Girl in a jacket

Author kendhooli_editor

ಗಣೇಶ ಹಬ್ಬ ಮತ್ತು ಸಾಂಸ್ಕೃತಿಕ ಉತ್ಸವದ ವೈಶಿಷ್ಟ್ಯ

ಗಣೇಶ ಹಬ್ಬ ಮತ್ತು ಸಾಂಸ್ಕೃತಿಕ ಉತ್ಸವದ ವೈಶಿಷ್ಟ್ಯ ಐದು ದಿನಗಳ ಕಾಲ ವಿಜೃಂಭಿಸಿದ ಪ್ರಥಮ ಸಾರ್ವಜನಿಕ ಗಣೇಶೋತ್ಸವದ ಯಶಸ್ವಿ ಮುಕ್ತಾಯದ ನಂತರ ಗುರುತ್ರ್ಯಯರೂ ಸೇರಿ ಗಣೇಶೋತ್ಸವ ಮಂಡಳಿಯ ಸಕಲ ಪದಾಧಿಕಾರಿಗಳಲ್ಲಿ ಹೊಸ ಚೈತನ್ಯವೊಂದು ಗರಿಗೆದರಿತ್ತು. ಅಂದುಕೊಂಡಕ್ಕಿಂತಲೂ ಹೆಚ್ಚಿನಮಟ್ಟದಲ್ಲಿ ಸಿಕ್ಕ ಯಶಸ್ಸು ಮುಂಬರುವ ವರ್ಷಗಳಲ್ಲಿ ನಡೆಯುವ ಉತ್ಸವಗಳ ಸಾಂಸ್ಕೃತಿಕ ಸಾಧ್ಯತೆಗಳನ್ನು ಬಹಳ ದೊಡ್ಡ ರೀತಿಯಲ್ಲಿ ವಿಸ್ತರಿಸಿತ್ತು. ಬರುವ ವರ್ಷದ ಉತ್ಸವದ ತಯಾರಿಯನ್ನು ಸರಿಸುಮಾರು ಎರಡು ತಿಂಗಳುಗಳ ಮೊದಲೇ ಶುರುಮಾಡಿಕೊಂಡಿದ್ದ ಸಮಿತಿ ಆ ವರ್ಷದ ಉತ್ಸವದ ಯಶಸ್ಸಿಗಾಗಿ ಬಹಳಷ್ಟು ಶ್ರಮಪಟ್ಟಿತ್ತು.…

ಬಾಯಿ ಬಿಟ್ಟರೆ ಬಣ್ಣಗೇಡಿ

ಸಿದ್ಧಸೂಕ್ತಿ :                  ಬಾಯಿ ಬಿಟ್ಟರೆ ಬಣ್ಣಗೇಡಿ. ಮಾತನಾಡಿದರೆ ಮರ್ಯಾದೆ ಹೋಯಿತು. ಮಾತು ಮಾಣಿಕ್ಯ-ಜ್ಯೋತಿರ್ಲಿಂಗ-ಬೆಳಕು.ಮಾನವನಿಗೆ ದೇವ ನೀಡಿದ ವರದಾನ. ಮಾತಿಲ್ಲದಿರೆ ಜಗ ಕತ್ತಲೆ. ಮಾತು ಸಂಬಂಧ ಬೆಳೆಸುವುದು, ಹಣ ಗಳಿಸುವುದು. “ನಾನಿರುವೆ” ಎಂಬೊಂದಭಯ ಮಾತು ಜೀವ ಉಳಿಸುವುದು! ಮಾತು ಅರಿತಾಡಬೇಕು. ಮಾತಿನ ಮರ್ಮವರಿಯದೇ ಎಲುಬಿಲ್ಲದ ನಾಲಿಗೆ ವಿರಾಮ-ಸಂಬಂಧವಿರದ ಬಿಟ್ಟಿ ಮಾತನು ಸುರಿಸುವುದು. ಕೆಲವರದು ಬಾಯಿ ತೆರೆದರೆ ಏಕವಚನ, ಅಶ್ಲೀಲ ಮಾತು, ಚುಚ್ಚಿ ಸಾಯಿಸುವ ಬಿರುನುಡಿ! ಅಂಥವರೆದುರು…

