Girl in a jacket

Author kendhooli_editor

ಕಾರು ಅಡ್ಡಗಟ್ಟಿ ಮಹಿಳೆ ಕೊಲೆ

ಆನೇಕಲ್,ಡಿ,28: ಕಾರು ಅಡ್ಡಗಟ್ಟಿ ದುಷ್ಕರ್ಮಿಗಳು ಮಹಿಳೆಯನ್ನು ಬರ್ಬರ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಿಣಿ ಬಳಿ ನಡೆದಿದೆ. ಜಿಗಣಿ ನಿವಾಸಿ ಅರ್ಚನಾರೆಡ್ಡಿ ಹತ್ಯೆಯಾದ ಮಹಿಳೆ. ನವೀನ್, ಸಂತೋಷ್ ಎಂಬುವವರು ಅರ್ಚನಾರೆಡ್ಡಿಯನ್ನು ಕೊಲೆ ಮಾಡಿದ್ದಾರೆ. ತಡರಾತ್ರಿ ಈ ಘಟನೆ ನಡೆದಿದೆ. ಅರ್ಚನಾ ಮೊದಲ ಪತಿ ಬಿಟ್ಟು 2ನೇ ಪತಿ ನವೀನ್ ಜೊತೆ ವಾಸವಿದ್ದರು. ಈ ನಡುವೆ ಚೆನ್ನಪಟ್ಟಣದಲ್ಲಿರುವ ಆಸ್ತಿ ವಿಚಾರವಾಗಿ ಗಲಾಟೆ ನಡೆದಿದ್ದು ಹೀಗಾಗಿ ಇತ್ತೀಚೆಗೆ ನವೀನ್ ಬಿಟ್ಟು ಅರ್ಚನಾ ದೂರವಿದ್ದರು. ಈ ಕಾರಣಕ್ಕಾಗಿ…

ಕನ್ನಡ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ; ಎಚ್ ಡಿಕೆ ಆಕ್ರೋಶ

ಬೆಂಗಳೂರು,ಡಿ,27:ಎನ್ ಇಟಿ ಕನ್ನಡ ಐಚ್ಛಿಕ ಭಾಷಾ ಪ್ರಶ್ನೆ ಪತ್ರಿಕೆಯಲ್ಲಿ ಹಿಂದಿ ಭಾಷೆಯಲ್ಲಿ ಪ್ರಶ್ನೆಗಳನ್ನು ಕೇಳಲಾಗಿತ್ತು. ಇದನ್ನು ಕಂಡ ಅಭ್ಯರ್ಥಿಗಳು ಗೊಂದಲಕ್ಕೀಡಾಗಿ, ಪರೀಕ್ಷೆಯನ್ನು ಬಹಿಷ್ಕರಿಸಿದ್ದಲ್ಲದೇ ಪ್ರತಿಭಟನೆ ನಡೆಸಿದ್ದರು. ಈ ಕುರತು ಟ್ವಿಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎಂದು ಕಿಡಿಕಾರಿದ್ದಾರೆ. ಟ್ವಿಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿರುವ ಹೆಚ್.ಡಿ ಕುಮಾರಸ್ವಾಮಿ, ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ. ನಾನು ಮೊದಲಿನಿಂದಲೂ ಹೇಳುತ್ತಿರುವ ಮಾತಿದು. ಈ ಮಾತು ಪದೇಪದೆ ಮರುಕಳಿಸುತ್ತಿರುವುದು ನನಗೆ ಬಹಳ ನೋವುಂಟು ಮಾಡಿದೆ.…

ಬೆಳಗಾವಿ ‘ಅಸ್ಮಿತೆ’ ಮೇಳದಲ್ಲಿ ದಾಖಲೆಯ ರೂ 60 ಲಕ್ಷ ವಹಿವಾಟು

ಬೆಂಗಳೂರು,ಡಿ,27: ಬೆಳಗಾವಿಯಲ್ಲಿ ಈಚೆಗೆ ಏರ್ಪಡಿಸಿದ್ದ (ಡಿ.15ರಿಂದ 20ರವರೆಗೆ) ಸ್ವಸಹಾಯ ಗುಂಪುಗಳು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ ‘ಅಸ್ಮಿತೆ’ಯಲ್ಲಿ ದಾಖಲೆಯ ಸುಮಾರು 60 ಲಕ್ಷ ರೂಪಾಯಿಗಳ ವಹಿವಾಟು ನಡೆದಿದೆ ಎಂದು ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆಯಲ್ಲಿ ತಿಳಿಸಿರುವ ಅವರು, ಮುಖ್ಯಮಂತ್ರಿ ಅವರು ಉದ್ಘಾಟಿಸಿದ್ದ ಈ ಮೇಳದಲ್ಲಿ 7 ಆಹಾರ ಮಳಿಗೆಗಳೂ ಸೇರಿದಂತೆ ಒಟ್ಟು 140 ಮಳಿಗೆಗಳು ಭಾಗವಹಿಸಿದ್ದವು. ಇದುವರೆಗೆ ಈ ರೀತಿಯ ಮೇಳಗಳಲ್ಲಿ ಆಗಿರುವ…

