Girl in a jacket

Author kendhooli_editor

ಹೀಗೂ ಕಸ ಗುಡಿಸಬಹುದೆ?

ಐದು ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ದೂಳೀಪಟವಾಗಿರುವ ಕಾಂಗ್ರೆಸ್ ತಪ್ಪುಗಳಿಂದ ಪಾಠ ಕಲಿಯುವುದಕ್ಕೂ ಎಳ್ಳುನೀರು ಬಿಟ್ಟಿದೆ. ಸೋಲಿಗೆ ಯಾರು ಕಾರಣ ಏನು ಕಾರಣ ಎನ್ನುವುದರ ಆತ್ಮಾವಲೋಕನ ಅದಕ್ಕೆ ಬೇಕಾಗಿಲ್ಲ. ಈ ಹಿಂದಿನ ಚುನಾವಣೆಗಳಲ್ಲಿ ಸೋಲಿಗೆ ಕಾರಣರಾದವರೆ ಈ ಬಾರಿಯ ಸೋಲಿಗೂ ಕಾರಣವಾಗಿರುವುದು ಮತ್ತು ಸೋನಿಯಾ ಗಾಂಧಿ ಪಟಾಲಮ್ಮು ಆರೋಪಿಯಾಗಿರುವುದು ಆಕಸ್ಮಿಕವೂ ಅಲ್ಲ; ಕಾಕತಾಳಿಯವೂ ಅಲ್ಲ. ಹೀಗೂ ಕಸ ಗುಡಿಸಬಹುದೆ? ಕಸ ಗುಡಿಸುವುದು ಎಂದರೆ ಹೇಗೆ ಎನ್ನುವುದನ್ನು ಅರ್ಥ ಮಾಡಿಕೊಳ್ಳುವ ಅಗತ್ಯವಿರುವವರು ಪಂಜಾಬ್ ವಿಧಾನ ಸಭಾ ಚುನಾವಣಾ ಫಲಿತಾಂಶವನ್ನು…

ವಿಜಯನಗರ ಸಾಮ್ರಾಜ್ಯದ ರಾಜಧಾನಿ ಮತ್ತು  ಪೆನುಗೊಂಡ

ವಿಜಯನಗರ ಸಾಮ್ರಾಜ್ಯದ ರಾಜಧಾನಿ ಮತ್ತು  ಪೆನುಗೊಂಡ ಹಂಪೆಯನ್ನು ಅನೇಕ ವರ್ಷಗಳಿಂದ ನೋಡಿದ ನನಗೆ ವಿಜಯನಗರ ಸಾಮ್ರಾಜ್ಯದ ಇತರೆ ರಾಜಧಾನಿಗಳನ್ನು ನೋಡುವ, ಹಂಪೆಯ ಕಲ್ಲಿನ ರಥವನ್ನು ನೋಡಿದ ಮೇಲೆ ತಾಡಪತ್ರಿಯ ರಥವನ್ನು ನೋಡಲೇಬೇಕೆನ್ನುವ ತವಕ ತುಂಬಾ ಹಿಂದೆಯೇ ಇತ್ತು. ಆದರೆ ಅದು ಸಾಧ್ಯವಾದದ್ದು ಕಳೆದ ವಾರವಷ್ಟೆ. ವಿಜಯನಗರ ಸಾಮ್ರಾಜ್ಯದ ರಾಜಧಾನಿಗಳಾಗಿ ಆನೆಗೊಂದಿ, ಹಂಪೆಗಳಲ್ಲದೆ ಪೆನುಗೊಂಡ, ಚಂದ್ರಗಿರಿ, ವೆಲ್ಲೂರುಗಳೂ ಆಡಳಿತದ ರಾಜಧಾನಿ ಕೇಂದ್ರಗಳಾಗಿ ಕಾರ್ಯ ನಿರ್ವಹಿಸಿವೆ. ಇದಕ್ಕೆ ಆಯಾ ಕಾಲಘಟ್ಟಗಳಲ್ಲಾದ ರಾಜಕೀಯ ಅಸ್ತಿರತೆ, ಸಂಘರ್ಷ, ಪ್ರತಿರೋಧ, ಸ್ಥಾನಪಲ್ಲಟಗಳೂ ಕಾರಣವೆನ್ನಿ. ಈ…

