Girl in a jacket

Author kendhooli_editor

ಓಮೈಕ್ರಾನ್ ಭೀತಿ;ರಾಜ್ಯದಲ್ಲಿ ಡಿ ೨೮ ರಿಂದ ಹತ್ತು ದಿನ ನೈಟ್ ಕರ್ಪ್ಯೂ ಜಾರಿ

ಬೆಂಗಳೂರು, ಡಿ,೨೬; ರಾಜ್ಯದಲ್ಲಿ ಓಮೈಕ್ರಾನ್ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹರಡುವಿಕೆ ತಡೆಯಲು ಸರ್ಕಾರ ಹತ್ತು ದಿನಗಳ ಕಾಲ ನೈಟ್ ಕರ್ಪ್ಯೂ ಜಾರಿಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಿದರು. ಕಂದಾಯ ಸಚಿವ ಆರ್. ಅಶೋಕ, ಗೃಹ ಸಚಿವ ಆರಗ ಜ್ಞಾನೇಂದ್ರ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ಡಿಸೆಂಬರ್ ೨೮ರಿಂದ ೧೦ ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೊಳಿಸಲು ಒಪ್ಪಿಗೆ ನೀಡಲಾಗಿದೆ.…

ಶ್ರೀ ಶೈಲ ಮಹಾತ್ಮೆಯಲ್ಲಿಬಾಲನಟಿಯಾಗಿಜಯಲಲಿತ ಮಾಯಾಮಂತ್ರಗಳ ಚಿತ್ರಆಶಾಸುಂದರಿ

ಶ್ರೀ ಶೈಲ ಮಹಾತ್ಮೆಯಲ್ಲಿಬಾಲನಟಿಯಾಗಿಜಯಲಲಿತ ಮಾಯಾಮಂತ್ರಗಳ ಚಿತ್ರಆಶಾಸುಂದರಿ ಶ್ರೀಶೈಲ ಮಹಾತ್ಮೆಚಿತ್ರದಲ್ಲಿ ಪಾತ್ರವೊಂದನ್ನು ಮಾಡಿದ್ದ ನಟಿ ಸಂಧ್ಯಾ ಮದರಾಸಿನ ಸ್ಟುಡಿಯೊದಲ್ಲಿಚಿತ್ರೀಕರಣ ನಡೆಯುತ್ತಿದ್ದ ವೇಳೆ ತಮ್ಮ ಮಗಳನ್ನು ಕರೆದುಕೊಂಡು ಹೋಗಿದ್ದರು. ಬೆಂಗಳೂರಿನ ಕಾನ್ವೆಂಟ್‌ಒಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಈ ಬಾಲೆ ಚಿತ್ರೀಕರಣವನ್ನುಕುತೂಹಲದಿಂದ ನೋಡುತ್ತಾ ಕುಳಿತಿದ್ದಳು.ಬಾಲನಟಿಯಾಗಿನೃತ್ಯದ ಪಾತ್ರ ನಿರ್ವಹಿಸಬೇಕಾಗಿದ್ದ ಶಾಲಾ ಬಾಲಕಿಯೊಬ್ಬಳು ಅಂದಿನ ಚಿತ್ರೀಕರಣಕ್ಕೆಗೈರುಹಾಜರಾಗಿದ್ದುಚಿತ್ರದ ನಿರ್ಮಾಪರು ಹಾಗೂ ನಿರ್ದೇಶಕರಲ್ಲಿ ತಳಮಳ ತಂದಿತ್ತು. ನಿರ್ದೇಶಕಆರೂರು ಪಟ್ಟಾಭಿಯವರಕಣ್ಣಿಗೆಚಿತ್ರೀಕರಣ ವೀಕ್ಷಿಸುತ್ತಿದ್ದ ಬಾಲಕಿ ಕಾಣಿಸಿದಳು. ತಾಯಿ ಸಂಧ್ಯಾಅವರೊಂದಿಗೆ ಮಾತನಾಡಿ ಪಾತ್ರ ನಿರ್ವಹಿಸಲು ಸಮ್ಮತಿ ಪಡೆದು, ಬಣ್ಣ ಹಚ್ಚಿಸಿದರು. ಆ ಬಾಲಕಿ…