ಅಫ್ಘಾನಿಸ್ತಾನದ ಭಯೋತ್ಪಾದನೆ ವಿರುದ್ಧ ಮೋದಿ ವಾಗ್ಧಾಳಿ

ನ್ಯೂಯಾರ್ಕ್,ಸೆ,26,ಅಫ್ಘಾನಿಸ್ತಾನದ ಭೂಮಿಯನ್ನು ಭಯೋತ್ಪಾದನೆಗೆ ಬಳಸುವುದನ್ನು ಖಂಡಿಸಿರುವ ಮೋದಿ ಬೇರೆ ದೇಶಗಳು ತಮ್ಮ ರಾಜಕೀಯ ಷಡ್ಯಂತ್ರಗಳಿಗೆ ಅಫ್ಘಾನಿಸ್ತಾನವನ್ನು ಬಳಸಿಕೊಳ್ಳಬಾರದು ಎಂದು ಹೇಳಿದ್ದಾರೆ. ಈ ಮೂಲಕ ಪಾಕಿಸ್ತಾನ ಹಾಗೂ ಚೀನಾದ ಹೆಸರು ಪ್ರಸ್ತಾಪಿಸದೆ ಪರೋಕ್ಷವಾಗಿ ಅಫ್ಘಾನ್ ನೆಲ ದುರುದ್ದೇಶಕ್ಕೆ ಬಳಕೆಯಾಗುತ್ತಿರುವುದನ್ನು ಉಲ್ಲೇಖಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯ ಸಭೆಯ 76 ನೇ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ್ದು ಉಗ್ರವಾದವನ್ನು ಬೆಂಬಲಿಸುತ್ತಿರುವ ಪಾಕಿಸ್ತಾನಕ್ಕೆ ತಿವಿದಿದ್ದಾರೆ. ಕೋವಿಡ್-19 ಗೆ ಬಲಿಯಾದವರಿಗೆ ಗೌರವ ಸಲ್ಲಿಸಿ ಭಾಷಣ ಪ್ರಾರಂಭಿಸಿದ ಮೋದಿ, ಕೋವಿಡ್-19, ಭಯೋತ್ಪಾದನೆ, ಭಾರತದ ಪ್ರಜಾಪ್ರಭುತ್ವ, ಆರ್ಥಿಕತೆ, ಅಫ್ಘಾನಿಸ್ತಾನ…

ತಮ್ಮ ಹಕ್ಕುಗಳುಗೆ ಜಾತಿ ಸಮಾವೇಶ ನಡೆಸುವುದು ತಪ್ಪಲ್ಲ;ಸಿದ್ದು

ಬೆಂಗಳೂರು,ಸೆ,25 : ತಮ್ಮ ಹಕ್ಕುಗಳಿಗಾಗಿ ಹಿಂದುಳಿದ ವರ್ಗದವರು ಜಾತಿ ಸಮಾವೇಶಗಳನ್ನು ನಡೆಸುವುದು ಅಪರಾಧವಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕರ್ನಾಟಕ ರಾಜ್ಯ ಮಡಿವಾಳರ ಸಂಘ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸಿ ಕರೋನದಿಂದ ಮೃತರಾದವರ ಕುಟುಂಬದವರಿಗೆ ಪರಿಹಾರ ಹಾಗೂ ದಿನಸಿ ಕಿಟ್ ಗಳನ್ನು ವಿತರಿಸಿ ಮಾತನಾಡಿದರು. ಮಡಿವಾಳ ಸಮುದಾಯ ಅತ್ಯಂತ ಹಿಂದುಳಿದಿದೆ. ನಾನು ಸಿಎಂ ಆಗಿದ್ದಾಗ ಈ ಸಮುದಾಯಕ್ಕೆ ಪ್ರತ್ಯೇಕ ಅನುದಾನ ನೀಡಿದ್ದೆ. ಹಿಂದುಳಿದವರು ಜಾತಿ ಹೆಸರಿನಲ್ಲಿ ಸಮ್ಮೇಳನ ಮಾಡಿದರೆ…

