Girl in a jacket

Author kendhooli_editor

ಡೆಲ್ಟಾ ಪ್ಲೆಸ್ ಕೊರೊನಾ ರೂಪಾಂತರ ತಳಿ ಹೆಚ್ಚಿಸಿದ ಆತಂಕ

ಕೊರೊನಾ ಮೂರನೆ ಅಲೆಯ ಆತಂಕದಲ್ಲಿರುವ ಸಂದರ್ಭದಲ್ಲಿ ಡೆಲ್ಟಾ ಪ್ಲೆಸ್ ಕೊರೊನಾ ರೂಪಾಂತರ ತಳಿ ಕಾಣಿಸಿಕೊಂಡು ಆತಂಕ ಹುಟ್ಟಿಸಿದೆ. ಬೆಂಗಳೂರು ಜೂ,24: ಡೆಲ್ಟಾ ಪ್ಲಸ್ ಕೊರೋನಾ ರೂಪಾಂತರಿ ತಳಿಯ ವೈರಸ್ ಇದೀಗ ಬೆಂಗಳೂರಿನಲ್ಲಿಯೂ ಕಾಣಿಸಿಕೊಂಡಿದೆ. ಡೆಲ್ಟಾ ಪ್ಲಸ್ ವೈರಸ್ ಮೊದಲ ಪ್ರಕರಣ ಮೈಸೂರಿನಲ್ಲಿ ಪತ್ತೆಯಾಗಿತ್ತು. ಇದೀಗ ಬೆಂಗಳೂರಿನಲ್ಲಿಯೂ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ್ ಅವರು ದೃಢಪಡಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಸುಧಾಕರ್ ಅವರು, ಮಂಗಳವಾರ ಮೈಸೂರಿನಲ್ಲಿ ಒಂದು ಪ್ರಕರಣ ಪತ್ತೆಯಾಗಿತ್ತು. ಬುಧವಾರ ಬೆಂಗಳೂರಿನಲ್ಲಿ ಮತ್ತೊಂದು ಪ್ರಕರಣ…

ಕನ್ನಡಿಗರು ಮರೆಯಲಾಗದ ಜಯದೇವಿತಾಯಿ ಲಿಗಾಡೆ

ಕನ್ನಡ ಸಾಹಿತ್ಯ ಲೋಕದ ಮಹಾನ್ ಸಾಧಕಿ.ಕರ್ನಾಟಕ ಏಕೀಕರಣಕ್ಕೆ ಹೋರಾಟಗಾರ್ತಿ.ಕನ್ನಡವೇ ಉಸಿರಾಗಿಸಿಕೂಂಡು ಬದುಕಿದ ಶರಣೆ “ಜಯದೇವಿತಾಯಿ ಲಿಗಾಡೆ “ಅವರ  ಜನುಮ ದಿನದ ಈ  ಸಂದರ್ಭದಲ್ಲಿ ಅವರನ್ನು ನೆನದು   ಅವರ ಕುರಿತು ‘ಕೆಂಧೂಳಿ’ ಲೇಖನದ ಮೂಲಕ ಗೌರವ ಸಲ್ಲಿಸುತ್ತದೆ ಕನ್ನಡಿಗರು ಮರೆಯಲಾಗದ ಜಯದೇವಿತಾಯಿ ಲಿಗಾಡೆ ಜಯದೇವಿತಾಯಿ ಲಿಗಾಡೆ ಅವರು ಕುಟುಂಬವತ್ಸಲೆ, ಸಾಹಿತ್ಯಸಾಧಕಿ, ಸಮಾಜಸೇವಕಿ ಹೀಗೆ ತ್ರಿವೇಣಿ ಸಂಗಮವಾಗಿದ್ದ ಈ ಜಂಗಮತಾಯಿ ತಾಯ್ನುಡಿಯ ಸೇವೆಗಾಗಿ ಸವೆದರು. ಕನ್ನಡ ನುಡಿಗೆ, ಕನ್ನಡ ನಾಡಿಗೆ ತನ್ನನ್ನು ಅರ್ಪಿಸಿಕೊಂಡು ಅಜರಾಮರ ಕೀರ್ತಿಪಾತ್ರರಾದ ಶ್ರೀಮತಿ ಜಯದೇವಿ ತಾಯಿ…