ಅಪರೂಪದ ಕೋಟಿಲಿಂಗಗಳ ಪ್ರಾಚೀನ ತಾಣ ಓಹಿಲಾಪುರ

 ಅಪರೂಪದ ಕೋಟಿಲಿಂಗಗಳ ಪ್ರಾಚೀನ ತಾಣ ಓಹಿಲಾಪುರ ೧೯೯೮ನೇ ಇಸವಿ, ಕನ್ನಡ ವಿಶ್ವವಿದ್ಯಾಲಯದ ವಸ್ತುಸಂಗ್ರಹಾಲಯಕ್ಕಾಗಿ ಶಿಲ್ಪ, ಶಾಸನ, ವೀರಗಲ್ಲು ಮೊದಲಾದ ಪ್ರಾಚೀನ ವಸ್ತುವಿಶೇಷಗಳನ್ನು ಸಂಗ್ರಹಿಸಿ ತರಲೆಂದೇ ನೇಮಕವಾದ ತಂಡ ನಮ್ಮದು. ತಂಡದಲ್ಲಿ ನನ್ನನ್ನು ಸೇರಿದಂತೆ ವಾಸುದೇವ ಬಡಿಗೇರ, ಎಂ. ಕೊಟ್ರೇಶ ಮತ್ತು ನೆರಗಲ್ಲಪ್ಪ ಸೇರಿದ್ದೆವು. ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯ ಹಳ್ಳಿಗಳನ್ನು ಸುತ್ತುತ್ತಾ ಅಲ್ಲಿನ ದೇವಾಲಯ, ಮಠ-ಮಂದಿರ, ಕಚೇರಿಗಳನ್ನು ಕಂಡು ಅಲ್ಲಿನ ಮುಖಂಡರು, ಅಧಿಕಾರಿಗಳು ಮತ್ತು ಸ್ಥಳೀಯ ಜನರನ್ನು ಒಪ್ಪಿಸಿ, ಓಲೈಸಿ ವಸ್ತುಗಳನ್ನು ಸಂಗ್ರಹಿಸುವ ಕಾಯಕವದು. ಈ ಸಂದರ್ಭದಲ್ಲಿ…

ಸಂಗೀತದ ಅನನ್ಯ ಉಪಾಸಕನ ಅಸಂಗತ ಬದುಕು..!

ಸಂಗೀತದ ಅನನ್ಯ ಉಪಾಸಕನ ಅಸಂಗತ ಬದುಕು..! “ನೀರ ಮೇಲಣ ಗುಳ್ಳೆ ನಿಜವಲ್ಲೊ ಹರಿಯೇ” ಎನ್ನುವ ಸುಶ್ರಾವ್ಯ ಕಂಠವೊಂದು ಕಿವಿಗಳನ್ನು ಅಪ್ಪಳಿಸಲು, ಜಳಕಕ್ಕೆಂದು ಬಚ್ಚಲು ಮನೆಗೆ ನಡೆದಿದ್ದವನು ಹಿಂತಿರುಗಿ ಓಡುತ್ತಾ ಸೀದಾ ಮುಂಬಾಗಿಲಿಗೆ ಬಂದು ನಿಂತು, ಕತ್ತನ್ನು ನೀಳವಾಗಿ ಹೊರಚಾಚಿ, ರಸ್ತೆಯ ಎರಡೂ ಬದಿಗೆ ದೃಷ್ಟಿ ಹರಿಸುತ್ತಾ, ಬಾಗಿಲ ಎಡತೋಳಿಗೆ ದೇಹದ ಅಷ್ಟೂ ಭಾರವನ್ನು ಹಾಕಿ ಒರಗಿ ನಿಂತೆನು. ನಾನು ಊಹಿಸಿದಂತೆಯೇ ಸುಮಾರು ಐವತ್ತನ್ನು ಮೀರಿದ ವಯಸ್ಸಿನ ಕೃಶಕಾಯದ, ಗೌರವರ್ಣದ, ಬಣ್ಣದ ಪಟ್ಟೆಪಟ್ಟೆ ಲುಂಗಿ ಮತ್ತು ಬಿಳಿಯ ಬನಿಯನ್…