ಸ್ಥಳೀಯ ಸಂಸ್ಥೆಗಳಿಗೆ ಮತದಾನ ಆರಂಭ

ಬೆಂಗಳೂರು, ಡಿ.೨೭: ರಾಜ್ಯದಲ್ಲಿ ೫೮ ನಗರ ಸಂಸ್ಥೆಗಳ ಮತದಾನ ಇಂದು ಮತದಾನ ಆರಂಭವಾಗಿದೆ. ಬೆಳಗ್ಗೆ ೭ಕ್ಕೆ ಮತದಾನ ಆರಂಭವಾಗಿದ್ದು, ಸಂಜೆ ೫ರರೆಗೂ ನಡೆಯುತ್ತದೆ. ಒಂದು ವೇಳೆ ಮರು ಮತದಾನದ ಅಗತ್ಯ ಇದ್ದಲ್ಲಿ ಡಿ.೨೯ಕ್ಕೆ ನಿಗದಿ ಮಾಡಲಾಗಿದೆ. ಮತ ಎಣಿಕೆ ಕಾರ್ಯ ಡಿಸೆಂಬರ್ ೩೦ರಂದು ನಡೆಯಲಿದೆ ಎಂದು ಚುನಾವಣಾ ಆಯೋಗದ ತಿಳಿಸಿದೆ. ೨೦೧೬ನೇ ಸಾಲಿನಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲಾದ ೫೧ ನಗರ ಸ್ಥಳೀಯ ಸಂಸ್ಥೆಗಳ ಅವಧಿಯು ೨೦೨೧ಗೆ ಮುಕ್ತಾಯಗೊಳ್ಳಲಿದೆ. ಕ್ಷೇತ್ರ ವಿಂಗಡನೆ ಮಾಡಿ, ವಾರ್ಡ್‌ವಾರು ಮೀಸಲಾತಿಯನ್ನು ನಿಗದಿಪಡಿಸಿ ಚುನಾವಣೆ…

ಡಿಸೆಂಬರ್ 24 ಆಡಿಯೋ ಬಿಡುಗಡೆ

ಎಂಜಿ ಎನ್ ಪ್ರೊಡಕ್ಷನ್ ತಯಾರಾಗುತ್ತಿರುವ ಡಿಸೆಂಬರ್ 24 ಚಿತ್ರಕ್ಕೆ ದೇವು ಹಾಸನ್ ಇದೇ ಮೊದಲಬಾರಿಗೆ ಸಿನಿಮಾ ನಿರ್ಮಾಪಕರಾಗುತ್ತಿದ್ದಾರೆ. ಹುಲಿಯೂರು ದುರ್ಗದಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ಅವರು ನಿರ್ಮಾಣ ಮಾಡಿರುವ ಚಿತ್ರ ಡಿಸೆಂಬರ್‌ 24. ಹಾರರ್, ಥ್ರಿಲ್ಲರ್, ಕಥಾನಕ ಹೊಂದಿರುವ ಈ ಚಿತ್ರದ ಮೋಷನ್ ಪೋಸ್ಟರ್ ಹಾಗೂ ಆಡಿಯೋ ಬಿಡುಗಡೆ ಕಾರ್ಯಕ್ರಮ ಚಲನಚಿತ್ರ ಕಲಾವಿದರ ಸಂಘದ ಆವರಣದಲ್ಲಿ ನೆರವೇರಿತು. ನಟ ಶ್ರೀನಗರ ಕಿಟ್ಟಿ ಮುಖ್ಯ ಅತಿಥಿಯಾಗಿ ಆಗಮಿಸಿ ಶುಭ ಕೋರಿದರು. ನಾಗರಾಜ್ ಎಂಜಿ ಗೌಡ ಕಥೆ, ಚಿತ್ರಕಥೆ…

