Girl in a jacket

Author kendhooli_editor

ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ‌ಘೋಷಣೆ

ಬೆಂಗಳೂರು,ನ,16:  ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ  ಇಂದು ನಡದ ಪನೀತ್ ನಮನ ಕಾರ್ಯಕ್ರರಮದಲ್ಲಿ ಘೋಷಿಸಿದರು ಮುಂದುವರೆದು ಮಾತನಾಡಿದ ಬೊಮ್ಮಾಯಿ   ಹಾಗೆಯೇ ಡಾ.ರಾಜ್ ಕುಮಾರ್ ಸ್ಮಾರಕದಂತೆಯೇ ಅಪ್ಪು ಸ್ಮಾರಕ ನಿರ್ಮಾಣ ಮಾಡುವುದಾಗಿ ಭರವಸೆ ನೀಡಿದರು. ನಾನು ಬಾಲ್ಯದಿಂದ ಪುನೀತ್ ರಾಜ್ ಕುಮಾರ್  ನೋಡಿದ್ದೇನೆ. ಅವರು ನಮಗೆ ಬಹಳ ಆತ್ಮೀಯರಾಗಿದ್ದರು.  ಬಾಲ ನಟನಿದ್ದಾಗಲೇ ರಾಷ್ಟ್ರಪ್ರಶಸ್ತಿ ಪಡೆದಿದ್ದರು.  ಇಂತಹ ಕಾರ್ಯಕ್ರಮ ಮಾಡುತ್ತೇವೆ ಎಂದುಕೊಂಡಿರಲಿಲ್ಲ.…

ಇಂದು ಪುನೀತ್ ನುಡಿನಮನ ಕಾರ್ಯಕ್ರಮ

ಬೆಂಗಳೂರು,ನ,೧೬: ಇತ್ತೀಚೆಗೆ ನಿಧನರಾದ ನಟ ಪುನೀತ್ ರಾಜಕುಮಾರ್ ಅವರ ಅಗಲಿಕೆ ಹಿನ್ನೆಲೆಯಲ್ಲಿ ಕರ್ನಾಟಕ ವಾಣಿಜ್ಯ ಮಂಡಳಿ ನಮನ ಸಲ್ಲಿಸಲಿದೆ ಇಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಪುನೀತ್ ನಮನ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಜ್ಜಾಗಿದ್ದು ಮಧ್ಯಾಹ್ನ ಮೂರು ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು ಆರು ಗಂಟೆಯವರೆಗೂ ನಡೆಯಲಿದೆ ಪುನೀತ್ ನಮನ ಕಾರ್ಯಕ್ರಮದ ರೂಪು-ರೇಷೆಗಳು ಈಗಾಗಲೇ ಫೈನಲ್ ಆಗಿದೆ. ಡಾ. ನಾಗೇಂದ್ರ ಪ್ರಸಾದ್ ಬರೆದ ಸಾಹಿತ್ಯಕ್ಕೆ ಗುರುಕಿರಣ್ ರಾಗ ಸಂಯೋಜಿಸಿದ್ದಾರೆ. ಈ ಗೀತೆಯ ಮೂಲಕವೇ ಪುನೀತ್ ನಮನ ಕಾರ್ಯಕ್ರಮ ಆರಂಭಗೊಳ್ಳಲಿದೆ. ಸ್ಯಾಂಡಲ್‌ವುಡ್…

