2020ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ವಿದೇಶಿಹೂಡಿಕೆಗೆ ದುಬೈ ಭೇಟಿ ನೆರವು: ನಿರಾಣಿ
ಬೆಂಗಳೂರು,ಅ.21-‘ದುಬೈ ಎಕ್ಸ್ ಪೋ 2020’ಭೇಟಿಯು ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ರಾಜ್ಯದಲ್ಲಿ ಅನೇಕ ಪ್ರತಿಷ್ಠಿತ ಉದ್ಯಮಿಗಳು ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ಇದರಿಂದ ಉದ್ಯೋಗ ಅವಕಾಶಗಳು ಮತ್ತಷ್ಟು ಹೆಚ್ಚಳವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು. ಗುರುವಾರ ಸುದ್ದಿಗೋಷ್ಠಿ ನಡೆಸಿದ ಅವರು, ಮೂರು ದಿನಗಳಲ್ಲಿ ಕಾಲ ನಡೆದ ದುಬೈ ಎಕ್ಸ್ ಪೋ ದಲ್ಲಿ ಐಟಿಬಿಟಿ ಸಚಿವ ಡಾ. ಅಶ್ವಥ್ ನಾರಾಯಣ, ದುಬೈ-ಭಾರತೀಯ ಕೌನ್ಸಿಲರ್ ಡಾ. ಅಮನ್ ಪುರಿ, ಹೆಚ್ಚುವರಿ ಮುಖ್ಯ…















