Girl in a jacket

Author kendhooli_editor

ಮೂಲ ಗುಣಗಳ ಪ್ರಕಾರ ಶಿಕ್ಷಣ ದೊರಕುವ ವ್ಯವಸ್ಥೆಯಾಗಬೇಕು

ಚಿದಂಬರ ಜೋಶಿ,ಚಿಕಾಗೂ. ಚಿದಂಬರ ಜೋಶಿ ಅವರು ಮೂಲತಃ ರಾಯಚೂರು ಜಿಲ್ಲೆಯ, ಗಂಗಾವತಿಯವರು. ಪ್ರಸ್ತುತ ಅನಿವಾಸಿ ಭಾರತೀಯ. ಕಳೆದ ೩ ದಶಕಗಳಿಂದ ಉತ್ತರ ಅಮೆರಿಕಾದ ಚಿಕಾಗೊದಲ್ಲಿ ನೆಲಿಸಿದ್ದಾರೆ. ಅವರ ಕನ್ನಡ ಪ್ರೇಮ ಇವತ್ತಿಗೂ ಮಾಸಿಲ್ಲ. ಅವರ ವಿಶಿಷ್ಟ ಚಿಂತನೆ ಹಾಗೂ ಬರವಣಿಗೆಯ ಶೈಲಿ, ಓದುಗರ, ಕೇಳುಗರ ವಿಚಾರಶಕ್ತಿಯನ್ನು ಪ್ರಚೋದಿಸುತ್ತವೆ, ಸವಾಲು ಒಡ್ಡುತ್ತವೆ.  ಅವರು ಶಿಕ್ಷಣ ಮತ್ತು ಅದರ ವ್ಯವಸ್ಥೆ ಕುರಿತು ಬರೆದಿದ್ದಾರೆ. ಮೂಲ ಗುಣಗಳ ಪ್ರಕಾರ ಶಿಕ್ಷಣ ದೊರಕುವ ವ್ಯವಸ್ಥೆಯಾಗಬೇಕು ಹಿಂದಿನ ೪ ಕಂತುಗಳಿಗೆ ಈ…

ಸರ್ಕಾರ ಗಾಂಜಾಗೆ ಜೈ ಎಂದಿದ್ದೇಕೇ..?

Writing- ಪರಶಿವ ಧನಗೂರು ಸರ್ಕಾರ ಗಾಂಜಾಗೆ ಜೈ ಎಂದಿದ್ದೇಕೇ? ಮಾದಕ ವಸ್ತುಗಳ ಸಾಗಾಣಿಕೆ-ಮಾರಾಟ-ಸೇವನೆ ವಿರುದ್ಧ ಜಗತ್ತಿನ ಎಲ್ಲಾ ದೇಶಗಳ ಜೊತೆ ಸೇರಿಕೊಂಡು 1960ರಲ್ಲೇ ಸಮರ ಸಾರಿದ್ದ ನಮ್ಮ ಭಾರತ ದೇಶ, ಯುದ್ಧ ಘೋಷಿಸಿ ಗೆಲ್ಲುವ ಮೊದಲೇ ಸೋಲೊಪ್ಪಿಕೊಳ್ಳುತ್ತಿರುವ ಕಾರಣವೇನೆಂದು ತಿಳಿಯುತ್ತಿಲ್ಲ. ಕೇಂದ್ರ ಸರ್ಕಾರ ಈಗ ಕಳೆದ ಅಕ್ಟೋಬರ್ ತಿಂಗಳಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಮೂಲಕ “ಸಣ್ಣ ‌ಪ್ರಮಾಣದ ಮಾದಕ ವಸ್ತು ಸೇವಿಸುವ, ಇಟ್ಟುಕೊಳ್ಳುವ ವ್ಯಕ್ತಿಗಳಿಗೆ ಶಿಕ್ಷೆ ಬೇಡ!” ಎಂಬ ಆದೇಶ ಹೊರಡಿಸಿ ತಮ್ಮ ಕೆಳಹಂತದ…

