Girl in a jacket

Author kendhooli_editor

ಕೊರೊನಾ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ

ನವದೆಹಲಿ,ಜೂ,28:ಕೊರೋನ ಸೋಂಕಿತರ ಸಂಖ್ಯ ಇಳಿಮುಖವಾಗುತ್ತಿದ್ದು ಕೊರೊನಾ ಬಾಧಿತ ವಲಯಗಳಿಗೆ ಕೇಂದ್ರ ಸರ್ಕಾರ 1.1 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಣೆ ಮಾಡಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಬಗ್ಗೆ ಸುದ್ದಿಗೋಷ್ಡಿ ನಡೆಸಿ ವಿವಿರ ನೀಡಿದರು. ಕೊರೋನಾ ಬಾಧಿತ ವಲಯಗಳಿಗೆ 1.1 ಲಕ್ಷ ಕೋಟಿ ರೂ, ವೈದ್ಯಕೀಯ ಮೂಲಸೌಕರ್ಯಕ್ಕೆ 50 ಸಾವಿರ ಕೋಟಿ ರೂ. ಉಳಿದ ವಲಯಗಳಿಗೆ 60 ಸಾವಿರ ಕೋಟಿ ಅನುದಾನ ನೀಡಲಾಗುತ್ತದೆ ಎಂದು ತಿಳಿಸಿದರು. 1.5 ಲಕ್ಷ ಕೋಟಿ ರೂ. ತುರ್ತು ಕ್ರೆಡಿಟ್…

ಜುಲೈ 19,22ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ

ಬೆಂಗಳೂರು,ಜೂ,28:ಕೊನೆಗೂ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಸಿಯೇ ತೀರಬೇಕೆಂದು ಹಠ ತೊಟ್ಟಿರುವ ಶಿಕ್ಷಣ ಸಚಿವರು ಪರೀಕ್ಷೆಗೆ ದಿನಾಂಕ ನಿಗದಿ ಮಾಡಿದ್ದಾರೆ. ಜುಲೈ 19 ಮತ್ತು 22 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಂಡಿದ್ದು ಈ ಕುರಿತು ಇಂದು ಸುದ್ದಿಗೋಷ್ಟಿಯಲ್ಲಿ ವಿವರ ನೀಡಿದ್ದಾರೆ. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಜುಲೈ 19 ರಂದು…

ದೀಪಿಕಾಗೆ ಒಂದೇ ದಿನ ಮೂರು ಚಿನ್ನದ ಪದಕ

ಪ್ಯಾರೀಸ್,ಜೂ,೨೮:ನಿನ್ನೆ ನಡೆದ ಮೆಗಾ-ಈವೆಂಟ್ ಅರ್ಚರಿ ವಿಶ್ವಕಪ್‌ನ ಹಂತ ಮೂರರಲ್ಲಿ ದೀಪಿಕಾ ಕುಮಾರಿ ಮೂರು ಚಿನ್ನದ ಪದಕ ಗಳಿಸುವ ಮೂಲಕ ಸಾಧನೆ ಗೈದಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ಟೋಕಿಯೊ ಒಲಿಂಪಿಕ್ಸ್‌ಗೆ ಮುನ್ನ ನಡೆಯುವ ಈ ಈವೆಂಟ್‌ನಲ್ಲಿ ದೀಪಿಕಾ ಆಟ ಭರ್ಜರಿಯಿತ್ತು .ಮಹಿಳೆಯರ ವೈಯಕ್ತಿಕಸ್ಪರ್ಧೆಯ ಫೈನಲ್‌ನಲ್ಲಿ ದೀಪಿಕಾ ರಷ್ಯಾದ ಎಲೆನಾ ಒಸಿಪೋವಾ ಅವರನ್ನು ೬-೦ ಅಂತರದಲ್ಲಿ ಸೋಲಿಸಿ ಒಂದೇ ದಿನ ಹ್ಯಾಟ್ರಿಕ್ ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಮಿಶ್ರ ಫೈನಲ್‌ನಲ್ಲಿ, ಒಲಿಂಪಿಕ್ಸ್‌ನಲ್ಲಿ ಅರ್ಚರಿಯಲ್ಲಿ ಭಾರತದ ಅತ್ಯುತ್ತಮ ಪದಕ ಭರವಸೆಯಿರುವ ದೀಪಿಕಾ ಮತ್ತು…

