Girl in a jacket

Author kendhooli_editor

ಹಿರಿಯ ಕಲಾವಿದೆ ಭಾರ್ಗವಿ ನಾರಾಣ್ ನಿಧನ

ಬೆಂಗಳೂರು,ಫೆ,14:ಹಿರಿಯ ನಟಿ ಭಾರ್ಗವಿ ನಾರಾಯಣ್ (84)ಇಂದು ಸಂಜೆ  ನಿಧನವಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಸಂಜೆ 7.30ಕ್ಕೆ ನಿಧನ ಹೊಂದಿದ್ದಾರೆ. ಎರಡು ಕನಸು, ಪಲ್ಲವಿ ಅನುಪಲ್ಲವಿ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಪ್ರಖ್ಯಾತ ರಂಗಭೂಮಿ ಹಿರಿಯ ಕಲಾವಿದೆ, ದೂರದರ್ಶನ ಧಾರವಾಹಿಗಳ ಮೌಲ್ಯಯುತ ಪಾತ್ರಗಳ ನಿರ್ವಹಣೆಯ ಅನುಭವಿಕ ಪಾತ್ರಧಾರಿ ಎಂದೇ ಪ್ರಸಿದ್ಧರಾಗಿರುವ ಭಾರ್ಗವಿ ನಾರಾಯಣ್ ಅವರು ಫೆಬ್ರುವರಿ 4, 1938ರ ವರ್ಷದಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ತಂದೆ ಡಾ. ಎಂ. ರಾಮಸ್ವಾಮಿ, ತಾಯಿ ನಾಮಗಿರಿಯಮ್ಮ. ಮಹಾರಾಣಿ ಕಾಲೇಜಿನಿಂದ ಬಿ.ಎಸ್ಸಿ.…

ಮಹಿಳಾಸ್ವಸಹಾಯಸಂಘಗಳಜತೆಗೂಡಿದರೆ ಆರ್ಥಿಕ ಸಾಕ್ಷರತೆ ಸಾಧ್ಯ ‘

ಬೆಂಗಳೂರು,ಫೆ,14: ಬ್ಯಾಂಕುಗಳು ಲಕ್ಷಾಂತರ ಸದಸ್ಯರನ್ನು ಹೊಂದಿರುವ ಮಹಿಳಾ ಸ್ವಸಹಾಯ ಗುಂಪುಗಳ ಜತೆಗೂಡಿ ಕೆಲಸ ಮಾಡಿದರೆ ಸಮಾಜದಲ್ಲಿ ಆರ್ಥಿಕ ಸಾಕ್ಷರತೆಯು ತಾನಾಗಿಯೇ ಬರುತ್ತದೆ ಎಂದು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕ್ ಸೋಮವಾರ ಏರ್ಪಡಿಸಿದ್ದ ಆರ್ಥಿಕ ಸಾಕ್ಷರತೆ ಕಾರ್ಯಕ್ರಮ ದಲ್ಲಿ ಮಾತನಾಡಿದ ಅವರು, ಇನ್ನು ಆರು ತಿಂಗಳಲ್ಲಿ ಈ ಸ್ವಸಹಾಯ ಗುಂಪುಗಳ ಚಟುವಟಿಕೆಗಳು ಸಂಪೂರ್ಣ ಡಿಜಿಟಲ್ ರೂಪ ಪಡೆಯಲಿವೆ. ಹೀಗಾಗಿ, ಬ್ಯಾಂಕಿಂಗ್ ವ್ಯವಸ್ಥೆಯು ಸುಸ್ಥಿರತೆ, ಸಮಾನತೆ ಮತ್ತು ಸಮಸ್ತರನ್ನೂ ಒಳಗೊಳ್ಳುವಂತಹ ಉಪಕ್ರಮಗಳನ್ನು ವ್ಯಾಪಕಗೊಳಿಸಬೇಕು…

ಮೆಕ್‌ಡೊನಾಲ್ಡ್ಸ್‌ನ  ವೆಸ್ಟ್ ಲೈಫ್ ಡೆವಲಪ್‌ಮೆಂಟ್ ಸಂಸ್ಥೆಯ ತ್ರೈಮಾಸಿಕ ಹಣಕಾಸು ಫಲಿತಾಂಶ ಘೋಷಣೆ

