Girl in a jacket

Author kendhooli_editor

ಹತ್ತನೇ,ಪಿಯು ಪರೀಕ್ಷೆಗಳ ರದ್ದತಿಗೆ ತೀರ್ಮಾನಿಸಿಲ್ಲ-ಸುರೇಶ್‌ಕುಮಾರ್

ಬೆಂಗಳೂರು,ಮೇ,೧೭: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆಗಳನ್ನು ರದ್ದುಪಡಿಸುವ ಬಗ್ಗೆ ಸದ್ಯ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈಗಾಗಲೇ ಎಸ್‌ಎಸ್‌ಎಲ್ಸಿ, ದ್ವಿತೀಯ ಪಿಯು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಪರೀಕ್ಷೆಗಳನ್ನು ರದ್ದು ಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು  ಹೇಳಿದರು ಕೆಲವೆಡೆ ಪರೀಕ್ಷೆ ರದ್ದು ಮಾಡುವ ಬಗ್ಗೆ ಊಹಾಪೋಹವಾಗಿದ್ದು, ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ…

ಬ್ಲಾಕ್ ಫಂಗಸ್ ಔಷಧ ತರಿಸಿಕೊಳ್ಳುವಂತೆ ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

ಬೆಂಗಳೂರು, ಮೇ ೧೭: ರಾಜ್ಯದಲ್ಲಿ ಎಲ್ಲರಲ್ಲೂ ಭಯ ಹುಟ್ಟಿಸಿರುವ ಕಪ್ಪು ಶಿಲೀಂಧ್ರದ ಔಷಧಗಳನ್ನು ತರಿಸಿಕೊಳ್ಳುವುದರತ್ತ ರಾಜ್ಯ ಸರ್ಕಾರ ಗಮನಹರಿಸಬೇಕು ಈ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಆದಷ್ಟು ಬೇಗ ತರಿಸಿಕೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕಪ್ಪು ಶಿಲೀಂಧ್ರದ ಸಮಸ್ಯೆಯು ಪಿಡುಗಾಗಿ, ಮಹಾಮಾರಿಯಾಗಿ ಕಾಡುವ ಆತಂಕವನ್ನು ಜನರ ಮುಂದೊಡ್ಡಿದೆ. ಅದರ ಚಿಕಿತ್ಸೆಗೆ ಅಗತ್ಯವಿರುವ ಔಷಧ ಕೊರತೆಯನ್ನು ಕರ್ನಾಟಕ ಎದುರಿಸುತ್ತಿರುವುದು ಬಹಿರಂಗವಾಗಿದೆ. ರಾಜ್ಯದಲ್ಲಿ ಔಷಧದ ೧,೦೫೦ ವಾಯ್ಲ್‌ಗಳು (ಶೀಶೆ)…

ಕೊರೊನಾ ಬಿರುಗಾಳಿಯಲ್ಲಿ ತೂರಿ ಹೋದ ಬಿಜೆಪಿ ಭಿನ್ನಮತ

ಬೆಂಗಳೂರು,ಮೇ,೧೭:ಬಿಜೆಪಿ ರೆಬೆಲ್ ನಾಯಕ ಬಸವನಗೌಡ ಯತ್ನಾಳರ ಪ್ರಕಾರ ಈಗಾಗಲೇ ಸಿಎಂ ಯಡಿಯೂರಪ್ಪ ತಮ್ಮ ಕುರ್ಚಿ ಕಳೆದುಕೊಳ್ಳಬೇಕಿತ್ತು. ಕರುನಾಡ ಹೊಸ ಸಿಂಹಾಸನಾಧೀಶರಾಗಿ ಉತ್ತರ ಕರ್ನಾಟಕದ ಯಾರದರೂ ವಿಜೃಂಭಿಸಬೇಕಿತ್ತು. ಯತ್ನಾಳ್ ಯಡಿಯೂರಪ್ಪ ವಿರುದ್ದ ಗುಟುರು ಹಾಕಿದಾಗೆಲ್ಲ, ನೋಡಿ ಸಧ್ಯವೇ ಕರುನಾಡಿಗೆ ಹೊಸ ಸಿಎಂ ಬರ್ತಾರೆ. ಅವರು ಉತ್ತರ ಕರ್ನಾಟಕವರೇ ಆಗಿರ್ತಾರೆ ಎಂದು ಒಗಟು ನುಡಿಯುತ್ತಿದ್ದರು. ಹೊಸ ಸಿಎಂ ಹೆಸರನ್ನು ಮಾತ್ರ ಯತ್ನಾಳ್ ಜಪ್ಪಯ್ಯ ಎಂದರೂ ಹೇಳುತ್ತಿರಲಿಲ್ಲ. ಈ ರೀತಿ ಒಗಟನ್ನು ಹೇಳುವ ಮೂಲಕ ಅವರು ತಮ್ಮ ಅಂತರಂಗದ ಕನಸನ್ನು ರಾಜ್ಯದ…

ಆರೋಢದರ್ಶನ-೧ ಲೌಕಿಕ -ಅಲೌಕಿಕ ವಿದ್ಯೆಯ ತರ್ಕ!

