Girl in a jacket

Author kendhooli_editor

ಗೃಹ ಸಚಿವ ಬೊಮ್ಮಾಯಿ ನಿವಾಸ ಕೋವಿಡ್ ಆರೈಕೆ ಕೇಂದ್ರ

ಶಿಗ್ಗಾವಿ,ಮೇ,13: ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿಯಲ್ಲಿರುವ ತಮ್ಮ ಮನೆಯ ಆವರಣವನ್ನು ಈಗ ಕೋವಿಡ್ ಆರೈಕೆ ಕೇಂದ್ರವಾಗಿ ಪರಿವರ್ತಿಸಿದ್ದಾರೆ. ಶಿಗ್ಗಾವಿ ಕ್ಷೇತ್ರದ ಕೋವಿಡ್ ಸೋಂಕಿತರ ಜೀವ ರಕ್ಷಣೆಗೆ ಬೊಮ್ಮಾಯಿ ಪಣ ತೊಟ್ಟಿದ್ದಾರೆ. ಸೋಂಕು ಕಾಣಿಸಿಕೊಂಡ ವ್ಯಕ್ತಿಗೆ ಪ್ರಾಥಮಿಕ ವೈದ್ಯೋಪಚಾರ ಒದಗಿಸಲು ಶಿಗ್ಗಾವಿಯಲ್ಲಿ ಇರುವ ತಮ್ಮ ಮನೆಯನ್ನು ಕೋವಿಡ್ ಅರೈಕೆ ಕೇಂದ್ರವನ್ನಾಗಿ ಪರಿವರ್ತಿಸಿದ್ದಾರೆ. ಚಿಕಿತ್ಸೆ ನೀಡಲು ವೈದ್ಯರನ್ನು ನಿಯೋಜಿಸಲಾಗಿದೆ. 50 ಹಾಸಿಗೆ ಗಳನ್ನು ಇಲ್ಲಿ ಅಳವಡಿಸಲಾಗಿದೆ. ಈ ಸ್ಥಳಕ್ಕೆ…

ನಿರೀಕ್ಷೆಗಳ ಹುಸಿಗೊಳಿಸಿದ ಸಿಎಂ

ಬೆಂಗಳೂರು, ಮೇ,13:ಮುಖ್ಯಮಂತ್ರಿ ಸುದ್ದಿಗೋಷ್ಠಿ ಕರೆದಿದ್ದಾರೆ ಎಂದರೆ ಬಹುತೇಕ ಸಾಕಷ್ಟು ನಿರೀಕ್ಷೆಗಳಿದ್ದವು ಕೋವಿಡ್ ಸಂಕಷ್ಟದಲ್ಲಿ ಲಾಕ್ ಡೌನ್ ಮಾಡಿದ ಈ ಹೊತ್ತಲ್ಲಿ ಏನಾದರೂ ಆರ್ಥಿಕ ಪ್ಯಾಕೇಜ್ ಪ್ರಕಟಿಸುತ್ತಾರೆ ಎನ್ನುವ ಎಲ್ಲಾ ಆಸೆಗಳಿಗೂ ತಣ್ಣೀರೆರಚಿದ್ದಾರೆ. ಕನಿಷ್ಠ ಜನರ ಬಗ್ಗೆ ಅನುಕಂಪವೂ ಇಲ್ಲದ ಬಿ.ಎಸ್ ಯಡಿಯೂರಪ್ಪ ಜನರ ಸಮಸ್ಯೆಗಳ ಬಗ್ಗೆ ಸೌಜನ್ಯಕ್ಕೂ ಪ್ರಸ್ತಾಪ ಮಾಡದ ಅವರು ಕಠಿಣ ಕ್ರಮದಿಂದ ಕೊರೊನಾ ಸೋಂಕಿತರ ಪ್ರಮಾಣ ಇಳಿಮುಖವಾಗಿದೆ ಎಂದು ಹೇಳಿದರು. ಇನ್ನೂ 18 ವರ್ಷದ ಮೇಲಿನ ಎಲ್ಲಾ ವಯೋಮಾನದವರಿಗೂ ವ್ಯಾಕ್ಸಿನ್ ಹಾಕಲಾಗುತ್ಯದೆ ಎಂದು…