ಬೆಂಗಳೂರು,ಫೆ,14: ಮೆಕ್‌ಡೊನಾಲ್ಡ್ಸ್‌ನ ರೆಸ್ಟೋರೆಂಟ್‌ನ ಮಾಸ್ಟರ್ ಫ್ರಾಂಚೈಸಿಯಾದ ವೆಸ್ಟ್‌ಲೈಫ್‌ ಡೆವಲಪ್‌ಮೆಂಟ್ ಸಂಸ್ಥೆಯ ಡಿಸೆಂಬರ್ ಅಂತ್ಯಕ್ಕೆ ತ್ರೈಮಾಸಿಕ ಹಣಕಾಸು ಫಲಿತಾಂಶವನ್ನು ಪ್ರಕಟಿಸಿದೆ. ಇಂದೆಂದೂ ಕಾಣದಷ್ಟೂ ಉತ್ತಮ ಫಲಿತಾಂಶವನ್ನು ವೆಸ್ಟ್‌ಲೈಫ್ ಡೆವಲಪ್‌ಮೆಂಟ್ ಸಂಸ್ಥೆ ಸಾಧಿಸಿದೆ. 4,763.8 ಮಿಲಿಯನ್ ನಷ್ಟು ಆದಾಯ ಕಂಡುಬಂದಿದ್ದು, ಇದು ಶೇ. 46.7ರಷ್ಟು ಹೆಚ್ಚಳ ಎನ್ನಲಾಗಿದೆ. ಇನ್ನು ವಾರ್ಷಿಯ ಆದಾಯದಲ್ಲೂ 836.2 ಮಿಲಿಯನ್ ಕಂಡು ಬಂದಿದ್ದು, ಇದು ಶೇ. 61ರಷ್ಟು ಹೆಚ್ಚಳವಾಗಿದೆ. ಇನ್ನೂ ರೆಸ್ಟೋರೆಂಟ್ ಆಪರೇಟಿಂಗ್ ಮಾರ್ಜಿನ್ ಶೇ.60.3ರಷ್ಟು ಏರಿಕೆಯಾಗಿದ್ದು, 1,075 ಮಿಲಿಯನ್‌ಗೆ ತಲುಪಿದೆ. ಜೊತೆಗೆ ಮೆಕ್‌ಡೊನಾಲ್ಡ್ಸ್‌ನ ಡೆಲಿವರಿಯಲ್ಲೂ…

ಗುಂಡಜ್ಜಿ ಎಂಬ ಅಬಲೆಯ ಜೀವಗಾಥೆಯ ಹೆಜ್ಜೆ ಗುರಿತು…

ಗುಂಡಜ್ಜಿ ಎಂಬ ಅಬಲೆಯ ಜೀವಗಾಥೆಯ ಹೆಜ್ಜೆ ಗುರಿತು… ಅದು ಎಪ್ಪತ್ತನೇ ದಶಕದ ಮಧ್ಯಭಾಗದ ಜುಲೈ ತಿಂಗಳ ಮಂಗಳವಾರದ ಒಂದು ದಿನ. ಎಂದಿನಂತೆ ಬೆಳಿಗ್ಗೆ ಒಂಬತ್ತರ ಸುಮಾರಿಗೆ ಶಾಲೆಗೆ ಹೊರಟು ನಿಂತಿದ್ದವನು ವಿರುಪಣ್ಣ ತಾತನ ಬರುವನ್ನು ಎದುರು ನೋಡುತ್ತಾ ಮನೆ ಬಾಗಿಲಿನಲ್ಲಿ ನಿಂತಿದ್ದೆ. ಬೆಳಿಗ್ಗೆ ನಾನು ಶಾಲೆಗೆ ಹೊರಡುವ ಸಮಯಕ್ಕೆ ಸರಿಯಾಗಿ ತಾತ ಚಂದ್ರಮೌಳೇಶ್ವರ ದೇವಸ್ಥಾನದ ತಮ್ಮ ನಿತ್ಯಪೂಜೆಯ ಸಲುವಾಗಿ ನಮ್ಮ ಮನೆಯ ಮುಂದೆ ಹಾದು ಹೋಗುತ್ತಿದ್ದ ಊರ ಮುಖ್ಯರಸ್ತೆಯಲ್ಲಿ ನಡೆದು ಹೋಗುತ್ತಿದ್ದದ್ದು ವರ್ಷಗಳಿಂದ ಚಾಲ್ತಿಯಲ್ಲಿದ್ದ ಪದ್ಧತಿ.…