ಶಾಲೆಗಳಲ್ಲಿ ಸಮವಸ್ರ್ತಕಡ್ಡಾಯ; ಮಹತ್ವದ ಆದೇಶ ನೀಡಿದ ಹೈಕೋರ್ಟ್

ಬೆಂಗಳೂರು, ಮಾ.15. ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿರ್ಬಂಧಿಸಿರುವ ಸರ್ಕಾರದ ಕ್ರಮವನ್ನು ಎತ್ತಿಹಿಡಿದಿರುವ ಹೈಕೋರ್ಟ್, ಹಿಜಾಬ್ ಧಾರಣೆ ಇಸ್ಲಾಂ ಧರ್ಮದ ಧಾರ್ಮಿಕ ಅತ್ಯಗತ್ಯ ಆಚರಣೆಯಲ್ಲ ಎಂದು ಮಹತ್ವದ ಆದೇಶ ನೀಡಿದೆ. ತರಗತಿಗೆ ಹಿಜಾಬ್ ಧರಿಸಿ ಬರದಂತೆ ನಿರ್ಬಂಧಿಸಿರುವ ಕಾಲೇಜಿನ ಕ್ರಮ ಪ್ರಶ್ನಿಸಿ ಹಾಗೂ ಸಮವಸ್ತ್ರ ಸಂಹಿತೆ ಜಾರಿ ಸಂಬಂಧ ಸರ್ಕಾರ ಹೊರಡಿಸಿರುವ ಆದೇಶ ರದ್ದುಕೋರಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ರೇಷಮ್ ಮತ್ತಿತರೆ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಅರ್ಜಿ ಸಲ್ಲಿಸಿದ್ದ ಅರ್ಜಿಗಳನ್ನು ಪೂರ್ಣಪೀಠ…

ಶಾಂತವೇರಿ ಗೋಪಾಲಗೌಡರ ಹೆಸರಿನಲ್ಲಿ ಎರಡು ಪ್ರಶಸ್ತಿ ಘೋಷಿಸಿದ ಸಿಎಂ

ಬೆಂಗಳೂರು, ಮಾ, 14: ಜನ್ಮಶತಮಾನೋತ್ಸವವನ್ನು ಇಡೀ ವರ್ಷ ಆಚರಣೆ ಮಾಡುವ ತೀರ್ಮಾನ ಸರ್ಕಾರ ಮಾಡಿದೆ. ಹಾಗೂ ಶಾಂತವೇರಿ ಗೋಪಾಲಗೌಡರ ಹೆಸರಿನಲ್ಲಿ ಶ್ರೇಷ್ಠ ಕೃಷಿಕ ಹಾಗೂ ಶ್ರೇಷ್ಠ ಶಾಸಕ ಪ್ರಶಸ್ತಿಗಳನ್ನು ಪ್ರತಿ ವರ್ಷ ನೀಡಲು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಅವರು ಇಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಪ್ರತಿಷ್ಠಾನ ಹಾಗೂ ಜನ್ಮ ಶತಮಾನೋತ್ಸವ ಆಚಾರಣೆ ಸಮಿತಿ ಆಯೋಜಿಸಿದ್ದ ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಗೋಪಾಲಗೌಡರ ಕುರಿತ ಕೃತಿಗಳನ್ನು ಮುದ್ರಿಸಿ, ನಾಡಿನಾದ್ಯಂತ ಎಲ್ಲಾ ಗ್ರಂಥಾಲಯಗಳಿಗೆ…

