Browsing: ರಾಜಕೀಯ

ರಾಜಕೀಯ

ಪ್ರಹ್ಲಾದ್ ಜೋಶಿ ,ಸಿ.ಟಿ.ರವಿ ಗೆ ಒಲಿಯಲಿದೆ ಸಿಎಂ ಪಟ್ಟ?

ಬೆಂಗಳೂರು,ಜು,24:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡುವುದು ಖಚಿತವಾಗುತ್ತಿದ್ದಂತೆ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವುದು ಕೂಡ ಸ್ಪಷ್ಟವಾಗುತ್ತದೆ. ದೆಹಲಿಯ ಬಿಜೆಪಿ ಪಕ್ಷದಲ್ಲಿ ನಡೆದ ಕೆಲ ಸಂಭ್ರಮಗಳ ಗಮನಿಸಿದರೆ ರಾಜ್ಯದ ನಾಯಕರ ನಡುವಳಿಕೆಗಳ ಮುಂದಿನ ಮುಖ್ಯಮಂತ್ರಿ ಯಾರು ಎನ್ನುವುದನ್ನು ಖಚಿತಪಡಿಸುತಿತ್ತು.. ಹೌದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಸಿ.ಟಿ.ರವಿ ಅವರನ್ನು ರಾಜ್ಯ ನಾಯಕರು ಗೌಪ್ಯವಾಗಿ ಬೇಟಿಯಾಗಿ ಸಂಭ್ರಮಿಸಿದ್ದು ಪುಷ್ಟಿನೀಡುವಂತಿತ್ತು. ವರಿಷ್ಠರು ‘ಅಚ್ಚರಿಯ ಅಭ್ಯರ್ಥಿ’ಯನ್ನೇ ಆಯ್ಕೆ ಮಾಡುವ ಸಾಧ್ಯತೆಯೇ ಹೆಚ್ಚು ಎಂಬ ಮಾತುಗಳೇ ಕೇಳಿ ಬಂದಿದ್ದು,ಅತ್ತ ಸಂಸತ್‌ನಲ್ಲಿ ಸಂಸದೀಯ ವ್ಯವಹಾರಗಳ ಖಾತೆ…

ರಾಹುಲ್ ಗಾಂಧಿ ಜೊತೆ ಸಿದ್ದು ಪ್ರತ್ಯೇಕ ಮಾತುಕತೆ; ಪಕ್ಷದಲ್ಲಿ ತಳಮಳ

ಬೆಂಗಳೂರು, ಜು,21:ರಾಜ್ಯ ರಾಜಕೀಯ ಬೆಳವಣಿಗೆ ಹಾಗೂ ಮುಂದಿನ ಸಿಎಂ ವಿಚಾರವಾಗಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಪ್ರತ್ಯೇಕವಾಗಿ ಮಾತನಾಡಿರುವುದು ಕಾಂಗ್ರೆಸ್ ನಾಯಕರಲ್ಲಿ ತಳಮಳಕ್ಕೆ ಕಾರಣವಾಗಿದೆ . ಮುಂದಿನ ಸಿಎಂ ವಿಚಾರವಾಗಿ ಸೃಷ್ಟಿಯಾಗಿರುವ ಬಿಕ್ಕಟ್ಟು ಪರಿಹರಿಸಕೆಂದೆ ದೆಹಲಿಗೆ ಕರೆಸಿಕೊಂಡು ಒಗ್ಗಟ್ಟಿನಲ್ಲಿ ಮುನ್ನಡೆಯಿರಿ ಎಂದು ಸೂಚಿಸಿದ್ದರಾದರೂ ಸಿದ್ದರಾಮಯ್ಯ ಜೊತೆಗಿನ ಪ್ರತ್ಯೇಕ ಮಾತುಕತೆ ಮಾತ್ರ ಎಲ್ಲರಲ್ಲೂ ಅಚ್ಚರಿಗೆ ಕಾರಣವಾಗಿದೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯಾದರೆ ಕಾಂಗ್ರೆಸ್‌ ಯಾವ ರೀತಿಯ ಹೆಜ್ಜೆ ಇಡಬಹುದು. ಮುಂದಿನ ಕಾರ್ಯತಂತ್ರ ಹಾಗೂ…

