Girl in a jacket

Author kendhooli_editor

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಕುರಿತು ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ : ಸಿಎಂ

ನವದೆಹಲಿ, ಡಿ,೨ :ಇದೇ ೬ ರಂದು ನಡೆಯಲಿರುವ ಮಹತ್ವದ ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಕುರಿತು ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ , ಆರೋಗ್ಯ , ಕಾನೂನು ಸಚಿವರನ್ನು ಭೇಟಿಯಾದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ಕೃಷ್ಣಾ ಮೇಲ್ದಂಡೆ ಯೋಜನೆಯ ೨ ನೇ ನ್ಯಾಯಾಧಿಕರಣದ ಅಧಿಸೂಚನೆಯಲ್ಲಿ ನ್ಯಾಯಾಲಯದ ಆದೇಶದಂತೆ ಕೇಂದ್ರ ಸರ್ಕಾರ…

ಓಮೈಕ್ರಾನ್ ಆತಂಕ: ಸದ್ಯಕ್ಕೆ ಸಿನಿಮಾ, ಹೋಟೆಲ್, ಮಾಲ್ ಬಂದ್ ಇಲ್ಲ

ಬೆಂಗಳೂರು,ಡಿ,02: ಕೋವಿಡ್ ವೈರಾಣುವಿನ ಹೊಸ ರೂಪಾಂತರಿ ತಳಿ ಓಮೈಕ್ರಾನ್ ಆತಂಕ ಸೃಷ್ಟಿಸಿರುವುದು ನಿಜವಾದರೂ ಸದ್ಯಕ್ಕೆ ರಾಜ್ಯದಲ್ಲಿ ಚಿತ್ರ ಮಂದಿರ, ಹೋಟೆಲ್ ಮತ್ತು ಮಾಲ್ ಗಳನ್ನು ಮುಚ್ಚುವುದಿಲ್ಲ. ಆದರೆ, ಇಂತಹ ಸ್ಥಳಗಳಿಗೆ ಹೋಗುವವರಿಗೆ ಸದ್ಯದಲ್ಲೇ ಲಸಿಕೆ ಕಡ್ಡಾಯ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಇತ್ತೀಚೆಗೆ ವೈದ್ಯರನ್ನು ಕುರಿತು ನಿರ್ಮಿಸಿ, ಬಿಡುಗಡೆ ಮಾಡಿರುವ `ಪ್ರೇಮಂ ಪೂಜ್ಯಂ’ ಚಿತ್ರದ ನಾಯಕ ನಟ ಪ್ರೇಮ್ ಅವರು ಗುರುವಾರ ತಮ್ಮನ್ನು ಇಲ್ಲಿ ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ…

ಸಿದ್ದು ವಿರುದ್ಧ ಎಚ್ ಡಿಕೆ ವಾಗ್ದಾಳಿ

ಬೆಂಗಳೂರು (ನೆಲಮಂಗಲ): ಮಾಜಿ ಪ್ರಧಾನಿ ದೇವೇಗೌಡರು ಅವಕಾಶವಾದಿ ರಾಜಕಾರಣಿ ಹಾಗೂ ಜೆಡಿಎಸ್ ಪಕ್ಷ ಬಿಜೆಪಿ ಬಿ ಟೀಮ್ ಎಂದು ಹೇಳಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಹಾಗೆ ಹೇಳಿಕೊಳ್ಳುವ ಬದಲು ಒಂದು ಸ್ಲೇಟಿನಲ್ಲಿ ” ಜೆಡಿಎಸ್ ಪಕ್ಷ ಬಿಜೆಪಿ ಟೀಮ್ ” ಅಂತ ಬರೆದುಕೊಂಡು ಕಟ್ಟು ಹಾಕಿಸಿ ಕುತ್ತಿಗೆಗೆ ಹಾಕಿಕೊಂಡು ತಿರುಗಾಡಲಿ. ಹಾಗೆಯೇ ಪ್ರಚಾರ ಮಾಡಿಕೊಂಡು ದಿನವೂ ಓಡಾಡಲಿ ಎಂದು ಟೀಕಿಸಿದರು. ನೆಲಮಂಗಲದಲ್ಲಿ ಇಂದು ವಿಧಾನ…

