Girl in a jacket

Author kendhooli_editor

ದೇವೇಗೌಡರು ಕೇಂದ್ರ ಸರ್ಕಾರದ ವಕ್ತಾರರಂತೆ ವರ್ತಿಸುತ್ತಿದ್ದಾರೆ-ಸಿಎಂ ಸಿದ್ದರಾಮಯ್ಯ

ದೇವೇಗೌಡರು ಕೇಂದ್ರ ಸರ್ಕಾರದ ವಕ್ತಾರರಂತೆ ವರ್ತಿಸುತ್ತಿದ್ದಾರೆ-ಸಿಎಂ ಸಿದ್ದರಾಮಯ್ಯ by-ಕೆಂಧೂಳಿ ಬೆಂಗಳೂರು,ಫೆ,೧೬-ಕರ್ನಾಟಕದ ನೀರಾವರಿ ವಿಷಯದಲ್ಲಿ ಕೇಂದ್ರ ಸರ್ಕಾರ ರಾಜ್ಯದ ಹಿತವನ್ನು ಬಲಿಕೊಡಲು ಹೊರಟಿದ್ದರೂ ಕೂಡ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕನ್ನಡಿಗರ ಬಗ್ಗೆ ದ್ವನಿ ಎತ್ತದೆ ಕೇಂದ್ರ ಸರ್ಕಾರದ ವಕ್ತಾರರಂತೆ ವರ್ತಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡಡೆಸಿದ್ದಾರೆ. ಒಂದು ಹಂತದಲ್ಲಿ ಗೌಡರು ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೊಡಿಯವರ ಚಿಯರ್ ಲೀಡರ್‌ನಂತೆ ವರ್ತಿಸುತ್ತಿದ್ದಾರೆ ಎಂದು ವಿಷಾದಿಮದ ಹೇಳಬೇಕಾಗಿದೆ ಎಂದು ಅವರು ವಿಷಾಧ ವ್ಯಕ್ತಪಡಿಸಿದ್ದಾರೆ ಈ ಕುರಿತಂತೆ ಮಾಧ್ಯಮ ಪ್ರಕಟಣೆ…

ಸಿದ್ದರಾಮಯ್ಯ ನಮ್ಮ ನಾಯಕರು, ಅವರ ಹೆಸರು ದುರ್ಬಳಕೆ ಬೇಡ:  ಡಿ.ಕೆ. ಶಿ

ಸಿದ್ದರಾಮಯ್ಯ ನಮ್ಮ ನಾಯಕರು, ಅವರ ಹೆಸರು ದುರ್ಬಳಕೆ ಬೇಡ:  ಡಿ.ಕೆ. ಶಿ by-ಕೆಂಧೂಳಿ ಬೆಂಗಳೂರು, ಫೆ.16-“ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು.ಸಿದ್ದರಾಮಯ್ಯ ಅವರು ಪಕ್ಷಕ್ಕೆ ಅನಿವಾರ್ಯ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಎಲ್ಲಾ ಚುನಾವಣೆಗೂ ಬೇಕು. ಜಿಲ್ಲಾ…

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ: ಡಿ.ಕೆ.ಶಿ ಕರೆ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ: ಡಿ.ಕೆ.ಶಿ ಕರೆ by-ಕೆಂಧೂಳಿ ಬೆಂಗಳೂರು, ಫೆ.16-“ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು. “ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸಧ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್…

ಎಲ್,ಆರ್.ಶಿವರಾಮೇಗೌಡ,ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಸೇರ್ಪಡೆ

ಎಲ್,ಆರ್.ಶಿವರಾಮೇಗೌಡ,ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಸೇರ್ಪಡೆ by-ಕೆಂಧೂಳಿ ಬೆಂಗಳೂರು, ಫೆ,16-ಮಾಜಿ ಸಚಿವ, ಮಾಜಿ ಸಂಸದ, ಬಿಜೆಪಿ ಮುಖಂಡ ಎಲ್ ಆರ್ ಶಿವರಾಮೇಗೌಡ, ಅವರ ಪುತ್ರ ಚೇತನ್ ಗೌಡ, ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಕಾಂಗ್ರೆಸ್ ಪಕ್ಷ ಸೇರಿದರು. ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ನಾಯಕರು ತಮ್ಮ ಅಪಾರ ಬೆಂಬಲಿಗರೊಂದಿಗೆ ಸೇರ್ಪಡೆಗೊಂಡರು.ಈ ವೇಳೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ನಂಬಿ ಸೇರ್ಪಡೆಗೊಂಡಿದ್ದೇವೆ ಎಂದರು. ಸಮಾರಂಭದಲ್ಲಿ ಕಾರ್ಯಾಧ್ಯಕ್ಷ, ರಾಜ್ಯಸಭೆ ಸದಸ್ಯ ಡಾ. ಜಿ ಸಿ ಚಂದ್ರಶೇಖರ್…

ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ: ಬಸವರಾಜ ಬೊಮ್ಮಾಯಿ

ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ: ಬಸವರಾಜ ಬೊಮ್ಮಾಯಿ by-ಕೆಂಧೂಳಿ ಹುಬ್ಬಳ್ಳಿ,ಫೆ,16- ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸ್ಸು ಮಾಡಿದೆ. ಮುಖ್ಯ ಮಂತ್ರಿಗಳು ದರ ಏರಿಕೆ ವಿಚಾರವಾಗಿ‌ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ. ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ. ಅದಕ್ಕೆ ಎಲ್ಲ ದರಗಳನ್ನೂ ಏರಿಸುತ್ತಿದೆ. ಮೆಟ್ರೋ‌…

ಕುಂಭಮೇಳಕ್ಕೆ ತೆರಳುತ್ತಿದ್ದ ಪ್ರಯಾಣಿಕರು ದೆಹಲಿಯಲ್ಲಿ ಕಾಲ್ತುಳಿತಕ್ಕೆ ೧೮ ಮಂದಿ ಬಲಿ

ಕುಂಭಮೇಳಕ್ಕೆ ತೆರಳುತ್ತಿದ್ದ ಪ್ರಯಾಣಿಕರು ದೆಹಲಿಯಲ್ಲಿ ಕಾಲ್ತುಳಿತಕ್ಕೆ ೧೮ ಮಂದಿ ಬಲಿ by-ಕೆಂಧೂಳಿ ನವದೆಹಲಿ,ಫೆ,೧೬-ಕುಂಭಮೇಳಕ್ಕೆ ತೆರಳುವವರ ಬಲಿಗಳು ಹೆಚ್ಚಾಗುತ್ತಿವೆ ದೆಹಲಿಯಲ್ಲಿ ವಿಶೇಷ ರೈಲು ತಡವಾದ ಕಾರನ ಶನಿವಾರ ರಾತ್ರ ಪ್ರಯಾಣಿಕ ದಟ್ಟಣೆಯಿಂದ ಕಾಲ್ತುಳಿತದಿಂದ ೧೮ ಮಂದಿ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರಲ್ಲಿ ೧೦ ಮಂದಿ ಮಹಿಳೆಯರು ಮೂವರು ಮಕ್ಕಳು ಇತರೆ ಐದುಜನ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ನೂಕುನುಗ್ಗಲಿನಿಂದಾಗಿ ನಾಲ್ವರು ಉಸಿರಾಡಲು ಸಾಧ್ಯವಾಗದೆ ಪ್ರಜ್ಞೆ ತಪ್ಪಿಬಿದ್ದಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೂ ಕನಿಷ್ಠ ೧೫ ಮಂದಿ ಮೃತಪಟ್ಟಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ…

ಜಿಮ್ ಬಂಪರ್: ₹10.27 ಲಕ್ಷ ಕೋಟಿ ಹೂಡಿಕೆ, 6 ಲಕ್ಷ ಉದ್ಯೋಗ ಖಾತ್ರಿ

ಜಿಮ್ ಬಂಪರ್: ₹10.27 ಲಕ್ಷ ಕೋಟಿ ಹೂಡಿಕೆ, 6 ಲಕ್ಷ ಉದ್ಯೋಗ ಖಾತ್ರಿ by-ಕೆಂಧೂಳಿ ಬೆಂಗಳೂರು,ಫೆ,15- ನಾಲ್ಕು ದಿನಗಳ ಕಾಲ ಇಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ಸದ್ಯಕ್ಕೆ ರಾಜ್ಯಕ್ಕೆ 10,27,378 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮತ್ತು 6 ಲಕ್ಷ ಉದ್ಯೋಗ ಸೃಷ್ಟಿ ಖಾತ್ರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಶುಕ್ರವಾರ ಹೇಳಿದ್ದಾರೆ. ಸಮಾವೇಶಕ್ಕೆ ತೆರೆ ಬಿದ್ದ ಬಳಿಕ ಅವರು ಅರಮನೆ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಲಯವಾರು ಅಂಕಿಅಂಶಗಳ…

ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ by-ಕೆಂಧೂಳಿ ಬೆಂಗಳೂರು, ಫೆ.14-ಈ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕ ರಾಜ್ಯದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಬಂಡವಾಳ ಹೂಡಿಕೆ ವಿಚಾರದಲ್ಲಿ ಕರ್ನಾಟಕ ದೇಶದ ಇತರ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2023 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಕುಮಾರ್ ಅವರು…

ಜಿಮ್ ಇನ್ವೆಸ್ಟ್ ಕರ್ನಾಟಕ 25,ವಿಶ್ವಸಂಸ್ಥೆಯಲ್ಲೂ ಅಸಮಾನತೆ, ತಾರತಮ್ಯ- ಶಶಿ ತರೂರ್

ಜಿಮ್ ಇನ್ವೆಸ್ಟ್ ಕರ್ನಾಟಕ 25,ವಿಶ್ವಸಂಸ್ಥೆಯಲ್ಲೂ ಅಸಮಾನತೆ, ತಾರತಮ್ಯ- ಶಶಿ ತರೂರ್ by-ಕೆಂಧೂಳಿ ಬೆಂಗಳೂರು,,ಫೆ,14- ಬಹುಧ್ರುವೀಕರಣದ ಜಗತ್ತಿನಲ್ಲಿ ವಿಶ್ವಸಂಸ್ಥೆ ಕೂಡಾ ಮೂಲ ಉದ್ದೇಶದೊಂದಿಗೆ ಕಾರ್ಯನಿರ್ವಹಿಸುತ್ತಿಲ್ಲ. ಅಸಮಾನತೆ, ತಾರತಮ್ಯಗಳು ಅಲ್ಲೂ ಇದ್ದು, ಅದನ್ನು ಅರ್ಥ ಮಾಡಿಕೊಂಡರಷ್ಟೇ ಪರ್ಯಾಯ ಜಾಗತಿಕ ವ್ಯವಸ್ಥೆಯ ಬಗ್ಗೆ ಚಿಂತಿಸಬಹುದು ಎಂದು ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಶುಕ್ರವಾರ ಪ್ರತಿಪಾದಿಸಿದರು. ‘ಜಾಗತಿಕ ಹೂಡಿಕೆದಾರರ ಸಮಾವೇಶ’ (ಜಿಮ್-25)’ದಲ್ಲಿ ‘ಪ್ರಕ್ಷುಬ್ಧತೆಯಲ್ಲಿ ಪ್ರವರ್ಧಮಾನ: ರಾಷ್ಟ್ರಗಳು ಹೇಗೆ ಸವಾಲು ಎದುರಿಸಬಹುದು’ ಗೋಷ್ಠಿಯಲ್ಲಿ ವಿಚಾರ ಮಂಡಿಸಿದ ಅವರು, ವಿಶ್ವಸಂಸ್ಥೆ ಕೂಡಾ…

ಮೆಟ್ರೋ ದರ ಕೊಂಚ ಇಳಿಕೆ ,ಇಂದಿನಿಂದಲೇ ಜಾರಿ

ಮೆಟ್ರೋ ದರ ಕೊಂಚ ಇಳಿಕೆ ,ಇಂದಿನಿಂದಲೇ ಜಾರಿ by-ಕೆಂಧೂಳಿ ಬೆಂಗಳೂರು, ಫೆ,14-ಜನರ ತೀವ್ರ ಆಕ್ರೋಶಕ್ಕೆ ಮಣಿದ ಹಿನ್ನೆಲೆಯಲ್ಲಿ ಮೆಟ್ರೋ ಪ್ರಯಾಣ ದರ ಕೊಂಚ ಇಳಿಕೆಯಾಗಿದೆ. ಇಂದಿನಿಂದಲೇ ಇಳಿಕೆ ದರ ಜಾರಿಯಾಗಲಿದ್ದು,ಬಿಎಂಆರ್ ಸಿ ಎಲ್ ಇಳಿಕೆ ದರ ಪಟ್ಟಿಯನ್ನು ಪ್ರಕಟಿಸಿದೆ ಅದರ ದರ ಈ ರೀತಿ ಇದೆ. ಮೆಟ್ರೋ ಟಿಕೆಟ್ ನ ಕನಿಷ್ಟ ಹಾಗೂ ಗರಿಷ್ಟ ದರ ಹಾಗೆಯೇ ಇರಲಿದೆ. ಆದರೆ ಕೆಲವು ಸ್ಟೇಷನ್ ಗಳಿಗೆ ಇರುವ ಟಿಕೆಟ್ ಬೆಲೆಯಲ್ಲಿ 10 ರೂ ಇಳಿಸಲಾಗಿದೆ.ಟಿಕೆಟ್ ದರದಲ್ಲಿ ಯಾವುದೇ ಬದಲಾವಣೆ…