ಮುಧೋಳ ತಾಲ್ಲೂಕಿನಲ್ಲಿ 6 ಹೊಸ ವಿದ್ಯುತ್ ವಿತರಣಾ ಕೇಂದ್ರಗಳ ಮಂಜೂರು

ಬೆಂಗಳೂರು,ನ,15: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ 400 ಕಿಲೋ ವ್ಯಾಟ್ನ 1 ವಿದ್ಯುತ್ ಸ್ವೀಕರಣಾ ಕೇಂದ್ರ ಮತ್ತು 110 ಕಿಲೋ ವ್ಯಾಟ್ ಸಾಮಾರ್ಥ್ಯದ 5 ಒಟ್ಟು 6 ವಿದ್ಯುತ್ ವಿತರಣಾ ಕೇಂದ್ರಗಳನ್ನು ಕರ್ನಾಟಕ ಸರ್ಕಾರದ ಇಂಧನ ಇಲಾಖೆ ಅನುಮೋದನೆ ನೀಡಿದೆ. ಲೋಕಾಪೂರದಲ್ಲಿ 400 ಕಿ.ವ್ಯಾ ಸಾಮಾರ್ಥ್ಯದ ವಿದ್ಯುತ್ ಸ್ವೀಕರಣಾ ಕೇಂದ್ರ ನಿರ್ಮಾಣವಾಗಲಿದ್ದು, ಹೆಬ್ಬಾಳ, ಮುಗಳಖೋಡ, ಮಾಚಕನೂರು, ಮಲ್ಲಾಪೂರ ಮತ್ತು ಮಂಟೂರು ಕ್ರಾಸ್ಗಳಲ್ಲಿ 110 ಕಿ.ವ್ಯಾ ಸಾಮಾರ್ಥ್ಯದ 5 ವಿದ್ಯುತ್ ವಿತರಣಾ ಕೇಂದ್ರಗಳು ಒಟ್ಟು 60.25 ಕೋಟಿ ರೂ.…

ನದಿಗಳ ಜೋಡಣೆ: ರಾಜ್ಯಗಳಿಗೆ ನೀರು ಹಂಚಿಕೆ ನಂತರ ಡಿಪಿಆರ್- ರಾಜ್ಯದ ಮನವಿ ಪರಿಗಣಿಸಲು ಅಮಿತ್ ಷಾ ಸೂಚನೆ

ಬೆಂಗಳೂರು, ನ,15:ಗೋದಾವರಿ, ಕೃಷ್ಣಾ, ಕಾವೇರಿ ಮತ್ತು ಪಾಲಾರ್ ನದಿ ಜೋಡಣೆ ಡಿಪಿಆರ್ ಸಿದ್ಧ ಪಡಿಸುವ ಮುನ್ನ ರಾಜ್ಯಗಳ ನೀರಿನ ಹಂಚಿಕೆ ಆಗಬೇಕೆಂದು ರಾಜ್ಯ ಸಲ್ಲಿಸಿರುವ ಅಹವಾಲು ಪರಿಗಣಿಸಿ, ಮುಂದುವರೆಯುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೇಂದ್ರ ಜಲಶಕ್ತಿ ಮಂತ್ರಾಲಯಕ್ಕೆ ಸೂಚನೆ ನೀಡಿದ್ದಾರೆ. ನವೆಂಬರ್ 14ರಂದು ತಿರುಪತಿಯಲ್ಲಿ ನಡೆದ ದಕ್ಷಿಣ ವಲಯ ಪರಿಷತ್ ಸಭೆಯಲ್ಲಿ ಭಾಗವಹಿಸಿ, ಬೆಂಗಳೂರಿಗೆ ಹಿಂದಿರುಗಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಈ ಮಾಹಿತಿ ನೀಡಿದರು.…

ಸಾಹಿತಿ ದೇವು ಪತ್ತಾರ್ ಗೆ ವಿ.ಕೃ. ಗೋಕಾಕ್ ಫೇಲೋಶಿಫ್ ಪ್ರಶಸ್ತಿ

ಬೆಂಗಳೂರು,ನ,15:ವಿನಾಯಕ ಗೋಕಾಕ್ ವಾಙ್ಮಯ ಟ್ರಸ್ಟ್ ಕೊಡಮಾಡುವ ವಿ. ಕೃ. ಗೋಕಾಕ್ ಫೇಲೋಶಿಫ್ ಗೆ 2021ನೆಯ ಸಾಲಿನಲ್ಲಿ ’ಬುಕ್ ಬ್ರಹ್ಮ’ ಪ್ರಧಾನ ಸಂಪಾದಕ, ಸಾಹಿತಿ ದೇವು ಪತ್ತಾರ ಹಾಗೂ ಪತ್ರಕರ್ತೆ, ಲೇಖಕಿ ವಿದ್ಯಾರಶ್ಮಿ ಆಯ್ಕೆಯಾಗಿದ್ದಾರೆ. ‘ಗೋಕಾಕರ ಮುನ್ನುಡಿಗಳ ಅಧ್ಯಯನಕ್ಕಾಗಿ ದೇವು ಪತ್ತಾರ ಮತ್ತು ‘ಗೋಕಾಕರನ್ನು ಕುರಿತ ಕವಿತೆಗಳ ಅಧ್ಯಯನಕ್ಕಾಗಿ ವಿದ್ಯಾರಶ್ಮಿ ಪೆಲತ್ತಡ್ಕ ಅವರಿಗೆ ಗೋಕಾಕ್ ವಾಙ್ಮಯ ಟ್ರಸ್ಟ್ ನೀಡುವ ಪ್ರತಿಷ್ಠಿತ ವಿ. ಕೃ. ಗೋಕಾಕ್ ಫೆಲೋಶಿಫ್‌ನ್ನು ನೀಡಲಾಗಿದೆ. ಪ್ರಶಸ್ತಿಯು 10,000 ರೂಪಾಯಿ ನಗದು ಮತ್ತು ಫಲಕವನ್ನು ಒಳಗೊಂಡಿದೆ. ಟ್ರಸ್ಟ್‌ನ…