ಬತ್ತಬಾರದು ಭಾವಗಳ ಒರತೆ

ವಿ.ಮಂಜುಳ ಪಟೇಲ್ ಅವರು ಕವನ ಲೇಖನಗಳನ್ನು ಬರೆದಿದ್ದಾರೆ,ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದು ಶೀಘ್ರ ಕವನ ಸಂಕಲನ ಹಾಗೂ ಕಾದಂಬರಿ ಪ್ರಕಟಗೊಳ್ಳಲಿದೆ.ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಅವರು ಟಿಕ್ ಟಾಕ್ ನಲ್ಲಿ ಹೆಚ್ಚು ಕಾಣಸಿಕೊಳ್ಲಕುತ್ತಿದ್ದಾರೆ…ಇವರು ಸದ್ಯ ಬೆಂಗಳೂರಿನ ಕೆಂಗೇರಿಯಲ್ಲಿ ವಾಸವಿದ್ದಾರೆ. ವಿ. ಮಂಜುಳಾ ಪಟೇಲ್ ಬತ್ತಬಾರದು ಭಾವಗಳ ಒರತೆ ವಾಸ್ತವದ ಹಂಗನ್ನು ಮೀರಿ ಆ ನಿನ್ನ ನೆನಪುಗಳಲ್ಲಿ ಮೆದ್ದಾಗಲೆಲ್ಲ ಇಳಿದು ಬಿಡುವುದು ಮನಸ್ಸು ನಿನ್ನ ಪ್ರೀತಿಯ ಭಿಕ್ಷಾಟನೆಗೆ ಮಮಕಾರದಿ ಕರೆದು ಬಿಡು ನಿನ್ನ ಒಲವಿಗೆ ಒಮ್ಮೆಯಾದರೂ ಒಲವ ರಾಗ ಹೊಸತೇನಲ್ಲ…

ಹೆಣ್ಣಿನ ಒಡಲಾಳದ ಪ್ರತಿಬಿಂಬಗಳು

ಪ್ರಕಾಶ ಕಡಿಮೆ ಅವರು ಮೂಲ ಉತ್ತರ ಕನ್ನಡದ ಗೋಕರ್ಣ ಸಮೀಪದ ಕಡಮೆಯವರು, ಅವರು ಗಾಣದೆತ್ತು ಮತ್ತು ತೆಂಗಿನ ಮರ,ಆ ಹುಡುಗಿ,ಅಮ್ಮನಿಗೊಂದು ಕವಿತೆ ಎಂಬ ಮೂರು ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಹಲವಾರು ಕವಿಗೋಷ್ಠಿಗಳಲ್ಲಿ ಭಾಗವಹಿಸಿದ್ದಾರೆ .ಡಾ.ಡಿ.ಎಸ್.ಕರ್ಕಿ ಪ್ರಶಸ್ತಿಯೂ ಅವರಿಗೆ ಸಂದಿದೆ, ಅವರು ಸದ್ಯ ಕಳೆದ ಇಪ್ಪತೈದು ವರುಷಗಳಿಂದ ಹುಬ್ಬಳಿಯಲ್ಲಿ ವಾಸವಾಗಿದ್ದಾರೆ. ಶ್ರೀಯುತರು ವಿಶಾಲ ಆರಾಧ್ಯ ಅವರ ‘ಸೊರಹೊನ್ನೆ ಕವನ ಸಂಕಲನ ಕುರಿತು ವಿಮರ್ಶೆ ಬರೆದಿದ್ದಾರೆ ಹೆಣ್ಣಿನ ಒಡಲಾಳದ ಪ್ರತಿಬಿಂಬಗಳು ಮೂಲತಃ ಬೆಂಗಳೂರು ಜಿಲ್ಲೆಯ ರಾಜಾಪುರದವರಾದ ವಿಶಾಲಾ ಆರಾಧ್ಯರವರು ಶಿಕ್ಷಕಿಯಾಗಿ…

ಶಾಸಕರಲ್ಲಿ ಸಭ್ಯತೆ ಕಡಿಮಯಾಗುತ್ತಿದೆ-ಓ ಬಿರ್ಲಾ ಆತಂಕ

ಬೆಂಗಳೂರು,sಸೆ,೨೫: ಪ್ರಜಾಪ್ರಭುತ್ವ ಬಲ ಪಡಿಸಲು ಜನಪ್ರತಿನಿಧಿಗಳ ಪಾತ್ರ ಬಹಳ ಮುಖ್ಯವಾಗಿದೆ ಆದರೆ ಇತ್ತೀಚೆಗೆ ಅವರಲ್ಲಿ ಶಿಸ್ತು ಸಭ್ಯತೆ ಕಡಿಮೆಯಾಗುತ್ತಿರುವುದು ಶೋಚನೀಯ ಸಂಗತಿಯಾಗಿದೆ ಎಂದು ಲೋಕಸಭಾಧ್ಯಕ್ಷ ಓ ಬಿರ್ಲಾ ಅಭಿಪ್ರಾಯ ಪಟ್ಟರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರು, ಕೋವಿಡ್ ಕಾರಣ ಅಧಿವೇಶನ ನಡೆಸುವುದು ಕಷ್ಟಕರವಾಗಿತ್ತು. ಆದರೂ, ನಾವು ಸಂಸತ್ ಕಲಾಪವನ್ನು ಸಮರ್ಪಕವಾಗಿ ನಡೆಸಿದ್ದೇವೆ. ಸದನದಲ್ಲಿ ಚರ್ಚೆ, ಜೋರು ಧ್ವನಿ ಎಲ್ಲವೂ ಇರಬೇಕು. ಅದು ಇದ್ದಾಗಲೇ ಉತ್ತಮ ನಿರ್ಣಯ ಸಾಧ್ಯ. ಆದರೆ, ಸದಸ್ಯರು ಶಿಸ್ತು ಮೀರಬಾರದು…