ನಾಯಕರನ್ನು ಭೇಟಿಯಾಗಲು ದೆಹಲಿಗೆ ಆಗಮಿಸಿದ ರೇಣುಕಾಚಾರ್ಯ

ನವದೆಹಲಿ, ಜು. ೨೧: ಬಿಎಸ್‌ವೈ ಅಧಿಕಾರಿದಂದ ಕೆಳಗಿಳಿಯುವುದು ಖಚಿತವಾಗುತ್ತಿದ್ದಂತೆ ಬಿಜೆಪಿ ನಾಯಕರು ದೆಹಲಿಗೆ ಬರುತ್ತಿದ್ದಾರೆ. ಇದರ ಭಾಗವಾಗಿ ಈಗ ಅವರ ಆಪ್ತ ರೇಣುಕಾಚಾರ್ಯ ಅವರು ದಿಡೀರ್ ನಿನ್ನೆ ರಾತ್ರಿ ಇಲ್ಲಿಗೆ ಆಗಮಿಸಿದ್ದಾರೆ ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸದಂತೆ ನಡೆಯುತ್ತಿರುವ ಒತ್ತಡ ಹೇರುವ ತಂತ್ರದ ಮುಂದುವರಿದ ಭಾಗವಾಗಿ ರೇಣುಕಾಚಾರ್ಯ ಅವರು ದೆಹಲಿಗೆ ಆಗಮಿಸಿದ್ದು ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ಹಿನ್ನಲೆಯಲ್ಲಿ ಅವರು ಇಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್…

ಸಣ್ಣ ರೈತರ ಹೆಸರಲ್ಲಿ ನಿರಾಣಿ ೮ಸಾವಿರ ಕೋಟಿರೂ ಸಾಲ ಪಡೆದು ವಂಚನೆ-ಆರೋಪ

ಬೆಂಗಳೂರು.ಜು,೨೦:ಸಣ್ಣ ರೈತರ ಹೆಸರಿನಲ್ಲಿ ೮ಸಾವಿರ ಕೋಟಿ ರೂ ಸಾಲ ಪಡೆದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ವಂಚಿಸಿದ್ದಾರೆ ಎಂದು ದಿ ಹೆಲ್ಪಿಂಗ್ ಸಿಟಿಜನ್ ಆಂಡ್ ಪೀಪಲ್ಸ್ ಕೋರ್ಟ್ ಸಂಸ್ಥಾಪಕ ಆಲಂ ಪಾಷಾ ಗಂಭೀರ ಆರೋಪ ಮಾಡಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು,ಸಚಿವ ನಿರಾಣಿಯವರು ಮುಧೋಳ, ಬೆಳಗಾವಿ, ಬಾಗಲಕೋಟೆ ಭಾಗದ ಸಾವಿರಾರು ಸಣ್ಣ ರೈತರ ಹೆಸರಲ್ಲಿ ಬೆಳೆ ಸಾಲ ಪಡೆದು ವಂಚಿಸಿದ್ದಾರೆ. ಪಡೆದ ಬೆಳೆ ಸಾಲವನ್ನು ನಕಲಿ ಹೆಸರಲ್ಲಿ ಶ್ರೀ ವಿಜಯ…

ಸಿಎಂ ಬದಲಾವಣೆ-ಬೆಜಿಪಿ ವಲಸಿಗಸಚಿವರ ರಹಸ್ಯಸಭೆ

ಬೆಂಗಳೂರು,ಜು,೨೦: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾಗುತ್ತಾರೆ ಎನ್ನುವುದು ಖಾತ್ರಿಯಾಗುತ್ತಿದ್ದಂತೆ ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಬಂದಿದ್ದ ವಲಸಿಗರು ರಹಸ್ಯಸಭೆ ನಡೆಸಿದ್ದಾರೆ ಸಚಿವರಾದ ಡಾ,ಕೆ,ಸುಧಾಕರ್,ಬೈರತಿ ಬಸವರಾಜ್,ಕೆ.ನಾರಾಯಣಗೌಡ,ಬಿ.ಸಿ.ಪಾಟೀಲ್ ಎಸ್.ಟಿ.ಸೋಮಶೇಖರ್ ಮೊದಲಾದವರು ಖಾಸಗಿ ಹೊಟೇಲ್ ಒಂದರಲ್ಲಿ ರಹಸ್ಯ ಸಭೆ ನಡೆಸಿ ಮುಂದಿನ ನಡೆ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ಸರ್ಕಾರ ಹಾಗೂ ಪಕ್ಷದೊಳಗೆ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಗೊತ್ತಾಗಿದೆ. ಒಂದು ವೇಳೆ ವರಿಷ್ಠರ ಸೂಚನೆಯಂತೆ ಯಡಿಯೂರಪ್ಪ ಅವರು ತಮ್ಮ ಸ್ಥಾನಕ್ಕೆ…

