Girl in a jacket

Author kendhooli_editor

ರಾಜ್ಯದ ೨೫ ವಿಧಾನರಪಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು,ನ,೦೯:ಕರ್ನಾಟಕ ವಿಧಾನ ಪರಿಷತ್‌ನ ೨೫ ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ರಾಜ್ಯ ಮೇಲ್ಮನೆಯ ೨೫ ಸ್ಥಾನಗಳಿಗೆ ಡಿಸೆಂಬರ್ ೧೦ರಂದು ಚುನಾವಣೆ ನಡೆಯಲಿದ್ದು ಡಿಸೆಂಬರ್ ೧೪ರಂದು ಫಲಿತಾಂಶ ಪ್ರಕಟವಾಗಿಲಿದೆ. ನವೆಂಬರ್ ೧೬ರಂದು ಮೇಲ್ಮನೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದ್ದು, ನವೆಂಬರ್ ೨೩ರಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದೆ. ನವೆಂಬರ್ ೨೪ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು ನವೆಂಬರ್ ೨೬ ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಡಿಸೆಂಬರ್ ೧೦ ಶುಕ್ರವಾರ ಬೆಳಗ್ಗೆ ೮ರಿಂದ ಸಂಜೆ ೪ರವರೆಗೆ ಮತದಾನ ನಡೆಯಲಿದೆ. ಬೆಂಗಳೂರು ನಗರ,…

ಅಪ್ಪು ಅನ್ನ ಸಂತರ್ಪಣೆಗೆ ಹರಿದು ಬಂದ ಜನಸಾಗರ

ಬೆಂಗಳೂರು,ನ,೦9: ನಾಡಿನಾದ್ಯಂತ ಮತ್ತೆ ಹರಿದು ಬಂದು ಒಂದೆಡೆ ಸೇರಿದ ಅಭಿಮಾನದ ಹೊಳೆ. ಮೇರೆ ಮೀರಿದ ಜಯಘೋಷ, ಅಭಿಮಾನದ ಹರಿವಿಗೆ ಸಾವಿರಾರು ನದಿಗಳು… ಎಂಬ ಹೊಸ ಭಾವನಾತ್ಮಕ ರೂಪಕಕ್ಕೆ ಪುನೀತ್ ಪುಣ್ಯಸ್ಮರಣೆಯ ೧೨ನೇ ದಿನ ಸಾಕ್ಷಿಯಾಯಿತು ಪುಣ್ಯಸ್ಮರಣೆಯ ಅಂಗವಾಗಿ ಸಾರ್ವಜನಿಕ ಅನ್ನಸಂತರ್ಪಣೆ ನಗರದ ಅರಮನೆ ಮೈದಾನದ ‘ತ್ರಿಪುರವಾಸಿನಿ’ ಅಂಗಣದಲ್ಲಿ ನಡೆಯಿತು. .ಪುನೀತ್ ಪತ್ನಿ ಅಶ್ವಿನಿ, ನಟ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಅಭಿಮಾನಿಗಳಿಗೆ ಊಟ ಬಡಿಸಿದರು. ಬಳಿಕ ಶಿವರಾಜ್‌ಕುಮಾರ್ ರಕ್ತದಾನ ಮಾಡಿದರು. ಅನ್ನಸಂತರ್ಪಣೆಗೆ ಚಾಲನೆ ನೀಡಿದ ಬಳಿಕ ಭಾವುಕರಾದ…