ಹಾಲಿಂದು ಹಾಲಿಗೆ,ನೀರಿಂದು ನೀರಿಗೆ

ಶ್ರೀ ಡಾ.ಆರೂಢಭಾರತೀ ಸ್ವಾಮೀಜಿ ಸಿದ್ಧಸೂಕ್ತಿ : ಹಾಲಿಂದು ಹಾಲಿಗೆ, ನೀರಿಂದು ನೀರಿಗೆ. ಹೆಚ್ಚಿನ ಹಣದಾಶೆಗೆ ಹಾಲಿಗೆ ನೀರು ಬೆರೆಸುವುದುಂಟು! ಅಕ್ಕಿ ಬೇಳೆ ಎಣ್ಣೆ, ತುಪ್ಪ ಜೇನು ಔಷಧಿ, ಹಣ ಬಂಗಾರ ಕಟ್ಟಿಗೆ, ಬಣ್ಣ ಇಂಧನ ಸಿಮೆಂಟ್, ವಿಭೂತಿ ರುದ್ರಾಕ್ಷಿ ಕುಂಕುಮ ಮಂತ್ರ ದೇವರು ಧರ್ಮ, ಶ್ಲೋಕ ಸಾಹಿತ್ಯ, ಸಂನ್ಯಾಸ ರಾಜಕಾರಣ ಅಧಿಕಾರ, ಕೃಷಿ ವ್ಯಾಪಾರ, ಎಲ್ಲೆಲ್ಲೂ ಇದೆ ಕಲಬೆರಕೆಯ ಹಾವಳಿ! ನೆನಪಿರಲಿ :ಕಲಬೆರಕೆ ಕೈ ಹಿಡಿಯದು! ಹಾಲಿನ ವ್ಯಾಪಾರಿಯ ಹಣದ ಚೀಲ ಕದ್ದ ಮಂಗ, ಒಂದು ನಾಣ್ಯವ…

ವಿದ್ಯಾರ್ಥಿಗಳಿಗೆ ಸ್ಮಾರ್ಟ್ ತರಗತಿಯ ಟ್ಯಾಬ್ಲೆಟ್ ಪಿ.ಸಿ.ವಿತರಣೆ

ಬೆಂಗಳೂರು,ಜೂ,23: ಡಿಜಿಟಲ್ ಕಲಿಕಾ ಯೋಜನೆಯಡಿ 2500 ಸ್ಮಾರ್ಟ್ ತರಗತಿಗಳನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿ.ಸಿ.ಗಳನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಾಂಕೇತಿಕವಾಗಿ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಸರ್ಕಾರಿ ಕಾಲೇಜುಗಳಲ್ಲಿ 2,500 ತರಗತಿಗಳನ್ನು ಸ್ಮಾರ್ಟ್ ತರಗತಿ ಕೊಠಡಿಗಳಾಗಿ ಉನ್ನತೀಕರಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ 6,500 ತರಗತಿ ಕೊಠಡಿಗಳನ್ನು ಸ್ಮಾರ್ಟ್ ತರಗತಿಗಳಾಗಿ ಪರಿವರ್ತಿಸಲಾಗುವುದು ಎಂದರು. 2021-22ನೇ ಸಾಲಿನಲ್ಲಿ ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಾತಿ ಪಡೆಯುವ ಎಲ್ಲ ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಟ್ಯಾಬ್ಲೆಟ್ ಪಿ.ಸಿ. ನೀಡಲಾಗುವುದು ಎಂದು ತಿಳಿಸಿದರು. ಡಿಜಿಟಲ್ ಕಲಿಕೆ…

ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ನೆರವು ನೀಡಲು ಕೆಯುಡಬ್ಲ್ಯೂಜೆ ತೀರ್ಮಾನ

ಬೆಂಗಳೂರು,ಜೂ,23:ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಗಳಿಗೆ ತಲಾ 10 ಸಾವಿರ ಪರಿಹಾರ ನೀಡಲು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ತೀರ್ಮಾನಿಸಿದೆ. ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ. ಸಂಕಷ್ಟದಲ್ಲಿರುವ ಪತ್ರಕರ್ತರ ಕುಟುಂಬಕ್ಕೆ ಕಳೆದ ವರ್ಷ ನೀಡಿದಂತೆ ಸರ್ಕಾರದಿಂದ 5ಲಕ್ಷ‌ರೂ ನೆರವು ಕೊಡಿಸಲು ನಿರ್ಣಯಿಸಲಾಗಿದೆ. ಪತ್ರಕರ್ತರ ಕುಟುಂಬಕ್ಕೆ ಪಡಿತರ ಕಿಟ್ ಕೊಡಿಸಲು ತೀರ್ಮಾನಿಸಲಾಗಿದೆ.ಬೆಂಗಳೂರಿನಲ್ಲಿ ಪತ್ರಕರ್ತರ ಭವನ ನಿರ್ಮಾಣಕ್ಕೆ ಶೀಘ್ರವಾಗಿ ಶಂಕುಸ್ಥಾಪನೆ ಮಾಡಿಸಲು…

