Girl in a jacket

Author kendhooli_editor

ರೆಮ್‌ಡಿಸಿವಿರ್ ಮಾರಾಟಮಾಡುತ್ತಿದ್ದ ಇಬ್ಬರ ಬಂಧನ

ಬೆಂಗಳೂರು,ಮೇ,19:ರಾಜ್ಯದಲ್ಲಿ ರೆಮ್ಡಿಸಿವಿರ್ ಔಷಧಗಳ ಮಾರಾಟದ ದಂಧೆ ನಿರಂತರವಾಗಿ ನಡೆಯುತ್ತಿದೆ.ಇದಕ್ಕೆ ಮತ್ತಿಬ್ಬರು ಸೇರ್ಪಡೆಯಾಗಿದ್ದಾರೆ. ಸಾರ್ವಜನಿಕರನ್ನು ಸಂಪರ್ಕಿಸಿ ರೆಮ್ಡಿಸಿವರ್ ಹಾಗೂ ಕೊರೊನಾಗೆ ಔಷಧ ನೀಡುವುದಾಗಿ ಜಣ ಪಡೆದು ವಂಚಿಸುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಆರ್ಥಿಕ ಅಪರಾಧ ಹಾಗೂ ಮಾದಕ ವಸ್ತು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರಣ್ಯಪುರದ ಆದಿತ್ಯ ನಗರದ ನಿವಾಸಿ ಮಹಮ್ಮದ್ ಇಸ್ಮಾಯಿಲ್ ಖಾದ್ರಿ (43) ಹಾಗೂ ಯಲಹಂಕದ ಸಂತೋಷ ನಗರದಲ್ಲಿ ವಾಸವಿದ್ದ ನೈಜೀರಿಯಾ ಪ್ರಜೆ ಅಳದೆ ಅಬ್ದುಲ್ಲಾ ಯೂಸುಫ್ (26) ಬಂಧಿತರು. ಆರೋಪಿ ಇಸ್ಮಾಯಿಲ್ ಖಾದ್ರಿ ಸಿಮ್‌ ಕಾರ್ಡ್‌ ವ್ಯಾಪಾರಿ.…

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಕೋರಿ ಸುಪ್ರೀಂಗೆ ಅರ್ಜಿ

ನವದೆಹಲಿ,ಮೇ:ಕೇದ್ರ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ತೆರೆಮರೆ ಪ್ರಯತ್ನ ನಡೆಸುತ್ತಲೆ ಇದೆ ಈಗ ಇದಕ್ಕೆ ಪೂರಕವಾಗಿ ವಕೀಲರೊಬ್ಬರು ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ. ವಿಧಾನಸಭಾ ಚುನಾವಣೆ ಬಳಿಕ ಮಮತಾ ಬ್ಯಾನರ್ಜಿ ಸರ್ಕಾರವು ನಡೆಸಿದ ‘ಹತ್ಯಾಕಾಂಡ’ದಲ್ಲಿ ಬಿಜೆಪಿಯ 16 ಕಾರ್ಯಕರ್ತರು ಅಸುನೀಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಮೇ 2ರ ನಂತರ ನಡೆದಿರುವ ಬಿಜೆಪಿ ಬೆಂಬಲಿಗರ ಹತ್ಯೆಗಳ ಕುರಿತ ತನಿಖೆ ನಡೆಸಲು ವಿಶೇಷ ತನಿಖಾ…

ಗ್ರಾಮೀಣ ಪ್ರದೇಶದಲ್ಲಿ ಮನೆ ಆರೈಕೆ ಇಲ್ಲದಿದ್ದರೆ ಕೋವಿಡ್ ಕೇದ್ರಕ್ಕೆಅವಕಾಶ;ಸುಧಾಕರ್

ಬೆಂಗಳೂರು,ಮೇ,19:ಗ್ರಾಮೀಣ ಪ್ರದೇಶಗಳಲ್ಲಿ ಮನೆ ಆರೈಕೆ ವ್ಯವಸ್ಥೆ ಇಲ್ಲದಿದ್ದರೆ, ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗುತ್ತದೆ. ಸ್ಥಳೀಯ ಮಟ್ಟದ ಟಾಸ್ಕ್ ಫೋರ್ಸ್ ಈ ಕಾರ್ಯನಿರ್ವಹಿಸಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೂತ್ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಸ್ಥಳೀಯರು, ಸಂಘಟನೆ, ಮುಖಂಡರಿದ್ದು, ಕೋವಿಡ್ ನಿರ್ವಹಣೆ ಮಾಡುತ್ತಾರೆ. ರೋಗಿಗೆ ಮನೆ ಆರೈಕೆ ಸೌಲಭ್ಯಗಳಿಲ್ಲದಿದ್ದರೆ ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗುತ್ತದೆ ಎಂದು ತಿಳಿಸಿದರು. 2 ಕೋಟಿ ಕೋವಿಶೀಲ್ಡ್ ಲಸಿಕೆ ಖರೀದಿಸಲು ಸೀರಂ…

ಗುಜರಾತ್‌ಗೆ ೧ಸಾವಿರ ಕೋಟಿ ಪರಿಹಾರ ಘೋಷಿಸಿದ ಮೋದಿ

ಅಹಮದಬಾದ್,ಮೇ,೧೯:ಗುಜರಾತ್‌ನಲ್ಲಿ ತೌತೆ ಚಂಡಮಾರುತದ ಅಬ್ಬರದಿಂದ ಹಾನಿಗೊಳಗಾದ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಡೆಸಿದರು. ಈ ವೇಳೆ ಅವರು ರಾಜ್ಯದಲ್ಲಿ ತಕ್ಷಣದ ಪರಿಹಾರ ಕ್ರಮಗಳಿಗಾಗಿ ೧,೦೦೦ ಕೋಟಿ ರೂ ಘೋಷಿಸಿದ್ದಾರೆ. ಇದರ ಜೊತೆಗೆ ಅವರು ಚಂಡ ಮಾರುತದಿಂದ ಪ್ರಾಣಕಳೆದುಕೊಂಡವ ಸಂತ್ರಸ್ತ ಕುಟುಂಬಗಳಿಗೆ ೨ ಲಕ್ಷ, ಗಾಯಗೊಂಡವರಿಗೆ ೫೦ ಸಾವಿರ ಪರಿಹಾರ ಹಣ ಘೋಷಿಸಿದ್ದಾರೆ. ಗುಜರಾತ್ ಮತ್ತು ಡಿಯುನಲ್ಲಿ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಪ್ರಧಾನಿ ಭೇಟಿ ನೀಡಿದರು. ಈ ವೇಳೆ ಅವರು…

ನಾರದ ವರ್ಗಾವಣೆ ಪ್ರಕರಣ; ಮಮತಾ ಬ್ಯಾನರ್ಜಿಯನ್ನು ಪ್ರತಿವಾದಿ ಮಾಡಿದ ಸಿಬಿಐ

ಕೋಲ್ಕತಾ,ಮೇ೧೯: ನಾರದ ಸ್ಟಿಂಗ್ ಆಪರೇಷನ್ ಪ್ರಕರಣವನ್ನು ಪಶ್ಚಿಮ ಬಂಗಾಳದಿಂದ ವರ್ಗಾವಣೆ ಮಾಡುವಂತೆ ಕೋರಿ ಕೋಲ್ಕತ್ತಾ ಹೈಕೋರ್ಟ್‌ಗೆ ಸಿಬಿಐ ಅರ್ಜಿ ಸಲ್ಲಿಸಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಕಾನೂನು ಸಚಿವ ಮೊಲಾಯ್ ಘಟಕ್ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಆಕ್ಟಿಂಗ್ ಮುಖ್ಯ ನ್ಯಾಯಮೂರ್ತಿ ರಾಜೇಶ್ ಬಿಂದಾಲ್ ಅವರ ನೇತೃತ್ವದ ವಿಭಾಗೀಯ ಪೀಠವು ಬುಧವಾರ ಮಧ್ಯಾಹ್ನ ಅರ್ಜಿ ವಿಚಾರಣೆ ನಡೆಸಲು ನಿರ್ಧರಿಸಿದೆ. ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಸಚಿವರಾದ ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್ ಹಕೀಮ್, ಟಿಎಂಸಿ ಶಾಸಕ ಮದನ್…

ಪ್ಯಾಕೇಜ್ ಹೆಸರಿನಲ್ಲಿ ಜನರಿಗೆ ಟೋಪಿ; ಎಚ್‌ಡಿಕೆ ಟೀಕೆ

ಬೆಂಗಳೂರು,ಮೇ,೧೯: ಕೊರೊನಾ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಲಾಕ್‌ಡೌನ್ ನಿಂದ ಸಂಕಷ್ಟಕ್ಕೊಳಗಾಗಿರುವ ಜನರಿಗೆ ರಾಜ್ಯಸರ್ಕಾರ ಘೋಷಿಸಿರುವ ಆರ್ಥಿಕ ಪ್ಯಾಕೇಜ್ ಜನರ ಹೆಸರಿನಲ್ಲಿ ಜನರಿಗೆ ಟೋಪಿ ಹಾಕಿದಂತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ, ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿರುವ ಆರ್ಥಿಕ ಪ್ಯಾಕೇಜ್ ಸಮರ್ಪಕವಾಗಿಲ್ಲ ಕಳೆದ ವರ್ಷವೂ ಕೂಡ ಇದೇ ರೀತಿ ಪ್ಯಾಕೇಜ್ ಘೋಷಿಸಿ ಜನರಿಗೆ ವಂಚಿಸಿತ್ತು ಈಗ ಮತ್ತೊಮ್ಮೆ ನಾಟಕೀಯ ಪ್ಯಾಕೇಜ್ ಘೋಷಿಸುವ ಮೂಲಕ ಜನರಿಗೆ ಟೋಪಿ ಹಾಕಿದೆಎಂದು ಟೀಕಿಸಿದ್ದಾರೆ. ಕಳೆದ ವರ್ಷವೂ…

ಕೊರೊನಾ ಪ್ಯಾಕೇಜ್ ಜನರ ಕಣ್ಣಿಗೆ ಮಣ್ಣೆರಚುವ ತಂತ್ರ ;ಸಿದ್ದು

ಬೆಂಗಳೂರು,ಮೇ,19: ಕೊರೊನಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಣೆ ಮಾಡಿರುವ ಪ್ಯಾಕೇಜ್ ಊಟಕ್ಕಿಲ್ಲದ ಉಪ್ಪಿನಕಾಯಿ ರೀತಿಯಂತಿದೆ. ಜೊತೆಗೆ ಅವೈಜ್ಞಾನಿಕ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬಡ ಕುಟುಂಬಗಳಿಗೆ ತಲಾ ಹತ್ತು ಕೆ.ಜಿ. ಅಕ್ಕಿ ಮತ್ತು ದುಡಿಯುವ ವರ್ಗದವರಿಗೆ ತಲಾ ಹತ್ತು ಸಾವಿರ ರೂ. ಪರಿಹಾರ ನೀಡುವ ಪ್ಯಾಕೇಜ್ ಘೋಷಣೆ ಮಾಡಿ ನೂರಕ್ಕೆ ನೂರರಷ್ಟು ಲಾಕ್‍ಡೌನ್ ಜಾರಿಗೆ ತನ್ನಿ ಎಂದು ಅವರು ಒತ್ತಾಯಿಸಿದ್ದಾರೆ. ತಮ್ಮ ನಿವಾಸದಲ್ಲಿ  ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು,…

ಬಡವರಿಗೆ ಉಪಯೋಗವಾಗದ ಆರ್ಥಿಕ ಪ್ಯಾಕೇಜ್-ಡಿಕೆಶಿ

ಬೆಂಗಳೂರು,ಮೇ,19:ಲಾಕ್ ಡೌನ್ ಸಂತ್ರಸ್ತರ ನೆರವಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಘೋಷಿಸಿರುವ 1215 ಕೋಟಿ ರುಪಾಯಿ ಪ್ಯಾಕೇಜ್ ಕೇವಲ ನೆಪಕ್ಕೆ ಮಾತ್ರ. ಬಡವರಿಗೆ ನೆರವಾಗುವ ಉದ್ದೇಶ ಇದರಲ್ಲಿ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬುಧವಾರ ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ ಸರ್ಕಾರದ ಕೊರೋನಾ ಪರಿಸ್ಥಿತಿ ನಿರ್ವಹಣೆ ಬಗ್ಗೆ ನಂಬಿಕೆ ಇಲ್ಲ. ಕಳೆದ ಬಾರಿಯೂ ಇದೇ ರೀತಿ ಪರಿಹಾರ ಘೋಷಿಸಿದ್ದರು. ಚಾಲಕರು, ನೇಕಾರರು, ಸವಿತಾ ಸಮಾಜದವರಿಗೆ ಪೂರ್ಣ ಪ್ರಮಾಣದಲ್ಲಿ ಪರಿಹಾರ ನೀಡಿಲ್ಲ ಎಂದು…

ಲಾಕ್‌ಡೌನ್ ಹಿನ್ನೆಲೆ-೧,೨೫೦ ಕೋಟಿ ರೂ ಆರ್ಥಿಕ ಪ್ಯಾಕೇಜ್ ಘೋಷಿಸಿದ ಸಿಎಂ

ಬೆಂಗಳೂರು,ಮೇ,೧೯: ಕೊರೊನಾ ಎರಡನೇ ಅಲೆ ತೀವ್ರವಾಗಿ ಬಾದಿಸಿದ ಹಿನ್ನೆಲೆಯಲ್ಲಿ ಲಾಕ್‌ಡೌನ್ ಮಾಡಲಾಗಿತ್ತು ಹೀಗಾಗಿ ಹಲವು ಅಸಂಘಿಟಿತ ವಲಯಗಳ ಕಾರ್ಮಿಕರಿಗೆ ರೈತರಿಗೆ ದಿನಗೂಲಿ ನೌಕರರಿಗೆ,ಬಡವರು ಹಾಗೂ ನಿರ್ಗತಿಕರಿಗೆ ರಾಜ್ಯ ಸರ್ಕಾರ ೧,೨೫೦ ಕೋಟಿ ರೂ ಆರ್ಥಿಕ ಪ್ಯಾಕೇಜ್ ಘೋಷಿಸಿದೆ. ಬುಧವಾರ ಬೆಳಿಗ್ಗೆ ಹಿರಿಯ ಸಚಿವರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ವಿವಿಧ ಅಸಂಘಟಿತ ವಲಯಗಳಿಗೆ ಆರ್ಥಿಕ ಪ್ಯಾಕೇಜ್ ನೀಡಲಾಗುವುದು ಎಂದು ಹೇಳಿದರು. ಆಟೋ,ಕ್ಯಾಬ್ ಚಾಲಕರಿಗೆ ನೋಂದಾಯಿತ ನಿರ್ಮಾಣ…

ಗಿರಿಶ್ ಕರ್ನಾಡ್ ಎಂಬ ಅಗಾಧ ಪ್ರತಿಭೆಯ ನೆನದು..

ಅವರು ಅತ್ಯಂತ ಕ್ರಿಯಾಶೀಲಾ ಮತ್ತು ಪ್ರಗತಿಪರ ಚಿಂತಕರು ಸೈದ್ದಾಂತಿಕನಿಲುವುಗಳ ಬದ್ಧತೆಯಲ್ಲೇ ಬದುಕಿದ ಮಹಾನ್ ಪ್ರತಿಭೆ ರಂಗಭೂಮಿ ತಜ್ಞರು,ನಟರು ಹೀಗೆ ಹಲವು ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಟ್ಟದ್ದ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ತಮ್ಮದೇ ಆದ ಹೆಸರನ್ನು ಪಡೆದುಕೊಂಡ ಗಿರೀಶ್ ಕಾರ್ನಾಡ್ ಅವರ ಜನ್ಮ ದಿನ ಇಂದು ಆ ನಿಮಿತ್ತವಾಗಿ ಅವರ ಕುರಿತ ಒಂದು ಲೇಖನ. ಪುರಾಣ,ಇತಿಹಾಸ,ಜಾನಪದ ಸೊಗಡುಗಳ ಅಂಶಗಳನ್ನಿಟ್ಟುಕೊಂಡು ಬರೆದ ಅವರ ನಾಟಕಗಳು ಪಡೆದ ಯಶಸ್ಸು ಅವರನ್ನು ಉತ್ತಂಗಕ್ಕೇರಿಸಿತು ಸಾಹಿತ್ಯದ ವಲಯದಲ್ಲಿ ಹೆಚ್ಚು ಗುರುತಿಸಿಕೊಂಡರು ಸದಾ ಒಂದಲ್ಲೊಂದು ಚಿಂತನೆಯಲ್ಲಿಯೇ ತೊಡಗಿರುತ್ತಿದ್ದ…

ದೇಶದ ಸಂಕಷ್ಟ ಸ್ಥಿತಿಯಲ್ಲೂ ಕೈ-ಕಮಲದ ರಾಜಕೀಯ ಕೆರಚಾಟ

ಬೆಂಗಳೂರು,ಮೇ೧೯: ಈ ದೇಶದಲ್ಲಿ ಬಂದೊದಗಿದ ಕೊರೊನಾ ಮಹಾಮಾರಿಗೆ ದಿನನಿತ್ಯ ಸಾವಿರಾರು ಮಂದಿ ಬಲಿಯಾಗುತ್ತಿದ್ದಾರೆ ಬದುಕೆ ದುಸ್ತರವಾದ ಈ ಹೊತ್ತಿನಲ್ಲಿ ರಜಕೀಯ ಪಕ್ಷಗಳ ಕೆರಚಾಟ ಅಗತ್ಯವಿದೆಯೇ. ರಾಜಕೀಯ ಪಕ್ಷಗಳ ನಾಯಕರಿಗೆ ಈ ದೇಶದ ಭವಿಷ್ಯ ಈ ದೇಶದ ಜನರ ಸಂಕಷ್ಟಗಳು ಅರಿವು ಇದ್ದಿದ್ದರೆ ಈ ಸಮಯದಲ್ಲಿ ಎರಡು ರಾಷ್ಟ್ರೀಯ ಪಕ್ಷಗಳ ನಾಯಕರು ಪರಸ್ಪರ ವಾದ ಪ್ರತಿವಾದಗಳಲ್ಲಿ ತೊಡಗುತ್ತಿರಲಿಲ್ಲ ರಾಜಕಾರಕ್ಕೆ ಇಳಿಯುತ್ತಿರಲಿಲ್ಲ. ದೇಶದ ಜನರ ಚಿತ್ತ ಬೇರೆಡೆಗೆ ಎಳೆಯಲು ರಾಜಕಾರಣಿಗಳು ಈ ಹೊತ್ತಿನಲ್ಲಿ ಇಂತ ವಾಕ್ಸಮರಕ್ಕೇ ಇಳಿದಿದ್ದಾರೆಯೇ ಎನ್ನುವ ಅನುಮಾನಗಳು…

ಕಿರಿಕ್ ಪಾರ್ಟಿ ಹಿಂದಿ ರಮೇಕ್‌ನಲ್ಲಿ ನಟಿಸಲ್ಲ ಎಂದ ರಶ್ಮಿಕಾ

ಕಿರಿಕ್ ಪಾರ್ಟಿ ಸಿನಿಮಾ ಕನ್ನಡದಲ್ಲಿ ಅತ್ಯಂತ ಯಶಸ್ಸು ಕಂಡ ಚಿತ್ರ ಈ ಚಿತ್ರದ ಮೂಲಕ ರಶ್ಮಿಕ ಮಂದಣ್ಣ ಪರಿಚಯವಾಗಿದ್ದು ಈ ಮೂಲಕ ಈಗ ಬಾಲಿವುಡ್‌ವರೆಗೂ ಸಿನಿಪ್ರಯಾಣ ಬೆಳಸಿದ್ದಾರೆ. ಆದರೆ ಈಗ ಅದೇ ಕಿರಿಕ್ ಪಾರ್ಟಿ ಹಿಂದಿ ರಿಮೇಕ್‌ನಲ್ಲಿ ನಟಿಸುವುದಿಲ್ಲ ಎಂದು ಖಡಕ್ಕಾಗಿಯೇ ಹೇಳಿದ್ದಾರೆ. ಕಿರಿಕ್ ಪಾರ್ಟಿ ಚಿತ್ರದ ಸಕ್ಸಸ್ ನಂತರ ಟಾಲಿವುಡ್, ಕಾಲಿವುಡ್, ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ರಶ್ಮಿಕಾ, ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಕಿರಿಕ್ ಪಾರ್ಟಿ ಸಿನಿಮಾ ಏನಾದರೂ ಹಿಂದಿಯಲ್ಲಿ ರಿಮೇಕ್ ಆದರೆ ನೀವು ನಟಿಸುತ್ತೀರಾ ಎಂಬ…

ಪ್ರೇಮ ಸಂದೇಶದ ಆಲ್ಬಂ ಹಾಡು ಬಿಡುಗಡೆ ಮಾಡಿದ ಉಪೇಂದ್ರ

ಚಿತ್ರಪ್ರೇಮಿಗಳು ಸೇರಿಕೊಂಡು ಪ್ರೇಮಗೀತೆಗಳ ಆಲ್ಬಂ ಚಿತ್ರೀಕರಿಸಿದ್ದು ಅದನ್ನು ನಟ ಉಪೇಂದ್ರ ಬಿಡುಗಡೆ ಮಾಡಿ ಆ ತಂಡಕ್ಕೆ ಶುಭಕೋರಿದ್ದಾರೆ. ‘ಇವಳು ಸುಜಾತ’ ಧಾರಾವಾಹಿ, ಕೃಷ್ಣ ತುಳಸಿ ಮುಂತಾದ ಸಿನಿಮಾಗಳಲ್ಲಿ ನಟಿಸಿರುವ ನಟಿ ಮೇಘಶ್ರೀ ಇದೇ ಮೊದಲ ಬಾರಿಗೆ ಆಲ್ಬಂ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರೇಮ ಕತೆಯುಳ್ಳ ಈ ’ನಾನು ನಾನು ಪ್ರೀತಿಸುತ್ತಿರುವೆ’ ಆಲ್ಬಂ ಹಾಡಿನಲ್ಲಿ ಮೇಘಶ್ರೀ ಜೊತೆಗೆ ಹೊಸ ಪ್ರತಿಭೆ ಅರುಣ್ ಚಂದ್ರಪ್ಪ ನಾಯಕರಾಗಿ ನಟಿಸಿದ್ದಾರೆ. ಹಾಡು ಬಿಡುಗಡೆ ಆದ ೨೪ ಗಂಟೆಗಳಲ್ಲಿ ೧.೫ ಲಕ್ಷಕ್ಕೂ ಅಧಿಕ ವ್ಯೂವ್ಸ್ ಪಡೆದುಕೊಂಡಿರುವುದು…

ತೌತೆ ಚಂಡಮಾರುತಕ್ಕೆ ಮಹಾರಾಷ್ಟ್ರ,ಗುಜರಾತ್‌ನಲ್ಲಿ ೩೩ ಸಾವು

ನವದೆಹಲಿ,ಮೇ,೧೯: ಕಳೆದ ಎರಡು ದಿನಗಳಿಂದ ತೌತೆ ಚಂಡ ಮಾರುತದ ಅಬ್ಬರ ಹೆಚ್ಚಾಗಿದ್ದು ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಭಾರಿ ಅನಾಹುತ ಸೃಷ್ಟಿಸಿದ್ದು ಎರಡು ರಾಜ್ಯಗಳಲ್ಲಿ ಒಟು ೩೩ ಮಂದಿ ಸಾವನ್ನಪ್ಪಿದ್ದಾರೆ ೧೦೦ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ, ಸೋಮವಾರ ಬೆಳಗಿನಿಂದಲೂ ಆರಂಭವಾಗಿದ್ದು ಈ ಚಂಡಮಾರುತದ ತೀವ್ರತೆ ಈ ಎರಡು ರಾಜ್ಯಗಳ ಕಡಲ ತೀರದಲ್ಲಿ ದೈತ್ಯ ಅಲೆಗಳಿಗೆ ಕೆಲವು ಐತಿಹಾಸಿಕ ಸ್ಮಾರಕಗಳು ಹಾನಿಗೊಳಗಾಗಿವೆ. ಮಂಗಳವಾರ, ಮಹಾರಾಷ್ಟ್ರ ಕರಾವಳಿಯಲ್ಲಿ ಚಂಡಮಾರುತದ ಪರಿಣಾಮ ಗಾಳಿಗೆ ಎದ್ದ ಸಮುದ್ರದ ದೈತ್ಯ ಅಲೆಗಳು ಗೇಟ್‌ವೇ ಆಫ್ ಇಂಡಿಯಾ,…

ಥ್ರಿಲರ್ ನಿರ್ದೇಶನದತ್ತ ದಿಯಾ ಅಶೋಕ್

ಲಾಕ್ ಡೌನ್‌ನಿಂದಾಗ ಮಂಗಳೂರಿನಲ್ಲಿ ಇರುವ ದಿಯಾ ಚಿತ್ರ ನಿರ್ದೇಶಕ ಕೆ.ಎಸ್.ಅಶೋಕ್ ಈಗ ಥ್ರಿಲರ್ ಚಿತ್ರ ನಿರ್ದೇಶಿಲಿದ್ದಾರೆ. ಮಂಗಳೂರಿನಲ್ಲಿರುವ ಅವರು ಕಥೆಯೊಂದನ್ನು ಬರೆಯುತ್ತಿದ್ದರೆ ,ಹೊಸದಾಗಿ ಮೂಡಿರುವ ಕಥೆ ಈಗ ಅವರು ಒಂದು ವಾರದಿಂದ ಬರೆಯುತ್ತಿದ್ದಾರೆ ಸ್ಕ್ರಿಪ್ಟ್ ಮುಗಿದ ನಂತರಪಾತ್ರದಾರಿಗಳಿಗಾಗಿ ಹುಡುಕಾಟ ನಡೆಸುತ್ತೇನೆ ಎಂದೂ ಅವರು ಹೇಳಿದ್ದಾರೆ ಅಶೋಕ ಪ್ರಸ್ತುತ ಥ್ರಿಲ್ಲರ್ ಕಥೆಯೊಂದನ್ನು ಬರೆಯುತ್ತಿದ್ದಾರೆ. ಅದು ಒಟಿಟಿ ಪ್ಲಾಟ್‌ಫಾರ್ಮ್‌ಗಳಿಗೆ ಸರಿಹೊಂದುತ್ತದೆ. “ಪ್ರತಿಯೊಂದು ಚಿತ್ರವನ್ನೂ ದೊಡ್ಡ ಪರದೆಯಲ್ಲಿ ನೋಡಬೇಕೆಂದು ನಾವು ಭಾವಿಸುತ್ತೇವೆ. ಆದರೆ ಈ ಸಮಯದಲ್ಲಿ, ಒಟಿಟಿ ಮೊರೆ ಹೋಗಬೇಕಾಗಿದೆ. ನನಗೆ…

ನಾಳೆ ಲಾಕ್‌ಡೌನ್ ವಿಸ್ತರಣೆ,ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ

ಬೆಂಗಳೂರು,ಮೇ: ಮುಖ್ಯಮಂತ್ರಿ ಬಿ.ಎಸ್.ಯಿಡಯೂರಪ್ಪ ನಾಳೆ ಕರೆದಿರುವ ಸುದ್ದಿಗೋಷ್ಠಿ ಮಹತ್ವ ಪಡೆದುಕೊಂಡಿದೆ.ಈ ವೇಳೆ ಲಾಕ್ ಡೌನ್ ವಿಸ್ತರಣೆ ಹಾಗೂ ವಿಶೇಷ ಪ್ಯಾಕೇಜ್ ಬಗ್ಗೆ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. ನಾಳೆ ೧೧.೩೦ಕ್ಕೆ ಸುದ್ದಿಗೋಷ್ಠಿ ನಡೆಯಲಿದೆ ಇದಕ್ಕೂ ಮುನ್ನ ಕೋವಿಡ್ ಉಸ್ತುವಾರಿ ಸಚಿವರ ಸಭೆ ನಡೆಸಲಿದ್ದು ಈ ಸಭೆಯಲ್ಲಿ ಲಾಕ್‌ಡೌನ್ ವಿಸ್ತರಣೆ ಹಾಗೂ ವಿಶೇಷ ಪ್ಯಾಕೇಜ್ ಕುರಿತಂತೆ ಚರ್ಚಿಸಲಿದ್ದಾರೆ ಎನ್ನಲಾಗುತ್ತಿದೆ. ಈ ವಿಶೇಷ ಪ್ಯಾಕೇಜ್‌ನಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಹಣದ ನೆರವು.ಮಡಿವಾಳ, ಸವಿತಾ ಸಮುದಾಯಕ್ಕೆ ನೆರವು ,ಟ್ಟಡ ಕಾರ್ಮಿಕರಿಗೆ ಮನಿ…

ಕೇರಳ ಸಚಿವ ಸಂಪುಟದಲ್ಲಿ ಹೊಸಬರಿಗೆ ಅವಕಾಶ, ಶೈಲಜಾಗೆ ಕೊಕ್

ತಿರುವನಂತಪುರಂ,ಮೇ,೧೮: ಕೋವಿಡ್ ಹರಿಡಿದ್ದ ಸಂದರ್ಭದಲ್ಲಿ ಕೇರಳದಲ್ಲಿ ಅದನ್ನು ಸಮರ್ಥವಾಗಿ ನಿಭಾಯಿಸಿ ಎಲ್ಲರ ಪ್ರಶಂಸೆಗೆ ಒಳಗಾಗಿದ್ದ ಆಗಿನ ಆರೋಗ್ಯ ಸಚಿವರಾಗಿದ್ದ ಕೆ.ಕೆ.ಶೈಲಜಾ ಅವರನ್ನು ಪಿಣಿರಾಯ್ ಅವರ ಸಚಿವ ಸಂಪುಟದಿಂದ ಹೊರಗುಳಿದಿದ್ದಾರೆ. ಬಹುತೇಕ ಈ ಬಾರಿ ಹೊಸ ಮುಖಗಳಿಗೆ ಅವಕಾಶ ನೀಡುವ ಮೂಲಕ ಸಿಪಿಐ(ಎಂ)ನ ರಾಜ್ಯ ಸಮಿತಿಯ ಸಭೆಯಲ್ಲಿ ಈ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಎಂ.ಬಿ.ರಾಜೇಶ್ ಕೇರಳ ಸರಕಾರದ ನೂತನ ಸ್ಪೀಕರ್ ಆಗಿದ್ದು, ಕೆ.ಕೆ.ಶೈಲಜಾ ಅವರು ಪಕ್ಷದ ಪ್ರಮುಖ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ ಎಂದು ಸಿಪಿಐಎಂ ಪ್ರಕಟಣೆಯಲ್ಲಿ ತಿಳಿಸಿದೆ. ಮುಖ್ಯಮಂತ್ರಿ ಪಿಣರಾಯಿ…

ದೊಡ್ಡ ಪ್ರಮಾಣದಲ್ಲಿ ಕೋವಿಡ್ ಲಸಿಕೆ ಹೆಚ್ಚಿಸಲು ಮೋದಿ ಸಲಹೆ

ನವದೆಹಲಿ,೧೮:sಸ್ಥಳೀಯ ಅವಶ್ಯಕತೆಗಳಿಗೆ ಅನುಗುಣವಾಗಿ ಹೊಸ ವಿಧಾನ ಅನುಸರಿಸುವಮೂಲಕ ದೊಡ್ಡಪ್ರಮಾಣದಲ್ಲಿ ಲಸಿಕೆ ಪೂರೈಕೆಯನ್ನು ಹೆಚ್ಚಿಸಲು ನಿರಂತರ ಪ್ರಯತ್ನ ಪಡಬೇಕುಎಂದು ಪ್ರಧಾನ ಮೋದಿ ಅವರು ಎಲ್ಲ ರಾಜ್ಯಗಳ ಜಿಲ್ಲಾಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ೯ ರಾಜ್ಯಗಳ ೪೬ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಪ್ರಧಾನಿ ಮೋದಿ, ಕೋವಿಡ್-೧೯ ವಿರುದ್ಧದ ಹೋರಾಟದಲ್ಲಿ ರಾಜ್ಯ ಮತ್ತು ಜಿಲ್ಲೆ ಮಟ್ಟದ ಅಧಿಕಾರಿಗಳನ್ನು ’ಫೀಲ್ಡ್ ಕಮಾಂಡರ್ಸ್’ ಎಂದು ಮಂಗಳವಾರ ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಸ್ಥಳೀಯ ಕಂಟೈನ್ ಮೆಂಟ್ ವಲಯಗಳು, ತ್ವರಿತಗತಿಯಲ್ಲಿ ಪರೀಕ್ಷೆ ಮತ್ತು ಜನರೊಂದಿಗೆ…

ಎರಡನೇ ಹಂತದ ಲಾಕ್‌ಡೌನ್ ನಂತರ ಪ್ಯಾಕೇಜ್ ಘೋಷಣೆ-ಅಶೋಕ್

ಕಾರವಾರ,ಮೇ,೧೮: ಲಾಕ್‌ಡೌನ್ ಮುಂದುವರೆಸಬೇಕೆ ಬೇಡವೇ ಕುರಿತು ಮುಖ್ಯಮಂತ್ರಿಗಳು ನಿರ್ಧರಿsಲಿದ್ದು ಎರಡನೇ ಹಂತದ ಲಾಕ್‌ಡೌನ್ ಘೋಷಣೆ ನಂತರ ಪ್ಯಾಕೇಜ್‌ಘೋಷಣೆಯೂ ಮಾಡುತ್ತಾರೆ ಎನ್ನುವ ಸುಳುವಿನ್ನು ಕಂದಾಯ ಸಚಿವ ಆರ್.ಅಶೋಕ್ ನೀಡಿದ್ದಾರೆ. ಭಟ್ಕಳದಲ್ಲಿ ಚಂಡಮಾರುದಿಂದ ಹಾನಿಗೊಳಗಾದ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರಿಸ್ಥಿತಿಯನ್ನು ಅವಲೋಕಿಸಿ ಲಾಕ್‌ಡೌನ್ ವಿಸ್ತರಣೆ ಮಾಡಬೇಕೆ ಬೇಡವೇ ಎನ್ನುವ ಕುರಿತು ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ ಈ ವೇಳೆ ಎರಡನೇ ಹಂತದ ಘೋಷಣೆ ಮಾಡಿದಾಗ ಪ್ಯಾಕೇಜ್ ಕೂಡ ಘೋಷಣೆ ಮಾಡುತ್ತಾರೆ ಎಂದು ಅವರು ಹೇಳಿದರು ಹಳ್ಳಿಗಳಲ್ಲಿ…

ಕೊರಾನಾ ರೋಗಕ್ಕೆ ಕಚ್ಚಾ ಮಾವಿನ ಹಣ್ಣು ಮದ್ದು

ಕಚ್ಚಾ ಮಾವು ದೇಹದಲ್ಲಿ ನೀರಿನ ಸರಬರಾಜು ಮಾಡಲು ಸಹಾಯ ಮಾಡುತ್ತದೆ, ಇದು ನಮ್ಮ ಜೀರ್ಣಕ್ರಿಯೆಗೆ ತುಂಬಾ ಸಹಾಯಕವಾಗಿದೆ ನಿಮ್ಮ ದೇಹದಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇದೆಯಾ? ಹಾಗಿದ್ರೆ ನೀವು ಕಚ್ಚಾ ಮಾವನ್ನು ಸೇವಿಸಬೇಕು, ಏಕೆಂದರೆ ಅದರಲ್ಲಿ ಕಂಡುಬರುವ ಅಂಶಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕೆಲಸ ಮಾಡುತ್ತದೆ. ವಿಶೇಷವೆಂದರೆ ಬೇಸಿಗೆಯಲ್ಲಿ ಕಚ್ಚಾ ಮಾವಿನಹಣ್ಣನ್ನು ತಿನ್ನುವುದು ನಿಮ್ಮನ್ನು ಆರೋಗ್ಯವಾಗಿರಿಸುವುದಲ್ಲದೆ ಅನೇಕ ಗಂಭೀರ ಕಾಯಿಲೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಕಚ್ಚಾ ಮಾವು ದೇಹದಲ್ಲಿ ನೀರಿನ ಸರಬರಾಜು ಮಾಡಲು ಸಹಾಯ ಮಾಡುತ್ತದೆ,…

1 90 91 92 93 94 97
Girl in a jacket