Girl in a jacket

Author kendhooli_editor

ವಿಜಯನಗರ ಕಾಲದ ಶೌಚಾಲಯಗಳು

ವಿಜಯನಗರ ಕಾಲದ ಶೌಚಾಲಯಗಳು ಆಧುನಿಕ ಯುಗದಲ್ಲಿ ನೈರ್ಮಲ್ಯ ಮತ್ತು ಶುಚಿತ್ವಕ್ಕೆ ವಿಶೇಷ ಆದ್ಯತೆಯನ್ನು ನೀಡುವ ಪ್ರಯತ್ನಗಳು ನಿರಂತರವಾಗಿ ನಡೆಯುತ್ತಿವೆ. ಅದರಲ್ಲೂ ಬಯಲು ಬಹಿರ್ದೆಸೆಯನ್ನು ನಿರ್ಮೂಲ ಮಾಡಲು ಸರ್ಕಾರಗಳು ಇನ್ನಿಲ್ಲದ ಪ್ರಯತ್ನ ಮಾಡುತ್ತಿವೆ. ಸ್ವಚ್ಚ ಭಾರತ ನಿರ್ಮಾಣಕ್ಕೆ ಸುಸ್ಥಿರ ಆರೋಗ್ಯ ಮುಖ್ಯ, ಇದಕ್ಕೆ ಸ್ವಚ್ಚ ಪರಿಸರ ಅತ್ಯಗತ್ಯವೆಂಬುದನ್ನು ನಿತ್ಯವೂ ಬಿತ್ತರಿಸುತ್ತಿದೆ. ಈ ಪರಿಪಾಠ ಇಂದು ನಿನ್ನೆಯದಲ್ಲ. ಶೌಚಾಲಯದ್ದೂ ಒಂದು ಇತಿಹಾಸವೇ. ಭಾರತದ ಮಟ್ಟಿಗೆ ನಗರೀಕರಣವೆಂಬುದು ಸಿಂಧೂ ನಾಗರೀಕತೆಯಷ್ಟೇ ಪ್ರಾಚೀನ. ಅಂದಿನ ಜನರು ನೈರ್ಮಲ್ಯಕ್ಕೆ ನೀಡಿದ ಮಹತ್ವ ಅನನ್ಯವಾದದ್ದು. ಅಂತೆಯೇ…

ಆಂಧ್ರ ಬಿಜೆಪಿಯಲ್ಲೀಗ ಹೆಂಡದ್ದೆ ಮಾತು

ಕುಡಿತದ ವಿರುದ್ಧ ಮಹಾತ್ಮ ಗಾಂಧೀಜಿ ಸಮರವನ್ನೇ ಸಾರಿದ್ದರು. ಸ್ವಾತಂತ್ರ್ಯಾನಂತರ ಭಾರತವನ್ನು ಆಳಿದ ಯಾವ ಪಕ್ಷವೂ ಗಾಂಧಿ ಶುರುಮಾಡಿದ್ದ ಸಮರವನ್ನು ಮುಂದುವರಿಸಲಿಲ್ಲ. ಈಗ ಆಡಳಿತದ ಭಾರ ಹೊತ್ತಿರುವ ಬಿಜೆಪಿಯೂ ಈ ವಿಚಾರದಲ್ಲಿ ಸಂಬಂಧವೇ ಇಲ್ಲ ಎಂಬಂತೆ ಕೂತಿದೆ. ಏತನ್ಮಧ್ಯೆ ಆಂಧ್ರ ಪ್ರದೇಶ ಬಿಜೆಪಿ ಅಧ್ಯಕ್ಷ ಸೋಮು ವೀರರಾಜು, ಪಕ್ಷ ಅಧಿಕಾರಕ್ಕೆ ಬಂದರೆ ಮದ್ಯದ ದರವನ್ನು ಗಣನೀಯವಾಗಿ ಇಳಿಸುವ ಮಾತಾಡಿದ್ದಾರೆ. ಖಾದ್ಯತೈಲ, ಪೆಟ್ರೋಲು ದರ ಅವರ ನಜರಿನಲ್ಲಿ ಇಲ್ಲ. ಆಂಧ್ರ ಬಿಜೆಪಿಯಲ್ಲೀಗ ಹೆಂಡದ್ದೆ ಮಾತು ಭಾರತೀಯ ಜನತಾ ಪಕ್ಷದ…