ಶಿವಾಜಿ ಗಣೇಶನ್ ಅಭಿನಯದ ಪಂತುಲು ನಿರ್ಮಾಣದ ಮಕ್ಕಳ ರಾಜ್ಯ

ಶಿವಾಜಿ ಗಣೇಶನ್ ಅಭಿನಯದ  ಪಂತುಲು ನಿರ್ಮಾಣದ ಮಕ್ಕಳ ರಾಜ್ಯ ಬಿ.ಆರ್.ಪಂತುಲು ನಿರ್ಮಿಸಿ ನಿರ್ದೇಶಿಸಿದ ಕಪ್ಪು-ಬಿಳುಪು ಜಾನಪದ ಕಥಾ ಹಂದರದ ‘ಮಕ್ಕಳ ರಾಜ್ಯ‘ ಚಲನಚಿತ್ರ ೧೯೬೦ರಲ್ಲಿ ತೆರೆಗೆ ಬಂದಿತು. ಬಿ.ಆರ್.ಪಂತುಲು ಅವರ ಪದ್ಮಿನಿ ಪಿಕ್ಚರ್ಸ್ ಜೊತೆಯಲ್ಲಿ ಎಂ.ವಿ.ರಾಜಮ್ಮನವರ ಎಂ.ವಿ.ಆರ್ ಪ್ರೊಡಕ್ಷನ್ಸ್ ಜೊತೆಯಾಗಿ ಈ ಚಿತ್ರವನ್ನು ನಿರ್ಮಿಸಿದರು, ಮಕ್ಕಳ ಪಾತ್ರಗಳನ್ನೇ ಪ್ರಧಾನವಾಗಿಟ್ಟುಕೊಂಡು ತಯಾರಾದ ಮೊದಲ ಚಿತ್ರ ಇದು. ಈ ಚಿತ್ರದಲ್ಲಿ ಹಿರಿಯ ನಟರ ಅಭಿನಯಕ್ಕಿಂತಲೂ ಮಕ್ಕಳ ಅಭಿನಯವೇ ಪ್ರಮುಖವಾಗಿತ್ತು. ಆ ಕಾಲಕ್ಕೆ ಇದೊಂದು ಪ್ರಯೋಗಾತ್ಮಕ ಚಿತ್ರವೆಂದೇ ಹೇಳಬಹುದಿತ್ತು. ಎಸ್.ಆರ್.ಪುಟ್ಟಣ್ಣ ಕಣಗಾಲ್…

ಎದೆಯ ಕದಗಳು ಮುಚ್ಚಿದಾಗ…

ಎದೆಯ ಕದಗಳು ಮುಚ್ಚಿದಾಗ… ಕಾವ್ಯವು ಆನಂದದ ಅಭಿವ್ಯಕ್ತಿಯಾಗಿರುವಂತೆಯೇ ನೋವಿನ ನಿರೂಪಣೆಯೂ ಆಗಿದೆ.ಕಾವ್ಯದ ಅಭಿವ್ಯಕ್ತಿಯಲ್ಲಿ ?ತ್ಪ್ರೇಕ್ಷೆಯ ಗುಣವಿರುವಂತೆಯೇ ವರ್ತಮಾನದ ವಾಸ್ತವವೂ ಅಡಗಿದೆ.ಕನ್ನಡಿಗರನ್ನ ಕವಿರಾಜಮಾರ್ಗಕಾರ ರಿತೋದದೆಯುಂ ಕಾವ್ಯ ಪ್ರಯೋಗ ಪರಿಣತಮತಿಗಳ್ ಎಂದ ಮಾತು ಅರ್ಥಪೂರ್ಣವಾದುದು.ವೈಭವೀಕರಣ ಮತ್ತು ಹೊಗಳಿಕೆಗಳಲ್ಲಿ ಹೆಚ್ಚು ಮುಳುಗದ ಜನಪದ ಕಾವ್ಯ ತನ್ನ ಸಾಮಾಜಿಕ ಅನುಭವಗಳನ್ನೇ ಹಾಡು ಮಾಡಿದೆ.ಹೆಣ್ಣು ಮತ್ತು ಹೆಣ್ಣಿನ ಶ್ರಮ ಇಲ್ಲಿ ಹಾಡಾಗಿ ಮೂಡಿದೆ.ಜನಪದರಂತೆ ಕಾವ್ಯಗಳಲ್ಲಿ ಈ ಬಗೆಯ ಶ್ರಮಿಕರ ನುಡಿಯನ್ನ ದಾಖಲಿಸಲು ಕನ್ನಡ ಕಾವ್ಯ ಬಂಡಾಯ ಮತ್ತು ದಲಿತ ಕಾವ್ಯದ ತನಕ ಕಾಯಬೇಕಾದ್ದು ವಿಪರ್ಯಾಸವೇ…