ಅಧಿಕಾರ ಹೋದರೆ ಹೋಗಲಿ,ಸಂಘಟನೆ ಕೆಲಸಮಾಡ್ತೀನಿ; ಈಶ್ವರಪ್ಪ ಅಕ್ರೋಶ

ಶಿವಮೊಗ್ಗ,ಜು,19: ಮಂತ್ರಿಸ್ಥಾನ ಹೋದರೆ ಹೋಗಲಿ. ನಾನೇನೂ ಗೂಟ ಹೊಡ್ಕೊಂಡು ಕೂರಲು ಬಂದಿಲ್ಲ. ಅಧಿಕಾರ ಹೋದರೆ ಗೂಟ ಹೋಯ್ತು ಅಂದುಕೊಳ್ತೀನಿ. ಮಂತ್ರಿ ಸ್ಥಾನ ಇಲ್ಲಾಂದರೆ ಸಂಘಟನೆಯ ಕೆಲಸ ಮಾಡ್ತೀನಿ. ಸಂಘಟನೆಯ ಹಿರಿಯರು ವಹಿಸಿಕೊಡುವ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶ ಹೊರಹಾಕಿದರು. ಬಿಜೆಪಿ ರಸಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಡಿಯೋ ಭಹಿರಂಗ ಗೊಂಡ ಬೆನ್ನಲ್ಲೇ ಸುದ್ದಿಗೋಷ್ಟಿ ನಡೆಸಿ ತಮ್ಮ ಅಕ್ರೋಶ ವ್ಯಕ್ತಪಡಿಸಿದರು. ಯಡಿಯೂರಪ್ಪ ಪದಚ್ಯುತರಾಗಲಿದ್ದಾರೆ. ಈಶ್ವರಪ್ಪ, ಶೆಟ್ಟರ್ ಟೀಂ ಹೊರ ಹೋಗುತ್ತಾರೆ. ಮೂವರಲ್ಲಿ ಒಬ್ಬರು ಅಧಿಕಾರ…

೨೬ಕ್ಕೆಬಿಎಸ್‌ವೈ ರಾಜೀನಾಮೆ?

ಬೆಂಗಳೂರು,ಜು,೧೯: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದೇ ೨೬ ಕ್ಕೆ ರಾಜೀನಾಮೆ ಕೊಡುವುದು ಬಹುತೇಕ ಖಚಿತವಾಗಿದೆ. ದೆಹಲಿಯಲ್ಲಿ ಹೈಕಮಾಂಡ್ ಸೂಚನೆಯ ಮೇರೆಗೆ ಈ ನಿರ್ಧಾರಕ್ಕೆ ಬಂದಿದ್ದು ವಲ್ಲದ ಮನಸ್ಸಿನಿಂದಲೇ ಅಂದು ಸಿಂಎಂ ಸ್ಥಾನದಿಂದ ನಿರ್ಗಮಿಸಲಿದ್ದಾರೆ ಎನ್ನುವುದು ಬಿಜೆಪಿಯ ಖಚಿತ ಮೂಲಗಳು ತಿಳಿಸಿವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರ ಆಡಿಯೋ ಬಹಿರಂಗಗೊಡ್ಡಿದ್ದ ಅದರಲ್ಲಿ ನೀಡಿರುವ ಹೇಳಿಕೆಗಳು ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಔತಣಕೂಟ ಏರ್ಪಾಟ್ ಮಾಡಿರುವ ವಿಷಯಗಳು ಈ ನಿರ್ಧಾರವನ್ನು ಖಚಿತಪಡಿಸುತ್ತವೆ. ಅಂದು ಬಿಜೆಪಿ ಶಾಸಕಾಂಗ ಸಭೆ ನಡೆಸಿ…