ಆರ್.ಎನ್.ಸುದರ್ಶನ್‌ಚಿತ್ರರಂಗ ಪ್ರವೇಶಿಸಿದ ‘ವಿಜಯನಗರದ ವೀರಪುತ್ರ‘

ಆರ್.ಎನ್.ಸುದರ್ಶನ್‌ಚಿತ್ರರಂಗ ಪ್ರವೇಶಿಸಿದ ‘ವಿಜಯನಗರದ ವೀರಪುತ್ರ‘ ಆರ್.ನಾಗೇಂದ್ರರಾಯರು ತಮ್ಮ ಸ್ವಂತ ನಿರ್ಮಾಣ ಸಂಸ್ಥೆ ‘ಆರ್.ಎನ್.ಆರ್.ಪಿಕ್ಚರ‍್ಸ್‘ ಲಾಂಛನದಲ್ಲಿ ತೆರೆಗೆ ತಂದ ಕಪ್ಪು ಬಿಳುಪು ಚಿತ್ರ ‘ವಿಜಯನಗರದ ವೀರಪುತ್ರ‘ ೧೯೬೧ರಲ್ಲಿ ತೆರೆಕಂಡಿತು. ನಾಗೇಂದ್ರರಾಯರ ಪುತ್ರ ಆರ್.ಎನ್.ಸುದರ್ಶನ್ ಚಿತ್ರರಂಗಕ್ಕೆ ಪದರ್ಪಿಸಿದ ಚಿತ್ರವೆಂಬ ಹೆಗ್ಗಳಿಕೆಗೆ ಚಿತ್ರ ಪಾತ್ರವಾಗಿದೆ. ಸ್ವತಃಆರ್.ನಾಗೇಂದ್ರರಾಯರೇ ನಿರ್ದೇಶಿಸಿದ ಈ ಚಿತ್ರಕೆ ಅವರ ಮತ್ತೊಬ್ಬ ಪುತ್ರ ಆರ್.ಎನ್.ಕೃಷ್ಣಪ್ರಸಾದರು ವಿ.ಮನೋಹರ್‌ಅವರೊಂದಿಗೆ ಸೇರಿ ಛಾಯಾಗ್ರಹಣ ನೀಡಿದ್ದಾರೆ. ಎನ್.ಲಕ್ಷ್ಮಿನಾರಾಯಣ್ ಹಾಗೂ ವಿ.ಸೋಮಶೇಖರ್ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ವಿಜಯನಗರ ಸಾಮ್ರಾಜ್ಯದ ಸಾಮಂತ ರಾಜಗುರುವರಾಯನ ಪಾತ್ರದಲ್ಲಿ ಆರ್.ನಾಗೇಂದ್ರರಾವ್, ಆತನ ಪುತ್ರ…

ಓಮಿಕ್ರಾನ್ ಸೋಂಕು: ಅಂತರರಾಜ್ಯ ಗಡಿ ಬಂದ್ ಇಲ್ಲ

ಬೆಳಗಾವಿ,ಜ,05: ಕೊರೋನಾ ಮತ್ತು ಓಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದು ನಿಜವಾದರೂ ಬೆಳಗಾವಿ ಸೇರಿದಂತೆ ರಾಜ್ಯದ ಯಾವ ಕಡೆಗಳಲ್ಲೂ ಅಂತರರಾಜ್ಯ ಗಡಿಗಳನ್ನು ಬಂದ್ ಮಾಡುವ ಆಲೋಚನೆ ಸರಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬುಧವಾರ ಇಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬಂದಿಳಿದಾಗ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಅಂತರರಾಜ್ಯ ಗಡಿಗಳಲ್ಲಿ ರಾಜ್ಯದೊಳಕ್ಕೆ ಬರುವವರನ್ನು ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ನಿಗಾ ವಹಿಸಲಾಗುವುದು. ಸೋಂಕಿತರು ಕಂಡುಬಂದರೆ ಅಂಥವರನ್ನು ಮಾತ್ರ ನಿಯಂತ್ರಿಸಲಾಗುವುದು. ಉಳಿದಂತೆ ಅಂತರರಾಜ್ಯ…