ಮಲೇರಿಯಾ ನಿರ್ಮೂಲನಕ್ಕೆ ವಿದ್ಯಾರ್ಥಿಗಳ ಸಹಕಾರ ಮುಖ್ಯ

ಶಿಕಾರಿಪುರ,ಜೂ,೨೮: ಸಮುದಾಯದಲ್ಲಿ ಮಲೇರಿಯಾ ರೋಗವನ್ನು ನಿಯಂತ್ರಿಸಲು ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯವಾದದ್ದು ಎಂದು ಹಿರಿಯ ಆರೋಗ್ಯ ನಿರೀಕ್ಷಕ ಅಧಿಕಾರಿ ಸುರೇಶ್ ತಿಳಿಸಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರೋಗ್ಯ ಇಲಾಖೆ ಮತ್ತು ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ನಡೆದ ೨೦೨೧ ನೇ ಸಾಲಿನ ತಾಲ್ಲೂಕು ಮಟ್ಟದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ . ಮಲೇರಿಯಾ ರೋಗವು ಅನಾಫಿಲಿಸ್ ಹೆಣ್ಣುಸೊಳ್ಳೆ ಯಿಂದ ಹರಡುತ್ತಿದ್ದು ಸೊಳ್ಳೆ ನಿಯಂತ್ರಣಕ್ಕೆ ಸಮುದಾಯವು ಸತತವಾಗಿ ಇಲಾಖೆಯೊಂದಿಗೆ ಕೈಜೋಡಿಸಬೇಕು. ಈ ಸೊಳ್ಳೆಗಳು…

ಜಮ್ಮು ಕೇಂದ್ರಿತ ಸ್ಥಳಗಳ ಮೇಲೆ ಇದೆ ಮೊದಲಬಾರಿ ಡ್ರೋನ್ ಬಳಕೆ

ಜಮ್ಮು,ಜೂ28: ಪ್ರಮುಖ ಕೇಂದ್ರಗಳ ಮೇಲೆ ದಾಳಿ ನಡೆಸಲು ಪಾಕಿಸ್ತಾನಕೇಂದ್ರಿತ ಉಗ್ರರು ಇದೇ ಮೊದಲ ಬಾರಿಗೆ ಡ್ರೋನ್‌ಗಳನ್ನು ಬಳಸಿದ್ದಾರೆ. ಜಮ್ಮು ವಿಮಾನ ನಿಲ್ದಾಣದಲ್ಲಿರುವ ಭಾರತೀಯ ವಾಯು ಪಡೆ ಕೇಂದ್ರವೊಂದರ ಮೇಲೆ ಭಾನುವಾರ ಬೆಳಿಗ್ಗಿನ ಜಾವ 1.40ರ ಹೊತ್ತಿಗೆ ಎರಡು ಬಾಂಬ್‌ ಎಸೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರು ನಿಮಿಷಗಳ ಅಂತರದಲ್ಲಿ ಎರಡು ಬಾಂಬ್‌ ದಾಳಿಗಳು ನಡೆದಿವೆ. ಇಬ್ಬರು ಯೋಧರು ದಾಳಿಯಲ್ಲಿ ಗಾಯಗೊಂಡಿದ್ದಾರೆ. ವಿಮಾನ ನಿಲ್ದಾಣದ ಭಾರಿ ಭದ್ರತೆಯ ತಾಂತ್ರಿಕ ಪ್ರದೇಶದ ಒಂದಸ್ತಿನ ಕಟ್ಟಡದ ಚಾವಣಿಯನ್ನು ಸೀಳಿ ಮೊದಲ ಬಾಂಬ್‌…

ಆಳಾಗಿ ದುಡಿ,ಅರಸನಾಗಿ ಉಣ್ಣು

ಡಾ.ಆರೂಢಭಾರತೀ ಸ್ವಾಮೀಜಿ ‌‌         ಸಿದ್ಧಸೂಕ್ತಿ : ಆಳಾಗಿ ದುಡಿ, ಅರಸನಾಗಿ ಉಣ್ಣು. ಸೇವಕ ಮಂತ್ರಿ ಯಾರೇ ಇರಲಿ, ದುಡಿಮೆ ಬದುಕಿಗೆ ಶೋಭೆ! ದುಡಿಸಿಕೊಳ್ಳುವವರು ದುಡಿಯಬಾರದು, ಅದು ತಮ್ಮ ಗೌರವಕ್ಕೆ ಧಕ್ಕೆ ಎಂದು ಭಾವಿಪರು ಹಲವರು. ಅನಿವಾರ್ಯತೆ ಇಲ್ಲದೆಯೂ ಮನೆಗೆಲಸದಾಕೆ! ತಾನುಂಡ ತಟ್ಟೆ, ಉಟ್ಟ ಬಟ್ಟೆ, ತೊಳೆಯುವುದವಮಾನ! ಮಲಗೇಳುವ ಹಾಸಿಗೆ ಹಾಸಿ ಮಡಚಿ ಸುತ್ತಲು, ಇರುವ ನೆಲ ಶುಚಿಗೊಳಿಸಲು, ತನ್ನದೇ ಹಸು ಎಮ್ಮೆ ಎತ್ತುಗಳ ಶೆಗಣಿ ಎತ್ತಿ ಮೈತೊಳೆದು ಮೇವು ನೀರುಣಿಸಲು ಕೆಲಸದಾಳೇ…

ಹಳ್ಳಿಹುಡುಗ ರಾಷ್ಟ್ರಪತಿ ಹುದ್ದೆಗೇರಿದ್ದೇನೆ ಎಂದರೆ ಅದಕ್ಕೆ ಪ್ರಜಾಪ್ರಭುತ್ವ ಕಾರಣ: ಕೋವಿಂದ್

ಕಾನ್ಪುರ,ಜೂ,27:ಇಂಥ ಚಿಕ್ಕ ಹಳ್ಳಿಯಲ್ಲಿ ‌ಜನಸಿದ‌ನಾನು ಈ ದೇಶದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಪತಿ ಸ್ಥಾನದಲ್ಲಿ ಕೂರುತ್ತೇನೆ  ಎಂದು ಕನಸಲ್ಲೂ ಕಂಡಿರಲಿಲ್ಲ ಇದಕ್ಕೆ ಈ ದೇಶದ ಪ್ರಜಾಪ್ರಭುತ್ವ ವೇ ಕಾರಣ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹೇಳಿದ್ದಾರೆ. ಅವರು ಭಾನುವಾರ ಅವರ ಹುಟ್ಟೂರಾದ ಉತ್ತರ ಪ್ರದೇಶದ ಕಾನ್ಪುರದ ದೇಹತ್ ಜಿಲ್ಲೆಯ ಪರಾಂಖ್ ಗ್ರಾಮದಲ್ಲಿ ಅಭಿನಂದನೆ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡುತ್ತಾ ತಮ್ಮ ಬಾಲ್ಯದ ದಿನಗಳು, ಕನಸು ಕಂಡಿದ್ದು, ಮುಂದೆ ಬೆಳೆದ ರೀತಿಯನ್ನು ಬಣ್ಣಿಸಿದರು. ನನ್ನಂತಹ ಸಾಮಾನ್ಯ ಹಳ್ಳಿಯಲ್ಲಿ…

ಬೆಂಗಳೂರು ಮೂಲಭೂತ ಸೌಕರ್ಯಕ್ಕೆ ನಿರಂತರ ಶ್ರಮ; ಬಿಎಸ್ ವೈ

ಬೆಂಗಳೂರು,ಜೂ.27: ನಗರದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ವಿಧಾನಸೌಧದ ಬಾಂಕ್ವೆಟ್‍ನಲ್ಲಿ ಇಂದು ನಡೆದ ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ಕಾರ್ಯಕ್ರಮದಲ್ಲಿ ಅಂಚೆಚೀಟಿ ಬಿಡುಗಡೆ ಹಾಗೂ ಬೆಂಗಳೂರು ವಿವಿ ಆವರಣದಲ್ಲಿ ಕೆಂಪೇಗೌಡರ ಪುತ್ಥಳಿ ನಿರ್ಮಾಣಕ್ಕೆ ಚಾಲನೆ ನೀಡಿ ನಂತರ ಅವರು ಮಾತನಾಡಿದರು. ಬೆಂಗಳೂರನ್ನು ಮಾದರಿ ನಗರವನ್ನಾಗಿ ಮಾಡುವ ಸಂಕಲ್ಪ ತೊಡಲಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಹಲವಾರು ಯೋಜನೆಗಳನ್ನು ನೀಡಿದ್ದಾರೆ. ಪೆರಿಪರಲ್ ರಸ್ತೆ ನಿರ್ಮಾಣ, ಉಪನಗರ ರೈಲು ಯೋಜನೆ…

