ಜನಿವಾರ ಹಾಕಿರುವ ವಿದ್ಯಾರ್ಥಿಗಳ ಪರೀಕ್ಷೆಗೆ ನಿರಾಕರಿಸಿದ ಅಧಿಕಾರಿಗಳ ವಿರುದ್ದ ಶಿಸ್ತು ಕ್ರಮಕ್ಕೆ ಬೊಮ್ಮಾಯಿ ಆಗ್ರಹ
ಬೆಂಗಳೂರು,ಏ,19- ಬೀದರ್ ನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿ ಜನಿವಾರ ಹಾಕಿರುವ ಕಾರಣಕ್ಕೆ ಪರೀಕ್ಷೆಗೆ ಅವಕಾಶ ನಿರಾಕರಣೆ ಮಾಡಿದ್ದು, ಶಿವಮೊಗ್ಗದಲ್ಲಿ ವಿದ್ಯಾರ್ಥಿ ಹಾಕಿಕೊಂಡಿದ್ದ ಜನಿವಾರ ಕಿತ್ತು ಹಾಕಿರುವುದು ಅತ್ಯಂತ ಹೀನ ಕೃತ್ಯವಾಗಿದ್ದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು, ನಮ್ಮ ದೇಶದ ಸಂಸ್ಕೃತಿ ಆಚಾರ, ವಿಚಾರ, ನಂಬಿಕೆಗಳ ಬಗ್ಗೆ ಅರಿವಿಲ್ಲದಿರುವ ಕಾಂಗ್ರೆಸ್ ಸರ್ಕಾರ ನಿಯಮಗಳ ಪಾಲನೆಯ ಹೆಸರಿನಲ್ಲಿ ಧರ್ಮ ದ್ರೋಹ ಮಾಡುವುದರ…