ಕರ್ನಾಟಕ ಇತಿಹಾಸದ ಕಿರೀಟ ಬೀದರ್

ಕರ್ನಾಟಕ ಇತಿಹಾಸದ ಕಿರೀಟ ಬೀದರ್ ಬೀದರ್ ಜಿಲ್ಲೆಯು ಭೌಗೋಳಿಕ ಮತ್ತು ಚಾರಿತ್ರಿಕವಾಗಿ ಕರ್ನಾಟಕಕ್ಕೆ ಶಿಖರಪ್ರಾಯವೇ ಆಗಿದೆ. ಈ ಜಿಲ್ಲೆಯು ಬಾದಾಮಿ ಚಾಲುಕ್ಯ, ರಾಷ್ಟ್ರಕೂಟ ಚಾಲುಕ್ಯರ ಕಾಲದಿಂದಲೂ ಪ್ರಸಿದ್ಧವಾಗಿದ್ದಿತು. ಬಸವಕಲ್ಯಾಣವು ಕಲ್ಯಾಣ ಚಾಲುಕ್ಯರು ಮತ್ತು ಕಲಚುರಿಗಳ ರಾಜಧಾನಿ ಪಟ್ಟಣ. ೧೨ನೇ ಶತಮಾನದಲ್ಲಿ ಬಸವಾದಿ ಶರಣರ ಧಾರ್ಮಿಕ ಕ್ರಾಂತಿಯ ಭೂಮಿಕೆಯಾಗಿ, ಸಮಸಮಾಜದ ಕನಸನ್ನು ಹೊತ್ತ ಜನತಾ ಚಳವಳಿಯಿಂದ ಸಾಮಾಜಿಕ ಸಂಚಲನವನ್ನು ಮೂಡಿಸಿದ ಸುಧಾರಣೆಯ ನೆಲೆವೀಡು. ವಚನಗಳ ಮೂಲಕ ಕನ್ನಡಕ್ಕೆ ವಿಶಿಷ್ಟ ಸ್ಥಾನವನ್ನು ನೀಡಿದ ಶ್ರೇಯ ಈ ಜಿಲ್ಲೆಯದು. ಸಮಾಜದ ಎಲ್ಲ…

ಎಸ್ಸಾರ್.ಪಾಟೀಲರ ಮೂಗಿಗೆ ಮತ್ತಷ್ಟು ತುಪ್ಪ

ಸರಳ, ಸಜ್ಜನಿಕೆಯ ರಾಜಕಾರಣಿಗಳು ಅಪರೂಪ. ಅಂಥವರಲ್ಲಿ ಕಾಂಗ್ರೆಸ್ ನಾಯಕ ಎಸ್.ಆರ್.ಪಾಟೀಲರು ಒಬ್ಬರು. ಅವರನ್ನು ವಿಧಾನ ಪರಿಷತ್‌ನಿಂದ ಹೊರಗಿಡುವ ತಂತ್ರದಲ್ಲಿ ಪಕ್ಷ ಯಶಸ್ಸು ಕಂಡಿದೆ. ಯಾವುದನ್ನೂ ಬಯಸದ ಕಾಡಿಬೇಡದ ರಾಜಕಾರಣ ಪಾಟೀಲರದು. ಯಾರ್ಯಾರದೋ ಮಹತ್ವಾಕಾಂಕ್ಷೆಯ, ಡಿಕೆಶಿ-ಸಿದ್ದರಾಮಯ್ಯ ಜಂಗೀ ಕುಸ್ತಿಯ ರಾಜಕಾರಣದಲ್ಲಿ ಪಾಟೀಲರು ಹರಕೆಯ ಕುರಿ ಆದರೇ…? ಎಸ್ಸಾರ್.ಪಾಟೀಲರ ಮೂಗಿಗೆ ಮತ್ತಷ್ಟು ತುಪ್ಪ ಹೀಗೊಂದು ಕಥೆ. ಕೋತಿಯ ಮನಃಸ್ಥಿತಿಯನ್ನು ಹೇಳುವ ಕಥೆ. ಆಳೆತ್ತರದ ಡಬ್ಬದಲ್ಲಿ ಕೋತಿಯನ್ನು ಅದರ ಮರಿಯೊಂದಿಗೆ ಹಾಕಿ. ಡಬ್ಬದೊಳಕ್ಕೆ ನೀರನ್ನು ಹಾಯಿಸುತ್ತ ಬನ್ನಿ. ಕಾಲಬುಡದಲ್ಲಿ ನೀರಿರುವಾಗ ಮರಿಯೊಂದಿಗೆ…

ಸಿದ್ದರಾಮಯ್ಯ ಅವರನ್ನು ಕೇಳಿ ಮೋದಿ ಅವರನ್ನು ಭೇಟಿಯಾಗಬೇಕಿತ್ತಾ ಸಿದ್ದು ವಿರುದ್ಧ ದೇವೇಗೌಡ ಕಿಡಿ

ಚಿಕ್ಕಬಳ್ಳಾಪುರ,ಡಿ,02: ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ಸಿದ್ದರಾಮಯ್ಯ ಅವರ ಅನುಮತಿ ಬೇಕೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ರಾಷ್ಟ್ರೀಯ ಅಧ್ಯಕ್ಷ ಎಚ್​.ಡಿ.ದೇವೇಗೌಡ ಪ್ರಶ್ನಿಸಿದರು. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಿಡ್ಲಘಟ್ಟದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಏಳೆಂಟು ಬಾರಿ ಭೇಟಿಯಾಗಿದ್ದೇನೆ. ಈ ಹಿಂದೆ ಡಾ.ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ 10 ಬಾರಿ ಭೇಟಿಯಾಗಿದ್ದೆ. ಮೋದಿ ಅವರನ್ನು ಭೇಟಿಯಾದ ತಕ್ಷಣ ಜೆಡಿಎಸ್​​ ಅವರಿಗೆ ಒಪ್ಪಿಸಿದಂತೆ ಆಗುತ್ತದೆಯೇ? ಎಂಥ…

ಕರ್ನಾಟಕದಲ್ಲಿ ಮೊದಲ ಒಮೈಕ್ರಾನ್ ಪತ್ತೆ

ಬೆಂಗಳೂರು,ಡಿ,02: ಬೆಂಗಳೂರಿನ ಇಬ್ಬರಿಗೆ ಒಮೈಕ್ರಾನ್ ವೈರಸ್​  ತಗುಲಿದೆ. ಭಾರತದಲ್ಲಿ ಮೊದಲ ಒಮೈಕ್ರಾನ್ ಕೇಸ್ ಕರ್ನಾಟಕದಲ್ಲೇ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಸುಧಾಕರ್​ ತಿಳಿಸಿದ್ದಾರೆ. ಒಮೈಕ್ರಾನ್ ಬಂದಿರುವ ಇಬ್ಬರಿಗೂ 2 ಡೋಸ್ ಕೊರೊನಾ ಲಸಿಕೆ ಆಗಿದೆ. ಮೂರು ದಿನದಿಂದ ಅವರಿಬ್ಬರ ರಿಪೋರ್ಟ್ ಗೆ ಕಾಯುತ್ತಿದ್ದೆವು. ಕೇಂದ್ರ ಸರ್ಕಾರ ಎರಡೂ ಸ್ಯಾಂಪಲ್ ಗಳಲ್ಲಿ ಒಮಿಕ್ರಾನ್ ಪ್ರಬೇಧ ಇದೆ ಎಂದು ದೃಢಪಟ್ಟಿದೆ. ಕರ್ನಾಟಕದಲ್ಲಿ ವಿದೇಶದಿಂದ ಬಂದವರಿಗೆ ಬಹಳ ತುರ್ತಾಗಿ ಪರೀಕ್ಷೆಗಳನ್ನು ನಡೆಸುತ್ತಿರುವುದರಿಂದ ಒಮಿಕ್ರಾನ್ ಸೋಂಕನ್ನು ನಾವು ಬೇಗ ಕಂಡು…

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಕುರಿತು ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ : ಸಿಎಂ

ನವದೆಹಲಿ, ಡಿ,೨ :ಇದೇ ೬ ರಂದು ನಡೆಯಲಿರುವ ಮಹತ್ವದ ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಕುರಿತು ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ , ಆರೋಗ್ಯ , ಕಾನೂನು ಸಚಿವರನ್ನು ಭೇಟಿಯಾದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ಕೃಷ್ಣಾ ಮೇಲ್ದಂಡೆ ಯೋಜನೆಯ ೨ ನೇ ನ್ಯಾಯಾಧಿಕರಣದ ಅಧಿಸೂಚನೆಯಲ್ಲಿ ನ್ಯಾಯಾಲಯದ ಆದೇಶದಂತೆ ಕೇಂದ್ರ ಸರ್ಕಾರ…