ಸುಕ್ರಿ ಬೊಮ್ಮನ ಗೌಡ  ಇನ್ನೂ ನೆನಪು ಮಾತ್ರ..

ಸುಕ್ರಿ ಬೊಮ್ಮನಗೌಡ  ಇನ್ನೂ ನೆನಪು ಮಾತ್ರ.. by-ಕೆಂಧೂಳಿ ಕಾರವಾರ, ಫೆ 13: ಪ್ರದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜನಪದ ಹಾಡುಗಾರ್ತಿ, ಹೋರಾಟಗಾರ್ತಿ ಸುಕ್ರಿ ಬೊಮ್ಮಗೌಡ ನಿಧನವಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಮಂಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 88 ವರ್ಷದ ಸುಕ್ರಿ ಬೊಮ್ಮಗೌಡ ಗುರುವಾರ ಮುಂಜಾನೆ ಅಂಕೋಲಾ ತಾಲೂಕಿನ ಬಡಗೇರಿಯ ನಿವಾಸದಲ್ಲಿ ನಿಧನ ಹೊಂದಿದರು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದ ಅವರನ್ನು ಮನೆಗೆ ವಾಪಸ್ ಕರೆದುಕೊಂಡು ಬರಲಾಗಿತ್ತು.ಗುರುವಾರ ಮುಂಜಾನೆ ಅವರು ಮೃತಪಟ್ಟಿದ್ದಾರೆ ಎಂದು ಕುಟುಂಬ…

ಮುತ್ತಿನ ರಾಶಿಗೆ ಮಂಜು ಮುಸುಕಿತಲೇ ಪರಾಕ್..ಮೈಲಾರ ಕಾರ್ಣಿಕ 

ಮುತ್ತಿನ ರಾಶಿಗೆ ಮಂಜು ಮುಸುಕಿತಲೇ ಪರಾಕ್..ಮೈಲಾರ ಕಾರ್ಣಿಕ by-ಕೆಂಧೂಳಿ ಹರಪನಹಳ್ಳಿ,ಫೆ 13-ವಿಜಯನಗರ ಜಿಲ್ಲೆ ಹರಪನಹಳ್ಳಿಯ ದೊಡ್ಡ ಮೈಲಾರ ಕಾರ್ಣಿಕೋತ್ಸವದಲ್ಲಿ ಗೊರವಯ್ಯ ಕೋಟೆಪ್ಪ ಮುತ್ತಿನ ರಾಶಿಗೆ ಮಂಜು ಮುಸುಕಿತಲೇ ಪರಾಕ್​ ಎಂದು ದೈವವಾಣಿ ನುಡಿದಿದ್ದಾರೆ. 9 ದಿನ ಉಪವಾಸ ವ್ರತ ಆಚರಿಸಿದ್ದ ಗೊರವಯ್ಯ ಕೋಟೆಪ್ಪ ಅವರನ್ನು ಪಾದಗಟ್ಟೆಯ ಮರಡಿಯಿಂದ ಮೆರವಣಿಗೆ ಮೂಲಕ ಕರೆತರಲಾಯಿತು. ಬಳಿಕ ಗೊರವಪ್ಪ ಸಂಜೆ ಬಿಲ್ಲನ್ನೇರಿ ಸದ್ದಲ್ಲೇ ಎನ್ನುತ್ತಿದ್ದಂತೆ ನೆರದವರೆಲ್ಲ ಶಾಂತರಾಗುತ್ತಿದ್ದಂತೆಯೇ ಕೋಟೆಪ್ಪ ಮುತ್ತಿನ ರಾಶಿಗೆ ಮಂಜು ಮುಸುಕಿತಲೇ ಪರಾಕ್ ಎಂದು ಕಾರ್ಣಿಕ ನುಡಿದು ಮೇಲಿಂದ…