ಎಸ್ಎಸ್ಎಲ್ ಸಿ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು,ಮೇ,13:ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್19ರ ಎರಡನೇ‌ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ‌ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು, ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ…

ಚಾಮರಾಜನಗರದಲ್ಲಿ ಸಾವನ್ನಪ್ಪಿದವರು 24 ಅಲ್ಲ 36

ಬೆಂಗಳೂರು,ಮೇ,13: ಚಾಮರಾಜನಗರ ಆಸ್ಪತರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರು24 ಮಂದಿಯಲ್ಲ 36 ಮಂದಿ ಎಂದು ಸಮಿತಿ ಹೈಕೋರ್ಟ್ ಗೆ ವರದಿ ಸಲ್ಲಿಸಿದೆ. ನ್ಯಾ.ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಸಮಿತಿ ಮೇ 2ರ ರಾತ್ರಿ 10.30ರಿಂದ ತಡರಾತ್ರಿ 2.30ರವರೆಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಮಸ್ಯೆ ಉಂಟಾಗಿತ್ತು. ಈ 4 ಗಂಟೆಗಳ ಅವಧಿಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗಾಗಿ ಆಕ್ಸಿಜನ್ ಇರಲಿಲ್ಲ ಎಂದು ವರದಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಆಡಿಟ್ ವರದಿ ಪ್ರಕಾರ ಆಕ್ಸಿಜನ್ ಕೊರತೆಯಿಂದ ಮೂವರು ಸಾವನ್ನಪ್ಪಿದ್ದಾರೆ. ಮೆದುಳಿನ ಆಘಾತದಿಂದ 7 ರೋಗಿಗಳು ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ…

ನ್ಯಾಯಾಧೀಶರು ಸರ್ವಜ್ಞರಲ್ಲ- ಸಿ.ಟಿ.ರವಿ

ಬೆಂಗಳೂರು,ಮೇ,13: ಲಸಿಕೆ ನೋಡಿಕೆ ಸಂಬಂಧ ರಾಜ್ಯ ಸರ್ಕಾರದ ವಿರುದ್ದ ಹೈಕೋರ್ಟ್ ತರಾಟೆಗೆ ರಾಜ್ಯದಲ್ಲಿ ಕೊರೋನಾ ಲಸಿಕೆ ಕೊರತೆ ಮತ್ತು ನೀಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನ ಹೈಕೋರ್ಟ್ ತರಾಟೆ ತೆಗೆದುಕೊಂಡಿರುವುದನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ನ್ಯಾಯಾಧೀಶರು ಸರ್ವಜ್ಞರಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.Υ ಗುರುವಾರ ಬೆಂಗಳೂರಿನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ತಜ್ಞರ ಸಮಿತಿ ನೀಡುವ ವರದಿಯನ್ನು ಆಧರಿಸಿಯೇ ಕೆಲಸ ಮಾಡುತ್ತದೆ ಕೇಂದ್ರ ಸರ್ಕಾರ ಹೇಳಿದೆ. ಇದನ್ನ ಸುಪ್ರೀಂಕೋರ್ಟ್ ಕೂಡ ಒಪ್ಪಿದೆ ಎಂದು ತಿಳಿಸಿದರು…

ಆಕ್ಸಿಜನ್ ಟ್ಯಾಂಕರ್ ಖರೀದಿ;ನಿರಾಣಿ ಕಾರ್ಯಕ್ಕೆ ಕಟೀಲು ಮೆಚ್ಚುಗೆ

ಬೆಂಗಳೂರು,ಮೇ,13: ಆಮ್ಲಜನಕ ಟ್ಯಾಂಕರ್ ಖರೀದಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಖನಿಜ ಅಭಿವೃದ್ಧಿ ನಿಧಿ (ಎಂಡಿಎಫ್) ಅಡಿಯಲ್ಲಿ ಲಭ್ಯವಿರುವ ಹಣವನ್ನು ಬಳಸಿಕೊಳ್ಳಲು ಅವಕಾಶ ನೀಡಿದ್ದಕ್ಕಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಎಂಡಿಎಫ್ ಅಡಿಯಲ್ಲಿ ಆಕ್ಸಿಜನ್ ಸಂಗ್ರಹಿಸಲು ಅಗತ್ಯವಾದ ಆಮ್ಲಜನಕ ಟ್ಯಾಂಕರ್ ಖರೀದಿಸಲು ಮತ್ತು ಅದನ್ನು ಜಿಲ್ಲೆಯ ಆಸ್ಪತ್ರೆಗಳಿಗೆ ಸಾಗಿಸಲು ಕೋವಿಡ್ -19 ಗೆ ಚಿಕಿತ್ಸೆ ನೀಡಲು ಸಚಿವ…

