Girl in a jacket

Author kendhooli_editor

ವೀಕೆಂಡ್ ಕರ್ಪ್ಯೂ ರದ್ದು; ಘೋಷಣೆ

ಬೆಂಗಳೂರು,ಜ,21: ಕೊರೋನಾ ಹೆಚ್ಚಳವಾದ ಹಿನ್ನೆಲೆ ರಾಜ್ಯದಲ್ಲಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕರ್ಫ್ಯೂವನ್ನ ರದ್ಧುಗೊಳಿಸಿರುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಘೋಷಣೆ ಮಾಡಿದ್ದಾರೆ. ಕೊರೋನಾ ನಿರ್ವಹಣೆ ಸಂಬಂಧ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಚಿವರು ತಜ್ಞರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದ್ದು ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್, ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಲಾಗಿದೆ. ಈವಾರದಿಂದಲೇ ವೀಕೆಂಡ್ ಕರ್ಫ್ಯೂ…

ಕನಸು ನನಸಾಗಿಸಿ ಪ್ರಶಸ್ತಿ ಕೈಗಿತ್ತ ಸಂಶೋಧನೆ

ಕನಸು ನನಸಾಗಿಸಿ ಪ್ರಶಸ್ತಿ ಕೈಗಿತ್ತ ಸಂಶೋಧನೆ ಯುಜಿಸಿಯು ೨೦೧೦ರ ನಂತರ ಪಿಎಚ್.ಡಿ.ಗೆ ‘ಕೋರ್ಸ್‌ವರ್ಕ್ ಎಂಬ ಅಧ್ಯಯನ ಕ್ರಮವನ್ನು ಅಳವಡಿಸಿತು. ಆದರೆ ಕನ್ನಡ ವಿಶ್ವವಿದ್ಯಾಲಯವು ಈ ಬಗೆಯ ಕೋರ್ಸ್‌ವರ್ಕ್ ಹಾಗೂ ಈಗಿನ ಗುಣಾಂಕ ಪದ್ಧತಿಯನ್ನು ಆರಂಭದಿಂದಲೇ ಅಳವಡಿಸಿಕೊಂಡಿತ್ತೆಂದರೆ ಉತ್ಪ್ರೇಕ್ಷೆಯಲ್ಲ. ಸಂಶೋಧನೆಗೆಂದೇ ಮೀಸಲಾದ ಈ ವಿಶ್ವವಿದ್ಯಾಲಯದಲ್ಲಿ ಪಿಎಚ್.ಡಿ. ಪ್ರವೇಶ ಪಡೆದ ನಂತರ ಒಂದು ವಾರದ ಸಂಶೋಧನ ಕಮ್ಮಟ, ಅದರಲ್ಲಿ ವಿಷಯತಜ್ಞರ ಮೂಲಕ ಸಂಶೋಧನಾ ತರಬೇತಿ; ಆರು ತಿಂಗಳವರೆಗೆ ಸಂಶೋಧನೆಯ ವಿಧಿ-ವಿಧಾನ, ಅಧ್ಯಯನ ವಿಷಯ, ಅಂತರಶಿಸ್ತು ಮತ್ತು ಬಹುಶಿಸ್ತೀಯ ಅಧ್ಯಯನಗಳ…