ಕಾದು..ಕಾದು ಕುದಿವ ಕುದಿ ಎಸರು

ಡಾ.ಶಿವಕುಮಾರ ಕಂಪ್ಲಿ,ಸಹಾಯಕ ಪ್ರಾಧ್ಯಾಪಕರು, ದಾವಣಗೆರೆ ವಿಶ್ವವಿದ್ಯಾಲಯ. ಕಾದು..ಕಾದು ಕುದಿವ ಕುದಿ ಎಸರು ಉಸುರಿನ ಪರಿಮಳವಿರಲು ಕುಸುಮದ ಹಂಗೇಕಯ್ಯಾ? ಕ್ಷಮೆ ದಮೆ ಶಾಂತಿ ಸೈರಣೆಯಿರಲು ಸಮಾಧಿಯ ಹಂಗೇಕಯ್ಯಾ? ಲೋಕವೇ ತಾನಾದ ಬಳಿಕ ಏಕಾಂತದ ಹಂಗೇಕಯ್ಯಾ ಚೆನ್ನಮಲ್ಲಿಕಾರ್ಜುನಾ? ‘ಆತ್ಮ ಕಥನಗಳೆಂದರೆ ಸೋಸಿದ ಜೀವನ ಚಿತ್ರಗಳು, ಕೆಲವೊಮ್ಮೆ ಇವು ತಮ್ಮದೇ ವ್ಯಕ್ತಿತ್ವ ವಿಜೃಂಭಿಸಿಕೊಳ್ಳುವ ಕಥನಗಳಂತೆಯೂ ಕಾಣುತ್ತವೆ’ ಎಂಬ ಹೇಳಿಕೆಯನ್ನ ಹುಸಿಗೊಳಿಸುವಂತೆ ಛಿದ್ರಗೊಳಿಸುವಂತೆ ವಿಜಯಮ್ಮನವರ ಆತ್ಮಕಥನದ ಹೆಣಿಗೆಯಿದೆ. ಬ್ರಾಹ್ಮಣ ಮಹಿಳೆಯರೆಂದರೆ ಕೋಮಲ ಮುಗ್ದ ಎಂಬತೆ ಚಿತ್ರಿಸಿದ ಅನೇಕ ಸಾಹಿತ್ಯಿಕ ಸಿದ್ಧ ರೂಪವನ್ನ…

ಕಿಚ್ಚಾ ಸುದೀಪ್ ಉಪೇಂದ್ರ ಜೋಡಿಯ ‘ಕಬ್ಜಾ’ ಪೋಸ್ಟರ್ ಬಿಡುಗಡೆ

ಸುದೀಪ್ ಮತ್ತು ಉಪೇಂದ್ರ ಅವರು ಕಾತುರದಿಂದ ಕಾಯುತ್ತಿದ್ದ ಇಬ್ಬರು ನಾಯಕರ ಜೋಡಿಯ ‘ಕಬ್ಜಾ ಹೊಸ ಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಲಾಗಿದೆ. ಇಂದು(ಜೂನ್೨೭) ಬಿಡುಗಡೆಗೊಳಿಸಿದ್ದು ಈ ಚಿತ್ರ ಪ್ರಮುಖವಾಗಿ ಭೂಗತ ಲೋಕದ ಕರಾಳ ಕತೆಯನ್ನು ಪ್ರತಿಬಿಂಬಿಸುತ್ತದೆ .ಹಾಗಾಗಿ ಈ ಇಬ್ಬರು ನಾಯಕರ ಅಭಿಮಾನಿಗಳಿಗೆ ಒಂದು ರೀತಿಯ ಕುತೂಹಲಕ್ಕೆ ಈ ಪೋಸ್ಟ್ ಹಲವು ಕತೆಯನ್ನು ಹೇಳುತ್ತಿದೆ. ’ಐ ಲವ್ ಯು’ ಬಳಿಕ ಉಪೇಂದ್ರ ಮತ್ತು ನಿರ್ದೇಶಕ ಆರ್ ಚಂದ್ರು ಅವರ ಸಹಯೋಗದಲ್ಲಿ ಮೂಡಿಬರುತ್ತಿರುವ ಎರಡನೇ ಚಿತ್ರ ಇದಾಗಿದೆ. ೧೯೪೦ ಮತ್ತು ೧೯೮೦ರ…

