Girl in a jacket

Author kendhooli_editor

ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು

 ಶ್ರೀ. ಡಾ.ಆರೂಢಭಾರತೀ ಸ್ವಾಮೀಜಿ                                             ಸಿದ್ಧಸೂಕ್ತಿ : ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು. ತಿನ್ನುವ ಅಡಿಕೆ ಸಣ್ಣದು, ಬೆಲೆ ಕಡಿಮೆ. ಅದಕ್ಕಾಗಿ ಕೈ ಒಡ್ಡುವುದು, ಕದಿಯುವುದೂ ಉಂಟು. ಇದು ವ್ಯಕ್ತಿಯ ಮನಸ್ಸ್ಥಿತಿ ಯೋಗ್ಯತೆಗಳನ್ನಳೆಯುವುದು. ಯೋಗ್ಯಾಯೋಗ್ಯತೆ, ಪಾಪ ಪುಣ್ಯ, ಒಳಿತು ಕೆಡಕು, ಅಪರಾಧ – ನಿರಪರಾಧಗಳು…

ರವಿಚೆನ್ನಣ್ಣನವರ್ ಸೇರಿದಂತೆ 12 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು ,ಜೂ. 09: ಕೋವಿಡ್​ ನಿಯಂತ್ರಣದ ನಡುವೆಯೇ ರಾಜ್ಯ ಸರ್ಕಾರ ಪೊಲೀಸ್​ ಇಲಾಖೆಗೆ ಮೇಜರ್​ ಸರ್ಜರಿ ನಡೆಸಿದೆ. ರಾಜ್ಯದ 12 ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಇಂದು ಆದೇಶ ನೀಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್​ಪಿ ರವಿ ಚೆನ್ನಣ್ಣನವರ್​ ಸೇರಿದಂತೆ ಜಿಲ್ಲಾ ಎಸ್ಪಿಗಳ ವರ್ಗಾವಣೆ ಮಾಡಿ ಆದೇಶ ನೀಡಿದೆ. ಇದೇ ವೇಳೆ ಮೈಸೂರು ಜಿಲ್ಲಾ ನೂತನ ಎಸ್​ಪಿಯಾಗಿ ಆರ್​ ಚೇತನ್​ ಅವರನ್ನು ವರ್ಗಾಯಿಸಲಾಗಿದೆ. ಕೊರೋನಾ ನಿಯಂತ್ರಣದ ರಾಜ್ಯದಲ್ಲಿ ಲಾಕ್​ಡೌನ್​ ಜಾರಿಯಾಲ್ಲಿದ್ದು, ಜನರ ಓಡಾಟಕ್ಕೆ ನಿರ್ಭಂದ ಹೇರಿ ಕಾನೂನು…

ದೂರವಾಣಿ ವಿನಿಮಯ ಕರೆಗಳ ಕನ್ವರ್ಟ್; ಇಬ್ಬರ ಬಂಧನ

ಬೆಂಗಳೂರು, ಜೂ,09: ಅನಧಿಕೃತ ದೂರವಾಣಿ ವಿನಿಮಯ ಕರೆಗಳನ್ನು ಕನ್ವರ್ಟ್ ಮಾಡುತ್ತಿದ್ದ ತಂಡವನ್ನು ಬೇದಿಸಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಇಬ್ರಾಹಿಂ ಪುಲ್ಲಟ್ಟಿ ಮೊಹಮ್ಮದ್ ಕುಟ್ಟಿ ಹಾಗೂ ಗೌತಮ್ ಎನ್ನುವರನ್ನು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಟಿ ನಡೆಸಿದ ಅವರು, ಬಿಟಿಎಂ ಲೇಔಟ್‌ನ 6 ಕಡೆ ದಾಳಿ ನಡೆಸಿ ಆರೋಪಿಗಳನ್ನು ಸೆರೆಹಿಡಿದಿದ್ದೇವೆ. ಬಂಧಿತ ಆರೋಪಿಗಳಿಂದ 960 ಸಿಮ್ ಕಾರ್ಡ್‌ಗಳು, 30 ಸಿಮ್ ಬಾಕ್ಸ್ ಡಿವೈಸ್ ವಶಕ್ಕೆ ಪಡೆಯಲಾಗಿದೆ. ಇದರಿಂದಲೇ ISD ಕರೆಗಳನ್ನು…