ಎನ್ಇಪಿ ಭಾರತ ಕೇಂದ್ರಿತ; ಸಂಶೋಧನೆ, ನಾವೀನ್ಯತೆಗೆ ಒತ್ತು;ಅಶ್ವತ್ಥ್ ನಾರಾಯಣ

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಭಾರತ ಕೇಂದ್ರಿತವಾಗಿದ್ದು, ಶಿಕ್ಷಣ ಕ್ರಮದಲ್ಲಿ ಸಂಶೋಧನೆ ಮತ್ತು ನಾವೀನ್ಯತೆಗಳಿಗೆ ಒತ್ತು ಕೊಡುವ ಮೂಲಕ ವಿದ್ಯಾರ್ಥಿಗಳ ಪರಿಪೂರ್ಣ ಬೆಳವಣಿಗೆಯನ್ನು ಗುರಿಯಾಗಿ ಹೊಂದಿದೆ. ಇದರ ಅನುಷ್ಠಾನದಲ್ಲಿ ರಾಜ್ಯವು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಎಜುಕೇಷನ್ ಪ್ರೊಮೋಷನ್ ಸೊಸೈಟಿ ಆಫ್ ಇಂಡಿಯಾ (ಇಪಿಎಸ್ಐ), ಕುಪೇಕಾ ಮತ್ತು ಕಾಮೆಡ್-ಕೆ ಸಂಘಟನೆಗಳು ಜತೆಗೂಡಿ ಮಂಗಳವಾರ ಏರ್ಪಡಿಸಿದ್ದ `ಎನ್ಇಪಿ ಜಾರಿ: ಶಿಕ್ಷಣ ಸಂಸ್ಥೆಗಳಿಗಿರುವ ಅವಕಾಶಗಳು ಮತ್ತು ಸವಾಲುಗಳು’ ವಿಚಾರ ಗೋಷ್ಠಿಯಲ್ಲಿ…

ರದಜ್ಯದಲ್ಲಿ ಲಾಕ್ ಡೌನ್ ಮಾಡುವ ಯಸವುದೇ ಪ್ರಸ್ತಾಪ ಇಲ್ಲ: ಸುಧಾಕರ್

ಬೆಂಗಳೂರು, ನ.29: ಓಮಿಕ್ರಾನ್ ರೂಪಾಂತರ ತಳಿ ಬಗ್ಗೆ ತೀವ್ರ ಆತಂಕ ಬೇಡ. ರಾಜ್ಯದಲ್ಲಿ ಲಾಕ್‌ಡೌನ್ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಕೆಲವರು ಲಾಕ್‌ಡೌನ್ ಆಗಲಿದೆ ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹರಡುತ್ತಿದೆ. ಸಾರ್ವಜನಿಕರು ಇಂತಹ ಊಹಾಪೋಹಗಳಿಗೆ ಕಿವಿಗೊಡಬಾರದು. ಲಾಕ್‌ಡೌನ್ ಮಾಡುವ ಅಗತ್ಯವೇ ಇಲ್ಲ. ಸರ್ಕಾರದ ಮುಂದೆ ಅಂತಹ ಪ್ರಸ್ತಾಪವೂ ಇಲ್ಲ ಎಂದು ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಇದನ್ನು ಮೂರನೇ ಅಲೆ…

ಕನ್ನಡ ಕಲಿತು ಕನ್ನಡಿಗರಾಗಿ:ಡಾ. ಆರೂಢಭಾರತೀ ಶ್ರೀ

ಬೆಂಗಳೂರು,ನ,29:ಕನ್ನಡಿಗರ ಕಲೆ ಸಂಸ್ಕೃತಿ ಇತಿಹಾಸ ಅಡಗಿರುವುದು ಕನ್ನಡ ಸಾಹಿತ್ಯದಲ್ಲಿ. ಕನ್ನಡ ಭಾಷೆಯನ್ನು ಸರಿಯಾಗಿ ಕಲಿಯದಿದ್ದರೆ ಕನ್ನಡ ಸಾಹಿತ್ಯವನ್ನು ತಿಳಿಯಲಾಗದು. ಕನ್ನಡ ನಾಡಿನಲ್ಲಿ ಹುಟ್ಟಿದವರು ಮಾತ್ರವಲ್ಲ, ಕನ್ನಡ ನೆಲಕ್ಕೆ ಬಂದ ವಲಸಿಗರೆಲ್ಲರೂ ಕನ್ನಡ ಭಾಷೆಯನ್ನು ಕಲಿತು ಕನ್ನಡಿಗರೆನಿಸಬೇಕು ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಶ್ರೀ ಆರೂಢಭಾರತೀ ಸ್ವಾಮೀಜಿ ಹೇಳಿದರು. ಅವರು ಭಾನುವಾರ ಕೆಂಗೇರಿಯ ಗಾಂಧಿ ನಗರದಲ್ಲಿ ರಾಮಸೇನೆ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್ ರಾಜ್‌ಕುಮಾರ್ ಮತ್ತು ರಾಮಸೇನಾ ಕಾರ್ಯಕರ್ತ ದಿ. ಜಗದೀಶ್…