ರಾಜ್ಯಾದ್ಯಂತ ವಾರಾಂತ್ಯ ಕರ್ಪ್ಯೂ ಜಾರಿ

ಬೆಂಗಳೂರು, ಜ,4: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಅನ್ನು ಜಾರಿಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸುದೀರ್ಘ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿದ ಸಚಿವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ ಮೊದಲಿನಂತೆಯೇ ಮುಂದುವರಿಯುತ್ತದೆ ಎಂದಿದ್ದಾರೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ…

ಗ್ರಾಮೀಣ ಪತ್ರಕರ್ತರ ಆರೋಗ್ಯ ಕಾರ್ಡು ಬಸ್‌ಪಾಸ್ ಸೌಲಭ್ಯಗಳಿಗೆ ಬಜೆಟ್‌ನಲ್ಲಿ ಆದ್ಯತೆ

*36 ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟನೆ ಕಲಬುರಗಿ, ಜ.04:ಸಣ್ಣ ಪತ್ರಿಕೆಗಳು ಪ್ರಸಾರದಲ್ಲಿ ಕಡಿಮೆ ಸಂಖ್ಯೆ ಹೊಂದಿದ್ದರೂ ಕೂಡ ಅಲ್ಲಿನ ಸುದ್ದಿ,ಲೇಖನ,ಅಂಕಣಗಳ ಮೌಲ್ಯ ದೊಡ್ಡದು.ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‌ಪಾಸ್ ಸೇರಿದಂತೆ ಇತರ ಸೌಲಭ್ಯಗಳಿಗೆ ಬರುವ ಬಜೆಟ್‌‌ನಲ್ಲಿ ಆದ್ಯತೆ ನೀಡಲಾಗುವುದು.ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಂಡಳಿ ಹಾಗೂ ಕೋಶಕ್ಕೆ ವಾರಾಂತ್ಯದೊಳಗೆ ಪೂರ್ಣ ನೇಮಕಾತಿ ಮಾಡಿ 3 ಸಾವಿರ ಕೋಟಿ ರೂ.ಕ್ರಿಯಾ ಯೋಜನೆಯನ್ನು ಒಂದು ವರ್ಷದ ಅವಧಿಯೊಳಗೆ ಅನುಷ್ಠಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕರ್ನಾಟಕ ಕಾರ್ಯನಿರತ…

ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ: ಸಿಎಂ

ಕಲ್ಬುರ್ಗಿ, ಜ, 04 :ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಆರ್ಥಿಕ ಅನುಮತಿ ನೀಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ 5000 ಹುದ್ದೆಗಳೂ ಸೇರಿದಂತೆ ವಿವಿಧ ಇಲಾಖೆಗಳಿಗೆ ಒಟ್ಟು 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು. ಕೆಕೆಆರ್ ಡಿಬಿ ಬೋರ್ಡ್ ರಚನೆಯಾಗದಿರುವ ಬಗ್ಗೆ ಪ್ರತಿಕ್ರಯಿಸಿ…