ಬಡತನದ ನಿರ್ಮೂಲನೆಗೆ ನರೇಗಾ ಅಸ್ತ್ರ:ಸಿಎಂ ಬೊಮ್ಮಾಯಿ

ಬೆಂಗಳೂರು, ಮಾ,14:ಬಡತನದ ನಿರ್ಮೂಲನೆಯಲ್ಲಿ ನರೇಗಾ ಎನ್ನುವ ಅಸ್ತ್ರ ಬಹಳ ದೊಡ್ಡ ಪಾತ್ರವ್ನನು ನಿರ್ವಹಿಸಲಿದೆ. ನರೇಗಾದಡಿ ಹಲವಾರು ಯೋಜನೆಗಳನ್ನು ಸೇರ್ಪಡೆಗೊಳಿಸಬೇಕು. ಒಂದು ವರ್ಷದ ದುಡಿಮೆಯನ್ನು ಸಂಭ್ರಮಿಸಲು ಆಚರಿಸುವ ನರೇಗಾ ಹಬ್ಬ ರಾಜ್ಯದ ಹಬ್ಬ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು. ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿದ್ದ ನರೇಗಾ ಹಬ್ಬ 2022 ನ್ನು ಉದ್ಘಾಟಿಸಿ ಮಾತನಾಡಿದರು. ಮಹಾತ್ಮಾ ಗಾಂಧಿಯವರಿಂದ ಗ್ರಾಮ ಸ್ವರಾಜ್ಯದ ಪರಿಕಲ್ಪನೆ ಮೂಡಿತು. ಅಂದಿನ ಪ್ರಧಾನಿ ಅಟಲ್…

ದೇಶದ ಮೊಟ್ಟಮೊದಲ ಡಿಜಿಟಲ್ ವಾಟರ್ ಬ್ಯಾಂಕ್ `ಅಕ್ವೇರಿಯಂ’ ಉದ್ಘಾಟನೆ

ಬೆಂಗಳೂರು,ಮಾ,14: ಜಲ ಸಂರಕ್ಷಣೆ, ನೈರ್ಮಲ್ಯ, ಜಲಭೂಗರ್ಭ ವಿಜ್ಞಾನ ಮತ್ತು ಡೇಟಾ ವಿಜ್ಞಾನಗಳಲ್ಲಿ 10 ಲಕ್ಷ ಯುವಜನರಿಗೆ ತರಬೇತಿ ನೀಡುವ ಗುರಿ ಹೊಂದಿರುವ ದೇಶದ ಮೊಟ್ಟಮೊದಲ ಡಿಜಿಟಲ್ ವಾಟರ್ ಬ್ಯಾಂಕ್ ಆದ `ಅಕ್ವೇರಿಯಂ’ ನವೋದ್ಯಮಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಸೋಮವಾರ ಚಾಲನೆ ನೀಡಿದರು. ಈ ಸಂಬಂಧ ನಗರದ ಖಾಸಗಿ ಹೋಟೆಲೊಂದರಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `5 ಟ್ರಿಲಿಯನ್ ಡಾಲರ್ ಆರ್ಥಿಕಶಕ್ತಿಯ ಆತ್ಮನಿರ್ಭರ ಭಾರತವನ್ನು ಕಟ್ಟುವಲ್ಲಿ ಶುದ್ಧನೀರು ಮತ್ತು ಜಲಭದ್ರತೆ ಎರಡೂ ಪ್ರಮುಖ…

ಅಂಚೆಯಣ್ಣನ ನಿಸ್ವಾರ್ಥ ಸೇವೆಗೆ ಸಾಕ್ಷಿಯಾದ ಸೇವಾಮನೋಭಾವ

ಅಂಚೆಯಣ್ಣನ ನಿಸ್ವಾರ್ಥ ಸೇವೆಗೆ ಸಾಕ್ಷಿಯಾದ ಸೇವಾಮನೋಭಾವ ಅದು ೧೯೮೦ನೇ ಇಸವಿ ಮೇ ತಿಂಗಳ ಮೊದಲನೇ ವಾರ. ನಮ್ಮ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಮುಗಿದು ಮೂರು ವಾರಗಳ ಮೇಲಾಗಿತ್ತು. ಮೇ ಹತ್ತರ ಒಳಗೆ ಫಲಿತಾಂಶ ಬರುವ ನಿರೀಕ್ಷೆಯೂ ಇತ್ತು. ಫಲಿತಾಂಶದ ನಿಖರ ದಿನಾಂಕವನ್ನು ಅಂದಿನ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಇನ್ನೂ ಪ್ರಕಟ ಮಾಡಿರಲಿಲ್ಲ. ಇಂದಿನ ಹಾಗೆ ಅಂತರ್ಜಾಲದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳನ್ನು ಪ್ರಕಟಿಸುವ ಸವಲತ್ತು ಅಂದಿನ ದಿನಗಳಲ್ಲಿ ಉಪಲಬ್ಧವಿರಲಿಲ್ಲ. ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶಗಳನ್ನು ಪ್ರಕಟಿಸುವ, ಹಲವು ವರ್ಷಗಳ…

