ಇದೇ ವರ್ಷ ಮೈಸೂರಿನಲ್ಲಿ ಚಿತ್ರ ನಗರಿ ಕಾಮಗಾರಿ ಪ್ರಾರಂಭ : ಬಸವರಾಜ ಬೊಮ್ಮಾಯಿ
ಬೆಂಗಳೂರು, ಏ,25:ಇದೇ ವರ್ಷ ಮೈಸೂರಿನಲ್ಲಿ ಚಿತ್ರ ನಗರಿ ಕಾಮಗಾರಿಗಳನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಪ್ರಕಟಿಸಿದರು. ನಟಸಾರ್ವಭೌಮ ಡಾ ರಾಜಕುಮಾರ್ ಅವರ 94 ನೇ ಜನ್ಮದಿನಾಚರಣೆ ಹಾಗೂ 2017 ನೇ ದಿನದರ್ಶೀ ವರ್ಷದ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಯಾರೂ ಮನವಿ ಅಥವಾ ಬೇಡಿಕೆ ಸಲ್ಲಿಸದಿದ್ದರೂ ಪ್ರಸಕ್ತ 2022-23 ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ತಾವು 125 ಕನ್ನಡ ಮತ್ತು ಪ್ರಾದೇಶಿಕ ಚಲನಚಿತ್ರಗಳಿಗೆ ಬದಲಾಗಿ 200…