ಕಲೆಗಳಲ್ಲಿ ವಿಶೇಷವಾದ ಕಲೆ ನಾಟಕ ಕಲೆ: ಕವಿ ಬಿ.ಆರ್‌ ಲಕ್ಷ್ಮಣ್‌ರಾವ್‌

ಬೆಂಗಳೂರು ಜ, 04: ಎಲ್ಲಾ ಕಲೆಗಳ ಸಮ್ಮಿಲನವನ್ನು ಹೊಂದಿರುವ ವಿಶೇಷವಾದ ಕಲೆ ನಾಟಕ ಕಲೆ. ಗ್ರಾಮಾಂತರ ಪ್ರದೇಶಗಳಿಗೂ ಹವ್ಯಾಸಿ ನಾಟಕ ಕಲೆಯನ್ನು ಪಸರಿಸುವ ನಿಟ್ಟಿನಲ್ಲಿ ಇತ್ತೀಚಿನ ಬೆಳವಣಿಗೆಗಳು ಸ್ವಾಗತಾರ್ಹ ಎಂದು ಖ್ಯಾತ ಕವಿ ಲಕ್ಷ್ಮಣ್‌ ರಾವ್‌ ಹೇಳಿದರು. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಐಶ್ವರ್ಯ ಕಲಾನಿಕೇತನ ಸಂಸ್ಥೆ ಆಯೋಜಿಸಿದ್ದ ಆಷಾಢದ ಒಂದು ದಿನ ನಾಟಕ ಪ್ರದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲಾ ಕಲೆಗಳನ್ನು ಮಿಳಿತಗೊಂಡಂತಹ ನಾಟಕ ಕಲೆ ಬಹಳ ಪ್ರಮುಖವಾದದ್ದು. ಕವಿಯಾಗಿ ನಾನು ಪ್ರಸಿದ್ದಿಯಾಗಿದ್ದರೂ ಒಂದೆರಡು…

ಸಿಎಂ ಸಮ್ಮುಖದಲ್ಲೇ ಸಚಿವ ಸಂಸದರ ಗಲಾಟೆ

ರಾಮನಗರ, ಜನವರಿ 3: ರಾಮನಗರ ಜಿಲ್ಲಾಡಳಿತ ಭವನದ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದ ವೇಳೆ ಸಿಎಂ ಬಸವರಾಜ ಬೊಮ್ಮಯಿ ಸಮ್ಮುಖದಲ್ಲಿ ಸಚಿವ, ಸಂಸದರ ನಡುವೆ ಗಲಾಟೆ ನಡೆದಿದೆ. ರಾಮನಗರದಲ್ಲಿ ಕಾರ್ಯಕ್ರಮ ವೇಳೆ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಮತ್ತು ಸಂಸದ ಡಿ.ಕೆ.ಸುರೇಶ್ ಮಧ್ಯೆ ವಾಕ್ಸಮರ ಉಂಟಾಗಿದ್ದು, ಸಚಿವ ಡಾ.ಅಶ್ವತ್ಥ್ ನಾರಾಯಣ ಭಾಷಣಕ್ಕೆ ಡಿ.ಕೆ. ಸುರೇಶ್ ತೀವ್ರ ವಿರೋಧ ವ್ಯಕ್ತ ನಮ್ಮ ಕಾಲದಲ್ಲೇ ಅಡಿಗಲ್ಲು, ನಮ್ಮ ಕಾಲದಲ್ಲೇ ಉದ್ಘಾಟನೆ’ ‘ನಮ್ಮ ಸರ್ಕಾರದಲ್ಲಿ ಬೇರೆ ಸರ್ಕಾರದ ರೀತಿ ಅಲ್ಲ’…

ಸಿದ್ದರಾಮಯ್ಯ ಗಂಗೆಯ ಸಾಕ್ಷಿಯಾಗಿ ʼಸುಳ್ಳು ಹೇಳಿ ಅಪಚಾರʼ ಎಸಗಿದ್ದಾರೆ!