ಲೇಖಕರ ಪರಿಚಯ: ಡಾ|| ಆರೂಢ ಭಾರತೀ ಸ್ವಾಮೀಜಿ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಲ್ಲೂಕಿನ ಹುಣಸ್ಯಾಳ ಪಿ.ಬಿಯಲ್ಲಿ ಬಸಗೊಂಡಪ್ಪ ಮತ್ತು ಶಾವಂತ್ರವ್ವ ದಂಪತಿಯ ಪುತ್ರರಾಗಿ ೧೯೬೮ ಜೂನ್ ೩೦ರಲ್ಲಿ ಜನಸಿದ್ದು, ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿ ಹುಬ್ಬಳ್ಳಿ ಸಿದ್ಧಾರೂಢ ಮಠದಲ್ಲಿ ಸಂಸ್ಕೃತ ಹಾಗೂ ಪ್ರೌಢಶಾಲೆ ಕಲಿತು ಅಲ್ಲಿಂದ ಆದಿಚುಂಚನಗಿರಿಯಲ್ಲಿ ಸಂಸ್ಕೃತ ಅಧ್ಯಯನ ಮುಂದುವರೆಸಿದರು ಆನಂತರ ಬೆಂಗಳೂರಿನ ಶ್ರೀ ರಾಮಕೃಷ್ಣ ಆಶ್ರಮದ ವಿದ್ಯಾರ್ಥಿ ಮಂದಿರದಲ್ಲಿದ್ದು ಶ್ರೀಚಾಮರಾಜೇಂದ್ರ ಸಂಸ್ಕೃತ ಮಹಾವಿದ್ಯಾಲಯದಲ್ಲಿ ಸಂಸ್ಕೃತ ವ್ಯಾಕರಣ,ಅದ್ವೈತವೇದಾಂತ,ಅಲಂಕಾರ ತರ್ಕಶಾಸ್ತ್ರಗಳಲ್ಲಿ ಎಂಎ ವಿದ್ಯವತ್ ಪೂರೈಸಿದರು.ಅಲ್ಲದೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ…

ಬೆಜೆಪಿ ಬೆಂಬಲಿಗರಿಂದ ಬೆಡ್ ಬ್ಲಾಕ್‌ದಂಧೆ-ರಾಮಲಿಂಗಾರೆಡ್ಡಿ ಆರೋಪ

ಬೆಂಗಳೂರು,ಮೇ,೧೬: ಬಿಜೆಪಿ ಶಾಸಕರ ಬಂಬಲದ ಪ್ರಭಾದಿಂದ ಬೆಡ್ ಬ್ಲಾಕಿಂಗ್ ದಂಧೆ ಬೆಂಗಳೂರಿನಲ್ಲಿ ಹೆಚ್ಚಾದ ಕಾರಣ ಜನಸಾಮಾನ್ಯರಿಗೆ ಬೆಡ್ ದೊರಕುವುದು ದುಸ್ತರವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ. ಬಿಟಿಎಂ ವಿಧಾನ ಸಭಾ ಕ್ಷೇತ್ರದ ಕೋರಮಂಗಲದ ಒಳಾಂಗಣ ಸ್ಟೇಡಿಯಂನಲ್ಲಿ ೨೪x೭ ತುರ್ತು ಟೈಯಾಗ್ ಸೆಂಟರ್,ಆಕ್ಸಿಜನ್ ಹಾಗೂ ಕೋವಿಡ್ ಬೆಡ್ ಸೆಂಟರ್ ಉದ್ಘಾಟಿಸಿ ಮಾತನಾಡಿದ ಅವರು, ಬೆಡ್ ಬ್ಲಾಕಿಂಗ್ ದಂಧೆಯಿಂದಾಗಿ ಕೋವಿಡ್ ಗೆ ಚಿಕಿತ್ಸೆ ಸಿಗದೇ ಜನರು ಸಾವನ್ನಪ್ಪುತ್ತಿದ್ದಾರೆ ಎಂದರು. ಎಲ್ಲ ಜನಸಾಮಾನ್ಯ ಕೋವಿಡ್ ಪೀಡಿತರಿಗೆ ಸೂಕ್ತ ಬೆಡ್ ವ್ಯವಸ್ಥೆ…

ದಾಖಲೆ ಮಟ್ಟದ ಕೋವಿಡ್ ಇಳಿಕೆಗೆ ಅಸಲಿ ಕಾರಣ ಏನುಗೊತ್ತೇ..?!

