Girl in a jacket

Author kendhooli_editor

ಠಾಣೆ ಹಾಡಿನಿಂದ ಜನಮನ ಗೆದ್ದ ಮಾನಸ ಹೊಳ್ಳ

ಠಾಣೆ ಹಾಡಿನಿಂದ ಜನಮನ ಗೆದ್ದ ಮಾನಸ ಹೊಳ್ಳ by-ಕೆಂಧೂಳಿ ಎರಡೂವರೆ ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಗಾಯಕಿಯಾಗಿದ್ದ ಗುರುತಿಸಿಕೊಂಡಿದ್ದ ಮಾನಸ ಹೊಳ್ಳ ಅವರು ಇತ್ತೀಚೆಗೆ ಸಂಗೀತ ನಿರ್ದೇಶಕಿಯಾಗಿಯೂ ತಮ್ಮ ಛಾಪು ಮೂಡಿಸಿದ್ದಾರೆ. ಇತ್ತೀಚೆಗೆ ಅವರು ಸಂಗೀತ ನೀಡಿರುವ ಠಾಣೆ ಚಿತ್ರದ “ಬಾಳಿನಲಿ ಭರವಸೆಯ ಬೆಳಕನು ನೀ ಹೂಡು..” ಎಂಬ ಹಾಡಿಗೆ ಇಡೀ ಕರುನಾಡೇ ಮನಸೋತಿದೆ. ಎಲ್ಲೆಡೆ ವೈರಲ್ ಆಗಿರುವ,ಅದರಲ್ಲೂ ಪುಟ್ಟ ಮಕ್ಕಳೇ ದನಿಯಾಗಿರುವ ಈ ಹಾಡಿಗೆ ಗೆಳತಿ ರೆಮೋ ಸಾಹಿತ್ಯ ಬರೆದಿದ್ದಾರೆ. ಕರವೇ ರಾಜ್ಯಾಧ್ಯಕ್ಷ‌ ನಾರಾಯಣಗೌಡ್ರು ಕೂಡ ಈ ಹಾಡನ್ನು…

ಕಾಂಗ್ರೆಸ್ ನಾಯಕನನ್ನು ಭೇಟಿಯಾದ ಯತ್ನಾಳ್

ಕಾಂಗ್ರೆಸ್ ನಾಯಕನನ್ನು ಭೇಟಿಯಾದ ಯತ್ನಾಳ್ by-ಕೆಂಧೂಳಿ ಹುಬ್ಬಳ್ಳಿ, ಮಾ,31-ಹೊಸ ಪಕ್ಷ ರಚಿಸುತ್ತೇನೆ ಎಂದು ಸುಳಿವು ನೀಡದ ಬೆನ್ನಲ್ಲೇ ಬಿಜೆಪಿ ಉಚ್ಚಾಟಿತ ಶಾಸಕ ಬಸವನಗೌಡ ಪಾಟೀಲ್ ಕಾಂಗ್ರೆಸ್ ನಾಯಕನನ್ನು ಭೇಟಿಯಾಗಿರುವುದ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ಇಂದು ಅವರು ಕಾಂಗ್ರೆಸ್ ಪಕ್ಷದ ಧಾರವಾಡ ಗ್ರಾಮೀಣ ಘಟಕದ ಅಧ್ಯಕ್ಷ ಅನಿಲ್ ಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ನಿನ್ನೆಯಷ್ಟೇ ಯುಗಾದಿ ಹಬ್ಬದ ದಿನದಂದು ಅವರು ತಮ್ಮ ಅನುಯಾಯಿಗಳೊಂದಿಗೆ ಚರ್ಚಿಸಿ ಹೊಸ ಪಕ್ಷ ಕಟ್ಟುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದರು. ಜೊತೆಗೆ, ಮುಂದಿನ…

ಭದ್ರಾಜಲಾಶಯದಿಂದ ತುಂಗಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲು ಸಿಎಂ ನಿರ್ಧಾರ