ಶರಿಯಾದ ಆಯ್ದ ವ್ಯಾಖ್ಯಾನ: ದಿ ನ್ಯೂ ವರ್ಸಸ್ ದಿ ಓಲ್ಡ್ ತಾಲಿಬಾನ್

-ಮಾನಸ,ಬೆಂಗಳೂರು ಶರಿಯಾದ ಆಯ್ದ ವ್ಯಾಖ್ಯಾನ: ದಿ ನ್ಯೂ ವರ್ಸಸ್ ದಿ ಓಲ್ಡ್ ತಾಲಿಬಾನ್ ಶರಿಯಾ ವಿಭಿನ್ನ ವ್ಯಾಖ್ಯಾನಗಳಿಗೆ ಸಾಕಷ್ಟು ನಮ್ಯತೆಯನ್ನು ಒದಗಿಸುತ್ತದೆ. ಈ ಹಿಂದೆ, ತಾಲಿಬಾನ್ ಅಫ್ಘಾನಿಸ್ತಾನದ ಮೇಲೆ ಸಂಪೂರ್ಣ ಹಿಡಿತವನ್ನು ಹೊಂದಿದ್ದಾಗ, ಅವರು ಶರಿಯಾ ಕಾನೂನನ್ನು ಜಾರಿಗೊಳಿಸುವ ವೇಷದಲ್ಲಿ, ಮಹಿಳೆಯರನ್ನು ಮನೆಯಲ್ಲಿಯೇ ಇರುವಂತೆ ಒತ್ತಾಯಿಸಿದರು ಮತ್ತು ಅವರು ಮನೆಯಿಂದ ಹೊರಗೆ ಹೋಗುತ್ತಿದ್ದರೆ ಅವರನ್ನು ಪುರುಷನ ಬೆಂಗಾವಲು ಮಾಡಿ, ಆ ಮೂಲಕ ಮುಕ್ತ ಸಂಚಾರವನ್ನು ನಿರ್ಮೂಲನೆ ಮಾಡಿದರು ಮತ್ತು ಮಹಿಳಾ ಶಿಕ್ಷಣಕ್ಕೆ ಅಪಾಯವನ್ನುಂಟುಮಾಡಿದರು. ಮುಸ್ಲಿಂ ನ್ಯಾಯಶಾಸ್ತ್ರಜ್ಞರು…