ಅಹಲ್ಯೆ: ರೂಪಾಂತರಗಳ ಬಹುರೂಪೀ ಪಾತ್ರ

ಅಹಲ್ಯೆ: ರೂಪಾಂತರಗಳ ಬಹುರೂಪೀ ಪಾತ್ರ ಪ್ರಭುನಿಷ್ಟ ಚರಿತ್ರೆ ಬರೆದವರು ಯಾರು? ಯಾಕೆ ಈ ಚರಿತ್ರೆಯೂ ಉತ್ಪಾದನಾ ಅಂಶವನ್ನ ಒಳಗೊಂಡರೂ ಉತ್ಪಾದನೆಯ ಹಂಚಿಕೆ ಮತ್ತು ಉತ್ಪಾದನೆಗಾಗಿ ನಿಗಧಿಯಾದ ಕೂಲಿಯ ವಿವರಗಳಲ್ಲಿ ಗಂಡು ಹೆಣ್ಣೆಂಬ ಲಿಂಗ ತಾರತಮ್ಯ ಮಾಡಲಾಯಿತು? ನಾವು ಚರಿತ್ರೆಯನ್ನ ಭೂಮಿ ಸಂಬಂಧದ ಉತ್ಪನ್ನಗಳ ನೆಲೆಗಳಿಂದ ನೋಡಿದರೂ ಭೂಮಿಯ ಮೂಲವಾಗಿಯೇ ಗ್ರಹಿಸುವ ಮಹಿಳೆಗೆ ಭೂಮಿಯ ಹಕ್ಕು ಆಗ ಯಾಕಿರಲಿಲ್ಲ ಎಂಬುದೇ ಗಮನಾರ್ಹ. ಪಾಲನೆ ಮತ್ತು ಪೋಷಣೆಯ ಸಮಯದಲ್ಲಿ ಅರೆ ಉದ್ಯೋಗಿಯಾಗಿರಬೇಕಾದ ಮಹಿಳೆ ಕೂಲಿ ವಿಚಾರದಲ್ಲೂ ತಾರತಮ್ಯ ಅನುಭವಿಸುತ್ತಿದ್ದಾಳೆ.ಬುಡಕಟ್ಟು ಕಾಲದ…

ಕರ್ನಾಟಕದಲ್ಲೀಗ ಮೊಟ್ಟೆ ರಾಜಕೀಯ

ಕಲ್ಯಾಣ ಕರ್ನಾಟಕದ ಏಳೂ ಜಿಲ್ಲೆಗಳಲ್ಲಿ ಪ್ರಾಥಮಿಕ ಮಾಧ್ಯಮಿಕ ಶಾಲಾ ಮಕ್ಕಳು ಪೌಷ್ಟಿಕಾಂಶದ ಕೊರತೆಯಿಂದ ನರಳುತ್ತಿದ್ದು ಅದರ ನಿವಾರಣೆಗೆ ಬೇಯಿಸಿದ ಮೊಟ್ಟೆಯನ್ನು ಕೊಡುವ ಸರ್ಕಾರದ ಕಾರ್ಯಕ್ರಮಕ್ಕೆ ಕಲ್ಲು ಹಾಕುವ ಯತ್ನಕ್ಕೆ ಕೆಲವರು ಮುಂದಾಗಿದ್ದಾರೆ. ಆಹಾರ ಸಂಸ್ಕೃತಿ ವಿಚಾರದಲ್ಲಿ ಧಾರಾಳ ಸ್ವಾತಂತ್ರ್ಯ ಕೊಡಬೇಕಾಗಿರುವ ಜಾಗದಲ್ಲಿ ಈ ಬಗೆಯ ವರ್ತನೆ ಅಸಹ್ಯಕರದ್ದಾಗಿದೆ. ಇದನ್ನು ಸರ್ಕಾರ ಮುಲಾಜಿಲ್ಲದೆ ನಿವಾರಿಸಿ ದಿಟ್ಟ ಹೆಜ್ಜೆಯನ್ನಿಡುವುದು ಅಗತ್ಯ. ಕರ್ನಾಟಕದಲ್ಲೀಗ ಮೊಟ್ಟೆ ರಾಜಕೀಯ ಹೊರಗಿನಿಂದ ಒಡೆದರೆ ಜೀವ ಹಾನಿ; ಒಳಗಿನಿಂದ ಒಡೆದರೆ ಜೀವ ವಿಕಾಸ. ಇದು ಮೊಟ್ಟೆಯ ಕಥೆ.…