ಮುಂಬರುವ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಸಮಾನ ಹೋರಾಟ; ದೇವೇಗೌಡ

ಬೆಂಗಳೂರು, ಮಾ, 12: “ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಸಮಾನ ಹೋರಾಟ ನಡೆಸಲಿದೆ” ಎಂದು ಮಾಜಿ ಪ್ರಧಾನಿ, ಪಕ್ಷದ ವರಿಷ್ಠ ಎಚ್. ಡಿ. ದೇವೇಗೌಡ ಹೇಳಿದರು. ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಅವರು ಮಾತನಾಡಿದರು, “ರಾಜ್ಯದಲ್ಲಿ ಪಕ್ಷವನ್ನು ಬಲಪಡಿಸುವ ಪ್ರಯತ್ನ ಆರಂಭಿಸಿದ್ದೇವೆ. ಇದೇ 20ರಂದು ನಗರದ ಅರಮನೆ ಮೈದಾನದಲ್ಲಿ ಪಕ್ಷದ ಸಮಾವೇಶ ನಡೆಯಲಿದೆ. ಅಲ್ಲಿ ನಮ್ಮ ಹೋರಾಟದ ತೀರ್ಮಾನವನ್ನು ಪ್ರಕಟಿಸುತ್ತೇವೆ” ಎಂದರು. “ಜಾತ್ಯಾತೀತ ಜನತಾದಳ ಎಲ್ಲ ಕ್ಷೇತ್ರಗಳಲ್ಲೂ…

ಮಹಿಳಾ ಶಕ್ತಿಯು ಸಂಘಟನೆಯಾಗಿ ಬೆಳೆಯಬೇಕು : ಬಿ. ವೈ. ರಾಘವೇಂದ್ರ

ಶಿಕಾರಿಪುರ,ಮಾ,12 : ಭಾರತ ದೇಶದಲ್ಲಿ ಭೂಮಿಯನ್ನು, ನದಿಯನ್ನು ಹಾಗೂ ಗೋವನ್ನು ತಾಯಿಯಂತೆ ಗೌರವಿಸುವ ಪರಂಪರೆ ನಮ್ಮದು, ಕರ್ನಾಟಕ ಸರ್ಕಾರವು ಬಾಲ್ಯ ವಿವಾಹವನ್ನು ತಡೆಯುವ ಉದ್ದೇಶದಿಂದ ಮದುವೆಯ ವಯಸ್ಸನ್ನು 18 ರಿಂದ 21 ಕ್ಕೆ ಏರಿಸಿದ್ದಾರೆ, ಕೇಂದ್ರ ಸರ್ಕಾರವು ಬೇಟಿ ಬಚಾವ್, ಬೇಟಿ ಪಡಾವ್ ಯೋಜನೆಯನ್ನು ಜಾರಿಗೆ ತಂದಿದೆ, ಮಹಿಳಾ ಸುರಕ್ಷತೆಗೆ ಆದ್ಯತೆಯನ್ನು ನೀಡಿ ವಿವಿಧ ಯೋಜನೆಯನ್ನು ಚಾಲ್ತಿಗೆ ತಂದಿದೆ, ಸ್ಥಳೀಯ ಮಟ್ಟದಲ್ಲಿ ಇರುವ ಮಹಿಳಾ ಶಕ್ತಿಯು ಸಂಘಟನೆಯಾಗಿ ಬೆಳೆಯಬೇಕು ಎಂದು ಸಂಸದ ಬಿ. ವೈ. ರಾಘವೇಂದ್ರ ಅವರು…