ವೀರಸೈನಿಕನ ಅಚಾನಕ ಬದುಕಿನ ತಿರುವಿನ ದುರ್ಘಟನೆಯ ಕಥೆ…

ವೀರಸೈನಿಕನ ಅಚಾನಕ ಬದುಕಿನ ತಿರುವಿನ ದುರ್ಘಟನೆಯ ಕಥೆ… ಆ ಹೊತ್ತು ಬೆಳಗಿನಿಂದ ನಾನು ಒಂದೇ ಸಮನೆ ಗೆಳೆಯ ಶಿವಕುಮಾರ್ ಬೆನ್ನು ಬಿದ್ದಿದ್ದೆ. ಒಂದನೇ ತರಗತಿಯಲ್ಲಿ ಕಾಲಿಟ್ಟಾಗಲೇ ಶಾಲೆಯ ನನ್ನ ಮೊತ್ತಮೊದಲ ಒಡನಾಡಿಯಾಗಿ ಬಾಹ್ಯಪ್ರಪಂಚದ ನನ್ನ ‘ಮೊದಲ ಗೆಳೆಯ’ ಎನ್ನುವ ಹೆಗ್ಗಳಿಕೆಗೆ ಪಾತ್ರನಾದವನು ಈ ಬಳ್ಳಾರಿ ಶಿವಕುಮಾರ್. ಶಿವಕುಮಾರ್ ಒಟ್ಟಿಗಿನ ಸ್ನೇಹ ದಿನಕಳೆದಂತೆ ಕಡಿಮೆಯಾಗುತ್ತಾ ನಡೆದಿದ್ದಕ್ಕೆ ಬಹಳ ಪ್ರಮುಖ ಕಾರಣ ಎಂದರೆ ತದನಂತರದ ದಿನಮಾನದಲ್ಲಿ ನನ್ನ ಸಂಪರ್ಕಕ್ಕೆ ಬಂದ ಜಾಕೀರ್ ಹುಸೇನ್, ನಾಗರಾಜ್, ಜಕಣಾಚಾರಿ, ಚಿದಾನಂದ್, ಕಾಂತರಾಜ್, ಯತಿರಾಜ್,…

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೂ ನಡೆದ ಟೆಂಡರ್ ಗಳ ಬಗ್ಗೆಯೂ ತನಿಖೆಯಾಗಲಿ ;ಸಿದ್ದು

ಮೈಸೂರು,ನ27:ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಡೆದಿರುವ ಟೆಂಡರ್ ಗಳ ಬಗ್ಗೆಯೂ ತನಿಖೆ ನಡೆಯಲಿ. ಇದಕ್ಕೆ ನಮ್ಮ ಆಕ್ಷೇಪ ಏನನೂ ಇಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮೈಸೂರಿನಲ್ಲಿ‌ ಇಂದು ಮಾಧ್ಯಮ ಪ್ರತಿನಿಧಿಗಳ‌ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯ ಟೆಂಡರ್ ಗಳ ಬಗ್ಗೆಯೂ ತನಿಖೆ ನಡೆಸುವ ಮುಖ್ಯಮಂತ್ರಿಗಳ ಹೇಳಿಕೆಗೆ ಪ್ರತಿಕ್ರಿಯಿಸಿದರು. ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ. ಅವರು ಯಾವುದೇ ಪಕ್ಷದವರಾಗಲಿ ಎಂದರು. ವಿಧಾನ ಪರಿಷತ್ತಿನ…