ಬಿಜೆಪಿ ಸರ್ಕಾರದ ಡಬಲ್ ಇಂಜಿನ್ ನಿಂತುಹೋಗಿದೆ; ಡಿ.ಕೆ.ಶಿ

ಬೆಂಗಳೂರು,ಮೇ,೧೩:’ಕರ್ನಾಟಕದ ಏಳಿಗೆಗೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳು ಡಬಲ್ ಇಂಜಿನ್ ರೀತಿ ಕೆಲಸ ಮಾಡುತ್ತವೆ ಎಂದು ಹೇಳಿದ್ದರು. ಆದರೆ ಕೋವಿಡ್ ನಿರ್ವಹಣೆ, ಆಕ್ಸಿಜನ್, ಲಸಿಕೆ ಪೂರೈಕೆ ವಿಚಾರದಲ್ಲಿ ಈ ಡಬಲ್ ಇಂಜಿನ್ ಗಳು ಕೆಟ್ಟು ನಿಂತಿವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ತಮ್ಮ ನಿವಾಸದಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ’ಚಾಮರಾಜನಗರದಲ್ಲಿ ೨೪ ಜನರ ಸಾವಿಗೆ ಸರ್ಕಾರವೇ ಹೊಣೆ ಎಂದು ಹೈಕೋರ್ಟ್ ನೇಮಕ ಮಾಡಿದ್ದ ನ್ಯಾಯಮೂರ್ತಿಗಳ ಸಮಿತಿ ಈಗಾಗಲೇ…

ಪತ್ರಕರ್ತ ಜಯತೀರ್ಥ ಕಾಗಲಕರ್ ಕೊವಿಡ್ ಗೆ ಬಲಿ

ಕಲಬುರಗಿ ,13: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಕಲಬುರಗಿ ಆವೃತ್ತಿ ಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್ (53) ಕೊರೊನೊ ಸೊಂಕಿಗೆ ಬಲಿಯಾಗಿದ್ದಾರೆ.ವಾರದ ಹಿಂದೆ ಕೊರೊನೊ ಸೊಂಕಿಗೆ ಒಳಗಾಗಿದ್ದ ಅವರನ್ನು ಚಿಕಿತ್ಸೆ ಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಗೆ ಸ್ಪಂದಿಸದೇ ಕೊನೆಯುಸಿರೆಳೆದರು.ಕಳೆದ ಮೂರು ದಶಕದಿಂದ ಸಂಯುಕ್ತ ಕರ್ನಾಟಕದ ವರದಿಗಾರರಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಾ  ಇತ್ತೀಚಿಗೆ ಸ್ಥಾನಿಕ ಸಂಪಾದಕರಾಗಿ ಬಡ್ತಿ ಹೊಂದಿದ್ದರು. ಮೂರು ದಶಕಗಳಿಂದ ಹಲವು ಜನಪರ ವರದಿಗಳ ಮೂಲಕ ಸರ್ಕಾರದ ಗಮನ ಸೆಳೆಯುತ್ತಿದ್ದ ಕಾಗಲಕರ್…

