Browsing: ಜಿಲ್ಲೆ

ಜಿಲ್ಲೆ

ತುಮಕೂರಿನಲ್ಲಿ ದಾವಣಗೆರೆ ಪಿಎಸ್‌ಐ ಆತ್ಮಹತ್ಯೆ

ತುಮಕೂರು,ಜು,೦೬-ದಾವಣಗೆರೆ ನಗರದ ಬಡಾವಣೆ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಬಿ ಆರ್.ನಾಗರಾಜಪ್ಪ(೫೮) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಖಾಸಗಿ ಹೊಟೇಲ್‌ನಲ್ಲ ಜರುಗಿದೆ, ಜುಲೈ ೧ರಂದು ಹೋಟೆಲ್‌ನಲ್ಲಿ ಕೊಠಡಿ ಪಡೆದಿದ್ದರು. ಇಂದು ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಹೋಟೆಲ್ ಕೋಣೆಯಿಂದ ವಾಸನೆ ಹೆಚ್ಚಿದ್ದು, ಸಿಬ್ಬಂದಿ ಹೋಗಿ ನೋಡಿದಾಗ ಆತ್ಮಹತ್ಯೆ ವಿಚಾರ ಗೊತ್ತಾಗಿದೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೊಠಡಿಯಲ್ಲಿ ಡೆತ್‌ನೋಟ್ ಸಿಕ್ಕಿದ್ದು, ‘ನನ್ನ ಸಾವಿಗೆ ನಾನೇ ಕಾರಣ’ ಎಂದು…

ವೃತ್ತಿ ಧರ್ಮ ನೆಲಕಚ್ಚಿದರೆ ರಾಜ ಧರ್ಮವನ್ನು ಟೀಕಿಸುವ ಅರ್ಹತೆ ಉಳಿಯುವುದಿಲ್ಲ: ಕೆ.ವಿ.ಪ್ರಭಾಕರ್

ತುಮಕೂರು ಜು 6-ಮಾಧ್ಯಮ ಕ್ಷೇತ್ರ ವೃತ್ತಿ ಧರ್ಮ ಪಾಲಿಸದಿದ್ದರೆ, ರಾಜ ಧರ್ಮ ಪಾಲಿಸಿ ಎಂದು ಅಧಿಕಾರಸ್ಥರಿಗೆ ಹೇಳುವ ನೈತಿಕ ಸ್ಥೈರ್ಯವನ್ನು ಕಳೆದುಕೊಳ್ಳುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಆತಂಕ ವ್ಯಕ್ತಪಡಿಸಿದರು. ರಾಜ್ಯ ಮತ್ತು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ವಾರ್ಷಿಕ ದತ್ತಿ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನಿಸಿ ಮಾತನಾಡಿದರು. ನಾವು ಇಂದು ಪತ್ರಿಕಾ ದಿನಾಚರಣೆ ಆಚರಿಸುತ್ತಿರುವ ಸಂದರ್ಭದಲ್ಲಿ ಸಂಭ್ರಮದ ಬದಲಿಗೆ ಒಂದು ರೀತಿಯ ಅಳುಕು ಕಾಡುತ್ತಿದೆ. “ವೃತ್ತಿ ಧರ್ಮ” ಎನ್ನುವುದು…

ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ: ಡಿ.ಕೆ. ಶಿ

ಬೆಂಗಳೂರು, ಜೂ.27-“ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಂಪೇಗೌಡ ಜಯಂತಿ ಅಂಗವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ ನಾಡಪ್ರಭು ಕೆಂಪೇಗೌಡ ಪ್ರತಿಮೆ, ಬಿಬಿಎಂಪಿ ಕಚೇರಿ ಮುಂಭಾಗದ ಪ್ರತಿಮೆ ಹಾಗೂ ವಿಧಾನಸೌಧ ಆವರಣದಲ್ಲಿರುವ ಪ್ರತಿಮೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪುಷ್ಪನಮನ ಸಲ್ಲಿಸಿ ಮಾತನಾಡಿದರು.…

ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ-ಸಿಎಂ ಸಿದ್ದರಾಮಯ್ಯ

ಬೆಂಗಳೂರು ,ಜೂ,27-ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದಂತಹ ಆಡಳಿತಗಾರ. ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬೆಂಗಳೂರಿನ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ರುವ ನಾಡಪ್ರಭು ಕೆಂಪೇಗೌಡ ರವರ 516 ನೇ ಜಯಂತಿ ಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಕೆಂಪೇಗೌಡರ 516ನೇ ಜಯಂತಿಯನ್ನು ಸರ್ಕಾರ, ಕಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಆಚರಿಸಲಾಗುತ್ತಿದೆ. 2013-18 ರ ಅವಧಿಯಲ್ಲಿ ನಮ್ಮ ಸರ್ಕಾರ ನಿರ್ಮಲಾನಂದ…

ಚಿಲುಮೆ ಪ್ರತಿಷ್ಠಾನದಿಂದ ನಾಡಪ್ರಭು ಜಯಂತ್ಯುತ್ಸವ- ಅದ್ದೂರಿ ಸ್ಮರಣೆ ಸಂಪನ್ಮ

ಬೆಂಗಳೂರು,ಜೂ,27- ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವದ ಅಂಗವಾಗಿ ಚಿಲುಮೆ ರವಿಕುಮಾರ್ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡಿದ್ದ ಮೂರು ದಿನಗಳ ಕಾರ್ಯಕ್ರಮ ಗುರುವಾರ ಸಂಪನ್ನಗೊಂಡಿತು. ಬೆಂಗಳೂರು ನಿರ್ಮಾಣಕ್ಕೆ ಕೆಂಪೇಗೌಡರು ಬುನಾದಿ ಹಾಕಿದ ಸ್ಥಳವಾದ ಅವಿನ್ಯೂ ರಸ್ತೆಯ ದೊಡ್ಡಪೇಟೆ ವೃತ್ತದಲ್ಲಿ ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ, ಕೆಂಪೇಗೌಡರ ವೇಷಭೂಷಣ ಧರಿಸಿ ಕುದುರೆ ಏರಿ ಸೇನೆಯೊಂದಿಗೆ ಆಗಮಿಸುವ ದೃಶ್ಯವನ್ನು ಮರುಸೃಷ್ಟಿಸಲಾಗಿತ್ತು. ನಗರದ ನಿರ್ಮಾಣದ ಬಗ್ಗೆ ಕೆಂಪೇಗೌಡರು ಹೊಂದಿದ್ದ ಪರಿಕಲ್ಪನೆ ಆಧರಿಸಿ ಅಭಿನಯ ಪ್ರಸ್ತುತ ಪಡಿಸಲಾಯಿತು.. ಡೊಳ್ಳು ಕುಣಿತ, ನಗಾರಿ ವಿದ್ಯಾ, ತಾಳ ಅರೇವಾದ್ಯ,…

ದಾಸೋಹ ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗ- ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಚಿತ್ರದುರ್ಗ, ಜೂ,26-ಕಾಯಕವೇ ಕೈಲಾಸ ದಾಸೋಹವೇ ದೇವಧಾಮ. ಅನ್ನ ದಾಸೋಹವು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾ *ಪ್ರಕಟಣೆ ಕೃಪೆಗಾಗಿ* ಕಾಯಕವೇ ಕೈಲಾಸ ದಾಸೋಹವೇ ದೇವಧಾಮ. ಅನ್ನ ದಾಸೋಹವು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಅನ್ನದಾನವು ಕೇವಲ ಆಹಾರವನ್ನು ದಾನ ಮಾಡುವುದಲ್ಲ, ಅದು ಕರುಣೆ, ಸಹಾನುಭೂತಿ ಮತ್ತು ಸಮಾಜ ಸೇವೆಯ ಸಂಕೇತವಾಗಿದೆ. ಎಂದು ಭೋವಿಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಹೇಳಿದರು. ಭಾರತೀಯ ರೈಲ್ವೆ ಬೋರ್ಡಿನ ಮಾಜಿ ಸದಸ್ಯರಾದ ಡಾ.ಕೆ.ವಿ ಸಿದ್ಧರಾಜು ಕುಟುಂಬದಿಂದ ನಗರದ ಹೊರವಲಯದಲ್ಲಿರುವ ಎಸ್ ಜೆ…