ಗುಣಗಳಿಗೆ ತಕ್ಕಂತೆ  ವ್ಶಕ್ತಿಯ ಶಿಕ್ಷಣ ಆಗಬೇಕು

ಚಿದಂಬರ ಜೋಶಿ,ಚಿಕಾಗೂ. ಚಿದಂಬರ ಜೋಶಿ ಅವರು ಮೂಲತಃ ರಾಯಚೂರು ಜಿಲ್ಲೆಯ, ಗಂಗಾವತಿಯವರು. ಪ್ರಸ್ತುತ ಅನಿವಾಸಿ ಭಾರತೀಯ. ಕಳೆದ ೩ ದಶಕಗಳಿಂದ ಉತ್ತರ ಅಮೆರಿಕಾದ ಚಿಕಾಗೊದಲ್ಲಿ ನೆಲಿಸಿದ್ದಾರೆ. ಅವರ ಕನ್ನಡ ಪ್ರೇಮ ಇವತ್ತಿಗೂ ಮಾಸಿಲ್ಲ. ಅವರ ವಿಶಿಷ್ಟ ಚಿಂತನೆ ಹಾಗೂ ಬರವಣಿಗೆಯ ಶೈಲಿ, ಓದುಗರ, ಕೇಳುಗರ ವಿಚಾರಶಕ್ತಿಯನ್ನು ಪ್ರಚೋದಿಸುತ್ತವೆ, ಸವಾಲು ಒಡ್ಡುತ್ತವೆ.  ಅವರು ಶಿಕ್ಷಣ ಮತ್ತು ಅದರ ವ್ಯವಸ್ಥೆ ಕುರಿತು ಬರೆದಿದ್ದಾರೆ. ಗುಣಗಳಿಗೆ ತಕ್ಕಂತೆ  ವ್ಶಕ್ತಿಯ ಶಿಕ್ಷಣ ಆಗಬೇಕು ೪ ನೇ ಕಂತು ಹಿಂದಿನ ೩ ಕಂತುಗಳಿಸಂಪರ್ನಪರ್ಕ…

ರಾಜ್ಯಪಾಲರಿಗೆ ವಿಪಕ್ಷಗಳ ದೂರು ಹಾಸ್ಯಾಸ್ಪದ- ಸಿಎಂ

Post by kendhooli desk ದಾವಣಗೆರೆ, ನ, 26: ಸರ್ಕಾರ ವಜಾ ಮಾಡುವ ಬಗ್ಗೆ ರಾಜ್ಯಪಾಲರಿಗೆ ವಿಪಕ್ಷಗಳು ದೂರು ಸಲ್ಲಿಸಿರುವವುದು ಹಾಸ್ಯಾಸ್ಪದ. ಕಾಮಗಾರಿಗಳ ಪರ್ಸಂಟೇಜ್ ವಿಚಾರದಲ್ಲಿ ಕಾಂಗ್ರೆಸ್ ಬಹಳ ಆಸಕ್ತಿ ವಹಿಸಿರುವುದರಿಂದ ಅವರ ಕಾಲದ ಟೆಂಡರ್ ಕಾಮಗಾರಿಗಳನ್ನು ತನಿಖೆಗೊಳಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ದಾವಣಗೆರೆಯಲ್ಲಿಸಂವಿಧಾನ ದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದ ಅವಧಿಯಲ್ಲಿನ ಗುತ್ತಿಗೆದಾರರ ಪರ್ಸೆಂಟೇಜ್ ಅನುಭವವನ್ನು ಪತ್ರದಲ್ಲಿ ಬರೆದಿದ್ದಾರೆ.…

ಬಂಡವಾಳ ಆಕರ್ಷಿಸಲು ಬೆಂಗಳೂರಿನಲ್ಲಿ ಮೊರಾಕ್ಕೊ ರೋಡ್-ಶೋ

ಬೆಂಗಳೂರು,ನ,25: ಕರ್ನಾಟಕ ಮತ್ತು ಮೊರಾಕ್ಕೊ ನಡುವೆ ಎರಡೂ ಕಡೆಗಳಿಂದ ನೇರ ವಿಮಾನ ಸಂಪರ್ಕವನ್ನು ಆರಂಭಿಸಿದರೆ ದ್ವಿಪಕ್ಷೀಯ ವಾಣಿಜ್ಯ ವಹಿವಾಟು ವೃದ್ಧಿಯಾಗುವ ಸದವಕಾಶವಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಮೊರಾಕ್ಕೊದ ಹೂಡಿಕೆ ಮತ್ತು ರಫ್ತು ಅಭಿವೃದ್ಧಿ ಸಂಸ್ಥೆಯು ಬಂಡವಾಳ ಆಕರ್ಷಿಸಲು `ಮೊರಾಕ್ಕೊ ನೌ’ ಉಪಕ್ರಮದಡಿ ನಗರದ ಖಾಸಗಿ ಹೋಟೆಲಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರೋಡ್ ಶೋ ಸಭೆಯಲ್ಲಿ ಸಚಿವರು ಮಾತನಾಡಿದರು. `ಬೆಂಗಳೂರು ಇತ್ತೀಚಿನ ವರ್ಷಗಳಲ್ಲಿ ಜಾಗತಿಕ ಮಟ್ಟದ ನಗರವಾಗಿದ್ದು, ಅತ್ಯುತ್ತಮ…

ಡೆಡ್ಲಿ ಚಂಡಮಾರುತಕ್ಕೆ ದಕ್ಷಿಣ ಭಾರತ ತತ್ತರ,ವಿಜ್ಞಾನಿಗಳಿಗೆ ಸಿಗುತ್ತಿಲ್ಲ ಉತ್ತರ..!

ಡೆಡ್ಲಿ ಚಂಡಮಾರುತಕ್ಕೆ ದಕ್ಷಿಣ ಭಾರತ ತತ್ತರ,ವಿಜ್ಞಾನಿಗಳಿಗೆ ಸಿಗುತ್ತಿಲ್ಲ ಉತ್ತರ..! Writing- ಪರಶಿವ ಧನಗೂರು ಪ್ರಚಂಡ ಚಂಡಮಾರುತ..! ದಕ್ಷಿಣ ಭಾರತದ ಮೇಲೇಕೆ ಮುರಿದುಕೊಂಡು ಬಿದ್ದಿವೆ ಈ ಡೆಡ್ಲಿ ಚಂಡಮಾರುತಗಳು?ವೀಶ್ವ ಭೂಪಟದಲ್ಲಿ ಹಲವು ನಗರಗಳು ನಾಪತ್ತೆ ಯಾಗುವ ಕಾಲ ಬಂದೇ ಬಿಡ್ತಾ? ಭಾರತದ ಹನ್ನೆರಡು ಪ್ರಮುಖ ನಗರಗಳು ಈ ಶತಮಾನದಂತ್ಯಕ್ಕೆ ಸಮುದ್ರದೊಳಗೆ ಮುಳುಗಿಹೋಗಬಹುದು ಎಚ್ಚರಾ! ಎಂದು ನಾಸಾ ವಿಜ್ಞಾನಿಗಳು ಹೇಳಿದ್ದು ಯಾಕೇ? ದಕ್ಷಿಣ ಭಾರತದ ರಾಜ್ಯಗಳಾದ ಕರ್ನಾಟಕ, ಆಂದ್ರ ಪ್ರದೇಶ, ಕೇರಳ, ತೆಲಂಗಾಣ, ತಮಿಳು ನಾಡುಗಳನ್ನು ಜಲಪ್ರಳಯ ದಲ್ಲಿ…

ಅಣ್ಣಿಗೇರಿಯ ಆಕಸ್ಮಿಕ ತಲೆಬುರುಡೆಗಳತ್ತ . . . . .

ಅಣ್ಣಿಗೇರಿಯ ಆಕಸ್ಮಿಕ ತಲೆಬುರುಡೆಗಳತ್ತ . . . . ಅಣ್ಣಿಗೇರಿ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಪ್ರಾಚೀನ ಗ್ರಾಮ. ಇದು ಪ್ರಸಿದ್ಧವಾಗಿರುವುದು ಹೊಯ್ಸಳ ಕಾಲದ ಅಮೃತೇಶ್ವರ ದೇವಾಲಯದಿಂದ. ಕ್ರಿ.ಶ.೧೦೫೦ರಲ್ಲಿ ನಿರ್ಮಾಣವಾದ ಈ ದೇವಾಲಯವಲ್ಲದೆ, ಈ ಗ್ರಾಮವು ಬೆಳವೊಲ-೩೦೦ ನಾಡಿನ ಪ್ರಸಿದ್ಧ ರಾಜಧಾನಿಯಾಗಿದ್ದುದು ಗಮನಾರ್ಹ. ಇಲ್ಲಿ ಹನ್ನೆರಡಕ್ಕೂ ಹೆಚ್ಚು ಪ್ರಾಚೀನ ದೇವಾಲಯ ಮತ್ತು ಜಿನಾಲಯಗಳು ಹಾಗೂ ಇಪ್ಪತ್ತೆಂಟಕ್ಕೂ ಹೆಚ್ಚು ಶಾಸನಗಳನ್ನು ಕಾಣಬಹುದು. ಅವುಗಳಲ್ಲಿ ರಾಮಲಿಂಗೇಶ್ವರ, ಬನಶಂಕರಿ, ಕಲ್ಮಠ(ತ್ರಿಕೂಟ), ಪುರದ ವೀರಭದ್ರೇಶ್ವರ, ಪಾರ್ಶ್ವನಾಥ ಬಸದಿ ಮುಖ್ಯವಾಗಿವೆ. ಇವು ಅಣ್ಣಿಗೇರಿಯ ಪ್ರಾಚೀನ…