1.2 ಶತಕೋಟಿ ಲಸಿಕೆ ನೀಡಲು ಕ್ವಾಡ್ ರಾಷ್ಟ್ರಗಳು ಘೋಷಣೆ

ವಾಷಿಂಗ್ಟನ್ ,ಸೆ,25: ಜಾಗತಿಕ ಮಟ್ಟದಲ್ಲಿ ಸಮಸ್ಯೆಯಾಗಿ ಮುಂದುವರಿದಿದ್ದು ಈ ಸೋಂಕಿನಿಂದ ಸಾಕಷ್ಟು ಕಷ್ಟ-ನಷ್ಟ, ನೋವು ಸಂಭವಿಸಿದೆ. ಹವಾಮಾನ ಬಿಕ್ಕಟ್ಟು ಮುಂದುವರಿದಿದೆ. ಸ್ಥಳೀಯ ಭದ್ರತೆ ಮತ್ತಷ್ಟು ಸಂಕೀರ್ಣವಾಗುತ್ತಿದೆ. ಈ ಸಮಯ ಎಲ್ಲಾ ದೇಶಗಳಿಗೆ ವೈಯಕ್ತಿಕವಾಗಿ ಮತ್ತು ಸಾಮೂಹಿಕವಾಗಿ ಪರೀಕ್ಷೆಯ ಸಮಯವಾಗಿದೆ, ಆದರೆ ನಮ್ಮ ಸಹಕಾರವು ನಿರಂತರವಾಗಿದೆ ಎಂದು ಕ್ವಾಡ್ ಸದಸ್ಯ ರಾಷ್ಟ್ರಗಳು ಜಂಟಿ ಹೇಳಿಕೆಯಲ್ಲಿ ತಿಳಿಸಿವೆ. ನಿನ್ನೆ ವಾಷಿಂಗ್ಟನ್ ನಲ್ಲಿ ಭಾರತ, ಅಮೆರಿಕ, ಆಸ್ಟ್ರೇಲಿಯಾ ಮತ್ತು ಜಪಾನ್ ದೇಶಗಳ ಕ್ವಾಡ್ ಶೃಂಗಸಭೆ ನಡೆದಿದ್ದು ಸಭೆಯ ಬಳಿಕ ನಾಲ್ಕೂ ದೇಶಗಳು…

ಸೋಮವಾರ ಬಂದ್ ಗೆ ಯಾವೆಲ್ಲಾ ಸಂಘಟನೆಗಳು ಬೆಂಬಲಿಸಿವೆ?

ಬೆಂಗಳೂರು,ಸೆ,25: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ಹಾಗೂ ಬೆಲೆ ಏರಿಕೆ ಖಂಡಿಸಿ ಮತ್ತೆ ರೈತರು ಮತ್ತೇ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. 27 ನೇ ಸೋಮವಾರ ಭಾರತ್ ಬಂದ್ ಗೆ ಕರೆಕರೆನೀಡಿದ್ದು ರಾಜ್ಯಾದ್ಯಂತ ಜನಜೀವನ ಅಸ್ತವ್ಯಸ್ತೆಯಾಗಲಿದೆ.ಈ ಬಂದ್ ಗೆಕನ್ನಡ  ಸಂಘಟನೆ,ದಲಿತ ಸಂಘಟನೆ,ಎಪಿಎಂಸಿ ಬೆಂಬಲ ವ್ಯಕ್ತಪಡಿಸಿವೆ. ಬೆಂಗಳೂರಿನ ಪ್ರಮುಖ ಹೆದ್ದಾರಿ ಸೇರಿದಂತೆ ರಾಜ್ಯದ್ಯಾಂತ ಹೆದ್ದಾರಿ ತಡೆ. ಬೆಂಗಳೂರಿನಲ್ಲಿ ಟೌನ್ ಹಾಲ್ ನಿಂದ ಮೈಸೂರು ಬ್ಯಾಂಕ್ ಸರ್ಕಲ್ ವರೆಗೆ ಬೃಹತ್ ರ‍್ಯಾಲಿ. ಒಟ್ಟು 700ಕ್ಕೂ ಹೆಚ್ಚು ಕ್ಯಾಂಟರ್ ವಾಹನದಲ್ಲಿ ನಗರದಲ್ಲಿ…