ಓಮೈಕ್ರಾನ್ ಆತಂಕ: ಸದ್ಯಕ್ಕೆ ಸಿನಿಮಾ, ಹೋಟೆಲ್, ಮಾಲ್ ಬಂದ್ ಇಲ್ಲ

ಬೆಂಗಳೂರು,ಡಿ,02: ಕೋವಿಡ್ ವೈರಾಣುವಿನ ಹೊಸ ರೂಪಾಂತರಿ ತಳಿ ಓಮೈಕ್ರಾನ್ ಆತಂಕ ಸೃಷ್ಟಿಸಿರುವುದು ನಿಜವಾದರೂ ಸದ್ಯಕ್ಕೆ ರಾಜ್ಯದಲ್ಲಿ ಚಿತ್ರ ಮಂದಿರ, ಹೋಟೆಲ್ ಮತ್ತು ಮಾಲ್ ಗಳನ್ನು ಮುಚ್ಚುವುದಿಲ್ಲ. ಆದರೆ, ಇಂತಹ ಸ್ಥಳಗಳಿಗೆ ಹೋಗುವವರಿಗೆ ಸದ್ಯದಲ್ಲೇ ಲಸಿಕೆ ಕಡ್ಡಾಯ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಇತ್ತೀಚೆಗೆ ವೈದ್ಯರನ್ನು ಕುರಿತು ನಿರ್ಮಿಸಿ, ಬಿಡುಗಡೆ ಮಾಡಿರುವ `ಪ್ರೇಮಂ ಪೂಜ್ಯಂ’ ಚಿತ್ರದ ನಾಯಕ ನಟ ಪ್ರೇಮ್ ಅವರು ಗುರುವಾರ ತಮ್ಮನ್ನು ಇಲ್ಲಿ ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ…

ಸಿದ್ದು ವಿರುದ್ಧ ಎಚ್ ಡಿಕೆ ವಾಗ್ದಾಳಿ

ಬೆಂಗಳೂರು (ನೆಲಮಂಗಲ): ಮಾಜಿ ಪ್ರಧಾನಿ ದೇವೇಗೌಡರು ಅವಕಾಶವಾದಿ ರಾಜಕಾರಣಿ ಹಾಗೂ ಜೆಡಿಎಸ್ ಪಕ್ಷ ಬಿಜೆಪಿ ಬಿ ಟೀಮ್ ಎಂದು ಹೇಳಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಹಾಗೆ ಹೇಳಿಕೊಳ್ಳುವ ಬದಲು ಒಂದು ಸ್ಲೇಟಿನಲ್ಲಿ ” ಜೆಡಿಎಸ್ ಪಕ್ಷ ಬಿಜೆಪಿ ಟೀಮ್ ” ಅಂತ ಬರೆದುಕೊಂಡು ಕಟ್ಟು ಹಾಕಿಸಿ ಕುತ್ತಿಗೆಗೆ ಹಾಕಿಕೊಂಡು ತಿರುಗಾಡಲಿ. ಹಾಗೆಯೇ ಪ್ರಚಾರ ಮಾಡಿಕೊಂಡು ದಿನವೂ ಓಡಾಡಲಿ ಎಂದು ಟೀಕಿಸಿದರು. ನೆಲಮಂಗಲದಲ್ಲಿ ಇಂದು ವಿಧಾನ…

ಎನ್ಇಪಿ ಭಾರತ ಕೇಂದ್ರಿತ; ಸಂಶೋಧನೆ, ನಾವೀನ್ಯತೆಗೆ ಒತ್ತು;ಅಶ್ವತ್ಥ್ ನಾರಾಯಣ

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಭಾರತ ಕೇಂದ್ರಿತವಾಗಿದ್ದು, ಶಿಕ್ಷಣ ಕ್ರಮದಲ್ಲಿ ಸಂಶೋಧನೆ ಮತ್ತು ನಾವೀನ್ಯತೆಗಳಿಗೆ ಒತ್ತು ಕೊಡುವ ಮೂಲಕ ವಿದ್ಯಾರ್ಥಿಗಳ ಪರಿಪೂರ್ಣ ಬೆಳವಣಿಗೆಯನ್ನು ಗುರಿಯಾಗಿ ಹೊಂದಿದೆ. ಇದರ ಅನುಷ್ಠಾನದಲ್ಲಿ ರಾಜ್ಯವು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಎಜುಕೇಷನ್ ಪ್ರೊಮೋಷನ್ ಸೊಸೈಟಿ ಆಫ್ ಇಂಡಿಯಾ (ಇಪಿಎಸ್ಐ), ಕುಪೇಕಾ ಮತ್ತು ಕಾಮೆಡ್-ಕೆ ಸಂಘಟನೆಗಳು ಜತೆಗೂಡಿ ಮಂಗಳವಾರ ಏರ್ಪಡಿಸಿದ್ದ `ಎನ್ಇಪಿ ಜಾರಿ: ಶಿಕ್ಷಣ ಸಂಸ್ಥೆಗಳಿಗಿರುವ ಅವಕಾಶಗಳು ಮತ್ತು ಸವಾಲುಗಳು’ ವಿಚಾರ ಗೋಷ್ಠಿಯಲ್ಲಿ…

