ಮಿಲಿಟರಿ ಹೆಸರಿನ ನಕಲಿ ಮದ್ಯದ ಕಡಿವಾಣಕ್ಕೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಸೂಚನೆ
ಬೆಂಗಳೂರು,ಜೂ,11-ಅಪಾಯಕಾರಿ ಸಿಎಚ್ ಪೌಡರ್ ಮಿಕ್ಸಿಂಗ್ ಬಗ್ಗೆ ಎಚ್ಚರವಹಿಸಿ, ಯಾವುದೇ ಕಾರಣಕ್ಕೂ ಸೇಂದಿ ಮಾರಾಟವಾಗದಂತೆ ಕಟ್ಟುನಿಟ್ಟಾಗಿ ಕ್ರಮಕೈಗೊಳ್ಳುವಂತೆ ಅಬಕಾರಿ ಮತ್ತು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಸೂಚನೆ ನೀಡಿದ್ದಾರೆ. ಇಂದು ವಿಧಾನಸೌಧದ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ತಿಮ್ಮಾಪೂರ ಅವರು, ರಾಯಚೂರು ಸೇರಿದಂತೆ ಆಂಧ್ರ, ತೆಲಂಗಾಣ ಗಡಿಯಲ್ಲಿ ನಿಷೇಧಿತ ಸಿಹೆಚ್ ಪೌಡರ್ ಮಿಕ್ಸಿಂಗ್ನಿಂದ ಸೇಂದಿ ತಯಾರಿಸುವವರ ಮೇಲೆ ಹದ್ದಿನ ಕಣ್ಣಿಡಬೇಕು. ಸಿಹೆಚ್ ಪೌಡರ್ ಮಿಕ್ಸಿಂಗ್ಗೆ ಅವಕಾಶ ಸಿಗದಂತೆ ಎಚ್ಚರವಹಿಸಬೇಕು.…