Girl in a jacket

Author kendhooli_editor

ಸಭಾಧ್ಯಕ್ಷರು ಒಂದು ಪಕ್ಷದ ಪರ ವರ್ತಿಸಿದ್ದು ಸರಿ ಅಲ್ಲ;ಸಿದ್ದು

ಬೆಂಗಳೂರು,ಸೆ,24 : ಸಭಾಧ್ಯಕ್ಷರ ಹುದ್ದೆ ರಾಜಕಿಯ ಮತ್ತು ಪಕ್ಷಗಳನ್ನು ಮೀರಿದ ಹುದ್ದೆ. ಅವರ ನಿರ್ಣಯಗಳು ಯಾವಾಗಲೂ ಪಕ್ಷಾತೀತವಾಗಿರಬೇಕು. ಸಭಾಧ್ಯಕ್ಷರು ಒಂದು ರಾಜಕೀಯ ಪಕ್ಷದ ಸದಸ್ಯನಂತೆ ವರ್ತಿಸುವುದಾದರೆ ಆ ಹುದ್ದೆಗೆ ಮಹತ್ವವೇನಿದೆ ಎಂದು ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಜಾಪ್ರಭುತ್ವದಲ್ಲಿ, ಸಂಸದೀಯ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟಿದ್ದಾರೆ ಎಂಬ ನನ್ನ ನಂಬಿಕೆ ಹುಸಿಯಾಗಿದೆ. ಮುಖ್ಯಮಂತ್ರಿಯಾದಿಯಾಗಿ ಇಡೀ ಸರ್ಕಾರ ಆರ್.ಎಸ್.ಎಸ್ ನವರ ನಿರ್ದೇಶನದಲ್ಲಿ ಮುಖವಾಡ ಧರಿಸಿ, ಅವರ ಕೈಗೊಂಬೆಯಾಗಿ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.…

ದಕ್ಷಿಣ ಕರ್ನಾಟಕದ ಅಪರೂಪದ ಪ್ರಾಚೀನ ಬೌದ್ಧ ಕೇಂದ್ರ ರಾಜಘಟ್ಟ

ದಕ್ಷಿಣ ಕರ್ನಾಟಕದ ಅಪರೂಪದ ಪ್ರಾಚೀನ ಬೌದ್ಧ ಕೇಂದ್ರ ರಾಜಘಟ್ಟ ೨೦೦೭ನೆಯ ಇಸವಿ. ಕ್ಷೇತ್ರಕಾರ್ಯಕ್ಕೆಂದು ಹೊರಟ ಸಂದರ್ಭ. ಕರ್ನಾಟಕದ ಪ್ರಮುಖ ಪ್ರಾಚೀನ ಸಾಂಸ್ಕೃತಿಕ ನೆಲೆಗಳನ್ನು ನೋಡುವ ತವಕದಿಂದ ಮೈಸೂರು, ಸೋಮನಾಥಪುರ, ತಲಕಾಡು, ಶ್ರೀರಂಗಪಟ್ಟಣ ಮೊದಲಾದ ಚಾರಿತ್ರಿಕ ಸ್ಥಳಗಳನ್ನು ಅಧ್ಯಯನದ ದೃಷ್ಟಿಯಿಂದ ನೋಡಿ ದಾಖಲಿಸಿಕೊಳ್ಳಲು ಪಯಣಿಸಿದ್ದೆನು. ಇವೆಲ್ಲವನ್ನೂ ನೋಡಿ ಬೆಂಗಳೂರಿಗೆ ಬಂದಾಗ ನನಗೆ ನೋಡಬೇಕೆಂಬ ಕುತೂಹಲ ಹುಟ್ಟಿಸಿದ ಪ್ರಾಚೀನ ನೆಲೆ ರಾಜಘಟ್ಟ. ಈ ಸ್ಥಳವು ಅಷ್ಟೊತ್ತಿಗಾಗಲೇ ಉತ್ಖನನದ ಮೂಲಕ ಜಗತ್ತಿಗೆ ಚಿರಪರಿಚಿತವಾಗಿತ್ತು. ಅದು ಸಾಕಾವಾದದ್ದು ೨೦೦೧ ಮತ್ತು ೨೦೦೪…