೨೬ ಕ್ಕೆ ಬಿಜೆಪಿ ಶಾಸಕಾಂಗ ಸಭೆ-ಬಿಎಸ್‌ವೈ

ಬೆಂಗಳೂರು,ಜು,೧೭: ಇದೇ ೨೬ ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶಾಸಕಾಂಗ ಸಭೆ ಕರೆಯುವ ಮೂಲಕ ವಿಶೇಷ ಕುತೂಹಲ ಮೂಡಿಸಿದ್ದಾರೆ. ದೆಹಲಿಯಿಂದ ಬೆಂಗಳೂರಿಗೆ ಬಂದ ನಂತರ ಇಂದು ಸಂಚೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು ತಮ್ಮ ನೇತೃತ್ವದ ಸರ್ಕಾರಕ್ಕೆ ಎರಡು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ೨೬ ರಂದು ಶಾಸಕಾಂಗ ಸಭೆ ಕರೆಯಲಾಗಿದೆ ಎಂದು ತಿಳಿಸಿದ್ದಾರೆ. ‘ನಾಯಕತ್ವ ಬದಲಾವಣೆ ಅಥವಾ ಪರ್ಯಾಯ ನಾಯಕತ್ವದ ಕುರಿತು ನನ್ನ ಜತೆ ಯಾರೂ ಈವರೆಗೆ ಚರ್ಚಿಸಿಲ್ಲ. ನಾನು ಮುಖ್ಯಮಂತ್ರಿಯಾಗಿ ಜುಲೈ ೨೬ಕ್ಕೆ ಎರಡು ವರ್ಷ…

೨೬ ರ ನಂತರ ಬಿಎಸ್‌ವೈ ರಾಜೀನಾಮೆ ನೀಡುತ್ತಾರಾ..?

ನವದೆಹಲಿ,ಜು,೧೭: ಇದೇ ೨೬ ರಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರಕ್ಕೆ ಎರಡು ವರ್ಷ ಪೂರೈಸುತ್ತದೆ ಈ ಸಂಭ್ರಮವನ್ನು ಆಚರಿಸಿಕೊಂಡ ನಂತರ ಅವರು ಪದತ್ಯಾಗ ಮಾಡುತ್ತಾರೆ ಎನ್ನುವುದು ಈಗ ಖಚಿತವಾಗುತ್ತಿವೆ. ಹೌದು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರನ್ನು ಭೇಟಿಯಾದ ಸಂದರ್ಭದಲ್ಲಿ ತಾವು ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ ಹೀಗಾಗಿ ಒಂದು ತಿಂಗಳ ಅವಕಾಸ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. ನಿನ್ನೆ ಯಡಿಯೂರಪ್ಪ ಅವರು ಪ್ರಧಾನಿ ಅವರನ್ನು ಭೇಟಿಯಾಗಿ ರಾಜ್ಯದ ಮಹತ್ವದ ಯೋಜನೆಯಾದ ಮೇಕೆದಾಟು…

ಅಕ್ರಮ ಗಣಿಗಾರಿಕೆ ವಿರುದ್ಧ ಸಿಬಿಐ ತನಿಖೆಗೆ ಸುಮಲತಾ ಒತ್ತಾಯ

ಮೈಸೂರು,ಜು.14: ಕೆಆರ್ ಎಸ್ ಡ್ಯಾಂ ಸುತ್ತಮುತ್ತ ತಲೆ ಎತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ದ ಸಿಬಿಐ ತನಿಖೆ ನಡೆಸುವಂತೆ ಸಂಸದೆ ಸುಮಲತಾ ಅಂಬರೀಶ್ ಒತ್ತಾಯಿಸಿದ್ದಾರೆ. ಮಾಧ್ಯಮಗಳೊಂದಿಗೆ ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಕೆಆರ್‌ಎಸ್ ಬಿರುಕು ಬಿಟ್ಟಿದೆ ಅಂತ ಹೇಳಿಲ್ಲ. ಬಿರುಕು ಬಿಟ್ಟಿದೆಯಾ ಅಂತ ಸಭೆಯಲ್ಲಿ ಕೇಳಿದ್ದೇನೆ ಎಂದು ಕೆಆರ್‌ಎಸ್ ಕಲಹ ವಿಚಾರಕ್ಕೆ ಸುಮಲತಾ ಸ್ಪಷ್ಟನೆ ಕೊಟ್ಟಿದ್ದಾರೆ. ಮುಂದುವರೆದ ಅವರು, ನನಗೆ ಈಗಲೂ ಶೇಕಡ 50ರಷ್ಟು ಆತಂಕ ಇದೆ. ಗಣಿಗಾರಿಕೆಯಿಂದ ಕೆಆರ್‌ಎಸ್ ಬಿರುಕಾಗುತ್ತೆ ಎಂಬ ಆತಂಕ ಇದೆ. ನಾನು ಇದನ್ನೇ…