ಸರಳತೆ

          ಮೀನಾಕ್ಷಿ ಹರೀಶ್ ಮೀನಾಕ್ಷಿ ಹರೀಶ್ ಅವರು ನಿವೃತ್ತ ಬ್ಯಾಂಕ್ ಉದ್ಯೋಗಿ, ಸಾಹಿತ್ಯ ಸಂಗೀತದ ಕಡೆ ಹೆಚ್ಚು ಒಲುವು ಈಗಾಗಲೇ‘ ಮನಸ್ಸೆಂಬ ಮಾಯೆ-ಪ್ರೀತಿಯೆಂಬ ಭ್ರಮೆ ಹಾಗೂ ನನ್ನ ನೆನಪುಗಳು ಎನ್ನುವ ಎರಡು ಕೃತಿಗಳನ್ನು ಹೊರತಂದಿದ್ದಾರೆ ಆದ್ಯಾತ್ಮಿಕ ಕಡೆ ಹೆಚ್ಚು ಒಲವು ಇರುವ ಕಾರಣ ಆದ್ಯಾತ್ಮಿಕ ಬರಹಗಳನ್ನು ಬರೆದಿದ್ದಾರೆ ಮತ್ತೊಂದು ಕತಾ ಸಂಕಲನ ಹೊರತರಲು ಸಿದ್ದತೆ ಮಾಡಿಕೊಂಡಿದ್ದಾರೆ .                    …

ಕಾಂಗ್ರೆಸ್ ನಲ್ಲೂ ಲಿಂಗಾಯತ ಸಿಎಂ ಅಭ್ಯರ್ಥಿಗಳಿದ್ದಾರೆ; ಎಂ ಬಿ ಪಾಟೀಲ್

ಮೈಸೂರು,ಜೂನ,27: ತಾವು ಸಿಎಂ ಎಂದು ಹೇಳಿಕೊಂಡರೆ ಸಿಎಂ ಆಗಲೂ ಸಾಧ್ಯವೆ ಅದನ್ನು ನಿರ್ಧಾರ ಮಾಡುವುದು ಹೈಕಮಾಂಡ್ ಎಂದು ಹೇಳಿದ ಮಾಜಿ ಸಚಿವ ಎಂ.ಬಿ.ಪಾಟೀಲ್ ಕಾಂಗ್ರಸ್ ನಲ್ಲೂ ಲಿಂಗಾಯತ ನಾಯಕರು ಸಿಎಂ ಅಬ್ಯರ್ಥಿಗಳಿದ್ದಾರೆ ಎನ್ನುವ ಮೂಲಕ ತಾವು ಸಿಎಂ ಆಕಾಂಕ್ಷಿ ಎನ್ನುವುದನ್ನು ಪರೋಕ್ಷವಾಗಿ ಹೇಳಿದರು. ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಇಂದು ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು. ಎಲ್ಲರು ಸಿಎಂ ಸ್ಥಾನಕ್ಕೆ ಅರ್ಹರಿದ್ದಾರೆ. ಆದರೆ ನಾವೇ ಮುಖ್ಯಮಂತ್ರಿ ಅಂತ ಸೆಲ್ಪ್…

ಜನರ ಆಕ್ರೋಶ ಕಂಡು ಬಿಜೆಪಿಗೆ ಭಯ ; ಡಿ.ಕೆ. ಶಿ

ಚಾಮರಾಜನಗರ,ಜೂ,27:ರಾಜ್ಯ ಸರ್ಕಾರದ ದುರಾಡಳಿತ ಕಂಡು ಜನ ಆಕ್ರೋಶಗೊಂಡಿದ್ದಾರೆ. ಅವರ ಆಕ್ರೋಶಕ್ಕೆ ಹೆದರಿ ಬಿಜೆಪಿ ನಾಯಕರು ಜನರ ಬಳಿಗೆ ಹೋಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಛೇಡಿಸಿದ್ದಾರೆ. ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದೆ ಸತ್ತವರ ಮನೆಗಳಿಗೆ ಭಾನುವಾರ ಭೇಟಿ ನೀಡಿದ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್,ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಕೇವಲ ಮೂರು ಜನ ಮೃತಪಟ್ಟರು ಎಂದು ಸರ್ಕಾರ ಆರಂಭದಲ್ಲಿ ಹೇಳಿತ್ತು. ನಂತರ ನಾವು ಇಲ್ಲಿಗೆ ಭೇಟಿ ನೀಡಿದಾಗ 28 ಮಂದಿ ಸತ್ತಿದ್ದಾರೆ ಎಂಬುದು ಗೊತ್ತಾಯಿತು.…