ಕೊರೊನಾ ಕಾಲದ ಹೋಟೆಲ್- ರೆಸಾರ್ಟ್ ನ ವಿದ್ಯುತ್,ನೀರು ಶುಲ್ಕ ಮನ್ನಾ ಮಾಡಲು ಸಿಎಂಗೆ ಸಿದ್ದು ಪತ್ರ

ಬೆಂಗಳೂರು ,ಜೂ23: ಹೋಟೆಲ್-ರೆಸಾರ್ಟ್-ವಸತಿಗೃಹಗಳ ಕೊರೋನಾ ಕಾಲದ ವಿದ್ಯುತ್, ನೀರಿನ ಶುಲ್ಕವನ್ನು ಮನ್ನಾ ಮಾಡುವುದು ಸೇರಿದಂತೆ ಈ ಉದ್ಯಮ ನೆಲಕಚ್ಚದಂತೆ ಅಗತ್ಯ ನೆರವನ್ನು ನೀಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬರೆದಿದ್ದು,ಕರ್ನಾಟಕ ಸರ್ಕಾರಕ್ಕೆ ಹೋಟೆಲ್ ಕಾರ್ಮಿಕರು, ದೀಪಾಲಂಕಾರದ ಕೆಲಸಗಾರರು, ಫೋಟೋಗ್ರಾಫರ್ ಗಳು ಸೇರಿ ಇನ್ನಿತರೆ ನಾನಾ ಜನ ಸಮುದಾಯಗಳು ಪಡುತ್ತಿರುವ ಕಷ್ಟ ಕಣ್ಣಿಗೆ ಬಿದ್ದಿಲ್ಲ.ಬೆಂಗಳೂರು ಸೇರಿ ರಾಜ್ಯದ ನಾನಾ ಭಾಗಗಳಲ್ಲಿ ಸಾವಿರಾರು ಹೋಟೆಲ್‍ಗಳು…

ಸ್ವಂತ ಮಕ್ಕಳ ಮೇಲೆ ಹಲ್ಲೆ ಮಾಡಿದ ಪಾಪಿ ತಂದೆ ಬಂಧನ

ಬೆಂಗಳೂರು ,ಜೂ, ೨೩; ಮಲತಾಯಿ ಮಾತು ಕೇಳಿ ಮೂವರು ಮಕ್ಕಳ ಮೇಲೆ ತಂದೆಯೇ ಅಮಾನುಷವಾಗಿ ಹಲ್ಲೆ ಮಾಡಿದ ಪಾಪಿ ತಂದೆಯನ್ನು ಜೆಪಿ ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸೆಲ್ವಾ ಕ್ರೂಸರ್ ಚಾಲಕನಾಗಿದ್ದು. ಆತನ ಎರಡನೇ ಹೆಂಡತಿ ಮಾತು ಕೇಳಿ ತನ್ನ ಸ್ವಂತ ಮಕ್ಕಳ ಭುಜ, ಮೊಣಕೈ ಮತ್ತು ಪಾದಗಳಿಗೆ ಚಾಕುವಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ನೋವನ್ನು ತಡೆಯಲಾರದೆ ಮಕ್ಕಳು ಕಿರುಚುತ್ತಾ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಈ ವೇಳೆ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿ ಮಕ್ಕಳನ್ನು ರಕ್ಷಿಸಿದ್ದಾರೆ.…

ಸಿಂಧೂರಿಗೆ ಹಿನ್ನೆಡೆ-ಅನುಮತಿ ಇಲ್ಲದೆ ಈಜು ಕೊಳ ನಿರ್ಮಾಣ

ಬೆಂಗಳೂರು,ಜೂ,೨೩: ಸಂಸದ ಪ್ರತಾಪ್ ಸಿಂಹ ಎತ್ತಿದ್ದ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ರೋಹಿಣಿ ಸಿಂಧೂರಿ ಅನುಮತಿ ಇಲ್ಲದೆ ಈಜುಕೊಳ ನಿರ್ಮಿಸಿದ್ದರು ಎನ್ನುವ ಅಂಶ ಈಗ ತನಿಖಾ ವರದಿಯಿಂದ ಗೊತ್ತಾಗಿದೆ. ಜಿಲ್ಲಾಧಿಕಾರಿ ನಿವಾಸ ‘ಜಲಸನ್ನಿಧಿ’ಯಲ್ಲಿ ಈಜುಕೊಳ ನಿರ್ಮಾಣ ಮಾಡಲು ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮತಿಯನ್ನೇ ಪಡೆದಿಲ್ಲ ಎಂದು ಪ್ರಾದೇಶಿಕ ಆಯುಕ್ತರ ತನಿಖಾ ವರದಿ ಹೇಳಿದೆ. ಸ್ವಿಮ್ಮಿಂಗ್ ಪೂಲ್ ನಿರ್ಮಾಣ ಸಂಬಂಧ ಪ್ರಾದೇಶಿಕ ಆಯುಕ್ತರು ರಾಜ್ಯ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ್ದಾರೆ. ಈಜುಕೊಳ ನಿರ್ಮಾಣಕ್ಕೆ ೩೨…