ಓಮೈಕ್ರಾನ್ ಭೀತಿ;ರಾಜ್ಯದಲ್ಲಿ ಡಿ ೨೮ ರಿಂದ ಹತ್ತು ದಿನ ನೈಟ್ ಕರ್ಪ್ಯೂ ಜಾರಿ

ಬೆಂಗಳೂರು, ಡಿ,೨೬; ರಾಜ್ಯದಲ್ಲಿ ಓಮೈಕ್ರಾನ್ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹರಡುವಿಕೆ ತಡೆಯಲು ಸರ್ಕಾರ ಹತ್ತು ದಿನಗಳ ಕಾಲ ನೈಟ್ ಕರ್ಪ್ಯೂ ಜಾರಿಮಾಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ರಾಜ್ಯದ ಕೋವಿಡ್ ಸ್ಥಿತಿಗತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಿದರು. ಕಂದಾಯ ಸಚಿವ ಆರ್. ಅಶೋಕ, ಗೃಹ ಸಚಿವ ಆರಗ ಜ್ಞಾನೇಂದ್ರ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯಲ್ಲಿ ಡಿಸೆಂಬರ್ ೨೮ರಿಂದ ೧೦ ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿಗೊಳಿಸಲು ಒಪ್ಪಿಗೆ ನೀಡಲಾಗಿದೆ.…

ಶ್ರೀ ಶೈಲ ಮಹಾತ್ಮೆಯಲ್ಲಿಬಾಲನಟಿಯಾಗಿಜಯಲಲಿತ ಮಾಯಾಮಂತ್ರಗಳ ಚಿತ್ರಆಶಾಸುಂದರಿ

ಶ್ರೀ ಶೈಲ ಮಹಾತ್ಮೆಯಲ್ಲಿಬಾಲನಟಿಯಾಗಿಜಯಲಲಿತ ಮಾಯಾಮಂತ್ರಗಳ ಚಿತ್ರಆಶಾಸುಂದರಿ ಶ್ರೀಶೈಲ ಮಹಾತ್ಮೆಚಿತ್ರದಲ್ಲಿ ಪಾತ್ರವೊಂದನ್ನು ಮಾಡಿದ್ದ ನಟಿ ಸಂಧ್ಯಾ ಮದರಾಸಿನ ಸ್ಟುಡಿಯೊದಲ್ಲಿಚಿತ್ರೀಕರಣ ನಡೆಯುತ್ತಿದ್ದ ವೇಳೆ ತಮ್ಮ ಮಗಳನ್ನು ಕರೆದುಕೊಂಡು ಹೋಗಿದ್ದರು. ಬೆಂಗಳೂರಿನ ಕಾನ್ವೆಂಟ್‌ಒಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ಈ ಬಾಲೆ ಚಿತ್ರೀಕರಣವನ್ನುಕುತೂಹಲದಿಂದ ನೋಡುತ್ತಾ ಕುಳಿತಿದ್ದಳು.ಬಾಲನಟಿಯಾಗಿನೃತ್ಯದ ಪಾತ್ರ ನಿರ್ವಹಿಸಬೇಕಾಗಿದ್ದ ಶಾಲಾ ಬಾಲಕಿಯೊಬ್ಬಳು ಅಂದಿನ ಚಿತ್ರೀಕರಣಕ್ಕೆಗೈರುಹಾಜರಾಗಿದ್ದುಚಿತ್ರದ ನಿರ್ಮಾಪರು ಹಾಗೂ ನಿರ್ದೇಶಕರಲ್ಲಿ ತಳಮಳ ತಂದಿತ್ತು. ನಿರ್ದೇಶಕಆರೂರು ಪಟ್ಟಾಭಿಯವರಕಣ್ಣಿಗೆಚಿತ್ರೀಕರಣ ವೀಕ್ಷಿಸುತ್ತಿದ್ದ ಬಾಲಕಿ ಕಾಣಿಸಿದಳು. ತಾಯಿ ಸಂಧ್ಯಾಅವರೊಂದಿಗೆ ಮಾತನಾಡಿ ಪಾತ್ರ ನಿರ್ವಹಿಸಲು ಸಮ್ಮತಿ ಪಡೆದು, ಬಣ್ಣ ಹಚ್ಚಿಸಿದರು. ಆ ಬಾಲಕಿ…

ಅಪರೂಪದ ಕೋಟಿಲಿಂಗಗಳ ಪ್ರಾಚೀನ ತಾಣ ಓಹಿಲಾಪುರ

 ಅಪರೂಪದ ಕೋಟಿಲಿಂಗಗಳ ಪ್ರಾಚೀನ ತಾಣ ಓಹಿಲಾಪುರ ೧೯೯೮ನೇ ಇಸವಿ, ಕನ್ನಡ ವಿಶ್ವವಿದ್ಯಾಲಯದ ವಸ್ತುಸಂಗ್ರಹಾಲಯಕ್ಕಾಗಿ ಶಿಲ್ಪ, ಶಾಸನ, ವೀರಗಲ್ಲು ಮೊದಲಾದ ಪ್ರಾಚೀನ ವಸ್ತುವಿಶೇಷಗಳನ್ನು ಸಂಗ್ರಹಿಸಿ ತರಲೆಂದೇ ನೇಮಕವಾದ ತಂಡ ನಮ್ಮದು. ತಂಡದಲ್ಲಿ ನನ್ನನ್ನು ಸೇರಿದಂತೆ ವಾಸುದೇವ ಬಡಿಗೇರ, ಎಂ. ಕೊಟ್ರೇಶ ಮತ್ತು ನೆರಗಲ್ಲಪ್ಪ ಸೇರಿದ್ದೆವು. ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯ ಹಳ್ಳಿಗಳನ್ನು ಸುತ್ತುತ್ತಾ ಅಲ್ಲಿನ ದೇವಾಲಯ, ಮಠ-ಮಂದಿರ, ಕಚೇರಿಗಳನ್ನು ಕಂಡು ಅಲ್ಲಿನ ಮುಖಂಡರು, ಅಧಿಕಾರಿಗಳು ಮತ್ತು ಸ್ಥಳೀಯ ಜನರನ್ನು ಒಪ್ಪಿಸಿ, ಓಲೈಸಿ ವಸ್ತುಗಳನ್ನು ಸಂಗ್ರಹಿಸುವ ಕಾಯಕವದು. ಈ ಸಂದರ್ಭದಲ್ಲಿ…

ಸಂಗೀತದ ಅನನ್ಯ ಉಪಾಸಕನ ಅಸಂಗತ ಬದುಕು..!

ಸಂಗೀತದ ಅನನ್ಯ ಉಪಾಸಕನ ಅಸಂಗತ ಬದುಕು..! “ನೀರ ಮೇಲಣ ಗುಳ್ಳೆ ನಿಜವಲ್ಲೊ ಹರಿಯೇ” ಎನ್ನುವ ಸುಶ್ರಾವ್ಯ ಕಂಠವೊಂದು ಕಿವಿಗಳನ್ನು ಅಪ್ಪಳಿಸಲು, ಜಳಕಕ್ಕೆಂದು ಬಚ್ಚಲು ಮನೆಗೆ ನಡೆದಿದ್ದವನು ಹಿಂತಿರುಗಿ ಓಡುತ್ತಾ ಸೀದಾ ಮುಂಬಾಗಿಲಿಗೆ ಬಂದು ನಿಂತು, ಕತ್ತನ್ನು ನೀಳವಾಗಿ ಹೊರಚಾಚಿ, ರಸ್ತೆಯ ಎರಡೂ ಬದಿಗೆ ದೃಷ್ಟಿ ಹರಿಸುತ್ತಾ, ಬಾಗಿಲ ಎಡತೋಳಿಗೆ ದೇಹದ ಅಷ್ಟೂ ಭಾರವನ್ನು ಹಾಕಿ ಒರಗಿ ನಿಂತೆನು. ನಾನು ಊಹಿಸಿದಂತೆಯೇ ಸುಮಾರು ಐವತ್ತನ್ನು ಮೀರಿದ ವಯಸ್ಸಿನ ಕೃಶಕಾಯದ, ಗೌರವರ್ಣದ, ಬಣ್ಣದ ಪಟ್ಟೆಪಟ್ಟೆ ಲುಂಗಿ ಮತ್ತು ಬಿಳಿಯ ಬನಿಯನ್…