ಜೈಲುಗಳಲ್ಲೂ ಜಾತಿಭೇದ- ಗಹಗಹಿಸಿರುವ ಮನುವಾದ

ಜೈಲುಗಳಲ್ಲೂ ಜಾತಿಭೇದ- ಗಹಗಹಿಸಿರುವ ಮನುವಾದ ‘ಜಾತಿಗೆ ಇಂದಿಗೂ ಸಮರ್ಥಕರಿದ್ದಾರೆ ಎನ್ನುವ ಸಂಗತಿಯೇ ಕರುಣಾಜನಕ. ಶ್ರಮ ವಿಭಜನೆಗೆ ಮತ್ತೊಂದು ಹೆಸರೇ ಜಾತಿ ವ್ಯವಸ್ಥೆಯಾಗಿದ್ದು, ಶ್ರಮವಿಭಜನೆಯು ನಾಗರಿಕ ಸಮಾಜದ ಹೆಗ್ಗುರುತಾಗಿದ್ದು, ಈ ವ್ಯವಸ್ಥೆಯಲ್ಲಿ ತಪ್ಪೇನೂ ಇಲ್ಲ ಎಂದು ವಾದಿಸಲಾಗುತ್ತದೆ. ವಾಸ್ತವದಲ್ಲಿ ಜಾತಿ ವ್ಯವಸ್ಥೆಯು ಶ್ರಮ ವಿಭಜನೆ ಮಾತ್ರವೇ ಅಲ್ಲ, ಶ್ರಮಿಕರ ವಿಭಜನೆಯೂ ಹೌದು. ಈ ಶ್ರಮವಿಭಜನೆಯಲ್ಲಿ ವ್ಯಕ್ತಿಯ ಆಯ್ಕೆಗೆ, ಭಾವನೆಗೆ, ಆದ್ಯತೆಗೆ ಅವಕಾಶವೇ ಇಲ್ಲ. ವಿಧಿವಾದವೇ ಈ ವಿಭಜನೆಯ ಆಧಾರ’. ‘ಹಿಂದೂ ಸಮಾಜವು ಏಣಿ ಅಥವಾ ಪ್ರವೇಶ ದ್ವಾರವೇ ಇಲ್ಲದ…

ಗಡಿಭಾಗಗಳಲ್ಲಿ ಡ್ರಗ್ಸ್ ಮಾಫಿಯಾ ಟೆರರಿಸಂ!!?

ಗಡಿಭಾಗಗಳಲ್ಲಿ ಡ್ರಗ್ಸ್ ಮಾಫಿಯಾ ಟೆರರಿಸಂ!!? Writing; ಪರಶಿವ ಧನಗೂರು ಹೌದು ಭಾರತದ ಮೇಲೆ ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನದ ಭಯೋತ್ಪಾದಕರು ಸೇರಿಕೊಂಡು ಡ್ರಗ್ಸ್ ಮಾಫಿಯಾ ಜಾಲ ವಿಸ್ತರಿಸುವ ಮೂಲಕ ‘ಡ್ರಗ್ಸ್ ಟೆರರಿಸಂ!’ ನಡೆಸುತ್ತಿರುವ ಅನುಮಾನ ಮೂಡುತ್ತಿದೆ. ಏಕೆಂದರೆ ಈಗ ಮತ್ತೆ ಗುಜರಾತಿನ ಕರಾವಳಿ ಸಮುದ್ರದ ಗಡಿಯಲ್ಲಿ ಪಾಕಿಸ್ತಾನದ ಕರಾಚಿಯಿಂದ ಬಂದಿಳಿಯಲಿದ್ದ 400ಕೋಟಿ ಮೌಲ್ಯದ ಡ್ರಗ್ಸ್ ಮೂಟೆಗಳನ್ನು ನಮ್ಮ ಕರಾವಳಿ ಕಾವಲು ಪಡೆ ಮತ್ತು ಭಯೋತ್ಪಾದನೆ ನಿಗ್ರಹ ದಳ ಜಂಟಿ ಕಾರ್ಯಾಚರಣೆ ನಡೆಸಿ ದಾಳಿಮಾಡಿ ವಶಪಡಿಸಿಕೊಂಡು…

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ಬೆಳಗಾವಿ ಅಧಿವೇಶನ : ಸಿಎಂ

ಬೆಳಗಾವಿ, ಡಿ,24 :ಉತ್ತರ ಕರ್ನಾಟಕದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಬೆಳಗಾವಿ ಅಧಿವೇಶನವನ್ನು ಸಾರ್ಥಕಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಹಲವಾರು ಜ್ವಲಂತ ಸಮಸ್ಯೆಗಳಿಗೆ ಉತ್ತರ ದೊರೆತಿದೆ. ಉತ್ತರ ಕರ್ನಾಟಕದ ನೀರಾವರಿ ಕ್ಷೇತ್ರದ ಅಭಿವೃದ್ಧಿ ಬದ್ಧವಾಗಿದೆ ಎಂದು ಸರ್ಕಾರದ ನಿರೂಪಿಸಿದೆ. ಈ ನಿಟ್ಟಿನಲ್ಲಿ. ಉತ್ತರ ಕರ್ನಾಟಕದ ಭಾಗಕ್ಕೆ ರೈಲ್ವೆ ಯೋಜನೆಗಳು, ಹೆಸ್ಕಾಂನ ಆರ್ಥಿಕ ಪುನಶ್ಚೇತನ, ಸಸಾಲಟ್ಟಿ ಮತ್ತು ಮಂಟೂರುಗಳಿಗೆ ನೀರಾವರಿ ಯೋಜನೆಗೆ ಅನುಮೋದನೆ, ಗುಲ್ಬರ್ಗಾ ಸೇಡಂ ನಲ್ಲಿ…

