Browsing: ರಾಜಕೀಯ

ರಾಜಕೀಯ

ನಾಯಕತ್ವ ಬದಲಿಸಲು ದೆಹಲಿ ನಾಯಕರಲ್ಲಿ ಯೋಗೇಶ್ವರ್ ಒತ್ತಡ

ನವದೆಹಲಿ,ಜೂ,27: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬದಲಿಸುವಂತೆ ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ದೆಹಲಿ ನಾಯಕರನ್ನು ಬೇಟಿ ಮಾಡಿ ಒತ್ತಡ ಹೇರಿದ್ದಾರೆ. ‘ಮುಖ್ಯಮಂತ್ರಿ ಬದಲಾವಣೆಗೆ ಸಂಬಂಧಿಸಿದ ಪರೀಕ್ಷೆಯ ಫಲಿತಾಂಶ ಶೀಘ್ರವೇ ಹೊರಬೀಳಲಿದೆ’ ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ಶುಕ್ರವಾರ ತಡರಾತ್ರಿ ದೆಹಲಿಗೆ ದೌಡಾಯಿಸಿದ್ದ ಅವರು ಶನಿವಾರ ಪಕ್ಷದ ಕೆಲವು ಮುಖಂಡರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಶನಿವಾರ ಬೆಳಗಿನಜಾವ ಕೆಲವರನ್ನು ಭೇಟಿಯಾಗಿ ನಾಯಕತ್ವ ಬದಲಾವಣೆಗಾಗಿ ಒತ್ತಡ ಹೇರಿದ್ದಾರೆ ಎಂದು ತಿಳಿದುಬಂದಿದೆ. ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ನಡೆಯಲಿರುವ ಸಂಸದೀಯ ಮಂಡಳಿ ಸಭೆಯಲ್ಲಿ ರಾಜ್ಯ…

ಜಿಲ್ಲಾ ,ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸಿದ್ದರಾಗಲು ಸಿಎಂ ಕರೆ

ಬೆಂಗಳೂರು,ಜೂ,೨೬: ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆಳಿಗೆ ಪಕ್ಷದ ಎಲ್ಲಾ ಕಾರ್ಯಕರ್ತರು ಸಿದ್ದರಾಗಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ. ಬಿಜೆಪಿ ಕಾರ್ಯಕಾರಿಣಿ ಸಭೆ ಉದ್ಟಾಟಿಸಿ ಮಾತನಾಡಿದ ಅವರು,’ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ದಿನಗಳಿಂದಲೂ ಹಲವು ಸವಾಲುಗಳು ಎದುರಾಗಿವೆ. ಎಲ್ಲವನ್ನೂ ದಿಟ್ಟವಾಗಿ ಎದುರಿಸಿ, ಅಭಿವೃದ್ಧಿ ಯೋಜನೆಗಳನ್ನು ಮುನ್ನಡೆಸಲಾಗುತ್ತಿದೆ’ ಎಂದು ಹೇಳಿದರು. ಆರಂಭದಲ್ಲೇ ಪ್ರವಾಹದಿಂದ ತೊಂದರೆ ಆಗಿತ್ತು. ಎರಡು ವರ್ಷಗಳಿಂದ ಕೋವಿಡ್ ಸಂಕಷ್ಟವಿದೆ. ಕೋವಿಡ್ ಮೊದಲ ಮತ್ತು ಎರಡನೇ ಅಲೆಗಳನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸಿದೆ. ಆರ್ಥಿಕ ಸಂಕಷ್ಟದ ನಡುವೆಯೂ…

ಪ್ರಾದೇಶಿಕ ಪಕ್ಷಗಳತ್ತ ಜನರ ಒಲವು-ಕುಮಾರಸ್ವಾಮಿ

ಚನ್ನಪಟ್ಟಣ ,ಜೂ. 26: ರಾಷ್ಟ್ರೀಯ ಪಕ್ಷಗಳ ವಿರುದ್ಧ ಜನರು ಈಗಾಗಲೇ ರೋಸಿ ಹೋಗಿದ್ದಾರೆ, ಇದೇ ಕಾರಣ ರಾಜ್ಯದಲ್ಲಿ ಮಾತ್ರವಲ್ಲದೇ ದೇಶದಲ್ಲಿಯೂ ಕೂಡ ಜನರು ಪ್ರಾದೇಶಿಕ ಪಕ್ಷದ ಕಡೆಗೆ ಒಲವು ತೋರುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನರು ಕಾಂಗ್ರೆಸ್- ಬಿಜೆಪಿ ಆಡಳಿತ ಕಂಡು ಈಗಾಗಲೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ಪಂಚ ರಾಜ್ಯಗಳ ಚುನಾವಣೆಯಲ್ಲೂ ಇದು ಸ್ಪಷ್ಟವಾಗಿದೆ. ಈ ಅಲೆಯನ್ನು ಗಮನಿಸಿದರೆ, ೨೦೨೩ರ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಕ್ಕೆ ಜನರು ಮಣೆ ಹಾಕುವುದು…