ಜಿಮ್: ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ ಸಿಎಂ ಸಮ್ಮುಖದಲ್ಲಿ ಒಡಂಬಡಿಕೆಗೆ ಅಂಕಿತ

ಜಿಮ್: ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ ಸಿಎಂ ಸಮ್ಮುಖದಲ್ಲಿ ಒಡಂಬಡಿಕೆಗೆ ಅಂಕತ by-ಕೆಂಧೂಳಿ ಬೆಂಗಳೂರು,ಫೆ,13-ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್ನ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಅವರ ಅಧಿಕೃತ ನಿವಾಸ `ಕಾವೇರಿ’ಯಲ್ಲಿ ಗುರುವಾರ ಒಡಂಬಡಿಕೆಗೆ ಅಂಕಿತ ಬಿದ್ದಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ…

ಕರ್ನಾಟಕವನ್ನು ಕೈಗಾರಿಕಾ ಪ್ರಗತಿ ಜತೆಗೆ ಸುಸ್ಥಿರ ರಾಜ್ಯ ಮಾಡುವ ಗುರಿ: ಡಿ.ಕೆ.ಶಿ ಅಭಿಮತ

ಕರ್ನಾಟಕವನ್ನು ಕೈಗಾರಿಕಾ ಪ್ರಗತಿ ಜತೆಗೆ ಸುಸ್ಥಿರ ರಾಜ್ಯ ಮಾಡುವ ಗುರಿ: ಡಿ.ಕೆ.ಶಿ ಅಭಿಮತ by-ಕೆಂಧೂಳಿ ಬೆಂಗಳೂರು, ಫೆ. 12-ಕರ್ನಾಟಕವನ್ನು ಕೈಗಾರಿಕೆ ಪ್ರಗತಿ ಜತೆಗೆ ಸುಸ್ಥಿರ ರಾಜ್ಯವನ್ನಾಗಿ ರೂಪಿಸುವ ಗುರಿ ಹೊಂದಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಶಿವಕುಮಾರ್ ಅವರು ಬುಧವಾರ ಮಾತನಾಡಿದರು. “ಇನ್ವೆಸ್ಟ್ ಕರ್ನಾಟಕ 2025 ಕೇವಲ ಹೂಡಿಕೆ ಸಮಾವೇಶ ಮಾತ್ರವಲ್ಲ. ಇದು ಭವಿಷ್ಯವನ್ನು ರೂಪಿಸುವ ನಮ್ಮ ಸಹಯೋಗದ ಹಾಗೂ ಕೈಗಾರಿಕಾ…

ರಾಜ್ಯಕ್ಕೆ ಸಂಪೂರ್ಣ ಸಹಕಾರ: ಕೇಂದ್ರ ಸಚಿವ ಪೀಯೂಷ್ ಗೋಯಲ್ ಭರವಸೆ

ರಾಜ್ಯಕ್ಕೆ ಸಂಪೂರ್ಣ ಸಹಕಾರ: ಕೇಂದ್ರ ಸಚಿವ ಪೀಯೂಷ್ ಗೋಯಲ್ ಭರವಸೆ by-ಕೆಂಧೂಳಿ 15 ಸಾಧಕ ಉದ್ಯಮಗಳಿಗೆ ಇನ್ವೆಸ್ಟ್ ಕರ್ನಾಟಕ ಪುರಸ್ಕಾರ ಪ್ರದಾನ ಬೆಂಗಳೂರು,ಫೆ,12-ರಾಜ್ಯಗಳ ಪ್ರಗತಿಯೇ ದೇಶದ ಪ್ರಗತಿಯಾಗಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಹಭಾಗಿತ್ವ ಹಾಗೂ ಸಹಕಾರ ತತ್ತ್ವದ ಮೇಲೆ ಕೆಲಸ ಮಾಡಿದರೆ ಭಾರತವು 2047ರ ಹೊತ್ತಿಗೆ 30 ಟ್ರಿಲಿಯನ್ ಡಾಲರ್ ಮೌಲ್ಯದ ಆರ್ಥಿಕತೆಯಾಗಿ ಬೆಳೆಯಲಿದೆ. ಈ ವಿಚಾರದಲ್ಲಿ ಕೇಂದ್ರ ಸರಕಾರವು ಕರ್ನಾಟಕಕ್ಕೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪೀಯೂಷ್ ಗೋಯಲ್ ಅವರು…