5 ಹಂತಗಳಲ್ಲಿ ಅನ್ ಲಾಕ್; ಅಶೋಕ್

ಬೆಂಗಳೂರು,ಜೂ,09: ಲಾಕ್ ಡೌನ್ ಏಕಾಏಕಿ ತೆರೆಯುತ್ತಿಲ್ಲ, 5 ಹಂತಗಳಲ್ಲಿ ರಾಜ್ಯದಲ್ಲಿ ಅನ್ ಲಾಕ್ ಪ್ರಕ್ರಿಯೆ ನಡೆಯಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜೂನ್ 14ಕ್ಕೆ ಲಾಕ್ ಡೌನ್ ಮುಕ್ತಾಯವಾಗಿ ಅನ್ ಲಾಕ್ ಏಕಾಏಕಿ ಒಂದೇ ಸಲಕ್ಕೆ ಅನ್ ಲಾಕ್ ಆಗುವುದಿಲ್ಲ, ಆ ರೀತಿ ಜನರು ಭಾವಿಸಬೇಡಿ, ಒಂದೇ ಸಲಕ್ಕೆ ತೆರೆದರೆ ಮತ್ತೆ ಕೊರೋನಾ ಸೋಂಕು ಹೆಚ್ಚಾಗುವ ಸಾಧ್ಯತೆಯಿದೆ ಎಂದರು. ಯಾವ ರೀತಿ ತೆರೆಯುವುದು, ಮೊದಲ ಹಂತದಿಂದ…

ದುಪ್ಪಟ್ಟು ತೆರಿಗೆ ;ಸಾರ್ವಜನಿಕರ ಆಕ್ರೋಶ

G.k.hegade,shikarripura ಶಿಕಾರಿಪುರ,ಜೂ,೦೯:ಕೊ ರೋ ನಾ ಮಹಾಮಾರಿ ಎರಡು ವರ್ಷ ಗಳಿಂದ ಜನರ ಜೀವ .ಜೀವನವನ್ನು ಕಿತ್ತುತಿನ್ನುತಿದೆs ಈ ಸಂದರ್ಭದಲ್ಲೂ ಕಂದಾಯ ಹಾಗೂ ಕಾಲಿ ನಿವೇಶನದ ತೆರಿಗೆಗಳು ಎರಡು ಪಟ್ಟು ಆಗಿದ್ದು ಸಾರ್ವಜನಿಕರು ಪುರಸಭೆ ಶಾಪ ಹಾಕುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗಗಳು ನಡೆಯುತ್ತಿದೆ. ಸರ್ಕಾರ ತೆರಿಗೆ ಜಾಸ್ತಿ ಮಾಡುವುದು ಅನಿವಾರ್ಯ ಆದರೆ ಈ ಕೆಟ್ಟ ಪರಿಸ್ಥಿಯಲ್ಲಿ ಮಾಡುವುದು ಸರಿಯಲ್ಲ ಎನ್ನುವುದು ಸಾರ್ವಜನಿಕರ ವಾದ .ಕೆಲವು ಜನರಿಗೆ ಕಂದಾಯ ಜಾಸ್ತಿ ಯಾಗಿರುವುದು ತಿಳಿದೇ ಇಲ್ಲ ಕಟ್ಟಲು ಹೋದವರಿಗೆ ಮಾತ್ರ…

ಕೊಳೆತ ತರಕಾರಿಗಳಿಂದ ಬ್ಲಾಕ್ ಫಂಗಸ್ ಸೋಂಕು;ಸುಧಾಕರ್

ಬೆಂಗಳೂರು, ಜೂ.9- ಬ್ಲಾಕ್ ಫಂಗಸ್ ಬಗ್ಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಆತಂಕಕಾರಿ ವಿಷಯವೊಂದನ್ನು ತಿಳಿಸಿದ್ದಾರೆ. ಬ್ಲಾಕ್ ಫಂಗಸ್ ಅಪರೂಪದ ಸೋಂಕು. ಮಣ್ಣು, ಗಿಡಗಳು ಹಾಗೂ ಕೊಳೆಯುತ್ತಿರುವ ತರಕಾರಿಗಳಲ್ಲಿ ಕಂಡುಬರುವ ಶಿಲೀಂದ್ರ, ತೆರೆದ ಚರ್ಮ ಅಥವಾ ಉಸಿರಾಟದ ಮೂಲಕ ನಮ್ಮ ದೇಹ ಪ್ರವೇಶಿಸುತ್ತದೆ ಎಂದಿದ್ದಾರೆ. ಬ್ಲಾಕ್ ಫಂಗಸ್ ವಿರುದ್ಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಾಗೃತಿ ಅಭಿಯಾನವನ್ನು ಆರಂಭಿಸಿದೆ. ಅದರ ಭಾಗವಾಗಿ ಇಂದು ಟ್ವಿಟ್ ಮಾಡಿರುವ ಸಚಿವರು ಮಣ್ಣು, ಗಿಡ ಹಾಗೂ ಕೊಳೆಯುತ್ತಿರುವ…

ಜೀವನದ ನಿಜಸ್ವರೂಪ ತಿಳಿದವನು ಬದುಕಿಗೆ ಅಂಜಲಾರ!

ಒಮ್ಮೆ ಸಿದ್ಧಬಾಲಕ ಹುಡುಗರೊಂದಿಗೆ ಕೆರೆಗೆ ಸ್ನಾನಕ್ಕೆ ಹೋದನು. ಈಜು ಬಾರದ ಹುಡುಗನನ್ನು ಎಳೆದೊಯ್ದು ಕೆರೆಯಲ್ಲಿ ಮುಳುಗಿಸಿದನು.ತಾಯಿ ರೋಧಿಸಿದಾಗ ,’ಕೂಗಿ ಕರೆ’ ಎಂದನು.ದೇವದತ್ತಾ ಬಾ! ಎಂದೊಡನೆ ಹುಡುಗ ಮೇಲೆದ್ದು ಈಜಿ ಬಂದ! ಇದರ ತಾತ್ತ್ವಿಕತೆಯನ್ನು ಸಿದ್ಧ ಹೀಗೆ ವಿವರಿಸಿದನು; ಬದುಕೆಂಬುದು ಒಂದು ಕೆರೆ.ಬದುಕುವ ಜೀವಿಗಳೆಲ್ಲರೂ ಕೆರೆಯಲ್ಲಿ ಈಜುವ ಹುಡುಗರು! ಕೆರೆಯಲ್ಲಿಳಿಯಲು, ಕೆರೆಯಲ್ಲಾಡಲು, ಕೆರೆದಾಟಲು ಈಜು ತಿಳಿದಿರಬೇಕು. ನೀರು ಆಳವಾಗಿದ್ದರೆ, ಈಜು ಬರದಿದ್ದರೆ, ಕೆರೆಗೆ ಇಳಿಯಲಾಗದು.ಇಳಿದರೆ,ಬಿದ್ದರೆ ಮುಗಿಯುತ ಕಥೆ! ಆದ್ದರಿಂದ ಈಜು ಬಾರದವ ನೀರಿಗಿಳಿಯಲು ಭಯಪಡುವನು. ನೀರಿನಲ್ಲಿ ಈಜುವವರನ್ನು ಕಂಡು…

ಸಿನಿಮಾ ಕಲಾವಿದರಿಗೆ ೬.೬೦ ಕೋಟಿ ರೂ ಅನುದಾನ ಬಿಡುಗಡೆ

ಬೆಂಗಳೂರು,ಜೂ,೦೮ : ಸಿನಿಮಾ ಕ್ಷೇತ್ರವನ್ನೇ ನಂಬಿ ಜೀವಿಸುತ್ತಿದ್ದ ಸಾವಿರಾರು ಕಲಾವಿದರು ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಲಾಕ್‌ಡೌನ್‌ನಿಂದ ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದರು ಹೀಗಾಗಿ ಸರ್ಕಾರ ಇಂತವರ ನೆರವಿಗೆ ದಾವಿಸಿದ್ದು ಸಿನಿಮಾ ಕಲಾವಿದರಿಗೆ ೬.೬೦ ಕೋಟಿ ರೂಅನುದಾನ ಬಿಡುಗಡೆ ಮಾಡಿದೆ ಸಿನಿಮಾ-ಕಿರುತೆರೆಯ ಕಲಾವಿದರು, ತಂತ್ರಜ್ಞರಿಗೆ ತಲಾ ೩ ಸಾವಿರ ರೂಪಾಯಿಯನ್ನು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಸಿನಿಮಾ, ಕಿರುತೆರೆ ಕ್ಷೇತ್ರದ ೨೨ ಸಾವಿರ ಮಂದಿಗೆ ತಲಾ ಮೂರು ಸಾವಿರ ರೂ. ಸಿಗಲಿದೆ. ಸ್ಯಾಂಡಲ್‌ವುಡ್‌ನ ಹ್ಯಾಟ್ರಿಕ್ ಹೀರೋ ಸೇರಿದಂತೆ ಕಲಾವಿದರ ತಂಡು ಸಿಎಂ ಯಡಿಯೂರಪ್ಪರನ್ನು…

ಮಾಜಿ ಸಚಿವ ಸಿ.ಎಂ.ಉದಾಸಿ ನಿಧನ

ಬೆಂಗಳೂರು,ಜೂ,೦೮: ಮಾಜಿ ಸಚಿವ ಹಾಗೂ ಹಾಲಿ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ.ಉದಾಸಿ ನಿಧನರಾಗಿದ್ದಾರೆ. ಅವರಿಗೆ ೮೫ ವರ್ಷ ವಯಸ್ಸಾಗಿತ್ತು ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯಿಸಿರೆಳದಿದ್ದಾರೆ. ಹೃದಯ ಸಂಬಂಧಿ ಕಾಯಿಲೆಗೆ ಕಳೆದ ೧೫ ದಿನಗಳಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ವಾರದ ಹಿಂದೆ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಮಂಗಳವಾರ ಬೆಳಿಗ್ಗೆ ಆರೋಗ್ಯದಲ್ಲಿ ಏರುಪೇರಾಗಿ, ಮಧ್ಯಾಹ್ನದ ವೇಳೆಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಅವರಿಗೆ…

ಉಳ್ಳವರು ಸಂತ್ರಸ್ತರಿಗೆ ನೆರವಾಗಿ: ಆರೂಢಭಾರತೀ ಸ್ವಾಮೀಜಿ

ಬೆಂಗಳೂರು,ಜೂ,08:ಯಾವುದೂ ಯಾರಿಗೂ ಶಾಶ್ವತವಲ್ಲ. ನಿನ್ನೆ ಇನ್ನಾರದ್ದೋ ಆಗಿದ್ದು ಇಂದು ನಮ್ಮದಾಗಿದೆ. ನಾಳೆ ಯಾರ ಪಾಲೆಂಬುದು ತಿಳಿದಿಲ್ಲ. ನಮ್ಮ ಲೆಕ್ಕಾಚಾರಗಳು ಯಥಾವತ್ತಾಗಿ ನಡೆಯುವುದಿಲ್ಲ ಎಂಬುದಕ್ಕೆ ಕೊರೊನಾ ದುಷ್ಕಾಲವೇ ಸಾಕ್ಷಿ. ಇಂದು ನಾವು ಚೆನ್ನಾಗಿರಬಹುದು. ನಾಳೆ ಏನಿದೆಯೋ? ಚೆನ್ನಾಗಿರುವಾಗಲೇ ನಮ್ಮಲ್ಲಿರುವುದನ್ನು ಇಲ್ಲದವರಿಗೆ ನೀಡೋಣ. ಇಂದು ಕೈ ಒಡ್ಡಿ ಪಡೆಯುವವನು ನಾಳೆ ನಮಗೇ ಕೈ ಎತ್ತಿ ಕೊಡುವವನಾದಾನು! ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಹೇಳಿದರು. ಅವರು ಇಂದು ಸಿದ್ಧಾರೂಢ ಮಿಷನ್, ಸಹಬಾಳ್ವೆ…

ವೃತ್ತಿಪರ ಕೋರ್ಸ್‌ಗಳಿಗೆ ಸಿಇಟಿ ಅಂಕಗಳು ಮಾತ್ರ ಪರಿಗಣನೆ-ಅಶ್ವತ್ಥ್‌ನಾರಾಯಣ

ಬೆಂಗಳೂರು,ಜೂ,೦೮:ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಈ ಬಾರಿ ಕೇವಲ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿದೆ ಎಂದು ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ. ಕೋವಿಡ್ ಸಾಂಕ್ರಾಮಿಕ ರೋಗದ ಎರಡನೇ ಅಲೆ ಕಾರಣ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ ಎಂದರು. ಈ ಸಂಬಂಧ ಬೆಂಗಳೂರಿನಲ್ಲಿ ಇಂದು ಉನ್ನತ ಅಧಿಕಾರಿಗಳ ಜತೆಸಮಾಲೋಚನೆ ನಡೆಸಿ ನಂತರ ಅವರು ಈ ವಿಷಯವನ್ನು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು ಪಿಯುಸಿ ಅಂಕಗಳ ವಿಚಾರವಾಗಿ ನೀತಿಯಲ್ಲಿ ಅಗತ್ಯ ತಿದ್ದುಪಡಿ ತರಲಾಗುವುದು.ಪದವಿ ಕಾಲೇಜುಗಳಿಗೆ, ಇತರ…

ಕೊರೊನಾ ಸೋಂಕಿತರ ಪ್ರಮಾಣ ಕಡಿಮೆ, ಸಾವಿನ ಸಂಖ್ಯೆ ಜಾಸ್ತಿ ;ವಿವರಣೆ ನೀಡಿದ ಬಿಬಿಎಂಪಿ ಆಯುಕ್ತ

ಬೆಂಗಳೂರು, ಜೂ, ೮: ಕೊರೊನಾ ಸೋಂಕಿತರ ಪ್ರಮಾಣ ದಿನೇ ದಿನೇ ಕಡಿಮೆಯಾಗುತ್ತಿದ್ದರೂ ಕುಡ ಸಾವಿನ ಸಂಖ್ಯೆ ಹೆಚ್ಚಾಗುತ್ತಿತ್ತು ಈ ಕುರಿತು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ವಿವರಣೆ ನೀಡಿದ್ದಾರೆ, ಕಳೆದ ಒಂದು ತಿಂಗಳ ಹಿಂದಿನ ಪರಿಸ್ಥಿತಿ ಅವಲೋಕಿಸಿದರೆ ಸ್ಮಶಾನದಲ್ಲಿ ಕ್ಯೂ ಕೂಡಾ ಹಿಂದಿನ ರೀತಿಯಲ್ಲಿ ಇರಲಿಲ್ಲ. ಆದರೂ, ಬೆಂಗಳೂರಿನಲ್ಲಿ ಸಾವಿನ ಸಂಖ್ಯೆಯ ಅಂಕಿಅಂಶ ಕಮ್ಮಿಯಾಗಿರಲಿಲ್ಲ. ಈ ಬಗ್ಗೆ ಬಿಬಿಎಂಪಿ ಆಯುಕ್ತರಾದ ಗೌರವ್ ಗುಪ್ತ ಅಸಲಿ ಕಾರಣವನ್ನು ಬಿಚ್ಚಿಟ್ಟಿದ್ದು, ಸಾರ್ವಜನಿಕರು ಗಾಬರಿ ಪಡಬೇಕಾಗಿಲ್ಲ ಎಂದು ಹೇಳಿ, ಸಾವಿನ ಸಂಖ್ಯೆ…

ಫ್ರೆಂಚ್ ಓಪನ್ ಟೆನಿಸ್; ೧೫ನೇ ಬಾರಿಗೆ ಕ್ವಾರ್ಟರ್ ಫೈನಲ್ ಪ್ರವೇಶಿಸಿದ ನಡಾಲ್

ಪ್ಯಾರೀಸ್,ಜೂ,೦೮:ರಾಫೆಲ್ ನಡಾಲ್ ಆರಂಭಿಕ ಹಿನ್ನಡೆಯ ಹೊರತಾಗಿಯೂ ಸರಿಯಾದ ಸಮಯದಲ್ಲಿ ತಮ್ಮ ಅನುಭವವನ್ನು ಬಳಸಿಕೊಂಡು ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದಾರೆ. ಇಟಲಿಯ ಯುವ ಆಟಗಾರ ಜೆನಿಕ್ ಸಿನ್ನರ್ ೭-೫, ೬-೩, ೬-೦ ಸೆಟ್‌ಗಳ ಅಂತರದಲ್ಲಿ ಗೆಲುವು ಸಾಧಿಸುವ ಮೂಲಕ ಫ್ರೆಂಚ್ ಓಪನ್ ಟೆನಿಸ್ ಟೂರ್ನಿಯಲ್ಲಿ ೧೫ನೇ ಬಾರಿಗೆ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ. ಕೇವಲ ೧೯ ವರ್ಷದ ಇಟಲಿ ಆಟಗಾರ ಸಿನ್ನರ್ ಮೊದಲ ಸೆಟ್‌ನಲ್ಲೇ ನಡಾಲ್ ಅವರನ್ನು ತಬ್ಬಿಬ್ಬುಗೊಳಿಸುವಲ್ಲಿ ಯಶಸ್ವಿಯಾದರು. ವಿಶ್ವ ೧೯ನೇ ಶ್ರೇಯಾಂಕಿತ ಆಟಗಾರ ಸಿನ್ನರ್ ರಣತಂತ್ರಕ್ಕೆ ನಡಾಲ್…

ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಆರೋಪಿಗಳಿಗೆ ಶಿಕ್ಷೆ ಪ್ರಕಟ

ಉಡುಪಿ, ಜೂ, ೦೮: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪವನ್ನು ಸಾಬೀತು ಪಡಿಸಿದ್ದು ಶಿಕ್ಷೆಯನ್ನು ಪ್ರಕಟಿಸಿದೆ ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ ನಂತರ ಹೋಮಕುಂಡದಲ್ಲಿ ಸುಟ್ಟಿದ್ದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಹಾಗೂ ರಾಜೇಶ್ವರಿ ಗೆಳೆಯ ನಿರಂಜನ ಭಟ್‌ಗೆ ಶಿಕ್ಷೆ ಪ್ರಕಟವಾಗಿದೆ. ಉಡುಪಿ ಜಿಲ್ಲಾ ನ್ಯಾಯಾಲಯದಿಂದ ಜೂನ್ ೮ಕ್ಕೆ ಶಿಕ್ಷೆ ತೀರ್ಪು ಪ್ರಕಟ ದಿನಾಂಕ ಮುಂದೂಡಲಾಗಿತ್ತು. ಮೂರು ಪ್ರಮುಖ ಆರೋಪಿಗಳು ದೋಷಿಗಳು ಎಂದು ಕೋರ್ಟ್ ತೀರ್ಪು ನೀಡಿದೆ.…

ದೇಶದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಮತ್ತಷ್ಟು ಇಳಿಕೆ

ನವದೆಹಲಿ, ಜೂ 08:ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಪ್ರಕರಣಗಳು ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 86,498 ಮಂದಿ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,89,96,473ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 2123 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,82,282 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ದೇಶದಲ್ಲಿ ಈವರೆಗೆ 23,61,98,726 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

ಅಕ್ಕಿ ಮೇಲೆ ಆಶೆ, ನೆಂಟರ ಮೇಲೆ ಪ್ರೀತಿ

ಶ್ರೀ ಡಾ.ಆರೂಢಭಾರತೀ ಸ್ವಾಮೀಜಿ                                               ಸಿದ್ಧಸೂಕ್ತಿ : ಅಕ್ಕಿ ಮೇಲೆ ಆಶೆ, ನೆಂಟರ ಮೇಲೆ ಪ್ರೀತಿ. ಸಮಾರಂಭ ಸತ್ಕಾರಗಳು ಅದ್ದೂರಿಯಾಗಬೇಕು, ಹೆಚ್ಚು ಜನ ಸೇರಬೇಕು, ಅಲ್ಲಿ ತಾ ಮಿಂಚಬೇಕು, ಇದು ಜನರ ಆಶೆ. ಇದಕೆ ಶ್ರಮಪಡಬೇಕು, ಖರ್ಚು ಮಾಡಬೇಕು. ಶ್ರಮ ಪಡೆ, ಖರ್ಚು ಮಾಡೆ, ಎಂದರೆ…

ಲಸಿಕೆ ವಿಳಂಬ ನೀತಿಯಿಂದ ಹಲವರ ಸಾವಿಗೆ ಕಾರಣರಾದ ಮೋದಿ-ಮಮತಾ ಟೀಕೆ

ಕೋಲ್ಕತ್ತ,ಜೂ,೦೭: ಮೋದಿಯವರು ಈಗ ೧೮ ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಗುತ್ತದೆಎಂಬ ನಿರ್ಧಾರವನ್ನು ಈ ಹಿಮದೆಯೇ ತಗೆದುಕೊಂಡಿದದರೆ ಜಿವ ಉಳಿಯುತ್ತಿತ್ತು ಇದರಿಂದ ಅನೇಕರ ಸಾವಿಗೆ ಕಾರನವಾಗಿದೆ ಎಂದು ಮೋದಿ ಹೇಳಿಕೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದರೆ. ಲ್ಲರಿಗೂ ಉಚಿತವಾಗಿ ಲಸಿಕೆ ನೀಡುವ ನಮ್ಮ ದೀರ್ಘಕಾಲದ ಬೇಡಿಕೆ ಬಗ್ಗೆ ಫೆಬ್ರುವರಿ ೨೧ರಂದು ಮತ್ತು ಹಲವು ಬಾರಿ ಪ್ರಧಾನಿಗೆ ಪತ್ರ ಬರೆದಿದ್ದೆ. ಇದನ್ನು ಕೇಳಲು ಅವರಿಗೆ ನಾಲ್ಕು ತಿಂಗಳು ಬೇಕಾಯಿತು. ಅಂತಿಮವಾಗಿ, ಬಹಳ ಒತ್ತಡದ ಬಂದ ಮೇಲೆ ಅವರು…

ಭಾರತ-ಶ್ರೀಲಂಕ ವೇಳಾಪಟ್ಟಿ ಪ್ರಕಟ

ನವದೆಹಲಿ,ಜೂ,07: ಶ್ರೀಲಂಕಾ ವಿರುದ್ಧ ಭಾರತದ ಪರ್ಯಾಯ ತಂಡವು ಆಡಲಿರುವ ತಲಾ ಮೂರು ಏಕದಿನ ಹಾಗೂ ಟ್ವೆಂಟಿ–20 ಪಂದ್ಯಗಳ ಕ್ರಿಕೆಟ್‌ ಸರಣಿಯು ಜುಲೈ 13ರಿಂದ 25ರವರೆಗೆ ನಡೆಯಲಿದೆ. ಆಯ್ಕೆಗಾರರು ಶಿಖರ್ ಧವನ್ ಅಥವಾ ಹಾರ್ದಿಕ ಪಾಂಡ್ಯ ನಾಯಕತ್ವದಲ್ಲಿ ಸಾಕಷ್ಟು ಯುವ ಆಟಗಾರರನ್ನು ಆಯ್ಕೆ ಮಾಡುವ ನಿರೀಕ್ಷೆಯಿದೆ. ಸಂಪೂರ್ಣ ಫಿಟ್ ಆಗಿರುವ ಶ್ರೇಯಸ್ ಅಯ್ಯರ್‌ ಕೂಡ ನಾಯಕತ್ವದ ರೇಸ್‌ನಲ್ಲಿದ್ದಾರೆ. ಸೋನಿ ಸ್ಪೋರ್ಟ್ಸ್ ವಾಹಿನಿಯು ಜಾಲತಾಣಗಳ ಮೂಲಕ ಸರಣಿಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮೂರು ಏಕದಿನ ಪಂದ್ಯಗಳು ಕ್ರಮವಾಗಿ ಜುಲೈ 13, 16…

ಭಾರತದಲ್ಲಿ ಹೊಸ ಮಾದರಿಯ ವೈರಸ್ ಪತ್ತೆ

ಪುಣೆ, ಜೂ,7: ನಿಧಾನಕ್ಕೆ ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಕಡಿಮೆಯಾಗುತ್ತಿರುವ ಈ ವೇಳೆ ಹೊಸ ಮಾದರಿಯ ವೈರಸ್ ಪತ್ತೆಯಾಗಿದೆ. ಇದನ್ನು B.1.1.28.2 ಕೊರೊನಾವೈರಸ್‌ ಎಂದು ಕರೆಯಲಾಗಿದ್ದು ಪುಣೆಯ ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ಪತ್ತೆ ಹಚ್ಚಿದೆ. ಬ್ರೆಜಿಲ್ ಮತ್ತು ಯುಕೆಯಿಂದ ಆಗಮಿಸಿದ ಪ್ರಯಾಣಿಕರಲ್ಲಿ ಸಂಗ್ರಹಿಸಿದ ಗಂಟಲು ಮತ್ತು ಮೂಗಿನ ದ್ರವಗಳಲ್ಲಿ ಈ ಹೊಸ ರೂಪಾಂತರಿ ಕೊರೊನಾ ವೈರಸ್‌ ಪತ್ತೆಯಾಗಿದೆ. ಸಿರಿಯನ್ ಹ್ಯಾಮ್ಸ್ಟರ್ ಮಾದರಿಯಲ್ಲಿ ಪತ್ತೆಯಾದ ರೂಪಾಂತರಿ ವೈರಸ್‌ನ ತೀವ್ರತೆಯನ್ನು ಪರೀಕ್ಷಿಸಲಾಗುತ್ತಿದ್ದು D614G ರೂಪಾಂತರಿಯೊಂದಿಗೆ ಹೋಲಿಕೆ ಮಾಡಲಾಗಿದೆ. ಹೊಸ…

ಜೂನ್ 21 ರ ನಂತರ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ- ಮೋದಿ

ನವದೆಹಲಿ,ಜೂ,07:ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾಡೊದ ಭಾಷಣದಲ್ಲಿ ಬಹುತೇಕ ವ್ಯಾಕ್ಸಿನ್ ಬಗ್ಗೆಯೇ ಮೀಸಲಿಟ್ಟಿದ್ದು ಸಲಿಕೆಯನ್ನು ನವೆಂಬರ್ ಹೊತ್ತಿಗೆ ಎಲ್ಲರಿಗೂ ಲಸಿಕೆ ಹಾಕಲಾಗುತ್ತದೆ ಎಂದರು. ಇನ್ನೂ ಲಸಿಕೆ ಬಗ್ಗೆ ಟೀಕಿಸುತ್ತಿದ್ದವರಿಗೆ ಉತ್ತರ ನೀಡಿದ ಮೋದಿ ಜೂನ್ 21 ರ ಬಳಿಕ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ ನೀಡಲಾಗುವುದು ಎಂದು ಹೇಳಿದರು. ಈ ಮೊದಲು ಲಸಿಕೆ ವಿತರಣೆ ಸಂಬಂಧ ರಾಜ್ಯಗಳಿಗೆ ಶೇ. 50 ಜವಾಬ್ದಾರಿ ವಹಿಸಲಾಗಿತ್ತು. ಆದರೆ ಲಸಿಕೆ ವಿತರಣೆ ಕುರಿತು ಒಂದಷ್ಟು ಟೀಕೆಗಳು ವ್ಯಕ್ತವಾದ್ದರಿಂದ…

1 93 94 95 96 97 112
Girl in a jacket