Girl in a jacket

Author kendhooli_editor

ಪ್ರಾಥಮಿಕ ಶಾಲಾ ಗುರುಗಳ ತಾಳ್ಮೆ ಮತ್ತು ಅವರ ನೀತಿ ಪಾಠ

ಪ್ರಾಥಮಿಕ ಶಾಲಾ ಗುರುಗಳ ತಾಳ್ಮೆ ಮತ್ತು ಅವರ ನೀತಿ ಪಾಠ ಈ ಹೊತ್ತು ನನ್ನ ಮನಸ್ಸು  ಬಾಲ್ಯದ ದಿನಗಳತ್ತ ಮುಖ ಮಾಡಿದೆ. ಬಾಲ್ಯದ ದಿನಗಳು ಎಂದಾಕ್ಷಣ ನನ್ನ ಮನಸ್ಸಿನಲ್ಲಿ ಮೂಡುವುದು ಪ್ರೈಮರಿ ಸ್ಕೂಲಿನ ದಿನಗಳು. ಆ ಹೊತ್ತಿನ ಗೆಳೆಯರ, ಗುರುಗಳ ನೆನಪುಗಳು ದಶಕಗಳ ನಂತರವೂ ಹಸಿರಾಗಿರುವುದು ಬಾಲ್ಯವನ್ನು ಪ್ರತಿಯೊಬ್ಬರೂ ಹೇಗೆ ತಮ್ಮ ಮನದ ಮೂಲೆಯಲ್ಲಿ ಜತನದಿಂದ ಜೋಪಾನವಾಗಿ ಕಾಪಾಡಿಕೊಂಡು ಬಂದಿರುತ್ತಾರೆ ಎನ್ನುವುದರ ಸೂಚಕವಾಗಿದೆ. ಶಾಲೆಗೆ ಸೇರುವ ಪೂರ್ವದಲ್ಲಿ ನನಗೆ ಗೆಳೆಯರು ಅಂತಹ ಯಾರೂ ಇರಲಿಲ್ಲ. ನನಗಿಂತ ಸುಮಾರು…

ಕಸ-ರಸ

                    –  ಶ್ರೀ ಡಾ. ಆರೂಢಭಾರತೀ ಸ್ವಾಮೀಜಿ                                      ಸಿದ್ಧಸೂಕ್ತಿ :                                       ಕಸ-ರಸ.…

ಪ್ರಹ್ಲಾದ್ ಜೋಶಿ ,ಸಿ.ಟಿ.ರವಿ ಗೆ ಒಲಿಯಲಿದೆ ಸಿಎಂ ಪಟ್ಟ?

ಬೆಂಗಳೂರು,ಜು,24:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡುವುದು ಖಚಿತವಾಗುತ್ತಿದ್ದಂತೆ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವುದು ಕೂಡ ಸ್ಪಷ್ಟವಾಗುತ್ತದೆ. ದೆಹಲಿಯ ಬಿಜೆಪಿ ಪಕ್ಷದಲ್ಲಿ ನಡೆದ ಕೆಲ ಸಂಭ್ರಮಗಳ ಗಮನಿಸಿದರೆ ರಾಜ್ಯದ ನಾಯಕರ ನಡುವಳಿಕೆಗಳ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವುದನ್ನು ಖಚಿತಪಡಿಸುತಿತ್ತು.. ಹೌದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಸಿ.ಟಿ.ರವಿ ಅವರನ್ನು ರಾಜ್ಯ ನಾಯಕರು ಗೌಪ್ಯವಾಗಿ ಬೇಟಿಯಾಗಿ ಸಂಭ್ರಮಿಸಿದ್ದು ಪುಷ್ಟಿನೀಡುವಂತಿತ್ತು. ವರಿಷ್ಠರು ‘ಅಚ್ಚರಿಯ ಅಭ್ಯರ್ಥಿ’ಯನ್ನೇ ಆಯ್ಕೆ ಮಾಡುವ ಸಾಧ್ಯತೆಯೇ ಹೆಚ್ಚು ಎಂಬ ಮಾತುಗಳೇ ಕೇಳಿ ಬಂದಿದ್ದು,ಅತ್ತ ಸಂಸತ್‌ನಲ್ಲಿ ಸಂಸದೀಯ ವ್ಯವಹಾರಗಳ ಖಾತೆ…

ವೀಳೆಯ ಮತ್ತು ರಣವೀಳ್ಯವೂ ..