ಲಸಿಕೆ ನೀಡುವಲ್ಲಿ ವಿಫಲ-ಸರ್ಕಾರದ ವಿರುದ್ಧ ತರಾಟೆಗೆ ತಗೆದುಕೊಂಡ ಕೋರ್ಟ್

ಬೆಂಗಳೂರು, ಮೇ. ೧೩: ರಾಜ್ಯದ ಜನತೆಗೆ ಲಸಿಕೆ ನೀಡುವ ವಿಚಾರದಲ್ಲಿ ಸರ್ಕಾರದ ವಿರುದ್ಧ ಹೈಕೋರ್ಟ್ ತರಾಟೆಗೆ ತಗೆದುಕೊಂಡಿದೆ. ಜನರು ಕೊರೊನಾ ಎರಡನೇ ಅಲೆಗೆ ತತ್ತರಿಸಿದ್ದಾರೆ ಅವರಿಗೆ ವ್ಯಾಕ್ಸಿನ್ ಕೊಡಲು ನಿಮಗೆ ಆಗುತ್ತಿಲ್ಲ ಎಂದರೆ ಹೇಗೆ? ೩೧ ಲಕ್ಷ ಮಂದಿಗೆ ಯಾವಾಗ ಎರಡನೇ ಡೋಸ್ ನೀಡುತ್ತೀರಾ ನಿಮಗೆ ಸಾಧ್ಯವಿಲ್ಲ ಎಂದಾದರೆ ಹಾಗೆಯೇ ಹೇಳಿಕೆಯನ್ನು ನ್ಯಾಯಾಲಯದಲ್ಲಿ ದಾಖಲಿಸಲಾಗುತ್ತದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಹೈಕೊರ್ಟ್ ಚಾಟಿ ಏಟು ಬೀಸಿದೆ. ೫ ವರ್ಷ ಮೇಲ್ಪಟ್ಟವರಿಗೆ ೨ನೇ ಡೋಸ್ ನ ಲಸಿಕೆ ಕೊರತೆಯಾಗಿರುವ…

ಜನನಿ ಜನ್ಮಭೂಮಿ

ವಿಶಾಲಾ ಆರಾಧ್ಯ ರಾಜಾಪುರ ಈ ತಿಂಗಳ ಮಾರ್ಚ್ ಎರಡನೇ ಭಾನುವಾರದಂದು ವಿಶ್ವ ಅಮ್ಮಂದಿರ ದಿನವನ್ನು ಆಚರಿಸಿದೆವು. ತಮ್ಮ ತಮ್ಮ ಅಮ್ಮಂದಿರನ್ನು ಮಾತನಾಡಿಸಿಯೋ ಫೋಟೋ ಕ್ಲಿಕ್ಕಿಸಿಯೋ ಎಲ್ಲರೂ ಅಮ್ಮನ ಫೋಟೋವನ್ನು ನಮ್ಮ ನಮ್ಮ ಸ್ಟೇಟಸ್ ಗಳಲ್ಲಿ ವಿಜೃಂಭಿಸಿದೆವು. ನಂತರ ಅಮ್ಮನ ಬಗ್ಗೆ ಯೋಚಿಸಿ ಅವಳೊಡನಿದ್ದು ಅವರ ಭಾವನೆಗಳು, ವಿಚಾರಗಳ ಆಗುಹೋಗುಗಳನ್ನು ನಾವು ಸರಿಯಾಗಿ ವಿಚಾರಿಸುತ್ತೇವೆಯೇ? ಎಂಬ ಸ್ವ ವಿಮರ್ಶೆ ಮಾಡಿಕೊಳ್ಳೋಣ. ನಮ್ಮ ಹುಟ್ಟಿಗೂಮುನ್ನವೇ ಜೀವಾಂಕುರವಾದಾಗಿನಿಂದ ನಮ್ಮನ್ನು ತನ್ನ ಹೊಟ್ಟೆಯಲ್ಲಿ ಪೊರೆದವಳನ್ನು ಅಲ್ಲಿಂದಲೇ ಕಾಲುಗಳನ್ನು ಚಾಚಿ ಒದೆಯಲು ಶುರುಮಾಡುತ್ತೇವೆ. ಅದು…