ಪತ್ರಕರ್ತರ ರಾಜ್ಯ ಸಮ್ಮೇಳನ: ಸಿಎಂರಿಂದ ಲಾಂಚನ ಬಿಡುಗಡೆ

ಬೆಂಗಳೂರು, ನ,08: ಇದೇ ನ. 27 ರಂದು ಕಲಬುರಗಿಯಲ್ಲಿ ನಡೆಯಲಿರುವ 36ನೆಯ ಪತ್ರಕರ್ತರ ರಾಜ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿಂದು ಬಿಡುಗಡೆಗೊಳಿಸಿದರು. ಸಮ್ಮೇಳನದ ದಿನಾಂಕ ನಿಗದಿಗೊಳಿಸಿ ಲಾಂಛನ ಬಿಡುಗಡೆಗೊಳಿಸಿದ ಅವರು, ಸಮ್ಮೇಳನದ ಯಶಸ್ವಿ ಗೆ ಸರ್ಕಾರದ ಸರ್ವ ನಿಟ್ಟಿನ ಬೆಂಬಲವಿದೆ ಎಂದರು. ತೊಗರಿ ಕಣಜ ಕಲಬುರಗಿಯಲ್ಲಿ ಸಮ್ಮೇಳನ ನಡೆಯುತ್ತಿರುವುದು ಖುಷಿ ವಿಷಯ. ಸಮ್ಮೇಳನದ ಉದ್ಘಾಟನೆ ಸಂದರ್ಭದಲ್ಲೇ ಕಲಬುರಗಿ ಪತ್ರಿಕಾ ಭವನದ ಮೊದಲ ಮಹಡಿ ಸಹ ಉದ್ಘಾಟನೆ ಸಹ ನೆರವೇರಿಸಲಾಗುವುದು…

2 ತಿಂಗಳಲ್ಲಿ ಪೂರ್ಣಪ್ರಮಾಣದ ಐಬಿಎಂ ಮೈಸೂರು ಕ್ಯಾಂಪಸ್ ಆರಂಭ: ಅಶ್ವತ್ಥನಾರಾಯಣ

ಬೆಂಗಳೂರು,ನ,08: ಸಾಫ್ಟ್ ವೇರ್ ಎಂಜಿನಿಯರಿಂಗ್, ವಿನ್ಯಾಸ ಮತ್ತು ಅನಲಿಟಿಕ್ಸ್ ಗಳಲ್ಲಿ ಪರಿಣತಿ ಹೊಂದಿರುವ ಐಬಿಎಂ ಸಮೂಹದ `ಕ್ಲೈಯಂಟ್ ಇನ್ನೋವೇಶನ್ ಸೆಂಟರ್’ಗೆ (ಸಿಐಸಿ) ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸೋಮವಾರ ಸಾಂಕೇತಿಕವಾಗಿ ಚಾಲನೆ ನೀಡಿದರು. ವಿಕಾಸಸೌಧದಲ್ಲಿ ಈ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ಈ ಅತ್ಯಾಧುನಿಕ ಕೇಂದ್ರವು ಮೈಸೂರಿನಿಂದ ತನ್ನ ಚಟುವಟಿಕೆಗಳನ್ನು ನಡೆಸಲಿದ್ದು, ಎರಡು ತಿಂಗಳಲ್ಲಿ ಐಬಿಎಂ ಸಮೂಹವು ಮೈಸೂರಿನಲ್ಲೂ ತನ್ನ ಕಚೇರಿಯನ್ನು ಆರಂಭಿಸಲಿದೆ. ಈ ಕೇಂದ್ರವು ರಾಜ್ಯದ…

ಬಿಜೆಪಿಯವರು ಕೊಳಕರು, ಜಾತಿವಾದಿಗಳು;  ಸಿದ್ಧರಾಮಯ್ಯ ಕಿಡಿ

ಮಂಡ್ಯ,ನ,8: ಬಿಜೆಪಿಯವರಂತಹ ಕೊಳಕರು, ಜಾತಿವಾದಿಗಳು ಇನ್ಯಾರೂ ಇಲ್ಲ.‌ ಸಂವಿಧಾನ ಬದಲಾವಣೆ ಮಾಡ್ತೀನಿ ಎಂದು ಹೇಳಿದವರ ಪಕ್ಷಕ್ಕೆ ಹಲವರು ಹೋಗ್ತಿದ್ದಾರೆ. ಎಂದು ನಾನು ಭಾಷಣ ಮಾಡಿದ್ದೆ. ಆದರೆ ಬಿಜೆಪಿಯವರು ನನ್ನ ಹೇಳಿಕೆ ತಿರುಚಿ ಅಪಪ್ರಚಾರ ಮಾಡ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದರು. ಮಂಡ್ಯದ ಕನಕ ಭವನದ ಆವರಣಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವರಸಿದ್ಧಿ ವಿನಾಯಕ ದೇವಾಲಯ ಹಾಗೂ ಅತಿಥಿ ಗೃಹ ಉದ್ಘಾಟನೆ ನೆರವೇರಿಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು.. ನನ್ನ ಪ್ರತಿಕೃತಿ ಸುಟ್ಟ…