ಮನೆ ಮನೆಗೆ ಕಂದಾಯ ದಾಖಲೆ ಉದ್ಟಾಟನೆ

ಚೆಳ್ಳಕೆರೆ, ಮಾ, 12:ಕಂದಾಯ ದಾಖಲೆಗಳು ರೈತರ ಮನೆ ಬಾಗಿಲಿಗೆ ಎನ್ನುವ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಕಾರ್ಯಕ್ರಮವನ್ನು ಚಳ್ಳಕೆರೆ ತಾಲ್ಲೂಕು ಮರುಕಟ್ಟೆ ಗ್ರಾಮದಲ್ಲಿ ಏರ್ಪಡಿಸಲಾಗಿತ್ತು . ಆರಂಭದಲ್ಲಿ ಶಾಸಕರಾದ ತಾಶೀಲ್ದಾರ್ ಆದ ಎನ್ ರಘುಮೂರ್ತಿ ಇವರನ್ನು ಎತ್ತಿನ ಬಂಡಿ ಗಾಡಿಯಲ್ಲಿ ಸ್ವಾಗತಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು ಮತ್ತು ಗ್ರಾಮ ಪಂಚಾಯತಿಯ ಎಲ್ಲ ಸದಸ್ಯರುಗಳು ವಿವಿಧ ವಾದ್ಯ ಮೇಳದೊಂದಿಗೆ ಗ್ರಾಮದ ಕೇರಿಗಳಲ್ಲಿ ಸಂಚರಿಸಿ ಜನಪದ ಶೈಲಿಯ ಅರಳಿಕಟ್ಟೆಯಲ್ಲಿ ಸಮಾರಂಭ ಆಯೋಜಿಸಿ ಉದ್ಘಾಟಿಸಲಾಯಿತು. ನಂತರ ಮಾತನಾಡಿದ ಶಾಸಕ ಟಿ ರಘುಮೂರ್ತಿ…

ವಿಜ್ಞಾನಿ ಮತ್ತು ಇಂಜಿನಿಯರ್ ರಾಜ್ಯ ಪ್ರಶಸ್ತಿ ಪ್ರಧಾನ

ಬೆಂಗಳೂರು, ಮಾ,12:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಇಂದು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಜ್ಞಾನಿ ಮತ್ತು ಇಂಜಿನಿಯರ್ ರಾಜ್ಯ ಪ್ರಶಸ್ತಿ ಪ್ರಧಾನ ಮಾಡಿದರು ಡಾ. ಬಿ ಎನ್ ಗಂಗಾಧರ, ಪ್ರೊ. ಗೈತಿ ಹಾಸನ್ ಅವರಿಗೆ ಸರ್.ಎಂ.ವಿಶ್ವೇಶ್ವರಯ್ಯ, ಪ್ರೊ. ಲಲಿತ್ ಮೋಹನ್ ಪಟ್ನಾಯಕ್, ಪ್ರೊ. ಶೆಟ್ಟಿ ಹುಂತ್ರಿಕೆ ಶೇಖರ್ ಅವರಿಗೆ ಡಾ.ರಾಜಾರಾಮಣ್ಣ, ಪ್ರೊ. ಎಚ್. ನಾಗಭೂಷಣ, ಡಾ. ಜಿ. ವೆಂಕಟಸುಬ್ರ…

ನಮ್ಮ ತಪ್ಪಿನಿಂದ ಅಧಿಕಾರ ಕಳೆದುಕೊಂಡೆವು; ಸಿದ್ದರಾಮಯ್ಯ

ಬೆಂಗಳೂರು,ಮಾ,10: ಐದು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಪಂಜಾಬ್ ನಲ್ಲಿ ನಮ್ಮ ತಪ್ಪಿನಿಂದ ಅಧಿಕಾರ ಕಳೆದುಕೊಂಡವು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಸಿದ್ದರಾಮಯ್ಯ, ಉತ್ತರಾಖಂಡ್ ಹಾಗೂ ಗೋವಾದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ನಿರೀಕ್ಷೆ ಇತ್ತು. ಯುಪಿಯಲ್ಲಿ ನಾವು ನಿರೀಕ್ಷೆ ಮಾಡಿರಲಿಲ್ಲ. ಪಂಜಾಬ್ ನಲ್ಲಿ ನಾವು ಅಧಿಕಾರದಲ್ಲಿದ್ದೆವು. ಆದರೆ ಈ ಬಾರಿ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ನಿರೀಕ್ಷೆ ಇತ್ತು. ನಮ್ಮ ತಪ್ಪಿನಿಂದಾಗಿ ಪಂಜಾಬ್ ನಲ್ಲಿ ಅಧಿಕಾರ ಕಳೆದುಕೊಂಡಿದ್ದೇವೆ…