ದೆಹಲಿಗೆ ಹಾರಿದ ಯೋಗೇಶ್ವರ್-ಮತ್ತೇ ನಾಯಕತ್ವ ಗೊಂದಲ

ಬೆಂಗಳೂರು,ಜೂ,೨೬: ನಾಯಕತ್ವ ಬದಲಾವಣೆಯ ಪ್ರಶ್ನೆಯೆ ಇಲ್ಲ ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ ಬೆನ್ನಲ್ಲೇ ಬಿಜೆಪಿಯಲ್ಲಿ ಆಂತರ್ಯದಲ್ಲಿ ಹಲವಾರು ಬೆಳವಣಿಗೆಗಳು ತೆರೆಮರೆಯಲ್ಲಿ ನಡೆಯುತ್ತಲೇ ಇವೆ. ಹೌದು ಇದಕ್ಕೆ ಪುಷ್ಟಿ ಕೊಡುವಂತೆ ಮೊನ್ನೆಯಷ್ಟೆ ಸಿಎಂ ಪುತ್ರ ವಿಜಯೇಂದ್ರ ಮತ್ತು ರಾಘವೇಂದ್ರ ದೆಹಲಿಗೆ ದೌಡಾಯಿಸಿದ್ದರು ಈಗ ನಿನ್ನೆ ರಾತ್ರಿ ದಿಡೀರ್ ಸಿ.ಪಿ.ಯೋಗೇಶ್ವರ್ ದೆಹಲಿಗೆ ತೆರಳುವ ಮೂಲಕ ಬಿಜೆಪಿಯ ಆಂತರ್ಯದಲ್ಲಿ ಎದ್ದಿರುವ ಬಿಸಿ ಮತ್ತಷ್ಟು ಹೆಚ್ಚಾಗುವ ಲಕ್ಷಣಗಳು ಗೋಚಿರಿಸುತ್ತಿವೆ. ನಿನ್ನೆಯಷ್ಟೆ ಸಿ.ಪಿ.ಯೋಗೇಶ್ವರ್ ಅವರು ಸಿ.ಎಂ.ನಾಯಕತ್ವ ಕುರಿತಂತೆ ಇದೀಗ ಪರೀಕ್ಷೆ ಬರೆದಿದ್ದೇವೆ…

ರಮೇಶ್‌ಜಾರಕಿಹೊಳಿಗೆ ಬಿಜೆಪಿ ಸಂಸ್ಕೃತಿ ಒಗ್ಗೊತ್ತಿಲ್ಲ-ಬಯ್ಯಾಪುರ

ಕೊಪ್ಪಳ,ಜೂ,೨೬: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಬಿಜೆಪಿ ಸಂಸ್ಕೃತಿ ಒಗ್ಗುತ್ತಿಲ್ಲ ಅಲ್ಲಿಯನ ಗರ್ಭಗುಡಿಯ ಚಟವಟಿಕೆಗಳು ಸರಿಹೊಂದುತ್ತಿಲ್ಲ ಎನ್ನುವುದು ಅವರ ಇತ್ತೀಚಿನ ನಡವಳಿಕೆಗಳಿಂದ ಅರ್ಥವಾಗುತ್ತದೆ ಎಂದು ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಾರಕಿಹೊಳಿ ಇತ್ತೀಚೆಗೆ ಕೆಲವರೊಂದಿಗೆ ಮುಂಬೈಗೆ ಹೋಗಿರುವುದನ್ನು ನೋಡಿದರೆ ಅವರು ಬಿಜೆಪಿ ತೊರೆಯುವ ಸಾಧ್ಯತೆ ಇದೆ. ಅವರೊಂದಿಗೆ ಕೆಲವರು ಕಾಂಗ್ರೆಸ್ ಅಥವಾ ಜೆಡಿಎಸ್‌ಗೆ ಮತ್ತೆ ಸೇರುವ ಸಾಧ್ಯತೆ ಇದೆ. ಒಂದು ವೇಳೆ ಅವರು ವಾಪಸ್ ಬಂದರೆ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ…

ಮತ್ತೇ ಬಿಜೆಪಿಯ ಆಂತರ್ಯದ ನಿಗೂಢತೆ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಸಿಟಿ ರವಿ