ಆಧುನಿಕ ಕರ್ನಾಟಕ ನಿರ್ಮಾಣಕ್ಕೆ ವೀರಶೈವ ಲಿಂಗಾಯತರ ಕೊಡುಗೆ ಅಪಾರ:ಖಂಡ್ರೆ

ಬೆಂಗಳೂರು, ಜೂ.22- ಆಧುನಿಕ ಕರ್ನಾಟಕ, ಆ ಮೂಲಕ ಆಧುನಿಕ ಭಾರತ ನಿರ್ಮಾಣಕ್ಕೆ ವೀರಶೈವ ಲಿಂಗಾಯತ ಸಮುದಾಯದ ಕೊಡುಗೆ ಅಪಾರವಾದ್ದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿಂದು ಕರ್ನಾಟಕ ವೀರಶೈವ ಲಿಂಗಾಯಿತ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎಲ್ಲ ಜಾತಿ, ಧರ್ಮದವರಿಗೂ ಆಶ್ರಯ, ಅನ್ನ, ಅಕ್ಷರದ ಜೊತೆಗೆ ಉತ್ತಮ ಸಂಸ್ಕಾರ ನೀಡಿ ಸಮಾಜದ ಮುಖ್ಯವಾಹಿನಿಗೆ ತಂದ ಕೀರ್ತಿ ವೀರಶೈವ ಲಿಂಗಾಯತ ಮಠ ಮಾನ್ಯಗಳಿಗೆ ಸಲ್ಲುತ್ತದೆ…

ಐಪಿಎಲ್‌ಸಂಭ್ರಮಾಚರಣೆದುರಂತ-ಮ್ಯಾಜಿಸ್ಟೀರಯಲ್ ತನಿಖೆ ಆರಂಭ

ಬೆಂಗಳೂರು,ಜೂ,೦೫-೧೮ ವರ್ಷಗಳ ನಂತರ ಐಪಿಲ್ ಟ್ರೋಪಿ ಎತಿಹಿಡಿದ ರಾಯಲ್ ಚಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಕಾಲ್ತುಳಿತ ಸಂಭವಿಸಿ ಹನ್ನೊಂದುಜನಸಾವಿಗೆ ಕಾರಣವಾದ ಪ್ರಕರಣೀಗ ಸರ್ಕಾರ ಮ್ಯಾಜಿಸ್ಟೀರಿಯಲ್‌ತನಿಖೆಗೆಆದೇಶಿಸಿದೆ. ಕಾಲ್ತುಳಿತದ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಯ ನೇತೃತ್ವ ವಹಿಸಿಕೊಂಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಅವರು ಗುರುವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ), ರಾಯಲ್ ಚಾಲೆಂಜರ್ಸ್ ಬೆಂಗಳೂರು(ಖಅಃ) ಮತ್ತು ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವುದಾಗಿ ತಿಳಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ…

ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಹೆಚ್ಚು: ಡಿ.ಕೆ. ಶಿವಕುಮಾರ್

ಬೆಂಗಳೂರು, ಜೂ.01-“ಬೆಂಗಳೂರಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರಗಳ ಕೊಡುಗೆಯೇ ಹೆಚ್ಚು. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ 1 ಲಕ್ಷ ಕೋಟಿ ಮೊತ್ತದ ದೊಡ್ಡ ಯೋಜನೆಗಳನ್ನು ಹಮ್ಮಿಕೊಂಡಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಕಳೆದ 20 ವರ್ಷಗಳಲ್ಲಿ ಬೆಂಗಳೂರು ಜನತೆ 70 ಲಕ್ಷದಿಂದ 1.50 ಕೋಟಿಗೆ ಏರಿಕೆಯಾಗಿದೆ. ಹೀಗಾಗಿ ಬೆಂಗಳೂರಿನ ಅಭಿವೃದ್ಧಿಗೆ ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ…