ಭದ್ರಾಜಲಾಶಯದಿಂದ ತುಂಗಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲು ಸಿಎಂ ನಿರ್ಧಾರ by-ಕೆಂಧೂಳಿ ಬೆಂಗಳೂರು, ಮಾ,30-ಕಲ್ಯಾಣ ಕರ್ನಾಟಕ ಭಾಗದ ರೈತಾಪಿ ಜನರಿಗೆ ಯುಗಾದಿ ಕೊಡುಗೆಯಾಗಿ ಭದ್ರಾ ಜಲಾಶಯದಿಂದ ತುಂಗಾಭದ್ರಾ ಕಾಲುವೆಗೆ ಎರಡು ಟಿಎಂಸಿ ನೀರು ಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಎಪ್ರಿಲ್ 1ರಿಂದ 5ರ ಅವಧಿಯಲ್ಲಿ ಕಾಲುವೆಗೆ ನೀರು ಹರಿಸಲು ನಿರ್ಧರಿಸಲಾಗಿದ್ದು, ಇದು ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಮತ್ತು ಇಲ್ಲಿನ ಜನರಿಗೆ ಕುಡಿಯುವ ನೀರಿನ ಲಭ್ಯತೆಯನ್ನು ಖಾತ್ರಿಪಡಿಸಲಿದೆ.…

ಹೊಸಪಕ್ಷ ರಚಿಸುವ ಸುಳಿವು ನೀಡಿದ ಯತ್ನಾಳ್

ಹೊಸಪಕ್ಷ ರಚಿಸುವ ಸುಳಿವು ನೀಡಿದ ಯತ್ನಾಳ್ by-ಕೆಂಧೂಳಿ ವಿಜಯಪುರ, ಮಾ,30-ಮುಂದಿನ ವಿಜಯದಶಮಿಗೆ ಹೊಸಬಪಕ್ಷ ರಚಿಸುವ ಸುಳಿವನ್ನು ಬಿಜೆಪಿಬುಚ್ಚಾಟಿತ ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ನೀಡಿದ್ದಾರೆ. ರಾಜ್ಯದಲ್ಲಿ ಹಿಂದೂ ಪಕ್ಷವನ್ನು ಕಟ್ಟುವ ಅನಿವಾರ್ಯತೆ ಇದೆ. ಹಾಗಾಗಿ ಮುಂದಿನ ವಿಜಯದಶಮಿಗೆ ಹೊಸ ಪಕ್ಷ ರಚನೆ ಮಾಡುವ ಅನಿವಾರ್ಯತೆ ಬರಲಿದೆ ಎಂದು ಮಾರ್ಮಿಕವಾಗಿ ಹೇಳಿದರು. ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂ ಪಕ್ಷವನ್ನು ಕಟ್ಟುವ ಅನಿವಾರ್ಯತೆ ಇದೆ. ಇದರಿಂದ ರಾಜ್ಯಾದ್ಯಂತ ನಮ್ಮ ಹೋರಾಟ ಆರಂಭವಾಗಿದೆ. ಕುಟುಂಬ ರಾಜಕಾರಣ ಮತ್ತು ಭ್ರಷ್ಟಾಚಾರ…

ಬಿಬಿಎಂಪಿ ಸದಸ್ಯರಿಲ್ಲದೆ ಐದನೇ ಬಾರಿ ಅಧಿಕಾರಿಗಳೆ 19,927 ಕೋಟಿ ಗಾತ್ರದ ಬಜೆಟ್ ಮಂಡನೆ

ಬಿಬಿಎಂಪಿ ಸದಸ್ಯರಿಲ್ಲದೆ ಐದನೇ ಬಾರಿ ಅಧಿಕಾರಿಗಳೆ 19,927 ಕೋಟಿ ಗಾತ್ರದ ಬಜೆಟ್ ಮಂಡನೆ by-ಕೆಂಧೂಳಿ ಬೆಂಗಳೂರು, ಮಾ,29-ಬಿಬಿಎಂಪಿ ಸದಸ್ಯರಿಲ್ಲದೆ ಐದನೇಬಾರಿಗೆ ಅಧಿಕಾರಿಗಳೆ ಬಜೆಟ್ ಮಂಡಿಸುವ ಮೂಲಕ ದಾಖಲೆ ಮೆರದಂತಾಗಿದೆ. ಈ ಬಾರಿಯ 2025-26ರ ಬಜೆಟ್‌ನಲ್ಲಿ 19.927 ಕೋಟಿ ರೂ.ಗಳ ಬೃಹತ್‌ ಯೋಜನೆಗಳನ್ನು ಘೋಷಿಸಲಾಗಿದೆ. ರಾಜ್ಯ ಸರ್ಕಾರದ ಗ್ರೇಟರ್‌ ಬೆಂಗಳೂರು ರಚನೆಗೂ ಮುನ್ನ ಮಂಡಿಸುತ್ತಿರುವ ಬಿಬಿಎಂಪಿಯ ಕೊನೆಯ ಬಜೆಟ್ ಮಂಡನೆ ಇದಾಗಿದ್ದು, ಬಜೆಟ್ ಗೆ ಬಿಬಿಎಂಪಿ ಆಡಳಿತಾಧಿಕಾರಿ ಉಮಾಶಂಕರ್‌ ಬಜೆಟ್‌ಗೆ ಅನುಮೋದನೆ ನೀಡಿದರು. ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌…

ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ

ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ by-ಕೆಂಧೂಳಿ ಬೆಂಗಳೂರು, ಮಾ,23-ವಿಧಾನಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮನ್ನು ಏಪ್ರಿಲ್ ಒಂದರಿಂದ ಬಿಡುಗಡೆ ಮಾಡುವಂತೆ ಉಪಸಭಾಪತಿಗೆ ಪತ್ರ ಬರೆದು ಕೋರಿದ್ದಾರೆ,ಇತ್ತೀಚಿನ ಕೆಲ ರಾಜಕೀಯ ಬೆಳವಣಿಗೆಗಳಿಂದ ಬೇಸೆತ್ತು ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಹೊರಟ್ಟಿ ,ಇಂದಿನ ರಾಜಕೀಯ ನೋಡಿದರೆ, ಸದನದಲ್ಲಿನ ಬೆಳವಣಿಗೆಗಳಿಂದ ಮನಸ್ಸಿಗೆ ತೀವ್ರ ನೋವು ಆಗುತ್ತಿದ್ದು ನನ್ನ ಸ್ಥಾನದಲ್ಲಿ ಮುಂದುವರಿಯುದರಲ್ಲಿ ಅರ್ಥವಿಲ್ಲ ಎಂದಿದ್ದಾರೆ. ಕಲಾಪಗಳಲ್ಲಿ ಸದನ ಸದಸ್ಯರ ಅಮಾನತು, ಸದಸ್ಯರು…

ರಾಜಕೀಯವಲಯದಲ್ಲಿ ಕುತೂಹಲ ಮೂಡಿಸಿದ ಸಿದ್ದು ಖರ್ಗೆ ಭೇಟಿ

 ರಾಜಕೀಯವಲಯದಲ್ಲಿ ಕುತೂಹಲ ಮೂಡಿಸಿದ ಸಿದ್ದು ಖರ್ಗೆ ಭೇಟಿ   by-ಕೆಂಧೂಳಿ ಬೆಂಗಳೂರು, ಮಾ,೨೩-ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣ ಹತ್ತಿ ಹುರಿಯುತ್ತಿರುವ ಹೊತ್ತಿನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದು ಹಲವಾರು ವ್ಯಾಖ್ಯಾನಗಳಿಗೆ ಎಡೆಮಾಡಿಕೊಟ್ಟಿದೆ. ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಲು ಕಾವೇರಿ ನಿವಾಸಕ್ಕೆ ತೆರಳಿದ್ದಾರೆ ಎನ್ನುವುದು ನೆಪ ಮಾತ್ರ ಆದರೆ ಈ ಭೇಟಿಯ ಉದ್ದೇಶವೇ ರಾಜಕೀಯ ಬೆಳವಣಿಗೆಗಳ ಚರ್ಚೆ ಅಡಗಿದೆ ಎನ್ನುವುದನ್ನು ತಳ್ಳಿಹಾಕುವಂತಿಲ್ಲ. ವಿಧಾನಸಭೆ ಅಧಿವೇಶನದಲ್ಲಿ ಹನಿಟ್ರ್ಯಾಪ್ ಪ್ರಕರಣ ಸದ್ದು ಮಾಡಿ…

