Girl in a jacket

Author kendhooli_editor

ಕರ್ನಾಟಕದಲ್ಲಿ ಪ್ರತಿಯೊಬ್ಬರು ಕನ್ನಡಲ್ಲೇ ವ್ಯವಹರಿಸಬೇಕು-ಬಿ.ಸಿ.ನಾಗೇಶ್

ಬೆಂಗಳೂರು, ನ. ೦೧: ಪ್ರತಿಯೊಬ್ಬರು ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲಿಯೇ ಮಾತನಾಡಬೇಕು. ಕನ್ನಡದಲ್ಲಿಯೇ ಬರೆಯಬೇಕು. ನಿತ್ಯ ವ್ಯವಹಾರದಲ್ಲಿ ಕನ್ನಡವನ್ನೇ ಬಳಸುವುದು ಹಾಗೂ ಕನ್ನಡ ನಾಡಿನಲ್ಲಿ ವಾಸವಾಗಿರುವ ಕನ್ನಡೇತರ ಬಂಧುಗಳಿಗೆ ಪ್ರೀತಿಯಿಂದ ಕನ್ನಡವನ್ನು ಕಲಿಸುವ ಮೂಲಕ ನಮ್ಮ ನಾಡು-ನುಡಿ, ಸಂಸ್ಕತಿ ಉಳಿಸಬೇಕು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅಭಿಪ್ರಾಯಪಟ್ಟರು. ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ೬೬ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಮುಖ್ಯಮಂತ್ರಿ…

ಭಾಷೆ ಸದೃವಾದರೆ ರಾಜ್ಯ ಶಕ್ತಿಶಾಲಿ-ಸಿಎಂ ಬೊಮ್ಮಾಯಿ

ಬೆಂಗಳೂರು,ನ೦೧: ಎಲ್ಲಿ ಭಾಷೆ ಸದೃಢವಾಗಿರುತ್ತದೆಯೋ ಅಲ್ಲಿ ರಾಜ್ಯ ಶಕ್ತಿಶಾಲಿಯಾಗಿರುತ್ತದೆ. ಕನ್ನಡ ಸಾಹಿತ್ಯವನ್ನು ಇಡೀ ದೇಶಕ್ಕೆ ಮುಟ್ಟಿಸಬೇಕು. ಕನ್ನಡ ಭಾಷೆ ತಿಳಿಯದವರಿಗೆ ಕನ್ನಡ ಭಾಷೆ ಕಲಿಸಬೇಕು. ಕನ್ನಡಿಗರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡಬೇಕು. ಆಗ ಮಾತ್ರ ಕರ್ನಾಟಕ ಮತ್ತು ಕನ್ನಡ ಅಭಿವೃದ್ಧಿಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ. ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ೬೬ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿರುವ ಅವರು, ಕನ್ನಡ ರಾಜ್ಯೋತ್ಸವ ವಿಜೃಂಭಣೆಯಿಂದ ಆಚರಿಸಬೇಕು. ಕನ್ನಡಿಗರು ಪ್ರತಿದಿನವೂ…

ಇಂಗ್ಲೀಷ್ ಮಾತನಾಡುವ ಹುಚ್ಚಿಗೆ ಬೆಳಂಬೆಳಗ್ಗೆಯ ಮನೆಗಳಿಗೆ ಭೇಟಿ

ಇಂಗ್ಲೀಷ್ ಮಾತನಾಡುವ ಹುಚ್ಚಿಗೆ ಬೆಳಂಬೆಳಗ್ಗೆಯ ಮನೆಗಳಿಗೆ ಭೇಟಿ ನನ್ನ ಒಂಬತ್ತನೇ ತರಗತಿಯ ಮಧ್ಯವಾರ್ಷಿಕ ಪರೀಕ್ಷೆಯ ನಂತರದಲ್ಲಿ ತಿಪ್ಪೇರುದ್ರಪ್ಪ ಮೇಷ್ಟ್ರು ನಮ್ಮ ಮನೆಗೆ ಬಂದು ಹೋಗುವ ಪರಿಪಾಠ ಶುರುವಾಯಿತು. ಆಸ್ಪತ್ರೆಯ ತನ್ನ ದಿನನಿತ್ಯದ ಭೇಟಿಯ ಹೊರತಾಗಿಯೂ ಊರ ಹಲವು ಉಳ್ಳವರ ಮನೆಗಳಿಗೆ ಬೆಳಗುಬೈಗುಗಳಲ್ಲಿ ನಿಯಮಿತವಾಗಿ ಭೇಟಿಕೊಡುವ ಸಂಪ್ರದಾಯವನ್ನು ಮೇಷ್ಟ್ರು ನಿವೃತ್ತಿಯ ತದನಂತರದಲ್ಲಿ ತಪ್ಪದೇ ಪಾಲಿಸಿಕೊಂಡು ಬಂದವರೇ. ಮೇಷ್ಟ್ರಿಗೆ ನಾಲಗೆ ಇದ್ದ ಕಾರಣಮಾತ್ರದಿಂದಾಗಿ ಈ ಭೇಟಿಗಳು ಅನೂಚಾನವಾಗಿ ನಡೆಯುತ್ತಿದ್ದವು ಎಂದು ಈಗ ನನಗನ್ನಿಸುತ್ತದೆ. ಮೇಷ್ಟ್ರ ನಾಲಗೆಗೆ ಇದ್ದ ಎರಡು…