ಬೆಂಗಳೂರು, ಮೇ ೧೬: ಇದು ನಿಜಕ್ಕೂ ಅಚ್ಚರಿಯ ವಿಷಯ ಹೀಗೂ ಸರ್ಕಾರ ಜನರನ್ನು ಯಾಮರಿಸುತ್ತದೆಯೇ ಎನ್ನುವ ಅನುಮಾನಗಳು ಈಗ ಕಾಡುತ್ತಿವೆ. ಯಾಕೆಂದರೆ ರಾಜ್ಯದಲ್ಲಿ ದಿಡೀರ್ ಕೊರೊನಾ ವೈರಸ್ ಸೋಂಕಿತರ ಸಖ್ಯೆ ಇಳಿಮುಖವಾಗಿದೆ ಅದು ಸಾವಿರ ಗಟ್ಟಲೆ ಇಳಿಕೆಯಾಗಿದೆ ಎಂದರೆ ಅದರ ಹಿಂದಿನ ಅಸಲಿ ಸತ್ಯವನ್ನು ಹುಡುಕುತ್ತಾ ಹೋದಾಗ ಸತ್ಯಾಂಶಗಳು ಬಯಲಾಗಿವೆ. ಹೌದು. ರಾಜ್ಯ ಸರ್ಕಾರ ಲಾಕ್‌ಡೌನ್ ಮಾಡಿದರೂ ಕೂಡ ಸೋಂಕಿತ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರತೊಡಗಿದವು ಇದರಿಂದ ಸರ್ಕಾರಕ್ಕೆ ಒಂದು ರೀತಿ ಮುಜುಗರ ಉಂಟಾಯಿತು ಇದರಿಂದ ಕೊರೊನಾ…

ತಮಿಳು ಯುವಕನನ್ನು ವರಿಸುತ್ತಾರಾ ರಶ್ಮಿಕಾ? ಹರಿದಾಡುತ್ತಿವೆ ಸುದ್ದಿ!

ಕನ್ನಡದ ರಶ್ಮಿಕಾ ಮಂದಣ್ಣ ಕನ್ನಡ ಚಿತ್ರಗಳ ಮೂಲಕ ಚಿತ್ರರಂಗ ಪ್ರವೇಪ್ರವೇಶಿಸಿ ಬಹುಭಾಷಾ ಚಿತ್ರಗಳಲ್ಲಿ ನಟಿಸುವ ಮೂಲಕ ಈಗ ದೇಶಾದ್ಯಂತ ಜನಪ್ರಿಯತೆ ಹೊಂದಿರುವ ಅವರು ಈಗ ತಮಿಳು ಚಿತ್ರದ ನಟನೊಬ್ಬನನ್ನು ವಿವಾಹವಾಗುವ ಕುರಿತ ಗಾಸಿಪ್‌ಗಳು ಹರಿದಾಡುತ್ತಿವೆ. ಕನ್ನಡದ ಚಿತ್ರದ ಮೂಲಕ ತೆಲುಗು ಚಿತ್ರರಂಗ ಪ್ರವೇಶಿಸಿದ ರಶ್ಮಿಕಾ ನಂತರ ಇತರೆ ಭಾಷೆಗಳ ಚಿತ್ರಗಳಲ್ಲೂ ಬ್ಯೂಜಿಯಾಗಿದ್ದು ಈಗ ಬಾಲಿವುಡ್ ಚಿತ್ರದಲ್ಲೂ ಬ್ಯೂಜಿಯಾಗಿದ್ದಾರೆ ಆದರೆ ಈ ಹೊತ್ತಿನಲ್ಲಿ ಅವರು ತಮಿಳು ಯುವಕನ ಜೊತೆಯಲ್ಲಿ ವಿಹಾವಾಗುವ ಕುರಿತು ಸುದ್ದಿಗಳು ಹರಿದಾಡುತ್ತಿವೆ. ಸ್ವತಃ ರಶ್ಮಿಕಾನೆ ನಾನು ತಮಿಳು…

