Girl in a jacket

Author kendhooli_editor

ಚಂಪಾ ಇನ್ನು ನೆನಪು ಮಾತ್ರ

ಬೆಂಗಳೂರು, ಜ,10: ಚಂದ್ರಶೇಖರ ಪಾಟೀಲ (ಚಂಪಾ) ಇಂದು ಬೆಳಗ್ಗೆ ೬.೩೦ಕ್ಕೆ ಬೆಂಗಳೂರಲ್ಲಿ ನಿಧನರಾದರು. ಅವರಿಗೆ‌83 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು‌ಕೋಣನ ಕುಂಟೆ ಕ್ರಾಸ್ ಬಳಿ ಇರುವ ಆಸ್ಟ್ರಾ ಆಸ್ಪತ್ರಗೆ ದಾಖಲಿಸಲಾಗುತ್ತಿ ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಇಹಲೋಕ ತ್ಯಜಸಿದ್ದಾರೆ. ಚಂಪಾ ನಿಧನದೊಂದಿಗೆ ಜನಪರ ಚಳುವಳಿಯ ಇನ್ನೊಂದು ಕೊಂಡಿ ಕಳಚಿದಂತಾಗಿದೆ. ಚಂಪಾ ಹುಟ್ಟಿದ್ದು ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನಲ್ಲಿ. ಓದಿದ್ದು ಹತ್ತಿಮತ್ತೂರು-ಹಾವೇರಿಗಳಲ್ಲಿನ ಕನ್ನಡ ಶಾಲೆಗಳಲ್ಲಿ. ೧೯೫೬ರಲ್ಲಿ ಕರ್ನಾಟಕ ಕಾಲೇಜಿಗೆ ಸೇರಿ, ೧೯೬0ರಲ್ಲಿ ಬಿ.ಎ. ಪೂರೈಸಿದರು. ೧೯೬೨ರಲ್ಲಿ ಕರ್ನಾಟಕ…

ಮೇಕೆದಾಟು ಪಾದಯಾತ್ರೆ ಕಾಂಗ್ರೆಸ್ ರಾಜಕೀಯ ಪ್ರೇರಿತ ಪಾದಯಾತ್ರೆ: ಸಿಎಂ

ಬೆಂಗಳೂರು. ಜ, 9:ಜನರನ್ನು ಮರುಳು ಮಾಡಲು ಕಾಂಗ್ರೆಸ್ ಪಕ್ಷ ರಾಜಕೀಯ ಪ್ರೇರಿತ ಪಾದಯಾತ್ರೆ ಕೈಗೊಂಡಿದೆ. ಆದರೆ ಜನರನ್ನು ಪದೇ ಪದೇ ಮರುಳು ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಸರ್ಕಾರದ ಐದು ವರ್ಷದ ಅವಧಿಯಲ್ಲಿ ಮೇಕೆದಾಟು ಯೋಜನೆಯ ಡಿಪಿಆರ್ ನ್ನು ಸಮರ್ಪಕವಾಗಿ ಸಲ್ಲಿಸಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಬದ್ಧತೆ ಇಲ್ಲ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಡಿಕಿಶಿಯವರು ನೀರಾವರಿ ಸಚಿವರಾಗಿದ್ದರು, ಆಗಲೂ ಈ…