ಸ್ನೇಹ,ನಂಬಿಕೆ ಮತ್ತು ಅಗೋಚರ ಶಕ್ತಿ…

ಸ್ನೇಹ,ನಂಬಿಕೆ ಮತ್ತು ಅಗೋಚರ ಶಕ್ತಿ ಭಾರತ್ ವಿಜಯ್ ಮಿಲ್ಸ್ ಕಾಂಪೌಂಡಿನಲ್ಲಿ ಕಾಲಿಡುತ್ತಿದ್ದಂತೆಯೇ ಜೊತೆಯಲ್ಲಿದ್ದ ಸಹೋದ್ಯೋಗಿ ಖತ್ರಿ ನಾವು ಹೋಗಬೇಕಿದ್ದ ಮಾರ್ಕೆಟಿಂಗ್ ವಿಭಾಗದತ್ತ ಸರಸರನೆ ನಡೆಯತೊಡಗಿ ನನಗೆ ದಾರಿತೋರಿಸುವಂತೆ ಮುನ್ನಡೆಯತೊಡಗಿದ್ದ. ಮುಖ್ಯ ದ್ವಾರದಲ್ಲಿದ್ದ ರಿಸೆಪ್ಷನ್ ನಲ್ಲಿ ನಾವು ಎಕ್ಸ್ ಪೋರ್ಟ್ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಅನೆರಾವ್ ಅವರನ್ನು ಭೇಟಿ ಮಾಡಲು ಬಂದಿದ್ದೇವೆ ಎಂದು ನೊಂದಾಯಿಸಿ ಮೊದಲನೇ ಮಹಡಿಯಲ್ಲಿದ್ದ ಅನೆರಾವ್ ಅವರ ಕೋಣೆಗೆ ಹೋದೆವು. ಅನೆರಾವ್ ಯಾವುದೋ ಮೀಟಿಂಗ್ ನಲ್ಲಿ ವ್ಯಸ್ತವಾಗಿದ್ದ ಕಾರಣ ಅವರ ಕೋಣೆಯಿಂದ ಮೂರನೇ ಕೋಣೆಯಲ್ಲಿದ್ದ ಸಿಇಒ…

ನಾಯಕತ್ವ ಬದಲಿಸಲು ದೆಹಲಿ ನಾಯಕರಲ್ಲಿ ಯೋಗೇಶ್ವರ್ ಒತ್ತಡ

ನವದೆಹಲಿ,ಜೂ,27: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಿಸುವಂತೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ದೆಹಲಿ ನಾಯಕರನ್ನು ಬೇಟಿ ಮಾಡಿ ಒತ್ತಡ ಹೇರಿದ್ದಾರೆ. ‘ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದ ಪರೀಕ್ಷೆಯ ಫಲಿತಾಂಶ ಶೀಘ್ರವೇ ಹೊರಬೀಳಲಿದೆ’ ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ಶುಕ್ರವಾರ ತಡರಾತ್ರಿ ದೆಹಲಿಗೆ ದೌಡಾಯಿಸಿದ್ದ ಅವರು ಶನಿವಾರ ಪಕ್ಷದ ಕೆಲವು ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಶನಿವಾರ ಬೆಳಗಿನಜಾವ ಕೆಲವರನ್ನು ಭೇಟಿಯಾಗಿ ನಾಯಕತ್ವ ಬದಲಾವಣೆಗಾಗಿ ಒತ್ತಡ ಹೇರಿದ್ದಾರೆ ಎಂದು ತಿಳಿದುಬಂದಿದೆ. ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ನಡೆಯಲಿರುವ ಸಂಸದೀಯ ಮಂಡಳಿ ಸಭೆಯಲ್ಲಿ ರಾಜ್ಯ…