ಈ ದೇಶ ಕಂಡರಿಯದ ಭೀಕರ ಸವಾಲು ಕೊರೊನಾ; ರಘುರಾಮ್

ನವದೆಹಲಿ, ಮೇ,16:ಈ ದೇಶದಲ್ಲಿ ಎಂದೂ ಕಂಡರಿಯದ ಭೀಕರ ಸವಾಲುಗಳನ್ನು ಎದುರಿಸುತ್ತಿದೆ.ಒಂದು ಕಡೆ ಚಿಕಿತ್ಸೆ ಸಿಗದೆ ಕೊರೊನಾ ರೋಗಿಗಳು ಸಾಯಿತ್ತಿದ್ದರೆ ಇನ್ನೊಂದೆಡೆ ಸಣ್ಣ ಮತ್ತು ಮಧ್ಯಮ ಕ್ಷೇತ್ರಗಳು ದಿವಾಳಿಯತ್ತ ಸಾಗುತ್ತಿವೆ ಎಂದು ರಿಜರ್ವ್‌ಬ್ಯಾಂಕು ಮಾಜಿ ಗೌವರ್ನರ್ ರಘುರಾಮ್ ರಾಜನ್ ಕಳವಳ ವ್ಯಕ್ತಪಡಿಸಿದ್ದಾರೆ. ಚಿಕಾಗೋ ವಿಶ್ವವಿದ್ಯಾನಿಲಯ ದೆಹಲಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.. ಹಲವಾರು ಕಡೆ ಕೊರೊನಾ ರೋಗಿಗಳಿಗೆ ಕನಿಷ್ಠ ಚಿಕಿತ್ಸೆ ಸಿಗದೆ ಒದ್ದಾಡುತ್ತಿದ್ದಾರೆ ಇಂತವರ ಪಾಲಿಗೆ ಸರ್ಕಾರ ಇಲ್ಲವೇ ಇಲ್ಲ ಎಂಬ ಭಾವನೆ ಬಂದಿದ್ದರೆ ಅದು ಸತ್ಯ.ಕೊರೊನಾ ಮಹಾಮಾರಿ ದಿನೇ…

ಬೌರಿಂಗ್ ನಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ವ್ಯವಸ್ಥೆ;ಸುಧಾಕರ್

ಬೆಂಗಳೂರು, ಮೇ 16:ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ ನೀಡಲು ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ವ್ಯವಸ್ಥೆ ಮಾಡುತ್ತಿದ್ದು, ನಂತರ ಬೇರೆ ಜಿಲ್ಲೆಗಳಿಗೂ ಈ ಸೇವೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಹಾಗೂ ಸ್ಟೀರಾಯಿಡ್ ಅಧಿಕವಾಗಿ ಬಳಸಿರುವವರಿಗೆ ಹಾಗೂ ಮಧುಮೇಹ ಹೆಚ್ಚಿರುವವರಿಗೆ ಕೋವಿಡ್ ಬಂದಾಗ ಬ್ಲ್ಯಾಕ್ ಫಂಗಸ್ ಬರುವ ಸಾಧ್ಯತೆ ಇದೆ. ಮೂಗಿನಿಂದ ಆರಂಭವಾಗುವ ಈ ರೋಗ ಕಣ್ಣಿಗೆ ಹಾನಿ ಮಾಡುತ್ತದೆ.…

ವಿಪತ್ತು ಸ್ಪಂದನಾ ಪಡೆ ಬಲ ಹೆಚ್ಚಳಕ್ಕೆ ಆದ್ಯತೆ;ಬೊಮ್ಮಾಯಿ

ಬೆಂಗಳೂರು,ಮೇ,16:ಕರ್ನಾಟಕ ರಾಜ್ಯ ವಿಪತ್ತು ಸ್ಪಂದನಾ ಪಡೆ ಪಡೆಯ ಬಲವನ್ನು ಹೆಚ್ಚಿಸಲಾಗುವುದು. ಅದರಜೊತೆಗೆ ಪ್ರಸಕ್ತ ವರ್ಷದಲ್ಲಿ 15 ಕೋಟಿ ರೂಪಾಯಿ ವೆಚ್ಚದಲ್ಲಿ ಅಗತ್ಯ ವಾಹನ, ಅತ್ಯಾಧುನಿಕ ಉಪಕರಣ ಖರೀದಿಯ ಜೊತೆಗೆ ರಾಜ್ಯದ ಎರಡು ಕಡೆ ಎಸ್ ಡಿ ಆರ್ ಎಫ್ ತಂಡದ ಕಚೇರಿಯನ್ನು ಸ್ಥಾಪಿಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ರಾಜ್ಯ ಅಗ್ನಿಶಾಮಕ ತುರ್ತು ಸೇವೆ ಗೃಹರಕ್ಷಕ ಪೌರರಕ್ಷಣೆ SDRF ನಿರ್ದೇಶನಾಲಯ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 20 ಕೋಟಿ ರೂಪಾಯಿ ವೆಚ್ಚದಲ್ಲಿ…

ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ 50 ಸಾವಿರ ಪರಿಹಾರ:ಬಿ.ಸಿ.ಪಾಟೀಲ್

ಬೆಂಗಳೂರು,ಮೇ.16 :ಹಿರೇಕರೂರು ಮತಕ್ಷೇತ್ರದಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಕೋವಿಡ್ ಎರಡನೇ ಅಲೆ ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 50ಸಾವಿರ ರೂ.ಪರಿಹಾರ ಧನ ನೀಡುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಘೋಷಿಸಿದ್ದಾರೆ. ಹಿರೇಕೆರೂರು ಮತಕ್ಷೇತ್ರದಲ್ಲಿ ಇಲ್ಲಿಯವರೆಗೆ ಸುಮಾರು ಹದಿನೆಂಟು ಮಂದಿ‌ ಸೋಂಕಿನಿಂದ ಮೃತಪಟ್ಟಿದ್ದು,ಮೃತಪಟ್ಟವರ ಕುಟುಂಬದ ಸದಸ್ಯರನ್ನು ನಾಳೆ ಬಿ.ಸಿ.ಪಾಟೀಲ್ ಭೇಟಿಯಾಗಿ ಪರಿಹಾರ ಧನ ವಿತರಿಸಲಿದ್ದಾರೆ. ಇನ್ನು ಕೆಲವು ದಿನಗಳ ಹಿಂದೆ ಹಿರೇಕೆರೂರು ಮತಕ್ಷೇತ್ರ ವ್ಯಾಪ್ತಿಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರು ಹಿರೇಕೆರೂರು ಸೇರಿದಂತೆ ಹಾವೇರಿ ಜಿಲ್ಲೆಯ ಸರ್ಕಾರಿ…

24 ಗಂಟೆಯಲ್ಲಿ 3,11,170 ಕೊರೊನಾ ಪ್ರಕರಣಗಳು ದಾಖಲು

ನವದೆಹಲಿ,ಮೇ,16: ಕೋವಿಡ್-19 ಹೊಸ ಪ್ರಕರಣಗಳ ಸಂಖ್ಯೆ ದೇಶಾದ್ಯಂತ ಹೆಚ್ಚುತ್ತಲೇ ಇದ್ದು ಕಳೆದ 24ಗಂಟೆಯಲ್ಲಿ 3,11,170 ಪ್ರಕರಣಗಳನ್ನು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 2.46 ಕೋಟಿಗೆ ತಲಪಿದೆ ಈ ವೇಳೆ 4,077 ಸಾವುಗಳು ವರದಿಯಾಗಿವೆ. ಮೇ 16 ರ ಭಾನುವಾರ ಬೆಳಿಗ್ಗೆ 6 ರಿಂದ ಮೇ 30 ರವರೆಗೆ ಸಂಜೆ 6 ರಿಂದ ಪಶ್ಚಿಮ ಬಂಗಾಳ ಸರ್ಕಾರವು ಹದಿನೈದು ದಿನಗಳವರೆಗೆ ರಾಜ್ಯದಾದ್ಯಂತ ಸಂಪೂರ್ಣ ಲಾಕ್ ಡೌನ್ ಘೋಷಿಸಿದೆ. ಇಲ್ಲಿ ರಾತ್ರಿ ಕರ್ಫ್ಯೂ ವಿಧಿಸಿದ್ದು ಪ್ರತಿ ರಾತ್ರಿ 9 ರಿಂದ…

ಚಿಕ್ಕಮಗಳೂರಿನಲ್ಲೂ ಆಕ್ಸಿಜನ್ ಬಸ್ ಸೇವೆ ಪ್ರಾರಂಭ: ಸವದಿ

ಬೆಂಗಳೂರು,ಮೇ,16:ಬಿಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಇದರ ಅಂಗವಾಗಿ ಚಿಕ್ಕಮಗಳೂರಿನಲ್ಲಿಯೂ ಕೆ. ಎಸ್. ಆರ್. ಟಿ.ಸಿ.ಯುಸ್ವಯಂ ಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ  ಸೋಮವಾರದಿಂದ ಬಸ್ಸಿನಲ್ಲಿಯೇ ಆಕ್ಸಿಜನ್ ಘಟಕವನ್ನು ಪ್ರಾರಂಭಿಸಲು ಮುಂದಾಗಿದೆ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಪ್ರಸ್ತುತ ಬಹುತೇಕ ಎಲ್ಲಾ ಆಸ್ಪತ್ರೆಗಳಲ್ಲೂ ಕೋವಿಡ್ ರೋಗಿಗಳ ದಟ್ಟಣೆ ಹೆಚ್ಚಾಗಿದೆ. ಇದರಿಂದಾಗಿ ಹೊಸ ರೋಗಿಗಳು ಆಸ್ಪತ್ರೆಗೆ ಬಂದಾಗ ಅವರಿಗೆ ಆಸ್ಪತ್ರೆಯಲ್ಲಿ ಆಕ್ಸಿಜನ್…