ಖಾದಿ ಉತ್ಪನ್ನ ಖರೀದಿಸಿ;ಸಚಿವ ಸಂಪುಟದ ಸಹೋದ್ಯೋಗಿಗಳಿಗೆ ಎಂ ಟಿ ಬಿ ನಾಗರಾಜು ಮನವಿ

ಬೆಂಗಳೂರು,ಸೆ,25: ಖಾದಿ ಸಂಘ-ಸಂಸ್ಥೆಗಳನ್ನು ಪುನಶ್ಚೇತನಗೊಳಿಸಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಕನಸನ್ನು ಸಾಕಾರ ಗೊಳಿಸಲು ಅಕ್ಟೋಬರ್ ‌ 2 ರಂದು ತಮ್ಮ ವ್ಯಾಪ್ತಿಯಲ್ಲಿ ಬರುವ ಖಾದಿ ಭಂಡಾರಗಳಿಗೆ ಭೇಟಿ ನೀಡಿ ಖಾದಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಖಾದಿ ಸಂಘ-ಸಂಸ್ಥೆಗಳಿಗೆ ಉತ್ತೇಜನ ನೀಡುವಂತೆ ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎನ್.ನಾಗರಾಜು ಎಂಟಿಬಿ ಮನವಿ ಮಾಡಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ,ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ…

ಗೌರವವೇ ಮುನುಷ್ಯನ ಮುಖಟ ಪ್ರಾಯ

ಸಿದ್ಧಸೂಕ್ತಿ                                ಗೌರವ ಗುರೋಃ ಭಾವಃ ಗೌರವಂ=ಗುರು ಹಿರಿಯ ಬಂಧು ಮಿತ್ರ ಹಿತೈಷಿ ವಸ್ತು ಶ್ರೇಷ್ಠ ಎಂದು ತೋರುವ ಸದ್ಭಾವ. ಇದು ಭಾವನಾತ್ಮಕ. ಹಣ ವಸ್ತುಗಳಿಂದ ಅಳೆಯಲಾಗದು. ಗಳಿಸುವುದು ನೀಡುವುದು ಕಷ್ಟ. ಕಳೆಯುವುದು ಕಳೆದುಕೊಳ್ಳುವುದು ಸುಲಭ! ಹೆಸರು ಸಣ್ಣಕ್ಷರ/ ದಪ್ಪಕ್ಷರದಲ್ಲಿರಬಹುದು, ಮೇಲಿರಬಹುದು ಕೆಳಗಿರಬಹುದು. ಹಾರ ಶಾಲು ದೊಡ್ಡ /ದುಬಾರಿಯದ್ದಿರಬಹುದು, ಸಣ್ಣ /ಅಗ್ಗದ್ದಿರಬಹುದು,ಇಲ್ಲದೆಯೂ ಇರಬಹುದು. ಅದು ಮುಖ್ಯವೆನಿಸದು!…

ಅಕ್ಟೋಬರ್ 1 ರಿಂದ ಚಿತ್ರಮಂದಿರ ಶೇ. 100 ಭರ್ತಿಗೆ ಅವಕಾಶ:ಸಿಎಂ ಬೊಮ್ಮಾಯಿ

ಬೆಂಗಳೂರು, ಸೆ, 24:ಅಕ್ಟೋಬರ್ 1 ರಿಂದ ಕೋವಿಡ್ ಪಾಸಿಟಿವಿಟಿ ದರ ಶೇ. 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಚಿತ್ರಮಂದಿರಗಳಲ್ಲಿ ಶೇ. 100 ಸೀಟು ಭರ್ತಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ ಕುರಿತಂತೆ ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು.. ರಾಜ್ಯದಲ್ಲಿ ಪ್ರಸ್ತುತ ಸರಾಸರಿ ಪಾಸಿಟಿವಿಟಿ ದರ 0.66 % ಇದೆ. ಅಕ್ಟೋಬರ್ 1 ರಿಂದ ಕೋವಿಡ್ ಪಾಸಿಟಿವಿಟಿ…