ಅಹಲ್ಯೆ: ರೂಪಾಂತರಗಳ ಬಹುರೂಪೀ ಪಾತ್ರ

ಅಹಲ್ಯೆ: ರೂಪಾಂತರಗಳ ಬಹುರೂಪೀ ಪಾತ್ರ ಪ್ರಭುನಿಷ್ಟ ಚರಿತ್ರೆ ಬರೆದವರು ಯಾರು? ಯಾಕೆ ಈ ಚರಿತ್ರೆಯೂ ಉತ್ಪಾದನಾ ಅಂಶವನ್ನ ಒಳಗೊಂಡರೂ ಉತ್ಪಾದನೆಯ ಹಂಚಿಕೆ ಮತ್ತು ಉತ್ಪಾದನೆಗಾಗಿ ನಿಗಧಿಯಾದ ಕೂಲಿಯ ವಿವರಗಳಲ್ಲಿ ಗಂಡು ಹೆಣ್ಣೆಂಬ ಲಿಂಗ ತಾರತಮ್ಯ ಮಾಡಲಾಯಿತು? ನಾವು ಚರಿತ್ರೆಯನ್ನ ಭೂಮಿ ಸಂಬಂಧದ ಉತ್ಪನ್ನಗಳ ನೆಲೆಗಳಿಂದ ನೋಡಿದರೂ ಭೂಮಿಯ ಮೂಲವಾಗಿಯೇ ಗ್ರಹಿಸುವ ಮಹಿಳೆಗೆ ಭೂಮಿಯ ಹಕ್ಕು ಆಗ ಯಾಕಿರಲಿಲ್ಲ ಎಂಬುದೇ ಗಮನಾರ್ಹ. ಪಾಲನೆ ಮತ್ತು ಪೋಷಣೆಯ ಸಮಯದಲ್ಲಿ ಅರೆ ಉದ್ಯೋಗಿಯಾಗಿರಬೇಕಾದ ಮಹಿಳೆ ಕೂಲಿ ವಿಚಾರದಲ್ಲೂ ತಾರತಮ್ಯ ಅನುಭವಿಸುತ್ತಿದ್ದಾಳೆ.ಬುಡಕಟ್ಟು ಕಾಲದ…

ಕರ್ನಾಟಕದಲ್ಲೀಗ ಮೊಟ್ಟೆ ರಾಜಕೀಯ

ಕಲ್ಯಾಣ ಕರ್ನಾಟಕದ ಏಳೂ ಜಿಲ್ಲೆಗಳಲ್ಲಿ ಪ್ರಾಥಮಿಕ ಮಾಧ್ಯಮಿಕ ಶಾಲಾ ಮಕ್ಕಳು ಪೌಷ್ಟಿಕಾಂಶದ ಕೊರತೆಯಿಂದ ನರಳುತ್ತಿದ್ದು ಅದರ ನಿವಾರಣೆಗೆ ಬೇಯಿಸಿದ ಮೊಟ್ಟೆಯನ್ನು ಕೊಡುವ ಸರ್ಕಾರದ ಕಾರ್ಯಕ್ರಮಕ್ಕೆ ಕಲ್ಲು ಹಾಕುವ ಯತ್ನಕ್ಕೆ ಕೆಲವರು ಮುಂದಾಗಿದ್ದಾರೆ. ಆಹಾರ ಸಂಸ್ಕೃತಿ ವಿಚಾರದಲ್ಲಿ ಧಾರಾಳ ಸ್ವಾತಂತ್ರ್ಯ ಕೊಡಬೇಕಾಗಿರುವ ಜಾಗದಲ್ಲಿ ಈ ಬಗೆಯ ವರ್ತನೆ ಅಸಹ್ಯಕರದ್ದಾಗಿದೆ. ಇದನ್ನು ಸರ್ಕಾರ ಮುಲಾಜಿಲ್ಲದೆ ನಿವಾರಿಸಿ ದಿಟ್ಟ ಹೆಜ್ಜೆಯನ್ನಿಡುವುದು ಅಗತ್ಯ. ಕರ್ನಾಟಕದಲ್ಲೀಗ ಮೊಟ್ಟೆ ರಾಜಕೀಯ ಹೊರಗಿನಿಂದ ಒಡೆದರೆ ಜೀವ ಹಾನಿ; ಒಳಗಿನಿಂದ ಒಡೆದರೆ ಜೀವ ವಿಕಾಸ. ಇದು ಮೊಟ್ಟೆಯ ಕಥೆ.…