ಮುಂಬೈ ಪ್ರದೇಶಕ್ಕೆ ಕಿತ್ತೂರು ಕರ್ನಾಟಕ ನಾಮಕರಣಕ್ಕೆ ಒಪ್ಪಿಗೆ

ಬೆಂಗಳೂರು,ನ,08:_ಮಬೈ ಕರ್ನಾಟಕ ಭಾಗವನ್ನು ಕಿತ್ತೂರು ಕರ್ನಾಟಕ ವೆಂದಿ ನಾಮಕರಣ ಮಾಡಲು ಇಂದು ನಡೆದ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಕುರಿತಂತೆ ಸಚಿವ ಸಂಪುಟ ಸಭೆಯ ನಂತರ  ಸುದ್ದಿಗಾರರೊಂದಿಗೆ ಮಾಹಿತಿ ನೀಡಿದಂತ ಸಚಿವ ಜೆಸಿ ಮಾಧುಸ್ವಾಮಿಯವರು, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬಿಜಾಪುರ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳ ಪ್ರದೇಶಗಳನ್ನು ಕಿತ್ತೂರು ಕರ್ನಾಟಕ ಪ್ರದೇಶ ಎಂದು ನಾಮಕರಣ ಮಾಡುವ ಪ್ರಸ್ತಾವನೆಯನ್ನು…

ಬೆಂಗಳೂರಿನಲ್ಲಿ ಆಟೋದರ ಏರಿಕೆ

ಬೆಂಗಳೂರು,ನ,08: ನಗರದಲ್ಲಿ ಆಟೋ ಪ್ರಯಾಣ ದರ ಹೆಚ್ಚಳವಾಗಿದ್ದು, ಕನಿಷ್ಠ ದರ 25 ರೂಪಾಯಿಂದ 30 ರೂ.ಗೆ ಏರಿಕೆಯಾಗಿದೆ. ನಂತರ ಪ್ರತಿ ಕಿಲೋಮೀಟರ್​ಗೆ 15 ರೂ.ಗೆ ಹೆಚ್ಚಳವಾಗಿದೆ. ಈ ಮೊದಲು ಪ್ರತಿ ಕಿಲೋಮೀಟರ್​ಗೆ 13 ರುಪಾಯಿ ಇತ್ತು. ಇದನ್ನು 15 ರುಪಾಯಿಗೆ ಏರಿಕೆ ಮಾಡಲಾಗಿದೆ. ಡಿಸೆಂಬರ್ 1 ರಿಂದಲೇ ಹೊಸ ದರ ಅನ್ವಯವಾಗುತ್ತದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ತಿಳಿಸಿದೆ. 20 ಕೆಜಿ ಮೇಲ್ಪಟ್ಟ ಲಗೇಜ್‌ಗೆ 5 ರೂಪಾಯಿ ಬಾಡಿಗೆ ಹಣ ನಿಗದಿಪಡಿಸಲಾಗಿದೆ. 20 ಕೆಜಿ ಮೇಲ್ಪಟ್ಟ ಲಗೇಜ್‌ಗೆ…

ರಾಷ್ಟ್ರಪತಿಗಳಿಂದ ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ನವದೆಹಲಿ,ನ,08:ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಷ್ಟ್ರಪತಿ ರಮನಾಥ ಕೋವಿಂದ್ ಅವರು ಇಂದು ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಸಾಧಕರಿಗೆ ರಾಷ್ಟ್ರಪತಿ ರಮನಾಥ್ ಕೋವಿಂದ್ ಪ್ರಶಸ್ತಿ ಪ್ರದಾನ ಮಾಡಿದರು. ಈ ವರ್ಷ 119 ಮಂದಿ ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದರಲ್ಲಿ 7 ಪದ್ಮವಿಭೂಷಣ, 10 ಪದ್ಮಭೂಷಣ ಮತ್ತು 102 ಪದ್ಮಶ್ರೀ ಪ್ರಶಸ್ತಿಗಳು ಇವೆ. ರಾಜ್ಯದಿಂದ ಸಮಾಜಸೇವಕ ಅಕ್ಷರ ಸಂತ ಹರೇಕಳ ಹಾಜಬ್ಬಿ, ಪರಸರಪ್ರೇಮಿ ತುಳಸಿ ಗೋವಿಂದೇಗೌಡರಿಗೆ ಹಾಗೂ ಮಾಜಿ ಹಾಕಿಪಟು ಎಂಪಿ…