ವೀಳೆಯ ಮತ್ತು ರಣವೀಳ್ಯವೂ .. ವೀಳೆಯವು ಪರಂಪರಾಗತ ರೂಢಿ, ಸಂಪ್ರದಾಯಗಳ ಭಾಗವೇ ಆಗಿ ಬೆಳೆದುಬಂದಿರುವುದು ತಿಳಿದ ಸಂಗತಿ. ದೇವರ ನೈವೇದ್ಯವಾಗಿ, ಅಲಂಕಾರಿಕ ಸಾಮಗ್ರಿಯಾಗಿ ಎಲೆಪೂಜೆಯೆಂದೂ, ಮದುವೆಯ ಒಪ್ಪಂದಕ್ಕೆ ಮಹತ್ವದ ಪರಿಕರವಾಗಿಯೂ ಹಾಸುಹೊಕ್ಕಿದೆ. ವಿವಾಹ ಕಾರ್ಯಚಟುವಟಿಕೆಗಳಲ್ಲಿ ವೀಳೆಯಶಾಸ್ತ್ರ, ಈಳೆಶಾಸ್ತ್ರವೆಂದೇ ಜನಜನಿತವಾಗಿದೆ. ಈ ಶಾಸ್ತ್ರವೇ ಗಂಡುಹೆಣ್ಣಿನ ಮಾತುಕತೆಯ ಅಂತಿಮ ರೂಪ, ವೀಳೆಯ ಎಂಬುದು ಎಲೆ-ಅಡಕೆಗಳ ಸಂಯುಕ್ತ ರೂಪ. ಇದನ್ನು ತಾಂಬೂಲವೆಂದೇ ಕರೆಯುತ್ತೇವೆ. ಇದು ದೇಹದ ಆರೋಗ್ಯಕ್ಕೆ ಮದ್ದು ವೀಳೆಯ ದೇಹ ಮತ್ತು ಮನಸ್ಸಿಗೆ ಮುದ ನೀಡುವ ಪ್ರಮುಖ ಸಾಧನ. ತಾಂಬೂಲವು…

ಇರುವಕ್ಕಿಯಲ್ಲಿ ನೂತನ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಉದ್ಘಾಟನೆ

ಬೆಂಗಳೂರು,ಜು.24:ಶಿವಮೊಗ್ಗ ಜಿಲ್ಲೆಯ ಸಾಗರ  ತಾಲೂಕಿನ ಇರುವಕ್ಕಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವಕೃಷಿ   ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯವನ್ನು ಸಿ.ಎಂ ಬಿ.ಎಸ್.ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ಮೂಲಕ ಉದ್ಘಾಟಿಸಿದರು. ಈ ನೂತನ ಕೃಷಿ   ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಎಂದು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಕೃಷಿ ಸಚಿವ ಬಿ.ಸಿ.ಪಾಟೀಲ್ ಮಾತನಾಡಿ,ಮಲೆನಾಡು , ಅರೆ ಮಲೆನಾಡು , ಬಯಲುಸೀಮೆ ಮತ್ತು ಕರಾವಳಿ ಪ್ರದೇಶಗಳಿಗೆ ವಿಶೇಷವಾದ ಹಾಗೂ ಕೃಷಿ , ತೋಟಗಾರಿಕೆ ಹಾಗೂ…

ಸೈಲೆಂಟ್ ಸುನೀಲ್ ಸೇರಿ 58 ರೌಡಿಗಳ ಮನೆ ಮೇಲೆ ಸಿಸಿಬಿ ಪೊಲೀಸರ ದಾಳಿ

ಬೆಂಗಳೂರು, ಜು,24: ನಗರದ ನಟೋರಿಯಸ್ ರೌಡಿ ಸೈಲೆಂಟ್ ಸುನೀಲ ಸೇರಿದಂತೆ58 ರೌಡಿಗಳ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿನಡೆಸಿದ್ದಾರೆ. ರೌಡಿಗಳ ಕಾಳುಗಳನ್ನು ಹತ್ತಿಕ್ಕಲು ಮುಂದಾಗಿರುವ ಪೊಲೀಸರು ಈ ದಾಳಿ ನಡೆಸಿದ್ದು ಈ ವೇಲಕೆ 28 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗಷ್ಟೇ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಹಾಗೂ ಹಲವು ರೌಡಿಗಳ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ಮಾರಕಾಸ್ತ್ರ ಹಾಗೂ ಗಾಂಜಾ ಜಪ್ತಿ ಮಾಡಿದ್ದರು. ರೌಡಿಗಳಾದ ವಿಲ್ಸನ್ ಗಾರ್ಡನ್ ನಾಗ, ಸೈಕಲ್ ರವಿ, ಸೈಲೆಂಟ್ ಸುನೀಲ್,…