ಕ್ರಿಯಾ ಕೇವಲಮುತ್ತರಮ್

‌‌‌‌          ಸಿದ್ಧಸೂಕ್ತಿ: ‌‌‌‌          ಕ್ರಿಯಾ ಕೇವಲಮುತ್ತರಮ್. ಕ್ರಿಯೆಯೇ ಉತ್ತರವಾಗಬೇಕು.ಹೇಗಿದ್ದರೂ ಟೀಕೆ ನಿಂದೆ ತಪ್ಪಿದ್ದಲ್ಲ. ಆ ಕುರಿತ ಚಿಂತೆ, ಪ್ರತಿಮಾತುಗಳು ಸ್ವಲ್ಪಮಟ್ಟಿನ ಫಲ ನೀಡಬಹುದು. ಆದರೆ ಸಾಧನೆಯೇ ಅದಕ್ಕೆ ಸರಿಯಾದ ಪ್ರತ್ಯುತ್ತರ. ಅಸಾಧ್ಯವಾದುದನ್ನು ಸಾಧಿಸಿದಾಗ ಟೀಕೆಕಾರರೂ ಹೊಗಳುವವರಾಗುತ್ತಾರೆ. ಮಾತಿಗಿಂತ ಕೃತಿ ಮುಖ್ಯ. ಮಾತು ಕಡಿಮೆ ದುಡಿಮೆ ಹೆಚ್ಚಿರಲಿ. ಮಾತಾಡುವವರಾಗುವುದಕ್ಕಿಂತಲೂ ಹೆಚ್ಚಾಗಿ ಮಾಡುವವರಾಗೋಣ.ಮಾತಿನ ಮಲ್ಲರಾಗದಿರೋಣ. ಉತ್ತರಕುಮಾರನ ಪೌರುಷ ತೋರದಿರೋಣ!! *ನವಾಙ್ ಮಾತ್ರೇಣ ಪೌರುಷ್ಯಂ ಕ್ರಿಯಾ ಕೇವಲಮುತ್ತರಮ್|* *ಬಲಾಬಲೇ…

ಬಡಪಾಯಿ ಎಮ್ಮೆಗಳಿಗೂ ಥ್ಯಾಂಕ್ಸ್ ಹೇಳೋಣ ಬನ್ನಿ

ಬಡಪಾಯಿ ಎಮ್ಮೆಗಳಿಗೂ ಥ್ಯಾಂಕ್ಸ್ ಹೇಳೋಣ ಬನ್ನಿ ದುರ್ಗಾ- ಮಹಿಷ ಕದನ ಮತ್ತು ಮಹಿಷಾಸುರ ಮರ್ದನದ ಪರಿಣಾಮ ಇದ್ದೀತು. ನಮ್ಮ ಎಲ್ಲ ಜಾನುವಾರುಗಳ ಪೈಕಿ ನಿಕೃಷ್ಟವೆಂದು ಕಳಂಕ ಹೊತ್ತ ಪ್ರಾಣಿಯಿದು. ಪರಮ ಕ್ರೌರ್ಯಕ್ಕೆ ಗುರಿಯಾಗುವ ಜೀವಿ. ಮನಸೇಚ್ಛೆ ಬಡಿತ ತಿನ್ನುತ್ತದೆ, ದೇವಿಯ ಮುಂದೆ ಕತ್ತು ಕಡಿಸಿಕೊಂಡು ಬಲಿಯಾಗುತ್ತದೆ. ಮೇವು ನೀರಿಲ್ಲದೆ ನೂರಾರು ಕಿ.ಮೀ. ದೂರ ಹಿಂಸೆಯ ಸಾಗಣೆಗೆ ತುತ್ತಾಗಿ ಕಸಾಯಿ ಖಾನೆಗಳಲ್ಲಿ ಅತ್ಯಂತ ಯಾತನೆಯ ಮರಣಕ್ಕೆ ಗುರಿಯಾಗುತ್ತದೆ. ಕಪ್ಪು ವರ್ಣವನ್ನು ಕೀಳೆಂದೂ, ಗೌರವರ್ಣವನ್ನು ಮೇಲೆಂದೂ ನೂರಾರು ವರ್ಷಗಳಿಂದ ನಿತ್ಯ…

