಮೂಲ್ಯ ಕೊಡುಗೆಯನ್ನು ಕೃತಜ್ಞತೆಯಿಂದ…

ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಅದರ ವಿರುದ್ಧ ಧ್ವನಿ ಎತ್ತಬೇಕು: ಆರ್‌.ಅಶೋಕ

ಬೆಂಗಳೂರು, ಆ, 2-ಒಕ್ಕಲಿಗ ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಅದರ ವಿರುದ್ಧ ಧ್ವನಿ ಎತ್ತಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಕರೆ ನೀಡಿದರು. ರಾಜ್ಯ ಒಕ್ಕಲಿಗರ ಜಾಗೃತಿ ಸಂಘದಿಂದ ಕುವೆಂಪು ಕಲಾಕ್ಷೇತ್ರದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮುದಾಯಕ್ಕೆ ಅನ್ಯಾಯವಾದಾಗ ಪ್ರತಿಯೊಬ್ಬರೂ ಧ್ವನಿ ಎತ್ತಬೇಕು. ಅಂದರೆ ಮಾತ್ರ ಸಮುದಾಯಕ್ಕೆ ನ್ಯಾಯ ದೊರೆಯುತ್ತದೆ. ನಾಡಪ್ರಭು ಕೆಂಪೇಗೌಡರು ಯಾರ ಮೇಲೂ ದಂಡೆತ್ತಿ ಹೋಗಿ ಸಾಮ್ರಾಜ್ಯ ಸ್ಥಾಪಿಸಲಿಲ್ಲ. ಅವರು ಎಲ್ಲರನ್ನೂ ಸಮಾನತೆಯಿಂದ ಕಂಡು ಬೆಂಗಳೂರನ್ನು ಕಟ್ಟಿದ್ದರು. ಮಾಜಿ ಸಿಎಂ ಎಸ್‌.ಎಂ.ಕೃಷ್ಣ,…

ಅತ್ಯಾಚಾರ ಪ್ರಕರಣ;ಪ್ರಜ್ವಲ್ ರೇವಣ್ಣಗೆ ಜೀವಾವಧಿಶಿಕ್ಷೆ ವಿಧಿಸಿದ ನ್ಯಾಯಾಲಯ

ಬೆಂಗಳೂರು,ಆ,02 -ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಿಸಿ ತೀರ್ಪುನೀಡಿದೆ. ಮೈಸೂರಿನ ಕೆ.ಆರ್,ನಗರದಲ್ಲಿ ಮನೆ ಕೆಲಸಕ್ಕೆ ಸೇರಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿನ್ನೆ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪುನೀಡಿದ್ದು ಶಿಕ್ಷೆಯ ತೀರ್ಪು ಇಂದು ಪ್ರಕಟಿಸಿತು. ಪ್ರಜ್ವಲ್ ರೇವಣ್ಣಗೆ ಜೀವಾಧಿ ಶಿಕ್ಷೆ ಒಟ್ಟು 11ಲಕ್ಷ ರೂ ದಂಡ ವಿಧಿಸಿ ಆದೇಶ ಹೊರಡಿಸಿದೆ, ಐಪಿಸಿ ಸೆಕ್ಷನ್ ೩೭೬(೨)(ಕ) ಅಡಿ ಜೀವಾವಧಿ ಶಿಕ್ಷೆ…

ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ಉಲ್ಲಂಘನೆಗೆ ಕಠಿಣ ಕ್ರಮ

ಬೆಂಗಳೂರು, ಆ, 02-ರಾಜ್ಯ ಕೃಷಿ ಇಲಾಖೆಯು ರಾಜ್ಯದಾದ್ಯಂತ ರಸಗೊಬ್ಬರ ಮತ್ತು ಕೀಟನಾಶಕ ಮಾರಾಟದಲ್ಲಿ ನಡೆಯುತ್ತಿರುವ ಉಲ್ಲಂಘನೆಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಮಾನ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿಯವರ ಮಾರ್ಗದರ್ಶನದಲ್ಲಿ, ಇಲಾಖೆಯು ರಾಜ್ಯದ ವಿವಿಧ ಭಾಗಗಳಲ್ಲಿ ದಾಳಿ ನಡೆಸಿ, ಫರ್ಟಿಲೈಸರ್ ಕಂಟ್ರೋಲ್ ಆರ್ಡರ್ (FCO) ಉಲ್ಲಂಘನೆ ಮತ್ತು ಅನಧಿಕೃತ ಕೀಟನಾಶಕ ತಯಾರಿಕೆಯನ್ನು ಪತ್ತೆಹಚ್ಚಿದೆ. *ಬನ್ನೂರಿನಲ್ಲಿ ಜಪ್ತಿ ಕಾರ್ಯಾಚರಣೆ* ಚಾಮುಂಡೇಶ್ವರಿ ಟ್ರೇಡರ್ಸ್ ಮತ್ತು ಗ್ರೀನ್‌ವೇ ಎಂಟರ್ಪ್ರೈಸಸ್, ಬನ್ನೂರು ಇಲ್ಲಿ FCO ಉಲ್ಲಂಘನೆ ಮಾಡಿ ಮಾರಾಟ ಮಾಡುತ್ತಿದ್ದ ಅಂದಾಜು ಒಟ್ಟು ₹5,29,900…