ಇಂದಿನಿಂದ ಹೋಟೆಲ್ ದರಗಳ ಹೆಚ್ಚಳ

ಬೆಂಗಳೂರು ,08: ದಿನಕಳೆದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಜೀವನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ. ಇದಕ್ಕೆ ಸಾಕ್ಷಿ ಎಂಬಂತೆ ಗ್ಯಾಸ್ ಸಿಲಿಂಡರ್ ದರಗಳು ಏರಿಕೆ ಬೆನ್ನಲ್ಲೆ ಇಂದಿನಿಂದ ನಗರದಲ್ಲಿ ಹೋಟೆಲ್‌ಗಳಲ್ಲಿ ಕಾಫಿ, ತಿಂಡಿ, ಊಟಗಳ ದರ ಹೆಚ್ಚಿಸಲು ರಾಜ್ಯ ಹೋಟೆಲ್ ಅಸೋಸಿಯೇಷನ್ ಮುಂದಾಗಿದೆ. ಪ್ರತಿಯೊಂದು ಆಹಾರ ಉತ್ಪನ್ನದ ಮೇಲೆ ಕನಿಷ್ಠ 10% ಹೆಚ್ಚಳ ಮಾಡುವ ಬಗ್ಗೆ ಅಸೋಸಿಯೇಷನ್ ನಿರ್ಧರಿಸಿದೆ. ಈ ಸಂಬಂದ ಕೆಲ ದಿನಗಳಿಂದ ಚಿಂದನೆ ನಡೆಯುತ್ತಿದೆ. ಮಹೋಲೆಟಲ್ ಮಾಲೀಕರ ಸಂಗದ ಜೊತೆ ಸಹಲವಾರು ಸುತ್ತಿನ ಸಬೆಗಳು…

ಗ್ರಾಮೀಣ ಪ್ರದೇಶದಲ್ಲಿನ ನಾಟ್ಯಕಲಾ ಸಂಘಗಳ ಬವಣೆ

ಗ್ರಾಮೀಣ ಪ್ರದೇಶದಲ್ಲಿನ ನಾಟ್ಯಕಲಾ ಸಂಘಗಳ ಬವಣೆ ನಾನು ಹೈಸ್ಕೂಲಿನ ಮೊದಲನೇ ವರ್ಷದಲ್ಲಿದಾಗ ನಮ್ಮೂರಿಗೆ ಆಗಮಿಸಿದ ಉತ್ತರಕರ್ನಾಟಕ ಮೂಲದ ಸಂಗಮೇಶ್ವರ ನಾಟ್ಯ ಕಲಾಸಂಘವು ಬಯಲುಸೀಮೆಯ ಬರಡುಭೂಮಿಗೆ ಕಲಾಗಂಗೆಯನ್ನು ಹರಿಸಿದ ಭಗೀರಥಸ್ವರೂಪದ ಉಜ್ವಲಪ್ರಯತ್ನಕ್ಕೆ ಪ್ರೇರಕರೂಪಿಯಾಗಿತ್ತು. ಆ ಹೊತ್ತು ಕಲೆಯ ವಿಷಯದಲ್ಲಿ ನಮ್ಮೂರು ಬಡತನದಿಂದ ಬಳಲುತ್ತಿತ್ತು ಎಂದೇ ಹೇಳಬೇಕು. ಆರ್ಥಿಕವಾಗಿ ಸಬಲವಲ್ಲದ ಊರೊಂದು ಸಾಂಸ್ಕೃತಿಕವಾಗಿ ಶ್ರೀಮಂತ ಎಂದು ಕರೆಸಿಕೊಳ್ಳುವ ಸಾಧ್ಯತೆಗಳು ತೀರಾ ಕಡಿಮೆ ಎಂದೇ ನಾನು ಭಾವಿಸುತ್ತೇನೆ. ಹೊಟ್ಟೆ ತುಂಬಾ ಉಂಡು, ಮೈತುಂಬಾ ಬಟ್ಟೆ ಹೊದ್ದುಕೊಂಡ ತರುವಾಯವೆ ಮನುಷ್ಯಜೀವ ಕಲೆಯ ನೆಲೆಯೊಂದನ್ನು…

ನಿರುದ್ಯೋಗ ಸಮಸ್ಯೆಗೆ ಮನೋಸ್ಥಿತಿಯೂ ಕಾರಣ!

