Girl in a jacket

Author kendhooli_editor

ಐ ಲವ್ ಯು ರಚ್ ಚಿತ್ರೀಕರಣ ವೇಳೆ ಪೈಟರ್ ಗೆ ವಿದ್ಯುತ್ ತಗುಲಿ ಸಾವು

ರಾಮನಗರ,ಆ,09: ಕನ್ನಡದ ಲವ್ ಯು ರಚ್ಚು ಚಿತ್ರೀಕರಣದ ವೇಳೆ ವಿದ್ಯುತ್ ತಗುಲಿ ಪೈಟರ್ ಸಾವನ್ನಪ್ಪಿದ ಘಟನೆ ನಡೆದಿದೆ. ರಾಮನಗರ ಜಿಲ್ಲೆಯ ಜೋಗನದೊಡ್ಡಿಯಲ್ಲಿ ಪೈಟಿಂಗ್ ಶೂಟ್ ನಡೆಯುತ್ತಿತ್ತು ಈ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್ ವಿವೇಕ್ (28) ಮೃತಪಟ್ಟಿದ್ದಾರೆ. ಅಜಯ್ ರಾವ್ ಮತ್ತು ರಚಿತಾ ರಾಮ್ ಅಭಿಯನದ ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ರಾಮನಗರ ತಾಲೂಕಿನ ಜೋಗನದೊಡ್ಡಿಯಲ್ಲಿ ನಡೆಯುತಿತ್ತು. ಸ್ಟಂಟ್ ಅನ್ನು ಖಾಸಗಿ ರೆಸಾರ್ಟ್ ಬಳಿ ಚಿತ್ರೀಕರಿಸಲಾಗುತ್ತಿತ್ತು ಮತ್ತು ವಿವೇಕ್ ಮತ್ತು ಸ್ಟಂಟ್ ಸಿಬ್ಬಂದಿ ಆ…

47 ಕುಟುಂಬಗಳಿಗೆ ಸಚಿವರಿಂದ ಹಕ್ಕುಪತ್ರ ವಿತರಣೆ

ವಿಜಯಪುರ,ಆ,09: ನಿರಂತರವಾಗಿ ಭೀಮಾ ನದಿ ಪ್ರವಾಹಕ್ಕೆ ಸಿಲುಕಿ ಬದಕು ಕಳೆದುಕೊಂಡಿದ್ದ ತಾರಾಪುರ ಗ್ರಾಮದ ನಿರಾಶ್ರಿತರಿಗೆ ಹೊಸ ನಿವೇಶನಗಳ ಹಕ್ಕು ಪತ್ರಗಳನ್ನು ವಿತರಿಸುವ ಮೂಲಕ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ವಿಜಯಪುರ ಕೊವಿಡ್ ಮತ್ತು ಪ್ರವಾಹ ಉಸ್ತುವಾರಿ ಸಚಿವರಾಗಿರುವ ಶಶಿಕಲಾ ಜೊಲ್ಲೆ ದಶಕಗಳ ಜನರ ಬೇಡಿಕೆಯನ್ನು ಈಡೇರಿಸಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ತಾರಾಪುರ ಗ್ರಾಮದಲ್ಲಿ ಸೋಮವಾರ 47 ಜನರಿಗೆ ಹಕ್ಕು ಪತ್ರ ವಿತರಣೆಯನ್ನು ಸಚಿವರಾದ ಶಶಿಕಲಾ ಜೊಲ್ಲೆಯವರು ಮಾಡಿದರು. 2010 ರಿಂದ ಬಗೆ…

ರಾಜ್ಯದ ದೇವಾಲಯಗಳ ಮೂಲ ಸೌಕರ್ಯ ಅಭಿವೃದ್ಧಿಗೆ ಆದ್ಯತೆ : ಜೊಲ್ಲೆ

ವಿಜಯಪುರ,ಆ,09 : ನೂತನ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾಗಿ ನೇಮಕಗೊಂಡಿರುವ ಶಶಿಕಲಾ ಜೊಲ್ಲೆಯವರು ವಿಜಯಪುರ ನಗರದ ಐತಿಹಾಸಿಕ ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ನಾಡಿನ ಜನತೆ ಕೊರೊನಾ ಮಹಾಮಾರಿ ಹಾಗೂ ಪ್ರವಾಹ ಸಂಕಷ್ಟದಿಂದ ಹೊರ ಬರಲಿ ಎಂದು ವಿಶೇಷ ಪೂಜೆ ಸಲ್ಲಿಸಿದರು. ಹಿಂದೂ ಧರ್ಮದ ಪ್ರಕಾರ ಶ್ರಾವಣ ಮಾಸದ ಮೊದಲ ಸೋಮವಾರ ಅತ್ಯಂತ ಪುಣ್ಯದ ದಿನವಾಗಿದ್ದು ಈ ದಿನ ಶಿವನ ಪೂಜೆ ಮಾಡುವ ಮೂಲಕ ಮುಜರಾಯಿ,…

