ಭಾರತದ ಕ್ಷಿಪಣಿಗಳಿಂದ ಹಾನಿಯಾಗಿರುವುದನ್ನು ಒಪ್ಪಿಕೊಂಡ ಪಾಕ್ ಪ್ರಧಾನಿ
ಇಸ್ಲಾಮಾಬಾದ್,ಮೇ,೧೭- ಕೊನೆಗೂ ಪಾಕಿಸ್ತಾನ ಪ್ರಧಾನಮಂತ್ರಿ ಶೆಹಬಾಜ್ ಷರೀಪ್ ಆಪರೇಷನ್ ಸಿಂಧೂರದಿಂದ ಪಾಕಿಸ್ತಾನಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ನಿರಾಕರಿಸಿದ್ದ ಅವರು ಈಗ ಭಾರತದ ಕ್ಷಿಪಣಿಗಳಿಂದ ಹಾನಿಯಾಗಿರುವುದನ್ನು ಒಪ್ಪಿಕೊಂಡಿದ್ದಾರೆ. ಮೇ ೯ ಮತ್ತು ೧೦ರ ನಡುವಿನ ರಾತ್ರಿ ೨.೩೦ಕ್ಕೆ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸೀಮ್ ಮುನೀರ್ ಸ್ವತಃ ಕರೆ ಮಾಡಿ ಈ ಮಾಹಿತಿ ನೀಡಿದ್ದಾಗಿ ಷರೀಫ್ ಬಹಿರಂಗಪಡಿಸಿದ್ದಾರೆ.ಇದುವರೆಗೂ ಭಾರತದ ಮಿಲಿಟರಿ ಕಾರ್ಯಾಚರಣೆಯನ್ನು ಪಾಕಿಸ್ತಾನ ನಿರಾಕರಿಸುತ್ತಾ ಬಂದಿತ್ತು. ಪಾಕ್ ಪ್ರಧಾನಿ ಈ ಹೇಳಿಕೆ ನೀಡಿರುವ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ.…