ಅರ್ಜುನನ ಹೆಸರಿನಲ್ಲಿ ವಾರ್ಷಿಕ ಪ್ರಶಸ್ತಿ-ಈಶ್ವರ ಖಂಡ್ರೆ

ಬೀದರ್, ಆ.೨- ಹಾಸನದ ಯಸಳೂರು ಬಳಿ ಪುಂಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮವಾದ ದಸರಾ ಆನೆ ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸಲಾಗಿದ್ದು, ಆ.೪ರಂದು ಗಜಪಯಣದ ವೇಳೆ ಮಾವುತ,ಸಿಬ್ಬಂದಿಗೆ ಪ್ರಥಮ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ. ಕೋಟೆ ಶಾಸಕ ಅನಿಲ್ ಕುಮಾರ್ ಸಿ. ಅವರು ಅರ್ಜುನನ ಹೆಸರಲ್ಲಿ ವಾರ್ಷಿಕ ಪ್ರಶಸ್ತಿ ಸ್ಥಾಪಿಸುವ ಸಲಹೆ ನೀಡಿದ್ದರು. ಈ ಸಲಹೆ ಪುರಸ್ಕರಿಸಿ, ಮಾನವ-ವನ್ಯಜೀವಿ…

ನಟಿ ರಮ್ಯಾಗೆ ಅಶ್ಲೀಲ ಸಂದೇಶ ರವಾನಿಸಿದ್ದ ಇಬ್ಬರ ಬಂಧನ

ಬೆಂಗಳೂರು,ಆ,೦೨- ನಟಿ ರಮ್ಯಾ ವಿರುದ್ಧ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಸಂದೇಶಗಳು ಮಾಡಿದ ಸಂಬಂಧ ಇಬ್ಬರನ್ನು ಪೊಲಿಸರು ಬಂಧಿಸಿದ್ದಾರೆ. ರಮ್ಯಾ ಅವರಿಗೆ ಸಮಾಜಿಕ ಜಾಲ ತಾಣಗಳಲ್ಲಿ ಅಶ್ಲೀಲ ಸಂದೇಶಗಳನ್ನರು ರವಾನಿಸದವರೆಲ್ಲರೂ ದರ್ಶನ್ ಅಭಿಮಾನಿಗಳು ಎಂದು ಹೇಳಲಾಗಿತ್ತು ಸೈಬರ್ ಪೊಲೀಸರು ನಟಿ ರಮ್ಯಾ ನೀಡಿದ ದೂರಿನ ಆಧಾರದ ಮೇಲೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ರವಾನಿಸಿದ ಇಬ್ಬರನ್ನು ಬಂಧಿಸಿದ್ದಾರೆ. ರಮ್ಯಾ ಅವರು ಇತ್ತೀಚೆಗೆ ರೇಣುಕಾಸ್ವಾಮಿ ಪರ ಮಾತನಾಡಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯುವಾಗ ‘ರೇಣುಕಾಸ್ವಾಮಿ…

ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು ಜು 31- ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿರುವ ಸಂದರ್ಭದಲ್ಲಿ ಕಾಳಸಂತೆಕೋರರು ತಲೆ ಎತ್ತದಂತೆ ತೀವ್ರ ನಿಗಾ ವಹಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಅಸಹಾಕಾರದ ನಡುವೆಯೂ ರಾಜ್ಯದ ರೈತರಿಗೆ ಅನಾನುಕೂಲ ಆಗದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ನಡುವೆ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿಸಿ ದುರ್ಲಾಭ ಮಾಡಿಕೊಳ್ಳಲು ಕಾಳಸಂತೆಕೋರರು ಪ್ರಯತ್ನಿಸುತ್ತಿರುವ ಬಗ್ಗೆ ತೀವ್ರ ನಿಗಾ…

