ರಾಜಕೀಯ
ನಾಯಕತ್ವ ಬದಲಿಸಲು ದೆಹಲಿ ನಾಯಕರಲ್ಲಿ ಯೋಗೇಶ್ವರ್ ಒತ್ತಡ
ನವದೆಹಲಿ,ಜೂ,27: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಿಸುವಂತೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ದೆಹಲಿ ನಾಯಕರನ್ನು ಬೇಟಿ ಮಾಡಿ ಒತ್ತಡ ಹೇರಿದ್ದಾರೆ. ‘ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದ ಪರೀಕ್ಷೆಯ ಫಲಿತಾಂಶ ಶೀಘ್ರವೇ ಹೊರಬೀಳಲಿದೆ’ ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ಶುಕ್ರವಾರ ತಡರಾತ್ರಿ ದೆಹಲಿಗೆ ದೌಡಾಯಿಸಿದ್ದ ಅವರು ಶನಿವಾರ ಪಕ್ಷದ ಕೆಲವು ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಶನಿವಾರ ಬೆಳಗಿನಜಾವ ಕೆಲವರನ್ನು ಭೇಟಿಯಾಗಿ ನಾಯಕತ್ವ ಬದಲಾವಣೆಗಾಗಿ ಒತ್ತಡ ಹೇರಿದ್ದಾರೆ ಎಂದು ತಿಳಿದುಬಂದಿದೆ. ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ನಡೆಯಲಿರುವ ಸಂಸದೀಯ ಮಂಡಳಿ ಸಭೆಯಲ್ಲಿ ರಾಜ್ಯ…