ಕಾಂಗ್ರೆಸ್ ಪಾದಯಾತ್ರೆಗೆ ಹರಿದುಬಂದ ಜನಸಾಗರ

ರಾಮನಗರ,ಜ.9- ಮೇಕೆದಾಟು ಯೋಜನೆಗೆ ಒತ್ತಾಯಿಸಿ ಕಾಂಗ್ರೆಸ್ ಹಮ್ಮಿಕೊಂಡ ಪಾದಯಾತ್ರಗೆ ಕಾಂಗ್ರೆಸ್ ಹಿರಿಯನಾಯಕ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಿದರು. ವೀಕ್ ಎಂಡ್ ಕರ್ಫ್ಯೂ ಅಡ್ಡಿಯಾಗಬಹುದು ಎನ್ನುವ ಆತಂಕದ ಮಧ್ಯೆಯೇ ಸಾವಿರಾರು ಜನ ಜಮಾಯಿಸಿದ್ದರು ಆದರೆ ಕರ್ಪ್ಯೂ ಅಡ್ಡಿ ಅಗಲಿಲ್ಲ ಹೀಗಾಗಿ ಮತ್ತಷ್ಟು ಜನಸಾಗರ ಸೇರಿ ಬರುತ್ತಿದೆ. ಪೊಲೀಸರಿಂದ ಅಡೆತಡೆಗಳು ಎದುರಾಗಬಹುದು ಎಂಬ ನಿರೀಕ್ಷೆಗಳು ಹುಸಿಯಾಗುತ್ತಿದ್ದಂತೆ ಕಾರ್ಯಕರ್ತರ ಉತ್ಸಾಹ ಇನ್ನಷ್ಟು ಇಮ್ಮಡಿಯಾಗಿತ್ತು. ದ್ವಿಚಕ್ರ ವಾಹನಗಳಲ್ಲಿ, ಖಾಸಗಿ ವಾಹನಗಳಲ್ಲಿ ಪಾದಯಾತ್ರೆ ಆರಂಭದ ಸಂಗಮ ಕ್ಷೇತ್ರಕ್ಕೆ ದಾಂಗುಡಿ ಇಟ್ಟು ಬಂದರು. ಪೆÇಲೀಸರು ಯಾರನ್ನೂ…

ಇಂಥವರು ಬದುಕು ಜೀವನಕ್ಕೊಂದು ಆದರ್ಶಪ್ರಾಯ

ಇಂಥವರು ಬದುಕು ಜೀವನಕ್ಕೊಂದು ಆದರ್ಶಪ್ರಾಯ ನನಗೆ ಬುದ್ಧಿ ಬಂದ ಲಾಗಾಯ್ತು ಸುಮಾರು ಹತ್ತುಹನ್ನೆರೆಡು ವರ್ಷ ವಯಸ್ಸಿನವನಾಗುವವರೆಗೂ ಒಂದು ದಿನಚರಿಯನ್ನು ತಪ್ಪದೇ ಪಾಲಿಸುತ್ತಿದ್ದೆ. ವರ್ಷದ ಯಾವುದೇ ಕಾಲವಾದರೂ ಸರಿ, ಬೆಳಗ್ಗಿನ ಆರು ಗಂಟೆ ಸುಮಾರಿಗೆ ಹಾಸಿಗೆ ಬಿಟ್ಟೇಳುತ್ತಿದ್ದವನು, ಪಿಸರುಗಟ್ಟಿದ ಕಣ್ಣುಗಳನ್ನು ಉಜ್ಜುತ್ತಲೇ, ದಂತ, ಮುಖಮಾರ್ಜನವನ್ನೂ ಮಾಡದೆ, ಬಹಿರ್ದೆಸೆಯ ಒತ್ತಡವನ್ನೂ ಮರೆತು, ಮನೆಯ ಮುಂಬಾಗಿಲಿಗೆ ಬಂದು ನನ್ನ ಮನೆಯ ಬಲಬದಿಯ ರಸ್ತೆಯನ್ನು ದಿಟ್ಟಿಸಿ ನೋಡುತ್ತಾ ನಿಲ್ಲುತ್ತಿದ್ದೆ. ಮುಂದಿನ ಹತ್ತು ಹದಿನೈದು ನಿಮಿಷಗಳಲ್ಲಿ, ನಮ್ಮ ಮನೆಯಿಂದ ಬಲಭಾಗಕ್ಕೆ ಇರುವ ಆರೆ ಸೀತಣ್ಣ,…

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ವ್ಯವಸ್ಥೆ ಪರಿಶೀಲಿಸಿದ ಸಚಿವ ಅಶ್ವತ್ಥನಾರಾಯಣ