ಗಂಡುಲಿ ಚಿತ್ರದ ಟ್ರೈಲರ್ ಬಿಡುಗಡೆ

ಕೆಲವರ್ಷಗಳ ಹಿಂದೆ ಇಂಜಿನಿಯರ್ಸ್ ಎಂಬ ಚಿತ್ರ ಬಂದಿತ್ತು. ಅದರ ನಿರ್ದೇಶಕ ಹಾಗೂ ನಾಯಕನೂ ಆಗಿದ್ದ ವಿನಯ್ ರತ್ನಸಿದ್ಧಿ ಅವರೀಗ ಮತ್ತೊಂದು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇನ್ನೇನು ತೆರೆಗೆ ಬರಲು ಅಣಿಯಾಗಿ ನಿಂತಿರುವ ಈ ಚಿತ್ರದ ಹೆಸರು ಗಂಡುಲಿ. ‌ವಿನಯ್ ರತ್ನಸಿದ್ದಿ ಜೊತೆ ನಾಯಕಿಯಾಗಿ ಛಾಯಾದೇವಿ ನಟಿಸಿದ್ದು, ನಾಯಕನ ತಾಯಿಯ ಪಾತ್ರವನ್ನು ಹಿರಿಯ ಕಲಾವಿದೆ ಸುಧಾನರಸಿಂಹರಾಜು ನಿರ್ವಹಿಸಿದ್ದಾರೆ. ಇತ್ತೀಚೆಗಷ್ಟೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಹೆಚ್ಚು ಹೆಚ್ಚು ವೀಕ್ಷಣೆಯಾಗುವ ಮೂಲಕ ಜನರಲ್ಲಿ ಕುತೂಹಲ ಮೂಡಿಸಿದೆ. ಅಲ್ಲದೆ ಚಿತ್ರವನ್ನು ಬರುವ…

ಚಿತ್ರಕಲಾ ಪರಿಷತ್ ನಲ್ಲಿ ‘ಬೆಂಗಳೂರು ಆರ್ಟ ಅಂಡ್ ಕ್ರಾಪ್ಟ್ ಮೇಳ

ಬೆಂಗಳೂರು, ಡಿ, 24: ದೇಶದ ವಿವಿಧ ಭಾಗಗಳಿಂದ ಆಗಮಿಸುವ ಕರಕುಶಲ ಕರ್ಮಿಗಳಿಗೆ ಸೂಕ್ತವಾದ ಮಾರುಕಟ್ಟೆಯನ್ನು ಒದಗಿಸುವ ನಿಟ್ಟಿನಲ್ಲಿ  ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ಪ್ರಯುಕ್ತ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ‘ಬೆಂಗಳೂರು ಆರ್ಟ್ಸ್‌ ಅಂಡ್‌ ಕ್ರಾಫ್ಟ್‌ ಮೇಳ’ವನ್ನು ಆಯೋಜಿಸಲಾಗಿದ್ದು, ನಟಿ ರಕ್ಷಿಕಾ ಶೆಟ್ಟಿ ಶುಕ್ರವಾರ ಚಾಲನೆ ನೀಡಿದರು. ಜನವರಿ 2, 2022 ರ ವರೆಗೆ ಮೇಳ ನಡೆಯಲಿದೆ. ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಬೆಳಗ್ಗೆ 11 ರಿಂದ ಸಂಜೆ 7 ರವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ…