ಕತ್ತಿವರಸೆಯಲ್ಲ್ಲಿ ವಿಸ್ಮಯ ಮೂಡಿಸಿದ ರಾಜಕುಮಾರ್ ಕಲಾವಿದರಿಗೆ ಆಶ್ರಯ ನೀಡಿದ್ದ ಗುಗ್ಗುಮಹಲ್

ಕತ್ತಿವರಸೆಯಲ್ಲ್ಲಿ ವಿಸ್ಮಯ ಮೂಡಿಸಿದ ರಾಜಕುಮಾರ್  ಕಲಾವಿದರಿಗೆ ಆಶ್ರಯ ನೀಡಿದ್ದ ಗುಗ್ಗುಮಹಲ್ ಗಿರಿಜಾ ಮತ್ತು ಸೂರ್ಯಪ್ರಭಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ೧೯೬೦ರಲ್ಲಿ ಬಿಡುಗಡೆಗೊಂಡ ರಾಣಿ ಹೊನ್ನಮ್ಮ ಕಪ್ಪು ಬಿಳುಪು ಜಾನಪದ ಚಿತ್ರವನ್ನು ಟಿ.ಎಸ್.ಕರಿಬಸಯ್ಯ ನಿರ್ಮಿಸಿದರು. ಕು.ರ.ಸೀತಾರಾಮಶಾಸ್ತ್ರಿ ನಿರ್ದೇಶಿಸಿದ ಈ ಚಿತ್ರಕ್ಕೆ ಎಸ್.ರಾಮನಾಥನ್ ಮತ್ತು ಬಿ.ಎಸ್. ವಿಶ್ವನಾಥ್ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದರು. ರಾಜಕುಮಾರ್, ಲೀಲಾವತಿ, ಲಲಿತಾರಾವ್, ಬಾಲಕೃಷ್ಣ, ನರಸಿಂಹರಾಜು, ಲಕ್ಷ್ಮಿ, ವೀರಭದ್ರಯ್ಯ, ಈಶ್ವರಪ್ಪ, ಸುಬ್ಬಣ್ಣ, ರಾಮಚಂದ್ರಶಾಸ್ತ್ರಿ, ಗುಗ್ಗು, ಜಿ.ವಿ.ಅಯ್ಯರ್, ಶಿವಾಜಿರಾವ್ ಅಭಿನಯಿಸಿದರು. ಕು.ರ.ಸೀತಾರಾಮಶಾಸ್ತ್ರಿ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಗೀತೆಗಳನ್ನು ರಚಿಸಿದರು.…