ನೆಲ ಮತ್ತು ನೀರಿನತ್ತ ಬೆರಳು ಮಾಡುವ ಅಗಸ್ತ್ಯ ನಕ್ಷತ್ರ 

ನೆಲ ಮತ್ತು ನೀರಿನತ್ತ ಬೆರಳು ಮಾಡುವ ಅಗಸ್ತ್ಯ ನಕ್ಷತ್ರ     ಸೃಜನಶೀಲ ಬರಹಗಳು ಪ್ರಾದೇಶಿಕ ಅರೆ ಚರಿತ್ರೆಗಳ ಖಾಲಿತನವನ್ನು ತುಂಬಿಕೊಡುವ ಅಮೃತಧಾರೆಗಳಂತೆ.ಸರಳ ರೇಖೆಯಂತೆ ಚಲಿಸುವ ಸಾಂಪ್ರದಾಯಿಕ ಚರಿತ್ರೆಗೆ ಕೆಲವೊಮ್ಮೆ ಹಂಗಿನ ನೆರಳು ಕವಿದು ಅದು ಹೊಮ್ಮಿಸೋ ಬೆಳಕು ಏಕಮುಖಿಯಾಗುವ, ಅದು ಮುಲಾಜಿನ ಮಡಿಲಿಗೆ ಬೀಳುವ ಸತ್ಯ ಈಗಾಗಲೇ ಜಾಹೀರಾಗಿದೆ.ಅಂತಹ ಅರೆತನವನ್ನು, ಖಾಲಿತನವನ್ನು ಪ್ರಾದೇಶಿಕ ಸೃಜನಶೀಲ ಬರಹಗಳು ತುಂಬಿಕೊಡುತ್ತಿವೆ.    ಕನ್ನಡ ಕಥನ ಪರಂಪರೆಯಲ್ಲಿ ಪ್ರಾದೇಶಿಕ ಬರಹಗಳು ವಸ್ತು,ರಚನಾ ವಿಧಾನ ಹಾಗೂ ಭಾಷಾ ಪ್ರಯೋಗಗಳಿಂದ ಹೊಸ ಹೊಸ ಎಲ್ಲೆಗಳನ್ನು ಸಾಧಿವೆ. ಕೆಲವು…

ಕೊಯ್ಲಿ -ಪಾಂಡ್ಯೆ ಭರ್ಜರಿ ಆಟದಿಂದ ಐಪಿಎಲ್ ಮೊದಲ ಜಯಗಳಿಸಿದ ಆರ್‌ಸಿಬಿ

ಕೊಯ್ಲಿ -ಪಾಂಡ್ಯೆ ಭರ್ಜರಿ ಆಟದಿಂದ ಐಪಿಎಲ್ ಮೊದಲ ಜಯಗಳಿಸಿದ ಆರ್‌ಸಿಬಿ by-ಕೆಂಧೂಳಿ ಕೋಲ್ಕತಾ,ಮಾ,೨೩-ಐಪಿಎಲ್ ಮೊದಲ ಪಂದ್ಯದಲ್ಲೇ ಆ ಮೋಡಿ ಆಟ ನೆರದವರನ್ನೆಲ್ಲ ಹುಚ್ಚೆಬ್ಬಿಸಿ ಕುಣಿಯಲು ಕಾರಣವಾಯಿತು.ಹೌದು ವಿರಾಟ್ ಕೊಯ್ಲಿ ಮತ್ತು ಪಾಂಡ್ಯ ಉತ್ತಮ ಆಟದಿಂದ ಕೋಲ್ಕತ್ತಾನೈಟ್‌ರೈಡರ್ಸ್ ತಂಡವನ್ನು ಏಳು ವಿಕೆಟ್‌ಗಳ ಅಂತರಿಂದ ರಾಯಲ್ ಚಾಲೆಂರ್ಸ್ ತಂಡ ಮಣಿಸುವ ಮೂಲಕ ಮೊದಲ ಗೆಲುವಿನ ಹೆಜ್ಜೆ ಇಟ್ಟರು. ‘ಚೇಸಿಂಗ್ ಕಿಂಗ್’ ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್, ಆಲ್ ರೌಂಡರ್ ಕೃನಾಲ್ ಪಾಂಡ್ಯ(೩-೨೯) ನೇತೃತ್ವದ ಬೌಲರ್ ಗಳ ಶಿಸ್ತುಬದ್ಧ ಬೌಲಿಂಗ್ ದಾಳಿಯ…

ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರ- ಯು.ಟಿ.ಖಾದರ್

ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರ- ಯು.ಟಿ.ಖಾದರ್ by-ಕೆಂಧೂಳಿ ಬೆಂಗಳೂರು,ಮಾ,22- ಶಕ್ತಿಸೌಧವಿಧಾನಸೌಧಕ್ಕೆ ಇನ್ನು ಮುಂದೆ ಶಾಶ್ವತ ವಿದ್ಯುತ್‌ ದೀಪಾಲಂಕಾರ ಹಾಗೂ ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪೆಸಲಾಗುವುದು ಎಂದು ವಿಶಾನಭಾಧ್ಯಕ್ಷ ಯು.ಟಿ.ಖಾದರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಾಶ್ವತ ವಿದ್ಯುತ್‌ ದೀಪಾಲಂಕಾರ ಕಾಮಗಾರಿ ಆರಂಭಗೊಂಡಿದ್ದು ಬಹುತೇಕ ಪೂರ್ಣಗೊಂಡಿದೆ. ಏಪ್ರಿಲ್‌ ಮೊದಲ ವಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದರು. ದೀಪಾಲಂಕಾರಕ್ಕೆ 5 ಕೋಟಿ ರೂ.ವೆಚ್ಚ ಮಾಡಲಾಗುತ್ತಿದ್ದು, ಪ್ರತಿ ಶನಿವಾರ, ಭಾನುವಾರ ಸಂಜೆ 6.30ಕ್ಕೆ ದೀಪಾಲಂಕಾರ ಮಾಡಲಾಗುತ್ತದೆ. ರಾಷ್ಟ್ರೀಯ ಹಬ್ಬಗಳಾದ…

ಮರ್ಯಾದೆಗೇಡು ಹತ್ಯೆಗಳು ವಿಷಮಾನತೆ ಸಮಾಜದ ಮನಸ್ಥಿತಿಯ ಭಾಷೆ: ಕೆ.ವಿ.ಪ್ರಭಾಕರ್

ಮರ್ಯಾದೆಗೇಡು ಹತ್ಯೆಗಳು ವಿಷಮಾನತೆ ಸಮಾಜದ ಮನಸ್ಥಿತಿಯ ಭಾಷೆ: ಕೆ.ವಿ.ಪ್ರಭಾಕರ್ by- ಕೆಂಧೂಳಿ ಬೆಂಗಳೂರು ಮಾ22- ಹೆಣ್ಣಿನ ಬಗ್ಗೆ ಬಳಕೆ ಆಗುವ ಭಾಷೆ ಗಂಡಾಳಿಕೆಯ ಮನಸ್ಥಿತಿಯದ್ದೇ ಆಗಿದೆ. ಪ್ರೀತಿ ಮಾತಿನಿಂದ ತುಟಿ ಹೊಲಿಯುವ ಸಂಚು, ಮರ್ಯಾದೆಗೇಡು ಹತ್ಯೆಗಳಲ್ಲಿ ಕಾಣುವ ದ್ವೇಷ ಕೂಡ ಗಂಡಾಳಿಕೆಯ ಭಾಷೆಯೇ ಆಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್‌ ಅಭಿಪ್ರಾಯಪಟ್ಟರು. ಎಂಟನೇ ಅಖಿಲ ಕರ್ನಾಟಕ ಲೇಖಕಿಯರ ಸಮ್ಮೇಳನದಲ್ಲಿ, “ಭಾಷೆ: ಸಾಧ್ಯತೆ ಮತ್ತು ಸವಾಲುಗಳು” ಕುರಿತ ಗೋಷ್ಠಿಯಲ್ಲಿ ಆಶಯ ಮಾತುಗಳನ್ನು ಆಡಿದರು. ನಾನು ಸಾಹಿತಿ ಅಲ್ಲ.…

ಕರ್ನಾಟಕ ಬಂದ್ ಗೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ

ಕರ್ನಾಟಕ ಬಂದ್ ಗೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ by-ಕೆಂಧೂಳಿ ಬೆಂಗಳೂರು, ಮಾ,22- ಬೆಳಗಾವಿಯಲ್ಲಿ ಎಂಇಎಸ್ ವರ್ತನೆ ಖಂಡಿಸಿ ಕನ್ನಡ ಪರ ಸಂಘಟನೆಗಳು ನೀಡಿರುವ ಕರ್ನಾಟಕ ಬಂದ್ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಂದ್​ಗೆ ಕಾರಣವಾದ ಪ್ರಮುಖ ಕೇಂದ್ರ ಬೆಳಗಾವಿಯಲ್ಲೇ ಜನಜೀವನ ಸಹಜ ಸ್ಥಿತಿಯಲ್ಲಿ ಸಾಗುತ್ತಿದೆ. ಬೆಂಗಳೂರು ನಗರದ ಪ್ರಮುಖ ಪ್ರದೇಶಗಳಲ್ಲಿ ಬಸ್, ಆಟೋ ಓಡಾಟ ಎಂದಿನಂತೆಯೇ ಇದೆ. ಶನಿವಾರ ಆಗಿರುವುದರಿಂದ ಸಂಚಾರ ದಟ್ಟಣೆ ತುಸು ಕಡಿಮೆ ಇದೆ.…