ಚಾಮರಾಜನಗರದಲ್ಲಿ ೨೪ ಮಂದಿ ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ

ಬೆಂಗಳೂರು,ಮೇ೧೩: ಚಾಮರಾಜ ನಗರದಲ್ಲಿ ಮೇ ೨ ರ ರಾತ್ರಿ ೨೪ ಜನರ ಸಾವಿಗೆ ಆಮ್ಲಜನಕ ಕೊರತೆಯೇ ಕಾರಣ ಎಂದು ಹೈಕೋರ್ಟ್ ನೇಮಿಸಿದ್ದ ಮೂವರು ಸದಸ್ಯರ ಸಮಿತಿ ವರದಿ ನೀಡಿದೆ. ಮೇ ೨ ರ ಮಧ್ಯೆ ರಾತ್ರಿ ಚಾಮರಾಜನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ೨೪ ಮಂದಿ ಆಮ್ಲಜನಕ ಕೊರತೆಯಿಂದ ಸಾವನ್ನಪ್ಪಿದ್ದರು ಆದರೆ ಅದು ಆಮ್ಲಜನಕದ ಕೊರತೆಯಿಮದಲ್ಲ ಕೇವಲ ೪ ಮಂದಿ ಮಾತ್ರ ಆಮ್ಲಜನಕ ಕೊರತೆಯಂದ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದರು. ಇದು ಹಲವಾರು ವಿವಾದಕ್ಕೆ ಕಾರಣವಾಗಿತ್ತು…

ಮಕ್ಕಳ ರಕ್ಷಣಾ ಕಾರ್ಯ ನಿರ್ವಹಿಸಲು ಸ್ವಯಂ ಸೇವಕರಿಗೆ ಆಹ್ವಾನ

ಪತ್ರಿಕಾ ಪ್ರಕಟಣೆ ಮಕ್ಕಳ ರಕ್ಷಣಾ ಕಾರ್ಯ ನಿರ್ವಹಿಸಲು ಸ್ವಯಂ ಸೇವಕರಿಗೆ ಆಹ್ವಾನ ಬೆಂಗಳೂರು, 10: ಕೋವಿಡ್-19 2ನೇ ಅಲೆ ಹಿನ್ನೆಲೆಯಲ್ಲಿ ಸೋಂಕು ಹರಡುವುದು ಹೆಚ್ಚಾಗುತ್ತಿದ್ದು, ಈ ಸಂಧರ್ಭದಲ್ಲಿ ಮಕ್ಕಳ ರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಿದ್ದು, ಈ ಕಾರ್ಯ ನಿರ್ವಹಿಸಲು ಆಸಕ್ತ ಸ್ವಯಂ ಸೇವಕರನ್ನು ಅಹ್ವಾನಿಸಲಾಗಿದೆ. ಮಕ್ಕಳ ರಕ್ಷಣಾ ನಿರ್ದೇಶನಾಲಯದ ಅಡಿಯಲ್ಲಿ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಆಸಕ್ತಿ ಇರುವ ವ್ಯಕ್ತಿಗಳು(Individuals) ನೋಂದಾಯಿಸಿಕೊಳ್ಳಲು ನಿರ್ದೇಶನಾಲಯದ ವೆಬ್‍ಸೈಟ್ www.icps.karnataka.gov.in ನಲ್ಲಿ ಅರ್ಜಿ ಭರ್ತಿ ಮಾಡಿ ಸಲ್ಲಿಸುವಂತೆ ನಿರ್ದೇಶಕರು ಕೋರಿದ್ದಾರೆ.

ಐಟಿಐ ಆಸ್ಪತ್ರೆಗೆ ಸಚಿವ ಬಸವರಾಜ್ ದಿಡೀರ್ ಭೇಟಿ

ಇನ್ನೊಂದು ವಾರದಲ್ಲಿ ಲಿಕ್ವಿಡ್ ಆಕ್ಸಿಜನ್ ಮತ್ತು 300 ಬೆಡ್ ಗಳ ವ್ಯವಸ್ಥೆ- ಸುತ್ತೂರು ಶ್ರೀಗಳು ಮೈಸೂರು,10: ಮೈಸೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ತಡೆಗಾಗಿ ಹಲವು ಕ್ರಮಗಳನ್ನ ಕೈಗೊಳ್ಳಲಾಗುತ್ತಿದ್ದು, ಬೆಡ್ ಮತ್ತು ಆಕ್ಸಿಜನ್ ಕೊರತೆ ಕುರಿತು ಇಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ‌ನ ನೇತೃತ್ವದಲ್ಲಿ ಸುತ್ತೂರು ಶಾಖಾ ಮಠದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಸಂಸದ ಪ್ರತಾಪ್ ಸಿಂಹ ಸೇರಿ ಹಲವರು ಸಭೆಯಲ್ಲಿ ಭಾಗವಹಿಸಿದ್ದರು. ಇದೇ ವೇಳೆ ಕೊರೋನಾ ನಿರ್ವಹಣೆಗೆ ಸಚಿವ…