ಬೆಂಗಳೂರು,ಜ,08: ಕೊರೋನಾ ಮತ್ತು ಓಮೈಕ್ರಾನ್ ಸೋಂಕು  ಹೆಚ್ಚಳದಿಂದ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಉಂಟಾಗಲಿರುವ ಪರಿಸ್ಥಿತಿಯನ್ನು ಎದುರಿಸಲು ಇರುವ ವ್ಯವಸ್ಥೆ ಮತ್ತು ಮಾಡಿಕೊಳ್ಳಬೇಕಾದ ಸಿದ್ಧತೆಗಳನ್ನು ಕುರಿತು ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಶನಿವಾರ ಪರಾಮರ್ಶನಾ ಸಭೆ ನಡೆಸಿದರು. ನಂತರ ಕೆ.ಸಿ.ಜನರಲ್ ಆಸ್ಪತ್ರೆಗೆ ಕೂಡ ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲಿಸಿದ ಅವರು, ಈ ಆಸ್ಪತ್ರೆಯಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಯ ತೀವ್ರ ಕೊರತೆ ಇದ್ದು, ಈ ಸಂಬಂಧ ತ್ವರಿತವಾಗಿ ಪ್ರಸ್ತಾವನೆ…

ಪ್ರತಿಭೆಯ ವಿಕಾಸಕ್ಕೆ ಆಧುನಿಕ ಮಾಧ್ಯಮಗಳು ಪೂರಕವಾಗಬೇಕು- ಹಂಪ ನಾಗರಾಜಯ್ಯ

ಬೆಂಗಳೂರು ,ಜ,7-ಜಾಗತೀಕರಣದ ಈ ಸಂದರ್ಭದಲ್ಲಿ ನಮಗೆ ಲಭ್ಯವಿರುವ ಇಂದಿನ ಆಧುನಿಕ ಮಾಧ್ಯಮ ಗಳನ್ನು ಯುವ ಲೇಖಕರು ತಮ್ಮ ಪ್ರತಿಭೆಯ ವಿಕಾಸಕ್ಕೆ ಬಳಸಿಕೊಳ್ಳಬೇಕು ಎಂದು ಕನ್ನಡದ ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯ ಹೇಳಿದ್ದಾರೆ. ಅವರು ಇಂದು ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರಿನ ನಯನ ರಂಗಮಂದಿರದಲ್ಲಿ ಆಯೋಜಿಸಿದ್ದ 55 ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ ಮತ್ತು ಶಾಲಾ-ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡುತ್ತಿದ್ದರು. ಹಿಂದೆ ಇಂತಹ ಅನುಕೂಲಗಳು ಇರಲಿಲ್ಲ ಈ ರೀತಿಯ ಅದ್ದೂರಿಯ…

4,236 ಕೋಟಿ ಮೊತ್ತದ 87 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ

ಬೆಂಗಳೂರು,ಜ.7- ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಮತ್ತಷ್ಟು ಉತ್ತೇಜನ ನೀಡಲು ಮುಂದಾಗಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು,₹4.236.26 ಕೋಟಿ ಮೊತ್ತದ 87 ಯೋಜನೆಗಳಿಗೆ ಅನುಮೋದನೆ ನೀಡಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರ ಅಧ್ಯಕ್ಷತೆಯಲ್ಲಿ  ನಡೆದ 128ನೇ ರಾಜ್ಯ ಮಟ್ಟದ ಏಕಗವಾಕ್ಷಿ ತೆರವು ಸಮಿತಿ (ಎಸ್‍ಎಲ್‍ಡಬ್ಲ್ಯೂಸಿಸಿ) ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಸಮಿತಿಯು ₹50 ಕೋಟಿಗೂ ಹೆಚ್ಚು ಹೂಡಿಕೆಯ 13 ಪ್ರಮುಖ ಬೃಹತ್ ಮತ್ತು ಮಧ್ಯಮ ಗಾತ್ರದ ಕೈಗಾರಿಕಾ…