ಅಂಬರ್ ಗ್ರೀಸ್ ಹೆಸರಲ್ಲಿ ತಿಮಿಂಗಿಲಗಳಿಗೂ ಗಂಡಾಂತರ..!!

Writing;ಪರಶಿವ ಧನಗೂರು ಅಂಬರ್ ಗ್ರೀಸ್ ಹೆಸರಲ್ಲಿ ತಿಮಿಂಗಿಲಗಳಿಗೂ ಗಂಡಾಂತರ..!! ಇತ್ತೀಚೆಗೆ ಈ ಸ್ಮಗ್ಲಿಂಗ್ ಜಗತ್ತು ದೋ ನಂಬರ್ ದಂಧೆಕೋರರ ಗುಂಪುಗಳು ಕೋಟ್ಯಂತರ ರೂಪಾಯಿಗಳ ಆಸೆಯಿಂದ ತಿಮಿಂಗಿಲ ವಾಂತಿಯ ಹಿಂದೆ ಬಿದ್ದಿದ್ದಾರೆ! ಈಗ ಎಲ್ಲೆಲ್ಲೂ ತೆಲುವ ಚಿನ್ನ! ಸಮುದ್ರ ನಿಧಿ! ಎಂದು ಕರೆಸಿಕೊಳ್ಳುವ ಅಂಬರ್ ಗ್ರೀಸ್ ಎಂಬ ತಿಮಿಂಗಿಲ ವಾಂತಿಯದ್ದೇ ವಾಸನೇ!! ಮಾಂಸಾಹಾರಿ ಸಸ್ತನಿಯಾದ ಅಳಿವಿನಂಚಿನಲ್ಲಿರುವ ಸ್ಪರ್ಮ್ ವೇಲ್ ಜಾತಿಯ ಈ ತಿಮಿಂಗಿಲ ವಾಂತಿಗೀಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಾರಿ ಬೇಡಿಕೆ! ಈಗ ಸದ್ಯಕ್ಕೆ ಭೂಮಿ ಮೇಲೆ ಅತಿ…

ನಹಿ ಸುಪ್ತಸ್ಯ ಸಿಂಹಸ್ಯ ಪ್ರವಿಶಂತಿ ಮುಖೇ ಮೃಗಾಃ

ಸಿದ್ಧಸೂಕ್ತಿ: *ನಹಿ ಸುಪ್ತಸ್ಯ ಸಿಂಹಸ್ಯ ಪ್ರವಿಶಂತಿ ಮುಖೇ ಮೃಗಾಃ* ಮಲಗಿರುವ ಸಿಂಹದ ಬಾಯಿಗೆ ಪ್ರಾಣಿ ಬಂದು ಆಹಾರವಾಗುವುದಿಲ್ಲ. ಸಿಂಹ ಹುಲಿ ಆನೆ ಕರಡಿ ಚಿರತೆಯೇ ಆಗಿರಲಿ ಬೇಟೆಯಾಡಿದರೆ ಮಾತ್ರ ಆಹಾರ! ಶ್ರೀಮಂತನೆಂದು ನಿದ್ರಿಸಿದರೆ ? ನಾ ಬಡವ, ನನ್ನ ಹಣೆಬರಹವೇ ಇಷ್ಟೆಂದು ಕುಳಿತರೆ ? ಶ್ರೀಮಂತ ದರಿದ್ರನಾಗುವನು! ಶ್ರೀಮಂತಿಕೆಯ ಮೂಲವನ್ನು ಹುಡುಕಿರಿ! ಅದೇ ಧೈರ್ಯ ಪರಿಶ್ರಮ! ಬಡತನದ ಇತಿಹಾಸವನ್ನು ಕೆಣಕಿರಿ! ಅದೇ ಅಧೈರ್ಯ ಅಜ್ಞಾನ ದಾಸ್ಯ ನಿರ್ಲಕ್ಷ್ಯ ಸೋಮಾರಿತನ! ಮೈ ಕೊಡವಿ ಪುಟಿದೇಳಿ! ಕೀಳರಿಮೆ ತೊರೆಯಿರಿ! ಪ್ರತಿ…

ಪೇಜಾವರರ ಹೇಳಿಕೆ ಹಾಸ್ಯಾಸ್ಪದ :ಡಾ. ಆರೂಢಭಾರತೀ ಸ್ವಾಮೀಜಿ.