ಅನ್ವೇಷಣೆಗಳ ಕರಾಳ ಹಾಗೂ ಬೆಳಕಿನ ಸಂಕೀರ್ಣ ಲೋಕ

ಅನ್ವೇಷಣೆಗಳ ಕರಾಳ ಹಾಗೂ ಬೆಳಕಿನ ಸಂಕೀರ್ಣ ಲೋಕ ಸಂಪ್ರದಾಯಿಕ ಚರಿತ್ರೆಯೆಂದರೆ ಏಕಮುಖಿಯಾದುದು. ಆಡಳಿತ ಮೂಲವಾದದು.ಪ್ರಭು ಪ್ರಧಾನವಾದುದು.ರಾಜಕೀಯವೇ ಮುಖ್ಯವಾದ ಇದರ ಆವರಣದೊಳಗೆ ಉತ್ಪಾದನಾ ಪ್ರಧಾನರ ಕಥನಗಳು ನಿರ್ಲಕ್ಷಕ್ಕೆ ಒಳಗಾಗಿವೆ.ತೆಳುವಾದ ಸರಳವಾದ ಚರಿತ್ರೆಯ ಈ ರೂಪಗಳ ಮಿತಿಯನ್ನ ಗ್ರಹಿಸಿಯೇ ಹೊಸ ಬಗೆಯ ಚರಿತ್ರೆಗಳನ್ನ ಕಟ್ಟುವ ರೂಪಿಸುವ ಪರಂಪರೆಗಳು ಈಗೀಗ ಗಟ್ಟಿಗೊಳ್ಳುತ್ತಿವೆ.ಜನ ಚರಿತ್ರೆ,ಮಹಿಳಾ ಚರಿತ್ರೆ,ಪ್ರಾದೇಶಿಕ ಚರಿತ್ರೆ,ಸಬಾಲ್ಟ್ರನ್ ಚರಿತ್ರೆ..ಹೀಗೆ ಹೊಸ ಹೊಸ ಅನ್ವೇಷಣಾ ಬರಹಗಳ ಕ್ರಮಗಳನ್ನ ಕಾಣಬಹುದಾಗಿದೆ. ಈ ನೆಲೆಯಲ್ಲಿ ಪರಂಪರೆಯ ಸಂಪ್ರದಾಯಿಕ ಚರಿತ್ರೆಯು ಗುರ್ತಿಸಲಾರದ ಚರಿತ್ರೆಯ ಬುನಾದಿಯಂತೆಯೇ ಆಗಿರುವ ಕಥನವೇ ರೈತರ…

ಮೋದಿ ಕ್ಷಮಾಯಾಚನೆ ಹಿಂದೆ -ಮುಂದೆ

ಮೂರು ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಕಟಿಸುವುದರ ಜೊತೆಗೇ ಜನರ ಕ್ಷಮೆಯನ್ನೂ ಕೋರಿದ್ದಾರೆ. ಪ್ರಧಾನಿಯೊಬ್ಬರು ಬಹಿರಂಗವಾಗಿ ಕ್ಷಮಾಯಾಚಿಸಿದ ಬಹು ಅಪರೂಪದ ಪ್ರಸಂಗವಿದು. ದುಡುಕಿನ ನಿರ್ಧಾರವಾಗಿ ತುರ್ತು ಪರಿಸ್ಥಿತಿ ಹೇರಿದ ಇಂದಿರಾಗಾಂಧಿ ತಾವು ಎಸಗಿದ ಪ್ರಮಾದಕ್ಕೆ ಪ್ರತಿಯಾಗಿ ಕ್ಷಮೆ ಕೋರದೆ ಜನಾಕ್ರೋಶಕ್ಕೆ ಈಡಾದ ರೀತಿ ಮೋದಿ ಜಾಗೃತಿಗೆ ಕಾರಣವಾಗಿರಬಹುದೆ…? ಮೋದಿ ಕ್ಷಮಾಯಾಚನೆ ಹಿಂದೆ -ಮುಂದೆ ಮಾಡಿದ್ದುಣ್ಣೊ ಮಹರಾಯ ಎನ್ನುವುದು ಕನ್ನಡದ ಸೊಗಸಾದ ಗಾದೆಗಳಲ್ಲಿ ಒಂದು. ಉಪ್ಪು ತಿಂದವರು ನೀರು ಕುಡಿಯಬೇಕು ಎನ್ನುವುದು ಮತ್ತೊಂದು. ಇಂಥ ಅರ್ಥಗರ್ಭಿತ…

ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ಮನವಿ

ಬೆಂಗಳೀರು,ನ,25:ರಾಜ್ಯದಲ್ಲಿ ಕಾಮಗಾರಿಯಲ್ಲಿ ಅಂದಾಜು ವೆಚ್ಚದಲ್ಲಿ ಶೇ 40ರಷ್ಟು ಕಮಿಷನ್ ಕೊಡಬೇಕು,ಕಾನೂನು ಸಂಪೂರ್ಣ ಕುಸಿದಿದೆ ಹೀಗಾಗಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಕಾಂಗ್ರೆಸ್  ರಾಜ್ಯಪಾಲರಲ್ಲಿ ಒತ್ತಾಯಿಸಿದೆ. ಇಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ,ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿಯೋಗ  ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಇತ್ತೀಚಿಗೆ ಮಾಧ್ಯಮಗಳಲ್ಲಿ  ಬಂದ  ವರದಿಯಲ್ಲಿ ಸರ್ಕಾರಿ ಕಾಮಗಾರಿಗಳ ಅಂದಾಜು ವೆಚ್ಚದಲ್ಲಿ ಸುಮಾರು 40% ಅನ್ನು ಸರ್ಕಾರದ ಸಚಿವರು ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಕಮಿಷನ್ ರೂಪದಲ್ಲಿ ನೀಡಬೇಕು ಎಂದು…