ಆರ್ಥಿಕ ದುರ್ಬಲರ ಸಬಲೀಕರಣದಲ್ಲಿ ಸಹಕಾರ ಕ್ಷೇತ್ರದ ಪಾತ್ರ ಮಹತ್ವದ್ದು

ಬೆಂಗಳೂರು,ಜ,07: ಸಹಕಾರ ಕ್ಷೇತ್ರವನ್ನು ಕೇಂದ್ರ ಸರಕಾರವು ಪ್ರಮುಖವೆಂದು ಪರಿಗಣಿಸಿದ್ದು, ಸಮಾಜದಲ್ಲಿ ಆರ್ಥಿಕವಾಗಿ ದುರ್ಬಲರಾಗಿರುವವರ ಸಬಲೀಕರಣಕ್ಕೆ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ, ಮಲ್ಲೇಶ್ವರದಲ್ಲಿ ಪ್ರಧಾನ ಕಚೇರಿ ಹೊಂದಿದ್ದು ಅಲ್ಲಿ ನಿರ್ಮಿಸಿರುವ ‘ಸೌರ್ಹಾದ ಸಹಕಾರಿ ಸೌಧ’ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, `ಬ್ಯಾಂಕುಗಳೇ ಸಮಾಜದಲ್ಲಿ ಎಲ್ಲರಿಗೂ ಆರ್ಥಿಕ ನೆರವನ್ನು ನೀಡುವುದು ಸಾಧ್ಯವಿಲ್ಲ. ಅಂತಹ ಕಡೆಗಳಲ್ಲಿ ಸಹಕಾರ ಸಂಘಗಳು ಸಾಲದ ಅಗತ್ಯವಿರುವವರ ನೆರವಿಗೆ ಧಾವಿಸುತ್ತಿದ್ದು, ಅಂಥವರನ್ನು…

ಸರ್ಕಾರದ ಸೇವೆ ಜನರ ಮನೆ ಬಾಗಿಲಿಗೆ: ಸಿ.ಎಂ. ಬೊಮ್ಮಾಯಿ

ಬೆಂಗಳೂರು, ಜ, 07 :ಸರ್ಕಾರದ ಸೇವೆ ಜನರ ಮನೆ ಬಾಗಿಲಿಗೆ ಮುಟ್ಟಿದಾಗ ಸರ್ಕಾರದ ಬಗ್ಗೆ ಜನರಲ್ಲಿ ವಿಶ್ವಾಸ ಮೂಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕೆಎಎಸ್ ಅಧಿಕಾರಿಗಳ ಸಂಘದ ಹೊಸ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ 2022ರ ದಿನಚರಿ ಮತ್ತು ಕ್ಯಾಲೆಂಡರ್ ನ್ನು ಬಿಡುಗಡೆ ಮಾಡಿ ಮಾತನಾಡಿದರು. ಕರ್ನಾಟಕವನ್ನು ದೇಶದ ನಂ.1 ರಾಜ್ಯವನ್ನಾಗಿಸಲು ಸರ್ವಪ್ರಯತ್ನಗಳನ್ನು ಮಾಡುವ ಕರೆ ನೀಡಿದರು. ಕೋವಿಡ್ ಒಡ್ಡಿರುವ ಸವಾಲುಗಳನ್ನು ಮೆಟ್ಟಿನಿಂತು ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪುವಂತಾಗಬೇಕು. ಗ್ರಾಮ ಮಟ್ಟದಲ್ಲಿ ಸರ್ಕಾರದ…

ಬಿಜೆಪಿ ಉದ್ದೇಶಪೂರ್ವಕವಾಗಿ ಲಾಕ್ ಡೌನ್ ಮಾಡಿದೆ ಡಿಕೆಶಿ ಆರೋಪ

ಬೆಂಗಳೂರು, ಜ.7: ರಾಜ್ಯದಲ್ಲಿ ಲಾಕ್ ಡೌನ್ ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿಲ್ಲ ಆದರೂ ಬಿಜೆಪಿ ಉದ್ದೇಶಪೂರ್ವಕವಾಗಿ ವೀಕ್ ಎಂಡ್ ಲಾಕ್ ಡೌನ್ ಜಾರಿ ಮಾಡುವ ಮೂಲಕ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದರು. ಕೋವಿಡ್ ಹೆಸರಿನಲ್ಲಿ ಸರ್ಕಾರದ ನಿರ್ಬಂಧದ ವಿಚಾರವಾಗಿ ನಮಗೆ ಸಾವಿರಾರು ಕರೆಗಳು ಬರುತ್ತಿದ್ದು, ವೀಕೆಂಡ್ ಕರ್ಫ್ಯೂ ಬಗ್ಗೆ ತಮ್ಮ ನೋವು ಹೇಳಿಕೊಂಡು, ವಿರೋಧ ಪಕ್ಷವಾಗಿ ನೀವು ಏನು ಮಾಡುತ್ತಿದ್ದೀರಿ ಎಂದು ಕೇಳುತ್ತಿದ್ದಾರೆ ಎಂದು ಅವರು ಮಾಧ್ಯಮಗೋಷ್ಠಿಯಲ್ಲಿ ಹೇಳಿದರು. ರಾಜ್ಯದಲ್ಲಿನ ಪಾಸಿಟಿವಿಟಿ…