ಮೋಡ ಸೂರ್ಯನನ್ನು ಮರೆಮಾಚಿದರೂ ಎಷ್ಟು ಕಾಲ ಎಂದು ಬಿಜೆಪಿಯೊಳಗಿನ ಬೆಳವಣಿಗೆ ಕುರಿತು ಮತ್ತೇ ಒಳಾರ್ಥದ ನಿಗೂಢತೆಯ ಬಗ್ಗೆ ಹೇಳುತ್ತಲೇ ,ನಾನು ನೀಡಿದ ಹೇಳಿಕೆಸದುದ್ದೇಶದಿಂದ ಕೂಡಿರುತ್ತದೆ ಯಾವುದೇ ದುರುದ್ದೇಶವಿಲ್ಲ ಎನ್ನುವ ಮೂಲಕ ಎಲ್ಲರಲ್ಲಿ ಮತ್ತಷ್ಟು ಅಚ್ಚರಿಯನ್ನು ಸಿ ಟಿ ರವಿ ಮೂಡಿಸಿದ್ದಾರೆ. ಬೆಂಗಳೂರು,ಜೂ,೨೧: ಮೋಡ ಸೂರ್ಯನನ್ನು ಮರೆ ಮಾಚಿದರೂ ಎಷ್ಟು ಕಾಲ? ಕೆಲವು ಕಾಲ ಮಾತ್ರ ಸಾಧ್ಯ. ನಾನು ಹೇಳಿದ್ದನ್ನು ಅವರವರು ಹೇಗೆ ಗ್ರಹಿಸುಯತ್ತಾರೋ ಹಾಗೆಯೇ ಅದರ ಅರ್ಥವಾಗುತ್ತದೆ. ಒಳ್ಳೆಯ ದೃಷ್ಟಿಯಿಂದ ಗ್ರಹಿಸಿದರೆ ಒಳ್ಳೆಯದ್ದಾಗುತ್ತದೆ. ಕೆಟ್ಟ ದೃಷ್ಟಿಯಿಂದ…

ಕನ್ನಡಕ್ಕಾಗಿರುವ ಅನ್ಯಾಯವನ್ನು ತಾಕತ್ತಿದ್ದರೆ ಬಿಜೆಪಿ ಸಂಸದರು ಸರಿಪಡಿಸಲು ಎಚ್ ಡಿಕೆ ಸವಾಲು

ಬೆಂಗಳೂರು, ಜೂ.20: ಬಿಜೆಪಿಯು ಮೂಲಭೂತವಾಗಿ ಕನ್ನಡ ವಿರೋಧಿಯಾಗಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ತಾವು ಕನ್ನಡ ವಿರೋಧಿಗಳಲ್ಲ ಎಂದಾದರೆ ಈಗ ಆಗಿರುವ ಪ್ರಮಾದವನ್ನು ಬಿಜೆಪಿ ತಾಕತ್ತಿದ್ದರೆ ಸರಿಪಡಿಸಲಿ ಎಂದು ಸವಾಲು ಹಾಕಿದ್ದಾರೆ. ಭಾಷೆಗಳ ಕಲಿಕಾ ತರಬೇತಿಯಲ್ಲಿ ಕನ್ನಡವನ್ನು ಕಡೆಗಣಿಸಿರುವ ಲೋಕಸಭಾ ಸಚಿವಾಲಯದ ‘ಪಾರ್ಲಿಮೆಂಟರಿ ರಿಸರ್ಚ್ ಆ್ಯಂಡ್ ಟ್ರೈನಿಂಗ್ ಇನ್ಸ್‌ಟಿಟ್ಯೂಟ್ ಫಾರ್ ಡೆಮಾಕ್ರಸಿ’ (ಪ್ರೈಡ್) ಸಂಸ್ಥೆ ಗುಜರಾತಿ, ಬಂಗಾಳಿ, ಮರಾಠಿ, ಒಡಿಯಾ, ತಮಿಳು, ತೆಲುಗಿಗೆ ಆದ್ಯತೆ ನೀಡಿದೆ. ಕನ್ನಡಭಿಮಾನವಿಲ್ಲದ 25 ಮಂದಿಯನ್ನು ಲೋಕಸಭೆಗೆ ಆರಿಸಿ ಕಳಿಸಿದ್ದರ ಫಲವಿದು…