ಇನ್ನೂ ಜೀತಪದ್ಧತಿ ಜೀವಂತ;ತಹಶಿಲ್ದಾರ್ ರಘುಮೂರ್ತಿ ಕಳವಳ

ತಚೆಳ್ಳಕೆರೆ,ಫೆ,09;ಭಾರತ ದೇಶ ಇಂದು ಬಲಿಷ್ಠಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದರೂ ಕೂಡ ದೇಶದ ಅಲ್ಲಲ್ಲಿ ಜೀತಪದ್ಧತಿಯ ಪ್ರಕರಣಗಳು ಕಂಡುಬರುತ್ತಿರುವುದು ತುಂಬ ವಿಷಾದದ ಸಂಗತಿಎಂದು ತಹಸೀಲ್ದಾರ್ ಎನ್.ರಘುಮೂರ್ತಿ ಹೇಳಿದರು. ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಿದ್ದ ಜೀತ ಪದ್ಧತಿ ನಿರ್ಮೂಲನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇದು ಪಾಶ್ಚಾತ್ಯ ರೀತಿಯಜೀತ ಪದ್ಧತಿಯು ಭೂಮಾಲೀಕ ಹಾಗೂ ಬೇಸಾಯಗಾರನ ಸಂಬಂಧವನ್ನು ಕ್ರಮಪಡಿಸುವ ಊಳಿಗಮಾನ್ಯಯುಗದ ಒಂದು ಪದ್ಧತಿ ಇದು ಚೀನ, ಈಜಿಪ್ಟ, ಮಧ್ಯಯುಗದ ಯೂರೋಪ್, ಜಪಾನ್, ರಷ್ಯ ಮುಂತಾದ ದೇಶಗಳಲ್ಲಿ ಪ್ರಚಲಿತವಾಗಿತ್ತು. ಇದು ಒಂದೊಂದು ಪ್ರದೇಶದಲ್ಲಿ…

ವಾಸುದೇವರೆಡ್ಡಿಯಂತ ಸಾವಿರಾರು ಸ್ವಯಂಸೇವಕರು ಕಟ್ಟಿದ ಮನೆಗೆ ಈಗ ಗೆದ್ದಲು ಹುಳುಗಳ ಕಾಟ..!

ವಾಸುದೇವರೆಡ್ಡಿಯಂತ ಸಾವಿರಾರು ಸ್ವಯಂಸೇವಕರು ಕಟ್ಟಿದ ಮನೆಗೆ ಈಗ ಗೆದ್ದಲು ಹುಳುಗಳ ಕಾಟ..! ಹೈಸ್ಕೂಲು ಮೈದಾನದಲ್ಲಿ ಗೆಳೆಯರೊಂದಿಗೆ ಸೇರಿ ಕ್ರಿಕೆಟ್ ಆಟ ಆಡುತ್ತಿದ್ದವನು ಸಹಪಾಠಿ ಪುರುಷೋತ್ತಮರೆಡ್ಡಿ ಬೌಂಡರಿ ಗೆರೆ ದಾಟಿಸಿ ಹೊಡೆದ ಚೆಂಡನ್ನು ಬೆನ್ನತ್ತಿ, ಕರೆಂಟ್ ಆಫೀಸಿನ ಮುಳ್ಳಿನ ತಂತಿಬೇಲಿಯನ್ನು ದಾಟಿ, ಅಲ್ಲಿದ್ದ ಮೊಣಕಾಲು ಎತ್ತರದ, ಒಣಗಿ ನಿಂತ ಹುಲ್ಲಿನ ಮಧ್ಯೆ ಹೆಚ್ಚು ಕಡಿಮೆ ಅದೇ ಬಣ್ಣದ ಟೆನಿಸ್ ಬಾಲ್ ಹುಡುಕುತ್ತಾ ಸುಮಾರು ಹೊತ್ತು ನಿಂತೆ. ಹತ್ತು ನಿಮಿಷಗಳ ತೀವ್ರ ಹುಡುಕಾಟದ ನಂತರ ಕೈಗೆ ಸಿಕ್ಕ ಚೆಂಡನ್ನು ಪಿಚ್…

ಕೇದ್ರಕಾರಾಗೃಹದ ಕರಾಳ ಕಥೆ.