ಜೆಡಿಎಸ್ ಜನತಾ ಜಲಧಾರೆ ಕಾರ್ಯಕ್ರಮಕ್ಕೆ ದೇವೇಗೌಡರಿಂದ ಚಾಲನೆ

ಬೆಂಗಳೂರು,ಜ,07: ರಾಜ್ಯದ ಎಲ್ಲಾ ಭಾಗಗಳಿಗೂ ನೀರು ಒದಗಿಸುವ, ಲಭ್ಯ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಹಾಗೂ ನೆನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಜಾರಿ ಮಾಡುವ ಮಹಾ ಸಂಕಲ್ಪದೊಂದಿಗೆ ಜೆಡಿಎಸ್ ಹಮ್ಮಿಕೊಂಡಿರುವ’ ಜನತಾ ಜಲಧಾರೆ ‘ ಎಂಬ ವಿಶೇಷ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಚಾಲನೆ ನೀಡಿದರು ಬಳಿಕ ಹೆಚ್.ಡಿ.ಕುಮಾರಸ್ವಾಮಿ ಅವರು ಜನತಾ ಜಲಧಾರೆಯ ಪೂರ್ಣ ವಿವರಗಳನ್ನು ಮಾಧ್ಯಮಗಳಿಗೆ ನೀಡಿದರು. ಈ ಸಂದರ್ಭದಲ್ಲಿ ಜನತಾ ಜಲಧಾರೆಯ ಲಾಂಛನ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು,ಕರ್ನಾಟಕ ಅತಿವೃಷ್ಟಿ- ಅನಾವೃಷ್ಟಿಗೆ…

ವಿವಾಹ ವಯಸ್ಸನ್ನು 18 ರಿಂದ 21 ಕ್ಕೆ ಹೆಚ್ಚಿಸುವುದರ ಹಿಂದಿನ ತಾರ್ಕಿಕತೆ

ವಿವಾಹ ವಯಸ್ಸನ್ನು 18 ರಿಂದ 21 ಕ್ಕೆ ಹೆಚ್ಚಿಸುವುದರ ಹಿಂದಿನ ತಾರ್ಕಿಕತೆ ಮಾನಸ,ಬೆಂಗಳೂರು ಐತಿಹಾಸಿಕ ನಿರ್ಧಾರವೊಂದರಲ್ಲಿ, ಮಹಿಳೆಯರ ವಿವಾಹದ ಕಾನೂನುಬದ್ಧ ವಯಸ್ಸನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸುವ ಮೂಲಕ ಅವರನ್ನು ಪುರುಷರಿಗೆ ಸರಿಸಮಾನವಾಗಿ ತರುವ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಬುಧವಾರ ಅಂಗೀಕರಿಸಿದೆ. ನೀತಿ ಆಯೋಗದ ಡಾ ವಿಕೆ ಪಾಲ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ, ಆರೋಗ್ಯ ಮತ್ತು ಶಿಕ್ಷಣ ಸಚಿವಾಲಯಗಳ ಕಾರ್ಯದರ್ಶಿಗಳೊಂದಿಗೆ ಜಯಾ ಜೇಟ್ಲಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರವು ರಚಿಸಿದ್ದ…