ನಿರುದ್ಯೋಗ ಸಮಸ್ಯೆಗೆ ವ್ಯವಸ್ಥೆ ಬದಲಾವಣೆ ಅಗತ್ಯ

ಚಿದಂಬರ ಜೋಶಿ,ಚಿಕಾಗೂ. ಚಿದಂಬರ ಜೋಶಿ ಅವರು ಮೂಲತಃ ರಾಯಚೂರು ಜಿಲ್ಲೆಯ, ಗಂಗಾವತಿಯವರು. ಪ್ರಸ್ತುತ ಅನಿವಾಸಿ ಭಾರತೀಯ. ಕಳೆದ ೩ ದಶಕಗಳಿಂದ ಉತ್ತರ ಅಮೆರಿಕಾದ ಚಿಕಾಗೊದಲ್ಲಿ ನೆಲಿಸಿದ್ದಾರೆ. ಅವರ ಕನ್ನಡ ಪ್ರೇಮ ಇವತ್ತಿಗೂ ಮಾಸಿಲ್ಲ. ಅವರ ವಿಶಿಷ್ಟ ಚಿಂತನೆ ಹಾಗೂ ಬರವಣಿಗೆಯ ಶೈಲಿ, ಓದುಗರ, ಕೇಳುಗರ ವಿಚಾರಶಕ್ತಿಯನ್ನು ಪ್ರಚೋದಿಸುತ್ತವೆ, ಸವಾಲು ಒಡ್ಡುತ್ತವೆ.  ಅವರು ನಿರುದ್ಯೋಗ ಸಮಸ್ಯೆ ಕುರಿತು ಬರೆದಿದ್ದಾರ ನಿರುದ್ಯೋಗ ಸಮಸ್ಯೆಗೆ ವ್ಯವಸ್ಥೆ ಬದಲಾವಣೆ ಅಗತ್ಯ ನಾನು, ಹಿಂದಿನ ಲೇಖನದಲ್ಲಿ, ಮನೋಸ್ಥಿತಿ ನಿರ್ಮಾಣಕ್ಕೆ ನಾವು ಸೇವಿಸುವ ವಿಷಯ…

ಬಿಟ್ ಕಾಯಿನ್ ಹಗರಣ ಮುಚ್ಚಿಹಾಕಲು ರಾಷ್ಟ್ರೀಯ ಪಕ್ಷಗಳ ಯತ್ನ: ಹೆಚ್.ಡಿ.ಕೆ ಆರೋಪ

ಬೆಂಗಳೂರು,ನ,10: ಬಿಟ್ ಕಾಯಿನ್ ಪ್ರಕರಣವನ್ನು ಮುಚ್ಚಿಹಾಕಲು ರಾಷ್ಟ್ರೀಯ ಪಕ್ಷಗಳಿಂದ ಬಿರುಸಿನ ಪ್ರಯತ್ನ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆಯುತ್ತಿರುವ ‘ಜನತಾ ಪರ್ವ 1.O’ ದ ಎರಡನೇ ಹಂತದ ಸಂಘಟನಾ ಕಾರ್ಯಗಾರ ‘ಜನತಾ ಸಂಗಮ’ದ ಮೂರನೇ ದಿನ ಮಾಧ್ಯಮಗಳ ಜತೆ ಅವರು ಮಾತನಾಡಿದರು. ಎರಡೂ ರಾಷ್ಟ್ರೀಯ ಪಕ್ಷಗಳು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಿವೆ. ಆ ಮೂಲಕ ಇಡೀ ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕಲು ಪ್ರಯತ್ನ ಮಾಡುತ್ತಿವೆ ಎಂದರು…

ರಾಗಿಣಿ ನಟನೆಯ “ಸಾರಿ” ಚಿತ್ರಕ್ಕೆ ಚಾಲನೆ

ಆ್ಯಕ್ಷನ್, ಕ್ರೈಂ, ಥ್ರಿಲ್ಲರ್ ಕಥಾಹಂದರ ಒಳಗೊಂಡಿರುವ ಸಾರಿ (ಕರ್ಮ ರಿಟರ್ನ್ಸ್) ಎಂಬ ನಾಯಕಿ ಪ್ರಧಾನ ಚಿತ್ರದ ಮೂಲಕ ನಟಿ ರಾಗಿಣಿ ದ್ವಿವೇದಿ ಅವರು ಬಹಳ ದಿನಗಳ ನಂತರ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ಈ ಹಿಂದೆ ಮಾಡಿರದ ವಿಶೇಷ ಪಾತ್ರದಲ್ಲಿ ರಾಗಿಣಿ ಕಾಣಿಸಿಕೊಳ್ಳಲಿದ್ದಾರೆ. ಕಿಸ್ ಇಂಟರ್ನ್ಯಾಷನಲ್ ಪ್ರೊಡಕ್ಷನ್ (ಕೆನಡ)ಅಡಿಯಲ್ಲಿ ಆದ‌ ನವೀನ್ ಕುಮಾರ್ (ಕೆನಡಾ ) ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಬ್ರಹ್ಮ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಮುಹೂರ್ತ ಸಮಾರಂಭ ಮಾಗಡಿ ರಸ್ತೆಯ,ಮಾಚೋಹಳ್ಳಿ ಇರುವ…

ಅಲ್ಲಮ ಕಾವ್ಯ ಪ್ರಶಸ್ತಿ’ಗೆ ಯುವಕವಿಗಳಿಂದ ಹಸ್ತಪ್ರತಿ ಆಹ್ವಾನ.