ಬಸವಣ್ಣನಿಗೆ ವಚನಜ್ಯೋತಿ ಬಳಗದ ವಿಶಿಷ್ಟ ನಮನ

ಬೆಂಗಳೂರು,ಮೇ,16:ವಚನಜ್ಯೋತಿ ಬಳಗ ಬಸವ ಜಯಂತಿಯನ್ನು ವಚನ ಗಾನಾಭಿಷೇಕದ ಮೂಲಕ ವಿಶಿಷ್ಟವಾಗಿ ಆಚರಿಸಿತು. ಗೂಗಲಮೀಟಿನಲ್ಲಿ ನಡೆದ ಗಾನಾಭಿಷೇಕವನ್ನು ಹಿಂದೂಸ್ಥಾನಿ ಸಂಗೀತದ ಹಿರಿಯ ವಿದ್ವಾಂಸರಾದ ಪಂ. ದೇವೇಂದ್ರಕುಮಾರ ಪತ್ತಾರ್ ಅಲ್ಲಮಪ್ರಭುಗಳ ಬಸವ ಸ್ತುತಿಯೊಂದಿಗೆ ಉದ್ಘಾಟಿಸಿದರು. ನೇತೃತ್ವ ವಹಿಸಿದ್ದ ಬಳಗದ ಮಹಾಪೋಷಕಿ 86 ವರ್ಷದ ಪಾರ್ವತಮ್ಮ ಶಿವಲಿಂಗಯ್ಯ ಪಂಡಿತರು ಅತ್ಯಂತ ಉತ್ಸಾಹದಿಂದ ಅಣ್ಣನ ವಚನ “ತನುವ ಕೊಟ್ಟು ತನು ಬಯಲಾಯಿತ್ತು” ಹಾಡಿ ಗಾನಾಭಿಷೇಕಕ್ಕೆ ಮೆರುಗು ಕೊಟ್ಟರು. ಗೋಕಾಕದ ವಿದ್ಯಾಮಗ್ದಂ, ವಿಜಯಪುರ ಚಡಚಣದ ವಿದ್ಯಾ ಕಲ್ಯಾಣಶೆಟ್ಟಿ, ಚಿಕ್ಕನಾಯಕನಹಳ್ಳಿ ಹುಳಿಯಾರಿನ ಕವಿತಾ, ಮೈಸೂರಿನ…

ಗರಿಷ್ಠ ಮಟ್ಟ ತಲುಪಿದ ಪೆಟ್ರೋಲ್,ಡೀಸೆಲ್ ಬೆಲೆ

ನವದೆಹಲಿ, ಮೇ,16:ತೈಲಬೆಲೆ ಏರಿಕೆ ಇಂದೂ ಕೂಡ ಮುಂದುವರೆದಿದೆ ಐದು ರಾಜ್ಯಗಳ ಚುನಾವಣೆ ನಂತರ ತೈಲ ಬೆಲೆಯಲ್ಲಿ ನಿರಂತರ ಏರಿಕೆ ಕಾಣುತ್ತಿದೆ,ಇಂದು ಭಾನುವಾರವೂ ಕೂಡ ಗರಿಷ್ಠ ಮಟ್ಟ ತಲುಪಿದೆ. ಪ್ರಾತಿನಿಧಿಕಪ್ರತಿ ಲೀಟರ್​ ಪೆಟ್ರೋಲ್​ ದರದಲ್ಲಿ 22 ರಿಂದ 24 ಪೈಸೆ ಏರಿಕೆಯಾಗಿದೆ. ಅದೇ ರೀತಿ ಪ್ರತಿ ಲೀಟರ್​ ಡೀಸೆಲ್​ ದರದಲ್ಲಿ 27 ರಿಂದ 29 ಪೈಸೆ ಹೆಚ್ಚಳವಾಗಿದೆ. ಕಳೆದ ಶುಕ್ರವಾರ ಪೆಟ್ರೋಲ್​ ಮತ್ತು ಡೀಸೆಲ್​ ದರ ಏರಿಕೆಯಾಗಿತ್ತು. ನಿನ್ನೆ ಶನಿವಾರ ಇಂಧನ ದರದಲ್ಲಿ ಯಾವುದೇ ಬದಲಾವಣೆಗಳು ಇರಲಿಲ್ಲ. ಬೆಲೆ…