ಮಾನವಂತ ಪತ್ರಕರ್ತ ಕಮಾಲ್ ಖಾನ್

ಮಾನವಂತ ಪತ್ರಕರ್ತ ಕಮಾಲ್ ಖಾನ್ ಪತ್ರಿಕಾವೃತ್ತಿಯು ಲಜ್ಜೆಗೆಟ್ಟು ಮಾನ ಕಳೆದುಕೊಂಡಿರುವ ಇಂದಿನ ದಿನಮಾನಗಳ ರೊಜ್ಜಿನ ನಡುವೆ ಕಮಲದಂತೆ ಹೊಳೆದ ಹೃದಯವಂತ ಕಮಾಲ್ ಖಾನ್. ಪತ್ರಿಕಾವೃತ್ತಿ ಜನಪರ ನೆಲೆಯದಾಗಿತ್ತೇ ವಿನಾ ಅಧಿಕಾರಕೇಂದ್ರಿತ ಆಗಿರಲಿಲ್ಲ. ಅವರ ಒಟ್ಟಂದದ ವರದಿಗಾರಿಕೆಯು ಭಾರತದ ಬಹುಮುಖೀ ಸಂಸ್ಖೃತಿ ಮತ್ತು ಗಂಗಾ-ಜಮುನಾ ಸಾಮಾಜಿಕ ಸದ್ಭಾವನೆಯ ಸಮರಸ ಪ್ರತೀಕ. ಗಂಗೆ ಯಮುನೆ ಹರಿಯುವ ಉತ್ತರ ಭಾರತದ ಕೆಲವು ಸೀಮೆಗಳಲ್ಲಿ ‘ಗಂಗಾ- ಜಮುನೀ ತೆಹಜೀಬ್’ ಎಂಬ ಅವಧೀ ನುಡಿಗಟ್ಟಿನ ಕಾವ್ಯಾತ್ಮಕ ರೂಪಕವೊಂದಿದೆ. ಹಿಂದೀಗಿಂತ ಪುರಾತನ ಹಿಂದೀ ನುಡಿಗಟ್ಟು…

ರಾಜ್ಯದಲ್ಲಿ ಇನ್ನೊಂದು ವರ್ಷದಲ್ಲಿ ಎವಿಜಿಸಿ ನೀತಿ: ಅಶ್ವತ್ಥನಾರಾಯಣ

ಬೆಂಗಳೂರು,ಜ,20: ಡಿಜಿಟಲ್ ಮನೋರಂಜನಾ ಕ್ಷೇತ್ರವು ಅಗಾಧವಾಗಿ ಬೆಳೆಯುತ್ತಿದ್ದು, ಒಂದು ವರ್ಷದಲ್ಲಿ ನೂತನ `ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ನೀತಿ’ (ಎವಿಜಿಸಿ ಪಾಲಿಸಿ)ಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಇಲ್ಲಿನ ಮಹದೇವಪುರದಲ್ಲಿ ದೇಶದ ಪ್ರಪ್ರಥಮ ಮತ್ತು ಏಷ್ಯಾದ ಅತಿದೊಡ್ಡ `ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ಉತ್ಕೃಷ್ಟತಾ ಕೇಂದ್ರ’ಕ್ಕೆ (ಎವಿಜಿಸಿ ಸೆಂಟರ್ ಆಫ್ ಎಕ್ಸಲೆನ್ಸ್) ಗುರುವಾರದಂದು ಚಾಲನೆ ನೀಡಿ ಮಾತನಾಡಿದ ಅವರು,…

ಜ.26ರಂದು “ಬಡವ ರಾಸ್ಕಲ್” ಚಿತ್ರ ವೂಟ್‌ ಸೆಲೆಕ್ಟ್‌ ಓಟಿಟಿ ಫ್ಲಾಟ್‌ಫಾರ್ಮ್‌ನಲ್ಲಿ ರಿಲೀಸ್

ಚಿತ್ರ ಮಂದಿರಗಳಲ್ಲಿ ಭರ್ಜರಿ ಯಶಸ್ಸು ಕಂಡ ಡಾಲಿ ದನಂಜಯ್ ಅಭಿನಯದ “ಬಡವ ರಾಸ್ಕಲ್” ಸಿನಿಮಾ ಜನವರಿ ೨೬ರಂದು “ವೂಟ್ ಸೆಲೆಕ್ಟ್” ಓಟಿಟಿ ಫ್ಲಾಟ್‌ಫಾರ್ಮ್ನಲ್ಲಿ ಬಿಡುಗಡೆಯಾಗುತ್ತಿದೆ. ಶಂಕರ್ ಗುರು ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರವು ರೊಮ್ಯಾಂಟಿಕ್ ಡ್ರಾಮದಲ್ಲಿ ಧನಂಜಯ್, ಅಮೃತ ಅಯ್ಯಂಗಾರ್, ರಂಗಾಯಣ ರಘು ಹಾಗೂ ತಾರಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸ್ವರ್ಶ ರೇಖಾ, ನಾಗಭೂಷಣ್, ಪೂರ್ಣ ಚಂದ್ರ ಮತ್ತು ಮಾಸ್ತಿ ಮಂಜು ಕೂಡ ಬಣ್ಣಹಚ್ಚಿದ್ದಾರೆ. ಶ್ರೀಮಂತ ರಾಜಕಾರಣಿಯ ಮಗಳು ಸಂಗೀತಾ (ಅಮೃತ) ಮತ್ತುಮಧ್ಯಮ ವರ್ಗ ಕುಟುಂಬದ…

ಲೋಕದತ್ತ ಮಿತಿಗಳನ್ನೂ ದಾಟಿ ಮುನ್ನಡೆದು ನಿತ್ಯಬೆರಗನ್ನು ಹುಟ್ಟಿಹಾಕಿದ ಪರಿ..