ಕೇಂದ್ರ ಕಾರಾಗೃಹದ ಕರಾಳ ಕಥ Writing;ಪರಶಿವ ಧನಗೂರು ಇದೀಗ ರಾಜ್ಯದ ರಾಜಧಾನಿ ಬೆಂಗಳೂರಿನ ಕೇಂದ್ರ ಕಾರಾಗೃಹದ ಪರಪ್ಪನ ಅಗ್ರಹಾರದ ಬಂದೀಖಾನೆ ಬಾರೀ ಸದ್ದುಮಾಡುತ್ತಿದೆ. ತನ್ನ ಕುಖ್ಯಾತಿಯಿಂದಲೇ ಸುದ್ದಿಯಾಗುತ್ತಿದೆ! ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೆಲವು ಭ್ರಷ್ಟ ಜೈಲು ಪೊಲೀಸ್ ಸಿಬ್ಬಂದಿಗಳು ಅಲ್ಲಿರುವ ರೌಡಿಗಳಿಂದ ಲಂಚ ಪಡೆಯುತ್ತಿರುವ ವೀಡಿಯೋ ದ್ರಶ್ಯಗಳು ನಾಡಿನ ಹಲವು ಮೀಡಿಯಾಗಳಲ್ಲಿ ಪ್ರಸಾರವಾಗಿ ಕಾರಾಗೃಹ ಕ್ಕೆ ಕಿಚ್ಚು ಹಬ್ಬಿತ್ತು. ಬೆಂಗಳೂರಿನ ಕೇಂದ್ರ ಕಾರಾಗೃಹ ದಲ್ಲಿರುವ ಕೆಲವು ವಿಚಾರಣಾಧೀನ ಕೈದಿಗಳು ಹಣಕೊಟ್ಟು ಹಲವು ಸೌಲಭ್ಯಗಳನ್ನು ಪಡೆಯುತ್ತಿರುವ…

ಹಕ್ಕುಗಳು ನಮ್ಮವು- ಕರ್ತವ್ಯಗಳು ನಿಮ್ಮವು!

ಹಕ್ಕುಗಳು ನಮ್ಮವು- ಕರ್ತವ್ಯಗಳು ನಿಮ್ಮವು! ಭಾರತೀಯರು ತಮ್ಮ ಮೂಲಭೂತ ಕರ್ತವ್ಯಗಳನ್ನು ಮರೆತು ಕೇವಲ ಹಕ್ಕುಗಳಿಗಾಗಿ ಹೋರಾಡುತ್ತ ಬಂದ ಕಾರಣ ಸಮಯ ಪೋಲಾಯಿತಲ್ಲದೆ ದೇಶ ದುರ್ಬಲವಾಯಿತು ಎಂದಿದ್ದಾರೆ ಪ್ರಧಾನಮಂತ್ರಿ ಮೋದಿ. ಮೋದಿಯವರು ಮೂಲಭೂತ ಹಕ್ಕುಗಳಿಗೆ ಮೂಲಭೂತ ಕರ್ತವ್ಯಗಳನ್ನು ತಳುಕು ಹಾಕುತ್ತಿರುವುದು ಇದೇ ಮೊದಲೇನೂ ಅಲ್ಲ. ಪ್ರಾಯಶಃ ಕಡೆಯ ಬಾರಿಯೂ ಅಲ್ಲ. ಈ ಹಿಂದೆಯೂ ಇಂತಹ ಮಾತುಗಳನ್ನು ಆಡಿರುವುದು ಉಂಟು. ಮೂಲಭೂತ ಹಕ್ಕುಗಳಿಂದ ದೇಶ ದುರ್ಬಲವಾಗಿಲ್ಲ. ಮೇಲು ಕೀಳುಗಳ, ಏಣಿಶ್ರೇಣಿಯ, ಕರ್ಮಸಿದ್ಧಾಂತದ, ಜಾತಿ ವ್ಯವಸ್ಥೆಯ ಯಥಾಸ್ಥಿತಿವಾದಿ ಅಸ್ತ್ರಗಳ ಅಡಿಪಾಯ…

ರಾಜ್ಯದ ಎಲ್ಲ ಪ್ರಾದೇಶಿಕ ವಲಯಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಪ್ರಾರಂಭ : ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಫೆ, 04 :ರಾಜ್ಯದ ಎಲ್ಲ ಪ್ರಾದೇಶಿಕ ವಲಯಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಬೆಂಗಳೂರಿನ ಉತ್ತರಹಳ್ಳಿ ಆಯೋಜಿಸಲಾಗಿದ್ದ ಜನಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ‘ಆರೈಕೆಯ ಅಂತರವನ್ನು ಕಡಿತಗೊಳಿಸಿ’ ಎಂಬ ಘೋಷ ವಾಕ್ಯವನ್ನು ಬಿಡುಗಡೆ ಮಾಡಿದರು. ಸುಲಭ ದರದಲ್ಲಿ ಪೆಟ್ ಸ್ಕ್ಯಾನ್ ಪರೀಕ್ಷೆ : ಕಿದ್ವಾಯಿ ಸಂಸ್ಥೆಯ ಆಧುನೀಕರಣಕ್ಕಾಗಿ ಎರಡು ಪೆಟ್ ಸ್ಕ್ಯಾನ್ ಮೆಷಿನ್ ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ.…