ಅಕ್ರಮ ಗಣಿಗಾರಿಕೆ ವಿರುದ್ಧ ನನ್ನ ಹೋರಾಟ ನಿಲ್ಲೊಲ್ಲ; ಸುಮಲತಾ

ಬೆಂಗಳೂರು,ಜು,10: ಅಕ್ರಮ ಗಣಿಗಾರಿಕೆ ವಿರುದ್ಧ ನನ್ನ ಹೋರಾಟ ನಿಲ್ಲಲ್ಲ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇನೆ‌ ಎಂದಿರುವ ಸಂಸದೆ ಸುಮಲತಾ ಅವರು,ರವೀಂದ್ರ ಶ್ರೀಕಂಠಯ್ಯ ಹೇಳಿದಂತೆ ನಡೆದುಕೊಳ್ಳಲಾಗಲ್ಲ. ಒಬ್ಬ ಸಂಸದೆಯಾಗಿ ನನ್ನ ಜವಾಬ್ದಾರಿ ನನಗೆ ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ. ಟಿ.ಎ. ಶರವಣ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ಕೇಳಿದಾಗ ಶರವಣ ಯಾರು ಎಂಬುದೇ ನನಗೆ ಗೊತ್ತಿಲ್ಲ. ಹಾಗಾಗಿ ಅವರ ಪ್ರಶ್ನೆಗಳಿಗೆ ಉತ್ತರಿಸುವ ಅಗತ್ಯವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ನಾನು ದಿಶಾ ಸಭೆಯಲ್ಲಿ ಮಾತಾಡಿದ್ದನ್ನೇ ಪ್ರಸ್ತಾಪಿಸಿದ್ದಾರೆ. ಅಕ್ರಮ ಗಣಿಗಾರಿಕೆ ವಿಚಾರವನ್ನು ನಾನು…

ಅಂಬರೀಶ್ ಮುಂದೆ ಹೆಚ್ಡಿಕೆ ಕೈಕಟ್ಟಿ ನಿಂತ ಫೋಟೋ ವೈರಲ್

ರಾಮನಗರ ಜು 09: ಅಂಬರೀಶ್ ಮುಂದೆ ಕುಮಾರಸ್ವಾಮಿ ಕೈಕಟ್ಟಿ ನಿಂತ ಫೋಟೋ ವೈರಲ್ ವಿಚಾರವಾಗಿ ರಾಮನಗರ ಬಿಡದಿಯಲ್ಲಿ ಮಾತನಾಡಿದ ಕುಮಾರಸ್ವಾಮಿ ಮಾಧ್ಯಮಗಳ ವಿರುದ್ಧ ಹರಿಹಾಯ್ದರು. ನಾನು ಸಾರ್ವಜನಿಕರ ಮುಂದೆ ಕೂಡ ಕೈಕಟ್ಟಿ ನಿಲ್ಲೇನೆ. ಅಂಬರೀಶ್ ಗೆ ನಾನೇನು ಗುಲಾಮನಾಗಿದ್ನ ಇಂತಹ ವೈಯಕ್ತಿಕ ವಿಚಾರಗಳ ಬಗ್ಗೆ ಗಮನಕೊಡುವ ಬದಲು ಮಾಧ್ಯಮದ ಮಿತ್ರರು ತೈಲ ಬೆಲೆ ಏರಿಕೆ, ರಾಜ್ಯ ಮತ್ತು ರಾಷ್ಟ್ರದಲ್ಲಿರು ಸಮಸ್ಯೆಗಳ ಬಗ್ಗೆ ಗಮನ ನೀಡುವಂತೆ ಸಲಹೆ ನೀಡಿದರು. ಕೆಲ ವೈಯಕ್ತಿಕ ವಿಷಯಕ್ಕೆ ಮಾಧ್ಯಮದವರು ಹೆಚ್ಚಿನ ಮನ್ನಣೆ ಕೊಡುವ…