ನಟ ಬಾಲಕೃಷ್ಣ ಹಾಸ್ಯ ಸಂಭಾಷಣೆ ಬರೆದಚಿತ್ರದೈವಸಂಕಲ್ಪ

ನಟ ಬಾಲಕೃಷ್ಣ ಹಾಸ್ಯ ಸಂಭಾಷಣೆ ಬರೆದಚಿತ್ರದೈವಸಂಕಲ್ಪ ಎಂ.ಬಿ.ಗಣೇಶ್ ನಿರ್ದೇಶನದ, ಮಹಾತ್ಮ ಪಿಕ್ಚರ್ ಲಾಂಛನದಡಿ ಡಿ.ಶಂಕರಸಿಂಗ್ ನಿರ‍್ಮಾಣ ಮಾಡಿದದೈವಸಂಕಲ್ಪಕಪ್ಪು-ಬಿಳುಪು ಸಾಮಾಜಿಕಚಿತ್ರ ೧೯೫೬ರಲ್ಲಿ ತೆರೆಕಂಡಿತು. ಉದಯಕುಮಾರ್, ಸೂರ್ಯಕಲಾ, ರಾಜಕುಮಾರಿ, ಹೆಚ್.ಪಿ.ಸರೋಜಾ, ಸರೋಜಮ್ಮ, ಲಕ್ಷ್ಮೀದೇವಿ, ಎಂ.ಎಸ್.ಸುಬ್ಬಣ್ಣ, ಟಿ.ಎನ್. ಬಾಲಕೃಷ್ಣ, ಹನುಮಂತಾಚಾರ್, ಮಾ. ಹಿರಣ್ಣಯ್ಯ ಅಭಿನಯಿಸಿದರು.ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಗೀತೆಗಳನ್ನು ಎಂ.ನರೇಂದ್ರಬಾಬು ರಚಿಸಿದರು. ಸಂಭಾಷಣೆಯಲ್ಲಿ ಹಾಸ್ಯಜೋಡಣೆಯನ್ನು ನಟ ಟಿ.ಎನ್.ಬಾಲಕೃಷ್ಣ ಬರೆದುಕೊಟ್ಟರು. ಪಿ.ಶಾಮಣ್ಣ ಸಂಗೀತ ನಿರ್ದೇಶನ ಮಾಡಿದಚಿತ್ರದಲ್ಲಿ ೧೦ ಹಾಡುಗಳನ್ನು ಆಳವಡಿಸಲಾಗಿತ್ತು.ಚಿತ್ರ ಮೈಸೂರಿನ ಪ್ರೀಮಿಯರ್ ಸ್ಟುಡಿಯೊದಲ್ಲಿಚಿತ್ರೀಕರಣಗೊಂಡಿತು. ತಾನೊಂದು ಬಗೆದರೇದೈವತಾ ಬೇರೊಂದ ಬಗೆವುದು ಎಂಬ…

ಕರಕುಶಲಕರ್ಮಿಗಳಿಗೆ ಪ್ರೋತ್ಸಾಹ ಅಗತ್ಯ: ನಟಿ ರಾಜೇಶ್ವರಿ

ಬೆಂಗಳೂರು ಜುಲೈ 24: ಕರೋನಾ ಸಾಂಕ್ರಾಮಿಕದ ಲಾಕ್‌ಡೌನ್‌ ನಿಂದ ತೀವ್ರ ತೊಂದರೆಗೀಡಾಗಿರುವ ಕರಕುಶಲಕರ್ಮಿಗಳಿಗೆ ಪ್ರೋತ್ಸಾಹದ ಅಗತ್ಯವಿದೆ ಎಂದು ನಟಿ ರಾಜೇಶ್ವರಿ ಅಭಿಪ್ರಾಯಪಟ್ಟರು. ನಗರದ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ  ಆಯೋಜಿಸಲಾಗಿರುವ ಇಂಡಿಯನ್‌ ಆರ್ಟಿಸನ್ಸ್‌ ಬಜಾರ್‌ ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕರೋನಾ ಎರಡನೇ ಅಲೆಯಲ್ಲಿ ಸೂಕ್ತ ಮಾರುಕಟ್ಟೆ ಇಲ್ಲದೆ ತೊಂದರೆಗೀಡಾಗಿದ್ದು ಕರಕುಶಲಕರ್ಮಿಗಳು. ಕರ್ನಾಟಕ ಚಿತ್ರಕಲಾ ಪರಿಷತ್ತಿನಲ್ಲಿ ಆಗಾಗ್ಗೆ ಆಯೋಜಿಸಲಾಗುತ್ತಿದ್ದ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳ ಬಹಳಷ್ಟು ಕರಕುಶಲಕರ್ಮಿಗಳಿಗೆ ಅಗತ್ಯ ಪ್ರದರ್ಶನ ಹಾಗೂ ಮಾರಾಟದ ವೇದಿಕೆಯನ್ನು ಒದಗಿಸುತ್ತಿತ್ತು.…