ಚುನಾವಣೆಗೂ ಮುನ್ನವೆ ಕಾಂಗ್ರಸ್ ನಲ್ಲಿ ಸಿಎಂ ಸ್ಥಾನಕ್ಕೆ ಕಿತ್ತಾಟ;ಈಶ್ವರಪ್ಪ ಲೇವಡಿ

ಶಿವಮೊಗ್ಗ,ಜೂ,20:ಕಾಂಗ್ರೆಸ್ ನಲ್ಲಿ ಈಗಲೇ ಸಿಎಂ ಸ್ಥಾನಕ್ಕಾಗಿ ಕಿತ್ತಾಟ ಶುರುವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಗುಂಪಿನ ನಡುವೆ ಕಿತ್ತಾಟ ನಡೆಯುತ್ತಿದೆ. ಮೊದಲು ಚುನಾವಣೆಯಲ್ಲಿ ಗೆದ್ಧು ಶಾಸಕರಾಗಿ ಬರಲಿ. ನಂತರ ಸಿಎಂ ಸ್ಥಾನದ ಬಗ್ಗೆ ಕಾಂಗ್ರೆಸ್ ನವರು ಕಿತ್ತಾಡಲಿ ಎಂದು ಟಾಂಗ್ ನೀಡಿದರು. ಸಿದ್ಧರಾಮಯ್ಯ ಕ್ಷೇತ್ರ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಎಸ್…

ನಾಯಕತ್ವ ಬದಲಾವಣೆ; ಸಿಎಂಗೆ ದೆಹಲಿಗೆ ಬುಲಾವ್

ಬೆಂಗಳೂರು,ಜೂ.19:ಬಿಎಸ್ ವೈ ನಾಯಕತ್ವ ಗೊಂದಲ ಕುರಿತಂತೆ ದಿನಕ್ಕೊಂದು ರೂಪ ಪಡೆಯುತಗತ್ತಿದ್ದು,ಈಗ ಅದು ದೆಹಲಿ ಹೈಕಮಾಂಡ್ ನ ಅಂಗಳಕ್ಕೆ ತಲುಪಿದೆ. ಹೌದು,ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿನ ಲ್ಲಿ  ಇಲ್ಲಿನ ನಾಯಕರ‌ಜೊತೆ ನಡೆಸಿದ ಸಭೆಯಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಹೈಕಮಾಂಡ್ ತಲುಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ದೆಹಲಿಗೆ ಬರುಂತೆ ದೂರವಾಣಿ ಕರೆ ಮಾಡಿ ತಿಳಿದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಮೂರು ವಿಷಯಗಳ ಬಗ್ಗೆ ಅರುಣ್ ಸಿಂಗ್ ವಿಶೇಷ ಗಮನಹರಿಸಿದ್ದು, ಆ ಪೈಕಿ ಮೊದಲನೆಯದು ಯಡಿಯೂರಪ್ಪ…

ನಾಯಕತ್ವ ಬದಲಾವಣೆ ಪ್ರಸ್ತಾಪ ; ಪರೋಕ್ಷ ಒಪ್ಪಿಕೊಂಡ ಈಶ್ವರಪ್ಪ

ದಾವಣಗೆರೆ, ಜೂ, 19:ಬಿಎಸ್ ವೈ ಬದಲಾವಣೆ ಕುರಿತಂತೆ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಜೊತೆ ಮಾತನಾಡಿದ್ದಾರೆ,ಎಂದು ಹೇಳುವ ಮೂಲಕ ಸಿಎಂ ಯಡಿಯೂರಪ್ಪ ವಿರುದ್ಧ ದೂರು ನೀಡಿರುವುದನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಪರೋಕ್ಷವಾಗಿ ಒಪ್ಪಿಕೊಂಡರು. ದಾವಣಗೆರೆಯಲ್ಲಿ ಮಾತನಾಡಿದ ಅವರು, “ನಾಯಕತ್ವ ಬದಲಾವಣೆ ವಿಚಾರ ಮುಗಿದ ಅಧ್ಯಾಯ. ರಾಜಕೀಯ ಪಕ್ಷದಲ್ಲಿ ಸಣ್ಣಪುಟ್ಟ ಸಮಸ್ಯೆ ಇದ್ದೇ ಇರುತ್ತದೆ. ಸಣ್ಣಪುಟ್ಟ ಸಮಸ್ಯೆಗಳ ಬಗ್ಗೆ ಕೂತು ಚರ್ಚಿಸಿದ್ದಾರೆ. ಕುಟುಂಬದ ರೂಪದಲ್ಲಿ ಶಾಸಕರು, ಮಂತ್ರಿಗಳು ಮಾತನಾಡಿದ್ದಾರೆ. ಕೊರೊನಾ ನಿಯಂತ್ರಣ ಬಗ್ಗೆ…

ಹೆಗಡೆ ಉಚ್ಚಾಟನೆ ಬಿಜೆಪಿ ಗೆ ಅಧಿಕಾರ ತಂದು ಕೊಟ್ಟಿತೇ?