ರೋಷನ್ ಬೇಗ್ ಆಸ್ತಿ ಜಪ್ತಿ‌ಮಾಡಿದ ಸರ್ಕಾರ

ಬೆಂಗಳೂರು,ಜು,07:  ಐಎಂಎ ಸಂಸ್ಥಾಪಕ ಹಾಗೂ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್ ಅಲಿಖಾನ್ ನಿಂದ ರೋಷನ್ ಬೇಗ್ ಅಕ್ರಮವಾಗಿ ಹಣ ಪಡೆದಿದ್ದಾರೆ ಎಂಬ ಆರೋಪದಡಿ 2020ರ ನವೆಂಬರ್ 22 ರಂದು ರೋಷನ್ ಬೇಗ್ ಅವರನ್ನು ಸಿಬಿಐ ಬಂಧಿಸಿತ್ತು. ಆ ನಂತರ ಜಾಮೀನು ಪಡೆದು ಹೊರಗೆ ಬಂದಿದ್ದರು. ಪ್ರಮುಖ ಆರೋಪಿ ಮನ್ಸೂರ್​ ಅಲಿಖಾನ್​ನಿಂದ ಅಕ್ರಮವಾಗಿ ಹಣ ಪಡೆದಿದ್ದಾರೆ ಎನ್ನುವುದು ಸಾಬೀತಾದ ನಂತರ ಇವರ ಆಸ್ತಿ ಮುಟ್ಟುಗೋಲಿಗೆ ನ್ಯಾಯಲಯ ಆದೇಶಿಸಿತ್ತು. ಐಎಂಎ ಸಂಸ್ಥೆಯಿಂದ ಬಹುಕೋಟಿ ವಂಚನೆ ಪ್ರಕರಣದಲ್ಲಿ 36ನೇ ಆರೋಪಿಯಾಗಿರುವ ರೋಷನ್…

ಸದಾನಂದಗೌಡ್‌ಗೆ ಕೊಕ್ ಶೋಭಾಗೆ ಅವಕಾಶ?

ಬೆಂಗಳೂರು,ಜು, ೦೭; ಇಂದು ಸಂಜೆ ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು ಕೇಂದ್ರ ಸಚಿವ ಸದಾನಂದಗೌಡ ಅವರಿಗೆ ಕೊಕ್ ನೀಡಿ ಶೋಭಕರಂದ್ಲಾಜೆಗೆ ಅವಕಾಶ ನೀಡುವ ಸಾಧ್ಯತೆಗಳಿವೆ. ಕರ್ನಾಟಕದಿಂದ ಹಲವು ಸಂಸದರು ತಮಗೂ ಸಂಪುಟದಲ್ಲಿ ಸ್ಥಾನ ದೊರೆಯಲಿದೆ ಎಂಬ ವಿಶ್ವಾಸದಲ್ಲಿದ್ದಾರೆ. ಹೀಗಾಗಿ ಪ್ರಧಾನಿ ಕಚೇರಿಯ ಕರೆಗಾಗಿ ಕಾಯುತ್ತಿದ್ದಾರೆ. ಚಿತ್ರದುರ್ಗ ಸಂಸದ ನಾರಾಯಣ ಸ್ವಾಮಿ ಮತ್ತು ರಮೇಶ್ ಜಿಗಜಿಣಗಿ ಈಗಾಗಲೇ ದೆಹಲಿಗೆ ತೆರಳಿದ್ದಾರೆ. ಹಿರಿಯ ಸಂಸದರನ್ನು ಹೊರತುಪಡಿಸಿ, ಪ್ರತಾಪ್ ಸಿಂಹ, ಶೋಭಾ ಕರಂದ್ಲಾಜೆ ಅವರು ಸಂಪುಟಕ್ಕೆ ಸೇರುವ ಸಾಧ್ಯತೆಯಿದೆ. ಆದರೆ ಅವರಿಗೆ…

ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದ ನಿರಾಣಿ ದೆಹಲಿ ಪ್ರಯಾಣ

ಬೆಂಗಳೂರು,ಜು,೦೬:ನಾಯಕತ್ವ ಬದಲಾವಣೆ ಕೂಗು ಹೆಚ್ಚಾದ ಬೆನ್ನಲ್ಲೆ ಹೈಕಮಾಂಡ್ ಗಣಿ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರನ್ನು ಕರೆಸಿಕೊಂಡಿರುವುದು ರಾಜಕೀಯ ವಲಯದಲ್ಲಿ ರೆಕ್ಕೆ ಪುಕ್ಕಗಳು ಹೆಚ್ಚಾಗಿವೆ. ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಈ ಭೇಟಿ ಹಲವು ವ್ಯಾಖ್ಯಾನಗಳಿಗೆ ದಾರಿ ನಿಡಿದಂತಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಲಾವ್ ಮೇರೆಗೆ ಇಂದು ಬೆಳಗಿನ ಜಾವ ಅವರು ದೆಹಲಿಗೆ ತೆರಳಿದ್ದಾರೆ. ಇದು ಈಗ ರಾಜಕೀಯ ನಾಯಕರಲ್ಲಿ ಒಂದು ರೀತಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದರೆ ಮತ್ತೊಂದೆಡೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ…

ಕುತೂಹಲ ಕೆರಳಿಸಿದ ವಿಶ್ವನಾಥ್,ಯತ್ನಾಳ್ ಭೇಟಿ

ಬೆಂಗಳೂರು,ಜು,೦೫:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬದಲಾಗಬೇಕು ಎಂದು ಒತ್ತಾಯಿಸುತ್ತಿರುವ ಇಬ್ಬರು ಬಿಜೆಪಿ ನಾಯಕರಾದ ಎಚ್.ವಿಶ್ವನಾಥ್ ಮತ್ತು ಬಸವರಾಜ್ ಪಾಟೀಲ್ ಯತ್ನಾಳ್ ಅವರು ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಸುಮಾರು ಹೊತ್ತು ಈ ಉಭಯನಾಯಕರು ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದ್ದು ಮುಂದಿನ ಬೆಳವಣಿಗೆಗಳಿಗೆ ಕಾರಣ ಮತ್ತು ತಂತ್ರಗಳ ಕುರಿತು ಚರ್ಚಿಸಿದರು ಎಂದು ಬಲ್ಲ ಮೂಲಗಳು ತಿಳಿಸಿವೆ. ಈ ಇಬ್ಬರ ಭೇಟಿ ಕುತೂಹಲ ಕೆರಳಿಸಿದೆ. ಭೇಟಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಸುತ್ತೂರು ಮಠಕ್ಕೆ ಹೋಗಿದ್ರಾ?…

ಕುತೂಹಲ ಮೂಡಿಸಿದ ಸಿಎಂ, ಎಚ್.ಡಿಕೆ ಭೇಟಿ

ಬೆಂಗಳೂರು,ಜು,05: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದು, ನಾಯಕರಿಬ್ಬರ ಈ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಶಾಸಕರಾದ ಸಿ ಎಸ್ ಪುಟ್ಟರಾಜು, ಶ್ರೀನಿವಾಸ್ ಹಾಗೂ ಮಳವಳ್ಳಿ ಶಾಸಕ ಅನ್ನದಾನಿ ಜೊತೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕುಮಾರಸ್ವಾಮಿಯ ಕೆಲವು ಪ್ರಮುಖ ವಿಚಾರಗಳ ಕುರಿತಾಗಿ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಮಂಡ್ಯ ಮೈಶುಗರ್ ಕಾರ್ಖಾನೆಯನ್ನು ಖಾಸಗಿಯವರಿಗೆ ವಹಿಸದೇ ಸರ್ಕಾರವೇ ಅದನ್ನು ಮುಂದುವರೆಸಬೇಕೆಂದು ಒತ್ತಾಯಿಸಿ ಮಾಜಿ…

ದುಷ್ಟರ ಸಂಹಾರ ಎಂಬುದು ಬಿಎಸ್‌ವೈ ಪತನವಾ?

