Girl in a jacket

Author kendhooli_editor

ಮಿಲಿಟರಿ ಹೆಸರಿನ ನಕಲಿ ಮದ್ಯದ ಕಡಿವಾಣಕ್ಕೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಸೂಚನೆ

ಬೆಂಗಳೂರು,ಜೂ,11-ಅಪಾಯಕಾರಿ ಸಿಎಚ್ ಪೌಡರ್‌ ಮಿಕ್ಸಿಂಗ್ ಬಗ್ಗೆ ಎಚ್ಚರವಹಿಸಿ, ಯಾವುದೇ ಕಾರಣಕ್ಕೂ ಸೇಂದಿ ಮಾರಾಟವಾಗದಂತೆ ಕಟ್ಟುನಿಟ್ಟಾಗಿ ಕ್ರಮಕೈಗೊಳ್ಳುವಂತೆ ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಸೂಚನೆ ನೀಡಿದ್ದಾರೆ. ಇಂದು ವಿಧಾನಸೌಧದ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ತಿಮ್ಮಾಪೂರ ಅವರು, ರಾಯಚೂರು ಸೇರಿದಂತೆ ಆಂಧ್ರ, ತೆಲಂಗಾಣ ಗಡಿಯಲ್ಲಿ ನಿಷೇಧಿತ ಸಿಹೆಚ್ ಪೌಡರ್ ಮಿಕ್ಸಿಂಗ್‌ನಿಂದ ಸೇಂದಿ ತಯಾರಿಸುವವರ ಮೇಲೆ ಹದ್ದಿನ ಕಣ್ಣಿಡಬೇಕು. ಸಿಹೆಚ್ ಪೌಡರ್ ಮಿಕ್ಸಿಂಗ್‌ಗೆ ಅವಕಾಶ ಸಿಗದಂತೆ ಎಚ್ಚರವಹಿಸಬೇಕು.…

ಕೀರ್ತನಾ ವೈದ್ಯಕೀಯ ನೆರವಿಗೆ ಮೋಹನ್ ದಾಸ್ ಪೈ, ರವಿ ಪೈ ಗೆ ಜಮೀರ್ ಅಹಮದ್ ಮನವಿ

ಬೆಂಗಳೂರು,ಜೂ,11-ಅನುವಂಶೀಯ ಅಸ್ವಸ್ಥತೆ ಕಾಯಿಲೆಯಿಂದ ಬಳಲುತ್ತಿರುವ ಮೈಸೂರಿನ ನಾಗಶ್ರೀ – ಕಿಶೋರ್ ದಂಪತಿಯ ಎರಡು ವರ್ಷದ ಮಗು ಕೀರ್ತನಾ ಗೆ ಸಿ ಎಸ್ ಆರ್ ನಿಧಿಯಡಿ ವೈದ್ಯಕೀಯ ಚಿಕಿತ್ಸೆಗೆ ನೆರವು ನೀಡುವಂತೆ ಸಚಿವ ಜಮೀರ್ ಅಹಮದ್ ಖಾನ್ ಅವರು, ಮಣಿಪಾಲ್ ಗ್ಲೋಬಲ್ ಎಜುಕೇಶನ್ ಸರ್ವಿಸಸ್ ಮುಖ್ಯಸ್ಥ ಮೋಹನ್ ದಾಸ್ ಪೈ ಹಾಗೂ ಸೆಂಚುರಿ ಬಿಲ್ಡರ್ಸ್ ನ ರವಿ ಪೈ ಅವರಿಗೆ ಮನವಿ ಸಲ್ಲಿಸಿದರು. ಕೀರ್ತನಾ ವೈದ್ಯಕೀಯ ಚಿಕಿತ್ಸೆಗೆ 16 ಕೋಟಿ ರೂ. ವೆಚ್ಚ ಆಗಲಿದ್ದು ಜಮೀರ್ ಅಹಮದ್ ಖಾನ್…

ಅಧ್ಯಕ್ಷರನ್ನು ಬದಲಿಸಲ್ಲ, ಸಂಪುಟ ವಿಸ್ತರಣೆ ಮಾಡಲ್ಲ: ಖರ್ಗೆ

ಕಲಬುರಗಿ,ಜೂ,11- ರಾಜ್ಯದಲ್ಲಿ ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಎಐಸಿಸಿ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ, ಕಲಬುರಗಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವಾಗ ಎಲ್ಲರಿಗೂ ತಿಳಿಸುತ್ತೇವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆಶಿ ನವದೆಹಲಿಯಲ್ಲಿ ತಮ್ಮನ್ನು ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾದಾಗ, ಕರ್ನಾಟಕದಲ್ಲಿನ ಸಚಿವ ಸಂಪುಟ ಪುನಾರಚನೆ…