ಬೆಂಗಳೂರು,ಜ,03: ಸತ್ಯಕ್ಕೆ ಸಮಾಧಿ ಕಟ್ಟಿ ಸುಳ್ಳಿನಯಾತ್ರೆಗೆ ಹೊರಟವರ ಜಾತಕವನ್ನು ದಾಖಲೆಗಳೇ ಬೆತ್ತಲು ಮಾಡುತ್ತಿವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ. ಸೋಮವಾರ ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಮಿಸ್ಟರ್ ಸುಳ್ಳಯ್ಯ ಎಂದು ಕರೆದಿದಿದ್ದಾರೆ. ಮಾಜಿ ಸಿಎಂ, ಹಾಲಿ ಪ್ರತಿಪಕ್ಷ ನಾಯಕರ ನಾಲಿಗೆ ಮೇಲೆ ರಾಜ್ಯ ನೀರಾವರಿ ಬಗ್ಗೆ ಸೃಷ್ಟಿ ಆಗುತ್ತಿರುವ ʼಸುಳ್ಳಿನ ಸರಮಾಲೆʼಯು ಜನತೆಗೆ ಯಾಮಾರಿಸಿ ಬೇಳೆ ಬೇಯಿಸಿಕೊಳ್ಳುತ್ತಿರುವ ʼರಾಜಕೀಯ ಹುಂಬತನʼವಲ್ಲದೆ ಮತ್ತೇನೂ…

ಕೋವಿಡ್ ತೊಲಗಿಸಲು ಪಣ ತೋಡೋಣ: ಸಿಎಂ

ಬೆಂಗಳೂರು, ಜ, 03: 2022ನ್ನು ಆರೋಗ್ಯಭರಿತ ಹಾಗೂ ಕೋವಿಡ್ ಮುಕ್ತ ವರ್ಷವನ್ನಾಗಿ ಮಾಡಲು ಸಂಕಲ್ಪ ತೋಡೋಣ. ಕೋವಿಡ್ ವಿರುದ್ದ ಒಟ್ಟಾಗಿ ಸಮರವನ್ನು ಸಾರಿ ತೊಲಗಿಸಲು ಪಣ ತೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ಅವರು ಇಂದು ಅವರು ಇಂದು ಭೈರವೇಶ್ವರನಗರದ ಬಿಬಿಎಂಪಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಸ್ನಾತಕೋತ್ತರ ಕಾಲೇಜಿನಲ್ಲಿ 15-18 ವರ್ಷದೊಳಗಿನ ಶಾಲಾ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಕರ್ನಾಟಕದಲ್ಲಿ ಅತ್ಯಂತ ಯಶಸ್ವಿಯಾಗಿ ಕೋವಿಡ್…

ಮದುವೆ ದಲ್ಲಾಳಿಯ ಚಾಕುಚಕ್ಯತೆ

ಮದುವೆ ದಲ್ಲಾಳಿಯ ಚಾಕುಚಕ್ಯತೆ “ಇಂದ್ರಮ್ಮಾ, ಇಂದ್ರಮ್ಮಾ” ಎನ್ನುವ ಪರಿಚಿತ ಕಂಠವೊಂದು ನನ್ನ ಅಮ್ಮನ ಹೆಸರಿಡಿದು ಕೂಗುತ್ತಾ, ದಾವಣಗೆರೆಯ ಆಂಜನೇಯ ಬಡಾವಣೆಯಲ್ಲಿದ್ದ ನಮ್ಮ ಬಾಡಿಗೆ ಮನೆಯ ಮುಂಬಾಗಿಲು ದಾಟಿ ಒಳಬರಲು, ಹೊರಕೋಣೆಯಲ್ಲಿ ಕುಳಿತು ಅಂದಿನ “ವಿಜಯಕರ್ನಾಟಕ” ದಿನಪತ್ರಿಕೆಯ ಹಾಳೆಗಳನ್ನು ಮುಗುಚಿ ಹಾಕುತ್ತಿದ್ದ ನಾನು, ಯಾರು ಬಂದಿರಬಹುದು ಎನ್ನುವ ಕುತೂಹಲವನ್ನು ಅದುಮಿಡಲಾಗದೆ, ಮುಂಭಾಗದ ಹಾಲನ್ನು ಪ್ರವೇಶಿಸಿದೆ. “ಏನಪ್ಪಾ, ಪ್ರಕಾಶ, ಬೆಂಗಳೂರಿನಿಂದ ಯಾವಾಗ ಬಂದಿದ್ದು?” ಎಂದು ನನ್ನ ಯೋಗಕ್ಷೇಮವನ್ನು ವಿಚಾರಿಸಲು ಮೊದಲಿಟ್ಟ ಅತಿಥಿಯ ಮುಖವನ್ನು ದಿಟ್ಟಿಸಿ ನೋಡತೊಡಗಿದೆ. “ಯಾಕೆ ಸಾಹೇಬರೇ? ನನ್ನ…