ದೆಹಲಿ ಕೋರ್ಟ ಆವರಣದಲ್ಲಿ ಗ್ಯಾಂಗ್ ವಾರ್; ಫೈರಿಂಗ್ ನಲ್ಲಿ ನಾಲ್ವರು ಸಾವು

ನವದೆಹಲಿ, ಸೆ,24: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುವ ವೇಳೆ ದುಷ್ಕರ್ಮಿಗಳು ನ್ಯಾಯಾಲಯದ ಒಳಗಡೆಯೇ ಗುಂಡಿನ ದಾಳಿ ನಡೆದಿದ್ದು ಪೈರಿಂಗ್ ನಲ್ಲಿ ನಾಲ್ವರ ಸಾವನ್ನಪ್ಪಿದ್ದಸರೆ. ದೆಹಲಿ ಕೋರ್ಟ ಆವರಣದಲ್ಲಿ ನಡೆದ ಈ ಘಟನೆಯಿಂದ ನ್ಯಾಯಾಲಯದಲ್ಲಿ ಆತಂಕದ ವಾತಾವರಣ ಸೃಷ್ಟಿಯಸಗಿತ್ತು. ದೆಹಲಿಯ ರೋಹಿಣಿ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ. ಗ್ಯಾಂಗ್ ಸ್ಟರ್ ಜಿತೇಂದ್ರ ಯೋಗಿ ಎಂಬಾತನನ್ನು ಇಂದು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ರೂಂ ನಂಬರ್ 207ರಲ್ಲಿ ನ್ಯಾಯಾಧೀಶರ ಮುಂದೆ ವಿಚಾರಣೆ ನಡೆಯುತ್ತಿತ್ತು. ಈ ವೇಳೆ ವಕೀಲರ ವೇಷದಲ್ಲಿ…

ಐಎಸ್ ಐ ಗೂಢಾಚಾರಿಗಳ ಕಣ್ಣು ಈಗ ಕರ್ನಾಟಕ ದತ್ತ..!

ಐಎಸ್ ಐ ಗೂಢಾಚಾರಿಗಳ ಕಣ್ಣು ಈಗ ಕರ್ನಾಟಕ ದತ್ತ..! Writing;ಪರಶಿವನ ಧನಗೂರು ದಕ್ಷಿಣ ಕಮಾಂಡರ್ ಸೇನಾ ಗುಪ್ತದಳದ ಅಧಿಕಾರಿಗಳು ಮತ್ತು ಬೆಂಗಳೂರಿನ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಏಜೆಂಟ್ ನಂತೆ ಕೆಲಸಮಾಡುತ್ತಿದ್ದ ನಕಲಿ ಸೇನಾಧಿಕಾರಿ ಜಿತೇಂದರ್ ಸಿಂಗ್ ಎಂಬಾತನನ್ನು ಬಂಧಿಸಿದ್ದಾರೆ. ಬೆಂಗಳೂರಿನ ಕಾಟನ್ ಪೇಟೆಯ ಜಾಲಿಮೊಹಲ್ಲಾದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ರಾಜಸ್ಥಾನ ಮೂಲದ ಈ ಜಿತೇಂದರ್ ಸಿಂಗ್ ಪಾಕಿಸ್ತಾನದ ಅಂತಾರಾಷ್ಟ್ರೀಯ ಗಡಿ ಹಂಚಿಕೊಂಡಿರುವ ಬಾಡ್ಮೇರ್ ಜಿಲ್ಲೆಯವನು. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ…

ಕಲ್ಯಾಣ ಕರ್ನಾಟಕ ಭಾಗದ 20 ಸಾವಿರ ನೇರನೇಮಕಾತಿಗೆ ಬದ್ದ; ಸಿಎಂ

ಬೆಂಗಳೂರು,ಸೆ,24: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯನ್ನು 10 ದಿನದೊಳಗೆ ರಚಿಸಿ , 20 ಸಾವಿರ ನೇರ ನೇಮಕಾತಿ ಹುದ್ದೆ ಭರ್ತಿಗೆ ಒಪ್ಪಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ ವಿಧಾನಸಭೆಯಲ್ಲಿ ನಿಯಮ 69ರ ಅಡಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಕುರಿತ ಚರ್ಚೆಗೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಬೊಮ್ಮಾಯಿ, ಮಾರ್ಚ್ ಒಳಗೆ 2000 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಅಲ್ಲದೆ ಕಾಯಂ ಕಾರ್ಯದರ್ಶಿ ಯನ್ನು ನಿಯೋಜಿಸುವ ಮೂಲಕ ಎಲ್ಲಾ ಕಾರ್ಯಗಳನ್ನು ಕಾರ್ಯಗತ ಮಾಡಲಾಗುವುದು ಎಂದು ತಿಳಿಸಿದ್ದಾರೆ…

ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ

ಭಗತ್ ಸಿಂಗ್ ಎಂಬ ಬೆಳಕಿಗೆ ಬೆನ್ನು ಮಾಡಿರುವ ಸಮಾಜ ಬ್ರಿಟಿಷರ  ನೇಣುಗಂಬಕ್ಕೆ ನಗು ನಗುತ್ತಲೇ ಕೊರಳೊಡ್ಡಿದ್ದ ಆ ಸ್ವಾತಂತ್ರ್ಯ ಕ್ರಾಂತಿಯ ಕಿಡಿ ಉಸಿರಾಡಿದ್ದು ಇಪ್ಪತ್ಮೂರೇ ವರ್ಷ. ಉಕ್ಕು ಹರೆಯದ ಈ ಬಿಸಿ ಗುಂಡಿಗೆ ದಾಸ್ಯದ ವಿರುದ್ಧ ಮಾತ್ರವೇ ಅಲ್ಲ, ಸಮ ಸಮಾಜ, ಸಹಬಾಳುವೆಗಾಗಿ ಮಿಡಿದ ಪರಿ ಅಭೂತಪೂರ್ವ. ಭಗತ್ ಸಿಂಗ್ ದೇಹ ಬಹು ಹಿಂದೆಯೇ ಮಣ್ಣು ಸೇರಿರಬಹುದು. ಆದರೆ ಕೋಮುವಾದ, ಅಮಾನವೀಯ ಅಸ್ಪೃಶ್ಯತೆ, ಧರ್ಮ-ಜಾತಿಗಳ, ಮೇಲು- ಕೀಳುಗಳ ನೆವದಲಿ ನಡೆವ ಕ್ರೌರ್ಯ-ಶೋಷಣೆ- ವಿರುದ್ಧ ಆತ ಎತ್ತಿದ…

ದಲಿತರಿಗೆ ಅಧಿಕಾರ: ಪೈಪೋಟಿ ವ್ಯವಹಾರ

ಪಂಜಾಬಿನಲ್ಲಿ ದಲಿತ ಮುಖಂಡ ಚರಣಜಿತ್ ಸಿಂಗ್ ಚೆನ್ನಿಯವರನ್ನು ಮುಖ್ಯಮಂತ್ರಿ ಮಾಡಿರುವ ಕಾಂಗ್ರೆಸ್ ಇಷ್ಟರಲ್ಲೇ ನಡೆಯಲಿರುವ ಚುನಾವಣೆ ನಂತರ ಬೇರೆ ರಾಗ ಹಾಡುವ ಲಕ್ಷಣ ಸ್ಪುಟವಾಗುತ್ತಿದೆ. ಕಾಂಗ್ರೆಸ್ ಮಾತ್ರವೇ ಅಲ್ಲ, ಬಿಜೆಪಿ, ಆಪ್, ಶಿರೋಮಣಿ ಅಕಾಲಿ ದಳ ಪಕ್ಷಗಳೂ ದಲಿತ ಕಾರ್ಡ್‌ನೊಂದಿಗೆ ಚುನಾವಣಾ ಆಟ ಆಡುವುದಕ್ಕೆ ಸಿದ್ಧತೆ ನಡೆಸಿವೆ. ದಲಿತರಿಗೆ ಅಧಿಕಾರ: ಪೈಪೋಟಿ ವ್ಯವಹಾರ ಇಷ್ಟು ವರ್ಷದ ಜನತಂತ್ರವನ್ನು ಅನುಭವಿಸಿರುವ ದೇಶ ಇದೀಗ ಮತ್ತೊಂದು ಹೊಸ ಆಯಾಮಕ್ಕೆ ಹೊರಳುವ ಸನ್ನಾಹದಲ್ಲಿರುವುದು ಪಂಜಾಬ್‌ನಲ್ಲಿ ಆಗಿರುವ ರಾಜಕೀಯ ಬೆಳವಣಿಗೆಗಳಿಂದ ಸ್ಪಷ್ಟವಾಗುತ್ತಿದೆ. ಕಾಂಗ್ರೆಸ್…

ಪಕ್ಕಾ ಲವ್ ಮನೋರಂಜನಾ ಚಿತ್ರ ‘ ಸುಕನ್ಯ ದ್ವೀಪ’