ವಾಲ್ಮೀಕಿ ನಿಗಮದ ಹಗರಣದ ಹಿಂದೆ ಯಾವ ಮಹಾನಾಯಕ ಇದ್ದಾರೆ?- ಶ್ರೀರಾಮುಲು

ಬೆಂಗಳೂರು,ಜೂ,11-ಪರಿಶಿಷ್ಟ ಜಾತಿ ಮತ್ತು ಪಂಗಡ ಜನಾಂಗದ ಮಕ್ಕಳ ಹಣವನ್ನು ರಾಜಕಾರಣಕ್ಕೆ ಬಳಸಿಕೊಂಡವರಿಗೆ ಮುಂದಿನ ದಿನಗಳಲ್ಲಿ ಜನರೇ ತಕ್ಕ ಪಾಠವನ್ನು ಕಲಿಸುತ್ತಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅದೇ ಹಣದಲ್ಲಿ ಇವತ್ತು ಸಂಸದರು ಮತ್ತು ವಿಧಾನಸಭಾ ಸದಸ್ಯರಾಗಿರಬಹುದು. ಆದರೆ ಈ ನಾಡಿನ ಜನ ಎಲ್ಲವನ್ನು ನೋಡುತ್ತಿದ್ದಾರೆ. ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ತಿಳಿಸಿದರು. ಬಳ್ಳಾರಿ ಜಿಲ್ಲೆಯಲ್ಲಿ ಸಂಸದ…

ಡಾರ್ಲಿಂಗ್ ಕೃಷ್ಣ ನಟನೆಯ ‘ಫಾದರ್’ ಸದ್ಯದಲ್ಲೇ ತರೆಗೆ

ಆರ್.ಸಿ.ಸ್ಟುಡಿಯೋಸ್ ನಿರ್ಮಾಣದ “ಫಾದರ್” ಚಿತ್ರ ಇದೀಗ ಪ್ರೇಕ್ಷಕರ ಮುಂದೆ ಬರಲು ತಯಾರಿ ನಡೆಸುತ್ತಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ಸ್ ತಯಾರಿಯಲ್ಲಿರುವ ಸಿನಿಮಾ ತೆರೆಗೆ ಬರಲು ಸಜ್ಜಾಗುತ್ತಿದೆ. ಜೂನ್ 12 “ಫಾದರ್” ಚಿತ್ರದ ನಾಯಕ ಡಾರ್ಲಿಂಗ್ ಕೃಷ್ಣ ಅವರ ಹುಟ್ಟುಹಬ್ಬ. ನಾಯಕನ ಹುಟ್ಟುಹಬ್ಬಕ್ಕೆ ವಿಭಿನ್ನ ಹಾಗೂ ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಆರ್ ಸಿ ಸ್ಟುಡಿಯೋಸ್ ಹಾಗೂ ಚಿತ್ರತಂಡ ಡಾರ್ಲಿಂಗ್ ಕೃಷ್ಣ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಆರ್.ಸಿ. ಸ್ಟುಡಿಯೋಸ್ ಮೂಲಕ ಹೊರಬರುತ್ತಿರುವ ಈ “ಫಾದರ್” ಚಿತ್ರವು ನೋಡುಗರಿಗೊಂದು…