ಬೆಂಗಳೂರು,ಅ,26:ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಸರ್ಕಾರವು ಬ್ರಾಹ್ಮಣೇತರರನ್ನು ಅರ್ಚಕರನ್ನಾಗಿ ನೇಮಿಸುತ್ತಿದ್ದು, ಅರ್ಚಕವೃತ್ತಿಯನ್ನು ಬ್ರಾಹ್ಮಣರಿಂದ ಕಿತ್ತುಕೊಳ್ಳುವ ಪ್ರಯತ್ನವಾಗಿದ್ದು, ಸರ್ಕಾರವು ಅರ್ಚಕ ಉದ್ಯೋಗವನ್ನು ಬ್ರಾಹ್ಮಣ ಸಮುದಾಯಕ್ಕೆ ಮಾತ್ರ ಮೀಸಲಿಡಬೇಕೆಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥರು ಭಾನುವಾರ ಮೈಸೂರಿನ ವಿಪ್ರ ಸಮ್ಮೇಳನದಲ್ಲಿ ಹೇಳಿರುವುದಾಗಿ ವರದಿಯಾಗಿದ್ದು ಅವರ ಈ ಹೇಳಿಕೆ ಹಾಸ್ಯಾಸ್ಪದ ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಖಂಡಿಸಿದ್ದಾರೆ. ಇದು ಶ್ರೇಣೀಕೃತ ವರ್ಣ ವ್ಯವಸ್ಥೆಯನ್ನು ವಿಸ್ತರಿಸುವ, ಪುರೋಹಿತಶಾಹಿತನವನ್ನು ಪುನಃ ಪ್ರತಿಷ್ಠಾಪಿಸುವ ಹುನ್ನಾರ. ಈ ಮೂಲಕ ವೇದಾಧ್ಯಯನವನ್ನು…

ವಾಸಃ ಪ್ರಧಾನಂ ಖಲು ಯೋಗ್ಯತಾಯಾಃ

ಸಿದ್ಧಸೂಕ್ತಿ: ವಾಸಃ ಪ್ರಧಾನಂ ಖಲು ಯೋಗ್ಯತಾಯಾಃ ಯೋಗ್ಯತೆಯನ್ನಳೆಯುವಲ್ಲಿ ಬಟ್ಟೆಯ ಪಾತ್ರ ದೊಡ್ಡದು! ಬಟ್ಟೆಯಲ್ಲೇನು? ಎನ್ನುವಂತಿಲ್ಲ. ಪುಟಾಣಿ ಮುದುಕ ಕುಡುಕ ವಂಚಕ ಚಟಗಾರ ಮೋಸಗಾರ ಹುಚ್ಚ ಅಜ್ಞಾನಿ ಬಡವನಿರಲಿ, ವೇಷಭೂಷಣ ಜೋರಿದ್ದರೆ ಸಾಕು, ತಲೆ ಬಾಗಿ, ಕೈಮುಗಿದು, ಕದತೆರೆದು, ಕರೆದೊಯ್ದು ಕೂಡ್ರಿಸಿ, ಆದರದಿ ಆಗದ ಕೆಲಸವನೂ ಮಾಡುವರು! ಅರ್ಹತೆ ಇದ್ದರೂ ಕಳಪೆಯ ವೇಷದ ಜುಬ್ಬಾ ದೋತರ ಪಂಜೆಯ ವ್ಯಕ್ತಿಗೆ, ತರೆದ ಬಾಗಿಲು ಮುಚ್ಚುವುದು! ಕೈ ತಲೆ ಕಾಲ್ಗಳು ತಡೆಯುವವು! ಕಾಯಿ ಈಗಾಗ ಬಾ ಎಂಬ ಮಾತು! ದಿನ…