ಸಂವಿಧಾನ ಕಾರ್ಯಾಗಾರದಲ್ಲಿ ನರೇನಹಳ್ಳಿ ಅರುಣ್ ಕುಮಾರ್ ಗೆ ಸನ್ಮಾನ

ಚಿತ್ರದುರ್ಗ, ಜೂ,01-ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ,ಸಮಾಜ ಕಲ್ಯಾಣ ಇಲಾಖವತಿಯಿಂದ ಭಾಯಾಗಡ್,ಸೂರಗೊಂಡನಕೊಪ್ಪದಲ್ಲಿ ಹಮ್ಮಿಕೊಳ್ಳಲಾಗಿದ್ದ.ಕೌಶಲ್ಯ ತರಬೇತಿ ಮತ್ತು ಸಂವಿಧಾನ ಕುರಿತು ತರಬೇತಿ ಕಾರ್ಯಾಗಾರದಲ್ಲಿ ಸಂತ ಸೇವಾಲಾಲ್ ಜನ್ಮ ಸ್ಥಾನ ಮಹಾಮಠ ಸಮಿತಿಯ ಪ್ರಧಾನ ಕಾರ್ಯದರ್ಶಿ ನರೇನಹಳ್ಳಿ ಅರುಣ್ ಕುಮಾರ್ ರವರಿಗೆ ಸನ್ಮಾನಿಸಿ ಗೌರವಿಸಿದರು. ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಲಹೆಗಾರರಾದ ಇ.ವೆಂಕಟಯ್ಯ ನವರು,ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್.ಜಯದೇವ ನಾಯಕ್,ಮಠದ ಧರ್ಮದರ್ಶಿ ಪರಿಷತ್ ಅಧ್ಯಕ್ಷರಾದ ಬಿ.ಹೀರಾನಾಯಕ್,ಭೋಜ್ಯಾನಾಯ್ಕ,ಮಹಾಮಠ ನಿರ್ವಹಣಾ ಸಮಿತಿ ಅಧ್ಯಕ್ಷರಾದ ಹನುಮಂತನಾಯ್ಕ,ಹಿರಿಯ ನಿರ್ದೇಶಕರಾದ ರಾಘವೇಂದ್ರ ನಾಯ್ಕ,ನಿಗಮದ ವ್ಯವಸ್ಥಾಪಕ…

ಕನ್ಮಡ ವಿರೋಧಿ ಹೇಳಿಕೆ ನೀಡಿದ ನಟ ಕಮಲ ಹಾಸನ್ ವಿರುದ್ಧ ಪ್ರತಿಭಟನೆ

ಶಿವಮೊಗ್ಗ, ಮೇ,30-ತಮಿಳಿನಿಂದ ಕನ್ನಡ ಹುಟ್ಟಿದೆ ಎಂದು ನಟ ಕಮಲಹಾಸನ್ ಹೇಳಿಕೆಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಕಮಲಹಾಸನ್ ಪ್ರತಿ ಕೃತಿ ದಹಿಸಿ ಪ್ರತಿಭಟನೆ ನಗರದ ಬಸ್ ನಿಲ್ದಾಣದ ಅಶೋಕ ವೃತ್ತದ ಬಳಿ ಪ್ರತಭಟನೆ ನಡೆಸಲಾಯಿತು. ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಹೆಚ್ಎಸ್ ಅವರ ನೇತೃತ್ವದಲ್ಲಿ ನಡೆಸ ಈ ಪ್ರತಿಭಟನೆ  ವೇಳೆ ಕಮಲಹಾಸನ್ ರವರ ಫೋಟೋವನ್ನು ಸುಡುವ ಮೂಲಕ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ಮಾತನಾಡಿ…

ರಾಷ್ಟೀಯ ಹೆದ್ದಾರಿ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ: ಸಚಿವ ಎನ್. ಚಲುವರಾಯಸ್ವಾಮಿ

ಬೆಂಗಳೂರು ಮೇ 30-ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಬೇಗ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯವರು ಸೂಚಿಸಿದರು. ವಿಕಾಸಸೌಧ ಕಚೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ತ್ವರಿತವಾಗಿ ಮುಕ್ತಾಯ ಗೊಳಿಸುವಂತೆ ತಿಳಿಸಿದರು. ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಬೆಳ್ಳೂರು ಕ್ರಾಸ್, ನಾಗಮಂಗಲ, ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ನಡೆಯಬೇಕಿರುವ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸಚಿವರು…