ಮುಂದಿನ 3 ವರ್ಷದಲ್ಲಿ 60 ಸಾವಿರ ಮೆವ್ಯಾ ವಿದ್ಯುತ್ ಉತ್ಪಾದಿನೆ: ಸಿ.ಎಂ ಭರವಸೆ

ದೊಡ್ಡಬಳ್ಳಾಪುರ ಜೂ 11-ನಮ್ಮ ಸರ್ಕಾರ ಪ್ರತೀ ವರ್ಷ 19000 ಕೋಟಿ ರೂಪಾಯಿ ಪಂಪ್ ಸೆಟ್ ಸಬ್ಸಿಡಿ ಹಣ ನೀಡುತ್ತಿದ್ದೇವೆ. ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಈ ಯೋಜನೆ ಆರಂಭಿಸಲೇ ಇಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬಂದು ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಇಂಧನ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಮತ್ತು ಜಿಲ್ಲಾಡಳಿತ ಹಾಗೂ ಡಾ.ಎಚ್.ನರಸಿಂಹಯ್ಯ ಸಾಂಸ್ಕೃತಿಕ ಕೇಂದ್ರ, ಪ್ರವಾಸೋದ್ಯಮ ಅಭಿವೃದ್ಧಿ ಪ್ರಾಧಿಕಾರಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಕುಸುಮ್ ಸೌರೀಕರಣ ಯೋಜನೆಗೆ ಚಾಲನೆಗೆ…

ಬಂಡವಾಳ ಹೂಡಿಕೆಗೆ ಬಾಂಗ್ಲಾ ಉದ್ಯಮಿಗಳಿಗೆ ಅಗತ್ಯ ಸಹಕಾರ-ಶಿವಾನಂದ ಪಾಟೀಲ ಭರವಸೆ

ಬೆಂಗಳೂರು,ಜೂ,11-: ಬಾಂಗ್ಲಾ ದೇಶದ ಜವಳಿ ಉದ್ಯಮಿಗಳು ಕರ್ನಾಟದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ವಹಿಸಿದ್ದು ಬುಧವಾರ ಪೆಂಟಗಾನ್ ನಿಟ್ ಕಾಂನ ಬಿಪಿನ್ ಮುಂದ್ರಾ ಅವರು ಜವಳಿ ಸಚಿವರನ್ನು ಭೇಟಿ ಮಾಡಿ ಚರ್ಚಿಸಿದರು. ಪೆಂಟಗಾನ್ ನಿಟ್ ಕಾಂನ ಮಾಹಿತಿ ಪಡೆದ ಸಚಿವರು, ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಮುಂದೆ ಬಂದರೆ ರಾಜ್ಯ ಸರ್ಕಾರ ಅಗತ್ಯ ಸಹಕಾರ ನೀಡಲಿದೆ. ಗೌರಿಬಿದನೂರು, ಚಿಕ್ಕಬಳ್ಳಾಪುರ, ಶಿಗ್ಗಾವಿಯಲ್ಲಿ ಯೂನಿಟ್ ಆರಂಭಿಸಬಹುದು ಎಂದು ಸಲಹೆ ನೀಡಿದರು. ಈ ಮೂರೂ ಕಡೆ ಅಗತ್ಯ ಮೂಲ ಸೌಕರ್ಯಗಳಿವೆ. ಶಿಗ್ಗಾವಿಗೆ ವಿಮಾನ ಸಂಪರ್ಕ…

ಆರ್ ಸಿ.ಬಿ‌ ಸಂಭ್ರಮಾಚರಣೆ ದುರಂತ ಮರೆಮಾಚಲು ಮರು ಜಾತಿ ಸಮೀಕ್ಷೆ ನಾಟಕ- ಅಶೋಕ್ ಆರೋಪ

ಬೆಂಗಳೂರು, ಜೂ,11-ಆರ್ ಸಿ ಬಿ ಸಂಭ್ರಮಾಚರಣೆ ವೇಳೆ ನಡೆದ ಘಟನೆಯನ್ನು ಮರೆ ಮಾಚಲು ಜಾತಿ ಗಣತಿ ಮರು ಸಮೀಕ್ಷೆ ಮಾಡಲು ಸರ್ಕಾರ ಮುಂದಾಗಿದೆ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ನಿಮಗೆ ನಿಜಕ್ಕೂ ಬದ್ಧತೆ ಮತ್ತು ಪ್ರಾಮಾಣಿಕತೆ ಇದ್ದರೆ, ಸಮೀಕ್ಷೆ ಹೇಗಿರಬೇಕು ಎಂಬ ಬಗ್ಗೆ ಮೊದಲು ಸಾರ್ವಜನಿಕ ಚರ್ಚೆ ನಡೆಸಿ. ಹಾಗೆಯೇ, ಸರ್ವಪಕ್ಷಗಳ ಸಭೆ ಕರೆದು ಚರ್ಚಿಸಿ, ಎಲ್ಲರ ಅಭಿಪ್ರಾಯಗಳನ್ನು ಆಲಿಸಿ. ಸಮಗ್ರವಾಗಿ ಎಲ್ಲ ಸಿದ್ಧತೆಗಳನ್ನು ಮುಗಿಸಿ, ಈ ಶೈಕ್ಷಣಿಕ ವರ್ಷ ಮುಗಿದ ಬಳಿಕವಷ್ಟೇ ಶಿಕ್ಷಕರನ್ನು ಬಳಸಿಕೊಂಡು…