ಅರಗಜ್ಞಾನೇಂದ್ರ ಹೇಳಿಕೆಗೆ ಸಿದ್ದು ತಿರುಗೇಟು

ಬೆಂಗಳೂರು,ಜ,06: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಜನವರಿ 9 ರಿಂದ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಕೋವಿಡ್ ಹಿನ್ನೆಲೆ ಇದಕ್ಕೆ ಅನುಮತಿ ನೀಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದು ಈ ಬೆನ್ನಲ್ಲೆ ವಿಪಕ್ಷ ನಾಯಕ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಗೃಹ ಸಚಿವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ಧರಾಮಯ್ಯ, ನಾವು ನಿಯಮಬದ್ಧವಾಗೇ ಪಾದಯಾತ್ರೆ ಮಾಡುತ್ತೇವೆ. ಅವರು ಬೇಕಾದ್ರೆ ಕ್ರಮಕೈಗೊಳ್ಳಲಿ. ಲೆಟ್ ದೆಮ್ ಟೇಕ್ ಆಕ್ಷನ್. ಇದಕ್ಕೆ ನಾವು ಹೆದರುವುದಿಲ್ಲ ಎಂದು…

ಕಾಂಗ್ರೆಸ್ ಪಾದಾಯಾತ್ರೆಗೆ ಅನುಮತಿ ಇಲ್ಲ; ಅರಗ ಜ್ಞಾನೇಂದ್ರ

ಬೆಂಗಳೂರು,ಜ,06: ಯಾವದೇ ಕಾರಣಕ್ಕೂ ಕಾಂಗ್ರೆಸ್ ಪಾದಯಾತ್ರಗೆ ಅನುಮತಿ ನೀಡುವ ಪ್ರಶ್ನೆಯೇ ಇಲ್ಲ ಒಂದು ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ್ರೆ ಕ್ರಮ ತಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಿದ್ಧರಾಮಯ್ಯ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಡಿಕೆ ಶಿವಕುಮಾರ್ ಮಂತ್ರಿಯಾಗಿ ಸರ್ಕಾರ ನಡೆಸಿದವರು. ಅವರೇ ಈಗ ಕೋವಿಡ ನಿಯಮ ಉಲ್ಲಂಘಿಸಿದರೆ ಹೇಗೆ. ಅವರೇ ಹೀಗೆ ಮಾತನಾಡಿದರೇ ಹೇಗೆ. ಕಾಂಗ್ರೆಸ್ ವಿವೇಚನೆ ಮಾಡಬೇಕು. ಕಾಂಗ್ರೆಸ್ ಪಕ್ಷದವರಿಗೆ ಒಂದು ನಿಯಮ ಬೇರೆಯವರಿಗೆ ಒಂದು ನಿಯಮ…

ರಾಮಮಂದಿರದ ಸುತ್ತ ರಿಯಲ್ ಎಸ್ಟೇಟ್ ದಂಧೆ

ರಾಮಮಂದಿರದ ಸುತ್ತ ರಿಯಲ್ ಎಸ್ಟೇಟ್ ದಂಧೆ ಅಯೋಧ್ಯೆಯ ಬಾಬರಿ ಮಸೀದಿ-ರಾಮಜನ್ಮಭೂಮಿಯ ೨.೭೭ ಎಕರೆಗಳಷ್ಟು ವಿವಾದಿತ ಜಮೀನನ್ನು ರಾಮಮಂದಿರ ಕಟ್ಟಿಕೊಳ್ಳಲು ಸುಪ್ರೀಮ್ ಕೋರ್ಟು ಹಿಂದೂಗಳಿಗೆ ಒಪ್ಪಿಸಿತ್ತು. ಸುಪ್ರೀಮ್ ತೀರ್ಪಿನ ಅನ್ವಯ ರಚಿಸಲಾದ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ೨.೭೭ ಎಕರೆಗಳ ಸುತ್ತಮುತ್ತ ಈವರೆಗೆ ೭೦ ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಂಡಿದೆ .ಈ ಎರಡು ವರ್ಷಗಳಲ್ಲಿ ಅಯೋಧ್ಯೆಯ ರಿಯಲ್ ಎಸ್ಟೇಟ್ ದಂಧೆ ಅತಿಶಯವಾಗಿ ಗರಿಗೆದರಿದೆ. ಭವ್ಯ ರಾಮಮಂದಿರದ ಸುತ್ತಮುತ್ತಲ ಜಮೀನಿನ ಖರೀದಿ ದರ ಆಕಾಶಕ್ಕೇರುವ ನಿರೀಕ್ಷೆ ಹೊಂದಿರುವ ಖಾಸಗಿ ಖರೀದಿದಾರರೂ ಈ…