ಪೆಗಸಸ್ ಬೇಹುಗಾರಿಕೆ- ಜನತಂತ್ರದ ಬುಡಮೇಲು ಕೃತ್ಯ

ಪೆಗಸಸ್ ಬೇಹುಗಾರಿಕೆ- ಜನತಂತ್ರದ ಬುಡಮೇಲು ಕೃತ್ಯ ಭೀಮಾ ಕೋರೆಗಾಂವ್ ಆಪಾದಿತರ ಪೈಕಿ ಒಬ್ಬರಾದ ರೋನಾ ವಿಲ್ಸನ್ ಅವರ ಕಂಪ್ಯೂಟರಿನಲ್ಲಿ ಅಜ್ಞಾತ ಹ್ಯಾಕರ್ ಒಬ್ಬನು ಮೂವತ್ತು ದಸ್ತಾವೇಜುಗಳನ್ನು ’ನೆಟ್ಟಿದ್ದ’ ನೆಂದು ವಾಷಿಂಗ್ಟನ್ ಪೋಸ್ಟ್ ಈ ವರ್ಷದ ಶುರುವಿನಲ್ಲಿ ವರದಿ ಮಾಡಿತ್ತು. ಆರ್ಸೆನಾಲ್ ಕನ್ಸಲ್ಟಿಂಗ್ ಎಂಬ ವಿಧಿವಿಜ್ಞಾನ ಸಂಸ್ಥೆಯ ತನಿಖೆಯನ್ನು ಈ ವರದಿ ಆಧರಿಸಿತ್ತು. ಕಳೆದ ತಿಂಗಳು ಇದೇ ವಿಧಿವಿಜ್ಞಾನ ಸಂಸ್ಥೆ ಆಪಾದಿತರಲ್ಲಿ ಒಬ್ಬರಾದ ಸುರೇಂದ್ರ ಗಾಡ್ಲಿಂಗ್ ಎಂಬ ದಲಿತ ಹಕ್ಕುಗಳ ಹೋರಾಟಗಾರರ ಕಂಪ್ಯೂಟರಿನ ಹಾರ್ಡ್ ಡ್ರೈವ್ ನ್ನು ವಿಶ್ಲೇಷಿಸಿತ್ತು.…

ಒಲಿಂಪಿಕ್ಸ್; ಮೊದಲ ದಿನವೇ ಬೆಳ್ಳಿಪದಕ ಗೆದ್ದ ಮೀರಾ

ಟೋಕಿಯೋ,ಜು,೨೪: ಟೋಕಿಯೊ ಒಲಿಂಪಿಕ್ಸ್ -೨೦೨೦ರಲ್ಲಿ ಭಾರತದ ಪದಕ ಬೇಟೆಯ ಅಭಿಯಾನ ಆರಂಭವಾಗಿದೆ. ಜಪಾನ್ ನ ಟೋಕಿಯೊ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಡೆದ ಮಹಿಳಾ ೪೯ ಕೆಜಿ ವಿಭಾಗದಲ್ಲಿ ವೇಟ್ ಲಿಫ್ಟರ್ ಸೈಖೋಮ್ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ. ೪೯ ಕೆ ಜಿ ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ನಾಲ್ಕು ಸುತ್ತಿನ ಪ್ರಯತ್ನಗಳಲ್ಲಿ ಚಾನು ಒಟ್ಟು ೨೦೨ ಕೆಜಿ  ಎತ್ತಿದ್ದಾರೆ. ಚೀನಾದ ಝಿಹೈ ಹು ಒಟ್ಟು ೨೧೦ ಕೆಜಿ ತೂಕ ಎತ್ತಿ ಚಿನ್ನದ ಪದಕ ಗಳಿಸಿ ಹೊಸ ಒಲಿಂಪಿಕ್…