ವಿಜಯನಗರ ಸಾಮ್ರಾಜ್ಯದ ಪ್ರಥಮ ರಾಜಧಾನಿ ಆನೆಗೊಂದಿ

ವಿಜಯನಗರ ಸಾಮ್ರಾಜ್ಯದ ಪ್ರಥಮ ರಾಜಧಾನಿ ಆನೆಗೊಂದಿ ತುಂಗಭದ್ರಾ ನದಿಯ ಬಲದಂಡೆಯು ಹಂಪೆಗೆ ಆಶ್ರಯ ನೀಡಿದ್ದರೆ, ಎಡದಂಡೆಯು ಪ್ರಾಚೀನ ಆನೆಗೊಂದಿಗೆ ನೆಲೆಯಾಗಿದೆ. ಈ ಎರಡೂ ಚಾರಿತ್ರಿಕ ಸ್ಥಳಗಳು ಆದಿಮ ಕಾಲದಿಂದಲೂ ಮಾನವನ ಪ್ರಮುಖ ಪ್ರಸಿದ್ಧ ವಸತಿತಾಣಗಳು. ಭೌಗೋಳಿಕವಾಗಿಯೂ ಈ ಪ್ರದೇಶವು ಕಣಶಿಲೆಯ ಬೆಟ್ಟಗುಡ್ಡ, ಗುಹೆಗಹ್ವರ, ನದಿ, ಕಣಿವೆಗಳಿಂದ ಕೂಡಿದ ಅತ್ಯಂತ ಸುಂದರ ತಾಣ. ಆನೆಗೊಂದಿ ಪರಿಸರವು ಇತ್ತೀಚೆಗೆ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಇದಕ್ಕೆ ಕಾರಣ ಇಲ್ಲಿನ ಹತ್ತಾರು ಪ್ರವಾಸಿ ಸ್ಥಳಗಳು. ಇಲ್ಲಿರುವ ಪ್ರಸಿದ್ಧ ಪ್ರಾಗೈತಿಹಾಸಿಕ, ಚಾರಿತ್ರಿಕ ಮತ್ತು ಪೌರಾಣಿಕ…

ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ;ಸಿದ್ದರಾಮಯ್ಯ

ಬೆಂಗಳೂರು,ಡಿ,30: ‘ರಾಜ್ಯದಲ್ಲಿ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಅಧಿಕಾರ ಹಿಡಿಯುವುದು ನೂರಕ್ಕೆ ನೂರು ಖಚಿತ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಸುದ್ದಿಗಾರರ ಜೊತೆ ಗುರುವಾರ ಮತನಾಡಿದ ಅವರು, ‘ಸ್ಥಳೀಯ ಸಂಸ್ಥೆಗಳ ಚುನಾವಣೆಯ ಜನರ ತೀರ್ಪು ಹೊರಬಿದ್ದಿದೆ. ಚುನಾವಣೆ ನಡೆದ 1,187 ಸ್ಥಾನಗಳ ಪೈಕಿ 500 ಕ್ಕೂ ಅಧಿಕ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ಫಲಿತಾಂಶದಿಂದ ಜನಾಭಿಪ್ರಾಯ ನಮ್ಮ ಪರವಾಗಿದೆ ಎಂಬುದು ಕಂಡುಬರುತ್ತದೆ. ಫಲಿತಾಂಶ ಖುಷಿ…