ಕಳೆದ ೨೫ ವರ್ಷಗಳ ಹಿಂದೆ ದೇವೇಗೌಡರು ಪ್ರಧಾನಿ ಆದ ಸಂದರ್ಭದಲ್ಲಿ ರಾಮಕೃಷ್ಣ ಹೆಗಡೆ ಅವರನ್ನು ಉಚ್ಚಾಟಿಸಿ ೨೫ ವರ್ಷಗಳು ಸಂದಿವೆ.ಅವರ ಉಚ್ಚಾಟನೆ ಪರಿಣಾಮವಾಗಿ ಹೆಗಡೆ ಎನ್‌ಡಿಎ ಸೇರಿಕೊಳ್ಳುವ ಮೂಲಕ ರಾಜ್ಯದಲ್ಲಿ ಬಿಜೆಪಿ ಅಸ್ತತ್ವಕ್ಕೆ ಬರಲು ಹೇಗೆ ಕಾರಣರಾದರು ಎನ್ನುವುದನ್ನು ಹಿರಿಯ ಪತ್ರಕರ್ತ ಸಿ.ರುದ್ರಪ್ಪ ಅವರು ಇಲ್ಲಿ ಆಗಿನ ರಾಜಕಾರಣದ ಬೆಳವಣಿಗೆ ಕುರಿತು ಚಿತ್ರಿಸಿದ್ದಾರೆ. ಹೆಗಡೆ ಉಚ್ಚಾಟನೆ ಬಿಜೆಪಿ ಗೆ ಅಧಿಕಾರ ತಂದು ಕೊಟ್ಟಿತೇ? ಹಿರಿಯ ರಾಜಕಾರಣಿ ರಾಮಕೃಷ್ಣ ಹೆಗಡೆ ಅವರನ್ನು ಅವರೇ ಕಟ್ಟಿದ ಪಕ್ಷ ಜನತಾ ದಳದಿಂದ…

ಫೋನ್ ಕದ್ದಾಲಿಕೆ ಆರೋಪ: ಸಮಗ್ರ ತನಿಖೆಗೆ ಕೈ ಒತ್ತಾಯ

ಬೆಂಗಳೂರು,ಜೂ,೧೮:ಫೋನ್ ಕದ್ದಾಲಿಕೆಯನ್ನು ಆಡಳಿತ ಪಕ್ಷದ ಶಾಸಕರೇ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಕೂಡಲೇ ತನಿಖೆ ನಡೆಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ. ಈ ಕುರಿತಂತೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ ಆಡಳಿತ ಪಕ್ಷದ ಶಾಸಕರಿಂದಲೇ ಇಂತ ಆರೋಪ ಬಂದಿದೆ ಹೀಗಾಗಿ ಈ ಕುರಿತಂತೆ ಸಮಗ್ರ ತನಿಖೆ ನಡೆಸಬೇಕು,ಅಲ್ಲದೆ ,ರಮೇಶ್ ಜಾರಕಿಹೊಳಿ ಪ್ರಕರಣದಲ್ಲೂ ಫೋನ್ ಕದ್ದಾಲಿಕೆ ಆರೋಪ ಕೇಳಿಬಂದಿತ್ತು ಹಾಗಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದೆ ಈ ಸರ್ಕಾರ ಮಾಡಬೇಕಾದ ಕೆಲಸ ಬಿಟ್ಟು ಮಾಡಬಾರದ್ದೆಲ್ಲವನ್ನೂ ಮಾಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆಫೋನ್ ಕದ್ದಾಲಿಕೆ…