ಬಳ್ಳಾರಿ ಜಿಲ್ಲಾ ಕೈ ಶಾಸಕರು,ಸಂಸದರ ನಿವಾಸದ ಮೇಲೆ ಇಡಿ ಅಧಿಕಾರಿಗಳ ದಾಳಿ

ಬೆಂಗಳೂರು,ಜೂ,11-ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಿಕೆ ಮಾಡಿಕೊಂಡು ಲೋಕಸಭಾ ಚುನಾಣೆಗೆ ಹಣ ಬಳಸಿಕೊಳ್ಳಲಾಗಿದೆ ಎನ್ನುವ ಆರೋಪದ ಮೇಲೆ ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಶಾಸಕರು ಮತ್ತು ಸಂಸದರ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡರಸಿದ್ದಾರೆ. ಇಂದು ಬೆಳ್ಳಂಬೆಳಿಗ್ಗೆ ಬಳ್ಳಾರಿ ಜಿಲ್ಲೆಯ ಮೂರು ಕಡೆ ಹದಿನೈದು ಅಧಿಕಾರಿಗಳು ದಾಳಿ ನಡೆಸುತ್ತಿದ್ದು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬಳ್ಳಾರಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳಾದ ಈ.ತುಕರಾಂ,ಗಣೇಶ್,ನಾರಾ ಭರತ್ ರೆಡ್ಡಿ ಹಾಗೂ ಮಾಜಿ ಸಚಿವ ನಾಗೇಂದ್ರ ಅವರ ಪಿಎ ಗೋವರ್ಧನ ಮನೆ ಮೇಲೆ ದಾಳಿ…

ಕಾಲ್ತುಳಿತ ದುರ್ಘಟನೆ- 13ರಂದು ಸರಕಾರದ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ:l

ಶಿವಮೊಗ್ಗ,ಜೂ,10- ಜನವಿರೋಧಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ  ಪ್ರಕಟಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನವಿರೋಧಿ ಕಾಂಗ್ರೆಸ್ ಸರಕಾರ ಕಿತ್ತೊಗೆಯುವ ವರೆಗೂ ಹೋರಾಟ ಮುಂದುವರೆಸಲು ನಿರ್ಧರಿಸಿದ್ದೇವೆ. ಜೂನ್ 13ರಂದು ಬೆಂಗಳೂರು ಮಹಾನಗರದ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಇದೆ. ಬಿಜೆಪಿ ಕಾರ್ಯಕರ್ತರು, ಘಟನೆಯಲ್ಲಿ ನೊಂದ ಕುಟುಂಬಗಳ ಸದಸ್ಯರು, ನೊಂದವರು ಬರಲಿದ್ದಾರೆ. ಸುಮಾರು 15- 20 ಸಾವಿರ ಸಂಖ್ಯೆಯಲ್ಲಿ ಪ್ರತಿಭಟನಾಕಾರರು…

ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ: ಸಮೀಕ್ಷೆ ಮರುಗಣತಿಗೆ ನಿರ್ಧಾರ- ಸಿ.ಎಂ‌ ಸಿದ್ದರಾಮಯ್ಯ

ನವದೆಹಲಿ, ಜೂ,10-ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿರುವ ಹಿನ್ನಲೆಯಲ್ಲಿ, ಈಗಾಗಲೇ ಸಲ್ಲಿಕೆಯಾಗಿರುವ ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ ನೀಡಿ, ಸಮೀಕ್ಷೆಗೆ ಮರುಗಣತಿ ನಡೆಸಲು ನಿರ್ಧಾರ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಕರ್ನಾಟದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗಿದೆ. ವಿವಿಧ ಜಾತಿಗಳ ಸಂಘಸಂಸ್ಥೆಗಳು, ಮಠಾಧೀಶರು, ಸಮುದಾಯದಗಳ ಮುಖಂಡರು, ಸಚಿವರು ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚಿಸಲಾಗಿ, ಜಾತಿಗಣತಿ ವರದಿಯನ್ನು ತಾತ್ವಿಕವಾಗಿ ಒಪ್ಪಿಕೊಳ್ಳುವುದು…