ಪಾಕಿಸ್ತಾನ ವಿರುದ್ಧ ಭಾರತಕ್ಕೆ ಸೋಲು

ದುಬೈ, ಅ. ೨೪: ಟಿ-೨೦ ವಿಶ್ವಕಪ್ ಭಾರತ ತನ್ನ ಅಭಿಯಾನವನ್ನು ಸೋಲುವ ಆರಂಭಿಸಿದ. ಅದು ಸಂಪ್ರದಾಯ ಎದುರಾಳಿ ಪಾಕಿಸ್ತಾನದ ವಿರುದ್ಧ ನಡೆದ ಪಂದ್ಯಾವಳಿಯಲ್ಲಿ ಹೀನಾಯ ಸೋಲು ನಿಜಕ್ಕೂ ಮುಖಭಂಗವಾಗಿದೆ. ಕಳೆದ ಹಲವು ದಿನಗಳಿಂದ ಇಡೀ ವಿಶ್ವವೇ ಈ ರೋಚಕ ಪಂದ್ಯಕ್ಕೆ ಕಾದು ಕೂತಿತ್ತು ಈ ಎರಡು ರಾಷ್ಟ್ರಗಳ ಪಂದ್ಯದ ರೋಚಕ ಆಟವನ್ನು ನೋಡುವಾಗ ಭಾರತ ಎಂದಿನಂತೆ ಆಡಿದರೂ ಅದ್ಯೋಕೋ ಆರಂಭದ ಆಟಗಾರರು ಪೇಲವ ಆಟ ನಿರಾಶೆ ತಂದಿತ್ತು ಆದರೂ ಕೋಯ್ಲಿ ಆಡಿದ ಆಟ ಭರವಸೆ ಮೂಡಿಸಿದರು ನಿರೀಕ್ಷಿತ…

ಬ್ಯಾಟಿಂಗ್, ಬೌಲಿಂಗ್ ನಲ್ಲಿ ಟೀಂ ಇಂಡಿಯಾ ಫೇಲ್, ಪಾಕ್ ಗೆ ಭರ್ಜರಿ ಗೆಲುವು

Reported By H.D Savita ದುಬೈ :ಐಸಿಸಿ ವಿಶ್ವಕಪ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತವು ಬದ್ಧವೈರಿ ಪಾಕಿಸ್ತಾನ ವಿರುದ್ಧ ಸೋಲು ಅನುಭವಿಸಿದೆ. ಪಾಕ್  ನಾಯಕ ಬಾಬರ್ ಅಜಮ್ ಹಾಗೂ ಮೊಹಮ್ಮದ್ ರಿಜ್ವಾನ್ ಅಬ್ಬರದ ಬ್ಯಾಟಿಂಗ್‌ನಿಂದ ಪಾಕಿಸ್ತಾನ 10 ವಿಕೆಟ್ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ICC ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ವಿರುದ್ಧ ಭಾರತದ ಅಜೇಯ ಗೆಲುವಿನ ಓಟದ ದಾಖಲೆಗಳನ್ನು ಪಾಕಿಸ್ತಾನ ಮುರಿದಿದೆ. ಪಾಕ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್ ವಿಫಲಗೊಂಡಿತು.…

ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಿಂದಗಿ,( ಕೋಕಟನೂರು),ಅ,24:ಉಣ್ಣೆಯನ್ನು ನೇಯ್ದು ಕಂಬಳಿ ಮಾಡಲಾಗುತ್ತದೆ. ಇದರ ಹಿಂದೆ ಹಾಲುಮತದವರ ಗೌರವ ಮತ್ತು ಪರಿಶ್ರಮ ಅಡಗಿದೆ. ಕಂಬಳಿ ಹೊದ್ದುಕೊಳ್ಳಲು ಯೋಗ್ಯತೆ ಇರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಭಾನುವಾರ ಸಿಂದಗಿ ಮತಕ್ಷೇತ್ರದ ಕೊಕಟನೂರು ಗ್ರಾಮದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಉಣ್ಣೆ ಕಂಬಳಿಯನ್ನು ಯಾರು ಬೇಕಾದರೂ ಹಾಕಿಕೊಂಡರೆ ಯೋಗ್ಯತೆ ಬರುವುದಿಲ್ಲ. ಹಾಲುಮತದ ಸಮಾಜಕ್ಕೆ ಸರಿಯಾದ ಅಭಿವೃದ್ಧಿ ಮಾಡಿದವರಿಗೆ ಮಾತ್ರ ಆ ಯೋಗ್ಯತೆ ಪ್ರಾಪ್ತವಾಗುತ್ತದೆ. ದಾಸಶ್ರೇಷ್ಠರಾದ ಕನಕದಾಸರ ಜನ್ಮಸ್ಥಳ ಬಾಡ ಹಾಗೂ ಅವರ ಕರ್ಮಭೂಮಿ ಕಾಗಿನೆಲೆಯನ್ನು…