ಟೋಕಿಯೋದಲ್ಲಿ ವಿದ್ಯುಕ್ತ ಚಾಲನೆಗೊಂಡ ಒಲಿಂಪಿಕ್ಸ್

ಟೋಕಿಯೋ,ಜು,23:ಕೊರೊನಾ ಸಂಕಷ್ಟದ ನಡುವೆ ಮುಂದಾಡಲಾಗಿದ್ದ ಒಲಿಂಪಿಕ್ಸ್ 2020 ಕೊನೆಗೂ ಇಲ್ಲಿನ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಜಗಮಗಿಸುವ ವಿದ್ಯುತ್ ಅಲಂಕಾರಗಳೊಂದಿಗೆ ವಿದ್ಯುಕ್ತ ಚಾಲನೆ ದೊರಕಿತು. ಜಪಾನ್‌ನ ರಾಜಧಾನಿ ಟೋಕಿಯೋದಲ್ಲಿ 32ನೇ ಒಲಿಂಪಿಯಾಡ್ ಕ್ರೀಡಾಕೂಟ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ನಡೆದಿದೆ. ಜಪಾನ್‌ನ ಖ್ಯಾತ ಟೆನಿಸ್ ಆಟಗಾರ್ತಿ ನವೋಮಿ ಒಸಾಕಾ ಈ ಬಾರಿಯ ಒಲಿಂಪಿಕ್ಸ್‌ಗೆ ವಿದ್ಯುಕ್ತ ಚಾಲನೆ ನೀಡಿದ್ದಾರೆ. ಟೋಕಿಯೋದಲ್ಲಿರುವ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಶುಕ್ರವಾರ ಟೋಕಿಯೋ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ನಡೆಯಿತು. ಈ ವೇಳೆ ಒಲಿಂಪಿಕ್ಸ್ ದೀಪಕ್ಕೆ ಅಗ್ನಿ ಸ್ಪರ್ಶ ಮಾಡುವ ಮೂಲಕ…

ಗುರುಸ್ಸಾಕ್ಷಾತ್ ಪರಂ ಬ್ರಹ್ಮ

ಶ್ರೀ. ಡಾ.ಆರೂಢಭಾರತೀ ಸ್ವಾಮೀಜಿ ಸಿದ್ಧಸೂಕ್ತಿ : ಗುರುಸ್ಸಾಕ್ಷಾತ್ ಪರಂ ಬ್ರಹ್ಮ. ಗುರುವು ಸಾಕ್ಷಾತ್ ಪರಬ್ರಹ್ಮ. ಗುರು ದೊಡ್ಡವ. ಅವನು ಬ್ರಹ್ಮ ವಿಷ್ಣು ಮಹೇಶ್ವರಸಮಾನ. ಅಜ್ಞಾನವನ್ನು ಕಳೆದು ಸುಜ್ಞಾನ ಬೆಳಗುವವನು ಸದ್ಗುರು. ವ್ಯಾಸ ಶಂಕರ ಮಹಾವೀರ ಬುದ್ಧ ಬಸವ ನಿಜಗುಣ ಸಿದ್ಧಾರೂಢ ಪರಮಹಂಸರಂಥವರು ಸದ್ಗುರುಗಳು. ವ್ಯಾಸರುದಿಸಿದ ದಿನ ಗುರುಪೂರ್ಣಿಮೆ. ಜೀವಕ್ಕೆ ಬೆಲೆ ಬರುವುದು ಸುಜ್ಞಾನದಿಂದ!ಕೆಲಸ ಮಾಡುವ ಮುನ್ನ ಬೇಕು ಅದರ ಜ್ಞಾನ – ಇಚ್ಛೆ – ಕೃತಿ. ಇದು ಜೀವಕ್ರಮ! ಬದುಕ ಬುನಾದಿ, ಬಾಳ ನೀಡುವ ಜ್ಞಾನದಾತ,…

ಮನ ತಾಕುವ ಮಂಡಕ್ಕಿಯ ಪುರಾಣವು…

ಮನ ತಾಕುವ ಮಂಡಕ್ಕಿಯ ಪುರಾಣವು… ತುಂತುರು ಮಳೆಗೆ ನೆಲವೆಲ್ಲಾ ನೆನೆದ ಸೆರಗಂತೆ ತಂಡಿ ಹಿಡಿದು ಎಲ್ಲವನ್ನೂ ಎಲ್ಲರನ್ನೂ ನಡುಗಿಸುತಿತ್ತು.ಸೂರ್ಯ ಹುಟ್ಟಿ ಕೈಗೆ ಕಾಫಿಯ ಬಿಸಿ ತಾಗಿ ಹಬೆಯೊಳೆ ತೇಲಿದಂತೆಲ್ಲಾ ಜೀವಗಳ ಸಂಚಾರ.ಬಿದುರು ಪುಟ್ಟಿ ಎತ್ತಿದೊಡನೆಯೇ ನೆಗೆ ನೆಗೆದು ಕುಣಿಯುತ್ತಾ…ತಾಯಿ ಕೋಳಿಯ ಜೊತೆಗೆ ಅಂಗಳದ ತುಂಬಾ ಹತ್ತಿಯ ಬಣ್ಣ ಬಣ್ಣದ ಉಂಡೆಗಳಂತೆ ಸುಳಿವ ಕೋಳಿಮರಿಗಳು,ಪುಟಾಣಿಗಳನ್ನೇ ಎಗರಿಸಿ ಹೊತ್ತೊಯ್ಯಲೆಂದೇ ಹೊಂಚು ಹಾಕುವ ಕಾಗೆಗಳು,ಎಲ್ಲೆಲ್ಲೋ ದೂರದ ಮೋಡಗಳಿಂದ ಬಾಣದಂತೆ ಬಂದೆರಗೋ ಹದ್ದುಗಳು.., ಕಪ್ಪು ನೀರು ಕವಿದ ತಿಪ್ಪೆಗುಂಡಿಯಲಿ ಪೈಪೋಟಿಗೆ ಬಿದ್ದು ವಟಗುಟ್ಟುವ…