ವೈಜ್ಞಾನಿಕ ನೀರು ಬಳಕೆ ಕುರಿತು ಜಾಗೃತಿ ಮೂಡಿಸುವ ಅಗತ್ಯವಿದೆ; ರಘುಮೂರ್ತಿ

ಚಳ್ಳಕೆರೆ, ಫೆ,04:ಒಟ್ಟು ಭೂಮಿಯ ಶೇಕಡ 71ರಷ್ಟು ಪಾದ ನೀರಿನಿಂದ ತುಂಬಿತ್ತು ಈ 71ರಷ್ಟು ನೀರಿನ ಪ್ರದೇಶದಲ್ಲಿ ಶೇಕಡಾ ಮೂರರಷ್ಟು ಮಾತ್ರ ಕುಡಿಯಲು ಯೋಗ್ಯವಾದ ನೀರಿದೆ ಈ ನೀರಿನ ಬಳಕೆಯನ್ನು ವೈಜ್ಞಾನಿಕವಾಗಿ ಬಳಸಿಕೊಳ್ಳುವ ಅನಿವಾರ್ಯತೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದೆ ಎಂದು ಚಳ್ಕೆರೆ ತಾಸಿಲ್ದಾರ್ ಏನ್ ರಘುಮೂರ್ತಿ ಹೇಳಿದರು. ಅಟಲ್ ಭೂಜಲ ಯೋಜನೆ ಅನುಷ್ಠಾನ ಕುರಿತಾದ ಗ್ರಾಮ ಸಭೆ ಹಾಗೂ ಕಾರ್ಯಾಗಾರದಲ್ಲಿ ಮಾತನಾಡಿ ಪರಿಸರದಿಂದ ನನಗಿಲ್ಲದೆ ವಾದಂತ ಕಾಡು ಮತ್ತು ಮರಗಿಡಗಳ ದುರ್ಬಳಕೆಯನ್ನು ಮಾಡಿಕೊಂಡ…

ಸರ್ಕಾರಿ ಶಾಲೆಗಳು ದೇವಸ್ಥಾನಕ್ಕಿಂತ ಮಿಗಿಲು;ತಹಶಿಲ್ದಾರ್ ರಘುಮೂರ್ತಿ

ನಾಯಕನಹಟ್ಟಿ,ಫೆ,03ಸರ್ಕಾರಿ ಶಾಲೆ ಮತ್ತು ಕಛೇರಿಗಳು ದೇವಸ್ಥಾನಕ್ಕಿಂತ ಮಿಗಿಲು ಇವುಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಉತ್ತಮ ನಿರ್ವಹಣೆ ಮಾಡಿದಾಗ ದೇವಸ್ಥಾನದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ತಾಸಿಲ್ದಾರ್ ಏನ್ ರಘುಮೂರ್ತಿ ಹೇಳಿದ ರೂ ನಾಯಕನಹಟ್ಟಿ ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ವಿದ್ಯಾ ಸಂಸ್ಥೆಯಲ್ಲಿ ಹೊಸದಾಗಿ ನಿರ್ಮಾಣ ಮಾಡಿರುವಂತ ಶೌಚಾಲಯ ಮತ್ತು ಸಾಂಸ್ಕೃತಿಕ ಭವನದ ಭೂಮಿ ಪೂಜೆ ನೆರವೇರಿಸಿ ಮಾತನಾಡಿ ಖಾಸಗಿ ಶಾಲೆಗಳ ಜೊತೆಗೆ ಸರ್ಕಾರಿ ಶಾಲೆಗಳು ಕೂಡ ಮೂಲಭೂತ ಸೌಕರ್ಯಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಿ ಗುಣಮಟ್ಟದ ಶಿಕ್ಷಣವನ್ನು ನೀಡಿದಾಗ ದೇಶದ ಅಭಿವೃದ್ಧಿಗೆ…