ಲೋಕದತ್ತ ಮಿತಿಗಳನ್ನೂ ದಾಟಿ ಮುನ್ನಡೆದು ನಿತ್ಯಬೆರಗನ್ನು ಹುಟ್ಟಿಹಾಕಿದ ಪರಿ.. ಅದೊಂದು ಭಾನುವಾರದ ದಿನ. ಭದ್ರಪ್ಪಶೆಟ್ಟಿ ಅಂಗಡಿಯಿಂದ ಖರೀದಿಸಿದ ಹತ್ತು ಸೇರುಗಳ ಮಂಡಕ್ಕಿ ಮೂಟೆಯನ್ನು ಹೆಗಲ ಮೇಲೆ ಹೇರಿಕೊಂಡು ಮನೆಯತ್ತ ಓಟಕಿತ್ತವನಿಗೆ ಒಂದು ಆತಂಕ ಬೆನ್ನುಬಿಡದೆ ಕಾಡುತ್ತಿತ್ತು. ಶೆಟ್ಟಿಯ ಅಂಗಡಿಯ ಗೋಡೆಯ ಮೇಲೆ ನೇತುಹಾಕಿದ್ದ ಗಡಿಯಾರ ಬೆಳಿಗ್ಗೆಯ ಒಂಬತ್ತನ್ನು ಮೀರಿದ ಸಮಯವನ್ನು ತೋರಿಸಿದ್ದು ನನ್ನ ಎದೆಬಡಿತವನ್ನು ಮತ್ತಷ್ಟು ಹೆಚ್ಚುಮಾಡಿತ್ತು. ಅವ್ವ ಮಾಡಲಿರುವ ಒಗ್ಗರಣೆಗೆ ಬೇಕಾದ ಮಂಡಕ್ಕಿ ತರಲು ಸುಮಾರು ಎಂಟೂವರೆಯ ವೇಳೆಗೇ ಆತುರಾತುರವಾಗಿ ಮನೆಯನ್ನು ತೊರೆದು ಮಂದಿನ…

ಸಂಶೋಧನೆಗೆ ಹೀಗೊಂದು ಅವಕಾಶ

ಸಂಶೋಧನೆಗೆ ಹೀಗೊಂದು ಅವಕಾಶ ರಾಷ್ಟ್ರೀಯ ಸೇವಾ ಯೋಜನೆ ಅಥವಾ ಎನ್.ಎಸ್.ಎಸ್. ಎಂಬುದು ಕಾಲೇಜು ವಿದ್ಯಾರ್ಥಿಗಳಿಗೆ ಸಾಮಾಜಿಕ ಸೇವೆಯಲ್ಲಿ ತೊಡಗಿಕೊಳ್ಳುವಿಕೆಯ ಅರಿವನ್ನು ಮೂಡಿಸುವ ಮಹತ್ವಾಕಾಂಕ್ಷೆಯ ಯೋಜನೆ. ಇದು ಕೊಠಡಿಗಳ ಮಧ್ಯೆ ಕಲಿಯುವ ವಿದ್ಯೆಯ ಜೊತೆಗೆ ಪರಿಸರ, ಆರೋಗ್ಯ, ಸೇವೆ ಮತ್ತು ಶ್ರಮಸಂಸ್ಕೃತಿಗಳ ಮೂಲಕ ಸಾಮಾಜಿಕ ಮೌಲ್ಯಗಳನ್ನು ಅರ್ಥಮಾಡಿಕೊಳ್ಳುವ ಪ್ರಯೋಗಶಾಲೆ. ಇಂತಹ ಶಿಬಿರವೊಂದರಲ್ಲಿ ಭಾಗವಹಿಸುವ ಅವಕಾಶವೂ ಪದವಿ ವಿದ್ಯಾಭ್ಯಾಸದ ಅವಧಿಯಲ್ಲಿ ನನ್ನದಾಗಿತ್ತು. ಅಲ್ಲಿ ಈ ಮೇಲಿನ ಚಟುವಟಿಕೆಗಳಲ್ಲಿ ತೊಡಗಿದ ಅನುಭವ ಅಪರಿಮಿತವಾದದ್ದು. ಅಂತೆಯೇ ಚಿತ್ರದುರ್ಗ ಬಾಲಕರ ಪದವಿಪೂರ್ವ ವಿದ್ಯಾಲಯವು ಎನ್.ಎಸ್.ಎಸ್.…