ಉನ್ನತ ಶಿಕ್ಷಣಕ ವಿದ್ಯಾರ್ಥಿಗಳಿಗೆ 2.5 ಲಕ್ಷ ಡಾಲರ್‌ ವಿದ್ಯಾರ್ಥಿ ವೇತನ ಘೊಷಿಸಿದ ನೆಸ್ಟ್‌ಲಿಸ್ಟ್‌ ಸಂಸ್ಥೆ

ಬೆಂಗಳೂರು,ನ,25: ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದ ಕುರಿತು ಉಚಿತವಾಗಿ ಮಾರ್ಗದರ್ಶನ ಹಾಗೂ ಉನ್ನತ ಮಟ್ಟದ ಕಾಲೇಜುಗಳಿಗೆ ದಾಖಲಾತಿಗೆ ಕೌನ್ಸಲಿಂಗ್ ನೀಡಲು ಅಮೆರಿಕಾ ಮೂಲದ ನೆಸ್ಟ್‌ಲಿಂಗ್ ಸಂಸ್ಥೆ ತನ್ನ ಮೊದಲ ಕೌನ್ಸಿಲಿಂಗ್ ಕೇಂದ್ರವನ್ನು ಬೆಂಗಳೂರಿನಲ್ಲಿ ಪ್ರಾರಂಭಿಸಿದೆ.ಇದಲ್ಲದೆ ಈ ಕೇಂದ್ರಲ್ಲಿ ಕೌನ್ಸಲಿಂಗ್ ಪಡೆದು ವಿದೇಶಕ್ಕೆಉನ್ನತ ಶಿಕ್ಷಣಕ್ಕೆ ಕೌನ್ಸಲಿಂಗ್ ಪಡೆಯುವ ವಿದ್ಯಾರ್ಥಿಗಳಿಗೆ 2.5 ಲಕ್ಷ ಡಾಲರ್‌ ವಿದ್ಯಾರ್ಥಿ ವೇತನ ಘೊಷಿಸಿದ ನೆಸ್ಟ್‌ಲಿಸ್ಟ್‌ ಸಂಸ್ಥೆ* ಓದಲು ತೆರಳುವ ವಿದ್ಯಾರ್ಥಿಗಳಿಗೆ 2.5 ಲಕ್ಷ ಡಾಲರ್‌ ಸ್ಕಾಲರ್‌ಶಿಪ್‌ ನೀಡುವುದಾಗಿಯೂ ಘೋಷಿಸಿದೆ. ಉನ್ನತ ಶಿಕ್ಷಣ ಸಚಿವ…

ಸಚಿವ ಸಂಪುಟದ ನಿರ್ಣಯದಂತೆ ಟೆಂಡರ್ ಪರಿಶೀಲನೆಗೆ ಎರಡು ಸಮಿತಿಗಳ ರಚನೆ : ಸಿಎಂ

ಬೆಂಗಳೂರು, ನ, 25: ಸಚಿವ ಸಂಪುಟದ ನಿರ್ಣಯದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಟೆಂಡರ್ ಅಂದಾಜು ಹಾಗೂ ಟೆಂಡರ್ ನಿಬಂಧನೆಗಳ ಪರಿಶೀಲನೆಗಾಗಿ ಎರಡು ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇಲಾಖೆಗಳ ಮುಖ್ಯಸ್ಥರ ಗಮನಕ್ಕೆ ತಂದು, ವಿಚಾರಣೆ ನಡೆಸಿ,ಯಾವುದೇ ತಪ್ಪು ಕಂಡುಬಂದಲ್ಲಿ , ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ. ನನ್ನ ಸರ್ಕಾರ ಬಂದ ಮೇಲೆ ಯಾವುದೇ ಟೆಂಡರ್ ಅಂತಿಮವಾಗಿದ್ದರೆ ಅದನ್ನು ವಿಶೇಷವಾಗಿ ಪರಿಶೀಲನೆ…

1 62 63 64 65 66 126
Girl in a jacket