ಭದ್ರಾಮೇಲ್ದಂಡೆ ಯೋಜನೆಯಲ್ಲಿ 20 ಸಾವಿರ ಕೋಟಿ ಅವ್ಯವಹಾರ;ದಾಖಲೆ ಬಿಡಗಡೆ ಮಾಡಿದ ವಿಶ್ವನಾಥ್

ಬೆಂಗಳೂರು,ಜೂ,18: ಕಮಲ ಪಾಳೆಯದಲ್ಲಿ ಅಸಮಾಧಾನದ ರೋಷಾಗ್ನಿಯ ಕಿಡಿ ದಿನ ದಿನಕ್ಕೂ ಬೆಂಕಿಯಾಗಿ ಪರಿಣಮಿಸುತ್ತಿದೆ..ಈ ಹಿನ್ನೆಲೆಯಲ್ಲಿ ಎಚ್.ವಿಶ್ವನಾಥ್ ನೀರಾವರಿ ಇಲಾಖೆಯಲ್ಲಿ 20 ಸಾವಿರ ಕೋಟಿ ಭ್ರಷ್ಟಾಚಾರ ನಡೆದಿದೆ ಎಂದು ಹೊಸಬಾಂಬ್ ಸಿಡಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ದಾಖಲೆ ಬಿಡುಗಡೆ ಮಾಡಿದ ಹೆಚ್.ವಿಶ್ವನಾಥ್, ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಅಕ್ರಮವಾಗಿದೆ ಕಾವೇರಿ ನೀರಾವರಿ ನಿಗಮದಲ್ಲಿ ಅಕ್ರಮ ನಡೆದಿದೆ. 20 ಸಾವಿರ ಕೋಟಿ ಟೆಂಬರ್ ನಲ್ಲಿ ಭಾರಿ ಅಕ್ರಮ ನಡೆದಿದೆ. ಗುತ್ತಿಗೆದಾರರಿಂದ ಕಿಕ್ ಬ್ಯಾಕ್ ಪಡೆಯಲಾಗುತ್ತಿದೆ ಎಂದು ಕಿಡಿಕಾರಿದರು. ಕುಟುಂಬ ರಾಜಕಾರಣ…

ಮುಂದೆ ಏನಾಗುತ್ತದೆ ಎಂದು ಹೇಳಲು ನಾನು ಜೋತಿಷಿಯಲ್ಲ;ಅಶ್ವತ್ಥನಾರಾಯಣ

ಬೆಂಗಳೂರು,ಜೂ,17: ನಮ್ಮ ಪಕ್ಷದಲ್ಲಿ ಯಾರು ಲಕ್ಷ್ಮಣರೇಖೆ ದಾಟಿಲ್ಲ. ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುದನ್ನು ಹೇಳಲು ನಾನು ಜ್ಯೋತಿಷಿ ಅಲ್ಲ. ಈಗ ಯಡಿಯೂರಪ್ಪ ಅವರು ನಮ್ಮ ನಾಯಕರು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ರಾಮನಗರದಲ್ಲಿ ರೋಟರಿ ಬಿಜಿಎಸ್ ಆಸ್ಪತ್ರೆ (ಕೋವಿಡ್‌ಯೇತರ) ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, “ನಮ್ಮ ಪಕ್ಷದ ನಾಯಕತ್ವ ಬದಲಾವಣೆ ಸಂಬಂಧ ನಾನು ಏನನ್ನೂ ಹೇಳುವುದಿಲ್ಲ. ಯಾರಾದರು ಹೇಳಿಕೆಗಳನ್ನು ನೀಡಿದ್ದರೆ ಅವರನ್ನೇ ಕೇಳಿ. ಮುಂದಿನ ದಿನಗಳಲ್ಲಿ ನಾನು ರಾಮನಗರ ಜಿಲ್ಲಾ…

ರಾಜ್ಯ ಬಿಜೆಪಿಯಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದಾರೆ; ಅರುಣ್ ಸಿಂಗ್

ಬೆಂಗಳೂರು,ಜೂ,16: ರಾಜ್ಯ ಬಿಜೆಪಿ ಘಟಕದಲ್ಲಿ ಯಾವ ಸಮಸ್ಯೆಗಳು ಇಲ್ಲ ಎಲ್ಲರೂ ಒಗ್ಗಾಟ್ಟಾಗಿದ್ದಾರೆ ಎಂದಿರುವ ಕರ್ನಾಟ ಉಸ್ತುವಾರಿ ಅರುಣ್ ಸಿಂಗ್ ಬಿ.ಎಸ್ ಯಡಿಯೂರಪ್ಪ ನಾಯಕತ್ವದಲ್ಲಿ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದ್ದಾರೆ. ಮೂರು ದಿನಗಳ ಭೇಟಿಗೆ ರಾಜ್ಯಕ್ಕೆ ಆಗಮಿಸಿರುವ ಅವರು, ಯಡಿಯೂರಪ್ಪನವರನ್ನು ನಾಯಕತ್ವದಿಂದ ಬದಲಾವಣೆ ಮಾಡಲಾಗುತ್ತದೆ ಎಂಬ ಊಹಾಪೋಹಗಳ ಮಧ್ಯೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ್ದಾರೆ. ನಾಯಕತ್ವ ಬದಲಾವಣೆ ವಿಷಯ ಬಗ್ಗೆ ಈಗಾಗಲೇ ಹೇಳಿದ್ದೇನೆ, ಹೀಗಾಗಿ ಯಾವುದೇ ನೇರ ಹೇಳಿಕೆ ನೀಡಲು ಇಚ್ಛಿಸುವುದಿಲ್ಲ ಎಂದಿದ್ದಾರೆ. ಎಲ್ಲಾ ನಮ್ಮ…

ಶೀಘ್ರ ಕೇಂದ್ರ ಸಚಿವ ಸಂಪುಟ ವಿಸ್ತರಣೆ?