ಹನಿಟ್ಯಾಪ್: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಸಿಎಂ ಸಿದ್ಧರಾಮಯ್ಯ

ಹನಿ ಟ್ರ್ಯಾಪ್ : ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಸಿಎಂ ಸಿದ್ದರಾಮಯ್ಯ by-ಕೆಂಧೂಳಿ ಬೆಂಗಳೂರು, ಮಾ, 21- ಹನಿ ಟ್ರ್ಯಾಪ್ ಗೆ ಸಂಬಂಧಿಸಿದಂತೆ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು . ವಿರೋಧ ಪಕ್ಷದ ನಾಯಕ ಆರ್.ಅಶೋಕ್ , ಆರಗ ಜ್ಞಾನೇಂದ್ರ , ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ ಎನ್ ರಾಜಣ್ಣ ಅವರು ಹನಿ ಟ್ರ್ಯಾಪ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದ್ದು ಈ ಬಗ್ಗೆ ಉತ್ತರಿಸಲು ಕೋರಿ ಇದಕ್ಕೆ ಕಾರಣರಾದವರನ್ನು…

ನಮ್ಮದು ಜನಪರ, ಸುಸ್ಥಿರ ಹಾಗೂ ಸಮಗ್ರ ಅಭಿವೃದ್ಧಿಯ ಬಜೆಟ್: ಮುಖ್ಯಮಂತ್ರಿ ಸಿದ್ದರಾಮಯ್ಯ

ನಮ್ಮದು ಜನಪರ, ಸುಸ್ಥಿರ ಹಾಗೂ ಸಮಗ್ರ ಅಭಿವೃದ್ಧಿಯ ಬಜೆಟ್: ಮುಖ್ಯಮಂತ್ರಿ ಸಿದ್ದರಾಮಯ್ಯ by-ಕೆಂಧೂಳಿ ಬೆಂಗಳೂರು, ಮಾ, 21-ನಮ್ಮದು ಜನಪರ, ಸುಸ್ಥಿರ ಹಾಗೂ ಸಮಗ್ರ ಅಭಿವೃದ್ಧಿಯ ಬಜೆಟ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು  ವಿಧಾನಪರಿಷತ್ ನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರಿಸುತ್ತಾ,2025-26 ರಲ್ಲಿ ನಮ್ಮ ಸರ್ಕಾರ ಮಂಡಿಸಿದ ಬಜೆಟ್ ಬಡವರ, ಮಹಿಳೆಯರ, ಮಕ್ಕಳ, ಶೋಷಿತರ, ದುರ್ಬಲ ವರ್ಗದವರ, ಯುವಜನರ, ಕಾರ್ಮಿಕರ, ರೈತರ, ಹಿಂದುಳಿದವರ, ಅಲ್ಪಸಂಖ್ಯಾತರ ಏಳಿಗೆ, ಹಿತರಕ್ಷಣೆಯನ್ನು ಗಮನದಲ್ಲಿ ಇಟ್ಟುಕೊಂಡು ತಯಾರಿಸಿದ್ದಾಗಿದೆ .ಜೊತೆಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಿ…