ಆರೋಗ್ಯವೇ ಭಾಗ್ಯ

ಸಿದ್ಧಸೂಕ್ತಿ : ಆರೋಗ್ಯವೇ ಭಾಗ್ಯ. ಆರೋಗ್ಯ ಬದುಕ ಬುನಾದಿ. ದೀರ್ಘ ಬಾಳು. ಅದಿರೆ ಸಾಧ್ಯ ಸಾಧನೆ ಸಿದ್ಧಿ! ಇಲ್ಲದಿರೆ ಪರಪೀಡೆ, ಭುವಿಗೆ ಭಾರ! ಹಣ ಆಸ್ತಿ ಹೆಣ್ಣು ಗಂಡು ಮಕ್ಕಳು ಮಿತ್ರ ಭಾಂಧವರಿಗಾಗಿ ಎಲ್ಲ ಎನ್ನುವೆವು. ಆರೋಗ್ಯ ತಪ್ಪಿದಾಗ ಕೈಬಿಟ್ಟು ಎಲ್ಲವನು ಮಾರಿ, ಸಾಲ ಮಾಡಿ, ವಿದೇಶದಲಿ ಚಿಕಿತ್ಸೆ! ಬೆಲೆ ಕಟ್ಟದ ಕಣ್ಣು ಕಿವಿ ನಾಲಿಗೆ ಮೆದುಳು ರಕ್ತ ಹೃದಯ ಕಿಡ್ನಿ ಶ್ವಾಸನಾಳ ನಿರ್ಮಿಸಿದ ಅಗೋಚರ ಶಕ್ತಿ ಭಗವಂತ ಇಲ್ಲೆನ್ನುವೆವು! ತಿನ್ನಬಾರದ್ದನ್ನು ತಿಂದು, ಕುಡಿಯಬಾರದ್ದನ್ನು ಕುಡಿದು, ಆಡಬಾರದ್ದನ್ನು…

ಓಲಂಪಿಕ್ ಗೆ ಆಯ್ಕೆಯಾದ ಕ್ರೀಡಾಪಟುಗಳಿಗೆ 10 ಲಕ್ಷ ರೂ ಘೋಷಣೆ

ಬೆಂಗಳೂರು, ಜೂನ, 26:ಟೋಕಿಯೋ ಓಲಂಪಿಕ್ ಗೆ ರಾಜ್ಯದ ಐವರು ಕ್ರೀಡಾಪಟುಗಳು ಸಂಭವನೀಯ ಪಟ್ಟಿಯಲ್ಲಿ ಸ್ಥಾನಪಡೆದಿದ್ದು, ಆಯ್ಕೆಯಾಗುವ ಕ್ರೀಡಾಪಟುಗಳಿಗೆ ತಲಾ ರೂ. 10 ಲಕ್ಷ ಪ್ರೋತ್ಸಾಹ ಧನ ಘೋಷಿಸಿ ಆದೇಶ ಹೊರಡಿಸಲಾಗಿದೆ. 2020 ರ ಓಲಂಪಿಕ್ ಕ್ರೀಡಾಕೂಟವು ಜಪಾನ್ ಟೋಕಿಯೋದಲ್ಲಿ ಜುಲೈ 23 ರಿಂದ ಸೆಪ್ಟಂಬರ್ 5 ರ ವರೆಗೆ ನಡೆಯಲಿದೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣ ಗೌಡ ಈ ಸಂಬಂಧ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಕ್ರೀಡಾಪಟುಗಳಿಗೆ ಅಗತ್ಯ ನೆರವು ನೀಡುವುದು…