ನವದೆಹಲಿ,ಜೂ,೧೫: ಕೇಂದ್ರ ಸಚಿವ ಸಂಪುಟ ಸದ್ಯದಲ್ಲೇ ವಿಸ್ತರಣೆಯಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ .ಹೀಗಾಗಿಯೇ ಮೋದಿ ನಿರಂತರ ಸಭೆಗಳನ್ನು ಮಾಡುತ್ತಿದ್ದಾರೆ ಇದೇ ವೇಳೆ ರಾಜ್ಯ ಬಿಜೆಪಿ ಸಂಸದರು ಕೂಡ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಲಿದ್ದಾರೆ. ಕೇಂದ್ರ ಸಚಿವ ಸಂಪುಟದಲ್ಲಿ ಖಾಲಿ ಇರುವ ಮತ್ತು ಕೆಲವರ ಖಾತೆಗಳನ್ನು ಬದಲಾವನೆ ಮಾಡಲಾಗುತ್ತಿದೆ ಹೀಗಾಗಿ ಯಾರಿಗೆ ಯಾವ ಖಾತೆ ದೊರೆಯುತ್ತದೆ ಎಂಬ ಲೆಕ್ಕಾಚಾರದಲ್ಲಿದ್ದಾರೆ. ಕೇಂದ್ರದ ಕೆಲವು ಸಚಿವರು ರಾಜೀನಾಮೆ, ನಿಧನದಿಂದ ಕೇಂದ್ರದ ಸಚಿವ ಸ್ಥಾನಗಳು ತೆರವಾಗಿವೆ. ರಾಮ್ ವಿಲಾಸ್ ಪಾಸ್ವಾನ್,…

ಅಧಿಕಾರ ದಾಹ ಬಿಟ್ಟು ಕೆಲಸ ಮಾಡಿ-ಎಂ.ಬಿ.ಪಾಟೀಲ್

ಹಾವೇರಿ.ಜೂ,೧೪: ಕೊರೊನಾ ಸೋಂಕಿನಿಂದ ಜನರು ಜೀವ ಕಳೆದುಕೊಳ್ಳುತ್ತಿದ್ದಾರೆ ಇಂತ ಸಮಯದಲ್ಲಿ ಅಧಿಕಾರ ದಾಹಕ್ಕೆ ಕುರ್ಚಿಗಾಗಿ ಕಿತ್ತಾಟ ನಡೆಸುವ ಕೆಲಸ ಬಿಡಿ ಕೆಲಸ ಮಾಡಿ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದಲ್ಲಿ ಒಬ್ಬರಿಗೊಬ್ಬರು ತಾಳ ಮೇಳ ಇಲ್ಲ. ಸಿಎಂ ಬದಲಾವಣೆ ಮಾಡಬೇಕು ಅಂತಾರೆ. ಪರಸ್ಪರ ಸಹಕಾರವಿಲ್ಲ. ಕೊರೊನಾ ಸಂದರ್ಭದಲ್ಲಿ ಜನರ ಜೀವ ಉಳಿಸೋ ಕೆಲಸ ಮಾಡಬೇಕು ಎಂದು ಎಂ.ಬಿ.ಪಾಟೀಲ್ ಅವರು ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಕೋವಿಡ್‌ನಲ್ಲಿ ಸುರೇಶ್ ಅಂಗಡಿಯವರನ್ನ…