ಸುಕನ್ಯ ದ್ವೀಪ ಎನ್ನುವ ಟೈಟಲ್ ಕೇಳಿದೊಡನೆ ಇದೊಂದು ಸಸ್ಪೆನ್ಸ್ ಚಿತ್ರವಿರಬಹುದು ಎಂದುಕೊಳ್ಳುತ್ತಾರೆ. ಆದರೆ ಅಂಥಾ ಯಾವುದೇ ಸಸ್ಪೆನ್ಸ್ , ಥ್ರಿಲ್ಲರ್ ಇರದೆ ಪಕ್ಕಾ ಫ್ಯಾಮಿಲಿ ಲವ್ ಎಂಟರ್‌ಟೈನರ್ ಕಥಾಹಂದರಕ್ಕೆ ಹಾಸ್ಯದ ಟಚ್ ಕೊಟ್ಟು ನಿರೂಪಿಸುವ ಪ್ರಯತ್ನವನ್ನು ನಿರ್ದೇಶಕ ಎಂ.ಡಿ. ಅಫ್ಜಲ್ ಮಾಡಿದ್ದಾರೆ. ಸೂಪರ್ ಸ್ಟಾರ್ ಪತ್ರಿಕೆಯ ಸಂಪಾದಕರೂ ಆದ ಇವರು ಈಗಾಗಲೇ ಮೊಬೈಲ್ ರಾಜ ಎನ್ನುವ ಚಿತ್ರ ನಿರ್ದೇಶಿಸಿದ್ದು, ಅದಿನ್ನೂ ಬಿಡುಗಡೆಯಾಗಿಲ್ಲ, ಈಗಾಗಲೇ ಒಂದು ಹಂತದ ಶೂಟಿಂಗ್ ಮುಗಿಸಿರುವ ಚಿತ್ರತಂಡ ಎರಡನೇ ಹಂತಕ್ಕೆ ಅಣಿಯಾಗಿದ್ದು, ಅದಕ್ಕೂ ಮುನ್ನ…

ಎಲ್ಲೋ ಇರಬೇಕಿತ್ತು!

ಸಿದ್ದಸೂಕ್ತಿ ಎಲ್ಲೋ ಇರಬೇಕಿತ್ತು! ಆಗಾಗ ವರು ನನಗೆ ಹೇಳುವರು, “ನೀವು ಎಲ್ಲೋ ಇರಬೇಕಿತ್ತು. ವಿದ್ಯೆ, ಕಾನೂನು ಆಡಳಿತ ಲೋಕಾನುಭವ ಅರಿವು, ಮಾತು ಬರಹ ಜಾತಿ ಏನೆಲ್ಲ ಉಂಟು! ಕುಲಪತಿ ಅಧಿಕಾರಿ ಮಂತ್ರಿ ಜಗದ್ಗುರುವಾಗಬೇಕಿತ್ತು. ಏನಿಲ್ಲದಂತೆ ಇರುವಿಕೆ! ಕಸ, ಅಡುಗೆ, ಜನ-ಹಸು ಸೇವೆ, ಗಾರೆ ಸಹಾಯ, ವಾಹನ ಚಾಲನೆ, ಬರಹ ಓದು ಪಾಠ ಪ್ರವಚನ ಸಂಘಟನೆ ಎಲ್ಲಕ್ಕೂ ನೀವೇ!” ಕಾಲಿಗೊಬ್ಬ ಕೈಗೊಬ್ಬ, ಬೆಳ್ಳಿ ಬಂಗಾರದ ಎತ್ತರದ ಪೀಠ ಸಿಂಹಾಸನ, ಝಗ ಝಗಿಸುವ ವೇಷ ಭೂಷಣ, ಮುಗಿಬಿದ್ದ ಜನ…