ಶಿಕ್ಷಣ ವ್ಯವಸ್ಥೆಯ ಅಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು: ಸಿಎಂ

ಬೆಳಗಾವಿ, ಡಿ, 22 :ಶಿಕ್ಷಣ ವ್ಯವಸ್ಥೆಯ ಅಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿಯ ಹಿರೇಬಾಗೇವಾಡಿ ಮಲ್ಲಪ್ಪನ ಗುಡ್ಡದ ಹೊಸ ನಿವೇಶನದಲ್ಲಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕಟ್ಟಡಗಳ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಇಂದಿನ ಸವಾಲುಗಳ ಹಾಗೂ ಬದಲಾವಣೆಯ ಯುಗದಲ್ಲಿ ಫ್ಲೆಕ್ಸಿಬಲ್ ಆದ ಶಿಕ್ಷಣ ವ್ಯವಸ್ಥೆ ಅತ್ಯಂತ ಅವಶ್ಯಕ. ಪಠ್ಯದಲ್ಲಿರುವ ವಿದ್ಯೆ ಹಾಗೂ ಜಗತ್ತಿನಲ್ಲಿ ಬಳಕೆಯಾಗುತ್ತಿರುವ ವಿದ್ಯೆಯಲ್ಲಿ ಬಹಳಷ್ಟು ಅಂತರ ಇದೆ. ಇವರೆಡರ ನಡುವೆ…

ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದು ಸಿದ್ದು ವಿರುದ್ಧ ಕಿಡಿಕಾರಿದ ಎಚ್ ಡಿ.ಕೆ

ಬೆಳಗಾವಿ,ಡಿ,22: ಜೆಡಿಎಸ್ ಮುಳುಗುವ ಹಡುಗು ಎಂದು ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಪ್ರತಿಪಕ್ಷ ನಾಯಕರನ್ನು ಹಿಟ್ಲರ್ ಅಸ್ಥಾನದಲ್ಲಿ ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದ ಗೊಬೆಲ್ʼಗೆ ಹೋಲಿಕೆ ಮಾಡಿ ಟಾಂಕ್ ನೀಡಿದ್ದಾರೆ. ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿ ಸಿದ್ದರಾಮಯ್ಯ ಅವರ ಮೇಲೆ ಪ್ರಹಾರ ನಡೆಸಿರುವ ಅವರು; ಸಿದ್ದರಾಮಯ್ಯ ಅವರನ್ನು ʼಗೊಬೆಲಪ್ಪʼ ಮತ್ತು ʼಬ್ರೋಕರಪ್ಪʼ ಎಂದು ಕರೆದಿದ್ದಾರೆ. ಸುಳ್ಳು ಹೇಳುವ ಚಾಳಿಗೆ ಚಿಕಿತ್ಸೆ ಇಲ್ಲ. ʼಸಿದ್ದಕಲೆʼಯ ನಿಷ್ಣಾತರಿಗೆ…

ಮತಾಂತರ ನಿಷೇಧ ಕಾಯ್ದೆಯಲ್ಲಿರುವ ಅಂಶಗಳೇನು; ಇಲ್ಲಿದೆ ವಿವರ

ಬೆಳಗಾವಿ,ಡಿ,21: ವಿಪಕ್ಷಗಳ ವಿರೋಧ ಮತ್ತು ಗದ್ದಲದ ನಡುವೆಯೇ ಕರ್ನಾಟಕ ರಾಜ್ಯ ಸರ್ಕಾರ ಸದನದಲ್ಲಿ ಮತಾಂತರ ನಿಷೇಧ ಕಾಯಿದೆ ಮಂಡಿಸಿದೆ. ಇಷ್ಟಕ್ಕೂ ಏನಿದು ಮತಾಂತರ ನಿಷೇಧ ವಿಧೇಯಕ? ಅದರಲ್ಲಿರುವ ಪ್ರಮುಖ ಅಂಶಗಳೇನು? ಎಂಬ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ. ಮತಾಂತರ ನಿಷೇಧ ಕಾಯಿದೆಯಲ್ಲಿರುವ ಪ್ರಮುಖಾಂಶಗಳು ಬಲವಂತ, ವಂಚನೆ, ಒತ್ತಾಯ ಹಾಗೂ ಆಮಿಷದ ಮೂಲಕ ನಡೆಸುವ ಮತಾಂತರ ಹಾಗೂ ಮದುವೆಯಾಗುವ ಭರವಸೆಯ ಮೂಲಕ ನಡೆಸುವ ಮತಾಂತರಕ್ಕೆ ನಿಷೇಧವಿದೆ.‌ ವ್ಯಕ್ತಿಯು ಆತನ ನಿಕಟಪೂರ್ವ ಧರ್ಮಕ್ಕೆ ಮರು ಮತಾಂತರಗೊಂಡರೆ ಅದನ್ನು ಈ ಅಧಿನಿಯಮದ ಅಡಿಯಲ್ಲಿ…