ಅರುಣ್ ಸಿಂಗ್ ಮಧ್ಯಪ್ರವೇಶಕ್ಕೆ ಬಿಎಸ್‌ವೈ ಭಿನ್ನರ ವಿರೋಧ

ಬೆಂಗಳೂರು,ಜೂ,೧೪: ಸಿಎಂ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಕುರಿತಂತೆ ಬಿಜೆಪಿ ಪಾಳೆಯದಲ್ಲಿ ದಿನ ದಿನಕ್ಕೆ ಭಿನ್ನ ದ್ವನಿಗಳು ಏಳುತ್ತಿದ್ದು ಆಂತರ್ಯದ ಜ್ವಾಲೆ ಮತ್ತಷ್ಟು ಬಿಗಿಡಾಯಿಸುತ್ತಿದೆ. ಹೌದು ,ಬಿಎಸ್‌ವೈ ಬದಲಾವಣೆ ವಿಚಾರದಲ್ಲಿ ಈಗ ಒಂದು ಟೀಂ ಗಟ್ಟಿ ಧ್ವನಿಎತ್ತಿದ್ದು ಬುಧವಾರ ರಾಜ್ಯಕ್ಕೆ ಆಗಮಿಸಲಿರುವ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಮೊದಲು ಶಾಸಕಾಂಗ ಸಭೆ ಕರೆಯಬೇಕು ಎನ್ನುವ ಒತ್ತಾಯಮಾಡಲಿದ್ದಾರೆ. ಹೆಸರು ಹೇಳಲು ಇಚ್ಚಿಸದ ಬಿಜೆಪಿಯ ಹಿರಿಯ ನಾಯಕರು ಅರುಣ್ ಸಿಂಗ್ ಬರುತ್ತಿರುವುದು ಭಿನ್ನರನ್ನು ಧ್ವನಿಯನ್ನು ಅಡಗಿಸಲು ಅದಕ್ಕೂ ಮೊದಲು…

ಬಿಎಸ್‌ವೈ ಬದಲಾವಣೆಗೆ ಆರದ ಕಿಚ್ಚು:ತೆರೆಮರೆಯಲ್ಲಿ ನಡೆಯುತ್ತಿದೆ ಕಸರತ್ತು!

ಬೆಂಗಳೂರು,ಜೂ.೧೨:ನಾಯಕತ್ವ ಬದಲಾವಣೆ ಕಿಚ್ಚು ಬಿಜೆಪಿಯಲ್ಲಿ ನಿಂತಿಲ್ಲ, ಅದು ಇನ್ನೂ ತೆರೆಮರೆಯಲ್ಲಿ ನಡೆಯುತ್ತಿದೆ,ಶತಾಯಗತಾಯ ಬಿಎಎಸ್‌ವೈ ಅವರನ್ನು ಬದಲಾಯಿಸಲೇ ಬೇಕು ಎಂದು ಒಂದು ವರ್ಗ ಸೆಟೆದು ನಿಂತಿದೆ ಹಾಗಾಗಿ ಈ ಚಟವಟಿಕೆಗಳು ನಿರಂತರವಾಗಿ ನಡೆಯುತ್ತಿವೆ. ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡುವ ಯಾವುದೇ ಚಿಂತನೆ ನಮ್ಮಲಿಲ್ಲ ಎಂದು ಹೇಳಿದ ಮಾರನೇ ದಿನವೇ ಒಂದು ತಂಡ ದೇಯಲಿಯಲ್ಲಿ ಬೀಡು ಬಿಟ್ಟು ಬಿಎಸ್‌ವೈ ಬದಲಾವಣೆಗೆ ಹೈಕಮಾಂಡ್ ಭೇಟಿಗೆ ಸಜ್ಜಾಗಿದೆ. ನಾಯಕತ್ವ ಬದಲಾವಣೆ ಚಟುವಟಿಕೆಗಳಲ್ಲಿ ಪ್ರಮುಖವಾಗಿ ಹೆಸರು ಕೇಳಿ…

ಕಾಂಗ್ರೆಸ್‌ಗೆ ಮೇಜರ್ ಸರ್ಜರಿ ಅಗತ್ಯವಿದೆ-ಮೊಯ್ಲಿ

ನವದೆಹಲಿ,ಜೂ,೧೧: ಜಿತನ್ ಪ್ರಸಾದ್ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ ಸಂದರ್ಭದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಈ ಕುರಿತು ಪ್ರಸ್ತಾಪಿಸಿದ್ದು ನಾಯಕರಿಗೆ ಜವಾಬ್ದಾರಿ ವಹಿಸುವಾಗ ಉನ್ನತ ನಾಯಕತ್ವ ಸೈದ್ದಾಂತಿಕ ಬದ್ದತೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದ್ದಾರೆ. ಜಿತಿನ್ ಪ್ರಸಾದ್ ಎಲ್ಲಕ್ಕಿಂತ ಹೆಚ್ಚಾಗಿ ವೈಯಕ್ತಿಕ ಮಹತ್ವಾಕಾಂಕ್ಷೆ ಇಟ್ಟುಕೊಂಡಿದ್ದಾರೆ ಎಂದು ಆರೋಪಿಸಿದ ಮೊಯ್ಲಿ, ಉತ್ತರ ಪ್ರದೇಶದ ನಾಯಕನ ಸೈದ್ಧಾಂತಿಕ…

error: Content is protected !!