28 ರಂದು ಜಿಎಸ್ ಟಿ ಮಂಡಳಿ ಸಭೆ: ಕೋವಿಡ್ ಪರಿಕರಗಳ ಕುರಿತು ಚರ್ಚೆ

ನವದೆಹಲಿ,ಮೇ,16:ಇದೇ‌ ತಿಂಗಳ 28 ರಂದು ಜಿಎಸ್ ಟಿ ಮಂಡಳಿ ಸಭೆ ನಡೆಯಲಿದ್ದು .ಈ ವೇಳೆ ಕೋವಿಡ್ ಔಷಧೀಯ ಪರಿಕರಗಳ ಮೇಲಿನ ತೆರಿಗೆ ದರಗಳ ಕುರಿತು ಚರ್ಚಿಸುವ ಸಾಧ್ಯತೆಗಳಿವೆ. ಜಿಎಸ್ ಟಿ ವ್ಯವಸ್ಥೆಯಿಂದ ರಾಜ್ಯಗಳ‌ಮೇಲಿನ ವರಮಾನ ಕೊರತೆಯನ್ನು ಯಾವ ರೀತಿ ತುಂಬಿಕೊಡಬಹುದು ಎನ್ನುವ ವಿಷಯ ಕುರಿತು ಚರ್ಚೆಗೆ ಬರಲಿವೆ ಎಂದು ಮೂಲಗಳು ತಿಳಿಸಿವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ನೇತೃತ್ವದಲ್ಲಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ಸಭೆ ನಡೆಯಲಿದೆ. ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ…

ಕುಸ್ತಿಪಟುಗಳ ತರಬೇತಿ ಶಿಬಿರ ರದ್ಧು

ನವದೆಹಲಿ,ಮೇ,16: ಸೋನಿಪತ್ ನಲ್ಲಿ ಓಲಂಪಿಕ್ ಆಯ್ಕೆ ಯಾದ ಕ್ರೀಡಾಪಟುಗಳ ತರಬೇತಿ ಶಿಬಿರವನ್ನು ರದ್ಧುಗೊಳಿಸಲಾಗಿದೆ. ಒಲಿಂಪಿಕ್ಸ್‌ಗೆ ತೆರಳಲಿರುವ ಪುರುಷ ಮತ್ತು ಮಹಿಳಾ ಕುಸ್ತಿಪಟುಗಳು ಮುಂದಿನ ಮಂಗಳವಾರ ಬಹಲ್‌ಗರ್‌ನಲ್ಲಿರುವ ಭಾರತ ಕ್ರೀಡಾ ಪ್ರಾಧಿಕಾರದ ಆವರಣದಲ್ಲಿ ಜಮಾಯಿಸಬೇಕಾಗಿತ್ತು. ಆದರೆ ಅದನ್ನು ರದ್ದು ಮಾಡಿ ಕುಸ್ತಿಪಟುಗಳನ್ನು ನೇರವಾಗಿ ಪಾಲೆಂಡ್‌ಗೆ ಕಳುಹಿಸಲು ನಿರ್ಧರಿಸಲಾಗಿದೆ. ಅಲ್ಲಿ ಜೂನ್ ಎಂಟರಿಂದ 13ರ ವರೆಗೆ ಟೋಕಿಯೊ ಒಲಿಂಪಿಕ್ಸ್‌ಗೆ ಸಂಬಂಧಿಸಿದ ರ‍್ಯಾಂಕಿಂಗ್ ಸೀರಿಸ್ ನಡೆಯಲಿದೆ. ಕ್ವಾರೆಂಟೇನ್ ಗೆ ಒಳಗಾಗಬೇಕಾಗಿರುವುದರಿಂದ ಬಹಲ್‌ಗರ್‌ನಲ್ಲಿ ನಡೆಯಬೇಕಾಗಿದ್ದ ತರಬೇತಿ ಶಿಬಿರವನ್ನು ರದ್ದುಮಾಡಲಾಗಿದೆ. ಅವರವರ ಅಖಾಡಗಳಲ್ಲೇ…