ಜೈಲುಗಳಲ್ಲೂ ಜಾತಿಭೇದ- ಗಹಗಹಿಸಿರುವ ಮನುವಾದ

ಜೈಲುಗಳಲ್ಲೂ ಜಾತಿಭೇದ- ಗಹಗಹಿಸಿರುವ ಮನುವಾದ ‘ಜಾತಿಗೆ ಇಂದಿಗೂ ಸಮರ್ಥಕರಿದ್ದಾರೆ ಎನ್ನುವ ಸಂಗತಿಯೇ ಕರುಣಾಜನಕ. ಶ್ರಮ ವಿಭಜನೆಗೆ ಮತ್ತೊಂದು ಹೆಸರೇ ಜಾತಿ ವ್ಯವಸ್ಥೆಯಾಗಿದ್ದು, ಶ್ರಮವಿಭಜನೆಯು ನಾಗರಿಕ ಸಮಾಜದ ಹೆಗ್ಗುರುತಾಗಿದ್ದು, ಈ ವ್ಯವಸ್ಥೆಯಲ್ಲಿ ತಪ್ಪೇನೂ ಇಲ್ಲ ಎಂದು ವಾದಿಸಲಾಗುತ್ತದೆ. ವಾಸ್ತವದಲ್ಲಿ ಜಾತಿ ವ್ಯವಸ್ಥೆಯು ಶ್ರಮ ವಿಭಜನೆ ಮಾತ್ರವೇ ಅಲ್ಲ, ಶ್ರಮಿಕರ ವಿಭಜನೆಯೂ ಹೌದು. ಈ ಶ್ರಮವಿಭಜನೆಯಲ್ಲಿ ವ್ಯಕ್ತಿಯ ಆಯ್ಕೆಗೆ, ಭಾವನೆಗೆ, ಆದ್ಯತೆಗೆ ಅವಕಾಶವೇ ಇಲ್ಲ. ವಿಧಿವಾದವೇ ಈ ವಿಭಜನೆಯ ಆಧಾರ’. ‘ಹಿಂದೂ ಸಮಾಜವು ಏಣಿ ಅಥವಾ ಪ್ರವೇಶ ದ್ವಾರವೇ ಇಲ್ಲದ…

ಗಡಿಭಾಗಗಳಲ್ಲಿ ಡ್ರಗ್ಸ್ ಮಾಫಿಯಾ ಟೆರರಿಸಂ!!?

ಗಡಿಭಾಗಗಳಲ್ಲಿ ಡ್ರಗ್ಸ್ ಮಾಫಿಯಾ ಟೆರರಿಸಂ!!? Writing; ಪರಶಿವ ಧನಗೂರು ಹೌದು ಭಾರತದ ಮೇಲೆ ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನದ ಭಯೋತ್ಪಾದಕರು ಸೇರಿಕೊಂಡು ಡ್ರಗ್ಸ್ ಮಾಫಿಯಾ ಜಾಲ ವಿಸ್ತರಿಸುವ ಮೂಲಕ ‘ಡ್ರಗ್ಸ್ ಟೆರರಿಸಂ!’ ನಡೆಸುತ್ತಿರುವ ಅನುಮಾನ ಮೂಡುತ್ತಿದೆ. ಏಕೆಂದರೆ ಈಗ ಮತ್ತೆ ಗುಜರಾತಿನ ಕರಾವಳಿ ಸಮುದ್ರದ ಗಡಿಯಲ್ಲಿ ಪಾಕಿಸ್ತಾನದ ಕರಾಚಿಯಿಂದ ಬಂದಿಳಿಯಲಿದ್ದ 400ಕೋಟಿ ಮೌಲ್ಯದ ಡ್ರಗ್ಸ್ ಮೂಟೆಗಳನ್ನು ನಮ್ಮ ಕರಾವಳಿ ಕಾವಲು ಪಡೆ ಮತ್ತು ಭಯೋತ್ಪಾದನೆ ನಿಗ್ರಹ ದಳ ಜಂಟಿ ಕಾರ್ಯಾಚರಣೆ ನಡೆಸಿ ದಾಳಿಮಾಡಿ ವಶಪಡಿಸಿಕೊಂಡು…

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ ಬೆಳಗಾವಿ ಅಧಿವೇಶನ : ಸಿಎಂ

ಬೆಳಗಾವಿ, ಡಿ,24 :ಉತ್ತರ ಕರ್ನಾಟಕದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡುವ ಮೂಲಕ ಬೆಳಗಾವಿ ಅಧಿವೇಶನವನ್ನು ಸಾರ್ಥಕಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಹಲವಾರು ಜ್ವಲಂತ ಸಮಸ್ಯೆಗಳಿಗೆ ಉತ್ತರ ದೊರೆತಿದೆ. ಉತ್ತರ ಕರ್ನಾಟಕದ ನೀರಾವರಿ ಕ್ಷೇತ್ರದ ಅಭಿವೃದ್ಧಿ ಬದ್ಧವಾಗಿದೆ ಎಂದು ಸರ್ಕಾರದ ನಿರೂಪಿಸಿದೆ. ಈ ನಿಟ್ಟಿನಲ್ಲಿ. ಉತ್ತರ ಕರ್ನಾಟಕದ ಭಾಗಕ್ಕೆ ರೈಲ್ವೆ ಯೋಜನೆಗಳು, ಹೆಸ್ಕಾಂನ ಆರ್ಥಿಕ ಪುನಶ್ಚೇತನ, ಸಸಾಲಟ್ಟಿ ಮತ್ತು ಮಂಟೂರುಗಳಿಗೆ ನೀರಾವರಿ ಯೋಜನೆಗೆ ಅನುಮೋದನೆ, ಗುಲ್ಬರ್ಗಾ ಸೇಡಂ ನಲ್ಲಿ…