ಬಿಎಸ್ ವೈ ಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

ಬೆಂಗಳೂರು,ಸೆ,24: ಲೋಕಸಭಾ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದ ವಿಧಾನಮಂಡಲ ಅಧಿವೇಶನದಲ್ಲೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಯಿತು. ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಯಡಿಯೂರಪ್ಪರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಿದರು. ರಾಜ್ಯ ವಿಧಾನಸಭೆಯಲ್ಲಿ ಅತ್ಯುನ್ನತ ಗೌರವಕ್ಕೆ ಭಾಜನರಾದ ಮಾಜಿ‌ ಮುಖ್ಯಮಂತ್ರಿಗಳು ಹಾಗೂ ಜನಸೇವೆಯನ್ನೇ ಮೂಲಮಂತ್ರವನ್ನಾಗಿಸಿಕೊಂಡ ನಾಯಕರಾದ ಯಡಿಯೂರಪ್ಪ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಸ್ಪೀಕರ್ ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ, ಐತಿಹಾಸಿಕ ಜಂಟಿ…

ಜನಪರ ಕೆಲಸಗಳಿಗೆ ಸ್ಪಂದಿಸಲು; ಶಾಸಕರಿಗೆ ಕರೆ

ಬೆಂಗಳೂರು,ಸೆ,24: ಜನಪರ ಸಮಸ್ಯೆಗಳಿಗೆ ಸ್ಪಂದಿಸಿದಾಗ ಮಾತ್ರ ಜನಪ್ರತಿನಿಧಿಗಳಿಗೆ ಗೌರವ ದೊರಕುತ್ತದೆ. ಇಡಿ ಪ್ರಜಾಪ್ರಭುತ್ವ ವ್ಯವಸ್ಥೆ ಬಗ್ಗೆ ಜನರು ನಂಬಿಕೆ ಕಳೆದುಕೊಳ್ಳದಂತೆ ಎಚ್ಚರಿಕೆ ವಹಿಸಬೇಕು ಎಂದು ಲೋಕಸಭೆ ಸ್ಪೀಕರ್ ಓಂಬಿರ್ಲಾ ಅವರು ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಶಾಸಕರಿಗೆ ಕಿವಿಮಾತು ಹೇಳಿದರು. ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಲೋಕಸಭೆ ಸ್ಪೀಕರ್​​ ಓಂ ಬಿರ್ಲಾ ಅವರು, ವಿಧಾನಸೌಧ ನಿರ್ಮಿಸಿದ ಕೆಂಗಲ್ ಹನುಮಂತಯ್ಯರಿಗೆ ಧನ್ಯವಾದ ಹೇಳುತ್ತೇನೆ. ಬೆಂಗಳೂರು ನಿರ್ಮಾತೃ ಕೆಂಪೇಗೌಡರನ್ನ ಸ್ಮರಿಸುತ್ತೇನೆ. ಜತೆಗೆ ಯಡಿಯೂರಪ್ಪರನ್ನ ಗೌರವಿಸಿದ್ದು ಹೆಮ್ಮೆಯ ವಿಷಯ. ವಿಧಾನಸಭೆ,…

ಸಭಾಧ್ಯಕ್ಷರು ಒಂದು ಪಕ್ಷದ ಪರ ವರ್ತಿಸಿದ್ದು ಸರಿ ಅಲ್ಲ;ಸಿದ್ದು

ಬೆಂಗಳೂರು,ಸೆ,24 : ಸಭಾಧ್ಯಕ್ಷರ ಹುದ್ದೆ ರಾಜಕಿಯ ಮತ್ತು ಪಕ್ಷಗಳನ್ನು ಮೀರಿದ ಹುದ್ದೆ. ಅವರ ನಿರ್ಣಯಗಳು ಯಾವಾಗಲೂ ಪಕ್ಷಾತೀತವಾಗಿರಬೇಕು. ಸಭಾಧ್ಯಕ್ಷರು ಒಂದು ರಾಜಕೀಯ ಪಕ್ಷದ ಸದಸ್ಯನಂತೆ ವರ್ತಿಸುವುದಾದರೆ ಆ ಹುದ್ದೆಗೆ ಮಹತ್ವವೇನಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಜಾಪ್ರಭುತ್ವದಲ್ಲಿ, ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟಿದ್ದಾರೆ ಎಂಬ ನನ್ನ ನಂಬಿಕೆ ಹುಸಿಯಾಗಿದೆ. ಮುಖ್ಯಮಂತ್ರಿಯಾದಿಯಾಗಿ ಇಡೀ ಸರ್ಕಾರ ಆರ್.ಎಸ್.ಎಸ್ ನವರ ನಿರ್ದೇಶನದಲ್ಲಿ ಮುಖವಾಡ ಧರಿಸಿ, ಅವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.…