ಮೈಸೂರಿನಲ್ಲಿ ಕೈ ತಪ್ಪಿದ‌ ಕೊರೋನ‌ : ದೇವರ ಮೊರೆ ಹೋದ ಎಸ್.ಟಿ ಸೋಮಶೇಖರ್

ಮೈಸೂರು,10: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಪ್ರಮಾಣ ತಗ್ಗಿಸಲು ಇಂದಿನಿಂದ ರಾಜ್ಯಾದ್ಯಂತ 14 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ಮಧ್ಯೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 2ನೇ ಅಲೆ ಕೈತಪ್ಪಿರುವ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ದೇವರ ಮೊರೆ ಹೋಗಿದ್ದಾರೆ. ಹೌದು ಅರಮನೆ‌ ಬಳಿ ಇರುವ ಐತಿಹಾಸಿಕ ಕೋಟೆ ಮಾರಮ್ಮ ದೇವಾಲಯದಲ್ಲಿ ಸಚಿವ ಎಸ್.ಟಿ ಸೋಮಶೇಖರ್ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚಾಮುಂಡೇಶ್ವರಿ ಪ್ರಧಾನ ಅರ್ಚಕ‌ ಶಶಿಶೇಖರ ದಿಕ್ಷೀತ್ ನೇತೃತ್ವದಲ್ಲಿ ಪೂಜಾ ಕೈಂಕರ್ಯ…

ಕೊರೊನಾ ತಡೆಗೆ ರಾಜ್ಯದ ಜನರಲ್ಲಿ ಸಿಎಂ ಮನವಿ

ಬೆಂಗಳೂರು,10: ಕೊರೋನ ತಡೆಗಾಗಿ ರಾಜ್ಯದಲ್ಲಿ ನಾವು 14 ದಿನಗಳ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸೋಣ. ಮಾರ್ಗಸೂಚಿಗಳನ್ನು ಎಲ್ಲರೂ ತಪ್ಪದೇ ಅನುಸರಿಸಿ, ಎಲ್ಲರೂ ಒಟ್ಟಾಗಿ ಕೊರೋನಾ ವಿರುದ್ಧ ಹೋರಾಡೋಣ ಎಂದು ರಾಜ್ಯದ ಜನರಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಿಎಸ್ ಯಡಿಯೂರಪ್ಪ, ಎಲ್ಲರ ಸಕ್ರಿಯ ಸಹಕಾರವಿಲ್ಲದೆ ಇದು ಯಶಸ್ವಿಯಾಗುವುದಿಲ್ಲ. ಈ ನಿಟ್ಟಿನಲ್ಲಿ ಏನೇ ಅಡೆತಡೆ, ಸಮಸ್ಯೆಗಳಿದ್ದರೆ, ದಯವಿಟ್ಟು ಅದನ್ನು ಜಿಲ್ಲಾಧಿಕಾರಿಗಳ, ಜಿಲ್ಲಾ ಉಸ್ತುವಾರಿ ಸಚಿವರ ಅಥವಾ ನೇರವಾಗಿ ನನ್ನ ಗಮನಕ್ಕೆ ತನ್ನಿ.…

ಏಕಕಾಲದಲ್ಲಿ ಎರಡು ತಂಡಗಳು ಕಣಕ್ಕಿಳಿಯಲಿವೆ; ಗಂಗೋಲಿ

ನವದೆಹಲಿ,10: ಟೀಂ ಇಂಡಿಯಾ ಜುಲೈ ತಿಂಗಳಿನಲ್ಲಿ ಇಂಗ್ಲೆಂಡ್ ಹಾಗೂ ಶ್ರೀಲಂಕಾ ವಿರುದ್ದ ಸರಣಿ ಆಡಲಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಈ ಮೂಲಕ ಇಂಗ್ಲೆಂಡ್‌ ಹಾಗೂ ಶ್ರೀಲಂಕಾಕ್ಕೆ ಪ್ರತ್ಯೇಕ ತಂಡಗಳು ತೆರಳಲಿವೆ ಎನ್ನುವ ಸುಳಿವನ್ನು ಗಂಗೂಲಿ ನೀಡಿದ್ದಾರೆ. ಟೀಂ ಇಂಡಿಯಾ ಜೂನ್‌ನಲ್ಲಿ ಇಂಗ್ಲೆಂಡ್‌ಗೆ ತೆರಳಲಿದ್ದು ಐಸಿಸಿ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಹಾಗೂ ಇಂಗ್ಲೆಂಡ್‌ ವಿರುದ್ಧ 5 ಪಂದ್ಯಗಳ ಟೆಸ್ಟ್‌ ಸರಣಿಯನ್ನು ಆಡಲಿದೆ. ಇದೇ ವೇಳೆ ಜುಲೈನಲ್ಲಿ ಭಾರತ ತಂಡ ಶ್ರೀಲಂಕಾಕ್ಕೆ ತೆರಳಲಿದ್ದು, 3…