ಚಿದಂಬರ ಜೋಶಿ,ಚಿಕಾಗೂ. ಚಿದಂಬರ ಜೋಶಿ ಅವರು ಮೂಲತಃ ರಾಯಚೂರು ಜಿಲ್ಲೆಯ, ಗಂಗಾವತಿಯವರು. ಪ್ರಸ್ತುತ ಅನಿವಾಸಿ ಭಾರತೀಯ. ಕಳೆದ ೩ ದಶಕಗಳಿಂದ ಉತ್ತರ ಅಮೆರಿಕಾದ ಚಿಕಾಗೊದಲ್ಲಿ ನೆಲಿಸಿದ್ದಾರೆ. ಅವರ ಕನ್ನಡ ಪ್ರೇಮ ಇವತ್ತಿಗೂ ಮಾಸಿಲ್ಲ. ಅವರ ವಿಶಿಷ್ಟ ಚಿಂತನೆ ಹಾಗೂ ಬರವಣಿಗೆಯ ಶೈಲಿ, ಓದುಗರ, ಕೇಳುಗರ ವಿಚಾರಶಕ್ತಿಯನ್ನು ಪ್ರಚೋದಿಸುತ್ತವೆ, ಸವಾಲು ಒಡ್ಡುತ್ತವೆ.  ಅವರು ನಿರುದ್ಯೋಗ ಸಮಸ್ಯೆ ಕುರಿತು ಬರೆದಿದ್ದಾರೆ ನಿರುದ್ಯೋಗ ಸಮಸ್ಯೆಗೆ ಮನೋಸ್ಥಿತಿಯೂ ಕಾರಣ.! ಈ ದಿನ ನಾನು, ಭಾರತದಲ್ಲಿ ಬೆಳೆಯುತ್ತಿರುವ ಒಂದು ಅಗಾಧ ಸಮಸ್ಯೆ, ಒಂದು…

ಮನೋರಂಜನೆಯ ಜಿಗಿತಗಳ ಹಿಂದೆ..

ಮನೋರಂಜನೆಯ ಜಿಗಿತಗಳ ಹಿಂದೆ.. ಹಿಂದೆ ಬಯಲೆಂಬೋ ಪಾಠಶಾಲೆಯಂತಿದ್ದ ಹಳ್ಳಿಗಳ ಬಯಲಾಟಗಳು ಹಬ್ಬ ಬಂದಾಗ ಊರ ಎದೆಯ ಭಾಗದಲ್ಲಿ ಎಲ್ಲರಿಗೂ ಮೊದಲೆಂಬಂತೆ ಚಾಪೆಹಾಸಿ ಜಾಗ ಗೊತ್ತುಮಾಡಿಕೊಂಡು ಸಂಭ್ರಮ ಹಂಚಿಕೊಳ್ಳುತ್ತಿದ್ದ ನಮಗೆ ಮೆಲ್ಲಗೆ ಜಾತ್ರೆಗಳಲ್ಲಿ ಸಾಮಾಜಿಕ ನಾಟಕಗಳೆಂಬ ಕಂಪನಿ ಟೆಂಟುಗಳು ಮನೋರಂಜನೆಯ ಮೂಲವಾಗತೊಡಗಿದವು.ಅಭಿನಯದ ದೃಷ್ಟಿಯಲ್ಲಿ ಬಯಲಾಟದ ನಟರು ಮಾಡುತಿದ್ದ ಮೋಡಿ ಯಾಕೋ ಏನೋ ಹಳ್ಳಿ ಒಳಗಿನ ಸಾಮಾಜಿಕ ನಾಟಕಗಳ ನಟರು ಮಾಡುತ್ತಿರಲಿಲ್ಲ.ಈ ನಾಟಕಗಳ ನಟರು ಉಡುಪಿಗೆ,ಮೇಕಪ್ಪಿಗೆ,ಸೆಟ್ ಗೆ ಮಹತ್ವ ನೀಡಿದಷ್ಟು ನಟನೆಯ ವೈವಿಧ್ಯಕ್ಕೆ ಮಹತ್ವ ನೀಡುತ್ತಿರಲಿಲ್ಲ.ಕೆಲವು ನಾಟಕಗಳ ನಟರಂತೂ ದೂರದ…