ಕೃಷಿ ಚಟುವಟಿಕೆಗಳ ಕೌಶಲ್ಯ ಬಲವರ್ಧನೆಗೆ ಒಡಂಬಡಿಕೆ

ಬೆಂಗಳೂರು,ಸೆ.23:ಕೃಷಿ ಚಟುವಟಿಕೆಗಳ ಕೌಶಲ್ಯ ಬಲವರ್ಧನೆಗೆ ಸ್ಮಾರ್ಟ್ ಕೃಷಿ ಕೇಂದ್ರಗಳನ್ನು ಪ್ರಾರಂಭಿಸಲು ಕರ್ನಾಟಕ ಸರ್ಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಈ ನಿಟ್ಟಿನಲ್ಲಿ ಹೆಕ್ಸಾಗಾನ್ ಮ್ಯಾನ್ಯುಫ್ಯಾಕ್ಚರಿಂಗ್ ಇಂಟಲಿಜೆನ್ಸ್ ಇಂಡಿಯಾ ಕಂಪೆನಿ ಜೊತೆ ಕೃಷಿ ಇಲಾಖೆ ಒಡಂಬಡಿಕೆ ಮಾಡಿಕೊಂಡಿದೆ. ವಿಕಾಸಸೌಧದ ಸಭಾಂಗಣದಲ್ಲಿ ಹೆಕ್ಸಗಾನ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಶ್ರೀಧರ್ ಧರ್ಮರಾಜನ್ ಅವರೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಈ ಸಂದರ್ಭದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ, ಕೃಷಿ ಅಭಿವೃದ್ಧಿಯಲ್ಲಿ ಕರ್ನಾಟಕ ಮಹತ್ವದ ಹೆಜ್ಜೆಇಟ್ಟಿದ್ದು, ದೇಶದಲ್ಲಿಯೇ ಮೊದಲ ಸ್ಥಾನವನ್ನು ಪಡೆದಿದೆ. ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿರುವ…

ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು: ಕೇಂದ್ರದ ಅನುಮತಿ ಪಡೆಯಲು ಸಿ ಎಂ ಸೂಚನೆ

ಬೆಂಗಳೂರು, ಸೆ, 23: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ನೀಡುವ ಸಂಬಂಧ 1978ರ ಅರಣ್ಯ ಸಂರಕ್ಷಣೆ ಕಾಯ್ದೆ ಅನ್ವಯ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಲು ಸಂಪೂರ್ಣ ಮಾಹಿತಿ ಸಂಗ್ರಹಿಸಿ ಕಳುಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಅವರು ಇಂದು ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದಂತೆ ಶರಾವತಿ ಮುಳುಗಡೆಗೆ ಒಳಗಾದ ರೈತರ ಸಮಸ್ಯೆಗಳು, ಶರಾವತಿ ಆಭಯಾರಣ್ಯ, ಅರಣ್ಯ ಕಾಯ್ದೆ ಹಾಗೂ ಸಿ& ಡಿ ಭೂಮಿಯ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಸಂಬಂಧ ಉಚ್ಛನ್ಯಾಯಾಲಯ ತಡೆಯಾಜ್ಞೆ…

ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಆನ್ ಲೈನ್ ಮೂಲಕ ನಾಗರಿಕ ಸೇವೆಗಳು ಲಭ್ಯ;ಸಿಎಂ

ಬೆಂಗಳೂರು,ಸೆ, 23:ನಾಗರಿಕ ಸೇವೆಗಳನ್ನು ಗ್ರಾಮ ಪಂಚಾಯಿತಿ ಹಂತದಲ್ಲಿಯೇ ಆನ್ ಲೈನ್ ಮೂಲಕ ಒದಗಿಸುವ ವಿನೂತನ “ಗ್ರಾಮ ಸೇವಾ” ಯೋಜನೆಯನ್ನು ಪ್ರಾಯೋಗಿಕವಾಗಿ ರಾಜ್ಯದ 5 ಜಿಲ್ಲೆಗಳಲ್ಲಿ ಮುಂಬರುವ ಗಣರಾಜ್ಯೋತ್ಸವ ಜನವರಿ 26 ರಿಂದ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಘೋಷಿಸಿದರು. ಅವರು ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗಿದ್ದ ಅಮೃತ ಗ್ರಾಮ ಪಂಚಾಯತ್ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಅಭಿವೃದ್ಧಿ ಜನರ ಸುತ್ತ ಆಗಬೇಕು; ಜನರು ಅಭಿವೃದ್ಧಿ ಸುತ್ತ ಸುತ್ತುವಂತಾಗಬಾರದು. ಈ…