ಹೊಸ ವರ್ಷಾಚರಣೆಗೆ ನಿರ್ಬಂಧ

ಬೆಳಗಾವಿ,ಡಿ,21: ಕೋವಿಡ್‌-19 ನಿಯಂತ್ರಣದ ಭಾಗವಾಗಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಡಿಸೆಂಬರ್ 30 ರಿಂದ ಜನವರೆ 2 ರವರೆಗೂ ಕೆಲವು ನಿರ್ಬಂಧಗಳನ್ನು ವಿಧಿಸಿದ್ದು, ಹೊಸ ವರ್ಷಾಚರಣೆಗೆ ಅನ್ವಯವಾಗುವಂತೆ ಹೊಸ ಮಾರ್ಗಸೂಚಿಗಳನ್ನು ಮಂಗಳವಾರ ಬಿಡುಗಡೆ ಮಾಡಿದೆ. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಹೊಸ ವರ್ಷಾಚರಣೆಗೆ ಬಹಿರಂಗ ಸಂತೋಷ ಕೂಟಗಳನ್ನು ಆಯೋಜನೆ ಮಾಡುವುದನ್ನು ನಿಷೇಧಗೊಳಿಸಲಾಗಿದೆ ಎಂದು ತಿಳಿಸಿದರು. ಕೊವಿಡ್ ಬೆಳವಣಿಗೆಗಳನ್ನ ಗಮನದಲ್ಲಿಟ್ಟುಕೊಂಡು ಹೊಸವರ್ಷಾಚರಣೆಗೆ ವಿಶೇಷ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದ ಸಿಎಂ, ಹೊಸ ವರ್ಷಾಚರಣೆ ವೇಳೆ ಜನ…

ಬಸವಣ್ಣ ಭಾವಚಿತ್ರಕ್ಕೆ ಮಸಿ ಬಳಿದ ಎಂಇಎಸ್ ಪುಂಡರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

ಬೆಂಗಳೂರು,ಡಿ,21;ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ಬೆಳಗಾವಿ ಜಿಲ್ಲೆಯ ಆಲಿಸಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರಕ್ಕೆ ಮಸಿ ಬಳೆದ ಎಂಇಎಸ್ ಕಾರ್ಯಕರ್ತರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಅಖಿಲ ಭಾರತ ವೀರಶೈವ ಮಹಾಸಭಾ  ಪ್ರತಿಭಟನೆ ನಡೆಸಿತು. ಬೆಂಗಳೂರು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.ಈ ವೇಳೆ ಎಂ ಇಎಸ್ ಪುಂಡರ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಲಾಯಿತು. ಬೆಂಗಳೂರು ಜಿಲ್ಲೆ ಮತ್ತು ಬೆಂಗಳೂರು ಸಿಟಿ ಮತ್ತು ವೀರಶೈವ ಮಹಾಸಭಾ ಯುವ ಘಟಕ ಕರ್ನಾಟಕ ರಾಜ್ಯ ಯುವ ಘಟಕ…

ಜಾತಿ ನಿಂದನೆಗೆ ಕಡಿವಾಣ ಹಾಕಲು ಸರಕಾರ ಕಟ್ಟುನಿಟ್ಟಿನ ಕಾನೂನು ರೂಪಿಸಲು ಸವಿತಾ ಸಮಾಜ ಆಗ್ರಹ

ಬೆಂಗಳೂರು, ಡಿ,21: ಸವಿತಾ ಸಮಾಜದ ಮೇಲೆ ನಡೆಯುತ್ತಿರುವ ಜಾತಿ ನಿಂದನೆ ಅತ್ಯಂತ ನೋವಿನ ಸಂಗತಿಯಾಗಿದೆ. ಈ ಜಾತಿ ನಿಂದನೆ ತಡೆಯುವಂತೆ ಸರಕಾರ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಬೇಕು ಎಂದು ಕರ್ನಾಟಕ ರಾಜ್ಯ ಸವಿತಾ ಸಮಾಜದ ಸರ್ವ ಸದಸ್ಯರ ಸಭೆಯಲ್ಲಿ ಒಕ್ಕೊರಲಿನ ಅಭಿಪ್ರಾಯ ವ್ಯಕ್ತವಾಯಿತು. ಜತೆಗೆ ಸವಿತಾ ಸಮಾಜದ ಸಮುದಾಯಕ್ಕೆ ರಾಜಕೀಯ ಮತ್ತು ಶೈಕ್ಷಣಿಕವಾಗಿ ಅಗತ್ಯ ಮೀಸಲಾತಿಗಳನ್ನು ಕೊಟ್ಟು ಸಮುದಾಯದ ಅಭಿವೃದ್ಧಿಗೆ ಸರಕಾರ ಮುಂದಾಗಬೇಕು ಎಂಬ ಒತ್ತಾಯವೂ ಕೇಳಿ ಬಂತು. ಕರ್ನಾಟಕ ರಾಜ್ಯ ಸವಿತಾ ಸಮಾಜ ಸಂಘವು…