ಬೆಂಗಳೂರು,ನ,೦೯: ಅಲ್ಲಮ ಪ್ರಕಾಶನದಿಂದ ಅಲ್ಲಮ ಕಾವ್ಯ ಪ್ರಶಸ್ತಿಗಾಗಿ ನಲವತ್ತೈದು ವರ್ಷದೊಳಗಿನ ಯುವಕವಿಗಳಿಂದ ಹಸ್ತಪ್ರತಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ನಿಮಗಳ ಅನುಸಾರ ಕವಿತೆಗಳನ್ನು ಕಳುಹಿಸಬಹುದು. ಹಸ್ತಪ್ರತಿ ಕಳಿಸಲು ನಿಯಮಗಳು ಈ ಕೆಳಗಿನಂತಿವೆ. ೧. ಮೂವತ್ತಕ್ಕಿಂತಲೂ ಹೆಚ್ಚಿನ ಸ್ವರಚಿತ ಕನ್ನಡ ಕವಿತೆಗಳನ್ನು ಹಸ್ತಪ್ರತಿಯು ಒಳಗೊಂಡಿರಬೇಕು. ೨. ಅನುವಾದಿತ, ಹನಿಗವನ ಮತ್ತು ಚುಟುಕು ಕವಿತೆಗಳ ಹಸ್ತಪ್ರತಿಗಳು ಬೇಡ. ೩. ಪ್ರವೇಶವನ್ನು ಕಳಿಸುವ ಯುವಕವಿಗಳು ನಲವತ್ತೈದು ವರ್ಷದೊಳಗಿನವರಾಗಿರಬೇಕು. ೪ ಈ ಪ್ರಶಸ್ತಿಯು ೫,೦೦೦ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ೫.…

ರಾಜ್ಯದ ೨೫ ವಿಧಾನರಪಿಷತ್ ಸ್ಥಾನಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು,ನ,೦೯:ಕರ್ನಾಟಕ ವಿಧಾನ ಪರಿಷತ್‌ನ ೨೫ ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ರಾಜ್ಯ ಮೇಲ್ಮನೆಯ ೨೫ ಸ್ಥಾನಗಳಿಗೆ ಡಿಸೆಂಬರ್ ೧೦ರಂದು ಚುನಾವಣೆ ನಡೆಯಲಿದ್ದು ಡಿಸೆಂಬರ್ ೧೪ರಂದು ಫಲಿತಾಂಶ ಪ್ರಕಟವಾಗಿಲಿದೆ. ನವೆಂಬರ್ ೧೬ರಂದು ಮೇಲ್ಮನೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದ್ದು, ನವೆಂಬರ್ ೨೩ರಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದೆ. ನವೆಂಬರ್ ೨೪ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು ನವೆಂಬರ್ ೨೬ ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಡಿಸೆಂಬರ್ ೧೦ ಶುಕ್ರವಾರ ಬೆಳಗ್ಗೆ ೮ರಿಂದ ಸಂಜೆ ೪ರವರೆಗೆ ಮತದಾನ ನಡೆಯಲಿದೆ. ಬೆಂಗಳೂರು ನಗರ,…