 ಹೆಣ್ಣು ಮಗುವಿನ ಮೇಲಿನ ಅಸಡ್ಡೆಯನ್ನು ಮೊದಲು ಕಡಿಮೆ ಮಾಡಿಕೊಳ್ಳಬೇಕು: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು ಮಾ, 9: ಮೊದಲು ಮಹಿಳೆಯರು ಹೆಣ್ಣು ಮಗುವಿನ ಮೇಲಿನ ಅಸಡ್ಡೆಯನ್ನು ಕಡಿಮೆ ಮಾಡಿಕೊಳ್ಳುವ ಅವಶ್ಯಕತೆ ಹೆಚ್ಚಾಗಿದೆ ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಅ ಜೊಲ್ಲೆ ಅಭಿಪ್ರಾಯಪಟ್ಟರು. ಜಯನಗರದ ಯುನೈಟೆಡ್‌ ಆಸ್ಪತ್ರೆಯ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಹೊರತಂದಿರುವ ಕೇವಲ 390 ರೂಪಾಯಿಗಳಲ್ಲಿ ಮಹಿಳಾ ಸಮಗ್ರ ಆರೋಗ್ಯ ಪರೀಕ್ಷೆಯನ್ನು ಮಾಡುವಂತಹ ವಿಶೇಷ ಪ್ಯಾಕೇಜ್‌ಗೆ ಚಾಲನೆ ನೀಡಿ ಮಾತನಾಡಿದರು. ಸೊಸೆ ಅಥವಾ ಮಗಳು ಹೆರಿಗೆ ಆದಾಗ ಮೊದಲು ಕೇಳುವ ಪ್ರಶ್ನೆ ಗಂಡೋ,…

ಕಂದಾಯ ದಾಖಲೆಗಳು ಇನ್ನೂ ಮನೆಬಾಗಿಲಿಗೆ

ಚಳ್ಳಕೆರೆ,ಮಾ,10: ಕ್ಷೇತ್ರ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಗ್ರಾಮೀಣ ಪ್ರದೇಶದ ಹಳ್ಳಿಯ ಜನ ಕಂದಾಯ ಇಲಾಖೆ ಹಲವು ದಾಖಲೆಗಳಾದ ಪಹಣಿ ,ಅಟ್ಲಾಸ್, ಆದಾಯ ಜಾತಿ ಪ್ರಮಾಣ ಪತ್ರ ಮತ್ತು ಇತರೆ ಕಂದಾಯ ದಾಖಲೆಗಳಿಗೆ ತಾಲೂಕು ಕಚೇರಿಗೆ ಅಲೆದಾಡಿಸುವುದನ್ನು ತಪ್ಪಿಸುವ ಸಲುವಾಗಿ ಸರ್ಕಾರ ನೂತನ ಕಾರ್ಯಕ್ರಮವನ್ನ ಕಂದಾಯ ದಾಖಲೆಗಳು ರೈತರ ಮನೆ ಬಾಗಿಲಿಗೆ ಎಂಬ ವಿನೋತನ ಕಾರ್ಯಕ್ರಮವನ್ನು ರಾಜ್ಯ ವ್ಯಾಪ್ತಿ ಜಾರಿಗೆ ತಂದಿದೆ .ಚಳ್ಳಕೆರೆ ಹಾಗೂ ಮೊಳಕಾಲ್ಮೂರು ಕ್ಷೇತ್ರದ ಸಚಿವರು ಹಾಗೂ ಶಾಸಕರು ಹಾಗೂ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಆದೇಶದಂತೆ ಅಧಿಕಾರಿಗಳೇ…

12ರಿಂದ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪರೀಕ್ಷೆ:  ಕಟ್ಟುನಿಟ್ಟಾಗಿ ಪರೀಕ್ಷೆ ನಡೆಸಲು ಸೂಚನೆ

ಬೆಂಗಳೂರು,ಮಾ,10: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಇರುವ 1,242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಇದೇ 12ರಿಂದ 16ರವರೆಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ, ಪರೀಕ್ಷಾ ಕೇಂದ್ರಗಳಿರುವ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠರು, ಕಮಿಷನರ್ ಮತ್ತಿತರ ಅಧಿಕಾರಿಗಳೊಂದಿಗೆ ಬುಧವಾರ ವಿಡಿಯೋ ಸಂವಾದ ನಡೆಸಿದರು. ಈ ಸಭೆಯಲ್ಲಿ ಅವರು, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಕಲು ಹೊಡೆಯುವುದು ಸೇರಿದಂತೆ ಯಾವುದೇ ಅಕ್ರಮಕ್ಕೆ ಕಿಂಚಿತ್ತೂ ಅವಕಾಶ ಮಾಡಿಕೊಡಬಾರದು. ಏನಾದರೂ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣವೇ ಕ್ರಮ…