ಸೂಟಕೇಸ್ ತಗೊಂಡು ಕುಮಾರಸ್ವಾಮಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದಾರೆ ಜಮೀರ್ ಆರೋಪ

ವಿಜಯಪುರ,ಅ,24: ಕುಮಾರಸ್ವಾಮಿ ಅವರು ಎರಡು ಕ್ಷೇತ್ರದ ಚುನಾವಣೆಯ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗಳಿಂದ ಸೂಟ್ ಕೇಸ್ ಪಡೆದು ಟಿಕೆಟ್ ನೀಡಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಜಮೀರ್ ಅಹ್ಮದ್ ಖಾನ್, ಹೆಚ್.ಡಿ ಕುಮಾರಸ್ವಾಮಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ. ಬಿಜೆಪಿಯಿಂದ ಸೂಟ್ ಕೇಸ್ ಪಡೆದು ಅಭ್ಯರ್ಥಿ ಹಾಕಿದ್ದಾರೆ. ಬಸವಕಲ್ಯಾಣದಲ್ಲಿ 10 ಕೋಟಿ ತೆಗೆದುಕೊಂಡು ಅಭ್ಯರ್ಥಿ ಹಾಕಿದ್ರು. ಸಿಂದಗಿಯಲ್ಲಿ ಬಿಜೆಪಿ ಗೆಲ್ಲಲು ಸಹಾಯ ಮಾಡುತ್ತಿದ್ದಾರೆ…

ನಾಳೆಯಿಂದ 1ರಿಂದ 5 ರವರೆಗೆ ಶಾಲೆಗಳು ಆರಂಭ

ಬೆಂಗಳೂರು,ಅ,24:1ರಿಂದ 5 ನೇ ತರಗತಿಗಳು ನಾಳೆಯಿಂದ ರಾಜ್ಯಾದ್ಯಂತ ಪ್ರಾರಂಭವಾಗಲಿವೆ. ರಾಜ್ಯದಲ್ಲಿ ಕೊರೋನಾ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳ ಆರಂಭಕ್ಕೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ನೀಡಿದ್ದರಿಂದ ಶಾಲೆ ಆರಂಭಿಸುವುದಕ್ಕೆ ಶಿಕ್ಷಣ ಇಲಾಖೆ ತೀರ್ಮಾನಿಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಮಾಹಿತಿ ನೀಡಿದ್ದಾರೆ. ಶಿಕ್ಷಣ ಇಲಾಖೆ ಮಾರ್ಗಸೂಚಿ ಹೊರಡಿಸಿದ್ದು,ಅದರಂತೆ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರ ಅನುಮತಿ ಕಡ್ಡಾಯ. ಮಕ್ಕಳಿಗೆ ಶಾಲೆ ಹಾಜರಾತಿ ಕಡ್ಡಾಯವಿಲ್ಲ ಎಂದು ‌ ಸ್ಪಷ್ಟಪಡಿಸಲಾಗಿದೆ.ಶಿಕ್ಷಕರು ಮತ್ತು ಸಿಬ್ಬಂದಿ ಕಡ್ಡಾಯವಾಗಿ 2…