ರಾಜು ಜೇಮ್ಸ್ ಬಾಂಡ್” ಚಿತ್ರದ ಪ್ರೀ ರಿಲೀಸ್ ಇವೆಂಟ್ ನಲ್ಲಿ ಗೃಹ ಸಚಿವ ಪರಮೇಶ್ವರ ಭಾಗಿ

“ರಾಜು ಜೇಮ್ಸ್ ಬಾಂಡ್” ಚಿತ್ರದ ಪ್ರೀ ರಿಲೀಸ್ ಇವೆಂಟ್ ನಲ್ಲಿ ಗೃಹ ಸಚಿವ ಪರಮೇಶ್ವರ ಭಾಗಿ  by-ಕೆಂಧೂಳಿ ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಭರ್ತೂರ್ ನಿರ್ಮಾಣದ, ದೀಪಕ್ ಮಧುವನಹಳ್ಳಿ ನಿರ್ದೇಶನದ ಹಾಗೂ “ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ಗುರುನಂದನ್ ನಾಯಕರಾಗಿ ನಟಿಸಿರುವ “ರಾಜು ಜೇಮ್ಸ್ ಬಾಂಡ್ ” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಗೃಹ ಸಚಿವರಾದ ಜಿ.ಪರಮೇಶ್ವರ್ ಹಾಗೂ ಮೋಹಕ ತಾರೆ ರಮ್ಯ‌ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು. ಮುಖ್ಯಮಂತ್ರಿಗಳ…

ಅಧಿಕಾರಿಗಳಿಗೆ ರಕ್ಷಣೆ ಇಲ್ಲ, ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ:  ಆರ್‌.ಅಶೋಕ ಆಕ್ರೋಶ

ಅಧಿಕಾರಿಗಳಿಗೆ ರಕ್ಷಣೆ ಇಲ್ಲ, ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ:  ಆರ್‌.ಅಶೋಕ ಆಕ್ರೋಶ by-ಕೆಂಧೂಳಿ ಬೆಂಗಳೂರು, ಫೆ, 12-ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ. ಒಂದೆಡೆ ಮರಳು ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದರೆ, ಮತ್ತೊಂದೆಡೆ ಮೈಸೂರಿನಲ್ಲಿ ಗಲಭೆಕೋರರ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದ ಕೆಂಗಲ್‌ ಹನುಮಂತಯ್ಯ ಪ್ರತಿಮೆ ಮುಂಭಾಗ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೈಸೂರಿನಲ್ಲಿ ಉದಯಗಿರಿ ಪೊಲೀಸ್‌ ಠಾಣೆ ಮೇಲೆ ಮುಸ್ಲಿಂ ಮತಾಂಧರು ದಾಳಿ…

ವಿಪ್ರೋ ಹೆಲ್ತ್ ಕೇರ್ ನಿಂದ ರಾಜ್ಯದಲ್ಲಿ 8,000 ಕೋಟಿ ರೂ. ಹೂಡಿಕೆ

ವಿಪ್ರೋ ಹೆಲ್ತ್ ಕೇರ್ ನಿಂದ ರಾಜ್ಯದಲ್ಲಿ 8,000 ಕೋಟಿ ರೂ. ಹೂಡಿಕೆ ಬೆಂಗಳೂರು,ಫೆ,12-ವಿಪ್ರೋ-ಜಿಇ ಹೆಲ್ತ್ ಕೇರ್ ಸಂಸ್ಥೆಯು ಕರ್ನಾಟಕದ ಆರೋಗ್ಯಸೇವೆಗಳ ಕ್ಷೇತ್ರದಲ್ಲಿ ಮುಂದಿನ 5 ವರ್ಷಗಳಲ್ಲಿ ಇನ್ನೂ 8,000 ಕೋಟಿ ರೂ. ಹೂಡಿಕೆ ಮಾಡಲಿದೆ. ಇದು ಕಳೆದ ಎರಡು ದಶಕಗಳಲ್ಲಿ ವಿನಿಯೋಗಿಸಿರುವ 32 ಸಾವಿರ ಕೋಟಿ ರೂ. ಬಂಡವಾಳದ ಮುಂದುವರಿದ ಭಾಗವಾಗಿದೆ ಎಂದು ಕಂಪನಿಯ ದಕ್ಷಿಣ ಏಷ್ಯಾ ವಿಭಾಗದ ಮುಖ್ಯಸ್ಥ ಚೈತನ್ಯ ಸರವಟೆ ಹೇಳಿದ್ದಾರೆ. ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಬುಧವಾರ ನಡೆದ `ಜಗತ್ತಿನ ಅಗತ್ಯಗಳಿಗೆ ಮೇಕ್ ಇನ್…