ಜೆಡಿಎಸ್: ಸೋತ ಪ್ರಯೋಗ

ಪಶ್ಚಿಮ ಬಂಗಾಳದಲ್ಲಿ ಪ್ರಾದೇಶಿಕ ಪಕ್ಷ ತೃಣಮೂಲ ಕಾಂಗ್ರೆಸ್‌ನೊಂದಿಗೆ ಕೈಜೋಡಿಸಿರುವ ಮುಸ್ಲಿಂ ಸಮುದಾಯ ಕರ್ನಾಟಕದಲ್ಲಿ ಜೆಡಿಎಸ್ ಜೊತೆ ನಿಂತೀತೆಂಬ ಮಾಜಿ ಸಿಎಂ ಕುಮಾರಸ್ವಾಮಿಯವರ ಲೆಕ್ಕಾಚಾರ ಸಿಂದಗಿ, ಹಾನಗಲ್ ಉಪ ಚುನಾವಣೆಯಲ್ಲಿ ತಲೆಕೆಳಗಾಗಿದೆ. ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ಸಿಗರನ್ನೂ, ಕಮ್ಯೂನಿಸ್ಟರನ್ನೂ ಅಪ್ರಸ್ತುತರನ್ನಾಗಿಸಿರುವ ಮಮತಾ ಬ್ಯಾನರ್ಜಿ, ಬಂಡೆಗಲ್ಲಿನಂತೆ ನಿಶ್ಚಲರಾಗಿದ್ದಾರೆ. ಇಲ್ಲಿ ಆ ಪ್ರಯೋಗ ಅಷ್ಟೆಲ್ಲ ಸುಲಭದ ಕಾರ್ಯವಲ್ಲ. ಜೆಡಿಎಸ್: ಸೋತ ಪ್ರಯೋಗ ಕಲಿಯುವ ಮನಸ್ಸುಳ್ಳವರಿಗೆ ಕಲಿಯಬಹುದಾದ ಪಾಠ, ಸಿಂದಗಿ ಮತ್ತು ಹಾನಗಲ್ ಉಪಚುನಾವಣಾ ಫಲಿತಾಂಶದಲ್ಲಿದೆ. ಈ ಎರಡು ಕ್ಷೇತ್ರದ ಜಯವಾಗಲೀ ಅಪಜಯವಾಗಲೀ ರಾಜ್ಯ…

ಪ್ರಾಚೀನ ಸಂಸ್ಕೃತಿಯ ಬಹುದೊಡ್ಡ ಎಡೆ ಜಟಂಗಿರಾಮೇಶ್ವರ ಬೆಟ್ಟ

ಪ್ರಾಚೀನ ಸಂಸ್ಕೃತಿಯ ಬಹುದೊಡ್ಡ ಎಡೆ ಜಟಂಗಿರಾಮೇಶ್ವರ ಬೆಟ್ಟ ಜಟಂಗಿ ಅಥವಾ ಜಟಂಗಿರಾಮೇಶ್ವರ ಬೆಟ್ಟವು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಅತಿ ಎತ್ತರದ ಶಿಖರ. ಇಲ್ಲಿನ ಬೆಟ್ಟಗಳನ್ನು ಚಿಕ್ಕ ಮತ್ತು ದೊಡ್ಡ ಜಟಂಗಿ ಬೆಟ್ಟಗಳೆಂದು ಕರೆಯುತ್ತಾರೆ. ಚಿಕ್ಕ ಬೆಟ್ಟದ ಮೇಲೆ ಚಾರಿತ್ರಿಕ ಕುರುಹುಗಳಾದ ಅಶೋಕನ ಬಂಡೆಗಲ್ಲು ಶಾಸನ, ಶಿಲಾಶಾಸನ, ವೀರಗಲ್ಲು, ರಾಮೇಶ್ವರ ಮತ್ತಿತರ ಅನೇಕ ಪ್ರಾಚೀನ ದೇವಾಲಯಗಳಿದ್ದರೆ, ದೊಡ್ಡ ಬೆಟ್ಟದ ಮೇಲೆ ಕಾಶೀಪುರಾದಿsಶ್ವರ ದೇಗುಲ, ಜಟಾಯುವಿನ ಸಮಾಧಿ, ವರ್ಣಚಿತ್ರ ಮತ್ತು ಶಾಸನಗಳಿವೆ. ಜಟಂಗಿ ಬೆಟ್ಟಕ್ಕೆ ಅಲ್ಲಿನ ದೇವಾಲಯದ ಹಿನ್ನೆಲೆಯಲ್ಲಿ…