ಅರ್ಚಕರಿಗೆ , ದೇವಾಲಯ ನೌಕರರಿಗೆ ಆರೋಗ್ಯ ವಿಮೆ ಜಾರಿಗೊಳಿಸಲು ಶೀಘ್ರ ಕ್ರಮ: ಶಶಿಕಲಾ ಜೊಲ್ಲೆ

ಬೆಂಗಳೂರು,ಸೆ,23: ಮುಜರಾಯಿ ಇಲಾಖೆಯ ಆಡಳಿತ ಯಂತ್ರ ಚುರುಕುಗೊಳಿಸಲು ಮುಜರಾಯಿ ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆಯವರು ಮುಂದಾಗಿದ್ದಾರೆ. ಗುರುವಾರ ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಇಲಾಖೆಯ ಕಾರ್ಯ ಚಟುವಟಿಕೆಗಳಿಗೆ ವೇಗ ಹೆಚ್ಚಿಸಿ, ತ್ವರಿತಗತಿಯಲ್ಲಿ ಕೆಲಸ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ  ಪೂಜೆ ಸಲ್ಲಿಸುವ ಅರ್ಚಕರು  ಹಾಗೂ ದೇವಾಲಯ ನೌಕರರು ಆರೋಗ್ಯ ಸಮಸ್ಯೆಗೆ ಒಳಗಾದರೆ  ಅವರಿಗೆ ರಕ್ಷಣೆ ಒದಗಿಸಲು ಆರೋಗ್ಯ ವಿಮೆ ಜಾರಿಗೊಳಿಸುವ ಕುರಿತು…

ಉಬರ್ ಚಾಲಕನಿಂದ ಯುವತಿ ಮೇಲೆ ಅತ್ಯಾಚಾರ

ಬೆಂಗಳೂರು, ಸೆ,23:ಒಂಟಿ ಹೆಣ್ಣನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಬೇಕಾದ ಉಬರ್ ಚಾಲಕ ಮಹಿಳೆ ಮೇಲೆ ಅತ್ಯಾಚಾರ ಮಾಡಿ ವಿಕೃತ ಮೆರದ ಘಟನೆ ನಗರದ ಮುರುಗೇಶ್ ಪಾಳ್ಯದಲ್ಲಿ ನಡೆದಿದೆ. ಹೆಚ್‌ಎಸ್‌ಆರ್‌ ಲೇಔಟ್‌ನಿಂದ ಮುರುಗೇಶ್ ಪಾಳ್ಯಕ್ಕೆ ತೆರಳಲು ಯುವತಿ ಉಬರ್ ಕ್ಯಾಬ್ ಬುಕ್ ಮಾಡಿದ್ಲು. ಬುಕ್ ಮಾಡಿದ ಕೆಲವೇ ನಿಮಿಷಗಳಲ್ಲಿ ದೇವರಾಜ್ ಹಸೆರಿನ ಕ್ಯಾಬ್ ಡ್ರೈವರ್ ಪಿಕಪ್ ಪಾಯಿಂಟ್‌ಗೆ ಬಂದು ಯುವತಿಯನ್ನ ಕರೆದೊಯ್ದಿದ್ದಾನೆ. ಹೆಚ್‌ಎಸ್‌ಆರ್‌ ಲೇಔಟ್‌ನಿಂದ ಹೊರಟ ಕ್ಯಾಬ್ ಕೇವಲ 20 ನಿಮಿಷದಲ್ಲಿ ಮುರುಗೇಶ್ ಪಾಳ್ಯದಲ್ಲಿರುವ ಯುವತಿ ಮನೆ ಬಳಿಗೆ ಬಂದಿದೆ.…

ಮಲೆಮಹಾದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ಧ: ಸಿಎಂ ಬೊಮ್ಮಾಯಿ

ಬೆಂಗಳೂರು,ಸೆ,22: ದಕ್ಷಿಣ ಕರ್ನಾಟಕದ ಸುಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹಾದೇಶ್ವರ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬದ್ದವಾಗಿರುವುದಾಗಿ ಮಲೆ ಮಹಾದೇಶ್ಬರ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಮಲೆ ಮಹಾದೇಶ್ವರ ದಕ್ಷಿಣ ಕರ್ನಾಟಕದ ಪ್ರಸಿದ್ಧ ಕ್ಷೇತ್ರ, ಹಳೆ ಮೈಸೂರು ಭಾಗದ ಜನರು ಹೆಚ್ಚಾಗಿ ನಡೆದುಕೊಳ್ಳುವ ದೇವಸ್ಥಾನ. ಈ ಕ್ಷೇತ್ರದ ಅಭಿವೃದ್ಧಿಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಕೊಡುಗೆ…