ಅಡ್ಡ ಹೆಸರುಗಳು ಮತ್ತು ಕದಿರೆಪ್ಪ ಮಾಸ್ಟರ್

ಅಡ್ಡ ಹೆಸರುಗಳು ಮತ್ತು ಕದಿರೆಪ್ಪ ಮಾಸ್ಟರ್ ನಮ್ಮ ಶಾಲೆಯಲ್ಲಿ ಮುಖ್ಯ ಶಿಕ್ಷಕರು ದಪ್ಪನೆಯ.. ಕಪ್ಪನೆಯ.. ಎತ್ತರದ ವ್ಯಕ್ತಿ ಹೆಸರು ಹೇಳಿದರೇನೇ  ಮಕ್ಕಳೆಲ್ಲಾ ನಡುಗುತ್ತಿದ್ದೆವು.  ಅವರ ಹೆಸರು ಕದಿರೆಪ್ಪ ಮಾಸ್ಟರ್.  ಶಾಲೆಯ ವಿಸ್ತೀರ್ಣ ಬಹುಶಃ ಒಂದು ಎಕರೆ. ಶಾಲೆ ಚೌಕಾಕಾರದ ಆ ಬಯಲಿನಲ್ಲಿ ಒಂದು ಅಂಚಿನಲ್ಲಿ ಮಧ್ಯಕ್ಕೆ ನೆಲೆಗೊಂಡಿತ್ತು. ಶಾಲೇ ಎಲ್ ಆಕಾರದಲ್ಲಿ ಇತ್ತು. ಮುಂಭಾಗದ ಗೇಟಿನಿಂದ ಶಾಲೆ ಬಹಳ ಸುಂದರವಾಗಿ ಕಾಣುತ್ತಿತ್ತು. ಗೇಟಿನ ಮತ್ತು ಶಾಲೆಯ ಮಧ್ಯದ ಭಾಗದಲ್ಲಿ ಪುಟ್ಟ ಗಣೇಶನ ಗುಡಿ ಇತ್ತು.  ಅದಕ್ಕೆ…

ನಿನ್ನುದ್ಧಾರವೆಷ್ಟಾಯ್ತೋ ಮಂಕುತಿಮ್ಮ

ಸಿದ್ಧಸೂಕ್ತಿ : ನಿನ್ನುದ್ಧಾರವೆಷ್ಟಾಯ್ತೋ ಮಂಕುತಿಮ್ಮ. “ಮುಖ್ಯಮಂತ್ರಿಯಾದರೆ ಹಾಗೆ ಹೀಗೆ ಮಾಡುವೆ” ವಿದ್ಯಾರ್ಥಿಭಾಷಣ ರೋಚಕ, ನಿಜ ಜೀವನ ಶೋಚ್ಯ! ತಾನೊಂದು ಬಗೆದರೆ ದೈವವೊಂದು ಬಗೆವುದು! ಎಲ್ಲ ಅಂದುಕೊಂಡಂತೆ ಆದರೆ ದುಃಖವೆಲ್ಲಿ? ಏಳುವುದರೊಳಗೊಬ್ಬ ಕಾಲೆಳೆದು ಕೆಡವುವನು! ಬಗ್ಗುಬಡಿಯುವುದರೊಳಗೆ ತಾ ನೆಲಕಚ್ಚುವನು! ಇಲಿ ಬಂದಿತೆಂದರೆ ಹುಲಿ ಬಂದಿತೆಂಬ ರೀತಿ ವಿವಾದ ಹುಟ್ಟಿಸಿ ಹೆಸರ ಮಾಡುವನು, ನಿಜ ಬಯಲಾಗಲು ಮಾನಗೇಡಿ! ಜಗವ ಉದ್ಧರಿಸುವೆ ಎಂದು ಬೀಗುವನು, ತಾ ನಿಂತ ನೆಲೆಯೇ ಹೋಳು! ನಂಬಿ ಕೊಟ್ಟ, ಮುಳುಗಿತು! ನಂಬಿ ಕೈ ಹಿಡಿದ, ಕೈ ಕಳಚಿತು!…