ವಿಧಾನಸೌಧ ಮೆಟ್ಟಿಲ ಮೇಲಿನ ಆರ್ಸಿಬಿ ಸಂಭ್ರಮಾಚರಣೆಗೆ ರಾಜ್ಯಪಾರನ್ನು ಅಹ್ವಾನಿಸಿದ್ದು ಡಿಕೆಶಿಗೆ ಗೊತ್ತಿಲ್ವಂತೆ

ನವದೆಹಲಿ, ಜೂ,09-ಆರ್ ಸಿಬಿ ಗೆಲುವಿನ ಹಿನ್ನೆಲೆಯಲ್ಲಿ ಸರ್ಕಾರದ ವತಿಯಿಂದ ವಿಧಾನಸೌದದ ಮೆಟ್ಟಿಲಗಳ ಮೇಲೆ ಏರ್ಪಡಿಸಿದ್ದ ಸಂಭ್ರಮಾಚರಣೆಗೆ ರಾಜ್ಯಪಾರನ್ನು ಯಾರು ಅಹ್ವಾನಿಸಿದ್ದರು ಎನ್ನುವಿದು ಗೊತ್ತಿಲ್ಲ ಎಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಜನ ಸಾವನ್ನಪ್ಪಿದ ಬೆನ್ನಲ್ಲೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಆರ್ ಸಿಬಿ ಆಟಗಾರರಿಗೆ ಸನ್ಮಾನ ಕಾರ್ಯಕ್ರಮದ ಬಗ್ಗೆ ಭಾರಿ ವಿವಾದ ಉಂಟಾಗಿದ್ದು ಸರ್ಕಾರದ ನಡೆಗೆ ವಿಪಕ್ಷಗಳು ಸೇರಿ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಆದರೆ ಇದೇ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್…

ಆರ್ ಸಿಬಿ ಸಂಭ್ರಮಾಚರಣೆ ದುರಂತದ ಹೊಣೆ ಸಿಎಂ, ಡಿಸಿಎಂ, ಗೃಹ ಸಚಿವರು ಹೊರಲು ಎಚ್ ಡಿಕೆ ಆಗ್ರಹ

ಬೆಂಗಳೂರು,ಜೂ,07- ಫೈನಲ್ ಪಂದ್ಯ ಆರಂಭವಾಗುವುದಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿ ಕಡೆಯವರು ವಿಜಯೋತ್ಸವ ಮಾಡುತ್ತೇವೆ ಎಂದು ನಗರ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಗೆಲ್ಲುತ್ತೇವೆ ಎಂದು ಆರ್ ಸಿಬಿ ತಂಡಕ್ಕೆ ಕನಸು ಬಿದ್ದಿತ್ತಾ ಎಂದು ಪ್ರಶ್ನಿಸಿದ್ದಾರೆ. ಕಾಲ್ತುಳಿತ ಪ್ರಕರಣದ ಹಿನ್ನೆಲೆಯಲ್ಲಿ ಮಾಧ್ಯಮಗಳ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಅಹಮದಾಬಾದ್ ನಲ್ಲಿ ಫೈನಲ್ಸ್ ಪಂದ್ಯ ಆರಂಭವಾಗಿದ್ದು ಏಳೂವರೆ ಗಂಟೆಗೆ. ಇಲ್ಲಿ ನೋಡಿದರೆ ಆರು ಗಂಟೆಗೆಲ್ಲ ವಿಜಯೋತ್ಸವ…

ಕಾವೇರಿ ಆರತಿಗೆ 100 ಕೋಟಿ ಖರ್ಚು; ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ,ಜೂ,07-: ಕಾವೇರಿ ಆರತಿಗೆ ₹100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧವಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು. ಮಂಡ್ಯದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಕಾವೇರಿ ಆರತಿಗೆ 100 ಕೋಟಿ ಯಾಕೆ ಬೇಕು? ನಮ್ಮ ಪುಟ್ಟರಾಜು ಕೆರೆತಣ್ಣೂರಿನಲ್ಲಿ ಮಾಡಿದಾಗ ಇಂಥ ಕಾರ್ಯಕ್ರಮ ಮಾಡಿದಾಗ ಎಷ್ಟು ಖರ್ಚು ಆಯಿತು ಎಂದು ಕೇಳಿ. ಇಷ್ಟೊಂದು ಬೃಹತ್ ಮೊತ್ತ ವೆಚ್ಚ ಮಾಡುವುದು ಏತಕ್ಕೆ? ₹100 ಕೋಟಿ ಖರ್ಚು ಮಾಡುವುದಕ್ಕೆ ನನ್ನ ವಿರೋಧ ಇದೆ ಎಂದರು. *ಕಾಲ್ತುಳಿತ;…

