ಚಾಮರಾಜನಗರದಲ್ಲಿ ಸಾವನ್ನಪ್ಪಿದವರು 24 ಅಲ್ಲ 36
ಬೆಂಗಳೂರು,ಮೇ,13: ಚಾಮರಾಜನಗರ ಆಸ್ಪತರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರು24 ಮಂದಿಯಲ್ಲ 36 ಮಂದಿ ಎಂದು ಸಮಿತಿ ಹೈಕೋರ್ಟ್ ಗೆ ವರದಿ ಸಲ್ಲಿಸಿದೆ. ನ್ಯಾ.ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಸಮಿತಿ ಮೇ 2ರ ರಾತ್ರಿ 10.30ರಿಂದ ತಡರಾತ್ರಿ 2.30ರವರೆಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಮಸ್ಯೆ ಉಂಟಾಗಿತ್ತು. ಈ 4 ಗಂಟೆಗಳ ಅವಧಿಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗಾಗಿ ಆಕ್ಸಿಜನ್ ಇರಲಿಲ್ಲ ಎಂದು ವರದಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಆಡಿಟ್ ವರದಿ ಪ್ರಕಾರ ಆಕ್ಸಿಜನ್ ಕೊರತೆಯಿಂದ ಮೂವರು ಸಾವನ್ನಪ್ಪಿದ್ದಾರೆ. ಮೆದುಳಿನ ಆಘಾತದಿಂದ 7 ರೋಗಿಗಳು ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ…