Girl in a jacket

Author kendhooli_editor

ಹಿರಿಯ ಪತ್ರಕರ್ತ ಮಹಾದೇವ್ ಪ್ರಕಾಶ್ ಕೋವಿಡ್ ಗೆ ಬಲಿ

ಬೆಂಗಳೂರು, ಮೇ,14: ಹಿರಿಯ ಪತ್ರಕರ್ತ ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಕಾರ್ಯದರ್ಶಿ ರಾಜಕೀಯ ವಿಶ್ಲೇಷಕ ಮಹಾದೇವ ಪ್ರಕಾಶ್ ಕೋವಿಡ್ ಗೆ ಬಲಿಯಾಗಿದ್ದಾರೆ. ಕಳೆದ ಒಂದು ವಾರದ ಹಿಂದೆ ಕೊರೊನಾ ಸೋಂಕು ತಗುಲಿದ ಕಾರಣ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು,ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯಿಸಿರೆಳದಿದ್ದಾರೆ. 65 ವರ್ಷದ ಮಹಾದೇವ್ ಪ್ರಕಾಶ್ 1975 ರಲ್ಲಿ ಲೋಕವಾಣಿ ದಿನಪತ್ರಿಕೆ ಮೂಲಕ ಪತ್ರಿಕೋದ್ಯಮ ಆರಂಭಿಸಿದ್ದ ಅವರು ನಂತರ ತಮ್ಮದೆ ಸಂಪಾದಕತ್ವದ ‘ಈ ಭಾನುವಾರ ‘ಪತ್ರಿಕೆ ತರುತ್ತಿದ್ದರು ಅಲ್ಲದೆ ಈಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ…

ಬಿಪಿಎಲ್ ಕಾರ್ಡ್‌ದಾರರಿಗೆ ೫ ರಿಂದ ೧೦ಕೆಜಿ ಅಕ್ಕಿ ವಿತರಣೆ

ಬೆಂಗಳೂರು,ಮೇ,೧೪:ಲಾಕ್‌ಡೌನ್‌ಸಮಯದಲ್ಲಿ ಉಚಿತ ಅಹಾರ ಕಿಟ್ ಹಾಗೂ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಬಹುದು ಎಂದು ನಿರೀಕ್ಷೆಯಲ್ಲಿ ರಾಜ್ಯದ ಜನರಿಗೆ ಬದಲಾಗಿ ಬಿಪಿಎಲ್ ಕಾರ್ಡ್‌ದಾರರಿಗೆ ವಿತಿರಿಸುವ ಅಕ್ಕಿಯನ್ನು ೫ ರಿಂದ ೧೦ ಕೇಜಿಗೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇ, ಜೂನ್ ತಿಂಗಳಿಗೆ ಉಚಿತವಾಗಿ ೧೦ ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದೆ. ಪ್ರತಿ ಕೆಜಿಗೆ ೧೫ರಂತೆ ೧೦ ಕೆಜಿ ಅಕ್ಕಿಯನ್ನು ಎಪಿಎಲ್ ಅರ್ಜಿದಾರರಿಗೂ ಈ ಅವಧಿಯಲ್ಲಿ ಆಹಾರ ಇಲಾಖೆ ವಿತರಣೆ ಮಾಡಲಿದೆ. ಈ ಕುರಿತು ಆಹಾರ…

ಬಸವಣ್ಣ ಮತ್ತು ಸಾಮಾಜಿಕ ಆಂದೋಲನ

ಬಸವಣ್ಣ೧೨ನೆಯ ಶತಮಾನವನ್ನು ಭರತಖಂಡದ ಧಾರ್ಮಿಕ ಪರಂಪರೆಯಲ್ಲಿ ಒಂದು ಚಿರಸ್ಮರಣೀಯ ಘಟ್ಟವನ್ನಾಗಿಸಿದ ಮಹಾವ್ಯಕ್ತಿ. ಇವರ ವ್ಯಕ್ತಿತ್ವ ಬಹುಮುಖವಾದುದಾದರೂ ಇವರನ್ನು ಕುರಿತು ಅನೇಕ ವ್ಯಕ್ತಿತ್ಚ ರಚಿತವಾಗಿದ್ದರೂ ಅವುಗಳಲ್ಲಿ ಯಾವುದರಲ್ಲೂ ಇವರ ವ್ಯಕ್ತಿತ್ವದ ಸಮಗ್ರ ಯಥಾವತ್ತಾದ ಚಿತ್ರಣ ಮೂಡಿ ಬಂದಿಲ್ಲ. ಅವೆಲ್ಲ ಪವಾಡಗಳಲ್ಲಿ ಹುದುಗಿ ಹೋಗಿವೆ. ಆದರೆ ೧೪೦೦ಕ್ಕೂ ಹೆಚ್ಚು ಸಂಖ್ಯೆಯಲ್ಲಿ ದೊರೆತಿರುವ ಇವರ ವಚನಗಳಿಂದ ಹಾಗೂ ಪುರಾಣಗಳಲ್ಲಿ ಸೂಚಿತವಾಗಿರುವ ಘಟನೆಗಳಿಂದ ಚಾರಿತ್ರಿಕ ಅಂಶಗಳನ್ನು ಹೆಕ್ಕಿ ತೆಗೆದು ಇವರ ಜೀವನಚಿತ್ರ & ಸಾಧನೆಗಳನ್ನೂ ಕಾಣಬೇಕಾಗಿದೆ. ಬಸವಣ್ಣನವರ ಬದುಕನ್ನು ವಿವಿಧ ಪುರಾಣಗಳ ನೆರವಿನಿಂದ…

ಟೀಂ ಇಂಡಿಯಾ ಇಂದಿನ ಸುಸ್ತಿತಿಗೆ ದ್ರಾವಿಡ್ ಕಾರಣ-ಗ್ರೇಗ್‌ಚಾಪಲ್

ಸಿಡ್ನಿ,ಮೇ,೧೪: ಭಾರತದ ಕ್ರಿಕೆಟ್ ತಂಡದಲ್ಲಿ ಪ್ರತಿಭೆಗಳಿಗೆ ಭಂಡಾರವನ್ನೇ ಹೊಂದಿದೆ ಇಂತ ಸುಸ್ತಿತಿಗೆ ರಾಹುಲ್ ದ್ರಾವಿಡ್ ಅವರ ಕೊಡುಗೆಯೇ ಕಾರಣ ಎಂದು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಗ್ರೇಗ್ ಚಾಪೆಲ್ ಹೇಳಿದ್ದಾರೆ. ಆಸ್ಟ್ರೇಲಿಯಾದ ಕ್ರಿಕೆಟ್ ವೆಬ್ ಸೈಟ್‌ನ ಸಂದರ್ಶನದಲ್ಲಿ ನೀಡಿದ ಹೇಳಿಕೆಯಲ್ಲಿ ಭಾರತೀಯ ಕ್ರಿಕೆಟ್‌ತಂಡ ಇಂದು ವಿಶ್ವದಲ್ಲಿ ಅನಭಿಶಕ್ತ ದೊರೆಯಾಗಿ ಮೆರೆಯುತ್ತಿದೆಎಂದರೆ ಅದಕ್ಕೆ ದ್ರಾವಿಡ್ ಅವರೇ ಕಾರಣ ಅವರ ನೀಡಿರುವ ತರಬೇತಿ ನಿಜಕ್ಕೂ ಮೆಚ್ಚುವಂತದ್ದು ಎಂದು ಅವರು ಹೇಳಿದ್ದಾರೆ. ’ಆಸ್ಟ್ರೇಲಿಯಾದಲ್ಲಿನ ದೇಶಿ ಕ್ರಿಕೆಟ್ ವ್ಯವಸ್ಥೆಯನ್ನು ಅಳವಡಿಸಿಕೊಂಡಿರುವ ಭಾರತ ಮತ್ತು…

ಕಾಂಗ್ರೆಸ್ ನಿಂದ ವ್ಯಾಕ್ಸಿನ್ ಪ್ರಕ್ರಿಯೆಗೆ ೧೦೦ಕೋಟಿ ರೂ ನೆರವು

ಬೆಂಗಳೂರು,ಮೇ,೧೪: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಯಲು ನೀಡಲಾಗುತ್ತಿರುವ ಲಸಿಕೆ ಖರೀದಿಗೆ ರಾಜ್ಯಸರ್ಕಾರಕ್ಕೆ ಕರ್ನಾಟಕ ಕಾಂಗ್ರೆಸ್ ಪಕ್ಷ ೧೦೦ ಕೋಟಿ ರೂ ಸಹಾಯ ದನ ನೀಡಲಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ಸಂಸದರರಿಗೆ ಮಂಜೂರು ಮಾಡಿರು ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ ಒಂದು ಕೋಟಿ ರೂಗಳಂತೆ ಒಟ್ಟು ೧೦೦ ಕೋಟಿ ರೂಗಳನ್ನು ವ್ಯಾಕ್ಸಿನ್ ಹಂಚಿಕೆ ಪ್ರಕ್ರಿಯೆಗೆ…

ಬಸವ ಪತ್ಥಳಿಗೆ ಸಿಎಂ ಮಾಲಾರ್ಪಣೆ

ಬೆಂಗಳೂರು, ಮೇ 14 : ಬಸವ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು. ಬೇಲಿ ಮಠದ ಶ್ರೀ ಶಿವರುದ್ರ ಸ್ವಾಮೀಜಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಬಿ.ಡಿ.ಎ. ಅಧ್ಯಕ್ಷ ಎಸ್. ಆರ್.ವಿಶ್ವನಾಥ್, ಸಂಸದ ಪಿ.ಸಿ.ಮೋಹನ್ ,ಬಿ.ಬಿ.ಎಂ.ಪಿ ಆಯುಕ್ತ ಗೌರವ್ ಗುಪ್ತಾ, ಬಸವ ಸಮಿತಿ ಅಧ್ಯಕ್ಷ ಡಾ: ಸಿ.ಸೋಮಶೇಖರ್ ಉಪಸ್ಥಿತರಿದ್ದರು.

ದೇಶದಲ್ಲಿ ಕೊರೊನಾ ಸೋಂಕಿತರ ದಾಖಲಾರ್ಹ ಏರಿಕೆ

ನವದೆಹಲಿ, ಮೇ,14: ದಿನೇ ದಿನೇ ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 3,43,144 ಹೊಸ ಪ್ರಕರಣಗಳು ದಾಖಲಾಗಿವೆ. ಈ ವೇಳೆ ಕೊರೊನಾಗೆ ನಾಲ್ಕು ಸಾವಿರ ಜನ ಬಲಿಯಾಗಿದ್ದಾರೆ.ದೇಶದಲ್ಲಿ ಸೋಂಕಿತರ ಸಂಖ್ಯೆ ದಾಖಲೆಮಟ್ಟದಲ್ಲಿ ಏರಿಕೆಯಾಗುತ್ತಿದೆ ಈ ಕಾರಣ ಸಕ್ರಿಯ ಪ್ರಕರಣಗಳ ಸಂಖ್ಯೆ 37,04,893 ಕ್ಕೆ ಏರಿಕೆಯಾಗಿದೆ. ಹೀಗಾಗಿ ದೇಶದಲ್ಲಿ ‌ಒಂದೇ ದಿನ 18,75,515 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ,31,13,24,100 ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಇನ್ನು ಭಾರತದಲ್ಲಿ ಒಂದೇ ದಿನ 18,75,515 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು,…

ಲಾಕ್ ಡೌನ್ ಹಿನ್ನೆಲೆ; ದೆಹಲಿಯಲ್ಲಿ ಕೊರೊನಾ ಪ್ರಕರಣ ಇಳಿಕೆ

ನವದೆಹಲಿ,ಮೇ,14: ದೇಶದ ರಾಜದಾನಿ ನವದೇಹಲಿಯಲ್ಲಿ ಈಗ ಕೊರೊನಾ ಪ್ರಮಾಣ ಇಳಿಕೆಯಾಗಿದೆ. ಕಳೆದ ಒಂದು ತಿಂಗಳಿಂದ ಆತಂಕ ಮೂಡಿಸಿದ್ದಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ದ್ವಿತೀಯ ಅಲೆಯು, ರಾಷ್ಟ್ರ ಕೊರೊನಾ ಸೋಂಕು ಪ್ರಮಾಣದಲ್ಲಿ ಭಾರೀ ಇಳಿಕೆ ಕಂಡಿದೆ. ಲಾಕ್‌ಡೌನ್‌ ನಾಲ್ಕನೇ ವಾರ ಮುಂದುವರಿದ ಪರಿಣಾಮ ಸೋಂಕಿತರ ಶೇಕಡಾವಾರು ಪ್ರಮಾಣ ಇದೇ ಮೊದಲ ಬಾರಿಗೆ ಶೇ 15ಕ್ಕಿಂತ ಕಡಿಮೆ ದಾಖಲಾಗಿದೆ. ಸತತ 6 ದಿನಗಳಿಂದ ಸೋಂಕಿತರ ಸಂಖ್ಯೆ ಕಡಿಮೆಯಾಗಿ, ಗುಣಮುಖರಾದವರ ಸಂಖ್ಯೆ ಹೆಚ್ಚುತ್ತ ಸಾಗಿರುವುದು ಸಾರ್ವಜನಿಕರ ಆತಂಕವನ್ನು ಕೊಂಚ ಮಟ್ಟಿಗೆ ಕಡಿಮೆ…

ಅತೀ ಹೆಚ್ಚು ಕೋವಿಡ್ ದಾಖಲಾಗಿರುವ ದೇಶದ ಜಿಲ್ಲೆಗಳ ಡಿಸಿಗಳೊಂದಿಗೆ ಮೋದಿ ಸಂವಾದ

ನವದೆಹಲಿ,ಮೇ,14:ದಿನೇ ದಿನೇ ಕೋವಿಡ್-19 ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅತೀ ಹೆಚ್ಚು ದಾಖಲಾಗಿರುವ ದೇಶದದೇಶಾದ್ಯಂತ 100 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ. ಇದೇ ಮೊದಲ ಬಾರಿಗೆ ಜಿಲ್ಲಾ ಮಟ್ಟದ ಆಡಳಿತಾಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ ನಡೆಸುತ್ತಿದ್ದಾರೆ ಮೇ.18 ಹಾಗೂ 20 ರಂದು ಈ ಸಂವಾದ ನಡೆಯಲಿದೆ. ಮೊದಲ ಸಭೆಯಲ್ಲಿ 9 ರಾಜ್ಯಗಳಿಂದ 46 ಜಿಲ್ಲೆಗಳ ಜಿಲ್ಲಾ ಮ್ಯಾಜಿಸ್ಟ್ರೇಟ್ ಗಳಿ ಭಾಗಿಯಾಗಲಿದ್ದಾರೆ ಹಾಗೂ 10 ರಾಜ್ಯಗಳ 54 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಎರಡನೇ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಸಭೆಯಲ್ಲಿ ಆಯಾ ರಾಜ್ಯದ…

ಸಂಜನಾ ವಿರುದ್ಧ ಹಲ್ಲೆ ಕೇಸ್ ದಾಖಲು

ಬೆಂಗಳೂರು,ಮೇ,೧೪: ಕೆಲವು ಬಾರಿ ಹೀಗೆಯೇ ಯಾವಾಗಲೋ ಆದ ಘಟನೆಗೆ ಸಂಕಷ್ಟಗಳು ಎದುರಾದಾಗ ಮತ್ತೆ ಹಳೆ ಘಟನೆಗಳ ಶನಿ ಬೆನ್ನುಹತ್ತಿಬಿಡುತ್ತವೆ ಈಗ ಸಂಜನಾ ಗಲ್ರಾನಿ ಕತೆಯೂ ಹಾಗೆಯೇ ಆಗಿದೆ. ಹೌದು ಹಳೆಯ ಪ್ರಕರಣವೊಂದು ಈಗ ಮತ್ತೆ ಅವರ ಬೆನ್ನುಬಿದ್ದಿದೆ ಅದು ಡ್ರಗ್ ಪ್ರಕರಣದ ಸಂದರ್ಭದಲ್ಲೆ ಇದೊಂದು ಸೇರ್ಪಡೆಯಾಗಿದೆ. ಮಾಡೆಲ್ ವಂದನಾ ಜೈನ್ ದೂರಿನ್ವಯ ಕೋರ್ಟ್ ಆದೇಶದಂತೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ೨೦೧೯ ರಲ್ಲಿ ಲ್ಯಾವೆಲ್ಲಿ ರಸ್ತೆಯ ಕ್ಲಬ್‌ನಲ್ಲಿ ವಂದನಾ ಜೈನ್ ಸ್ನೇಹಿತನೊಂದಿಗೆ ಮಾತುಕತೆ ವೇಳೆ ಸಂಜನಾ…

ಒಟಿಟಿಯತ್ತ ರಮೇಶ್ ಚಿತ್ತ

ಸ್ಯಾಂಡಲ್‌ವುಡ್‌ನಲ್ಲಿ ಸದಾ ಕ್ರೀಯಾಶೀಲ ವ್ಯಕ್ತಿ ಎಂದರೆ ಅರವಿಂದ್ ರಮೇಶ್ ಯಾವಾಗಲೂ ಪ್ರಯೋಗಾತ್ಮಕವಾಗಿಯೇ ಚಿಂತಿಸುವ ಅವರು ಹೊಸ ತಂತ್ರಜ್ಞಾನಗಳ ಕಡೆ ತಮ್ಮ ಬುದ್ದಿಗೆ ಕೆಲಸ ಕೊಡುತ್ತಿರುತ್ತಾರೆ ಅದರ ಪ್ರಯತ್ನವೆ ಈಗ ಒಟಿಟಿ ಕಡೆ ತಮ್ಮ ಚಿತ್ತ ಹರಿಸಿದ್ದಾರೆ. ಕೊರೊನಾ ಅಟ್ಟಹಾಸದ ಹಿನ್ನೆಲೆಯಲ್ಲಿ ಲಾಕ್‌ಡೌನ್ ಆದ ಈ ಹೊತ್ತಿನಲ್ಲಿ ಒಟಿಟಿಗಳು ಹೆಚ್ಚು ನಟರನ್ನು ತಮ್ಮತ್ತ ಸೆಳೆದುಕೊಂಡಿವೆ ಹಾಗಾಗಿಯೇ ಅರವಿಂದ್ ರಮೇಶ್ ಕೂಡ ಈಗ ಅವರು ವೆಬ್ ಸರಣಿ ನಿರ್ದೇಶನಕ್ಕೆ ಮುಂದಾಗಿದ್ದಾರೆ ವೆಬ್ ಸರಣಿಗಾಗಿಯೆ ಕತೆಯೊಂದನ್ನು ಸಿದ್ದತೆ ಮಾಡಿಕೊಂಡಿದ್ದಾರೆ. ಇತಿಹಾಸಕ್ಕೆ ಸಂಬಂಧಿಸಿದ…

ಗೃಹ ಸಚಿವ ಬೊಮ್ಮಾಯಿ ನಿವಾಸ ಕೋವಿಡ್ ಆರೈಕೆ ಕೇಂದ್ರ

ಶಿಗ್ಗಾವಿ,ಮೇ,13: ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅವರು ಶಿಗ್ಗಾವಿಯಲ್ಲಿರುವ ತಮ್ಮ ಮನೆಯ ಆವರಣವನ್ನು ಈಗ ಕೋವಿಡ್ ಆರೈಕೆ ಕೇಂದ್ರವಾಗಿ ಪರಿವರ್ತಿಸಿದ್ದಾರೆ. ಶಿಗ್ಗಾವಿ ಕ್ಷೇತ್ರದ ಕೋವಿಡ್ ಸೋಂಕಿತರ ಜೀವ ರಕ್ಷಣೆಗೆ ಬೊಮ್ಮಾಯಿ ಪಣ ತೊಟ್ಟಿದ್ದಾರೆ. ಸೋಂಕು ಕಾಣಿಸಿಕೊಂಡ ವ್ಯಕ್ತಿಗೆ ಪ್ರಾಥಮಿಕ ವೈದ್ಯೋಪಚಾರ ಒದಗಿಸಲು ಶಿಗ್ಗಾವಿಯಲ್ಲಿ ಇರುವ ತಮ್ಮ ಮನೆಯನ್ನು ಕೋವಿಡ್ ಅರೈಕೆ ಕೇಂದ್ರವನ್ನಾಗಿ ಪರಿವರ್ತಿಸಿದ್ದಾರೆ. ಚಿಕಿತ್ಸೆ ನೀಡಲು ವೈದ್ಯರನ್ನು ನಿಯೋಜಿಸಲಾಗಿದೆ. 50 ಹಾಸಿಗೆ ಗಳನ್ನು ಇಲ್ಲಿ ಅಳವಡಿಸಲಾಗಿದೆ. ಈ ಸ್ಥಳಕ್ಕೆ…

ನಿರೀಕ್ಷೆಗಳ ಹುಸಿಗೊಳಿಸಿದ ಸಿಎಂ

ಬೆಂಗಳೂರು, ಮೇ,13:ಮುಖ್ಯಮಂತ್ರಿ ಸುದ್ದಿಗೋಷ್ಠಿ ಕರೆದಿದ್ದಾರೆ ಎಂದರೆ ಬಹುತೇಕ ಸಾಕಷ್ಟು ನಿರೀಕ್ಷೆಗಳಿದ್ದವು ಕೋವಿಡ್ ಸಂಕಷ್ಟದಲ್ಲಿ ಲಾಕ್ ಡೌನ್ ಮಾಡಿದ ಈ ಹೊತ್ತಲ್ಲಿ ಏನಾದರೂ ಆರ್ಥಿಕ ಪ್ಯಾಕೇಜ್ ಪ್ರಕಟಿಸುತ್ತಾರೆ ಎನ್ನುವ ಎಲ್ಲಾ ಆಸೆಗಳಿಗೂ ತಣ್ಣೀರೆರಚಿದ್ದಾರೆ. ಕನಿಷ್ಠ ಜನರ ಬಗ್ಗೆ ಅನುಕಂಪವೂ ಇಲ್ಲದ ಬಿ.ಎಸ್ ಯಡಿಯೂರಪ್ಪ ಜನರ ಸಮಸ್ಯೆಗಳ ಬಗ್ಗೆ ಸೌಜನ್ಯಕ್ಕೂ ಪ್ರಸ್ತಾಪ ಮಾಡದ ಅವರು ಕಠಿಣ ಕ್ರಮದಿಂದ ಕೊರೊನಾ ಸೋಂಕಿತರ ಪ್ರಮಾಣ ಇಳಿಮುಖವಾಗಿದೆ ಎಂದು ಹೇಳಿದರು. ಇನ್ನೂ 18 ವರ್ಷದ ಮೇಲಿನ ಎಲ್ಲಾ ವಯೋಮಾನದವರಿಗೂ ವ್ಯಾಕ್ಸಿನ್ ಹಾಕಲಾಗುತ್ಯದೆ ಎಂದು…

ಎಸ್ಎಸ್ಎಲ್ ಸಿ ಪರೀಕ್ಷೆಗಳು ಮುಂದೂಡಿಕೆ

ಬೆಂಗಳೂರು,ಮೇ,13:ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್‌.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ. ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳು, ವಿದ್ಯಾರ್ಥಿ-ಪೋಷಕರ, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್19ರ ಎರಡನೇ‌ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ‌ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು, ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ…

ಚಾಮರಾಜನಗರದಲ್ಲಿ ಸಾವನ್ನಪ್ಪಿದವರು 24 ಅಲ್ಲ 36

ಬೆಂಗಳೂರು,ಮೇ,13: ಚಾಮರಾಜನಗರ ಆಸ್ಪತರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರು24 ಮಂದಿಯಲ್ಲ 36 ಮಂದಿ ಎಂದು ಸಮಿತಿ ಹೈಕೋರ್ಟ್ ಗೆ ವರದಿ ಸಲ್ಲಿಸಿದೆ. ನ್ಯಾ.ಎ.ಎನ್.ವೇಣುಗೋಪಾಲಗೌಡ ನೇತೃತ್ವದ ಸಮಿತಿ ಮೇ 2ರ ರಾತ್ರಿ 10.30ರಿಂದ ತಡರಾತ್ರಿ 2.30ರವರೆಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಮಸ್ಯೆ ಉಂಟಾಗಿತ್ತು. ಈ 4 ಗಂಟೆಗಳ ಅವಧಿಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗಾಗಿ ಆಕ್ಸಿಜನ್ ಇರಲಿಲ್ಲ ಎಂದು ವರದಿಯಲ್ಲಿ ಸ್ಪಷ್ಟವಾಗಿ ತಿಳಿಸಿದೆ. ಆಡಿಟ್ ವರದಿ ಪ್ರಕಾರ ಆಕ್ಸಿಜನ್ ಕೊರತೆಯಿಂದ ಮೂವರು ಸಾವನ್ನಪ್ಪಿದ್ದಾರೆ. ಮೆದುಳಿನ ಆಘಾತದಿಂದ 7 ರೋಗಿಗಳು ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿನಿಂದ…

ನ್ಯಾಯಾಧೀಶರು ಸರ್ವಜ್ಞರಲ್ಲ- ಸಿ.ಟಿ.ರವಿ

ಬೆಂಗಳೂರು,ಮೇ,13: ಲಸಿಕೆ ನೋಡಿಕೆ ಸಂಬಂಧ ರಾಜ್ಯ ಸರ್ಕಾರದ ವಿರುದ್ದ ಹೈಕೋರ್ಟ್ ತರಾಟೆಗೆ ರಾಜ್ಯದಲ್ಲಿ ಕೊರೋನಾ ಲಸಿಕೆ ಕೊರತೆ ಮತ್ತು ನೀಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನ ಹೈಕೋರ್ಟ್ ತರಾಟೆ ತೆಗೆದುಕೊಂಡಿರುವುದನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ನ್ಯಾಯಾಧೀಶರು ಸರ್ವಜ್ಞರಲ್ಲ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.Υ ಗುರುವಾರ ಬೆಂಗಳೂರಿನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ತಜ್ಞರ ಸಮಿತಿ ನೀಡುವ ವರದಿಯನ್ನು ಆಧರಿಸಿಯೇ ಕೆಲಸ ಮಾಡುತ್ತದೆ ಕೇಂದ್ರ ಸರ್ಕಾರ ಹೇಳಿದೆ. ಇದನ್ನ ಸುಪ್ರೀಂಕೋರ್ಟ್ ಕೂಡ ಒಪ್ಪಿದೆ ಎಂದು ತಿಳಿಸಿದರು…

ಆಕ್ಸಿಜನ್ ಟ್ಯಾಂಕರ್ ಖರೀದಿ;ನಿರಾಣಿ ಕಾರ್ಯಕ್ಕೆ ಕಟೀಲು ಮೆಚ್ಚುಗೆ

ಬೆಂಗಳೂರು,ಮೇ,13: ಆಮ್ಲಜನಕ ಟ್ಯಾಂಕರ್ ಖರೀದಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತವು ಖನಿಜ ಅಭಿವೃದ್ಧಿ ನಿಧಿ (ಎಂಡಿಎಫ್) ಅಡಿಯಲ್ಲಿ ಲಭ್ಯವಿರುವ ಹಣವನ್ನು ಬಳಸಿಕೊಳ್ಳಲು ಅವಕಾಶ ನೀಡಿದ್ದಕ್ಕಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಎಂಡಿಎಫ್ ಅಡಿಯಲ್ಲಿ ಆಕ್ಸಿಜನ್ ಸಂಗ್ರಹಿಸಲು ಅಗತ್ಯವಾದ ಆಮ್ಲಜನಕ ಟ್ಯಾಂಕರ್ ಖರೀದಿಸಲು ಮತ್ತು ಅದನ್ನು ಜಿಲ್ಲೆಯ ಆಸ್ಪತ್ರೆಗಳಿಗೆ ಸಾಗಿಸಲು ಕೋವಿಡ್ -19 ಗೆ ಚಿಕಿತ್ಸೆ ನೀಡಲು ಸಚಿವ…

ಬಿಜೆಪಿ ಸರ್ಕಾರದ ಡಬಲ್ ಇಂಜಿನ್ ನಿಂತುಹೋಗಿದೆ; ಡಿ.ಕೆ.ಶಿ

ಬೆಂಗಳೂರು,ಮೇ,೧೩:’ಕರ್ನಾಟಕದ ಏಳಿಗೆಗೆ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಸರ್ಕಾರಗಳು ಡಬಲ್ ಇಂಜಿನ್ ರೀತಿ ಕೆಲಸ ಮಾಡುತ್ತವೆ ಎಂದು ಹೇಳಿದ್ದರು. ಆದರೆ ಕೋವಿಡ್ ನಿರ್ವಹಣೆ, ಆಕ್ಸಿಜನ್, ಲಸಿಕೆ ಪೂರೈಕೆ ವಿಚಾರದಲ್ಲಿ ಈ ಡಬಲ್ ಇಂಜಿನ್ ಗಳು ಕೆಟ್ಟು ನಿಂತಿವೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ತಮ್ಮ ನಿವಾಸದಲ್ಲಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ’ಚಾಮರಾಜನಗರದಲ್ಲಿ ೨೪ ಜನರ ಸಾವಿಗೆ ಸರ್ಕಾರವೇ ಹೊಣೆ ಎಂದು ಹೈಕೋರ್ಟ್ ನೇಮಕ ಮಾಡಿದ್ದ ನ್ಯಾಯಮೂರ್ತಿಗಳ ಸಮಿತಿ ಈಗಾಗಲೇ…

Girl in a jacket