ಕುಮಾರಸ್ವಾಮಿ ಆರೋಗ್ಯ ಸುಧಾರಣೆ ಆಗುವುದಾದರೆ ನನ್ನನ್ನು ಟೀಕಿಸಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ. 07-ನನ್ನ ಮೇಲೆ   ಅಸೂಯೆಪಡುವುದರಿಂದ, ನನ್ನನ್ನು ಟೀಕೆ ಮಾಡುವುದರಿಂದ, ನನ್ನನ್ನು ಬಯ್ಯುವುದರಿಂದ ಕುಮಾರಸ್ವಾಮಿ ಅವರಿಗೆ ಖುಷಿಯಾಗಿ, ಅವರ ಆರೋಗ್ಯ ಸುಧಾರಣೆ ಆಗುವುದಾದರೆ ಅವರು ನನ್ನ ನಿಂದನೆ ಮುಂದುವರೆಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು.ನಾನು ಕುಮಾರಸ್ವಾಮಿ ಅವರನ್ನು ಗಮನಿಸುತ್ತಿದ್ದೇನೆ. ಅವರು ತಮ್ಮ ಖುಷಿಗೆ ಮಾತಾಡುತ್ತಿದ್ದಾರೆ. ಅವರು ಏನಾದರೂ ಮಾತನಾಡಲಿ. ಇದರಿಂದ ಅವರಿಗೆ ಖುಷಿಯಾಗಿ ಆರೋಗ್ಯ ಸುಧಾರಣೆ ಆಗುವುದಾದರೆ ಆಗಲಿ. ಅವರ ಆರೋಗ್ಯ…

ಸಿಎಂ, ಡಿಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಬೆಂಗಳೂರು,ಜೂ,06- ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತಕ್ಕೆ ಸರಕಾರವೇ ನೇರ ಹೊಣೆ. ಕಾಂಗ್ರೆಸ್ ಹೈಕಮಾಂಡ್ ಗೆ ಮಾನ ಮರ್ಯಾದೆ, ಕನ್ನಡಿಗರ ಮೇಲೆ ಕಿಂಚಿತ್ತಾದರೂ ಗೌರವ ಇದ್ದರೆ ತಕ್ಷಣವೇ ಈ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಯನ್ನು ಕಿತ್ತೆಸೆಯಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಶುಕ್ರವಾರ ಎನ್ಡಿಎ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಪ್ರತಿಪಕ್ಷ ನಾಯಕ ಆರ್. ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರೊಂದಿಗೆ ಮಾಧ್ಯಮಗಳ ಜತೆ…

ಸಿ.ಎಂ, ಡಿ.ಸಿ.ಎಂ, ಗೃಹ ಸಚಿವರ ರಾಜೀನಾಮೆಗೆ ವಿಜಯೇಂದ್ರ ಆಗ್ರಹ

ಬೆಂಗಳೂರು,ಜೂ,06-ಆರ್‍ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ನಡೆದ ಕಾಲ್ತುಳಿತ, 11 ಸಾವಿನ ಸಂಬಂಧ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಫ್‍ಐಆರ್‍ನಲ್ಲಿ ಕೆಎಸ್‍ಸಿಎ, ಆರ್.ಸಿ.ಬಿ, ಮತ್ತು ಏಜೆನ್ಸಿಯಾದ ಡಿ.ಎನ್.ಎಯನ್ನು ಆರೋಪಿಗಳಾಗಿ ಹೆಸರಿಸಿದ್ದಾರೆ. ಸ್ವತಃ ಮುಖ್ಯಮಂತ್ರಗಳೇ ಆರೋಪಿ ನಂಬರ್ 1, ಉಪ ಮುಖ್ಯಮಂತ್ರಿಗಳು ಆರೋಪಿ ನಂಬರ್ 2, ಮಾನ್ಯ ಗೃಹ ಸಚಿವ ಪರಮೇಶ್ವರ್ ಅವರು…