ಎಲ್ಲೆಲ್ಲೂ ಗ್ಯಾಸ್ ತಿಪ್ಪೇರುದ್ರಪ್ಪಮೇಷ್ಟು ಮತ್ತು ಅವರ ಮಾತು

ಎಲ್ಲೆಲ್ಲೂ ಗ್ಯಾಸ್ ತಿಪ್ಪೇರುದ್ರಪ್ಪಮೇಷ್ಟು ಮತ್ತು ಅವರ ಮಾತು “ಡಾಕ್ಟ್ರೇ, ಈ ಜನ ಬಾಯಿ ಕಟ್ಟುವುದಿಲ್ಲ ಸಿಕ್ಕಸಿಕ್ಕಿದ್ದು ತಿಂದು, ಔಷಧಿಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳದೆ ತಮ್ಮ ಆರೋಗ್ಯವನ್ನು ಹಾಳುಮಾಡಿಕೊಂಡು ಪರಿಸ್ಥಿತಿ ತೀರಾ ಬಿಗಡಾಯಿಸಿದಾಗ ಮಾತ್ರ ಆಸ್ಪತ್ರೆಗೆ ಓಡಿ ಬರುತ್ತಾರೆ. ಇಂತಹವರಿಗೆ ಎಂತಹ ಚಿಕಿತ್ಸೆ ಮಾಡಿದರೂ ಪ್ರಯೋಜನವಿಲ್ಲ” ಎಂದು ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿ ಡಾಕ್ಟರ್ ಶಿವಶಂಕರ ಮೋಟೆಬೆನ್ನೂರ ಅವರ ಟೇಬಲ್ ಎದುರಿಗಿದ್ದ ಮರದ ಕುರ್ಚಿಯೊಂದರಲ್ಲಿ ಪೂರ್ತಿ ಹಿಂದಕ್ಕೆ ಒರಗಿದಂತೆ ಕುಳಿತು ಕಾಲುಗಳನ್ನು ನೀಳವಾಗಿ ಚಾಚಿ, ಮೂಗಿನ ತುದಿಗೆ…

ಶರೀರಮಾಧ್ಯಂ ಖಲು ಧರ್ಮಸಾಧನಂ

‌‌‌‌‌                     ಸಿದ್ಧಸೂಕ್ತಿ: ಶರೀರಮಾಧ್ಯಂ ಖಲು ಧರ್ಮಸಾಧನಂ. ಶಿವನನ್ನು ಒಲಿಸಿಕೊಳ್ಳಲು ಪರ್ವತರಾಜಕುಮಾರೀ ಪಾರ್ವತೀ ಕಠಿಣ ತಪೋಮಗ್ನಳಾಗಿ ಶರೀರವನ್ನು ದಂಡಿಸಿದ್ದನ್ನು ಕಂಡ ಶಿವನ ಮಾರುವೇಷದ ಬ್ರಹ್ಮಚಾರಿಯು ಪಾರ್ವತಿಗೆ ಹೇಳಿದ ಮಾತಿದು. ಶರೀರವು ಧರ್ಮಸಾಧನೆಗೆ ಮೂಲಾಧಾರ.ಅದನ್ನು ಚೆನ್ನಾಗಿ ಸಂರಕ್ಷಿಸಬೇಕು! ಶರೀರದಲ್ಲಿನ ಕಣ್ಣು ಕಿವಿ ಮೂಗು ಬಾಯಿ ಗುಪ್ತೇಂದ್ರಿಯ ಕೈ ಕಾಲು ಅವುಗಳ ಬೆರಳುಗಳನ್ನು,ಜೀವ ಮೆದುಳು ಹೃದಯ ಶ್ವಾಸಕೋಶ ಅನ್ನನಾಳ ಯಕೃತ್ ದೊಡ್ಡಕರುಳು ಸಣ್ಣಕರುಳು ಮೂತ್ರಕೋಶ ನರಮಂಡಲಗಳನ್ನು ಗಮನಿಸಿ. ಎಂಥ…

ಹಾನಗಲ್ ಜೆಡಿಎಸ್ ಅಭ್ಯರ್ಥಿಯನ್ನು ಲಘುವಾಗಿ ಪರಿಣಿಸಬೇಡಿ;ಎಚ್ ಡಿ ಕೆ

ಹಾನಗಲ್ಅ,23: ಈ ಉಪ ಚುನಾವಣೆಯಲ್ಲಿ ಹಾನಗಲ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯನ್ನು ಲಘುವಾಗಿ ಪರಿಗಣಿಸುವ ಅಗತ್ಯವಿಲ್ಲ. ಒಂದು ವೇಳೆ ಅವರು ಹಾಗೇನಾದರೂ ಭಾವಿಸಿದರೆ ಫಲಿತಾಂಸದ ದಿನ ಅವರಿಗೆ ನಿರಾಶೆ ಕಟ್ಟಿಟ್ಟಬುತ್ತಿ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್-ಬಿಜೆಪಿ ಪಕ್ಷಗಳ ನಾಯಕರಿಗೆ ಎಚ್ಚರಿಕೆ ನೀಡಿದರು. ಹಾನಗಲ್ ಕ್ಷೇತ್ರದಲ್ಲಿಂದು ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ ಅವರ ಪರ ಪ್ರಚಾರ ಕೈಗೊಂಡ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ರಾಷ್ಟ್ರೀಯ ಪಕ್ಷಗಳು ಅಬ್ಬರ-ಆರ್ಭಟದಿಂದ ಪ್ರಚಾರ ಕೈಗೊಂಡಿವೆ. ಆದರೆ, ನಾವು ಜನರ ನಾಡಿಮಿತ…