ದುಷ್ಟರ ಸಂಹಾರ ಆಗಬೇಕು ಅದರಿಂದ ದೇಶ, ರಾಜ್ಯ ಮತ್ತು ಪಕ್ಷಕ್ಕೆ ಒಳ್ಳಯದಾಗುತ್ತದೆ’ ಇದು ಬಿಜೆಪಿ ಹಿರಿಯ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಈ ಹೇಳಿಕೆಗೆ ಹಲವಾರು ಅರ್ಥಗಳು ಇವೆ,ಇನ್ನು ಅವರೇ ಹೇಳುವ ರೀತಿ ಜೈಲಿಗೆ ಹೋಗಿಬಂದ ಯಡಿಯೂರಪ್ಪ ಮತ್ತೇ ಜೈಲಿಗೆ ಹೋಗಬಾರದು ಎಂಬುದು ನಮ್ಮ ಕಾಳಜಿ ಎನ್ನುವ ಮುಂದುವರೆದ ಹೇಳಿಕೆಗಳಿಗೆ ನಾನಾಅರ್ಥಗಳು ಮೂಡುತ್ತವೆ. ಇದು ಹೇಳುವ ಒಂದು ದಿನ ಮುಂಚೆ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಯೋಗೇಶ್ವರ್ ಅವರು ಭೇಟಿ ಮಾಡಿದ್ದು ಕೂಡ ಕುತೂಹಲ ಮೂಡಿಸಿದೆ,…

ಕಾಂಗ್ರೆಸ್ ನಲ್ಲೂ ಲಿಂಗಾಯತ ಸಿಎಂ ಅಭ್ಯರ್ಥಿಗಳಿದ್ದಾರೆ; ಎಂ ಬಿ ಪಾಟೀಲ್

ಮೈಸೂರು,ಜೂನ,27: ತಾವು ಸಿಎಂ ಎಂದು ಹೇಳಿಕೊಂಡರೆ ಸಿಎಂ ಆಗಲೂ ಸಾಧ್ಯವೆ ಅದನ್ನು ನಿರ್ಧಾರ ಮಾಡುವುದು ಹೈಕಮಾಂಡ್ ಎಂದು ಹೇಳಿದ ಮಾಜಿ ಸಚಿವ ಎಂ.ಬಿ.ಪಾಟೀಲ್ ಕಾಂಗ್ರಸ್ ನಲ್ಲೂ ಲಿಂಗಾಯತ ನಾಯಕರು ಸಿಎಂ ಅಬ್ಯರ್ಥಿಗಳಿದ್ದಾರೆ ಎನ್ನುವ ಮೂಲಕ ತಾವು ಸಿಎಂ ಆಕಾಂಕ್ಷಿ ಎನ್ನುವುದನ್ನು ಪರೋಕ್ಷವಾಗಿ ಹೇಳಿದರು. ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಇಂದು ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು. ಎಲ್ಲರು ಸಿಎಂ ಸ್ಥಾನಕ್ಕೆ ಅರ್ಹರಿದ್ದಾರೆ. ಆದರೆ ನಾವೇ ಮುಖ್ಯಮಂತ್ರಿ ಅಂತ ಸೆಲ್ಪ್…

ಜನರ ಆಕ್ರೋಶ ಕಂಡು ಬಿಜೆಪಿಗೆ ಭಯ ; ಡಿ.ಕೆ. ಶಿ

ಚಾಮರಾಜನಗರ,ಜೂ,27:ರಾಜ್ಯ ಸರ್ಕಾರದ ದುರಾಡಳಿತ ಕಂಡು ಜನ ಆಕ್ರೋಶಗೊಂಡಿದ್ದಾರೆ. ಅವರ ಆಕ್ರೋಶಕ್ಕೆ ಹೆದರಿ ಬಿಜೆಪಿ ನಾಯಕರು ಜನರ ಬಳಿಗೆ ಹೋಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಛೇಡಿಸಿದ್ದಾರೆ. ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದೆ ಸತ್ತವರ ಮನೆಗಳಿಗೆ ಭಾನುವಾರ ಭೇಟಿ ನೀಡಿದ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿ.ಕೆ. ಶಿವಕುಮಾರ್,ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಕೇವಲ ಮೂರು ಜನ ಮೃತಪಟ್ಟರು ಎಂದು ಸರ್ಕಾರ ಆರಂಭದಲ್ಲಿ ಹೇಳಿತ್ತು. ನಂತರ ನಾವು ಇಲ್ಲಿಗೆ ಭೇಟಿ ನೀಡಿದಾಗ 28 ಮಂದಿ ಸತ್ತಿದ್ದಾರೆ ಎಂಬುದು ಗೊತ್ತಾಯಿತು.…

1 14 15 16 17 18 20
error: Content is protected !!