ಮಾರಣ ಹೋಮದ ಪೂರ್ವ ತಯಾರಿ!

ಅಲ್ಪಸಂಖ್ಯಾತರು, ಹೆಣ್ಣುಮಕ್ಕಳು, ದಲಿತ ದಮನಿತರು ಭಯದ ನೆರಳಿನಲ್ಲಿ ಬದುಕುವ ದ್ವೇಷ ರಾಜಕಾರಣದ ವಾತಾವರಣವನ್ನು ಕಳೆದ ಕೆಲವು ವರ್ಷಗಳಲ್ಲಿ ಕಟ್ಟಿ ಬೆಳೆಸಲಾಗಿದೆ. ಹೊಸ ದ್ವೇಷಗಳ ವಿಷದ ಕಳೆಗೆ ಯಥೇಚ್ಛ ನೀರು ಗೊಬ್ಬರ ನಿರ್ಭೀತಿ ನಿರ್ಲಜ್ಜೆಯನ್ನು ಎರೆಯತೊಡಗಿದೆ ಈ ವಾತಾವರಣ. ಮುಸಲ್ಮಾನರ ನರಮೇಧಕ್ಕೆ ಬಹಿರಂಗ ಕರೆ ನೀಡುವವರನ್ನು ಮುಟ್ಟಲೂ ಆಗದೆ ಅಸಹಾಯಕವಾಗಿ ಕೈ ಕಟ್ಟಿ ಕುಳಿತಿದೆ ಕಾನೂನು. ಮಾರಣ ಹೋಮದ ಪೂರ್ವ ತಯಾರಿ! ಸ್ತ್ರೀದ್ವೇಷ ಮತ್ತು ಧರ್ಮಾಂಧತೆ ಈ ನೆಲಕ್ಕೆ ಹೊಸ ಆವಿಷ್ಕಾರಗಳೇನೂ ಅಲ್ಲ. ಆದರೆ ’ಬೇಟೀ ಬಚಾವೊ, ಬೇಟಿ…

ರಾಜಕುಮಾರ್‌ಅರ್ಜುನನಾಗಿ ಅಭಿನಯಿಸಿದ ನಾಗಾರ್ಜುನ

ರಾಜಕುಮಾರ್‌ಅರ್ಜುನನಾಗಿ ಅಭಿನಯಿಸಿದ ನಾಗಾರ್ಜುನ ಮಹಾಭಾರತದ ಪ್ರಸಂಗವೊಂದನ್ನು ಆಧರಿಸಿದ, ರಾಜಕುಮಾರ್‌ಅರ್ಜುನನಾಗಿ ಅಭಿನಯಿಸಿದ ಕಪ್ಪುಬಿಳುಪು ಪೌರಾಣಿಕಚಿತ್ರನಾಗಾರ್ಜುನ ನಂದಿ ಪಿಕ್ಚsರ್ಸ್ ಲಾಂಛನದಲ್ಲಿ ೧೯೬೧ರಲ್ಲಿ ತೆರೆಗೆ ಬಂದಿತು. ಕೆ.ಎನ್.ಮಲ್ಲಿಕಾರ್ಜುನ ನಿರ್ಮಾಣದ ಈ ಚಿತ್ರವನ್ನುಕನ್ನಡದ ಮೊದಲ ಮಾತನಾಡುವಚಿತ್ರಸತಿ ಸುಲೋಚನ ನಿರ್ದೇಶನ ಮಾಡಿದ ವೈ.ವಿ.ರಾವ್ ನಿರ್ದೇಶಿಸಿದರು. ಆರ್.ಶ್ರೀನಿವಾಸ್ ಹಾಗೂ ಕುಂದಾನಿ ಸತ್ಯನ್ ಸಹಾಯಕ ನಿರ್ದೇಶಕರಾಗಿದ್ದರು. ರಾಜಕುಮಾರ್, ವರಲಕ್ಷ್ಮಿ, ವಿ.ನಾಗಯ್ಯ, ಸಂಧ್ಯಾ, ಕಾಂತಾರಾವ್, ಕೆ.ಎಸ್.ಅಶ್ವತ್, ಹರಿಣಿ, ನರಸಿಂಹರಾಜು, ರಾಜನಾಲ, ರಾಘವೇಂದ್ರರಾವ್, ರಮಾದೇವಿ ಮುಂತಾದವರುಅಭಿನಯಿಸಿದ ಈ ಚಿತ್ರದಲ್ಲಿ ಮದರಾಸು ಸಹೋದರಿಯರು ನೃತ್ಯ ಪ್ರದರ್ಶನ ನೀಡಿದ್ದರು. ರಾಜಕುಮಾರ್‌ಅರ್ಜುನನಾಗಿ, ವರಲಕ್ಷ್ಮಿಉಲೂಚಿಯಾಗಿ, ಕಾಂತಾರಾವ್…