ಚಿತ್ರ ಡಾನ್ ಬೋಸ್ಕೋದಲ್ಲಿ ಮಹಿಳಾ ದಿನಾಚರಣೆ

ಚಿತ್ರದುರ್ಗ,ಮಾ,10:ಇಲ್ಲಿನ  ಚಿತ್ರ ಡಾನ್ ಬೋಸ್ಕೋ ಸಂಸ್ಥೆಯ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಶ್ರೀಮತಿ ಸುಧಾ ಅವರು ಮಹಿಳೆಯರು ಸ್ವಾವಲಂಬನೆ ಮತ್ತು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಬೇಕು ಆಗ ಮಾತ್ರ ಸುಸ್ಥಿರ ಸಮಾಜ ಕಟ್ಟಬಹುದೆಂದು ಹೇಳಿದರು. ಅಭಿವೃದ್ಧಿಯ ಕಾಲಘಟ್ಟದಲ್ಲಿ ಮಹಿಳೆಯರು ಶಿಕ್ಷಣ ಮತ್ತು ಸಾಮಾಜಿಕವಾಗಿ ಚಲನಶೀಲರಾಗಬೇಕು ಆಗ ಮಾತ್ರ ಅತ್ಯುತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯ ಪಟ್ಟರು. ಡಾನ್ ಬೋಸ್ಕೋ ಸಂಸ್ಥೆಯ ನಿರ್ದೇಶಕರಾದ ಫಾದರ್…

ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿದ ಫೊರ್ಟಿಸ್ ಆಸ್ಪತ್ರೆ

ಬೆಂಗಳೂರು,ಮಾ,09: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಫೋರ್ಟಿಸ್ ಆಸ್ಪತ್ರೆ ಹಾಗೂ ವಿದ್ಯಾ ಫೌಂಡೇಷನ್ ಸಹಭಾಗಿತ್ವದಲ್ಲಿ 200ಕ್ಕೂ ಹೆಚ್ಚು ಬಡ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಫೊರ್ಟಿಸ್ ಆಸ್ಪತ್ರೆ ಸ್ತೀರೋಗ ತಜ್ಞೆ ಡಾ. ಗಾಯತ್ರಿ ಕಾಮತ್, ಬಡ ಕುಟುಂಬದ ಮಹಿಳೆಯರು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದಿಲ್ಲ. ಯಾವುದೇ ಆರೋಗ್ಯ ಸಮಸ್ಯೆ ಇದ್ದರೂ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಳ್ಳುವುದು ಅಪರೂಪ. ಆರ್ಥಿಕ ಪರಿಸ್ಥಿತಿಯ ಕಾರಣ ಅವರು…