ಗಂಡುಲಿ ಚಿತ್ರದ ಟ್ರೈಲರ್ ಬಿಡುಗಡೆ

ಕೆಲವರ್ಷಗಳ ಹಿಂದೆ ಇಂಜಿನಿಯರ್ಸ್ ಎಂಬ ಚಿತ್ರ ಬಂದಿತ್ತು. ಅದರ ನಿರ್ದೇಶಕ ಹಾಗೂ ನಾಯಕನೂ ಆಗಿದ್ದ ವಿನಯ್ ರತ್ನಸಿದ್ಧಿ ಅವರೀಗ ಮತ್ತೊಂದು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇನ್ನೇನು ತೆರೆಗೆ ಬರಲು ಅಣಿಯಾಗಿ ನಿಂತಿರುವ ಈ ಚಿತ್ರದ ಹೆಸರು ಗಂಡುಲಿ. ‌ವಿನಯ್ ರತ್ನಸಿದ್ದಿ ಜೊತೆ ನಾಯಕಿಯಾಗಿ ಛಾಯಾದೇವಿ ನಟಿಸಿದ್ದು, ನಾಯಕನ ತಾಯಿಯ ಪಾತ್ರವನ್ನು ಹಿರಿಯ ಕಲಾವಿದೆ ಸುಧಾನರಸಿಂಹರಾಜು ನಿರ್ವಹಿಸಿದ್ದಾರೆ. ಇತ್ತೀಚೆಗಷ್ಟೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು, ಹೆಚ್ಚು ಹೆಚ್ಚು ವೀಕ್ಷಣೆಯಾಗುವ ಮೂಲಕ ಜನರಲ್ಲಿ ಕುತೂಹಲ ಮೂಡಿಸಿದೆ. ಅಲ್ಲದೆ ಚಿತ್ರವನ್ನು ಬರುವ…

ಚಿತ್ರಕಲಾ ಪರಿಷತ್ ನಲ್ಲಿ ‘ಬೆಂಗಳೂರು ಆರ್ಟ ಅಂಡ್ ಕ್ರಾಪ್ಟ್ ಮೇಳ

ಬೆಂಗಳೂರು, ಡಿ, 24: ದೇಶದ ವಿವಿಧ ಭಾಗಗಳಿಂದ ಆಗಮಿಸುವ ಕರಕುಶಲ ಕರ್ಮಿಗಳಿಗೆ ಸೂಕ್ತವಾದ ಮಾರುಕಟ್ಟೆಯನ್ನು ಒದಗಿಸುವ ನಿಟ್ಟಿನಲ್ಲಿ  ಕ್ರಿಸ್‌ಮಸ್‌ ಹಾಗೂ ಹೊಸ ವರ್ಷದ ಪ್ರಯುಕ್ತ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ‘ಬೆಂಗಳೂರು ಆರ್ಟ್ಸ್‌ ಅಂಡ್‌ ಕ್ರಾಫ್ಟ್‌ ಮೇಳ’ವನ್ನು ಆಯೋಜಿಸಲಾಗಿದ್ದು, ನಟಿ ರಕ್ಷಿಕಾ ಶೆಟ್ಟಿ ಶುಕ್ರವಾರ ಚಾಲನೆ ನೀಡಿದರು. ಜನವರಿ 2, 2022 ರ ವರೆಗೆ ಮೇಳ ನಡೆಯಲಿದೆ. ಕರ್ನಾಟಕ ಚಿತ್ರಕಲಾ ಪರಿಷತ್‌ ಆವರಣದಲ್ಲಿ ಬೆಳಗ್ಗೆ 11 ರಿಂದ ಸಂಜೆ 7 ರವರೆಗೆ ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ…