ಚಾಣಕ್ಯ ವಿ.ವಿ.ಸ್ಥಾಪನೆಗೆ ನೀಡಿರುವ ಭೂಮಿ ವಾಪಾಸ್ ಪಡೆಯಲು ಸಿದ್ದು ಆಗ್ರಹ

ಬೆಂಗಳೂರು,ಸೆ,22 : ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದಂತೆ ಸೆಂಡರ್ ಫಾರ್ ಎಜ್ಯುಕೇಷನ್ ಅಂಡ್ ಸೋಷಿಯಲ್ ಸ್ಟಡೀಸ್ ಸಂಸ್ಥೆಗೆ (ಸೆಸ್) ಕಡಿಮೆ ದರದಲ್ಲಿ ನೂರಾರು ಎಕರೆ ಭೂಮಿ ನೀಡುವ ತೀರ್ಮಾನವನ್ನು ಕೈ ಬಿಡುವಂತೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸರ್ಕಾರವನ್ನು ಆಗ್ರಹಿಸಿದರು. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನೂರಾರು ಕೋಟಿ ರೂ. ಮೌಲ್ಯದ ಭೂಮಿಯನ್ನು ಕಡಿಮೆ ಬೆಲೆಗೆ ಪರಭಾರೆ ಮಾಡುವ ಸರ್ಕಾರದ ನಿರ್ಧಾರಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಇದರ ವಿರುದ್ಧ…

ಮೆಟ್ರೋ 3ನೇ ಹಂತಕ್ಕೆ ಶೀಘ್ರ ಚಾಲನೆ:ಸಿಎಂ ಸೂಚನೆ

ಬೆಂಗಳೂರು, ಸೆ. 22:ನಮ್ಮ ಮೆಟ್ರೋ ಯೋಜನೆಯ ಎರಡನೇ ಹಂತದ ಕಾಮಗಾರಿಗಳನ್ನು ಪೂರ್ಣಗೊಳಿಸಲು ನೀಡಲಾಗಿದ್ದ 2025ರ ಗಡುವನ್ನು ಮಾರ್ಪಡಿಸಿ, 2024 ಕ್ಕೆ ನಿಗದಿ ಪಡಿಸುವಂತೆ ಹಾಗೂ ಇದಕ್ಕೆ ತಕ್ಕ ಪೂರ್ವಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದು ಪೂರ್ಣಗೊಳ್ಳುತ್ತಿದ್ದಂತೆಯೇ ಮೂರನೇ ಹಂತದ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಅವರು ಇಂದು ಮೆಟ್ರೋ 2ನೇ ಹಂತದ ಯೋಜನೆಯಡಿ ಕಂಟೋನ್ಮೆಂಟ್ ನಿಂದ ಶಿವಾಜಿನಗರ ನಿಲ್ದಾಣದ ವರೆಗೆ ಸುರಂಗ ಮಾರ್ಗ ಕೊರೆದ ಟಿಬಿಎಂ ಊರ್ಜಾ ಯಂತ್ರವು ಹೊರಗೆ ಬರುವುದನ್ನು ವೀಕ್ಷಿಸಿದ…

ಸ್ಥಗಿತಗೊಂಡ ಯೋಜನೆಗಳು ಶೀಘ್ರ ಪುನರಾರಂಭ-ಬೊಮ್ಮಾಯಿ

ಬೆಂಗಳೂರು,ಸೆ,೨೨: ಕೋವಿಡ್ ಸಾಂಕ್ರಾಮಿಕ ರೋಗದಿಂದ ಉಂಟಾದ ಆರ್ಥಿಕ ಬಿಕ್ಕಟ್ಟಿನಿಂದಾಗಿ ಸ್ಥಗಿತಗೊಂಡಿರುವ ಅನುಮೋದನೆ ಪಡೆದ ಯೋಜನೆಗಳನ್ನು ಆರಂಭಿಸಲು ಶೀಘ್ರದಲ್ಲೇ ಆದೇಶ ಹೊರಡಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಿಯಮ ೬೯ ರಡಿ ಜೆಡಿಎಸ್‌ನ ಎಚ್.ಡಿ.ರೇವಣ್ಣ ಮತ್ತು ಇತರ ಸದಸ್ಯರ ಪ್ರಸ್ತಾವಕ್ಕೆ ಉತ್ತರ ನೀಡಿದ ಅವರು, ಯಾವುದೇ ಕಾಮಗಾರಿಗಳನ್ನು ತಡೆ ಹಿಡಿದಿಲ್ಲ. ಪ್ರವಾಹ, ಕೋವಿಡ್ ಸಂಕಷ್ಟದಿಂದಾಗಿ ಕಾಮಗಾರಿಗಳು ಕುಂಠಿತ ಆಗಿದೆ. ಇಂತಹ ಸೂಕ್ಷ್ಮ ಸಂದರ್ಭದಲ್ಲಿ ಹಣಕಾಸು ನಿರ್ವಹಣೆ ಅತಿ ಮುಖ್ಯ ಎಂದು ಹೇಳಿದರು. ಈಗಾಗಲೇ ಆಡಳಿತಾತ್ಮಕ ಒಪ್ಪಿಗೆ ಪಡೆದು…