ನಿರ್ದೇಶಕ ಸ್ಥಾನಕ್ಕೆ ತಾರಾಮೌಲ್ಯತಂದ ಪುಟ್ಟಣ್ಣಕಣಗಾಲ್

ನಿರ್ದೇಶಕ ಸ್ಥಾನಕ್ಕೆ ತಾರಾಮೌಲ್ಯತಂದ ಪುಟ್ಟಣ್ಣಕಣಗಾಲ್ ಕನ್ನಡದಲ್ಲಿ ನಿರ್ದೇಶಕನ ಪಟ್ಟಕ್ಕೆತಾರಾಮೌಲ್ಯತಂದುಕೊಟ್ಟ ಎಸ್.ಆರ್.ಪುಟ್ಟಣ್ಣಕಣಗಾಲ್(ಸುಬ್ರವೇಷ್ಠಿ ರಾಮಸ್ವಾಮಯ್ಯ ಸೀತಾರಾಮ ಶರ್ಮ) ಅವರು ಬಿ.ಆರ್.ಪಂತುಲುಅವರಗರಡಿಯಲ್ಲಿ ಪಳಗಿ ಬಂದವರು. ಪುಟ್ಟಣ್ಣಕಣಗಾಲ್ ಮೈಸೂರುಜಿಲ್ಲೆಯ ಪಿರಿಯಾಪಟ್ಟಣತಾಲ್ಲೂಕುಕಣಗಾಲ್‌ಗ್ರಾಮದಲ್ಲಿ ಪುಟ್ಟಣ್ಣ ೧೯೩೩ರ ಡಿಸೆಂಬರ್ ೧ರಂದು ಜನಿಸಿದರು.ಪ್ರಾಥಮಿಕ ಶಾಲೆಯನ್ನುಕಣಗಾಲ್‌ನಲ್ಲಿ ಓದಿ ಮುಂದಿನ ವ್ಯಾಸಂಗಕ್ಕಾಗಿ ಮೈಸೂರಿಗೆ ಬಂದರು.ಭಿಕ್ಷಾನ್ನ ಮಾಡಿಕೊಂಡುಓದಬೇಕಾದ ಪರಿಸ್ಥಿತಿ.ವರದಾಚಾರ್‌ಎನ್ನುವಛಾಯಾಗ್ರಾಹಕರ ಮನೆಯಲ್ಲಿ ವಾಸ್ತವ್ಯದ ಅವಕಾಶ ದೊರೆತಿತ್ತು.ಬಿಡುವಿನಲ್ಲಿಅವರ ಸ್ಟುಡಿಯೋಗೆ ಹೋಗಿ ಛಾಯಾಗ್ರಹಣ ಕಲೆ ಬಗ್ಗೆ ಅರಿತುಕೊಳ್ಳುತ್ತಿದ್ದರು.ಚಲನಚಿತ್ರಗಳನ್ನು ನೋಡುವ ಹವ್ಯಾಸ ಬೆಳೆಸಿಕೊಂಡಿದ್ದ ಪುಟ್ಟಣ್ಣಒಮ್ಮೆ ಮೈಸೂರಿನ ಪ್ರೀಮಿಯರ್ ಸ್ಟುಡಿಯೋ ಒಳಗೆ ಹೋಗಲು ಪ್ರಯತ್ನಿಸಿ ನಿರಾಶರಾದರು.ನಟಭಯಂಕರಗಂಗಾಧರರಾಯರಕಂಪನಿಯಲ್ಲಿ ಸಣ್ಣ ಕೆಲಸ ಮಾಡಿದರು.ಧರಿಸಲು…

ಉಜ್ವಲ ಭವಿಷ್ಯಕ್ಕೆ ನ್ಯಾನೋ ತಂತ್ರಜ್ಞಾನ ನಿರ್ಣಾಯಕ: ಬೊಮ್ಮಾಯಿ

ಬೆಂಗಳೂರು,ಮಾ,07: ನ್ಯಾನೋ ತಂತ್ರಜ್ಞಾನದ ಮೂಲಕ ತಯಾರಿಸಿರುವ ನ್ಯಾನೋ ಯೂರಿಯಾ ರಸಗೊಬ್ಬರವು ಪರೀಕ್ಷಾ ಹಂತದಲ್ಲಿ ಯಶಸ್ವಿಯಾಗಿದ್ದು, ಇದು ಮುಂಬರುವ ದಿನಗಳಲ್ಲಿ ರೈತರ ಬದುಕನ್ನು ಹಸನಾಗಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವರ್ಚುಯಲ್ ಮಾದರಿಯಲ್ಲಿ ಏರ್ಪಡಿಸಿರುವ ಮೂರು ದಿನಗಳ 12ನೇ ವರ್ಷದ `ಬೆಂಗಳೂರು-ಇಂಡಿಯಾ ನ್ಯಾನೋ ಸಮಾವೇಶ’ವನ್ನು ಸೋಮವಾರ ಉದ್ಘಾಟಿಸಿ, ಅವರು ಮಾತನಾಡಿದರು. ಈ ಸಮಾವೇಶವು ಬುಧವಾರದವರೆಗೆ ನಡೆಯಲಿದೆ. `ನ್ಯಾನೋ ಯೂರಿಯಾವನ್ನು ರಾಜ್ಯದ ಎಲ್ಲ ಕೃಷಿ ವಿ.ವಿ.ಗಳಲ್ಲಿ ಈಗಾಗಲೇ ಪರೀಕ್ಷೆಗೆ ಒಳಪಡಿಸಲಾಗಿದ್ದು, ಒಳ್ಳೆಯ ಫಲಿತಾಂಶ ಬಂದಿದೆ. ಇದು ಮುಂಬರುವ ದಿನಗಳಲ್ಲಿ…

1 51 52 53 54 55 126
Girl in a jacket