ಆಟ ಆಡಿ ಪಾಠ ಕಲಿ

ಶ್ರೀ ಡಾ.ಆರೂಢಭಾರತೀ ಸ್ವಾಮೀಜಿ ಸಿದ್ಧಸೂಕ್ತಿ : ಆಟ ಆಡಿ ಪಾಠ ಕಲಿ. ವ್ಯಕ್ತಿ ಸದಾ ಬೆಳೆಯಬೇಕು. ದೈಹಿಕ ಬೆಳವಣಿಗೆಯ ಜೊತೆ ಜೊತೆಗೆ ಬೌದ್ಧಿಕ ನೈತಿಕ ಬೆಳವಣಿಗೆಯೂ ಆಗಬೇಕು. ದೇಹಬೆಳವಣಿಗೆಗೆ ಆಹಾರವಷ್ಟೇ ಸಾಲದು. ದೈಹಿಕ ಚಟುವಟಿಕೆ ಆಹಾರ ಜೀರ್ಣ ಮಾಡಿ ದೇಹದ ಒಳಹೊರಗನ್ನು ಬೆಳೆಸುವುದು. ಆಟೋಟಗಳು ದೈಹಿಕ ಚಟುವಟಿಕೆ ನೀಡಿ ಆರೋಗ್ಯ ನೀಡುವವು,ಸ್ಪರ್ಧಾತ್ಮಕ ಮನೋಭಾವ ಉತ್ತೇಜಿಸುವವು, ಪಾಠ ಕಲಿಸುವವು! ಆಟ ಪ್ರಾಯೋಗಿಕ! ಅದು ಬೌದ್ಧಿಕ ಜ್ಞಾನ ವೃದ್ಧಿಸುವುದು, ಗಟ್ಟಿಗೊಳಿಸುವುದು.ಓದಿನಲ್ಲೂ ಪೈಪೋಟಿ ಹುಟ್ಟಿಸುವುದು! ಬದುಕೇ ನಿಜ ಆಟ. ಬದುಕಾಟ…

ನ ಕಲಿ ಟಿಆರ್‌ಪಿ ಹಗರಣ: ಅರ್ನಬ್ ಆರೋಪಿ

ಮುಂಬೈಜೂ,೨೨: ನಕಲಿ ಟಿಆರ್‌ಪಿ ಹಗರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ನ್ಯಾಯಾಲಯಕ್ಕೆ ಮುಂಬೈ ಪೊಲೀಸರು ಮಂಗಳವಾರ ಎರಡನೇ ಚಾರ್ಜ್‌ಶೀಟ್ ಸಲ್ಲಿಸಿದ್ದು, ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರನ್ನು ಆರೋಪಿಯನ್ನಾಗಿ ಉಲ್ಲೇಖಿಸಲಾಗಿದೆಹಗರಣ ಕುರಿತು ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸ್‌ನ ಕ್ರೈಂ ಇಂಟೆಲಿಜೆನ್ಸ್ ಯುನಿಟ್ (ಸಿಐಯು) ಈ ಚಾರ್ಜ್‌ಶೀಟನ್ನು ಸಲ್ಲಿಸಿದೆ.ಚಾರ್ಜ್‌ಶೀಟ್‌ನಲ್ಲಿ ಹಲವು ಆರೋಪಿಗಳ ಹೆಸರುಗಳಿದ್ದು, ಅರ್ನಬ್ ಗೋಸ್ವಾಮಿ ಹಾಗೂ ಎಆರ್‌ಜಿ ಔಟ್‌ಲಿಯರ್ ಸಂಸ್ಥೆಯನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ’ ಎಂದು ಗೋಸ್ವಾಮಿ ಪರ ವಕೀಲರು ತಿಳಿಸಿದ್ದಾರೆನಕಲಿ ಟಿಆರ್‌ಪಿ ಹಗರಣ ಕಳೆದ ವರ್ಷ ಅಕ್ಟೋಬರ್‌ನಲ್ಲಿ…