ರದ್ದಾದ ಟಿ.20 ಅ.7ರಂದು ಯುಎಇ ನಲ್ಲಿ ನಡೆಸಲು ನಿರ್ಧಾರ

ನವದೆಹಲಿ,ಜೂ,26:ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾದ ಕಾರಣ ಟಿ-20 ವಿಶ್ವಕಪ್ ಟೂರ್ನಿ ರದ್ದಾಗಿದ್ದು ಈಗ ಅಕ್ಟೋಬರ್ 17 ರಂದು ಯುಎಇಯಲ್ಲಿ ನಡೆಸಲು ನಿರ್ದರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿಗೆ (ಐಸಿಸಿ) ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಸೂಚಿಸಿದೆ ಎಂದು ಹೇಳಲಾಗಿದೆ. ಟಿ–20 ವಿಶ್ವಕಪ್ ಪಂದ್ಯಗಳು ಅಬುದಾಭಿ, ಶಾರ್ಜಾ ಮತ್ತು ದುಬೈನಲ್ಲಿ ನಡೆಯಲಿದ್ದು, ಕ್ವಾಲಿಫಯರ್ ಸುತ್ತಿನ ಪಂದ್ಯಗಳನ್ನು ಒಮಾನ್ ಆಯೋಜಿಸಲಿದೆ. ಭಾರತದಲ್ಲಿ ಟೂರ್ನಿ ಆಯೋಜಿಸಲು ಸಾಧ್ಯವಾಗದಿದ್ದರೆ ಯುಎಇಯಲ್ಲಿ ನಡೆಸುವುದಾಗಿ ಬಿಸಿಸಿಐ ಈ ಹಿಂದೆಯೇ ತಿಳಿಸಿತ್ತು. ಟೂರ್ನಿಯ…

ಜಿಲ್ಲಾ ,ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಿದ್ದರಾಗಲು ಸಿಎಂ ಕರೆ

ಬೆಂಗಳೂರು,ಜೂ,೨೬: ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆಳಿಗೆ ಪಕ್ಷದ ಎಲ್ಲಾ ಕಾರ್ಯಕರ್ತರು ಸಿದ್ದರಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ. ಬಿಜೆಪಿ ಕಾರ್ಯಕಾರಿಣಿ ಸಭೆ ಉದ್ಟಾಟಿಸಿ ಮಾತನಾಡಿದ ಅವರು,’ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ದಿನಗಳಿಂದಲೂ ಹಲವು ಸವಾಲುಗಳು ಎದುರಾಗಿವೆ. ಎಲ್ಲವನ್ನೂ ದಿಟ್ಟವಾಗಿ ಎದುರಿಸಿ, ಅಭಿವೃದ್ಧಿ ಯೋಜನೆಗಳನ್ನು ಮುನ್ನಡೆಸಲಾಗುತ್ತಿದೆ’ ಎಂದು ಹೇಳಿದರು. ಆರಂಭದಲ್ಲೇ ಪ್ರವಾಹದಿಂದ ತೊಂದರೆ ಆಗಿತ್ತು. ಎರಡು ವರ್ಷಗಳಿಂದ ಕೋವಿಡ್ ಸಂಕಷ್ಟವಿದೆ. ಕೋವಿಡ್ ಮೊದಲ ಮತ್ತು ಎರಡನೇ ಅಲೆಗಳನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ಆರ್ಥಿಕ ಸಂಕಷ್ಟದ ನಡುವೆಯೂ…

ಪ್ರಾದೇಶಿಕ ಪಕ್ಷಗಳತ್ತ ಜನರ ಒಲವು-ಕುಮಾರಸ್ವಾಮಿ

ಚನ್ನಪಟ್ಟಣ ,ಜೂ. 26: ರಾಷ್ಟ್ರೀಯ ಪಕ್ಷಗಳ ವಿರುದ್ಧ ಜನರು ಈಗಾಗಲೇ ರೋಸಿ ಹೋಗಿದ್ದಾರೆ, ಇದೇ ಕಾರಣ ರಾಜ್ಯದಲ್ಲಿ ಮಾತ್ರವಲ್ಲದೇ ದೇಶದಲ್ಲಿಯೂ ಕೂಡ ಜನರು ಪ್ರಾದೇಶಿಕ ಪಕ್ಷದ ಕಡೆಗೆ ಒಲವು ತೋರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರು ಕಾಂಗ್ರೆಸ್- ಬಿಜೆಪಿ ಆಡಳಿತ ಕಂಡು ಈಗಾಗಲೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಪಂಚ ರಾಜ್ಯಗಳ ಚುನಾವಣೆಯಲ್ಲೂ ಇದು ಸ್ಪಷ್ಟವಾಗಿದೆ. ಈ ಅಲೆಯನ್ನು ಗಮನಿಸಿದರೆ, ೨೦೨೩ರ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಕ್ಕೆ ಜನರು ಮಣೆ ಹಾಕುವುದು…

1 94 95 96 97 98 122
Girl in a jacket