ಶೌಚಾಲಯ ಗೋಡೆ ಎತ್ತರಕ್ಕೆ ಕರವೇ ಮನವಿ

ವರದಿಗಾರರು ಬೀರು ಬೆನ್ನೂರ ನಿಡಗುಂದಿ ನಿಡಗುಂದಿ,ಫೆ02 : ಕರ್ನಾಟಕ ರಕ್ಷಣಾ ವೇದಿಕೆ ಅರಳದಿನ್ನಿ ಮತ್ತು ಆಲಮಟ್ಟಿ ಘಟಕದ ವತಿಯಿಂದ ಅರಳದಿನ್ನಿ ಗ್ರಾಮದಲ್ಲಿನ ಸಾರ್ವಜನಿಕ ಮಹಿಳಾ ಶೌಚಾಲಯದ ಗೋಡೆಯನ್ನು ಎತ್ತರ ಹೆಚ್ಚಿಸಲು ಆಲಮಟ್ಟಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ ಮಂಜುನಾಥ್ ಹಿರೇಮಠ್ ಅವರಿಗೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಮನವಿ ಸಲ್ಲಿಸಲಾಯಿತು. ಆಲಮಟ್ಟಿ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ಬರುವ ಅರಳದಿನ್ನಿ ಗ್ರಾಮದಲ್ಲಿ ಹೆಣ್ಣುಮಕ್ಕಳಿಗೋಸ್ಕರ ಒಂದು ಹೊಸ ಶೌಚಾಲಯ ನಿರ್ಮಾಣಕ್ಕಾಗಿ ನಮ್ಮ ಸಂಘಟನೆಯಿಂದ ಮತ್ತು ಊರಿನ ಗ್ರಾಮಸ್ಥರಿಂದ ಹಲವಾರು ಬಾರಿ ಮನವಿ…

ಮಹಾತ್ಮಗಾಂಧೀಜಿ ತ್ಯಾಗಕ್ಕೆ ಬೆಲೆಕಟ್ಟಲಾಗದು; ರಘುಮೂರ್ತಿ

ಚಳ್ಳಕೆರೆ, ಜ30;ಮಹಾತ್ಮ ಗಾಂಧೀಜಿ ಅವರ ಪುಣ್ಯತಿಥಿಯ ಹಿನ್ನೆಲಯಲ್ಲಿ ಹುತಾತ್ಮರ ದಿನವನ್ನು ಆಚರಿಸಲಾಗುತ್ತಿದೆ. ಭಾರತ ದೇಶದ ರಕ್ಷ ಣೆಯಲ್ಲಿ ಪ್ರಾಣ ತೆತ್ತು ಹುತಾತ್ಮರಾದ ಜವಾನರೆಷ್ಟೋ ಮಂದಿ ಅದರಲ್ಲಿ ಮಹಾತ್ಮ ಗಾಂಧೀಜಿಯವರ ತ್ಯಾಗಕ್ಕೆ ಬೆಲೆ ಕಟ್ಟಲಾಗದು ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ಹೇಳಿದರು . ನಗರದ ಹೊರವಲಯದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇಂದು ಶಾಲೆ ವತಿಯಿಂದ ಹಮ್ಮಿಕೊಂಡಿದ್ದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅಲ್ಲಿನ ವಸತಿ ಶಾಲೆಯ ಮಕ್ಕಳೊಂದಿಗೆ ಎರಡು ನಿಮಿಷ…

ಅಶುಭ ಸುದ್ದಿಗಳ ದನಿಯಾದ ಈ ಸೇವಕ

ಅಶುಭ ಸುದ್ದಿಗಳ ದನಿಯಾದ ಈ ಸೇವಕ ಅದು ೧೯೯೧ರ ಜನವರಿ ತಿಂಗಳ ಮೊದಲ ದಿನ. ಹೊಸವರ್ಷದ ಹರ್ಷ ವಿಶ್ವದ ಎಲ್ಲೆಡೆ ಪಸರಿಸಿದ ದಿನ. ನಾನು ಕಳೆದ ಮೂರು ವರ್ಷಗಳಿಂದ ಸದೂರದ ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ಸೇವಾನಿರತನಾಗಿದ್ದವನು, ಒಂದು ತಿಂಗಳ ರಜೆಯ ಮೇಲೆ ದಾವಣಗೆರೆಗೆ ಬಂದಿದ್ದೆ. ಅಂದು ಸಾಯಂಕಾಲ ಐದರ ವೇಳೆ ಇದ್ದಿರಬಹುದು, ಸ್ನೇಹಿತ ಭದ್ರಾವತಿ ಮೂಲದ ಲೆಕ್ಚರರ್ ರೇಣುಕಾಪ್ರಸಾದರನ್ನು ಭೇಟಿಯಾಗಿ ಹೊಸವರ್ಷದ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳಲೆಂದು ಹೊರಗೆ ಹೋಗಿದ್ದವನು, ಎಂ.ಸಿ.ಸಿ. “ಬಿ” ಬ್ಲಾಕಿನಲ್ಲಿದ್ದ ನಮ್ಮ ಬಾಡಿಗೆ…

ಹೋರಾಟಗಳೇ ಬಯಲು ಸೀಮೆ ಜನರ ಶಕ್ತಿ !