ರಾಹುಲ್ ಗಾಂಧಿ ಜೊತೆ ಸಿದ್ದು ಪ್ರತ್ಯೇಕ ಮಾತುಕತೆ; ಪಕ್ಷದಲ್ಲಿ ತಳಮಳ

ಬೆಂಗಳೂರು, ಜು,21:ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಮುಂದಿನ ಸಿಎಂ ವಿಚಾರವಾಗಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಪ್ರತ್ಯೇಕವಾಗಿ ಮಾತನಾಡಿರುವುದು ಕಾಂಗ್ರೆಸ್ ನಾಯಕರಲ್ಲಿ ತಳಮಳಕ್ಕೆ ಕಾರಣವಾಗಿದೆ . ಮುಂದಿನ ಸಿಎಂ ವಿಚಾರವಾಗಿ ಸೃಷ್ಟಿಯಾಗಿರುವ ಬಿಕ್ಕಟ್ಟು ಪರಿಹರಿಸಕೆಂದೆ ದೆಹಲಿಗೆ ಕರೆಸಿಕೊಂಡು ಒಗ್ಗಟ್ಟಿನಲ್ಲಿ ಮುನ್ನಡೆಯಿರಿ ಎಂದು ಸೂಚಿಸಿದ್ದರಾದರೂ ಸಿದ್ದರಾಮಯ್ಯ ಜೊತೆಗಿನ ಪ್ರತ್ಯೇಕ ಮಾತುಕತೆ ಮಾತ್ರ ಎಲ್ಲರಲ್ಲೂ ಅಚ್ಚರಿಗೆ ಕಾರಣವಾಗಿದೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯಾದರೆ ಕಾಂಗ್ರೆಸ್‌ ಯಾವ ರೀತಿಯ ಹೆಜ್ಜೆ ಇಡಬಹುದು. ಮುಂದಿನ ಕಾರ್ಯತಂತ್ರ ಹಾಗೂ…

26ರಿಂದ ಡಿಗ್ರಿ ಕಾಲೇಜ್‌ ಆರಂಭ; ಈವರೆಗೆ 75% ವಿದ್ಯಾರ್ಥಿಗಳಿಗೆ ಲಸಿಕೆ: ಡಿಸಿಎಂ

ಬೆಂಗಳೂರು,ಜು,21: ಈ ತಿಂಗಳ 26ರಿಂದ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭವಾಗುತ್ತಿದ್ದು, ಈವರೆಗೆ ಉನ್ನತ ಶಿಕ್ಷಣ ವಿಭಾಗದ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರು ಆದ ಉಪ ಮಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು. ಬೆಂಗಳೂರಿನಲ್ಲಿ ಬುಧವಾರ ಟೊಕಿಯೋ ಒಲಿಂಪಿಕ್‌-2020 ಕ್ರೀಡಾಕೂಟದಲ್ಲಿ ಪಾಲ್ಗೊಂಡ ಕ್ರೀಡಾಪಟುಗಳಿಗೆ ಶುಭಕೋರುವ ವರ್ಚುಯಲ್‌ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಅವರು ಮಾಧ್ಯಮಗಳ ಮಾತನಾಡಿದರು. ಈಗಾಗಲೇ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮ ವೇಗವಾಗಿ ಸಾಗುತ್ತಿದೆ. ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ…

ನಾಯಕರನ್ನು ಭೇಟಿಯಾಗಲು ದೆಹಲಿಗೆ ಆಗಮಿಸಿದ ರೇಣುಕಾಚಾರ್ಯ

ನವದೆಹಲಿ, ಜು. ೨೧: ಬಿಎಸ್‌ವೈ ಅಧಿಕಾರಿದಂದ ಕೆಳಗಿಳಿಯುವುದು ಖಚಿತವಾಗುತ್ತಿದ್ದಂತೆ ಬಿಜೆಪಿ ನಾಯಕರು ದೆಹಲಿಗೆ ಬರುತ್ತಿದ್ದಾರೆ. ಇದರ ಭಾಗವಾಗಿ ಈಗ ಅವರ ಆಪ್ತ ರೇಣುಕಾಚಾರ್ಯ ಅವರು ದಿಡೀರ್ ನಿನ್ನೆ ರಾತ್ರಿ ಇಲ್ಲಿಗೆ ಆಗಮಿಸಿದ್ದಾರೆ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸದಂತೆ ನಡೆಯುತ್ತಿರುವ ಒತ್ತಡ ಹೇರುವ ತಂತ್ರದ ಮುಂದುವರಿದ ಭಾಗವಾಗಿ ರೇಣುಕಾಚಾರ್ಯ ಅವರು ದೆಹಲಿಗೆ ಆಗಮಿಸಿದ್ದು ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ಹಿನ್ನಲೆಯಲ್ಲಿ ಅವರು ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್…

ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಇಂದು ವಿದ್ಯುಕ್ತ ಚಾಲನೆ

ಟೋಕಿಯೋ,ಜು, ೨೧:ಕೊನೆಗೂ ಒಂದು ವರ್ಷದ ಬಳಿಕ ಇಲ್ಲಿನ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಇಂದು ವಿದ್ಯುಕ್ತ ಚಾಲೆನೆ ಸಿಕ್ಕಿದೆ.ಕೊರೊನಾ ಹಿನ್ನೆಲೆಯಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟವನ್ನು ಮುಂದೂಡಲಾಗಿತ್ತು . ಆತಿಥೇಯ ಜಪಾನ್ ಮತ್ತು ಆಸ್ಟ್ರೇಲಿಯಾ ನಡುವಿನ ಸಾಫ್ಟ್ ಬಾಲ್ ಪಂದ್ಯದ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ಸಿಕ್ಕಿತು. ೨೦೧೧ರ ಸುನಾಮಿ ಮತ್ತು ಪರಮಾಣು ದುರಂತದಲ್ಲಿ ಭಾರೀ ಸಂಕಷ್ಟಕ್ಕೀಡಾಗಿದ್ದ ಫುಕುಶಿಮಾ ಎಂಬ ಪ್ರದೇಶದಲ್ಲಿ ನಡೆದ ಈ ಪಂದ್ಯದಲ್ಲಿ ಆತಿಥೇಯರು ೮-೧ರಿಂದ ಗೆದ್ದು ಬೀಗಿದರು. ಒಲಿಂಪಿಕ್ಸ್ ಕ್ರೀಡಾಕೂಟ ಇಂದು ಆರಂಭವಾದರೂ ಅಧಿಕೃತವಾಗಿ ಚಾಲನೆಗೊಳ್ಳುವುದು ಜುಲೈ ೨೩, ಶುಕ್ರವಾರದಂದು.…

ಮನೆಯೊಳಗೆ ಮಠ ನಿನಗೆ ಮಂಕುತಿಮ್ಮ

ಸಿದ್ಧಸೂಕ್ತಿ : ಮನೆಯೊಳಗೆ ಮಠ ನಿನಗೆ ಮಂಕುತಿಮ್ಮ. ಸಂಸಾರದಲ್ಲಿ ತಂದೆ ತಾಯಿ ಅಜ್ಜ ಅಜ್ಜಿ ಸಹೋದರ ಸಹೋದರಿ ಅತ್ತೆ ಮಾವ ಗಂಡ ಹೆಂಡತಿ ಮಕ್ಕಳ ಹೊಣೆ. ನಿಭಾಯಿಸಲು ಪರದಾಡಬೇಕು. ಸಂಸಾರ ದುಃಖ.ಸಂನ್ಯಾಸಿಯಾಗಿ ಮಠ ಸೇರಿದರೆ ಇದಿಲ್ಲ!ಉಚಿತ ಪ್ರಸಾದ, ಪಾದ ಕಾಣಿಕೆ, ವಸ್ತ್ರ ಗೌರವ ಸಮ್ಮಾನ ಪೂಜೆ ಸೇವೆ ಎಲ್ಲ ಲಭ್ಯ! ಸಂನ್ಯಾಸ ಸುಖ! ಎನ್ನುವರುಂಟು. ಸಂನ್ಯಾಸವೇನು ಹೊಣೆಗೇಡಿತನವೇ? ಕಾಷಾಯ ತೊಟ್ಟರೆ ಸಂನ್ಯಾಸವೇ? ಭಾವ ನಿರ್ಭಾವ ಆಗುವುದು ಸಂನ್ಯಾಸ! ನಾಯಮಾತ್ಮಾ ಬಲಹೀನೇನ ಲಭ್ಯಃ=ಸಂನ್ಯಾಸ ಆತ್ಮಜ್ಞಾನ ನಿಷ್ಠೆಗಳು ಬಲಹೀನನಿಗೆ ದಕ್ಕವು.…

1 87 88 89 90 91 122
Girl in a jacket