ಸರ್ಕಾರದ ಕಾರ್ಯಕ್ರಮ ಅನುಷ್ಠಾನ ನಮ್ಮ ಸಂಕಲ್ಪ ಆಗಲಿ;ಸಿಎಂ ಬೊಮ್ಮಾಯಿ

ಮೈಸೂರು,ಆ,09:ವಿಶ್ವದಲ್ಲಿಯೇ ಅತಿಹೆಚ್ಚು ಸದಸ್ಯರಿರುವ ಪಕ್ಷ ಬಿಜೆಪಿ. ಧೀಮಂತ ನಾಯಕರಾದ ಪ್ರಧಾನಿ  ನರೇಂದ್ರ ಮೋದಿ, ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅನೇಕ ಪ್ರಮುಖರ ನಾಯಕತ್ವದಲ್ಲಿ 40 ವರ್ಷಗಳಿಂದ ಈ ಪಕ್ಷ ಕಟ್ಟಲ್ಪಟ್ಟಿದೆ. ಪಕ್ಷ, ಪಕ್ಷ ನಿಷ್ಠೆ, ಪಕ್ಷದ ಕಾರ್ಯ ಕ್ರಮಗಳ ಅನುಷ್ಠಾನ ಪಕ್ಷದ ಕಾರ್ಯಕರ್ತರಾದ ನಮ್ಮೆಲ್ಲರ ಸಂಕಲ್ಪ ಆಗಬೇಕು. ಈ ಕೆಲಸವನ್ನು ಮುಂದಿನ 2 ವರ್ಷಗಳಲ್ಲಿ ನಾವು ಪ್ರಾಮಾಣಿಕವಾಗಿ ವಿಶ್ವಾಸಪೂರ್ವಕವಾಗಿ ನಾಡಿನ ಸೇವೆ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಮೈಸೂರು ನಗರದಲ್ಲಿ ಭಾರತೀಯ…

ಮೇಕೆದಾಟು ಯೋಜನೆಗೆ ಶೀಘ್ರ ಕೇಂದ್ರದ ಅನುಮೋದನೆ: ಸಿಎಂ ವಿಶ್ವಾಸ

ಮೈಸೂರು, ಆ, 9: ಮೇಕೆದಾಟು ಯೋಜನೆಯ ಡಿಪಿಆರ್ ಗೆ ಕೇಂದ್ರ ಸರ್ಕಾರದಿಂದ ಶೀಘ್ರವೇ ಅನುಮೋದನೆ ದೊರೆಯುವ ವಿಶ್ವಾಸವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಕ್ತಪಡಿಸಿದರು. ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಮೇಕೆದಾಟು ಯೋಜನೆಯ ಡಿಪಿಆರ್ ಅನ್ನು ಕೇಂದ್ರ ಜಲ ಆಯೋಗಕ್ಕೆ ಈಗಾಗಲೇ ಸಲ್ಲಿಸಲಾಗಿದೆ. ಕಳೆದ ಬಾರಿ ದೆಹಲಿಗೆ ತೆರಳಿದಾಗ ಈ ಯೋಜನೆಗೆ ಒಪ್ಪಿಗೆ ನೀಡುವುದಾಗಿ ಭರವಸೆ ದೊರೆತಿದೆ. ಇದಕ್ಕೆ ಕೆಲವು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಾಗಿದೆ. ಇದು ಪೂರ್ಣಗೊಂಡ ಕೂಡಲೇ ಕೇಂದ್ರದ…

ಕಚ್ಚಾತೈಲ ಬೆಲೆ ಕುಸಿದರೂ ಪರಿಷ್ಕರಣೆಯಾಗದ ಇಂಧನ ಬೆಲೆ..!

ನವದೆಹಲಿ, ಆ, 09: ಜಾಗತಿಕವಾಗಿ ಕಚ್ಚಾತೈಲ ಬೆಲೆ ಈ ವಾರದಲ್ಲಿ ತೀವ್ರ ಕುಸಿತವಾದರೂ ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತ 23 ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದೆ. ಆಗಸ್ಟ್ 9ರಂದು ಇಂಧನ ಬೆಲೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲಾಗಿಲ್ಲ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿವೆ. ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿದ್ದು, ಜೂನ್ ತಿಂಗಳಲ್ಲೇ 21 ಬಾರಿ ಬೆಲೆ ಏರಿಕೆ ಮಾಡಲಾಗಿತ್ತು.…

ಕ್ರೈಂ ಥ್ರಿಲ್ಲರ್ ಮಾರಿಗೋಲ್ಡ್..!