ನ.೧೬ ರಂದು ಬೆಂಗಳೂರಿನಲ್ಲಿ ‘ಪುನೀತ್ ನಮನ’ ಕಾರ್ಯಕ್ರಮ.

ಬೆಂಗಳೂರು,ನ, ೩: ಅಕಾಲಿಕ ಮರಣಕ್ಕೆ ತುತ್ತಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ನಮನ ಸಲ್ಲಿಸಲು ಕನ್ನಡ ಚಿತ್ರೋದ್ಯಮ ನವೆಂಬರ್ ೧೬ ರಂದು ‘ಪುನೀತ್ ನಮನ’ ಕಾರ್ಯಕ್ರಮವನ್ನು ಆಯೋಜಿಸಿದೆ. ಸ್ಯಾಂಡಲ್ ವುಡ್ ವತಿಯಿಂದ ನವೆಂಬರ್ ೧೬ ರಂದು ೩ ಗಂಟೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಪುನೀತ್ ನಮನ ಕಾರ್ಯಕ್ರಮ ನಡೆಯಲಿದ್ದು, ಅಂದು ಸ್ಯಾಂಡಲ್ ವುಡ್ ನಟರು, ಕಲಾವಿದರು, ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿ ನಟ ಅಪ್ಪು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಿದ್ದಾರೆ. ಆದರೆ ಈಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಅವಕಾಶವಿಲ್ಲ ಕೇವಲ…

ಸೋಲು-ಗೆಲುವು ಸಮವಾಗಿ ಸ್ವೀಕರಿಸುವೇ-ಬೊಮ್ಮಾಯಿ

ಬೆಂಗಳೂರು, ನ, ೦೩: “ಯಾವುದೇ ಸಂದರ್ಭದಲ್ಲಿ ಸೋಲು ಮತ್ತು ಗೆಲುವನ್ನು ಸಮವಾಗಿ ಸ್ವೀಕರಿಸುವ ದೃಷ್ಟಿಕೋನ ನಮ್ಮದು,” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಾನಗಲ್ ಮತ್ತು ಸಿಂದಗಿ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶಕ್ಕೆ ಸಂಬಂಧಿಸಿದಂತೆ ವಿವಿಧ ರೀತಿಯ ವ್ಯಾಖ್ಯಾನವಾಗುತ್ತಿದೆ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡಿದರು. “ಸಿಂಧಗಿಯಲ್ಲಿ ಗೆಲುವಿಗೆ ಶ್ರಮಿಸಿದ ಪಕ್ಷದ ನಾಯಕರಿಗೆ, ಕಾರ್ಯಕರ್ತರಿಗೆ ಹಾಗೂ ಮತ ಹಾಕಿದ ಮಹಾಜನತೆಗೆ ಅಭಿನಂದನೆಗಳನ್ನು ಸಲ್ಲಿಸುತ್ತೇವೆ,” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