ರಾಮು ನಿಧನದ ನಂತರ ಮೊದಲಬಾರಿ ಪ್ರತಿಕ್ರಿಯಿಸಿದ ಮಾಲಾಶ್ರೀ

ಬೆಂಗಳೂರು 10: ಪತಿ ನಿಧನದ ನೋವಿನಲ್ಲಿರುವ ನಟಿ ಮಾಲಾಶ್ರೀ ಭಾವುಕಪತ್ರವೊಂದನ್ನು ಬರೆದು ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ನಿರ್ಮಾಪಕ ಕೋಟಿ ರಾಮು ನಿಧನದ ಸಂದರ್ಭದಲ್ಲಿ ನೆರವಾದವರಿಗೆ ಮಾಲಾಶ್ರೀ ಧನ್ಯವಾದ ಹೇಳಿದ್ದಾರೆ. ಕಳೆದ ಹದಿನೈದು ದಿನಗಳು ನೋವಿನ ದಿನಗಳಾಗಿದ್ದವು. ಏನು ಮಾಡಬೇಕೆಂದು ಗೊತ್ತಾಗದಂತಾಗಿತ್ತು. ರಾಮು ನಿಧನದಿಂದ ನಮ್ಮ ಹೃದಯ ಚೂರು ಚೂರಾಗಿತ್ತು ಎಂದು ಮಾಲಾಶ್ರೀ ಬರೆದುಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ನೀಡಿದ ಸಹಕಾರವನ್ನು ಮರೆಯಲು ಸಾಧ್ಯವಿಲ್ಲ. ಮಾಧ್ಯಮದವರು, ತಂತ್ರಜ್ಞರು, ಕಲಾವಿದರು, ಸ್ನೇಹಿತರು, ಅಭಿಮಾನಿಗಳು, ಹಿತೈಷಿಗಳು ಕಷ್ಟದ ಸಮಯದಲ್ಲಿ ಜೊತೆಗೆ ನಿಂತಿದ್ದರು.…

ಟಫ್ ಲಾಕ್ಡೌನ್ : ಹೊರಬಂದವರಿಗೆ ಲಾಠಿ ರುಚಿ, ವಾಹನ ಸೀಜ್ !

ಬೆಂಗಳೂರು, 10: ಇಂದಿನಿಂದ ಮೇ 24ರವರೆಗೆ ರಾಜ್ಯದಲ್ಲಿ ಕಂಪ್ಲೀಟ್ ಲಾಕ್ ಡೌನ್ ಜಾರಿಯಲ್ಲಿರಲಿದ್ದು, ಮೊದಲ ದಿನವಾದ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಕುಂಟುನೆಪಗಳನ್ನು ಹೇಳಿ ಓಡಾಟ ನಡೆಸುವವರ ಮೇಲೆ ಪೊಲೀಸರು ಹಲವೆಡೆ ಲಾಠಿ ಏಟು ಬೀಸಿದ್ದಾರೆ. ಜತೆಗೆ ವಾಹನಗಳನ್ನು ವಶಪಡಿಸಿಕೊಂಡು ಸೀಜ್ ಮಾಡಿದ್ದಾರೆ. ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಓಡಾಟ ನಡೆಸಿದವರ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅನಗತ್ಯ ಸಂಚಾರ ನಡೆಸಿದವರ ವಾಹನಗಳನ್ನು ಸೀಜ್ ಮಾಡಲಾಗುತ್ತಿದೆ. ಗದಗ, ಬಾಗಲಕೋಟೆ, ಕೋಲಾರ,…

Girl in a jacket