ಬಿಜೆಪಿ‌ಯಿಂದ ಮಾತ್ರ ಮೇಕೆದಾಟು ಜಾರಿ ಸಾಧ್ಯ; ಅಶ್ವತ್ಥ ನಾರಾಯಣ

ರಾಮನಗರ,ಜ,11`ಮೇಕೆದಾಟು ಯೋಜನೆಯನ್ನು ಜಾರಿ ಮಾಡುವ ಗಂಡಸುತನ ಇರೋದು ಬಿಜೆಪಿಗೆ ಮಾತ್ರ; ಕಾಂಗ್ರೆಸ್ ಪಕ್ಷಕ್ಕೆ ಇದನ್ನೆಲ್ಲ ಅನುಷ್ಠಾನಗೊಳಿಸುವ ಶಕ್ತಿಯೇ ಇಲ್ಲ. ಈ ವಿಷಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರಿಗೆ ಈ ಪೌರುಷವಿದೆಯಾ? ಈ ವಿಚಾರದಲ್ಲಿ ನಾನು ನೇರವಾಗಿ ಅವರಿಬ್ಬರಿಗೂ ಸವಾಲೆಸೆಯುತ್ತಿದ್ದೇನೆ. ತಾಕತ್ತಿದ್ದರೆ ಅವರು ಉತ್ತರಿಸಲಿ’ ಎಂದು ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪಂಥಾಹ್ವಾನ ನೀಡಿದ್ದಾರೆ. ಮಂಗಳವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಡಿ.ಕೆ.ಶಿವಕುಮಾರ್ ಜಿಲ್ಲೆಯಿಂದ ಏಳು ಬಾರಿ ಶಾಸಕರಾಗಿ,…

ಕೋವಿಡ್ ಪರಿಸ್ಥಿತಿಯನ್ನು ಸರ್ಕಾರ ಸೂಕ್ತವಾಗಿ ನಿರ್ವಹಿಸುತ್ತಿಲ್ಲ-ಸಿದ್ದು

ರಾಮನಗರ,ಜ,೧೧: ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾದರೆ ಅದಕ್ಕೆ ಬಿಜೆಪಿಯೇ ಕಾರಣ ಹೊರತು ಕಾಂಗ್ರೆಸ್ ಅಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಕನಕಪುರದಲ್ಲಿ ಮಂಗಳವಾರ ಮೇಕೆದಾಟು ಮೂರನೇ ದಿನದ ಪಾದಯಾತ್ರೆ ಆರಂಭಕ್ಕೆ ಮುನ್ನ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಸೂಕ್ತವಾಗಿ ಸರ್ಕಾರ ನಿರ್ವಹಿಸಲಿಲ್ಲ. ಬಿಜೆಪಿ ನಾಯಕರೇ ಕಾರ್ಯಕ್ರಮಗಳನ್ನು ಮಾಡಿದರು. ಈಗ ಪಾದಯಾತ್ರೆ ಸಲುವಾಗಿ ಲಾಕ್ ಡೌನ್ ನಾಟಕ ಆರಂಭ ಆಗಿದೆ ಎಂದು ದೂರಿದರು.ಪಾದಯಾತ್ರೆ ಮಾಡಿದ್ದಕ್ಕೆ ೩೧ ಜನರ ಮೇಲೆ ಕೇಸು ಹಾಕಿಸಿದ್ದೀರಿ.…

ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಸಿಎಂ ಬೊಮ್ಮಾಯಿ

ಬೆಂಗಳೂರು,ಜ,೧೧: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೈದ್ಯರ ಸಲಹೆ ಮೇರೆಗೆ ಇಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.. ಲಘು ರೋಗಲಕ್ಷಣಗಳಿದ್ದು, ಮನೆಯಲ್ಲೇ ಐಸೋಲೇಟ್ ಆಗಿದ್ದ ಮುಖ್ಯಮಂತ್ರಿಗಳನ್ನು ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದು, ಕೆಲವೊಂದು ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ. ಸೋಮವಾರಸಿಎಂಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಇಂದು ಬೊಮ್ಮಾಯಿ ಮಗ ಮತ್ತು ಸೊಸೆಗೂ ಪಾಸಿಟಿವ್ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಸಿಎಂ…

ಪರಾರಿಯಾಗಲು ಯತ್ನಿಸಿದ ರೌಡಿ ಶೀಟರ್‌ಗೆ ಫೈರಿಂಗ್

ಬೆಂಗಳೂರು,೧೧: ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಗಿರಿ ನಗರ ಪೊಲೀಸರು ಬಂಧಿಸಿದ್ದಾರೆ. ಗಿರಿನಗರ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್, ರೌಡಿಶೀಟರ್ ನರಸಿಂಹ ಮೇಲೆ ಗುಂಡು ಹಾರಿಸಿದ್ದಾರೆ. ಸದ್ಯ ರೌಡಿಶೀಟರ್ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಂಧನ ವೇಳೆ ಕಾನ್ಸ್‌ಟೇಬಲ್ ಮೋಹನ್ ಎಂಬುವವರು ಹಲ್ಲೆಗೊಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಕೊಲೆ, ದರೋಡೆ, ಕಿಡ್ನಾಪ್ ಹಾಗೂ ಮನೆಗಳ್ಳತನ ಹೀಗೆ ೩೦ ಕ್ಕೂ ಹೆಚ್ಚು ಪ್ರಕರಣದಲ್ಲಿ ಆರೋಪಿಯಾಗಿದ್ದ ನರಸಿಂಹ ಪೊಲೀಸರಿಗೆ…

ಚಂಪಾ ಇನ್ನು ನೆನಪು ಮಾತ್ರ

ಬೆಂಗಳೂರು, ಜ,10: ಚಂದ್ರಶೇಖರ ಪಾಟೀಲ (ಚಂಪಾ) ಇಂದು ಬೆಳಗ್ಗೆ ೬.೩೦ಕ್ಕೆ ಬೆಂಗಳೂರಲ್ಲಿ ನಿಧನರಾದರು. ಅವರಿಗೆ‌83 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು‌ಕೋಣನ ಕುಂಟೆ ಕ್ರಾಸ್ ಬಳಿ ಇರುವ ಆಸ್ಟ್ರಾ ಆಸ್ಪತ್ರಗೆ ದಾಖಲಿಸಲಾಗುತ್ತಿ ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಇಹಲೋಕ ತ್ಯಜಸಿದ್ದಾರೆ. ಚಂಪಾ ನಿಧನದೊಂದಿಗೆ ಜನಪರ ಚಳುವಳಿಯ ಇನ್ನೊಂದು ಕೊಂಡಿ ಕಳಚಿದಂತಾಗಿದೆ. ಚಂಪಾ ಹುಟ್ಟಿದ್ದು ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನಲ್ಲಿ. ಓದಿದ್ದು ಹತ್ತಿಮತ್ತೂರು-ಹಾವೇರಿಗಳಲ್ಲಿನ ಕನ್ನಡ ಶಾಲೆಗಳಲ್ಲಿ. ೧೯೫೬ರಲ್ಲಿ ಕರ್ನಾಟಕ ಕಾಲೇಜಿಗೆ ಸೇರಿ, ೧೯೬0ರಲ್ಲಿ ಬಿ.ಎ. ಪೂರೈಸಿದರು. ೧೯೬೨ರಲ್ಲಿ ಕರ್ನಾಟಕ…

ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ ರಾಜಕೀಯ ಪ್ರೇರಿತ ಪಾದಯಾತ್ರೆ: ಸಿಎಂ

ಬೆಂಗಳೂರು. ಜ, 9:ಜನರನ್ನು ಮರುಳು ಮಾಡಲು ಕಾಂಗ್ರೆಸ್ ಪಕ್ಷ ರಾಜಕೀಯ ಪ್ರೇರಿತ ಪಾದಯಾತ್ರೆ ಕೈಗೊಂಡಿದೆ. ಆದರೆ ಜನರನ್ನು ಪದೇ ಪದೇ ಮರುಳು ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಸರ್ಕಾರದ ಐದು ವರ್ಷದ ಅವಧಿಯಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ನ್ನು ಸಮರ್ಪಕವಾಗಿ ಸಲ್ಲಿಸಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಬದ್ಧತೆ ಇಲ್ಲ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಡಿಕಿಶಿಯವರು ನೀರಾವರಿ ಸಚಿವರಾಗಿದ್ದರು, ಆಗಲೂ ಈ…

ಕಾಂಗ್ರೆಸ್ ಪಾದಯಾತ್ರೆಗೆ ಹರಿದುಬಂದ ಜನಸಾಗರ

ರಾಮನಗರ,ಜ.9- ಮೇಕೆದಾಟು ಯೋಜನೆಗೆ ಒತ್ತಾಯಿಸಿ ಕಾಂಗ್ರೆಸ್ ಹಮ್ಮಿಕೊಂಡ ಪಾದಯಾತ್ರಗೆ ಕಾಂಗ್ರೆಸ್ ಹಿರಿಯನಾಯಕ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದರು. ವೀಕ್ ಎಂಡ್ ಕರ್ಫ್ಯೂ ಅಡ್ಡಿಯಾಗಬಹುದು ಎನ್ನುವ ಆತಂಕದ ಮಧ್ಯೆಯೇ ಸಾವಿರಾರು ಜನ ಜಮಾಯಿಸಿದ್ದರು ಆದರೆ ಕರ್ಪ್ಯೂ ಅಡ್ಡಿ ಅಗಲಿಲ್ಲ ಹೀಗಾಗಿ ಮತ್ತಷ್ಟು ಜನಸಾಗರ ಸೇರಿ ಬರುತ್ತಿದೆ. ಪೊಲೀಸರಿಂದ ಅಡೆತಡೆಗಳು ಎದುರಾಗಬಹುದು ಎಂಬ ನಿರೀಕ್ಷೆಗಳು ಹುಸಿಯಾಗುತ್ತಿದ್ದಂತೆ ಕಾರ್ಯಕರ್ತರ ಉತ್ಸಾಹ ಇನ್ನಷ್ಟು ಇಮ್ಮಡಿಯಾಗಿತ್ತು. ದ್ವಿಚಕ್ರ ವಾಹನಗಳಲ್ಲಿ, ಖಾಸಗಿ ವಾಹನಗಳಲ್ಲಿ ಪಾದಯಾತ್ರೆ ಆರಂಭದ ಸಂಗಮ ಕ್ಷೇತ್ರಕ್ಕೆ ದಾಂಗುಡಿ ಇಟ್ಟು ಬಂದರು. ಪೆÇಲೀಸರು ಯಾರನ್ನೂ…

