ಜಿಲ್ಲೆ
ಬೆಂಗಳೂರು ಮಳೆ ಅವಾಂತರ ಪ್ರದೇಶದಲ್ಲಿ ಪರಿಹಾರ ಕಾರ್ಯನಡೆಯುತ್ತಿದೆ- ಡಿ.ಕೆ.ಶಿವಕುಮಾರ್
ಬೆಂಗಳೂರು, ಮೇ,19-ನಗರದಲ್ಲಿ ಸುರಿದಿರುವ ಮಳೆಯಿಂದ ಸಾಕಷ್ಟು ಅವಾಂತರಗಳು ಸಂಬಂಧಿಸಿದಂತೆ ಕಾಳಜಿ ವಹಿಸಿದ್ದು ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದು ಮಳೆ ಅವಾಂತರದ ಪ್ರದೇಶದಲ್ಲಿ ಪರಿಹಾರ ಕಾರ್ಯ ನಡೆಯುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಳೆ ಅವಾಂತರವಾಗಿದ್ದರೂ, ಸಾಧನಾ ಸಮಾವೇಶಕ್ಕಾಗಿ ಹೊಸಪೇಟೆಗೆ ತೆರಳಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆ ಎಕ್ಸ್ ಪೋಸ್ಟ್ ಮಾಡಿರುವ ಅವರು, ಬೆಂಗಳೂರಿನಲ್ಲಿ ನಿರಂತರ ಮಳೆಯಿಂದ ಸಂಭವಿಸಿರುವ ಅವಾಂತರದ ಬಗ್ಗೆ ಸಂಬಂಧಿತ ಅಧಿಕಾರಗಳ ಜೊತೆ ಸಂಪರ್ಕದಲ್ಲಿದ್ದೇನೆ. ನಿಕಟ ನಿಗಾ ವಹಿಸಿದ್ದೇನೆ…