ಧರ್ಮಸ್ಥಳ ಹೂತಿಟ್ಟ ಶವ ಪ್ರಕರಣ ; ರವಿಕೆ ಪತ್ತೆ

ಧರ್ಮಸ್ಥಳ, ಜು,30-ನಿಗೂಢ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಐಟಿ ನಡೆಸುತ್ತಿರುವ ಶೋಧ ಕಾರ್ಯದಲ್ಲಿ ಮಹಿಳೆ ರವಿಕೆ ಪತ್ತೆಯಾಗಿದ್ದು ಮಹತ್ವದ ಸುಳಿವು ದೊರೆತಂತಾಗಿದೆ. ಕಳೆದ ಎರಡು ದಿನಗಳಿಂದ ಇಲ್ಲಿ ನಡೆಯುತ್ತಿರುವ ಶೋಧ ಕಾರ್ಯದಲ್ಲಿ ಗುಂಡಿ ಅಗೆದರೂ ಯಾವುದೆ ಸುಳಿವು ಸಿಕ್ಕಿರಲಿಲ್ಲ ಈಗ ದೊರೆತಿರುವ ರವಿಕೆ ಮಹತ್ವದ ಸುಳಿವು ದೊರೆತಂತಾಗಿದೆ. ಸೈಟ್ ನಂ.1ರಲ್ಲಿ 2.5 ಅಡಿ ಆಳದಲ್ಲಿ ಹರಿದ ಕೆಂಪು ರವಿಕೆ, ಪಾನ್ ಕಾರ್ಡ್, ಎಟಿಎಂ ಕಾರ್ಡ್ ಪತ್ತೆಯಾಗಿವೆ. ಸೈಟ್ ನಂ.1ರಲ್ಲಿ ಪತ್ತೆಯಾದಿರುವಂತ ಎಟಿಎಂ ಕಾರ್ಡ್ ನಲ್ಲಿ ಪುರುಷನ ಹೆಸರು…

ರಾಹುಲ್ ಗಾಂಧಿ ಪಾದಯಾತ್ರೆಗೆ ಯಾವ ನಿಯಮದಡಿ ಅವಕಾಶ: @ ಆರ್‌.ಅಶೋಕ ಪ್ರಶ್ನೆ

ಬೆಂಗಳೂರು, ಜು, 30-ಬುದ್ಧಿ ಕಡಿಮೆ ಇರುವ ರಾಹುಲ್‌ ಗಾಂಧಿಯವರ ಪಾದಯಾತ್ರೆಗೆ ಯಾವ ನಿಯಮದಡಿ ಅವಕಾಶ ನೀಡುತ್ತಾರೆ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲೋಕಸಭಾ ಚುನಾವಣೆ ನಡೆದಾಗ ಕಾಂಗ್ರೆಸ್‌ ಅಧಿಕಾರದಲ್ಲಿತ್ತು. ಆಗ ಚುನಾವಣೆಯಲ್ಲಿ ಅಕ್ರಮ ಆಗಿದ್ದರೆ ಚುನಾವಣಾ ಆಯೋಗಕ್ಕೆ ದೂರು ನೀಡಬಹುದು ಎಂಬ ಕಾಮನ್‌ಸೆನ್ಸ್‌ ರಾಹುಲ್‌ ಗಾಂಧಿಗೆ ಇಲ್ಲ. ಅದಕ್ಕಾಗಿಯೇ ಅವರು ರಾಜ್ಯಕ್ಕೆ ಬಂದು ಪಾದಯಾತ್ರೆ ಮಾಡುತ್ತಿದ್ದಾರೆ. ಯಾವುದೇ ಯಾತ್ರೆಗೆ ಅನುಮತಿ ನೀಡಬಾರದು ಎಂದು ಕೋರ್ಟ್‌ ಆದೇಶ ಇರುವಾಗ ಅನುಮತಿ…

ಕೇಂದ್ರದಿಂದ ಪೂರೈಕೆ ಕೊರತೆಯಿಂದ ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ .ಎನ್ ಚಲುವರಾಯಸ್ವಾಮಿ

ಬೆಂಗಳೂರು, ಜು 30-ಕೇಂದ್ರ ಸರ್ಕಾರದಿಂದ ಯೂರಿಯಾ ಪೂರೈಕೆ ಕೊರತೆಯಾದ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿತರಣೆಯಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿಭಾಯಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲಾ ಗೊಂದಲಗಳು ಬಗೆಹರಿಯಲಿವೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಸ್ಫಷ್ಟಪಡಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ ಸಚಿವರು ರಾಜ್ಯದಲ್ಲಿ ಕಳೆದ 2ವರ್ಷಗಳಲ್ಲಿ 3 ಮುಂಗಾರು ಹಂಗಾಮಿನಲ್ಲಿ ಇದೇ ಸರ್ಕಾರ ಅಧಿಕಾರದಲ್ಲಿದೆ. ನಾನೇ ಕೃಷಿ ಸಚಿವನಾಗಿ ಇದ್ದೇನೆ. ಈ ವರಗೆ ಉಂಟಾಗದ ಸಮಸ್ಯೆ ಈಗೇಕೆ ಎಂಬುದನ್ನು ವಿಶ್ಲೇಷಿಸಬೇಕಾಗಿದೆ ಎಂದು…

1 2 3 121
Girl in a jacket