ಚಿತ್ರದುರ್ಗ, ಜ,28;ಚಿತ್ರದುರ್ಗದಲ್ಲಿ 29 ಪೆಬ್ರವರಿ ಯಂದು ಎರಡು ಪ್ರಮುಖ ಕಾರ್ಯಕ್ರಮಗಳು ವಿಶೇಷ ಗಮನ ಸೆಳೆದವು ಒಂದು- ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ರಾಯಚೂರು ನ್ಯಾಯಾಧೀಶರೊಬ್ಬರು ಅವಮಾನ ಮಾಡಿರುವುದನ್ನು ಖಂಡಿಸಿ ದಲಿತ,ಪ್ರಗತಿಪರ ಸಂಘಟನೆಗಳು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದವು ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದು ನೃೆತಿಕತೆಯೂ ಕೂಡ ನಾನೂ ಭಾಗವಹಿಸಿ ಭಾರತದ ಸಂವಿಧಾನಕ್ಕೆ ,ಪ್ರಜಾಪ್ರಭುತ್ವಕ್ಕೆ ಗೌರವಿಸುವುದು ಜವಾಬ್ದಾರಿಯೂ ಹೌದು. ಅಂಬೇಡ್ಕರ್ ಅವರ ವಿಚಾರಧಾರೆಗಳು ಮತ್ತು ಅವರು ನೀಡಿದ ಸಂವಿಧಾನವು ಈ ದೇಶವನ್ನು ರಕ್ಷಣೆ ನೀಡಿದೆ ಎಂಬುವುದರಲ್ಲಿ ಎರಡು ಮಾತಿಲ್ಲ ಆ ಕಾರಣಕ್ಕೆ ಪ್ರತಿಭಟನೆಯಲ್ಲಿ…

ಮೂರು ತಿಂಗಳಲ್ಲಿ ಬ್ಯಾಕ್ ಲಾಗ್ ಹುದ್ದೆಗೆ ಭರ್ತಿಗೆ ಕ್ರಮ: ಗೋವಿಂದ ಕಾರಜೋಳ

ಬೆಂಗಳೂರು,ಜ,29:ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ದ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಿನ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಿ ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಉಸ್ತುವಾರಿಗಾಗಿ ನೇಮಕ ಗೊಂಡಿರುವ ಉಪಸಮಿತಿ ಇಂದು ಸಭೆ ಸೇರಿ ನಿರ್ದೇಶನ ನೀಡಿತು. ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷರಾಗಿರುವ ಈ ಸಮಿತಿಯಲ್ಲಿ ರಾಜ್ಯ ಸಚಿವ ಸಂಪುಟದ ಆರು ಸದಸ್ಯರಿದ್ದಾರೆ.…

ಫುಡ್ ಪಾರ್ಕ್ ಯಶಸ್ವಿಗೊಳಿಸಲು ಪರಿಣಾಮ ಮೌಲ್ಯಮಾಪನ : ಸಿಎಂ ಸೂಚನೆ

ಬೆಂಗಳೂರು, ಜ, 29 : ರಾಜ್ಯ ಸರ್ಕಾರ ಪ್ರಾಯೋಜಿತ ನಾಲ್ಕು ಆಹಾರ ಪಾರ್ಕ್ ಗಳನ್ನು ಯಶಸ್ವಿಗೊಳಿಸಲು ‘ಪರಿಣಾಮ ಮೌಲ್ಯಮಾಪನ’ ( impact assessment) ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಆಹಾರ ಕರ್ನಾಟಕ ನಿಯಮಿತದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಇಂದು ಮಾತನಾಡುತ್ತಿದ್ದರು.ಬಾಗಲಕೋಟೆ, ಹಿರಿಯೂರು, ಮಾಲೂರು ಮತ್ತು ಜೇವರ್ಗಿಯಲ್ಲಿರುವ ಫುಡ್ ಪಾರ್ಕ್ ಗಳಿಗೆ ಸಂಬಂಧಿಸಿದಂತೆ ಭೂಮಿ, ಈಕ್ವಿಟಿ, ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಬೇಕು. ಆಹಾರ ಕರ್ನಾಟಕ ನಿಯಮಿತ ಫುಡ್ ಪಾರ್ಕ್ ಗಳನ್ನು ಆರಂಭಿಸಲು ಕೋರಿರುವ 26 ಕೋಟಿ…