ಪ್ಲಾಸ್ಟಿಕ್ ಬಳಕೆ ನಿಷೇಧದಿಂದ ಪರಿಸರ ಸಂರಕ್ಷಣೆ ಸಾಧ್ಯ-ತ್ಯಾಗರಾಜ್

ಚಿತ್ರದುರ್ಗ ಜೂ.6- ಪರಿಸರವನ್ನು ಸಂಪೂರ್ಣ ಹಾಳು ಮಾಡುತ್ತಿರುವ ಪ್ಲಾಸ್ಟಿಕ್ ನಿಷೇಧ ಮಾಡಿದರೆ ಉತ್ತಮ ಪರಿಸರ ಸಂರಕ್ಷಣೆ ಸಾದ್ಯವೆಂದು ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ತ್ಯಾಗರಾಜ್ ಹೇಳಿದರು. ಧಮ್ಮ ಕೇಂದ್ರದಲ್ಲಿ ವಿಮುಕ್ತಿ ವಿದ್ಯಾ ಸಂಸ್ಥೆ,ಶಾಂತಿ ಮತ್ತು ಸೌಹಾರ್ದ ವೇದಿಕೆ ಇವರವತಿಯಿಂದ ಹಮ್ಮಿಕೊಳ್ಳಲಾಗಿದ್ದ,ವಿಶ್ವ ಪರಿಸರ ದಿನಾಚರಣೆ ಸಮಾರಂಭದಲ್ಲಿ ಸಸಿ ನೆಟ್ಟು ನಂತರ ಮಾತನಾಡಿದರು ಪರಿಸರ,ಶಬ್ದ,ವಾಯು ಮಾಲಿನ್ಯಗಳು ಜನತೆಯನ್ನು ಕಷ್ಟಕ್ಕೆ ಸಿಲುಕಿಸಿದ್ದು,ಪರಿಸರ ಸಂರಕ್ಷಣೆ ಆಗಬೇಕಾದರೆ ಪ್ಲಾಸ್ಟಿಕ್ ನ್ನು ನಿಷೇಧಿಸುವ ಮೂಲಕ ಪರಿಸರವನ್ನು ಕಾಪಾಡಿಕೊಳ್ಳುವುದು ಸೂಕ್ತವಾದದ್ದು ಎಂದು ಹೇಳಿದ ಅವರು.ಪರಿಸರ ರಕ್ಷಣೆ ಕಾರ್ಯ…

ಬೆಂಗಳೂರು ನಗರ ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ನೇಮಕ

ಬೆಂಗಳೂರು ,ಜೂ,06-ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಅವರನ್ನು ಸಿಎಂ ಸಿದ್ದರಾಮಯ್ಯ ಸಸ್ಪೆಂಡ್‌ ಮಾಡಿದ್ದು ಆ ಸ್ಥಾನಕ್ಕೆ ರಾತ್ರೋರಾತ್ರಿಯೇ ಬೆಂಗಳೂರಿಗೆ ನೂತನ ಪೊಲೀಸ್‌ ಕಮೀಷನರ್‌ ನೇಮಕವೂ ಮಾಡಲಾಗಿದೆ. ಹಿರಿಯ ಪೊಲೀಸ್‌ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಅವರನ್ನು ಬೆಂಗಳೂರು ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ. ಕರ್ನಾಟಕ ಸರ್ಕಾರವು ಬಿ.ದಯಾನಂದ ಅವರ ಸ್ಥಾನಕ್ಕೆ 1996ರ ಬ್ಯಾಚ್‌ನ ಐಪಿಎಸ್ ಅಧಿಕಾರಿ, ಬಿಹಾರ ಮೂಲದ ಸೀಮಂತ್ ಕುಮಾರ್ ಸಿಂಗ್…

ಆರ್ ಸಿಬಿ ಸಂಭ್ರಮಾಚರಣೆ ದುರಂತ- ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೇರಿ ಐವರು ಅಧಿಕಾರಿಗಳ ಅಮಾನತ್ತು

ಬೆಂಗಳೂರು, ಜೂನ್,05-ಆರ್ ಸಿ ಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಘಟನೆ ಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತುಗೊಳಿಸಲಾಗಿದೆ. ಸಚಿವ ಸಂಪುಟದ ನಂತರ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು…

1 2 3 113
Girl in a jacket