ಅಪ್ಪು ಅನ್ನ ಸಂತರ್ಪಣೆಗೆ ಹರಿದು ಬಂದ ಜನಸಾಗರ

ಬೆಂಗಳೂರು,ನ,೦9: ನಾಡಿನಾದ್ಯಂತ ಮತ್ತೆ ಹರಿದು ಬಂದು ಒಂದೆಡೆ ಸೇರಿದ ಅಭಿಮಾನದ ಹೊಳೆ. ಮೇರೆ ಮೀರಿದ ಜಯಘೋಷ, ಅಭಿಮಾನದ ಹರಿವಿಗೆ ಸಾವಿರಾರು ನದಿಗಳು… ಎಂಬ ಹೊಸ ಭಾವನಾತ್ಮಕ ರೂಪಕಕ್ಕೆ ಪುನೀತ್ ಪುಣ್ಯಸ್ಮರಣೆಯ ೧೨ನೇ ದಿನ ಸಾಕ್ಷಿಯಾಯಿತು ಪುಣ್ಯಸ್ಮರಣೆಯ ಅಂಗವಾಗಿ ಸಾರ್ವಜನಿಕ ಅನ್ನಸಂತರ್ಪಣೆ ನಗರದ ಅರಮನೆ ಮೈದಾನದ ‘ತ್ರಿಪುರವಾಸಿನಿ’ ಅಂಗಣದಲ್ಲಿ ನಡೆಯಿತು. .ಪುನೀತ್ ಪತ್ನಿ ಅಶ್ವಿನಿ, ನಟ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಅಭಿಮಾನಿಗಳಿಗೆ ಊಟ ಬಡಿಸಿದರು. ಬಳಿಕ ಶಿವರಾಜ್‌ಕುಮಾರ್ ರಕ್ತದಾನ ಮಾಡಿದರು. ಅನ್ನಸಂತರ್ಪಣೆಗೆ ಚಾಲನೆ ನೀಡಿದ ಬಳಿಕ ಭಾವುಕರಾದ…

ಪತ್ರಕರ್ತರ ರಾಜ್ಯ ಸಮ್ಮೇಳನ: ಸಿಎಂರಿಂದ ಲಾಂಚನ ಬಿಡುಗಡೆ

ಬೆಂಗಳೂರು, ನ,08: ಇದೇ ನ. 27 ರಂದು ಕಲಬುರಗಿಯಲ್ಲಿ ನಡೆಯಲಿರುವ 36ನೆಯ ಪತ್ರಕರ್ತರ ರಾಜ್ಯ ಸಮ್ಮೇಳನದ ಲಾಂಛನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿಂದು ಬಿಡುಗಡೆಗೊಳಿಸಿದರು. ಸಮ್ಮೇಳನದ ದಿನಾಂಕ ನಿಗದಿಗೊಳಿಸಿ ಲಾಂಛನ ಬಿಡುಗಡೆಗೊಳಿಸಿದ ಅವರು, ಸಮ್ಮೇಳನದ ಯಶಸ್ವಿ ಗೆ ಸರ್ಕಾರದ ಸರ್ವ ನಿಟ್ಟಿನ ಬೆಂಬಲವಿದೆ ಎಂದರು. ತೊಗರಿ ಕಣಜ ಕಲಬುರಗಿಯಲ್ಲಿ ಸಮ್ಮೇಳನ ನಡೆಯುತ್ತಿರುವುದು ಖುಷಿ ವಿಷಯ. ಸಮ್ಮೇಳನದ ಉದ್ಘಾಟನೆ ಸಂದರ್ಭದಲ್ಲೇ ಕಲಬುರಗಿ ಪತ್ರಿಕಾ ಭವನದ ಮೊದಲ ಮಹಡಿ ಸಹ ಉದ್ಘಾಟನೆ ಸಹ ನೆರವೇರಿಸಲಾಗುವುದು…

2 ತಿಂಗಳಲ್ಲಿ ಪೂರ್ಣಪ್ರಮಾಣದ ಐಬಿಎಂ ಮೈಸೂರು ಕ್ಯಾಂಪಸ್ ಆರಂಭ: ಅಶ್ವತ್ಥನಾರಾಯಣ

ಬೆಂಗಳೂರು,ನ,08: ಸಾಫ್ಟ್ ವೇರ್ ಎಂಜಿನಿಯರಿಂಗ್, ವಿನ್ಯಾಸ ಮತ್ತು ಅನಲಿಟಿಕ್ಸ್ ಗಳಲ್ಲಿ ಪರಿಣತಿ ಹೊಂದಿರುವ ಐಬಿಎಂ ಸಮೂಹದ `ಕ್ಲೈಯಂಟ್ ಇನ್ನೋವೇಶನ್ ಸೆಂಟರ್’ಗೆ (ಸಿಐಸಿ) ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸೋಮವಾರ ಸಾಂಕೇತಿಕವಾಗಿ ಚಾಲನೆ ನೀಡಿದರು. ವಿಕಾಸಸೌಧದಲ್ಲಿ ಈ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ಈ ಅತ್ಯಾಧುನಿಕ ಕೇಂದ್ರವು ಮೈಸೂರಿನಿಂದ ತನ್ನ ಚಟುವಟಿಕೆಗಳನ್ನು ನಡೆಸಲಿದ್ದು, ಎರಡು ತಿಂಗಳಲ್ಲಿ ಐಬಿಎಂ ಸಮೂಹವು ಮೈಸೂರಿನಲ್ಲೂ ತನ್ನ ಕಚೇರಿಯನ್ನು ಆರಂಭಿಸಲಿದೆ. ಈ ಕೇಂದ್ರವು ರಾಜ್ಯದ…