ಏಕತೆಯನ್ನು ಸಾರುವ ವಿಶಿಷ್ಟ ಹಬ್ಬ ದೀಪಾವಳಿ

ಏಕತೆಯನ್ನು ಸಾರುವ ವಿಶಿಷ್ಟ ಹಬ್ಬ ದೀಪಾವಳಿ ಜಿ ಕೆ ಹೆಬ್ಬಾರ್ ಶಿಕಾರಿಪುರ ದೀಪಗಳ ಹಬ್ಬ ದೀಪಾವಳಿ. ಅನೇಕ ಪುರಾಣ ಇತಿಹಾಸಗಳನ್ನು ಒಳಗೊಂಡಿರುವ ಈ ಹಬ್ಬವನ್ನು ಬಹಳ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ. ಐದು ದಿನಗಳ ಕಾಲ ಆಚರಿಸುವ ದೊಡ್ಡ ಹಬ್ಬ ಇದು. ವರ್ಷದ ಕೊನೆಯಲ್ಲಿ ಬರುವ ಈ ಹಬ್ಬವನ್ನು ಉತ್ತರ ಭಾರತದಲ್ಲಿ ಹೊಸ ವರ್ಷದ ಹಬ್ಬ ಎನ್ನುವ ರೀತಿಯಲ್ಲೂ ಆಚರಿಸುತ್ತಾರೆ. ಮನೆಯನ್ನು ಹಣತೆಯ ದೀಪದಿಂದ ಅಲಂಕರಿಸಿ, ಸಿಹಿ ಭೋಜನ ಹಾಗೂ ಪಟಾಕಿ ಸಿಡಿಸುವುದರ ಮೂಲಕ ಹಬ್ಬದ ಆಚರಣೆ ಸಂಭ್ರಮ-ಸಡಗರದಿಂದ…

ಶ್ರೇಯಾಂಸಿ ಬಹುವಿಘ್ನಾನಿ

ಸಿದ್ಧಸೂಕ್ತಿ: ಶ್ರೇಯಾಂಸಿ ಬಹುವಿಘ್ನಾನಿ. ಒಳ್ಳೆಯದಕ್ಕೆ ಲೆಕ್ಕವಿಲ್ಲದ ತೊಡಕು. ಬಾರ್ ರೆಸ್ಟೋರೆಂಟ್ ತೆರೆಯಲು ಬಲು ಕಷ್ಟವಿಲ್ಲ, ಅವು ಸೊರಗುವುದೂ ಇಲ್ಲ. ಒಂದರ ನಂತರ ಮತ್ತೊಂದು! ಆಶ್ರಮ ಮಠ ಮಂದಿರ ಕಟ್ಟಿ ನೋಡಿ! ಪ್ರಾಯದಲ್ಲಿ ಪ್ರಾರಂಭಿಸಿದವ ಸತ್ತರೂ ಮುಗಿಯದು! ಕುಂಟುತ್ತ ಸೊರಗುತ್ತ ತೆವಳುವುದು! ಉಚಿತ ಶಾಲೆ ವಿದ್ಯಾರ್ಥಿನಿಲಯಕ್ಕೆ ನೆಲವೇ ಗತಿ! ಭರ್ಜರಿ ಶುಲ್ಕ ಪಡೆವ ಕಟ್ಟಡ ಗಗನಚುಂಬಿ! ಋಷಿ ಯಜ್ಞ ಮಾಡಿದ! ರಾಕ್ಷಸ ರಕ್ತಮಾಂಸ ಸುರಿದ! ವಿಶ್ವಾಮಿತ್ರನ ತಪಸ್ಸಿಗೆ ಮೇನಕೆ ಅಡ್ಡಿ! ಹೇಗಾದರೂ ಮಾಡಿ ಒಳ್ಳೆಯದನ್ನು ಕೆಡಿಸಬೇಕೆಂಬ ಛಲ…

ಕರ್ನಾಟಕದಲ್ಲಿ ಪ್ರತಿಯೊಬ್ಬರು ಕನ್ನಡಲ್ಲೇ ವ್ಯವಹರಿಸಬೇಕು-ಬಿ.ಸಿ.ನಾಗೇಶ್

ಬೆಂಗಳೂರು, ನ. ೦೧: ಪ್ರತಿಯೊಬ್ಬರು ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲಿಯೇ ಮಾತನಾಡಬೇಕು. ಕನ್ನಡದಲ್ಲಿಯೇ ಬರೆಯಬೇಕು. ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುವುದು ಹಾಗೂ ಕನ್ನಡ ನಾಡಿನಲ್ಲಿ ವಾಸವಾಗಿರುವ ಕನ್ನಡೇತರ ಬಂಧುಗಳಿಗೆ ಪ್ರೀತಿಯಿಂದ ಕನ್ನಡವನ್ನು ಕಲಿಸುವ ಮೂಲಕ ನಮ್ಮ ನಾಡು-ನುಡಿ, ಸಂಸ್ಕತಿ ಉಳಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅಭಿಪ್ರಾಯಪಟ್ಟರು. ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ೬೬ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ…

1 40 41 42 43 44 102
Girl in a jacket