ಶಿವಣ್ಣ ನಟನೆಯ ಭಜರಂಗಿ-೨ ಚಿತ್ರೀಕರಣ ಆರಂಭ

ಲಾಕ್ ಡೌನ್‌ನಿಂದ ಹಲವಾರು ಚಿತ್ರಗಳ ಶೂಟಿಂಗ್ ಮತ್ತು ಬಿಡುಗಡೆಯನ್ನು ಮುಂದೂಡಿದ್ದವು ಆನ್‌ಲಾಕ್ ಬೆನ್ನಲ್ಲೆ ಈಗ ನಿಧಾನವಾಗಿ ಹಲವು ಸಿನಿಮಾ ತಯಾರಕರು ಅರ್ಧಕ್ಕೆ ನಿಂತಿರುವ ಚಿತ್ರೀಕರಣವನ್ನು ಪೂರ್ಣಗೊಳಿಸಲು ಮುಂದಾಗಿದ್ದಾರೆ ಎ ಹರ್ಷ ನಿರ್ದೇಶನದ ಶಿವರಾಜ್ ಕುಮಾರ್ ನಟನೆಯ ಭಜರಂಗಿ-೨ ಸಿನಿಮಾ ಶೇ.೬೦ ರಷ್ಟು ಪೂರ್ಣಗೊಂಡಿದ್ದು ಚಿತ್ರದ ಶೂಟಿಂಗ್ ಮುಂದುವರಿಸಲು ತಯಾರಾಗಿದ್ದಾರೆ. ಚಿತ್ರೀಕರಣ ಆರಂಭಿಸಲು ನಿರ್ಧರಿಸಿದ್ದು ಉಳಿದ ಶೇ.೪೦ ರಷ್ಟು ಶೂಟಿಂಗ್ ಪೂರ್ಣಗೊಳಿಸಲಿದ್ದೇವೆ, ಸಂಗೀತ್ ನಿರ್ದೇಶಕ ಅರ್ಜುನ್ ಜನ್ಯ ಜೊತೆಗೂಡಿ ಕೆಲಸ ಪುನಾರಂಭಿಸಲಿದ್ದೇವೆ ಎಂದು ನಿರ್ದೇಶಕ ಹರ್ಷ ತಿಳಿಸಿದ್ದಾರೆ. ಇಂದಿನಿಂದ…

೨೫ ಲಕ್ಷ ಗ್ರಾಮೀಣ ಮನೆಗಳಿಗೆ ನೀರು ಒದಗಿಸಲು ಸಿಎಂ ಸೂಚನೆ

ಪ್ರತಿಮನೆಗೂ ಕುಡಿಯುವ ನೀರಿನ ಸೌಲಭ್ಯ ಒದಿಸುವ ಮಹತ್ವಾಕಾಂಕ್ಷೆಯ ಜಲಜೀವನ್ ಮಿಷನ್ ಯೋಜನೆಯಡಿ ೨೫ ಲಕ್ಷ ಗ್ರಾಮೀಣ ಮನೆಗಳಿಗೆ ನೀರು ಒದಿಸುವ ಕುರಿತು ಇಂದು ನಡೆದ ಸಭೆಯಲ್ಲಿ ಕೂಡಲೇ ನೀರು ಒದಗಿಸುವಂತೆ ಅಧಿಕಾರಿಗೆ ಸಿಎಂ ಸೂಚಿಸಿದ್ದಾರೆ. ಬೆಂಗಳೂರು, ಜೂ.೨೨: ಜಲಜೀವನ್ ಮಿಷನ್ ಯೋಜನೆಯಡಿ ೨೫ಲಕ್ಷ ಗ್ರಾಮೀಣಭಾಗದ ಮನೆಗಳಿಗೆ ಕುಡಿಯುವ ನೀರು ಬದಗಿಸುವಂತೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಜಲಜೀವನ್ ಮಿಷನ್ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದ ಅವರು,…

ವಿಷಯ-ವಿಷಯವಾಸನೆ-ಇಂದ್ರಿಯನಿಗ್ರಹ

ವಿಷಯ-ವಿಷಯವಾಸನೆ-ಇಂದ್ರಿಯನಿಗ್ರಹ. ನೇರಳೆ ಹಣ್ಣಿನ ರಾಶಿಯ ಬಗ್ಗೆ ಆಡಿದ ಸಿದ್ಧನ ಮಾತು, ಹುಡುಗರ ಜ್ಞಾನದ ಕಣ್ಣನ್ನು ತೆರೆಸಿತು! ಈಶನನ್ನು ,ಈಶರೂಪಿ ಸಿದ್ಧನನ್ನು ಮರೆತಿದ್ದಕ್ಕೆ ಮರುಕಪಟ್ಟರು. ” ತಾವು ತಪ್ಪು ಮಾಡಿರುವುದರಿಂದ ಇನ್ನು ಹಣ್ಣು ತಿನ್ನುವುದು ಬೇಡ, ಇವುಗಳನ್ನು ಇಲ್ಲಿಯೇ ಬಿಟ್ಟು ಮನೆಗೆ ಹಿಂದಿರುಗೋಣ” – ಎಂದರು. ಆಗ ಸಿದ್ಧ ಹೇಳಿದನು; ” ಹಣ್ಣು ಬಿಡಬಹುದು, ಆದರೆ ಅವುಗಳನ್ನು ನೋಡುವ ಕಣ್ಣುಗಳನ್ನು ಬಿಡಲಾಗದು”. ಹಣ್ಣು ಹೆಣ್ಣು ಗಂಡು ಹೊನ್ನು ಮಣ್ಣು ಮತ್ತೊಂದು ಇವೆಲ್ಲ ವಿಷಯಗಳು . ಈ ಎಲ್ಲಾ ಪ್ರಾಪಂಚಿಕ…