ವಿಜಯನಗರ ಕಾಲದ ಶೌಚಾಲಯಗಳು

ವಿಜಯನಗರ ಕಾಲದ ಶೌಚಾಲಯಗಳು ಆಧುನಿಕ ಯುಗದಲ್ಲಿ ನೈರ್ಮಲ್ಯ ಮತ್ತು ಶುಚಿತ್ವಕ್ಕೆ ವಿಶೇಷ ಆದ್ಯತೆಯನ್ನು ನೀಡುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ. ಅದರಲ್ಲೂ ಬಯಲು ಬಹಿರ್ದೆಸೆಯನ್ನು ನಿರ್ಮೂಲ ಮಾಡಲು ಸರ್ಕಾರಗಳು ಇನ್ನಿಲ್ಲದ ಪ್ರಯತ್ನ ಮಾಡುತ್ತಿವೆ. ಸ್ವಚ್ಚ ಭಾರತ ನಿರ್ಮಾಣಕ್ಕೆ ಸುಸ್ಥಿರ ಆರೋಗ್ಯ ಮುಖ್ಯ, ಇದಕ್ಕೆ ಸ್ವಚ್ಚ ಪರಿಸರ ಅತ್ಯಗತ್ಯವೆಂಬುದನ್ನು ನಿತ್ಯವೂ ಬಿತ್ತರಿಸುತ್ತಿದೆ. ಈ ಪರಿಪಾಠ ಇಂದು ನಿನ್ನೆಯದಲ್ಲ. ಶೌಚಾಲಯದ್ದೂ ಒಂದು ಇತಿಹಾಸವೇ. ಭಾರತದ ಮಟ್ಟಿಗೆ ನಗರೀಕರಣವೆಂಬುದು ಸಿಂಧೂ ನಾಗರೀಕತೆಯಷ್ಟೇ ಪ್ರಾಚೀನ. ಅಂದಿನ ಜನರು ನೈರ್ಮಲ್ಯಕ್ಕೆ ನೀಡಿದ ಮಹತ್ವ ಅನನ್ಯವಾದದ್ದು. ಅಂತೆಯೇ…

ಆಂಧ್ರ ಬಿಜೆಪಿಯಲ್ಲೀಗ ಹೆಂಡದ್ದೆ ಮಾತು

ಕುಡಿತದ ವಿರುದ್ಧ ಮಹಾತ್ಮ ಗಾಂಧೀಜಿ ಸಮರವನ್ನೇ ಸಾರಿದ್ದರು. ಸ್ವಾತಂತ್ರ್ಯಾನಂತರ ಭಾರತವನ್ನು ಆಳಿದ ಯಾವ ಪಕ್ಷವೂ ಗಾಂಧಿ ಶುರುಮಾಡಿದ್ದ ಸಮರವನ್ನು ಮುಂದುವರಿಸಲಿಲ್ಲ. ಈಗ ಆಡಳಿತದ ಭಾರ ಹೊತ್ತಿರುವ ಬಿಜೆಪಿಯೂ ಈ ವಿಚಾರದಲ್ಲಿ ಸಂಬಂಧವೇ ಇಲ್ಲ ಎಂಬಂತೆ ಕೂತಿದೆ. ಏತನ್ಮಧ್ಯೆ ಆಂಧ್ರ ಪ್ರದೇಶ ಬಿಜೆಪಿ ಅಧ್ಯಕ್ಷ ಸೋಮು ವೀರರಾಜು, ಪಕ್ಷ ಅಧಿಕಾರಕ್ಕೆ ಬಂದರೆ ಮದ್ಯದ ದರವನ್ನು ಗಣನೀಯವಾಗಿ ಇಳಿಸುವ ಮಾತಾಡಿದ್ದಾರೆ. ಖಾದ್ಯತೈಲ, ಪೆಟ್ರೋಲು ದರ ಅವರ ನಜರಿನಲ್ಲಿ ಇಲ್ಲ. ಆಂಧ್ರ ಬಿಜೆಪಿಯಲ್ಲೀಗ ಹೆಂಡದ್ದೆ ಮಾತು ಭಾರತೀಯ ಜನತಾ ಪಕ್ಷದ…