ಬೆಂಗಳೂರಿನ ಜನರಿಗೆ ಬಳಕೆದಾರರ ಶುಲ್ಕ ವಿಧಿಸುವ ನಿರ್ಧಾರವನ್ನು ಹಿಂಪಡೆಯ ಲುಅಶೋಕ ಆಗ್ರಹ*

ಬೆಂಗಳೂರು, ಮೇ 28-ಬೆಂಗಳೂರಿನ ಜನರ ಮೇಲೆ ಕಸದ ಸೆಸ್‌ ಜೊತೆಗೆ, ಬಳಕೆದಾರರ ಶುಲ್ಕ ವಿಧಿಸಲಾಗಿದೆ. ಈ ನಿರ್ಧಾರವನ್ನು ಸರ್ಕಾರ ಹಿಂಪಡೆದು ಹಿಂದಿನಂತೆಯೇ ಚದರ ಅಡಿಗೆ ತಕ್ಕಂತೆ ಶುಲ್ಕ ವಿಧಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಬಿಬಿಎಂಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನ ಜನರ ಮೇಲೆ ಕಾಂಗ್ರೆಸ್‌ ಸರಕಾರ ಟನ್ನುಗಟ್ಟಲೆ ತೆರಿಗೆಯ ಭಾರವನ್ನು ಹೇರಿದೆ. ಈಗ ಕಸದಿಂದ ರಸ ತೆಗೆಯುವ ಸ್ಕೀಮ್‌ ಮಾಡಿದ್ದಾರೆ. ಇಡೀ ದೇಶದಲ್ಲಿ ಅತಿ ಹೆಚ್ಚು ಕಸದ ತೆರಿಗೆಯನ್ನು ಕಾಂಗ್ರೆಸ್‌ ವಿಧಿಸಿದೆ. ಕೆಂಪೇಗೌಡರು ನಾಡು…

ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು; ವ್ಯಕ್ತಿತ್ವದಿಂದ ಅಳೆಯಬೇಕು: ಸಿಎಂ

ಬೆಂಗಳೂರು ಮೇ 27- ತಿಪ್ಪೇಸ್ವಾಮಿಯವರು ಜನಪರ ವಿಚಾರಗಳಲ್ಲಿ ಮುಲಾಜು ನೋಡದೆ ಮಾತನಾಡುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮರಿಸಿದರು. ಬೀ ಕಲ್ಚರ್ ಸಂಸ್ಥೆ ಕೊಂಡಜ್ಜಿ ಸಭಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಬಿ.ಎಂ.ತಿಪ್ಪೇಸ್ವಾಮಿ ಅವರ “ಮುಟ್ಟಿಸಿಕೊಂಡವರು” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸತ್ಯವನ್ನು ಅತ್ಯಂತ ನಿಷ್ಠುರವಾಗಿ ಹೇಳುತ್ತಿದ್ದರು. ಈ ಕಾರಣಕ್ಕಾಗಿ ಅವರು ಹಲವು ಬಾರಿ ಸತ್ಯ ಹೇಳಿ ಸಮಸ್ಯೆಗೆ ಸಿಕ್ಕಿಕೊಂಡರು ಎಂದು ಹಳೆಯ ಘಟನೆಗಳನ್ನು ನೆನಪಿಸಿಕೊಂಡರು. ಡಾ.ತಿಪ್ಪೇಸ್ವಾಮಿಯವರ ಜೊತೆ ನಾನೂ 1985 ರಿಂದ ಶಾಸಕನಾಗಿದ್ದೆ. ಸಚಿವರಾಗುವ ಎಲ್ಲಾ ಅರ್ಹತೆಗಳಿದ್ದರೂ…

ನನ್ನ ಕೊನೆ ಉಸಿರಿರುವವರೆಗೂ ಬರೆಯುತ್ತೇನೆ; ಡಾ.ಬಿ.ಎಲ್.ವೇಣು

ಚಿತ್ರದುರ್ಗ,ಮೇ,27- ನನ್ನ ಬರಹ ಪ್ರಕಟಗೊಳ್ಳುತ್ತಿಲ್ಲ, ಎಲ್ಲಿಯೂ ಕಾಣುತ್ತಿಲ್ಲವೆಂದರೇ ನನ್ನ ಉಸಿರು ನಿಂತಿದೆ ಎಂದೇ ಜನ ಭಾವಿಸಿಕೊಳ್ಳಬೇಕು ಎಂದು ಸಾಹಿತಿ ಬಿ.ಎಲ್.ವೇಣು ಹೇಳಿದರು. ಕನ್ನಡ ಸಾಹಿತ್ಯ ಪರಿಷತ್ ಸೇರಿಕಸಾಪ ವತಿಯಿಂದ ಮಂಗಳವಾರ ಆಯೋಜಿಸಿದ್ದ ತಮ್ಮ 80ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಬರವಣಿಗೆ ನನ್ನ ಜೀವಾಳ, ನಾನು ಬರೆಯುತ್ತಿದ್ದರೆ ನಾನು ಚನ್ನಾಗಿ ಇರುತ್ತೇನೆ, ಇಲ್ಲವಾದರೆ ಅನಾರೋಗ್ಯದಿಂದ ಬಳಲುತ್ತೇನೆ ಎಂದರು. ಜನತೆ ನನ್ನನ್ನು ಬಹಳಷ್ಟು ಪ್ರೀತಿಯಿಂದ ಕಾಣುತ್ತಾರೆ. ಸಾಹಿತ್ಯ ಸಮ್ಮೇಳನದಲ್ಲಿ ನನ್ನನು ಅಧ್ಯಕ್ಷನನ್ನಾಗಿಸಿದ್ದಾರೆ. ಆದರೆ, ನಾನು ಸಾಸಿವೆ ಕಾಳಿನಷ್ಟು…