ರಾಮನಗರದಲ್ಲಿ 3 ವರ್ಷದಿಂದ ಮಲಗಿದ್ದವರು ಈಗ ಎದ್ದು ರಾಜಕೀಯ ಮಾಡುತ್ತಿದ್ದಾರೆ;ಎಚ್ ಡಿ ಕೆ

ರಾಮನಗರ,ಜ,28: ಈ ಜಿಲ್ಲೆಯಲ್ಲಿ ಇಷ್ಟು ದಿನ ಮಲಗಿದ್ದ ನಾಯಕರೆಲ್ಲ ಈಗ ಎದ್ದು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಚನ್ನಪಟ್ಟಣ ಶಾಸಕರೂ ಆದ ಹೆಚ್.ಡಿ. ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರಿಗೆ ತೀವ್ರ ಟಾಂಗ್ ನೀಡಿದರು. ಚನ್ನಪಟ್ಟದಲ್ಲಿ ಇಂದು ಎಲೆಕ್ಟ್ರಿಕ್ ಯುಜಿ ಕೇಬಲ್ ಕಾಮಗಾರಿಗೆ ಚಾಲನೆ ನೀಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಚನ್ನಪಟ್ಟಣದ ಅಭಿವೃದ್ಧಿ ಬಗ್ಗೆ ಏನನ್ನೂ ಮಾಡದ ಕಾಂಗ್ರೆಸ್ ನಾಯಕರು, ಮುಖ್ಯವಾಗಿ ಡಿಕೆ ಸಹೋದರರ ವಿರುದ್ಧ ವಾಗ್ದಾಳಿ ನಡೆಸಿದ ಅವರು; ನಾನು ಅವರನ್ನಾಗಲಿ…

ಯಾರಿಂದ ಯಾರೂ ತಬ್ಬಲಿಯಾಗಲ್ಲ : ಸಿದ್ದರಾಮಯ್ಯ

ಬೆಂಗಳೂರು, ಜ,28; ಜನರ ಆಶೀರ್ವಾದ ಇರುವ ವರೆಗೆ ಯಾರೂ ತಬ್ಬಲಿಯಾಗಲ್ಲ, ಅದು ಇಬ್ರಾಹಿಂ ಆದರೂ ಅಷ್ಟೇ, ನಾನೇ ಆದರೂ ಅಷ್ಟೆ. ಜನರ ಪ್ರೀತಿ ವಿಶ್ವಾಸ ಮಾತ್ರ ಮುಖ್ಯ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಪ್ರತಿಕ್ರಯಿಸಿದ್ದಾರೆ. ಶುಕ್ರವಾರ ತಮ್ಮ ನಿವಾಸದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನನ್ನ ಪ್ರಕಾರ ಸಿ.ಎಂ ಇಬ್ರಾಹಿಂ ಅವರು ಪಕ್ಷ ತೊರೆಯಲ್ಲ, ಜೆಡಿಎಸ್ ಗೆ ಹೋಗಲ್ಲ. ಈ ಹಿಂದೆ ಅವರಿಗೆ ರಾಜ್ಯ ಸಭಾ ಸ್ಥಾನವನ್ನು ತಪ್ಪಿಸಿದ್ದೇ ದೇವೇಗೌಡರು ಹಾಗಾಗಿ ಅವರು ಮತ್ತೆ ಜೆಡಿಎಸ್…

ಮಾಜಿ ಸಿಎಂ ಬಿಎಸ್ ವೈ ಮೊಮ್ಮಗಳು ಆತ್ಮಹತ್ಯೆ

ಬೆಂಗಳೂರು, ಜ. 28: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಡಾ. ಸೌಂದರ್ಯ ಅವರು ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಾ. ಸೌಂದರ್ಯ ಸಾವಿನ ಸುದ್ದಿ ಕೇಳಿ ಬಿ.ಎಸ್.ಯಡಿಯೂರಪ್ಪ ಕುಟುಂಬ ಆತಂಕಕ್ಕೆ ಒಳಗಾಗಿದೆ. ಕೌಟುಂಬಿಕ ಕಲಹದಿಂದ ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾತು ಕೇಳಿ ಬರುತ್ತಿದ್ದು, ಪೊಲೀಸ್ ತನಿಖೆಯಲ್ಲಿ ಸಂಗತಿ ಬೆಳಕಿಗೆ ಬರಬೇಕಿದೆ. 2018 ರಲ್ಲಿ ಡಾ. ಅಬ್ಬಿಗೆರೆ ನಿವಾಸಿ ಡಾ. ನೀರಜ್ ಎಂಬುವರನ್ನು ಸೌಂದರ್ಯ ಮದುವೆಯಾಗಿದ್ದರು. ನೀರಜ್ ಕೂಡ ವೈದ್ಯರಾಗಿದ್ದು ಎಂ.ಎಸ್. ರಾಮಯ್ಯ…

1 54 55 56 57 58 126
Girl in a jacket