ಆರ್.ಎನ್.ಸುದರ್ಶನ್‌ಚಿತ್ರರಂಗ ಪ್ರವೇಶಿಸಿದ ‘ವಿಜಯನಗರದ ವೀರಪುತ್ರ‘

ಆರ್.ಎನ್.ಸುದರ್ಶನ್‌ಚಿತ್ರರಂಗ ಪ್ರವೇಶಿಸಿದ ‘ವಿಜಯನಗರದ ವೀರಪುತ್ರ‘ ಆರ್.ನಾಗೇಂದ್ರರಾಯರು ತಮ್ಮ ಸ್ವಂತ ನಿರ್ಮಾಣ ಸಂಸ್ಥೆ ‘ಆರ್.ಎನ್.ಆರ್.ಪಿಕ್ಚರ‍್ಸ್‘ ಲಾಂಛನದಲ್ಲಿ ತೆರೆಗೆ ತಂದ ಕಪ್ಪು ಬಿಳುಪು ಚಿತ್ರ ‘ವಿಜಯನಗರದ ವೀರಪುತ್ರ‘ ೧೯೬೧ರಲ್ಲಿ ತೆರೆಕಂಡಿತು. ನಾಗೇಂದ್ರರಾಯರ ಪುತ್ರ ಆರ್.ಎನ್.ಸುದರ್ಶನ್ ಚಿತ್ರರಂಗಕ್ಕೆ ಪದರ್ಪಿಸಿದ ಚಿತ್ರವೆಂಬ ಹೆಗ್ಗಳಿಕೆಗೆ ಚಿತ್ರ ಪಾತ್ರವಾಗಿದೆ. ಸ್ವತಃಆರ್.ನಾಗೇಂದ್ರರಾಯರೇ ನಿರ್ದೇಶಿಸಿದ ಈ ಚಿತ್ರಕೆ ಅವರ ಮತ್ತೊಬ್ಬ ಪುತ್ರ ಆರ್.ಎನ್.ಕೃಷ್ಣಪ್ರಸಾದರು ವಿ.ಮನೋಹರ್‌ಅವರೊಂದಿಗೆ ಸೇರಿ ಛಾಯಾಗ್ರಹಣ ನೀಡಿದ್ದಾರೆ. ಎನ್.ಲಕ್ಷ್ಮಿನಾರಾಯಣ್ ಹಾಗೂ ವಿ.ಸೋಮಶೇಖರ್ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜಗುರುವರಾಯನ ಪಾತ್ರದಲ್ಲಿ ಆರ್.ನಾಗೇಂದ್ರರಾವ್, ಆತನ ಪುತ್ರ…

ಓಮಿಕ್ರಾನ್ ಸೋಂಕು: ಅಂತರರಾಜ್ಯ ಗಡಿ ಬಂದ್ ಇಲ್ಲ

ಬೆಳಗಾವಿ,ಜ,05: ಕೊರೋನಾ ಮತ್ತು ಓಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದು ನಿಜವಾದರೂ ಬೆಳಗಾವಿ ಸೇರಿದಂತೆ ರಾಜ್ಯದ ಯಾವ ಕಡೆಗಳಲ್ಲೂ ಅಂತರರಾಜ್ಯ ಗಡಿಗಳನ್ನು ಬಂದ್ ಮಾಡುವ ಆಲೋಚನೆ ಸರಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬುಧವಾರ ಇಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬಂದಿಳಿದಾಗ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಅಂತರರಾಜ್ಯ ಗಡಿಗಳಲ್ಲಿ ರಾಜ್ಯದೊಳಕ್ಕೆ ಬರುವವರನ್ನು ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ನಿಗಾ ವಹಿಸಲಾಗುವುದು. ಸೋಂಕಿತರು ಕಂಡುಬಂದರೆ ಅಂಥವರನ್ನು ಮಾತ್ರ ನಿಯಂತ್ರಿಸಲಾಗುವುದು. ಉಳಿದಂತೆ ಅಂತರರಾಜ್ಯ…

1 32 33 34 35 36 101
Girl in a jacket