ಪ್ರಕೃತಿ,ಮಾನವಸಂಘರ್ಷ ಕುರಿತ ಹೊಸ ಚಿತ್ರ

ಪ್ರಕೃತಿ ಮತ್ತು ಮನುಷ್ಯನ ನಡುವಿನ ಸಂಘರ್ಷ ಕುರಿತ ಕತೆಯೊಂದನ್ನು ರಿಷಿಬ್ ಶೆಟ್ಟಿ ಸಿನಿಮಾ ಮಾಡಲಿದ್ದಾರೆ.ಹಾಗಂತ ಟ್ವೀಟ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. ಮತ್ತೊಂದು ಹೊಸ ಚಿತ್ರ ಮಾಡುತ್ತಿದ್ದೆನೆ ನಿಮ್ಮ ಪ್ರೀತಿ,ವಿಶ್ವಾಸ ಹಾರೈಕೆ ಹೀಗೆಯೇ ಇರಲಿ ಎಂದು ಅವರು ಕೋರಿಕೊಂಡಿದ್ದಾರೆ ಕೋವಿಡ್ ಎರಡನೇ ಅಲೆಯ ವೇಳೆ ನನ್ನ ಊರಿನಲ್ಲಿ ನಾನು ಕ್ಯಾಂಪಿಂಗ್ ಮಾಡುವಾಗ ಹೊಳೆದ ಕಥೆ ಇದಾಗಿದೆ, ಶೀಘ್ರದಲ್ಲೆ ಕಥೆಯ ಬಗ್ಗೆ ಅಧಿಕೃತವಾಗಿ ಹೆಚ್ಚಿನ ವಿವರ ಹಂಚಿಕೊಳ್ಳುವೆ ಎಂದು ಹೇಳಿದ್ದಾರೆ. ದೊಡ್ಡ ಬಜೆಟ್ ಸಿನಿಮಾ ಮಾಡಲು ರಿಷಬ್ ಶೆಟ್ಟಿ ಪ್ಲಾನ್ ಮಾಡಿದ್ದಾರೆ.,…

ಮೆಟ್ರೋದಲ್ಲಿ ಜುಲೈನಿಂದ ಟೋಕನ್ ವ್ಯವಸ್ಥೆ ಜಾರಿ?

ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಮೆಟ್ರೋದಲ್ಲಿ ಟೋಕನ್ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿತ್ತು ಇದರಿಂದ ಸಾವಿರಾರು ಪ್ರಯಾಣಿಕರಿಗೆ ಅನಾನುಕೂಲವಾಗಿತ್ತು ಈಗ ಜುಲೈತಿಂಗಳಲ್ಲಿ ಮೆಟ್ರೋ ಟೋಕನ್ ವ್ಯವಸ್ಥೆ ಜಾರಿಗೊಳಿಸುವ ಕುರಿತು ಸರ್ಕಾರ ಹೇಳಿದೆ ಬೆಂಗಳೂರು, ಜೂ, ೨೨;ಕೊರೊನಾ ಒಂದನೇ ಅಲೆಯಿಂದ ಮೆಟ್ರೋ ಪ್ರಯಾಣಿಕರಿಗೆ ಟೋಕನ್ ವ್ಯವಸ್ಥೆ ಇಲ್ಲದೆ ಸಂಚಾರಕ್ಕೆ ತೊಂದರೆಯಾಗಿದ್ದು ಮುಂದಿನ ಮಾರ್ಗಸೂಚಿ ಅನ್ವಯ ಬಹುತೇಕ ಅಥವ ಜುಲೈ ಒಂದರಿಂದ ಟೋಕನ್ ವ್ಯವಸ್ಥೆಯನ್ನು ಕಲ್ಪಿಸುವ ಸಾದ್ಯತೆಗಳಿವೆ ಎಂದು ಸರ್ಕಾರ ಹೇಳಿದೆ. ಕಳೆದ ವರ್ಷದ ಲಾಕ್ ಡೌನ್ ನಂತರ ಕೇವಲ ಮೆಟ್ರೋ ಕಾರ್ಡ್ ದಾರರಿಗೆ…

