ಮಾಹಿತಿ ಹಕ್ಕು ಕಾಯ್ದೆಯ ದುರುಪಯೋಗ ಮತ್ತು ದುರ್ಬಲಗೊಳಿಸುವುದನ್ನು ತಪ್ಪಿಸಲು- ಪ್ರಭಾಕರ್ ಸಲಹೆ
ಮಾಹಿತಿ ಹಕ್ಕು ಕಾಯ್ದೆಯ ದುರುಪಯೋಗ ಮತ್ತು ದುರ್ಬಲಗೊಳಿಸುವುದನ್ನು ತಪ್ಪಿಸಲು- ಪ್ರಭಾಕರ್ ಸಲಹೆ by-ಕೆಂಧೂಳಿ ಬೆಂಗಳೂರು ಫೆ 19- ಮಾಹಿತಿ ಹಕ್ಕು ಕಾಯ್ದೆಯ ದುರುಪಯೋಗವನ್ನು ಮತ್ತು ದುರ್ಬಲಗೊಳಿಸುವ ಪ್ರಯತ್ನವನ್ನು ತಪ್ಪಿಸಿ, ಸರ್ಕಾರದ ಸಾಮಾಜಿಕ ನ್ಯಾಯದ ಗುರಿಯನ್ನು ಈಡೇರಿಸಿ ಎಂದು ನೂತನವಾಗಿ ನೇಮಕಗೊಂಡ ಮಾಹಿತಿ ಹಕ್ಕು ಆಯುಕ್ತರಿಗೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು. ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಮಾಹಿತಿ ಆಯುಕ್ತರಾಗಿ ನೇಮಕಗೊಂಡ ಪತ್ರಕರ್ತರು ಮತ್ತು ಚಲನಚಿತ್ರ ಅಕಾಡೆಮಿ ಸದಸ್ಯರಾದ ಪತ್ರಕರ್ತರನ್ನು ಅಭಿನಂದಿಸಿ, ಸನ್ಮಾನಿಸಿ ಮಾತನಾಡಿದರು.…




