  ಸಿದ್ಧಸೂಕ್ತಿ ;ಅಮೃತ.

                                                                                 ಸಿದ್ಧಸೂಕ್ತಿ-ಅಮೃತ. ಸಾಯದಿರುವುದು ಸಾವಿಲ್ಲದ್ದು ಸಾವನ್ನು ದೂರ ದೂಡುವುದು ಅಮೃತ. ಸಮುದ್ರ ಮಥನದಿಂದ ದೊರೆತುದು ಅಮೃತ, ಅದನ್ನು ಕುಡಿದ ದೇವತೆಗಳು ಅಮರರು. ಇದು ಪೌರಾಣಿಕ ಕಾಲ್ಪನಿಕ. ಕಠಿಣ ಪರಿಶ್ರಮದ ಆರಂಭದಲ್ಲಿ ಕಹಿ ಫಲ, ಮುಂದುವರೆದಲ್ಲಿ ಸಿಹಿ ಫಲ, ಅದರಿಂದ ತೃಪ್ತಿ! ಇದು ಸತ್ಯ ತತ್ತ್ವ! ಕುಡಿಯಲು ಬಾಯುಂಟು, ಕಡೆಯಲು ಕೈ ಕಾಲುಂಟು! ಹುಟ್ಟಿದ್ದು ತೋರಿದ್ದು ನಾಮ ರೂಪದ್ದು ಅಳಿಯಲೇಬೇಕು! ಅದ್ಹೇಗೆ ಅಮರರು? ದೀರ್ಘ ಬಾಳಿಕೆಯೇ ಅಮರತ್ವ! ಚಿರಕಾಲ ಹೆಸರುಳಿಸುವ ಸಾಧನೆಗೈದವರು ರಾಜ ಮಹಾರಾಜರು ಸಂತ ಮಹಾತ್ಮರು…

ಯಡಿಯೂರಪ್ಪನಂತ ನೂರು ಜನ ಬಂದರು ಬಿಜೆಪಿ ಗೆಲ್ಲುವಿದಿಲ್ಲ; ಸಿದ್ದರಾಮಯ್ಯ

ಬೆಂಗಳೂರು ,ಸೆ,21: ಬೆಲೆ ಏರಿಕೆಯಿಂದ ಜನರ ಆಕ್ರೋಶ ಒಳಗೊಳಗೆ ಕುದಿಯುತ್ತಿದೆ. ಈ ಸರ್ಕಾರ ತೊಲಗಿದರೆ ಸಾಕು, ಮತ್ತೆ ಚುನಾವಣೆ ಬಂದರೆ ಸಾಕು ಎಂದು ಕಾಯುತ್ತಿದ್ದಾರೆ. ಒಬ್ಬ ಯಡಿಯೂರಪ್ಪ ಅಲ್ಲ, ಯಡಿಯೂರಪ್ಪ ಅವರಂತಹ ನೂರು ಜನ ಬಂದರೂ ಬಿಜೆಪಿಯನ್ನು ಉಳಿಸಲಿಕ್ಕೆ ಸಾಧ್ಯವಿಲ್ಲ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸರ್ಕಾರ ಕೇಸ್ ಹಾಕುತ್ತದೆ ಎಂಬ ಕಾರಣಕ್ಕೆ ಇದನ್ನೆಲ್ಲ ಸಹಿಸಿಕೊಂಡು ಜನ ಸುಮ್ಮನಿದ್ದಾರೆ. ನರೇಂದ್ರ ಮೋದಿ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಯಾರಿಂದಲೂ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು…

1 73 74 75 76 77 126
Girl in a jacket