ರದಜ್ಯದಲ್ಲಿ ಲಾಕ್ ಡೌನ್ ಮಾಡುವ ಯಸವುದೇ ಪ್ರಸ್ತಾಪ ಇಲ್ಲ: ಸುಧಾಕರ್

ಬೆಂಗಳೂರು, ನ.29: ಓಮಿಕ್ರಾನ್ ರೂಪಾಂತರ ತಳಿ ಬಗ್ಗೆ ತೀವ್ರ ಆತಂಕ ಬೇಡ. ರಾಜ್ಯದಲ್ಲಿ ಲಾಕ್‌ಡೌನ್ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಕೆಲವರು ಲಾಕ್‌ಡೌನ್ ಆಗಲಿದೆ ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹರಡುತ್ತಿದೆ. ಸಾರ್ವಜನಿಕರು ಇಂತಹ ಊಹಾಪೋಹಗಳಿಗೆ ಕಿವಿಗೊಡಬಾರದು. ಲಾಕ್‌ಡೌನ್ ಮಾಡುವ ಅಗತ್ಯವೇ ಇಲ್ಲ. ಸರ್ಕಾರದ ಮುಂದೆ ಅಂತಹ ಪ್ರಸ್ತಾಪವೂ ಇಲ್ಲ ಎಂದು ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಇದನ್ನು ಮೂರನೇ ಅಲೆ…

ಕನ್ನಡ ಕಲಿತು ಕನ್ನಡಿಗರಾಗಿ:ಡಾ. ಆರೂಢಭಾರತೀ ಶ್ರೀ

ಬೆಂಗಳೂರು,ನ,29:ಕನ್ನಡಿಗರ ಕಲೆ ಸಂಸ್ಕೃತಿ ಇತಿಹಾಸ ಅಡಗಿರುವುದು ಕನ್ನಡ ಸಾಹಿತ್ಯದಲ್ಲಿ. ಕನ್ನಡ ಭಾಷೆಯನ್ನು ಸರಿಯಾಗಿ ಕಲಿಯದಿದ್ದರೆ ಕನ್ನಡ ಸಾಹಿತ್ಯವನ್ನು ತಿಳಿಯಲಾಗದು. ಕನ್ನಡ ನಾಡಿನಲ್ಲಿ ಹುಟ್ಟಿದವರು ಮಾತ್ರವಲ್ಲ, ಕನ್ನಡ ನೆಲಕ್ಕೆ ಬಂದ ವಲಸಿಗರೆಲ್ಲರೂ ಕನ್ನಡ ಭಾಷೆಯನ್ನು ಕಲಿತು ಕನ್ನಡಿಗರೆನಿಸಬೇಕು ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಶ್ರೀ ಆರೂಢಭಾರತೀ ಸ್ವಾಮೀಜಿ ಹೇಳಿದರು. ಅವರು ಭಾನುವಾರ ಕೆಂಗೇರಿಯ ಗಾಂಧಿ ನಗರದಲ್ಲಿ ರಾಮಸೇನೆ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್ ರಾಜ್‌ಕುಮಾರ್ ಮತ್ತು ರಾಮಸೇನಾ ಕಾರ್ಯಕರ್ತ ದಿ. ಜಗದೀಶ್…

ವೀರಸೈನಿಕನ ಅಚಾನಕ ಬದುಕಿನ ತಿರುವಿನ ದುರ್ಘಟನೆಯ ಕಥೆ…

ವೀರಸೈನಿಕನ ಅಚಾನಕ ಬದುಕಿನ ತಿರುವಿನ ದುರ್ಘಟನೆಯ ಕಥೆ… ಆ ಹೊತ್ತು ಬೆಳಗಿನಿಂದ ನಾನು ಒಂದೇ ಸಮನೆ ಗೆಳೆಯ ಶಿವಕುಮಾರ್ ಬೆನ್ನು ಬಿದ್ದಿದ್ದೆ. ಒಂದನೇ ತರಗತಿಯಲ್ಲಿ ಕಾಲಿಟ್ಟಾಗಲೇ ಶಾಲೆಯ ನನ್ನ ಮೊತ್ತಮೊದಲ ಒಡನಾಡಿಯಾಗಿ ಬಾಹ್ಯಪ್ರಪಂಚದ ನನ್ನ ‘ಮೊದಲ ಗೆಳೆಯ’ ಎನ್ನುವ ಹೆಗ್ಗಳಿಕೆಗೆ ಪಾತ್ರನಾದವನು ಈ ಬಳ್ಳಾರಿ ಶಿವಕುಮಾರ್. ಶಿವಕುಮಾರ್ ಒಟ್ಟಿಗಿನ ಸ್ನೇಹ ದಿನಕಳೆದಂತೆ ಕಡಿಮೆಯಾಗುತ್ತಾ ನಡೆದಿದ್ದಕ್ಕೆ ಬಹಳ ಪ್ರಮುಖ ಕಾರಣ ಎಂದರೆ ತದನಂತರದ ದಿನಮಾನದಲ್ಲಿ ನನ್ನ ಸಂಪರ್ಕಕ್ಕೆ ಬಂದ ಜಾಕೀರ್ ಹುಸೇನ್, ನಾಗರಾಜ್, ಜಕಣಾಚಾರಿ, ಚಿದಾನಂದ್, ಕಾಂತರಾಜ್, ಯತಿರಾಜ್,…