ಶಿಕ್ಷಣ ವ್ಯವಸ್ಥೆಯ ಅಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು: ಸಿಎಂ

ಬೆಳಗಾವಿ, ಡಿ, 22 :ಶಿಕ್ಷಣ ವ್ಯವಸ್ಥೆಯ ಅಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿಯ ಹಿರೇಬಾಗೇವಾಡಿ ಮಲ್ಲಪ್ಪನ ಗುಡ್ಡದ ಹೊಸ ನಿವೇಶನದಲ್ಲಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕಟ್ಟಡಗಳ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಇಂದಿನ ಸವಾಲುಗಳ ಹಾಗೂ ಬದಲಾವಣೆಯ ಯುಗದಲ್ಲಿ ಫ್ಲೆಕ್ಸಿಬಲ್ ಆದ ಶಿಕ್ಷಣ ವ್ಯವಸ್ಥೆ ಅತ್ಯಂತ ಅವಶ್ಯಕ. ಪಠ್ಯದಲ್ಲಿರುವ ವಿದ್ಯೆ ಹಾಗೂ ಜಗತ್ತಿನಲ್ಲಿ ಬಳಕೆಯಾಗುತ್ತಿರುವ ವಿದ್ಯೆಯಲ್ಲಿ ಬಹಳಷ್ಟು ಅಂತರ ಇದೆ. ಇವರೆಡರ ನಡುವೆ…

ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದು ಸಿದ್ದು ವಿರುದ್ಧ ಕಿಡಿಕಾರಿದ ಎಚ್ ಡಿ.ಕೆ

ಬೆಳಗಾವಿ,ಡಿ,22: ಜೆಡಿಎಸ್ ಮುಳುಗುವ ಹಡುಗು ಎಂದು ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಪ್ರತಿಪಕ್ಷ ನಾಯಕರನ್ನು ಹಿಟ್ಲರ್ ಅಸ್ಥಾನದಲ್ಲಿ ಸುಳ್ಳು ಹೇಳುವುದನ್ನೇ ಕಾಯಕ ಮಾಡಿಕೊಂಡಿದ್ದ ಗೊಬೆಲ್ʼಗೆ ಹೋಲಿಕೆ ಮಾಡಿ ಟಾಂಕ್ ನೀಡಿದ್ದಾರೆ. ಈ ಬಗ್ಗೆ ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿ ಸಿದ್ದರಾಮಯ್ಯ ಅವರ ಮೇಲೆ ಪ್ರಹಾರ ನಡೆಸಿರುವ ಅವರು; ಸಿದ್ದರಾಮಯ್ಯ ಅವರನ್ನು ʼಗೊಬೆಲಪ್ಪʼ ಮತ್ತು ʼಬ್ರೋಕರಪ್ಪʼ ಎಂದು ಕರೆದಿದ್ದಾರೆ. ಸುಳ್ಳು ಹೇಳುವ ಚಾಳಿಗೆ ಚಿಕಿತ್ಸೆ ಇಲ್ಲ. ʼಸಿದ್ದಕಲೆʼಯ ನಿಷ್ಣಾತರಿಗೆ…

ಮತಾಂತರ ನಿಷೇಧ ಕಾಯ್ದೆಯಲ್ಲಿರುವ ಅಂಶಗಳೇನು; ಇಲ್ಲಿದೆ ವಿವರ

ಬೆಳಗಾವಿ,ಡಿ,21: ವಿಪಕ್ಷಗಳ ವಿರೋಧ ಮತ್ತು ಗದ್ದಲದ ನಡುವೆಯೇ ಕರ್ನಾಟಕ ರಾಜ್ಯ ಸರ್ಕಾರ ಸದನದಲ್ಲಿ ಮತಾಂತರ ನಿಷೇಧ ಕಾಯಿದೆ ಮಂಡಿಸಿದೆ. ಇಷ್ಟಕ್ಕೂ ಏನಿದು ಮತಾಂತರ ನಿಷೇಧ ವಿಧೇಯಕ? ಅದರಲ್ಲಿರುವ ಪ್ರಮುಖ ಅಂಶಗಳೇನು? ಎಂಬ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ. ಮತಾಂತರ ನಿಷೇಧ ಕಾಯಿದೆಯಲ್ಲಿರುವ ಪ್ರಮುಖಾಂಶಗಳು ಬಲವಂತ, ವಂಚನೆ, ಒತ್ತಾಯ ಹಾಗೂ ಆಮಿಷದ ಮೂಲಕ ನಡೆಸುವ ಮತಾಂತರ ಹಾಗೂ ಮದುವೆಯಾಗುವ ಭರವಸೆಯ ಮೂಲಕ ನಡೆಸುವ ಮತಾಂತರಕ್ಕೆ ನಿಷೇಧವಿದೆ.‌ ವ್ಯಕ್ತಿಯು ಆತನ ನಿಕಟಪೂರ್ವ ಧರ್ಮಕ್ಕೆ ಮರು ಮತಾಂತರಗೊಂಡರೆ ಅದನ್ನು ಈ ಅಧಿನಿಯಮದ ಅಡಿಯಲ್ಲಿ…

1 58 59 60 61 62 126
Girl in a jacket