ದಕ್ಷಿಣ ಕರ್ನಾಟಕದ ಅಪರೂಪದ ಪ್ರಾಚೀನ ಬೌದ್ಧ ಕೇಂದ್ರ ರಾಜಘಟ್ಟ

ದಕ್ಷಿಣ ಕರ್ನಾಟಕದ ಅಪರೂಪದ ಪ್ರಾಚೀನ ಬೌದ್ಧ ಕೇಂದ್ರ ರಾಜಘಟ್ಟ ೨೦೦೭ನೆಯ ಇಸವಿ. ಕ್ಷೇತ್ರಕಾರ್ಯಕ್ಕೆಂದು ಹೊರಟ ಸಂದರ್ಭ. ಕರ್ನಾಟಕದ ಪ್ರಮುಖ ಪ್ರಾಚೀನ ಸಾಂಸ್ಕೃತಿಕ ನೆಲೆಗಳನ್ನು ನೋಡುವ ತವಕದಿಂದ ಮೈಸೂರು, ಸೋಮನಾಥಪುರ, ತಲಕಾಡು, ಶ್ರೀರಂಗಪಟ್ಟಣ ಮೊದಲಾದ ಚಾರಿತ್ರಿಕ ಸ್ಥಳಗಳನ್ನು ಅಧ್ಯಯನದ ದೃಷ್ಟಿಯಿಂದ ನೋಡಿ ದಾಖಲಿಸಿಕೊಳ್ಳಲು ಪಯಣಿಸಿದ್ದೆನು. ಇವೆಲ್ಲವನ್ನೂ ನೋಡಿ ಬೆಂಗಳೂರಿಗೆ ಬಂದಾಗ ನನಗೆ ನೋಡಬೇಕೆಂಬ ಕುತೂಹಲ ಹುಟ್ಟಿಸಿದ ಪ್ರಾಚೀನ ನೆಲೆ ರಾಜಘಟ್ಟ. ಈ ಸ್ಥಳವು ಅಷ್ಟೊತ್ತಿಗಾಗಲೇ ಉತ್ಖನನದ ಮೂಲಕ ಜಗತ್ತಿಗೆ ಚಿರಪರಿಚಿತವಾಗಿತ್ತು. ಅದು ಸಾಕಾವಾದದ್ದು ೨೦೦೧ ಮತ್ತು ೨೦೦೪…

ದೆಹಲಿ ಕೋರ್ಟ ಆವರಣದಲ್ಲಿ ಗ್ಯಾಂಗ್ ವಾರ್; ಫೈರಿಂಗ್ ನಲ್ಲಿ ನಾಲ್ವರು ಸಾವು

ನವದೆಹಲಿ, ಸೆ,24: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುವ ವೇಳೆ ದುಷ್ಕರ್ಮಿಗಳು ನ್ಯಾಯಾಲಯದ ಒಳಗಡೆಯೇ ಗುಂಡಿನ ದಾಳಿ ನಡೆದಿದ್ದು ಪೈರಿಂಗ್ ನಲ್ಲಿ ನಾಲ್ವರ ಸಾವನ್ನಪ್ಪಿದ್ದಸರೆ. ದೆಹಲಿ ಕೋರ್ಟ ಆವರಣದಲ್ಲಿ ನಡೆದ ಈ ಘಟನೆಯಿಂದ ನ್ಯಾಯಾಲಯದಲ್ಲಿ ಆತಂಕದ ವಾತಾವರಣ ಸೃಷ್ಟಿಯಸಗಿತ್ತು. ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ. ಗ್ಯಾಂಗ್ ಸ್ಟರ್ ಜಿತೇಂದ್ರ ಯೋಗಿ ಎಂಬಾತನನ್ನು ಇಂದು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ರೂಂ ನಂಬರ್ 207ರಲ್ಲಿ ನ್ಯಾಯಾಧೀಶರ ಮುಂದೆ ವಿಚಾರಣೆ ನಡೆಯುತ್ತಿತ್ತು. ಈ ವೇಳೆ ವಕೀಲರ ವೇಷದಲ್ಲಿ…

ಐಎಸ್ ಐ ಗೂಢಾಚಾರಿಗಳ ಕಣ್ಣು ಈಗ ಕರ್ನಾಟಕ ದತ್ತ..!