ಬಿಜೆಪಿಯವರು ಕೊಳಕರು, ಜಾತಿವಾದಿಗಳು;  ಸಿದ್ಧರಾಮಯ್ಯ ಕಿಡಿ

ಮಂಡ್ಯ,ನ,8: ಬಿಜೆಪಿಯವರಂತಹ ಕೊಳಕರು, ಜಾತಿವಾದಿಗಳು ಇನ್ಯಾರೂ ಇಲ್ಲ.‌ ಸಂವಿಧಾನ ಬದಲಾವಣೆ ಮಾಡ್ತೀನಿ ಎಂದು ಹೇಳಿದವರ ಪಕ್ಷಕ್ಕೆ ಹಲವರು ಹೋಗ್ತಿದ್ದಾರೆ. ಎಂದು ನಾನು ಭಾಷಣ ಮಾಡಿದ್ದೆ. ಆದರೆ ಬಿಜೆಪಿಯವರು ನನ್ನ ಹೇಳಿಕೆ ತಿರುಚಿ ಅಪಪ್ರಚಾರ ಮಾಡ್ತಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದರು. ಮಂಡ್ಯದ ಕನಕ ಭವನದ ಆವರಣಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವರಸಿದ್ಧಿ ವಿನಾಯಕ ದೇವಾಲಯ ಹಾಗೂ ಅತಿಥಿ ಗೃಹ ಉದ್ಘಾಟನೆ ನೆರವೇರಿಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು.. ನನ್ನ ಪ್ರತಿಕೃತಿ ಸುಟ್ಟ…

ಮುಂಬೈ ಪ್ರದೇಶಕ್ಕೆ ಕಿತ್ತೂರು ಕರ್ನಾಟಕ ನಾಮಕರಣಕ್ಕೆ ಒಪ್ಪಿಗೆ

ಬೆಂಗಳೂರು,ನ,08:_ಮಬೈ ಕರ್ನಾಟಕ ಭಾಗವನ್ನು ಕಿತ್ತೂರು ಕರ್ನಾಟಕ ವೆಂದಿ ನಾಮಕರಣ ಮಾಡಲು ಇಂದು ನಡೆದ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಕುರಿತಂತೆ ಸಚಿವ ಸಂಪುಟ ಸಭೆಯ ನಂತರ  ಸುದ್ದಿಗಾರರೊಂದಿಗೆ ಮಾಹಿತಿ ನೀಡಿದಂತ ಸಚಿವ ಜೆಸಿ ಮಾಧುಸ್ವಾಮಿಯವರು, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬಿಜಾಪುರ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳ ಪ್ರದೇಶಗಳನ್ನು ಕಿತ್ತೂರು ಕರ್ನಾಟಕ ಪ್ರದೇಶ ಎಂದು ನಾಮಕರಣ ಮಾಡುವ ಪ್ರಸ್ತಾವನೆಯನ್ನು…