ಕನ್ನಡಪರ ಸಂಘಟನೆ ಗಳೊಂದಿಗೆ ಮುಖ್ಯಮಂತ್ರಿ ಚರ್ಚೆ: ಬಂದ್ ಕರೆ ವಾಪಸ್ ಪಡೆದ ಸಂಘಟನೆಗಳು

ಬೆಂಗಳೂರು, ಡಿ, 30:ಡಿಸೆಂಬರ್ 31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ವಿಚಾರಕ್ಕೆ ಸಂಬಂಧಿಸಿದಂತೆ ಹಲವಾರು ವಿಚಾರಗಳನ್ನು ಅವರೊಂದಿಗೆ ಚರ್ಚಿಸಲಾಗಿದ್ದು, ಕನ್ನಡಪರ ಸಂಘಟನೆಗಳು ಬಂದ್ ಕರೆಯನ್ನು ಹಿಂದಕ್ಕೆ ಪಡೆದಿರುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದರು. ಗೃಹ ಕಛೇರಿ ಕೃಷ್ಣಾದಲ್ಲಿ ಡಿಸೆಂಬರ್ 31ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡ ಪರ ಸಂಘಟನೆಗಳ ಮುಖಂಡರರಾದ ವಾಟಾಳ್ ನಾಗರಾಜ್, ಪ್ರವೀಣ್ ಶೆಟ್ಟಿ, ಸಾ.ರಾ.ಗೋವಿಂದು, ಕೆ.ಆರ್. ಕುಮಾರ್. ಶಿವರಾಮೇಗೌಡ್ರು ಅವರುಗಳ ನೇತೃತ್ವದ…

ಅ.ನಾ.ಪ್ರಹ್ಲಾದರಾವ್ ರಚನೆಯ ‘ಹೆಜ್ಜೆಗುರುತು’ ಕೃತಿ  ಲೋಕಾರ್ಪಣೆ

ಬೆಂಗಳೂರು,  ಡಿ, 30: ಲೇಖಕ ಅ.ನಾ.ಪ್ರಹಾದರಾವ್ ಕನ್ನಡ ಚಲನಚಿತ್ರ ಚರಿತ್ರೆ ಕುರಿತು ದಾಖಲಿಸಿರುವ ‘ಹೆಜ್ಜೆಗುರುತು’ ಕೃತಿಯನ್ನು ಪ್ರಸಿದ್ಧ ಕವಿ, ಸಾಹಿತಿ ಡಾ.ಹೆಚ್.ಎಸ್.ವೆಂಕಟೇಶಮೂರ್ತಿ ಅವರು ತಮ್ಮ ನಿವಾದಲ್ಲಿ ಇಂದು (2021, ಡಿಸೆಂಬರ್ 30) ಬಿಡುಗಡೆ ಮಾಡಿದರು. ಹಂಸಜ್ಯೋತಿ ಸಾಂಸ್ಕೃತಿಕ ಸಂಸ್ಥೆಯ ಮು.ಮುರಳೀಧರ ಹಾಗೂ ಶ್ರೀಮತಿ ಮಲ್ಲಿಕಾ ಪ್ರಹ್ಲಾದ್ ಈ ಸಂದರ್ಭದಲ್ಲಿ ಹಾಜರಿದ್ದರು. ಚಿತ್ರರಂಗ ಮೂಕಿ ಕಾಲದಿಂದ ಆರಂಭಗೊಂಡು ಬೆಳವಣಿಗೆಯ ವಿವಿಧ ಮಜಲುಗಳಿಗೆ ಸಂಬಂಧಿಸಿದ ಚಲನಚಿತ್ರಗಳು, ವ್ಯಕ್ತಿಗಳು ಹಾಗೂ ಘಟನಾವಳಿಗಳನ್ನು ಹೆಣೆಯುತ್ತಾ ಕನ್ನಡ ಚಿತ್ರರಂಗದ ಔನತ್ಯವನ್ನು ದಾಖಲಿಸುವ ಪ್ರಯತ್ನವನ್ನು ಈ…