ಶ್ರೀ ಮೈಲಾರಲಿಂಗೇಶ್ವರ ಕಾರ್ಣೀಕದ ಗೊರವಯ್ಯ ಮಾಲತೇಶಪ್ಪ ನಿಧನ

ಹೂವಿನ ಹಡಗಲಿ,ಜೂ,22: ತಾಲೂಕಿನ ಸುಕ್ಷೇತ್ರ ಮೈಲಾರ ಲಿಂಗೇಶ್ವರ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಇಂದು ಬೆಳಗಿನಜಾವ ನಿಧನರಾದರು. 31 ವರ್ಷ ಕಾಲ ಕಾರ್ಣಿಕ ನುಡಿದಿದ್ದ ಮಾಲತೇಶಪ್ಪ ಅವರು ಕೆಲ ವರ್ಷಗಳಿಂದ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದರು. ಸಂಕಷ್ಟದಲ್ಲಿದ್ದ ಗೊರವಯ್ಯ ಮಾಲತೇಶಪ್ಪ ಅವರಿಗೆ ಮನೆ ನಿರ್ಮಿಸಿಕೊಡಲು ನಾಡಿನ ಜನರು ಸಹಾಯಹಸ್ತ ಚಾಚಿದ್ದರು. ಆದರೆ ಮನೆ ನಿರ್ಮಾಣ ಆಗುವ ಮುನ್ನವೇ ಇಹಲೋಕ ತ್ಯಜಿಸಿದ್ದಾರೆ. ಮಾಲತೇಶಪ್ಪ ನಿಧನಕ್ಕೆ ನಾಡಿನ ಹಲವಾರು ಮಠಾಧೀಶರು,ಸ್ವಾಮೀಜಿಗಳು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಕೋವಿಡ್ ಲಸಿಕೆ ಪಡೆದುಕೊಳ್ಳಲು ಸಲಹೆ : ಅನಿತಾ ಕುಮಾರ್ ಸ್ವಾಮಿ

ರಾಮನಗರ, ಜೂ, 22: ಲಸಿಕೆ ತಗೆದುಕೊಳ್ಳುವುದರಿಂದ ಕೋವಿಡ್ ಬಂದರು ಸಹ ಆರೋಗ್ಯದ ಮೇಲೆ ಹೆಚ್ಚು ಪರಿಣಾಮ ಬೀರದಂತೆ ನಿಯಂತ್ರಿಸುತ್ತದೆ. ರಾಮನಗರ ಜಿಲ್ಲೆಯ ಎಲ್ಲಾ ಜನರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದುಕೊಳ್ಳಿ ಹಾಗೂ ನಿಮ್ಮ ಸುತ್ತಮುತ್ತಲಿನ ಜನರಿಗೂ ಸಹ ಲಸಿಕೆ ಪಡೆಯುವಂತೆ ಪ್ರೋತ್ಸಾಹಿಸಿ ಎಂದು ರಾಮನಗರ ತಾಲ್ಲೂಕು ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿತಾ ಕುಮಾರ್ ಸ್ವಾಮಿ ಅವರು ತಿಳಿಸಿದ್ದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಹಯೋಗದಲ್ಲಿ ನಡೆದ…

ಶಾಲೆ ಆರಂಭ ಕುರಿತ ವರದಿ ಸಲ್ಲಿಸಿದ ತಜ್ಞರ ಸಮಿತಿ

ಸರ್ಕಾರ ಆಯಾ ಪ್ರದೇಶದಲ್ಲಿ ಸುರಕ್ಷತೆ ಬಗ್ಗೆ ಅರಿತು ಸ್ಥಳೀಯವಾಗಿ ನಿರ್ಧಾರ ಮಾಡಬೆಕು ಎಂದಿರುವ ಅರು ಕೊರೊನಾ ಇಳಿಮುಖವಾಗಿದೆ ಎಂಬ ಒಂದೇ ಒಂದು ಕಾರಣಕ್ಕೆ ಏಕಾ ಏಕಿ ನಿರ್ಧಾರಕ್ಕೆ ಬರುವುದು ಸೂಕ್ತವಲ್ಲ ಎಂದು ವರದಿಯಲ್ಲಿ ತಿಳಿಸಿದೆ ಬೆಂಗಳೂರು,ಜೂ.೨೨:ಮಕ್ಕಳಿಗೆ ಶಾಲೆ ಪುನರಾರಂಭ ಮಾಡುವುದರಿಂದ ಉಪಯೋಗ ಮತ್ತು ಸಮಸ್ಯೆ ಎರಡೂ ಇವೆ ಎರಡನ್ನು ಕೂಲಂಕುಷವಾಗಿ ಪರಿಶೀಲಿಸಿ ಶಾಲೆ ಆರಂಭ ಮಾಡಬೇಕೆ ಬೇಡವೇ ಎನ್ನುವ ಕುರಿತು ನಿರ್ಧಾರ ಮಾಡಬಹುದು. ಇದು ಡಾ.ದೇವಿಶೆಟ್ಟಿ ನೇತೃತ್ವದ ಮೂರನೇ ಅಲೆ ಸಿದ್ದತೆ ಕುರಿತು ರಚಿಸಿರುವ ಉನ್ನತ ಮಟ್ಟದ…