ಹನಿಟ್ರ್ಯಾಪ್ ಮಾಡುವವರು ನಿಮ್ಮ ಬಳಿ ಸುಮ್ಮನೆ ಬರುತ್ತಾರೆಯೇ? ರಾಜಣ್ಣಗೆ ಟಾಂಗ್ ಕೊಟ್ಟ ಡಿಕೆಶಿ

ಹನಿಟ್ರ್ಯಾಪ್ ಮಾಡುವವರು ನಿಮ್ಮ ಬಳಿ ಸುಮ್ಮನೆ ಬರುತ್ತಾರೆಯೇ? ರಾಜಣ್ಣಗೆ ಟಾಂಗ್ ಕೊಟ್ಟ ಡಿಕೆಶಿ by-ಕೆಂಧೂಳಿ ಬೆಂಗಳೂರು,ಮಾ,21-“ಹಿಟ್ ಅಂಡ್ ರನ್ ರೀತಿ ಹನಿಟ್ರ್ಯಾಪ್ ಪ್ರಕರಣವೂ ಆಗಿದೆ. ನಾನು ಈ ಬಗ್ಗೆ ಗುರುವಾರದಂದೇ ಪೊಲೀಸರಿಗೆ ದೂರು ನೀಡಲಿ ಎಂದು ಸಲಹೆ ನೀಡಿದ್ದೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ತಡ ಮಾಡಬಾರದು. ಇದರ ಬಗ್ಗೆ ಶೀಘ್ರ ತನಿಖೆಯಾಗಬೇಕು ಎಂದು ನಾನೂ ಒತ್ತಾಯ ಮಾಡುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು. ಬೆಂಗಳೂರಿನ ಸದಾಶಿವನಗರದ ನಿವಾಸ ಹಾಗೂ ಭಾಗಮಂಡಲದ ಹೆಲಿಪ್ಯಾಡ್ ಬಳಿ ಮಾಧ್ಯಮದವರ…

ನಾಳೆ ಕರ್ನಾಟಕ ಬಂದ್; ರಸ್ತೆಗಿಳಿಯುವ ಮುನ್ನ ಎಚ್ಚರಿಕೆ

ನಾಳೆ ಕರ್ನಾಟಕ ಬಂದ್; ರಸ್ತೆಗಿಳಿಯುವ ಮುನ್ನ ಎಚ್ಚರಿಕೆ by-ಕೆಂಧೂಳಿ ಬೆಂಗಳೂರು,ಮಾ,21-ಮಹಾರಾಷ್ಟ್ರೀಗರ ಕನ್ನಡ ವಿರೋಧಿ ನೀತಿ ಹಾಗೂ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ನಾಳೆ ಅಖಂಡ ಕರ್ನಾಟಕ ಬಂದ್​ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಅದರಂತೆ ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೂ ಬಂದ್ ನಡೆಯಲಿದೆ. ಈ ಬಂದ್ ಸಮಯದಲ್ಲಿ ಯಾವೆಲ್ಲ ಸಿಗುತ್ತೆ ,ಸಿಗೋದಿಲ್ಲ ಎನ್ನುವ ಮಾಹಿತಿ ನೀಡಲಾಗಿದೆ ದೈನಂದಿನಅವಶ್ಯಕ ,ವಸ್ತುಗಳಾದ ಹಾಲು, ದಿನಪತ್ರಿಕೆ,ಮೆಡಿಕಲ್,ವೈದ್ಯಕೀಯ ಸೇವೆ ನಾಳೆಯೂ ಇರಲಿದೆ, ಆ್ಯಂಬುಲೆನ್ಸ್ ,…

ವಿ.ವಿ ನೇಮಕಾತಿ ಸಂಬಂಧ ಅಶ್ವತ್ಥನಾರಾಯಣ-ಪ್ರಿಯಾಂಕ್ ವಾಕ್ಸಮರ

ವಿ.ವಿ ನೇಮಕಾತಿ ಸಂಬಂಧ ಅಶ್ವತ್ಥನಾರಾಯಣ-ಪ್ರಿಯಾಂಕ್ ವಾಕ್ಸಮರ by-ಕೆಂಧೂಳಿ ಬೆಂಗಳೂರು,ಮಾ,೧೦-ವಿಶ್ವವಿದ್ಯಾಲಯಗಳ ನೇಮಕಾತಿಗೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆ ಮತ್ತು ಮಾಜಿ ಸಚಿವ ಮತ್ತು ಹಾಲಿ ಬಿಜೆಪಿ ಶಾಸಕ ಡಾ,ಸಿ.ಎನ್.ಅಶ್ವತ್ಥ್‌ನಾರಾಯಣ ನಡುವೆ ವಾಕ್ಸಮರ ನಡೆಯಿತು. ಈ ಹಿಂದೆ ಮಾಜಿ ಸಂಸದ ಬಿಜೆಪಿಯ ಪ್ರತಾಪ್ ಸಿಂಹ ವಿಶ್ವವಿದ್ಯಾಲಯಗಳಲ್ಲಿನ ನೇಮಕಾತಿಗಳಿಗೆ ಹಣ ಕೊಡಬೇಕಾಗಿದೆ ಎನ್ನುವ ಹೇಳಿಕೆಗೆ ಸಂಬಂಧಿಸಿದಂತೆ ಪ್ರಸ್ತಾಪ ಮಾಡುತ್ತಿದ್ದ ಬಿಜೆಪಿಯ ಅಶ್ವತ್ಥ್ ನಾರಾಯಣ ‘ನಿಮ್ಮ ಕುಟುಂಬದ ಭ್ರಷ್ಟಾಚಾರ ಇಡೀ ದೇಶಕ್ಕೆ ಗೊತ್ತಿದೆ. ಬರೀ ಅಪ್ಪ-ಮಕ್ಕಳ ಪಕ್ಷವಾಗಿದೆ’ ಎಂದು ಕಿಡಿಕಾರಿದರು. ಆಗ ಸಿಡಿಮಿಡಿಗೊಂಡ…

ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ:  ಲಕ್ಷ್ಮೀ ಹೆಬ್ಬಾಳಕರ್

ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ:  ಲಕ್ಷ್ಮೀ ಹೆಬ್ಬಾಳಕರ್ by-ಕೆಂಧೂಳಿ ಬೆಂಗಳೂರು,ಮಾ,19- ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಬದ್ದವಾಗಿದೆ‌‌. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಗೌರವಧನ ಹೆಚ್ಚಳ ಹಾಗೂ ನಿವೃತ್ತಿಯಾದ ಎಲ್ಲರಿಗೂ ಗ್ರಾಚ್ಯುಟಿ ಸೌಲಭ್ಯ ಜಾರಿಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳು ನಡೆಸಿದ…

ಉಡುಪಿ ಘಟನೆ: ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಉಡುಪಿ ಘಟನೆ: ಕಠಿಣ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ by-ಕೆಂಧೂಳಿ ಬೆಂಗಳೂರು,ಮಾ,19-ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ‌ ಮೀನು ಕಳ್ಳತನ ಮಾಡಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿದ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅಪರಾಧಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ. ಒಬ್ಬ ಮಹಿಳೆಯನ್ನು ಈ ರೀತಿ ಕೈಕಾಲು ಕಟ್ಟಿ ಹಲ್ಲೆ ಮಾಡುವುದು ಅಮಾನವೀಯ ಘಟನೆ. ಮಾಹಿತಿ ಬಂದ ತಕ್ಷಣ ಅಧಿಕಾರಿಗಳ ಜೊತೆ ಮಾತನಾಡಿ ಕಠಿಣ ಕ್ರಮಕ್ಕೆ ಸೂಚಿಸಿದ್ದೇನೆ. ಈಗಾಗಲೇ ಮೂವರನ್ನು ಬಂಧಿಸಲಾಗಿದೆ.…

ಉತ್ಪಾದನಾ ತಾಣವಾಗಿ ರಾಜ್ಯ: ಏಪ್ರಿಲ್‌ನಲ್ಲಿ ಉದ್ಯಮ ಮಂಥನ

ಉತ್ಪಾದನಾ ತಾಣವಾಗಿ ರಾಜ್ಯ: ಏಪ್ರಿಲ್‌ನಲ್ಲಿ ಉದ್ಯಮ ಮಂಥನ by-ಕೆಂಧೂಳಿ ಬೆಂಗಳೂರು,ಮಾ,19-ರಾಜ್ಯವನ್ನು ಜಾಗತಿಕ ಮಟ್ಟದ ಉತ್ಪಾದನಾ ಕೇಂದ್ರವನ್ನಾಗಿ ರೂಪಿಸುವ ಉದ್ದೇಶದಿಂದ ಏಪ್ರಿಲ್‌ ಕೊನೆ ವಾರದಲ್ಲಿ ಎರಡು ದಿನಗಳ ʻಉದ್ಯಮ ಮಂಥನʼ ಕಾರ್ಯಕ್ರಮ ನಡೆಸಲಾಗುವುದು. ಇದರಲ್ಲಿ ಉತ್ಪಾದನಾ ವಲಯದಲ್ಲಿ ಮುಂಚೂಣಿಯಲ್ಲಿರುವ ಉದ್ದಿಮೆಗಳ ಮುಖ್ಯಸ್ಥರನ್ನು ಕರೆದು, ವಿಸ್ತೃತ ಚರ್ಚೆ ನಡೆಸಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ತಿಳಿಸಿದ್ದಾರೆ. ವಿಧಾನಸೌದದ ತಮ್ಮ ಕಚೇರಿಯಲ್ಲಿ ಈ ಕುರಿತು ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಪ್ರಾಥಮಿಕ…

1 2 3 98
Girl in a jacket