ತೌಕ್ತೆ ಚಂಡಮಾರುತ ಎದುರಿಸಲು ೧ ಸಾವಿರ ಜನ ಸಿಬ್ಬಂದಿ ನೇಮಕ – ಬೊಮ್ಮಾಯಿ

ಬೆಂಗಳೂರು,ಮೇ,15:    ತೌಕ್ತೆ ಚಂಡಮಾರುತವನ್ನು ಸಮರ್ಥವಾಗಿ ಎದುರಿಸಲು NDRF, SDRF ಸೇರಿದಂತೆ ಒಟ್ಟು ಒಂದು ಸಾವಿರ ನುರಿತ ರೆಸ್ಕ್ಯೂ ಆಪರೇಷನ್ ಟೀಮ್ ಅನ್ನು ನಿಯೋಜಿಸಲಾಗಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು. ಶನಿವಾರ ಬೆಂಗಳೂರಿನಲ್ಲಿ ಟೌಟೆ ಚಂಡಮಾರುತ ಎದುರಿಸಲು ಮಾಡಿಕೊಳ್ಳಲಾಗಿರುವ ಸಿದ್ಧತೆಗಳ ಕುರಿತು ಉನ್ನತಮಟ್ಟದ ಸಭೆ ನಡೆಸಿದ ಬಳಿಕ ಸುದ್ದಿಗಾರರಿಗೆ ಅವರು ಈ ವಿಷಯ ತಿಳಿಸಿದರು. ರಾಜ್ಯದಲ್ಲಿ ಒಟ್ಟು 434 ಜನ sdrf ತಂಡದಲ್ಲಿದ್ದಾರೆ. ಕಲಬುರ್ಗಿ ಮತ್ತು…

ಅಮೂಲಾಗ್ರ ಸುಧಾರಣೆಗೆ ಕ್ರಮ;ಅಶ್ವತ್ಥ ನಾರಾಯಣ

ಬೆಂಗಳೂರು,ಮೇ,15: ಸುಮಾರು ಒಂದೂವರೆ ಕೋಟಿಗೂ ಹೆಚ್ಚು ಜನರಿರುವ ರಾಜಧಾನಿ ಬೆಂಗಳೂರಿನಲ್ಲಿ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಇರುವ ವ್ಯವಸ್ಥೆಯನ್ನೇ ಆಮೂಲಾಗ್ರವಾಗಿ ಸುಧಾರಿಸಲು ರಾಜ್ಯ ಕೋವಿಡ್‌ ಕಾರ್ಯಪಡೆಯು ತಜ್ಞರರದಿ ಪಡೆಯಲು ನಿರ್ಧರಿಸಿದೆ. ಬೆಂಗಳೂರಿನಲ್ಲಿ ಶನಿವಾರ ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ನೇತೃತ್ವದಲ್ಲಿ ನಡೆದ ಕಾರ್ಯಪಡೆ ಸಭೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದರು. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರ ಆರೋಗ್ಯ ವ್ಯವಸ್ಥೆಯನ್ನು ಬಿಬಿಎಂಪಿ ವ್ಯಾಪ್ತಿಯಿಂದ ತೆಗೆದು ಆರೋಗ್ಯ…

ಕಾಂಗ್ರೆಸ್ ಜನಪ್ರತಿನಿಧಿಗಳ ಪ್ರಧೇಶಾಭಿವೃದ್ಧಿ ಹಣ ಬಿಡುಗಡೆಗೆ ಸಿದ್ದು ಸಿಎಂಗೆ ಪತ್ರ

ಬೆಂಗಳೂರು,ಮೇ,೧೫: ಕಾಂಗ್ರೆಸ್ ಪಕ್ಷದ ಶಾಸಕರು, ವಿಧಾನಸಭಾ ಸದಸ್ಯರ,ಸಂಸದರು ಮತ್ತು ರಾಜ್ಯಸಭಾ ಸದಸ್ಯರ ಪ್ರದೇಶಾಭಿವೃದ್ಧಿ ತಲಾ ಒಂದು ಕೋಟಿರೂ ಗಳನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಕೋರಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂಪ್ಪ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಸದಸ್ಯರ ಕ್ಷೇತ್ರಗಳ ಅಭಿವೃದ್ಧಿಗೆಂದು ನೀಡಲಾಗುವ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ ೧ ಕೋಟಿ ರೂಪಾಯಿಗಳನ್ನು ಲಸಿಕೆ ಖರೀದಿಸಿ ಜನರಿಗೆ ನೀಡಲು ಉದ್ದೇಶಿಸಿದ್ದೇವೆ. ಇದರಿಂದ ಸುಮಾರು ೯೦ ಕೋಟಿ ರೂಗಳಷ್ಟು ಸಂಗ್ರಹವಾಗುತ್ತದೆ. ಇನ್ನುಳಿದ ಹತ್ತು ಕೋಟಿ ರೂಗಳನ್ನು ಪಕ್ಷದ…

Girl in a jacket