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ನಡೆದ ಟೆಂಡರ್ ಗಳ ಬಗ್ಗೆಯೂ ತನಿಖೆಯಾಗಲಿ ;ಸಿದ್ದು

ಮೈಸೂರು,ನ27:ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿರುವ ಟೆಂಡರ್ ಗಳ ಬಗ್ಗೆಯೂ ತನಿಖೆ ನಡೆಯಲಿ. ಇದಕ್ಕೆ ನಮ್ಮ ಆಕ್ಷೇಪ ಏನನೂ ಇಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮೈಸೂರಿನಲ್ಲಿ‌ ಇಂದು ಮಾಧ್ಯಮ ಪ್ರತಿನಿಧಿಗಳ‌ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯ ಟೆಂಡರ್ ಗಳ ಬಗ್ಗೆಯೂ ತನಿಖೆ ನಡೆಸುವ ಮುಖ್ಯಮಂತ್ರಿಗಳ ಹೇಳಿಕೆಗೆ ಪ್ರತಿಕ್ರಿಯಿಸಿದರು. ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ. ಅವರು ಯಾವುದೇ ಪಕ್ಷದವರಾಗಲಿ ಎಂದರು. ವಿಧಾನ ಪರಿಷತ್ತಿನ…

ಗುಣಗಳಿಗೆ ತಕ್ಕಂತೆ  ವ್ಶಕ್ತಿಯ ಶಿಕ್ಷಣ ಆಗಬೇಕು

ಚಿದಂಬರ ಜೋಶಿ,ಚಿಕಾಗೂ. ಚಿದಂಬರ ಜೋಶಿ ಅವರು ಮೂಲತಃ ರಾಯಚೂರು ಜಿಲ್ಲೆಯ, ಗಂಗಾವತಿಯವರು. ಪ್ರಸ್ತುತ ಅನಿವಾಸಿ ಭಾರತೀಯ. ಕಳೆದ ೩ ದಶಕಗಳಿಂದ ಉತ್ತರ ಅಮೆರಿಕಾದ ಚಿಕಾಗೊದಲ್ಲಿ ನೆಲಿಸಿದ್ದಾರೆ. ಅವರ ಕನ್ನಡ ಪ್ರೇಮ ಇವತ್ತಿಗೂ ಮಾಸಿಲ್ಲ. ಅವರ ವಿಶಿಷ್ಟ ಚಿಂತನೆ ಹಾಗೂ ಬರವಣಿಗೆಯ ಶೈಲಿ, ಓದುಗರ, ಕೇಳುಗರ ವಿಚಾರಶಕ್ತಿಯನ್ನು ಪ್ರಚೋದಿಸುತ್ತವೆ, ಸವಾಲು ಒಡ್ಡುತ್ತವೆ.  ಅವರು ಶಿಕ್ಷಣ ಮತ್ತು ಅದರ ವ್ಯವಸ್ಥೆ ಕುರಿತು ಬರೆದಿದ್ದಾರೆ. ಗುಣಗಳಿಗೆ ತಕ್ಕಂತೆ  ವ್ಶಕ್ತಿಯ ಶಿಕ್ಷಣ ಆಗಬೇಕು ೪ ನೇ ಕಂತು ಹಿಂದಿನ ೩ ಕಂತುಗಳಿಸಂಪರ್ನಪರ್ಕ…

ರಾಜ್ಯಪಾಲರಿಗೆ ವಿಪಕ್ಷಗಳ ದೂರು ಹಾಸ್ಯಾಸ್ಪದ- ಸಿಎಂ

Post by kendhooli desk ದಾವಣಗೆರೆ, ನ, 26: ಸರ್ಕಾರ ವಜಾ ಮಾಡುವ ಬಗ್ಗೆ ರಾಜ್ಯಪಾಲರಿಗೆ ವಿಪಕ್ಷಗಳು ದೂರು ಸಲ್ಲಿಸಿರುವವುದು ಹಾಸ್ಯಾಸ್ಪದ. ಕಾಮಗಾರಿಗಳ ಪರ್ಸಂಟೇಜ್ ವಿಚಾರದಲ್ಲಿ ಕಾಂಗ್ರೆಸ್ ಬಹಳ ಆಸಕ್ತಿ ವಹಿಸಿರುವುದರಿಂದ ಅವರ ಕಾಲದ ಟೆಂಡರ್ ಕಾಮಗಾರಿಗಳನ್ನು ತನಿಖೆಗೊಳಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದಾವಣಗೆರೆಯಲ್ಲಿಸಂವಿಧಾನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದ ಅವಧಿಯಲ್ಲಿನ ಗುತ್ತಿಗೆದಾರರ ಪರ್ಸೆಂಟೇಜ್ ಅನುಭವವನ್ನು ಪತ್ರದಲ್ಲಿ ಬರೆದಿದ್ದಾರೆ.…