ಆರಂಭದಿಂದಲೂ ತನ್ನ ಶೀರ್ಷಿಕೆಯ ಮೂಲಕವೇ ನಿರೀಕ್ಷೆ ಹುಟ್ಟಿಸಿರುವ‍, ತೀರ್ಥಳ್ಳಿ ಹುಡುಗ ದಿಗಂತ್‌ ಅಭಿನಯದ ಚಿತ್ರ ಮಾರಿಗೋಲ್ಡ್. ಈಗಾಗಲೇ ಚಿತ್ರದ ಪೋಸ್ಟ್‌ ‌ಪ್ರೊಡಕ್ಷನ್ ಕೆಲಸಗಳು ಪ್ರಗತಿಯಲ್ಲಿದ್ದು, ಚಿತ್ರದ ಡಬ್ಬಿಂಗ್ ಕಾರ್ಯ ಮುಗಿದು, ಹಿನ್ನೆಲೆ ಸಂಗೀತ ಅಳವಡಿಕೆ ಕೊನೇ ಹಂತದಲ್ಲಿದೆ. ಇಷ್ಟರಲ್ಲೇ ಸೆನ್ಸಾರ್ ಅಂಗಳಕ್ಕೆ ಹೋಗಲು ಸಿದ್ದವಾಗಿರುವ ‘ಮಾರಿಗೋಲ್ಡ್’ ಚಿತ್ರ. ಸದ್ಯದಲ್ಲೇ ಪ್ರೇಕ್ಷಕರ ಮುಂದೆ ಬರಲಿದೆ. ಪಕ್ಕಾ ಕ್ರೈಮ್‌ ಥ್ರಿಲ್ಲರ್‌ ಕಥಾನಕ‌ ಹೊಂದಿರುವ ಈ ಚಿತ್ರವನ್ನು ರಾಘವೇಂದ್ರ ಎಂ.ನಾಯಕ್‌ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಇದು ರಾಘವೇಂದ್ರ ನಾಯಕ್…

ಬಿಗ್‌ಬಾಸ್ ಸೀಸನ್ ೮ ರ ವಿನ್ನರ್ ಆಗಿ ಪಾವಗಡ ಮಂಜು

ಬಿಗ್ ಬಾಸ್ ಸೀಸನ್ ೮ ರ ವಿನ್ನರ್ ಲ್ಯಾಗ್ ಮಂಜು ಅಲಿಯಾಸ್ ಮಂಜು ಪಾವಗಡ ಹೊರಹೊಮ್ಮಿದ್ದಾರೆ. ಅವರಿಗೆ ೪೫,೦೩,೪೯೫ ಮತಗಳು ಬಿದ್ದರೆ, ರನ್ನರ್ ಅಪ್ ಅರವಿಂದ್ ಅವರಿಗೆ ೪೩,೩೫,೯೫೭ ಮತಗಳು ಬಿದ್ದಿವೆ. ಇದು ಬಿಗ್ ಬಾಸ್ ಇತಿಹಾಸದಲ್ಲೇ ದಾಖಲೆಯಾಗಿದೆ. ರಂಗಭೂಮಿ ಹಿನ್ನಲೆಯುಳ್ಳ ಮಂಜು, ತಮ್ಮ ಹಾಸ್ಯ ಪ್ರಜ್ಞೆ ಮೂಲಕ ಮನೆಯ ಎಲ್ಲ ಸದಸ್ಯರು ಮತ್ತು ವೀಕ್ಷಕರ ಮನ ಗೆದ್ದಿದ್ದರು. ಪ್ರಶಾಂತ್ ಸಂಬರಗಿ, ಚಕ್ರವರ್ತಿ ಚಂದ್ರಚೂಡ್ ಜೊತೆಗಿನ ಕೆಲ ಗದ್ದಲಗಳನ್ನು ಬಿಟ್ಟರೆ ಬೇರಾವ ಜಗಳದಲ್ಲೂ ಮಂಜು ಕಾಣಿಸಿಕೊಂಡವರಲ್ಲ.ಹಾಸ್ಟೆಲ್ ಟಾಸ್ಕ್…