ಐಎಸ್ ಐ ಗೂಢಾಚಾರಿಗಳ ಕಣ್ಣು ಈಗ ಕರ್ನಾಟಕ ದತ್ತ..! Writing;ಪರಶಿವನ ಧನಗೂರು ದಕ್ಷಿಣ ಕಮಾಂಡರ್ ಸೇನಾ ಗುಪ್ತದಳದ ಅಧಿಕಾರಿಗಳು ಮತ್ತು ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಏಜೆಂಟ್ ನಂತೆ ಕೆಲಸಮಾಡುತ್ತಿದ್ದ ನಕಲಿ ಸೇನಾಧಿಕಾರಿ ಜಿತೇಂದರ್ ಸಿಂಗ್ ಎಂಬಾತನನ್ನು ಬಂಧಿಸಿದ್ದಾರೆ. ಬೆಂಗಳೂರಿನ ಕಾಟನ್ ಪೇಟೆಯ ಜಾಲಿಮೊಹಲ್ಲಾದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ರಾಜಸ್ಥಾನ ಮೂಲದ ಈ ಜಿತೇಂದರ್ ಸಿಂಗ್ ಪಾಕಿಸ್ತಾನದ ಅಂತಾರಾಷ್ಟ್ರೀಯ ಗಡಿ ಹಂಚಿಕೊಂಡಿರುವ ಬಾಡ್ಮೇರ್ ಜಿಲ್ಲೆಯವನು. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ…

ಕಲ್ಯಾಣ ಕರ್ನಾಟಕ ಭಾಗದ 20 ಸಾವಿರ ನೇರನೇಮಕಾತಿಗೆ ಬದ್ದ; ಸಿಎಂ

ಬೆಂಗಳೂರು,ಸೆ,24: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯನ್ನು 10 ದಿನದೊಳಗೆ ರಚಿಸಿ , 20 ಸಾವಿರ ನೇರ ನೇಮಕಾತಿ ಹುದ್ದೆ ಭರ್ತಿಗೆ ಒಪ್ಪಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ವಿಧಾನಸಭೆಯಲ್ಲಿ ನಿಯಮ 69ರ ಅಡಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತ ಚರ್ಚೆಗೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಬೊಮ್ಮಾಯಿ, ಮಾರ್ಚ್ ಒಳಗೆ 2000 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಅಲ್ಲದೆ ಕಾಯಂ ಕಾರ್ಯದರ್ಶಿ ಯನ್ನು ನಿಯೋಜಿಸುವ ಮೂಲಕ ಎಲ್ಲಾ ಕಾರ್ಯಗಳನ್ನು ಕಾರ್ಯಗತ ಮಾಡಲಾಗುವುದು ಎಂದು ತಿಳಿಸಿದ್ದಾರೆ…

ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ

ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ ಬ್ರಿಟಿಷರ  ನೇಣುಗಂಬಕ್ಕೆ ನಗು ನಗುತ್ತಲೇ ಕೊರಳೊಡ್ಡಿದ್ದ ಆ ಸ್ವಾತಂತ್ರ್ಯ ಕ್ರಾಂತಿಯ ಕಿಡಿ ಉಸಿರಾಡಿದ್ದು ಇಪ್ಪತ್ಮೂರೇ ವರ್ಷ. ಉಕ್ಕು ಹರೆಯದ ಈ ಬಿಸಿ ಗುಂಡಿಗೆ ದಾಸ್ಯದ ವಿರುದ್ಧ ಮಾತ್ರವೇ ಅಲ್ಲ, ಸಮ ಸಮಾಜ, ಸಹಬಾಳುವೆಗಾಗಿ ಮಿಡಿದ ಪರಿ ಅಭೂತಪೂರ್ವ. ಭಗತ್ ಸಿಂಗ್ ದೇಹ ಬಹು ಹಿಂದೆಯೇ ಮಣ್ಣು ಸೇರಿರಬಹುದು. ಆದರೆ ಕೋಮುವಾದ, ಅಮಾನವೀಯ ಅಸ್ಪೃಶ್ಯತೆ, ಧರ್ಮ-ಜಾತಿಗಳ, ಮೇಲು- ಕೀಳುಗಳ ನೆವದಲಿ ನಡೆವ ಕ್ರೌರ್ಯ-ಶೋಷಣೆ- ವಿರುದ್ಧ ಆತ ಎತ್ತಿದ…

1 60 61 62 63 64 113
Girl in a jacket