ಬಂಡವಾಳ ಆಕರ್ಷಿಸಲು ಬೆಂಗಳೂರಿನಲ್ಲಿ ಮೊರಾಕ್ಕೊ ರೋಡ್-ಶೋ

ಬೆಂಗಳೂರು,ನ,25: ಕರ್ನಾಟಕ ಮತ್ತು ಮೊರಾಕ್ಕೊ ನಡುವೆ ಎರಡೂ ಕಡೆಗಳಿಂದ ನೇರ ವಿಮಾನ ಸಂಪರ್ಕವನ್ನು ಆರಂಭಿಸಿದರೆ ದ್ವಿಪಕ್ಷೀಯ ವಾಣಿಜ್ಯ ವಹಿವಾಟು ವೃದ್ಧಿಯಾಗುವ ಸದವಕಾಶವಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಮೊರಾಕ್ಕೊದ ಹೂಡಿಕೆ ಮತ್ತು ರಫ್ತು ಅಭಿವೃದ್ಧಿ ಸಂಸ್ಥೆಯು ಬಂಡವಾಳ ಆಕರ್ಷಿಸಲು `ಮೊರಾಕ್ಕೊ ನೌ’ ಉಪಕ್ರಮದಡಿ ನಗರದ ಖಾಸಗಿ ಹೋಟೆಲಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರೋಡ್ ಶೋ ಸಭೆಯಲ್ಲಿ ಸಚಿವರು ಮಾತನಾಡಿದರು. `ಬೆಂಗಳೂರು ಇತ್ತೀಚಿನ ವರ್ಷಗಳಲ್ಲಿ ಜಾಗತಿಕ ಮಟ್ಟದ ನಗರವಾಗಿದ್ದು, ಅತ್ಯುತ್ತಮ…

ಡೆಡ್ಲಿ ಚಂಡಮಾರುತಕ್ಕೆ ದಕ್ಷಿಣ ಭಾರತ ತತ್ತರ,ವಿಜ್ಞಾನಿಗಳಿಗೆ ಸಿಗುತ್ತಿಲ್ಲ ಉತ್ತರ..!

ಡೆಡ್ಲಿ ಚಂಡಮಾರುತಕ್ಕೆ ದಕ್ಷಿಣ ಭಾರತ ತತ್ತರ,ವಿಜ್ಞಾನಿಗಳಿಗೆ ಸಿಗುತ್ತಿಲ್ಲ ಉತ್ತರ..! Writing- ಪರಶಿವ ಧನಗೂರು ಪ್ರಚಂಡ ಚಂಡಮಾರುತ..! ದಕ್ಷಿಣ ಭಾರತದ ಮೇಲೇಕೆ ಮುರಿದುಕೊಂಡು ಬಿದ್ದಿವೆ ಈ ಡೆಡ್ಲಿ ಚಂಡಮಾರುತಗಳು?ವೀಶ್ವ ಭೂಪಟದಲ್ಲಿ ಹಲವು ನಗರಗಳು ನಾಪತ್ತೆ ಯಾಗುವ ಕಾಲ ಬಂದೇ ಬಿಡ್ತಾ? ಭಾರತದ ಹನ್ನೆರಡು ಪ್ರಮುಖ ನಗರಗಳು ಈ ಶತಮಾನದಂತ್ಯಕ್ಕೆ ಸಮುದ್ರದೊಳಗೆ ಮುಳುಗಿಹೋಗಬಹುದು ಎಚ್ಚರಾ! ಎಂದು ನಾಸಾ ವಿಜ್ಞಾನಿಗಳು ಹೇಳಿದ್ದು ಯಾಕೇ? ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ಆಂದ್ರ ಪ್ರದೇಶ, ಕೇರಳ, ತೆಲಂಗಾಣ, ತಮಿಳು ನಾಡುಗಳನ್ನು ಜಲಪ್ರಳಯ ದಲ್ಲಿ…

1 58 59 60 61 62 122
Girl in a jacket