ಬೆಂಗಳೂರಿನಲ್ಲಿ ಆಟೋದರ ಏರಿಕೆ

ಬೆಂಗಳೂರು,ನ,08: ನಗರದಲ್ಲಿ ಆಟೋ ಪ್ರಯಾಣ ದರ ಹೆಚ್ಚಳವಾಗಿದ್ದು, ಕನಿಷ್ಠ ದರ 25 ರೂಪಾಯಿಂದ 30 ರೂ.ಗೆ ಏರಿಕೆಯಾಗಿದೆ. ನಂತರ ಪ್ರತಿ ಕಿಲೋಮೀಟರ್​ಗೆ 15 ರೂ.ಗೆ ಹೆಚ್ಚಳವಾಗಿದೆ. ಈ ಮೊದಲು ಪ್ರತಿ ಕಿಲೋಮೀಟರ್​ಗೆ 13 ರುಪಾಯಿ ಇತ್ತು. ಇದನ್ನು 15 ರುಪಾಯಿಗೆ ಏರಿಕೆ ಮಾಡಲಾಗಿದೆ. ಡಿಸೆಂಬರ್ 1 ರಿಂದಲೇ ಹೊಸ ದರ ಅನ್ವಯವಾಗುತ್ತದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ತಿಳಿಸಿದೆ. 20 ಕೆಜಿ ಮೇಲ್ಪಟ್ಟ ಲಗೇಜ್‌ಗೆ 5 ರೂಪಾಯಿ ಬಾಡಿಗೆ ಹಣ ನಿಗದಿಪಡಿಸಲಾಗಿದೆ. 20 ಕೆಜಿ ಮೇಲ್ಪಟ್ಟ ಲಗೇಜ್‌ಗೆ…

ರಾಷ್ಟ್ರಪತಿಗಳಿಂದ ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ನವದೆಹಲಿ,ನ,08:ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ರಾಷ್ಟ್ರಪತಿ ರಮನಾಥ ಕೋವಿಂದ್ ಅವರು ಇಂದು ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಸಾಧಕರಿಗೆ ರಾಷ್ಟ್ರಪತಿ ರಮನಾಥ್ ಕೋವಿಂದ್ ಪ್ರಶಸ್ತಿ ಪ್ರದಾನ ಮಾಡಿದರು. ಈ ವರ್ಷ 119 ಮಂದಿ ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇದರಲ್ಲಿ 7 ಪದ್ಮವಿಭೂಷಣ, 10 ಪದ್ಮಭೂಷಣ ಮತ್ತು 102 ಪದ್ಮಶ್ರೀ ಪ್ರಶಸ್ತಿಗಳು ಇವೆ. ರಾಜ್ಯದಿಂದ ಸಮಾಜಸೇವಕ ಅಕ್ಷರ ಸಂತ ಹರೇಕಳ ಹಾಜಬ್ಬಿ, ಪರಸರಪ್ರೇಮಿ ತುಳಸಿ ಗೋವಿಂದೇಗೌಡರಿಗೆ ಹಾಗೂ ಮಾಜಿ ಹಾಕಿಪಟು ಎಂಪಿ…

ಇಂದಿನಿಂದ ಹೋಟೆಲ್ ದರಗಳ ಹೆಚ್ಚಳ

ಬೆಂಗಳೂರು ,08: ದಿನಕಳೆದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಜೀವನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ. ಇದಕ್ಕೆ ಸಾಕ್ಷಿ ಎಂಬಂತೆ ಗ್ಯಾಸ್ ಸಿಲಿಂಡರ್ ದರಗಳು ಏರಿಕೆ ಬೆನ್ನಲ್ಲೆ ಇಂದಿನಿಂದ ನಗರದಲ್ಲಿ ಹೋಟೆಲ್‌ಗಳಲ್ಲಿ ಕಾಫಿ, ತಿಂಡಿ, ಊಟಗಳ ದರ ಹೆಚ್ಚಿಸಲು ರಾಜ್ಯ ಹೋಟೆಲ್ ಅಸೋಸಿಯೇಷನ್ ಮುಂದಾಗಿದೆ. ಪ್ರತಿಯೊಂದು ಆಹಾರ ಉತ್ಪನ್ನದ ಮೇಲೆ ಕನಿಷ್ಠ 10% ಹೆಚ್ಚಳ ಮಾಡುವ ಬಗ್ಗೆ ಅಸೋಸಿಯೇಷನ್ ನಿರ್ಧರಿಸಿದೆ. ಈ ಸಂಬಂದ ಕೆಲ ದಿನಗಳಿಂದ ಚಿಂದನೆ ನಡೆಯುತ್ತಿದೆ. ಮಹೋಲೆಟಲ್ ಮಾಲೀಕರ ಸಂಗದ ಜೊತೆ ಸಹಲವಾರು ಸುತ್ತಿನ ಸಬೆಗಳು…

1 60 61 62 63 64 122
Girl in a jacket