ಸಿದ್ದು ಟೀಕೆಗೆ ಬೊಮ್ಮಾಯಿ ಅನುದಾನದ ರಿಪೋರ್ಟ್ ಕಾರ್ಡ್ ಪ್ಲೇ

ಹಾನಗಲ್,ಅ,23:ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾನಗಲ್ ಗೆ ಏನ್ ಮಾಡಿದ್ದಾರೆ ಎಂದು ನೀಡಿದ್ದ ಹೇಳಿಕೆಗೆ ಬೊಮ್ಮಾಯಿ ಅನುದಾನದ ರಿಪೋರ್ಟ್ ಕಾರ್ಡ್ ಪ್ಲೇ ಬಿಡುಗಡೆಮಾಡಿದರು. ಹಾನಗಲ್ ತಾಲೂಕಿನ ೩೮೪೩೩ ರೈತರಿಗೆ ತಲಾ ರೂ.೧೦೦೦೦ ನೀಡಲಾಗಿದೆ. ಕೋವಿಡ್ ಸಂದರ್ಭದಲ್ಲಿ ೧೨೦೦೦ ಕಾರ್ಮಿಕರಿಗೆ ಕಿಟ್ ನೀಡಲಾಗಿದೆ. ಪ್ರಧಾನಮಂತ್ರಿ ಕಲ್ಯಾಣ ಯೋಜನೆಯಲ್ಲಿ ೬೬,೦೦೦ ಉಚಿತವಾಗಿ ಪಡಿತರ ನೀಡಲಾಗಿದೆ. ಕಟ್ಟಡ ಕಾರ್ಮಿಕರಿಗೆ ರೂ.೪೨ ಕೋಟಿ ನೀಡಲಾಗಿದೆ ಹೂವು ಮಾರುವ ೬೪೬೨ ಜನರಿಗೆ ತಾಲಾ ರೂ.೧೦,೦೦೦ ನೀಡಲಾಗಿದೆ, ಹಣ್ಣು ಮಾರುವ ೧೯೮೦ ಜನರಿಗೆ…

ವಿಎಚ್ ಪಿ ಕತ್ತಿ ಹೇಳಿಕೆ ಸಿಎಂ ವಿರುದ್ಧ ಕಾಂಗ್ರಸ್ ಕಿಡಿ

ಬೆಂಗಳೂರು,ಅ,23: ನಾವು ಕತ್ತಿ ಹಿಡಿದರೆ ನಿಮಗೆ ಶವ ಹೂಳಲು ಜಾಗ ಇರುವುದಿಲ್ಲ  ಎಂಬ ವಿಎಚ್‌ಪಿ ಮುಖಂಡರ ಹೇಳಿಕೆಗೆ ರಾಜ್ಯ ಕಾಂಗ್ರೆಸ್‌ ತೀವ್ರ ಆಕ್ರೋಶ ವ್ಯಕ್ತಡಿಸಿದೆ. ತುಮಕೂರಿನಲ್ಲಿ ಏರ್ಪಡಿಸಿದ್ದ ಬಹಿರಂಗ ಸಭೆಯಲ್ಲಿ ಮಾತನಾಡಿದ್ದ ವಿಶ್ವ ಹಿಂದೂ ಪರಿಷತ್ನ ರಾಜ್ಯ ಸಂಚಾಲಕ ಬಸವರಾಜ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಟ್ವಿಟರ್‌ನಲ್ಲಿ  ಕಾಂಗ್ರೆಸ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್‌ ಕಿಡಿಕಾರಿದೆ.ಮುಖ್ಯಮಂತ್ರಿಗಳ ‘ಆಕ್ಷನ್’ಗೆ ಬಿಜೆಪಿಯ ಸಮಾಜಘಾತುಕ ಪಡೆಯ ‘ರಿಯಾಕ್ಷನ್’ ಹೆಚ್ಚುತ್ತಿದೆ ಎಂದು ಕಾಂಗ್ರೆಸ್‌ ಟೀಕಿಸಿದೆ. ‘ಸರ್ಕಾರಕ್ಕೆ ಈ ಸಮಾಜ ವಿರೋಧಿ ಸಂಘಟನೆಗಳ ನಿಯಂತ್ರಣ…

1 41 42 43 44 45 102
Girl in a jacket