ಮತ್ತೇ ಬಿಜೆಪಿಯ ಆಂತರ್ಯದ ನಿಗೂಢತೆ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಸಿಟಿ ರವಿ

ಮೋಡ ಸೂರ್ಯನನ್ನು ಮರೆಮಾಚಿದರೂ ಎಷ್ಟು ಕಾಲ ಎಂದು ಬಿಜೆಪಿಯೊಳಗಿನ ಬೆಳವಣಿಗೆ ಕುರಿತು ಮತ್ತೇ ಒಳಾರ್ಥದ ನಿಗೂಢತೆಯ ಬಗ್ಗೆ ಹೇಳುತ್ತಲೇ ,ನಾನು ನೀಡಿದ ಹೇಳಿಕೆಸದುದ್ದೇಶದಿಂದ ಕೂಡಿರುತ್ತದೆ ಯಾವುದೇ ದುರುದ್ದೇಶವಿಲ್ಲ ಎನ್ನುವ ಮೂಲಕ ಎಲ್ಲರಲ್ಲಿ ಮತ್ತಷ್ಟು ಅಚ್ಚರಿಯನ್ನು ಸಿ ಟಿ ರವಿ ಮೂಡಿಸಿದ್ದಾರೆ. ಬೆಂಗಳೂರು,ಜೂ,೨೧: ಮೋಡ ಸೂರ್ಯನನ್ನು ಮರೆ ಮಾಚಿದರೂ ಎಷ್ಟು ಕಾಲ? ಕೆಲವು ಕಾಲ ಮಾತ್ರ ಸಾಧ್ಯ. ನಾನು ಹೇಳಿದ್ದನ್ನು ಅವರವರು ಹೇಗೆ ಗ್ರಹಿಸುಯತ್ತಾರೋ ಹಾಗೆಯೇ ಅದರ ಅರ್ಥವಾಗುತ್ತದೆ. ಒಳ್ಳೆಯ ದೃಷ್ಟಿಯಿಂದ ಗ್ರಹಿಸಿದರೆ ಒಳ್ಳೆಯದ್ದಾಗುತ್ತದೆ. ಕೆಟ್ಟ ದೃಷ್ಟಿಯಿಂದ…

ತೃತೀಯ ರಂಗ ರಚನೆಗೆ ಪುಷ್ಟಿ ನೀಡಿದ ಕಿಶೋರ್ ,ಶರದ್ ಪವಾರ್ ಮಾತುಕತೆ

ಬಿಜೆಪಿಯೇತರ ತೃತೀಯ ರಂಗ ಉದಯವಾಗಲಿದೆ ಎಂಬ ಉಹಾಪೋಗಳ ಮಧ್ಯೆ ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಮತ್ತು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ನಡೆಸಿದ ಮಾತುಕತೆ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತದೆ ನವದೆಹಲಿ,ಜೂ,21: ಬಿಜೆಪಿಯೇತರ ತೃತೀಯ ರಂಗ  ರಚನೆಯಾಗುವ ಲಕ್ಷಣಗಳು ಇತ್ತೀಚಗೆ ಬಲವಾಗಿ ಗೋಚರಿಸುತ್ತವೆ. ಇದಕ್ಕೆ ಪುಷ್ಟಿ ನೀಡುವಂತೆ ರಸಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಎನ್ ಸಿಪಿ ಮುಖ್ಯಸ್ಥ ಶರದ್ ಪವರ್ ಜತೆ ಮಾತುಕತೆ ನಡೆಸಿರುವುದು ಮತ್ತಷ್ಟು ಊಹಾಪೋಹಗಳು ಎದ್ದಿವೆ. ಶರದ್ ಪವಾರ್ ಅವರ ನಿವಾಸದಲ್ಲಿ…

1 86 87 88 89 90 112
Girl in a jacket