ಮೈಕ್ರೋ ಫೈನಾನ್ಸ್  ತಡೆ ಸುಗ್ರೀವಾಜ್ಞೆ ಗೆ ರಾಜ್ಯಪಾಲರ ಅಂಕಿತ

ಮೈಕ್ರೋ ಫೈನಾನ್ಸ್  ತಡೆ ಸುಗ್ರೀವಾಜ್ಞೆ ಗೆ ರಾಜ್ಯಪಾಲರ ಅಂಕಿತ  by-ಕೆಂಧೂಳಿ ಬೆಂಗಳೂರು, ಫೆ,12-ಕೊನೆಗೂ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯ ಸರ್ಕಾರ ಕಳುಹಿಸಿದ್ದ ಸುಗ್ರೀವಾಜ್ಞೆ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಈ ಹಿಂದೆ ಇದೇ ಸುಗ್ರೀವಾಜ್ಞೆ ಗೆ ಸಹಿ ಹಾಕದೆ ವಾಪಾಸ್ ಕಳುಹಿಸಿದ್ದರು.ನಂತರ ಸರ್ಕಾರ ಮತ್ತೆ ರಾಜ್ಯಪಾಲರಿಗೆ ರವಾನಿಸಿತ್ತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹಲವು ಸಲಹೆಗಳನ್ನು ನೀಡಿ ಸುಗ್ರೀವಾಜ್ಞೆಗೆ ಅನುಮೋದನೆ ನೀಡಿದ್ದಾರೆ. ಸುಗ್ರೀವಾಜ್ಞೆ ಜಾರಿಗೆ ಕುರಿತಂತೆ ಹಲವು ಸೂಚನೆಗಳನ್ನು ನೀಡಿರುವ…

ಸ್ವಯಂಚಾಲಿತ ಕಾರಿನ ಮೇಲೆ ವಾಹನೋದ್ಯಮದ ನಿರೀಕ್ಷೆ

ಸ್ವಯಂಚಾಲಿತ ಕಾರಿನ ಮೇಲೆ ವಾಹನೋದ್ಯಮದ ನಿರೀಕ್ಷೆ by-ಕೆಂಧೂಳಿ ಬೆಂಗಳೂರು,ಫೆ,12-: ಸ್ವಯಂಚಾಲಿತ ಕಾರುಗಳು ಮುಂದಿನ ದಿನಗಳಲ್ಲಿ ಸಂಚಾರ ಕ್ಷೇತ್ರದಲ್ಲಿನ ಬಹುದೊಡ್ಡ ತಂತ್ರಜ್ಞಾನವಾಗಲಿದೆ ಎಂದು ‘ಮರ್ಸಿಡಿಸ್-ಬೆನ್ಜ್ ಇಂಡಿಯಾ’ದ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಸಂತೋಷ್‌ ಅಯ್ಯರ್‌ ಬುಧವಾರ ಅಭಿಪ್ರಾಯಪಟ್ಟರು. ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯುತ್ತಿರುವ ‘ಜಾಗತಿಕ ಹೂಡಿಕೆ ಸಮಾವೇಶ’ದಲ್ಲಿ ನಡೆದ ‘ವೇಗದ ನಗರೀಕರಣದ ವೇಳೆ ಸಂಚಾರ ಕ್ಷೇತ್ರದ ಭವಿಷ್ಯ’ ಗೋಷ್ಠಿಯಲ್ಲಿ ಮಾತನಾಡಿದರು. ಸರಕಾರ ಕಾರುಗಳ ಮೇಲೆ 68% ತೆರಿಗೆ ವಿಧಿಸುತ್ತಿದೆ. ಆದರೆ ಆ ಹಣ ಬೇರೆಡೆ ಬಳಕೆಯಾಗುತ್ತಿರುವುದು ಈ…

1 5 6 7 8 9 95
Girl in a jacket