ಟೋಕಿಯೋ ಒಲಂಪಿಕ್ಸ್ ಗೆ ವೈಭವದ ತೆರೆ: ತ್ರಿವರ್ಣ ಧ್ವಜ ಹಿಡಿದು ಭಾರತೀಯ ತಂಡ ಮುನ್ನಡೆಸಿದ ಬಜರಂಗ್ ಪುನಿಯಾ

Reported By : H.D.Savita  ಟೋಕಿಯೋ,ಆ,08: ಜುಲೈ 23ರಿಂದ ಆರಂಭವಾದ ಒಲಂಪಿಕ್ಸ್ ಭಾನುವಾರ ಮುಕ್ತಾಯಗೊಂಡಿತು. ಮುಂದಿನ ಒಲಂಪಿಕ್ಸ್ ಕ್ರೀಡಾಕೂಟವು 2024ರಲ್ಲಿ ಪ್ಯಾರಿಸ್ ನಲ್ಲಿ ನಡೆಯಲಿದೆ. ಪ್ಯಾರಿಸ್ ನಲ್ಲಿ 26 ಜುಲೈ – 11 ಅಗಸ್ಟ್ 2024 ರವರೆಗೆ ಆಯೋಜಿಸಲು ಉದ್ದೇಶಿಸಲಾಗಿದೆ. ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾರತದ ಪ್ರದರ್ಶನ ಅದ್ಭುತವಾಗಿತ್ತು. ಭಾರತ 7 ಒಲಂಪಿಕ್ಸ್ ಪದಕಗಳನ್ನು ಗೆದ್ದು, ಈ ಹಿಂದಿನ ದಾಖಲೆಯನ್ನು ಮುರಿದಿದೆ. ಈ ಬಾರಿ ಚಿನ್ನ ಸೇರಿದಂತೆ 7 ಪದಕಗಳು ಗೆದ್ದಿರೋದು ವಿಶೇಷವಾಗಿತ್ತು. ನೂರು ವರ್ಷಗಳ ಆಸೆ…

ಚಿನ್ನದ ಹುಡುಗನಿಗೆ ಶುಭಾಶಯಗಳ ಮಹಾಪೂರ: ಭರ್ಜರಿ ಗಿಫ್ಟ್ ಘೋಷಿಸಿದ ಆನಂದ್ ಮಹೀಂದ್ರಾ

Reported by: H.D.Savita ಟೋಕಿಯೋ: ಜಾವಲಿನ್ ಥ್ರೋ ವಿಭಾಗದಲ್ಲಿ ಭಾರತಕ್ಕೆ‌ ಚಿನ್ನದ‌ ಪದಕ ತಂದು ಕೊಟ್ಟ ನೀರಜ್ ಚೋಪ್ರಾಗೆ ಶುಭಾಶಯಗಳ ಮಹಾಪೂರವೇ ಹರಿದು ಬರ್ತಿವೆ. ಹರಿಯಾಣ ಸರ್ಕಾರವು 6ಕೋಟಿ ರೂ. ಬಹುಮಾನ ಘೋಷಿಸಿದೆ. ಅದರ ಜೊತೆಗೆ ಎ ದರ್ಜೆಯ ಸರ್ಕಾರಿ ಉದ್ಯೋಗವನ್ನು ನೀಡಿದೆ. ಅಲ್ದೇ ಬಿಸಿಸಿಐ ಕೂಡಾ 1ಕೋಟಿ ರೂ. ಘೋಷಣೆ ಮಾಡಿದೆ. ಇದರ ಬೆನ್ನಲ್ಲೇ ಮಹೀಂದ್ರಾ ಕಂಪನಿಯ ಮಾಲೀಕ ಆನಂದ್ ಮಹೀಂದ್ರಾ ಭರ್ಜರಿ ಉಡುಗೊರೆ ಘೋಷಿಸಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ದೇಶದೆಲ್ಲೆಡೆಯಿಂದ ಶುಭಾಶಯಗಳ ಮಹಾಪೂರವೇ ಹರಿದುಬರ್ತಿದೆ.…

ಅಮವಾಸ್ಯೆ ಪ್ರಯುಕ್ತ ಕೃಷ್ಣಾತಟದಲ್ಲಿ ಜನವೋ ಜನ..

ಆಲಮಟ್ಟಿ,ಆ,08: ನಾಗರ ಅಮವಾಸ್ಯೆ ಜೊತೆಗೆ ರವಿವಾರವೂ ಆಗಿರುವದರಿಂದ ಪಟ್ಟಣವೂ  ಸುತ್ತಮುತ್ತಲಿನ ಸುಕ್ಷೇತ್ರ ಹಾಗೂ ಕೃಷ್ಣೆಯ ತೀರದಲ್ಲಿ ಎಲ್ಲಿ ನೋಡಿದರೂ ಜನಸ್ತೋಮವೇ ಕಾಣುತ್ತಿತ್ತು. ನಾಗರ ಅಮವಾಸ್ಯೆಯು ರವಿವಾರ ಆಗಿರುವದರಿಂದ ವಿಜಯಪುರ ಹಾಗೂ ಬಾಗಲಕೋಟ ಅವಳಿ ಜಿಲ್ಲೆಯ ನಾಗರಿಕರು ರವಿವಾರ ನಸುಕಿನ ಜಾವದಿಂದ ಸಂಜೆಯವರೆಗೂ ಆಲಮಟ್ಟಿಯ ಕೃಷ್ಣಾಸೇತುವೆ, ಹಿನ್ನೀರು ಪ್ರದೇಶದಲ್ಲಿರುವ ಚಂದ್ರಮ್ಮಾದೇವಸ್ಥಾನದ ಬಳಿ, ಪಾರ್ವತಿಕಟ್ಟೆ ಹಾಗೂ ಯಲಗೂರ ಬಳಿಯಕೃಷ್ಣಾ ನದಿಯ ದಡದಲ್ಲಿ ಭಕ್ತರ ದಂಡು ಪುಣ್ಯಸ್ನಾನ ಮಾಡಿದರು. ಪಟ್ಟಣಕ್ಕೆ ಆಗಮಿಸಿದ್ದ ಪ್ರವಾಸಿಗರು ತುಂಬಿ ನಿಂತಿರುವ ಕೃಷ್ಣೆಯ ಜಲನಿಧಿ, ರಾಕ್ ಉದ್ಯಾನ,…

ಬೋಲ್ಡ ಅಂಡ್ ಬ್ಯೂಟಿಪುಲ್ ರೇಖಾ

ಡಾ.ಶಿವಕುಮಾರ್ ಕಂಪ್ಲಿ ಸಹಾಯಕ ಪ್ರಾಧ್ಯಾಪಕರು ದಾವಣಗೆರೆ ವಿಶ್ವವಿದ್ಯಾಲಯ ಬೋಲ್ಡ ಅಂಡ್ ಬ್ಯೂಟಿಪುಲ್ ರೇಖಾ ಸಮಾಜ ತನಗೆ ಒಪ್ಪಿತವಾದ ಹಲವು ಬಗೆಯ ಬದುಕುಗಳನ್ನ ಮೌಲ್ಯ ಎಂದು ಕರೆಯುತ್ತದೆ. ಆದರ್ಶ ಎಂದು ಪಾಲಿಸುತ್ತದೆ.ಅದು ಕುಟುಂಬದ ವಿಷಯದಲ್ಲಿ ಒಂದು ಗಂಡಿಗೆ ಒಂದೇ ಹೆಣ್ಣು ಎಂದು ಮದುವೆಯ ನಿಯಮವನ್ನ ವಿಧಿಸಿ ಹಾಗೆ ಬದುಕುವುದು ಸಾಮಾಜಿಕ ಗೌರವದ ಸಂಕೇತ ವೆಂದುಹೇಳುವ ನಿಯಮವನ್ನ ಪಾಸುಮಾಡುತ್ತದೆ. ಇದಕ್ಕೆ ಉದಾಹರಣೆ ಎಂಬಂತೆ ಸಮುದಾಯಗಳು ರಾಮ ಲಕ್ಷ್ಮಣರ ಆದರ್ಶವನ್ನ ಸೂಚಿಸುತ್ತವೆ. ಸಮಾಜದಲ್ಲಿ ದುಡಿವ ಶ್ರಮಿಕವರ್ಗ ಮತ್ತು ನೌಕರಿಯ ಮಧ್ಯಮವರ್ಗ…

ರಶ್ಮಿಕ ಮಂದಣ್ಣರ ಬಣ್ಣದ ಬದುಕಿನ ಮಾತು…!

ಭಾರತೀಯ ಚಿತ್ರರಂಗದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಹಲವು ವರ್ಷಗಳ ನಂತರ ಖಾಸಗಿ ಸಂದರ್ಶನದಲ್ಲಿ ಮಾತನಾಡಿದ್ದಾರೆ. ತಮ್ಮ ಮುಂದಿನ ಸಿನಿಮಾ ಪ್ರಾಜೆಕ್ಟ್‌ಗಳ ಬಗ್ಗೆ ಹಂಚಿಕೊಂಡ ರಶ್ಮಿಕಾ ಟ್ರೋಲ್ ಪೇಜ್‌ಗಳನ್ನು ಎದುರಿಸಿದ್ದು ಹೇಗೆ ಎಂದು ರಿವೀಲ್ ಮಾಡಿದ್ದಾರೆ. ರಶ್ಮಿಕಾ ವೃತ್ತಿ ಜೀವನದ ಗ್ರಾಫ್ ಎತ್ತರಕ್ಕೆ ಏರುತ್ತಿದೆ ಆದರೆ ಒಮ್ಮ ವೈಯಕ್ತಿಕ ಜೀವನದಲ್ಲಿ ತೆಗೆದುಕೊಂಡ ನಿರ್ಧಾರದಿಂದ ಟ್ರೋಲ್‌ಗೆ ಗುರಿಯಾದರು. ಈ ಪರಿಸ್ಥಿತಿಯನ್ನು ಪೋಷಕರ ಜೊತೆ ಎದುರಿಸಿದ್ದ ರಶ್ಮಿಕಾ ಮಂದಣ್ಣ ಹೇಗೆ ನಿಭಾಯಿಸಿದ್ದರು ಎಂದು ಹೇಳಿಕೊಂಡಿದ್ದಾರೆ. ’ಪ್ರಾರಂಭದಲ್ಲಿ ಇದು ತುಂಬಾನೇ ಕಷ್ಟವಾಗಿತ್ತು.…

ರಾಷ್ಟ್ರೀಯ ಶಿಕ್ಷಣ ನೀತಿ ಹಿಂಪಡೆಯಲು ಸಿದ್ದು ಒತ್ತಾಯ

ಬೆಂಗಳೂರು,ಆ,೦೮: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ ಜಾರಿಗೊಳಿಸಿ ಹೊರಡಿಸಿರುವ ಆದೇಶವನ್ನು ತಕ್ಷಣ ಹಿಂಪಡೆಯಬೇಕು’ ಎಂದು ರಾಜ್ಯ ಸರ್ಕಾರವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆಯಾವುದೇ ಚರ್ಚೆ ನಡೆಸದೆ ಆದೇಶ ಹೊರಡಿಸಿರುವುದು ಸರ್ವಾಧಿಕಾರಿ ನಿಲುವು. ದೇಶದ ಒಕ್ಕೂಟ ತತ್ವಕ್ಕೆ ಮಾಡಿರುವ ಅವಮಾನ’ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ವಿಸ್ತೃತ ಚರ್ಚೆ ನಡೆಸಿದ ನಂತರ ಅನುಷ್ಠಾನಗೊಳಿಸುವ ಕುರಿತು ತೀರ್ಮಾನಿಸಬೇಕು ಎಂದಿದ್ದಾರೆ. ಶಿಕ್ಷಣ ತಜ್ಞರು, ಉಪನ್ಯಾಸಕರು, ಹಿರಿಯರು ಮತ್ತು ವಿರೋಧ ಪಕ್ಷಗಳ ಮುಖಂಡರು ಈ ನೀತಿಯನ್ನು ತರಾತುರಿಯಲ್ಲಿ…

ಸಾರ್ವಜನಿಕರ ಸಮಸ್ಯೆ ಬಗೆಹರಿಸುವಲ್ಲಿ ವಿಫಲ-ನಾಗರಾಜ ಗೌಡ ಆರೋಪ

ಶಿಕಾರಿಪುರ,ಆ,೦೮:ಇಲ್ಲಿನ ಪುರಸಭೆಯಲ್ಲಿ ಸಂಪೂರ್ಣ ಬಹುಮತ ವಿಲ್ಲದೇ ಆಪರೇಷನ್ ಕಮಲದ ಮೂಲಕ ಹಿಂಬಾಗಿಲಿನಿಂದ ಬಂದು ಅಧಿಕಾರ ಹಿಡಿದು ಸಾರ್ವಜನಿಕರ ಸಮಸ್ಯೆ ಬಗೆಹರಿಸುವಲ್ಲಿ ವಿಫಲ ವಾಗಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಗೌಡ ಆರೋಪಿಸಿದರು. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಸಿಬ್ಬಂದಿಗಳ ಕೊರತೆ ಇದೆ,ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿದೆ ಅವರದೇ ಸರ್ಕಾರ ಅವರೇ ಮುಖ್ಯಮಂತ್ರಿ ಶಾಸಕರು ಸಂಸದರು ಅವರ ಪಕ್ಷದವರೆ ಇದ್ದರೂ ಸಾರ್ವಜನಿಕ ರ ಸಮಸ್ಯೆ ಬಗ್ಗೆ ಕಾಳಜಿ ಇಲ್ಲದೆ ಕೇವಲ ಅವರ ಪಕ್ಷದ ಕಾರ್ಯಕ್ರಮದಲ್ಲಿ…

ತಮಗಿಷ್ಟದ ಖಾತೆ ಸಿಗದ ಸಚಿವರ ಅಕ್ರೋಶ

ಬೆಂಗಳೂರು,ಆ,08: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸಚಿವರಿಗೆ ಖಾತೆ ಹಂಚಿದ ಬೆನ್ನಲ್ಲೇ ತಮ್ಮ ಇಷ್ಟದ ಖಾತೆ ಸಿಕ್ಕಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆನಂದ್ ಸಿಂಗ್,ಎಂ.ಟಿ.ಬಿ ನಾಗರಾಜ್ ಖಾತೆಗೆ ಖ್ಯಾತೆ ತಗೆದಿದ್ದರೆ.ಸತೀಶ್ ರೆಡ್ಡಿ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ತಮ್ಮ ಅಕ್ರೋಶ ಹೊರಹಾಕಿದ್ದಾರೆ. ಇಂದು ಬೆಳಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಸಕ ಸತೀಶ್ ರೆಡ್ಡಿ ಹೊರಗೆ ಬಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ನಾನು 1993ರಿಂದ ಭಾರತೀಯ ಜನತಾ ಪಾರ್ಟಿಯಲ್ಲಿದ್ದೇನೆ, ಮೂರು ಬಾರಿ ಶಾಸಕ, ನಂತರ ಜಿಲ್ಲಾ ಪಂಚಾಯತ್…

ತೋಟಗಾರಿಕೆ ಪಿತಾಮಹ ಮರಿಗೌಡರ ಸಸ್ಯಕ್ಷೇತ್ರದಕೊಡುಗೆ 

ಜೀವನಕ್ಕೆ ದವಸ ಧಾನ್ಯ ನಂಬಿದ್ದ ರೈತಾಪಿ ವರ್ಗಕ್ಕೆ ಫಲಪುಷ್ಪ ಬೆಳೆಸುವ ಕಾಂಚಾಣ ಮಾರ್ಗವನ್ನು ತೋರಿಸಿದ ಕೀರ್ತಿ ಡಾ. ಎಂ.ಎಚ್‌. ಮರಿಗೌಡ ಅವರದು. ದೇಶದ ನಕಾಶೆಯಲ್ಲಿ ‘ತೋಟಗಾರಿಕೆ ಬೀಡು’ ಎಂಬ ಖ್ಯಾತಿ ಕರ್ನಾಟಕಕ್ಕೆ ದೊರೆಯಲು ಕಾರಣಕರ್ತ ಎನ್ನುವ ಅಗ್ಗಳಿಕೆಯೂ ಅವರಿಗೇ ಸಲ್ಲಬೇಕು.ಕರ್ನಾಟಕದುದ್ದಕ್ಕೂ ನೂರಾರು ತೋಟಗಾರಿಕಾ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸಿದ ಈ ಮಹಾನ್‌ ಸಾಧಕ  ತೋಟಗಾರಿಕೆ ಪಿತಾಮಹ ಎಂದೇ ಕರೆಯುವ  ಡಾ.ಎಂ.ಎಚ್, ಮರಿಗೌಡರ 105 ನೇ ಜನ್ಮದಿನದ ಪ್ರಯುಕ್ತ ಈ ಲೇಖನ ತೋಟಗಾರಿಕೆ ಪಿತಾಮಹ ಮರಿಗೌಡರ ಸಸ್ಯಕ್ಷೇತ್ರದಕೊಡುಗೆ  ತಿರುಮಕೂಡಲು ನರಸೀಪುರ…

ಗ್ರಾಮೀಣ ಪ್ರದೇಶಗಳಲ್ಲಿ ಲಸಿಕೆ ಅಭಿಯಾನದ ಪರಿಸ್ಥಿತಿ

ಗ್ರಾಮೀಣ ಪ್ರದೇಶಗಳಲ್ಲಿ ಲಸಿಕೆ ಅಭಿಯಾನದ ಪರಿಸ್ಥಿತಿ ಬೆಳ್ಳಂಬೆಳಿಗ್ಗೆ ಮನೆಯಲ್ಲಿ ಯಾರದೋ ಜೋರುದನಿಯ ಮಾತುಗಳನ್ನು ಕೇಳಿ ನನಗೆ ಎಚ್ಚರವಾಯಿತು. ರಾತ್ರಿ ಜಯವಾಣಿ ಟೂರಿಂಗ್ ಟಾಕೀಸ್ ನಲ್ಲಿ ಮಯೂರ ಚಲನಚಿತ್ರವನ್ನು ನೋಡಿ ಮನೆಗೆ ಬಂದು ಮಲಗಿದಾಗ ಸಮಯ ರಾತ್ರಿ ಹನ್ನೆರಡನ್ನು ದಾಟಿತ್ತು. ಮಯೂರವರ್ಮನ ಗುಂಗಿನಲ್ಲಿಯೆ ದಿಂಬಿಗೆ ತಲೆಯಿಟ್ಟವನಿಗೆ ಯಾವಾಗ ನಿದ್ದೆ ಬಂತೋ ಗೊತ್ತಿರಲಿಲ್ಲ. ರಾತ್ರಿ ಆದ ಕಡಿಮೆ ನಿದ್ದೆಯ ಪರಿಣಾಮವೋ ಏನೋ ಕಣ್ಣುಗಳು ಉರಿಯುತ್ತಿದ್ದವು. ಬಹಳ ಕಷ್ಟಪಟ್ಟು ಕಣ್ಣುಗಳನ್ನು ತೆರೆದವನಿಗೆ ಗೋಡೆ ಮೇಲಿದ್ದ ಗಡಿಯಾರದ ಮುಳ್ಳು ಏಳರ ಆಸುಪಾಸಿನಲ್ಲಿ ಇದ್ದದ್ದು…

ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ

‌‌‌                      ಸಿದ್ಧಸೂಕ್ತಿ : ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ. ಮಡಕೆ ಮಾಡಲು ಕುಂಬಾರಗೆ ಬೇಕು ವರುಷ, ಒಡೆಯಲು ದೊಣ್ಣೆಗೆ ಸಾಕು ನಿಮಿಷ! ಕಟ್ಟಡ ನಿರ್ಮಿಸಲು ಬೇಕು ವರ್ಷ ಹಲವು, ಕೆಡವಲು ಜೆಸಿಬಿಗೆ ಸಾಕು ಘಂಟೆ ಕೆಲವು! ಬಸ್ ತಯಾರಿಗೆ ಬೇಕು ಶ್ರಮ ಬಂಡವಾಳ, ಸುಡಲು ಸಾಕು ಕ್ಷಣ ಕೆಟ್ಟ ಮನದಾಳ! ಮರ ನೆಟ್ಟು ಬೆಳೆಸಲು ಬೇಕು ಶ್ರಮ ಹಲವಾರು ವರ್ಷ, ತುಂಡರಿಸಲು…

ಬೆಂಗಳೂರಲ್ಲಿ ವಾರಾಂತ್ಯ ಕರ್ಫ್ಯೂ ಸದ್ಯಕ್ಕಿಲ್ಲ: ಗೌರವ್ ಗುಪ್ತ

ಬೆಂಗಳೂರು,ಆ, 07: ‘ನಗರದಲ್ಲಿ ಕೋವಿಡ್‌ ನಿಯಂತ್ರಣ ಸಲುವಾಗಿ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸುವ ಪ್ರಸ್ತಾಪ ಸದ್ಯಕ್ಕೆ ಬಿಬಿಎಂಪಿ ಮುಂದಿಲ್ಲ’ ಎಂದು ಮುಖ್ಯ ಆಯುಕ್ತ ಗೌರವ್‌ ಗುಪ್ತ ಸ್ಪಷ್ಟಪಡಿಸಿದರು. ‘ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಗೆ ಹೊಂದಿಕೊಂಡ ಎಂಟು ಜಿಲ್ಲೆಗಳಲ್ಲಿ ಮಾತ್ರ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದೆ. ಬೆಂಗಳೂರಿನಲ್ಲಿ ನಿತ್ಯ ಸರಾಸರಿ 450ರಷ್ಟು ಕೋವಿಡ್‌ ಪ್ರಕರಣಗಳು ಮಾತ್ರ ಪತ್ತೆಯಾಗುತ್ತಿವೆ. ನಗರದಲ್ಲಿ ಕೋವಿಡ್‌ ಪರೀಕ್ಷೆಗೆ ಒಳಪಟ್ಟವರಲ್ಲಿ ಸೊಂಕು ಪತ್ತೆ ದರ ಶೇ 1ಕ್ಕಿಂತ ಕಡಿಮೆ ಇದೆ. ರಾಜ್ಯದ ಗಡಿಭಾಗದ ಹಲವಾರು ಜಿಲ್ಲೆಗಳಲ್ಲಿ ಸೋಂಕು…

1 84 85 86 87 88 126
Girl in a jacket