ಎಸ್ಎಸ್ಎಲ್ ಸಿ ಪರೀಕ್ಷೆಗಳು ಮುಂದೂಡಿಕೆ
ಬೆಂಗಳೂರು,ಮೇ,13:ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್19ರ ಎರಡನೇ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು, ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ…