ಪ್ರಶಾಂತ್ ಕಿಶೋರ್, ರಾಹುಲ್ ಗಾಂಧಿ ಭೇಟಿ-ರಾಷ್ಟ್ರ ರಾಜಕಾರಣದಲ್ಲಿ ಸಂಚಲನ
ನವದೆಹಲಿ,ಜು,೧೩:ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಮಂಗಳವಾರ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ದೆಹಲಿಯ ರಾಹುಲ್ ಗಾಂಧಿ ನಿವಾಸಕ್ಕೆ ತೆರಳಿದ ಪ್ರಶಾಂತ್ ಕಿಶೋರ್ ಗಂಟೆಗಳ ಕಾಲ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ ಹಾಜರಿದ್ದರು. ಜೂನ್ ೨೧ರಂದು ಪ್ರಶಾಂತ್ ಕಿಶೋರ್ ಹಾಗೂ ಶರದ್ ಪವಾರ್ ಚರ್ಚೆ ನಡೆಸಿದ್ದು ದೇಶದಲ್ಲಿ ಹೊಸ ರಾಜಕೀಯ ಸಾಧ್ಯತೆಗಳ ಕುರಿತು ಚರ್ಚೆ ಆರಂಭವಾಗಿತ್ತು. ೨…



