ಇಂಥವರು ಬದುಕು ಜೀವನಕ್ಕೊಂದು ಆದರ್ಶಪ್ರಾಯ

ಇಂಥವರು ಬದುಕು ಜೀವನಕ್ಕೊಂದು ಆದರ್ಶಪ್ರಾಯ ನನಗೆ ಬುದ್ಧಿ ಬಂದ ಲಾಗಾಯ್ತು ಸುಮಾರು ಹತ್ತುಹನ್ನೆರೆಡು ವರ್ಷ ವಯಸ್ಸಿನವನಾಗುವವರೆಗೂ ಒಂದು ದಿನಚರಿಯನ್ನು ತಪ್ಪದೇ ಪಾಲಿಸುತ್ತಿದ್ದೆ. ವರ್ಷದ ಯಾವುದೇ ಕಾಲವಾದರೂ ಸರಿ, ಬೆಳಗ್ಗಿನ ಆರು ಗಂಟೆ ಸುಮಾರಿಗೆ ಹಾಸಿಗೆ ಬಿಟ್ಟೇಳುತ್ತಿದ್ದವನು, ಪಿಸರುಗಟ್ಟಿದ ಕಣ್ಣುಗಳನ್ನು ಉಜ್ಜುತ್ತಲೇ, ದಂತ, ಮುಖಮಾರ್ಜನವನ್ನೂ ಮಾಡದೆ, ಬಹಿರ್ದೆಸೆಯ ಒತ್ತಡವನ್ನೂ ಮರೆತು, ಮನೆಯ ಮುಂಬಾಗಿಲಿಗೆ ಬಂದು ನನ್ನ ಮನೆಯ ಬಲಬದಿಯ ರಸ್ತೆಯನ್ನು ದಿಟ್ಟಿಸಿ ನೋಡುತ್ತಾ ನಿಲ್ಲುತ್ತಿದ್ದೆ. ಮುಂದಿನ ಹತ್ತು ಹದಿನೈದು ನಿಮಿಷಗಳಲ್ಲಿ, ನಮ್ಮ ಮನೆಯಿಂದ ಬಲಭಾಗಕ್ಕೆ ಇರುವ ಆರೆ ಸೀತಣ್ಣ,…

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ವ್ಯವಸ್ಥೆ ಪರಿಶೀಲಿಸಿದ ಸಚಿವ ಅಶ್ವತ್ಥನಾರಾಯಣ

ಬೆಂಗಳೂರು,ಜ,08: ಕೊರೋನಾ ಮತ್ತು ಓಮೈಕ್ರಾನ್ ಸೋಂಕು  ಹೆಚ್ಚಳದಿಂದ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಉಂಟಾಗಲಿರುವ ಪರಿಸ್ಥಿತಿಯನ್ನು ಎದುರಿಸಲು ಇರುವ ವ್ಯವಸ್ಥೆ ಮತ್ತು ಮಾಡಿಕೊಳ್ಳಬೇಕಾದ ಸಿದ್ಧತೆಗಳನ್ನು ಕುರಿತು ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಶನಿವಾರ ಪರಾಮರ್ಶನಾ ಸಭೆ ನಡೆಸಿದರು. ನಂತರ ಕೆ.ಸಿ.ಜನರಲ್ ಆಸ್ಪತ್ರೆಗೆ ಕೂಡ ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲಿಸಿದ ಅವರು, ಈ ಆಸ್ಪತ್ರೆಯಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಯ ತೀವ್ರ ಕೊರತೆ ಇದ್ದು, ಈ ಸಂಬಂಧ ತ್ವರಿತವಾಗಿ ಪ್ರಸ್ತಾವನೆ…

ಪ್ರತಿಭೆಯ ವಿಕಾಸಕ್ಕೆ ಆಧುನಿಕ ಮಾಧ್ಯಮಗಳು ಪೂರಕವಾಗಬೇಕು- ಹಂಪ ನಾಗರಾಜಯ್ಯ

ಬೆಂಗಳೂರು ,ಜ,7-ಜಾಗತೀಕರಣದ ಈ ಸಂದರ್ಭದಲ್ಲಿ ನಮಗೆ ಲಭ್ಯವಿರುವ ಇಂದಿನ ಆಧುನಿಕ ಮಾಧ್ಯಮ ಗಳನ್ನು ಯುವ ಲೇಖಕರು ತಮ್ಮ ಪ್ರತಿಭೆಯ ವಿಕಾಸಕ್ಕೆ ಬಳಸಿಕೊಳ್ಳಬೇಕು ಎಂದು ಕನ್ನಡದ ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯ ಹೇಳಿದ್ದಾರೆ. ಅವರು ಇಂದು ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರಿನ ನಯನ ರಂಗಮಂದಿರದಲ್ಲಿ ಆಯೋಜಿಸಿದ್ದ 55 ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ ಮತ್ತು ಶಾಲಾ-ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡುತ್ತಿದ್ದರು. ಹಿಂದೆ ಇಂತಹ ಅನುಕೂಲಗಳು ಇರಲಿಲ್ಲ ಈ ರೀತಿಯ ಅದ್ದೂರಿಯ…

1 31 32 33 34 35 101
Girl in a jacket