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ.ಪ. ಪಂ ಸಿಬ್ಬಂದಿ ಹಾಗೂ ಪೌರಕಾರ್ಮಿಕರಿಂದ ಅನರ್ದಿಷ್ಟ ಧರಣಿ ಸತ್ಯಾಗ್ರ

ನಾಯಕನಹಟ್ಟಿ ,ಮೇ,27- ಪಟ್ಟಣ ಪಂಚಾಯಿತಿ ಕಚೇರಿ ಮುಂಭಾಗದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪಟ್ಟಣ ಪಂಚಾಯತಿ ಸಿಬ್ಬಂದಿ ಹಾಗೂ ಪೌರಕಾರ್ಮಿಕರು ಅನರ್ದಿಷ್ಟ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಬಿಲ್ ಕಲೆಕ್ಟರ್ ಸಂದೀಪ್ ಮಾತನಾಡಿ ಪಟ್ಟಣ ಪಂಚಾಯತಿ ಸಿಬ್ಬಂದಿ ಹಾಗೂ ಪೌರಕಾರ್ಮಿಕರಿಗೆ ಓ ಪಿ ಎಸ್ ಜಾರಿಗೊಳಿಸಬೇಕು. ಅರೆ ಸರ್ಕಾರಿ ನೌಕರರನ್ನು ಸರ್ಕಾರಿ ನೌಕರರಾಗಿ ಪರಿಗಣಿಸಬೇಕು, ಸರ್ಕಾರದಿಂದ ಸಿಗುವ ಸೌಲಭ್ಯಗಳಾದ ಕೆ ಜೆ ಡಿ, ವಿಮಾ ಸೌಲಭ್ಯ ಸೇರಿದಂತೆ ಸರ್ಕಾರಿ ನೌಕರರಿಗೆ ಸಿಗುವ ಎಲ್ಲಾ ಸೌಲಭ್ಯಗಳು ನಮಗೆ ದೊರೆಯುವಂತಾಗಬೇಕು.…

ಕನ್ನಡ ಅಂತಃಸತ್ವದ ಅನಾವರಣಕ್ಕೆಗಮಕ ಕಲೆ ಸಹಕಾರಿ

ಚಿತ್ರದುರ್ಗ,ಮೇ, 26–ಚಿತ್ರದುರ್ಗದ ಗಮಕ ಕಲಾಭಿಮಾನಿಗಳ ಸಂಘವು ಎಷ್ಟೇ ಅಡೆ ತಡೆಗಳು ಬಂದರೂ ಕಷ್ಟ ಕಾರ್ಪಣ್ಯಗಳು ಉಂಟಾದರೂ ನಿರಂತರವಾಗಿ ಗಮಕ ಕಲೆಯ ಪ್ರಚಾರ ಹಾಗೂ ಪ್ರಸಾರಕ್ಕಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಸ್ಥಳೀಯ ಬಾಪೂಜಿ ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿಗಳು ಹಾಗೂ ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷಕೆ.ಎಂ. ವೀರೇಶ್ ಅವರು ಅಭಿಪ್ರಾಯಪಟ್ಟರು. ಅವರು ಇಲ್ಲಿನ ಗಮಕ ಕಲಾಭಿಮಾನಿಗಳ ಸಂಘವು ಜೆ ಸಿ ಆರ್ ಗಣಪತಿ ದೇವಾಲಯದಲ್ಲಿ ಏರ್ಪಡಿಸಿದ್ದ ಸಂಘದ ನಲವತ್ತನೇ ವಾರ್ಷಿಕೋತ್ಸವದ ನೆನಪಿಗಾಗಿ  22ನೇ ಮಾಸಿಕ ಗಮಕ ವಾಚನ ವ್ಯಾಖ್ಯಾನದಲ್ಲಿ…

ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ವೀರಶೈವ ಲಿಂಗಾಯತ ಸಮಾಜ: ಲಕ್ಷ್ಮೀ ಹೆಬ್ಬಾಳಕರ್

* *ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ಚಿಕ್ಕಮಗಳೂರು,ಮೇ,24-ದಯೆಯೇ ಧರ್ಮದ ಮೂಲ ಎಂದು ಸಾರಿದವರು ವೀರಶೈವ- ಲಿಂಗಾಯತರು , ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ನಮ್ಮದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಚಿಕ್ಕಮಗಳೂರಿನ ಶ್ರೀ ವೀರಶೈವ ಲಿಂಗಾಯತ ಸಮುದಾಯ ಭವನದಲ್ಲಿ ಶನಿವಾರ ನಡೆದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ವಿಶ್ವ ಗುರು ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಸಮಾಜದ ಮಗಳಾಗಿ ಕಾರ್ಯಕ್ರಮಕ್ಕೆ ಬಂದಿರುವೆ. ಬೇರೆ…

ರಾಜಕಾಲುವೆ ಒತ್ತುವರಿ ಮುಲಾಜಿಲ್ಲದೆ ತೆರವುಗೊಳಿಸಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು,ಮೇ,21-ನಗರದಲ್ಲಿ ರಾಜಕಾಲುವೆ ಒತ್ತುವರಿಯನ್ನು ಎಷ್ಟೇ ಪ್ರಭಾವಿಗಳು ಮಾಡಿದ್ದರೂ, ಅದನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬೆಂಗಳೂರಿನಲ್ಲಿ ನೆರೆ ನೀರು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ರಾಜಕಾಲುವೆ ಅಭಿವೃದ್ದಿಯಂತಹ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಯೋಜನೆಗಳನ್ನು ರೂಪಿಸಿ ಕಾಮಗಾರಿಗಳನ್ನು ಕೈಗೊಂಡಿದ್ದೇವೆ. ರಾಜಕಾಲುವೆ ಸುಮಾರು 860 ಕಿಮೀ ಇದೆ. 491 ಕಿಮೀ…

ಬೆಂಗಳೂರು ಮಳೆ ಅವಾಂತರ ಪ್ರದೇಶದಲ್ಲಿ ಪರಿಹಾರ ಕಾರ್ಯನಡೆಯುತ್ತಿದೆ- ಡಿ.ಕೆ.ಶಿವಕುಮಾರ್

ಬೆಂಗಳೂರು, ಮೇ,19-ನಗರದಲ್ಲಿ ಸುರಿದಿರುವ ಮಳೆಯಿಂದ ಸಾಕಷ್ಟು ಅವಾಂತರಗಳು ಸಂಬಂಧಿಸಿದಂತೆ ಕಾಳಜಿ ವಹಿಸಿದ್ದು ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದು ಮಳೆ ಅವಾಂತರದ ಪ್ರದೇಶದಲ್ಲಿ ಪರಿಹಾರ ಕಾರ್ಯ ನಡೆಯುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಳೆ ಅವಾಂತರವಾಗಿದ್ದರೂ, ಸಾಧನಾ ಸಮಾವೇಶಕ್ಕಾಗಿ ಹೊಸಪೇಟೆಗೆ ತೆರಳಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆ ಎಕ್ಸ್ ಪೋಸ್ಟ್ ಮಾಡಿರುವ ಅವರು, ಬೆಂಗಳೂರಿನಲ್ಲಿ ನಿರಂತರ ಮಳೆಯಿಂದ ಸಂಭವಿಸಿರುವ ಅವಾಂತರದ ಬಗ್ಗೆ ಸಂಬಂಧಿತ ಅಧಿಕಾರಗಳ ಜೊತೆ ಸಂಪರ್ಕದಲ್ಲಿದ್ದೇನೆ. ನಿಕಟ ನಿಗಾ ವಹಿಸಿದ್ದೇನೆ…

1 2 3 17
error: Content is protected !!