ವಿವಿಧ ಪ್ರಕಾರ ಸಾಹಿತ್ಯ ಕೃತಿಗಳಿಗೆ ಕೇಂದ್ರ ಸಾಹಿತ್ಯ ಆಕಾಡಿಮಿ ಪ್ರಶಸ್ತಿ ಘೋಷಣೆ

ಹೊಸ ದೆಹಲಿ ಡಿ ೩೦ : ಕೇಂದ್ರ ಸಾಹಿತ್ಯ ಅಕಾಡೆಮಿಯು ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ನೀಡುವ ಪ್ರಶಸ್ತಿಗಳನ್ನು ಇಂದು ಇಲ್ಲಿ ಘೋಷಿಸಲಾಗಿದ್ದು ಕನ್ನಡದ ಪ್ರಮುಖ ಲೇಖಕರಾದ ಡಿ ಎಸ್ ನಾಗಭೂಷಣ್ ಅವರ ‘ಗಾಂಧಿ ಕಥನ’ ಕೃತಿಯು ಈ ವರ್ಷದ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ‘ಬಾಲ ಪುರಸ್ಕಾರ’ ಕ್ಕೆ ಬಸು ಬೇವಿನಗಿಡದ ಅವರ ‘ ಓಡಿ ಹೋದ ಹುಡುಗ ‘ ಮಕ್ಕಳಿಗಾಗಿ ಬರೆದ ಕಾದಂಬರಿ ಆಯ್ಕೆಯಾಗಿದೆ. ಅಕಾಡೆಮಿಯು ನೀಡುವ ‘ಯುವ ಪುರಸ್ಕಾರ’ ಕ್ಕೆ ಎಚ್ ಲಕ್ಷೀನಾರಾಯಣ…

ಕೂಡಲ ಸಂಗಮದೇವ ನಾಮಾಂಕಿತ ಬಳಕೆಗೆ ಗಂಗಾಮಾತಾಜಿ ನಿರ್ಧಾರ; ಎಂ.ಬಿ.ಪಾಟೀಲ್‌ಸಂತಸ

ವಿಜಯಪುರ ,ಡಿ,29. ಧರ್ಮಗುರು ಬಸವಣ್ಣನವರ ವಚನಾಂಕಿತ ಕೂಡಲಸಂಗಮದೇವ ಎಂದೇ ಬಳಸಬೇಕು ಎಂದು ಬಸವಧರ್ಮ ಪೀಠದ ಜಗದ್ಗುರು ಡಾ.ಗಂಗಾಮಾತಾಜಿಯವರು ಹೇಳಿರುವುದು ಸಮಸ್ತ ಲಿಂಗಾಯತ ಸಮಾಜಕ್ಕೆ ಸಂತಸ ತಂದಿದೆ ಎಂದು ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿರುವ ಅವರು ಲಿಂಗಾಯತರ ಅಸ್ಮಿತೆಯನ್ನು ಹೆಚ್ಚಿಸಲು ಪ್ರಯತ್ನಿಸುತ್ತಿರುವ ಈ ಸಮಯದಲ್ಲಿ ಗಂಗಾಮಾತಾಜಿ ಅವರ ಈ ಸಂದೇಶ ಲಿಂಗಾಯತರಿಗೆ ನೈತಿಕ ಬೆಂಬಲವನ್ನು ಹೆಚ್ಚಿಸಿದೆ. ಕೂಡಲಸಂಗಮದೇವ ಅಂಕಿತನಾಮ ಬಳಕೆಯಿಂದ ಬಸವಪರ ಸಂಘಟನೆಗಳಲ್ಲಿ ಉಂಟಾಗಿದ್ದ ಗೊಂದಲಕ್ಕೆ ಸ್ಪಷ್ಟತೆ ದೊರಕಿದಂತಾಗಿದೆ ಎಂದರು. ಈ…

1 57 58 59 60 61 126
Girl in a jacket