ಎಂಇಎಸ್ ಪುಂಡರಿಂದ ಮತ್ತೇ ಉದ್ಧಟತನ

ಕಲಬುರಗಿ,ಡಿ.೨೧- ಮಹಾರಾಷ್ಟ್ರದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಕಾರ್ಯಕರ್ತರ ಅಟ್ಟಹಾಸ ಮುಂದುವರೆದಿದ್ದು, ಕಲ್ಯಾಣ ಕರ್ನಾಟಕದ ಸಾರಿಗೆ ಬಸ್ ತಡೆದು, ಕಪ್ಪು ಮಸಿ ಬಳಿದು ಕಿಡಿಗೇಡಿಗಳು ಮತ್ತೆ ಉದ್ಧಟತನ ಮೆರೆದಿದ್ದಾರೆ. ಮುಂಬೈನಿಂದ ಕಲಬುರಗಿಗೆ ಬರುತ್ತಿದ್ದ ಸಾರಿಗೆ ಬಸ್ ತಡೆದ ಎಂಇಎಸ್ ಕಿಡಿಗೇಡಿಗಳು, ಬಸ್ ಮೇಲೆ ಜೈ ಶಿವಾಜಿ ಎಂದು ಬರೆದಿದ್ದಾರೆ. ಬಸ್ ಮುಂಭಾಗದಲ್ಲಿ ಎಂಇಎಸ್ ಧ್ವಜ ಕಟ್ಟಿ ಬಸಗೆ ಕಪ್ಪು ಮಸಿ ಬಳಿದಿದ್ದಾರೆ. ನಂತರ ಚಾಲಕನ ಕೈಗೆ ಎಂಇಎಸ್ ಧ್ವಜ ನೀಡಿ ಜೈ ಶಿವಾಜಿ ಎಂದು ಘೋಷಣೆ ಕೂಗುವಂತೆ ಬಲವಂತ…

ಮತಾಂತರ ನಿಷೇಧ ಕಾಯ್ಕೆ ಸಂವಿಧಾನ ಬಾಹಿರ;ಡಿಕೆಶಿ

ಬೆಳಗಾವಿ,ಡಿ,೨೧: ಮತಾಂತರ ನಿಷೇಧ ಕಾಯ್ದೆ ಸಂವಿಧಾನ ಬಾಹಿರವಾಗಿದೆ . ಈ ಕಾಯ್ದೆಯನ್ನು ಕಾಂಗ್ರೆಸ್ ತೀವ್ರವಾಗಿ ವಿರೋಧಿಸುತ್ತದೆ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇದು ರಾಜ್ಯಕ್ಕೆ ಒಂದು ಕಪ್ಪುಚುಕ್ಕೆ ಹೇಳಿದರು. ಇಂದು ವಿಧಾನಸಭೆಯಲ್ಲಿ ಆಡಳಿತ ಪಕ್ಷ ಮತಾಂತರ ನಿಷೇಧ ಕಾಯ್ದೆಯನ್ನ ಮಂಡನೆ ಮಾಡಲಿದ್ದು, ಇದಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿದೆ. ಈ ಕುರಿತು ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸರ್ಕಾರದವರು ರಾಜ್ಯದಲ್ಲಿ ಅಶಾಂತಿ ಮೂಡಿಸಲು ಮತಾಂತರ ನಿಷೇಧ ಕಾಯ್ದೆ ತರುತ್ತಿದ್ದಾರೆ. ಸಂವಿಧಾನದ ವಿರುದ್ಧವಾಗಿ ಇದನ್ನ ತೆಗೆದುಕೊಳ್ಳಲಾಗಿದೆ. ಸುಮ್ಮನೇ ಮಾನಸಿಕವಾಗಿ…

1 34 35 36 37 38 101
Girl in a jacket