Browsing: ರಾಜ್ಯ

ರಾಜ್ಯ

ಮೂರು ತಿಂಗಳಲ್ಲಿ ಬ್ಯಾಕ್ ಲಾಗ್ ಹುದ್ದೆಗೆ ಭರ್ತಿಗೆ ಕ್ರಮ: ಗೋವಿಂದ ಕಾರಜೋಳ

ಬೆಂಗಳೂರು,ಜ,29:ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ನಿಗಮ ಮಂಡಳಿಗಳು ಮತ್ತು ವಿಶ್ವವಿದ್ಯಾಲಯಗಳು ಹಾಗೂ ಶಾಸನಬದ್ದ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಮುಂದಿನ ಒಂದು ವಾರದಲ್ಲಿ ಅಧಿಸೂಚನೆ ಹೊರಡಿಸಿ ಮೂರು ತಿಂಗಳಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ ಉಸ್ತುವಾರಿಗಾಗಿ ನೇಮಕ ಗೊಂಡಿರುವ ಉಪಸಮಿತಿ ಇಂದು ಸಭೆ ಸೇರಿ ನಿರ್ದೇಶನ ನೀಡಿತು. ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷರಾಗಿರುವ ಈ ಸಮಿತಿಯಲ್ಲಿ ರಾಜ್ಯ ಸಚಿವ ಸಂಪುಟದ ಆರು ಸದಸ್ಯರಿದ್ದಾರೆ.…

ಫುಡ್ ಪಾರ್ಕ್ ಯಶಸ್ವಿಗೊಳಿಸಲು ಪರಿಣಾಮ ಮೌಲ್ಯಮಾಪನ : ಸಿಎಂ ಸೂಚನೆ

ಬೆಂಗಳೂರು, ಜ, 29 : ರಾಜ್ಯ ಸರ್ಕಾರ ಪ್ರಾಯೋಜಿತ ನಾಲ್ಕು ಆಹಾರ ಪಾರ್ಕ್ ಗಳನ್ನು ಯಶಸ್ವಿಗೊಳಿಸಲು ‘ಪರಿಣಾಮ ಮೌಲ್ಯಮಾಪನ’ ( impact assessment) ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು. ಆಹಾರ ಕರ್ನಾಟಕ ನಿಯಮಿತದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಇಂದು ಮಾತನಾಡುತ್ತಿದ್ದರು.ಬಾಗಲಕೋಟೆ, ಹಿರಿಯೂರು, ಮಾಲೂರು ಮತ್ತು ಜೇವರ್ಗಿಯಲ್ಲಿರುವ ಫುಡ್ ಪಾರ್ಕ್ ಗಳಿಗೆ ಸಂಬಂಧಿಸಿದಂತೆ ಭೂಮಿ, ಈಕ್ವಿಟಿ, ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಬೇಕು. ಆಹಾರ ಕರ್ನಾಟಕ ನಿಯಮಿತ ಫುಡ್ ಪಾರ್ಕ್ ಗಳನ್ನು ಆರಂಭಿಸಲು ಕೋರಿರುವ 26 ಕೋಟಿ…

6 ತಿಂಗಳ ಸಾಧನೆ ಕುರಿತ ಪುಸ್ತಕ ಬಿಡುಗಡೆ

ಬೆಂಗಳೂರು,ಜ,28:  ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇಂದು 6 ತಿಂಗಳ ಸಂಭ್ರಮವಾಗಿದ್ದು ಸಿಎಂ ಬಸವರಾಜ ಬೊಮ್ಮಾಯಿ 6 ತಿಂಗಳ ಸಾಧನೆ ಪುಸ್ತಕ ಬಿಡುಗಡೆಗೊಳಿಸಿದರು. ವಿಧಾನ ಸೌಧದಲ್ಲಿ ಬಸವಕಲ್ಯಾಣಸಮಾರಂಭಕ್ಕೆ ಚಾಲನೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ  ಸರ್ಕಾರ 6 ತಿಂಗಳ ಸಾಧನೆ ಪುಸ್ತಕ  ಭವ್ಯಭವಿಷ್ಯದ  ಭರವಸೆಯ ಹೆಜ್ಜೆಗಳು ಎಂಬ ಪುಸ್ತಕ ಬಿಡುಗಡೆ ಮಾಡಿದರು. ಸಚಿವರಾದ ಗೋವಿಂದ ಕಾರಜೋಳ, ವಿ. ಸೋಮಣ್ಣ ಭೈರತಿ ಬಸವರಾಜ್, ಉಮೇಶ್  ಕತ್ತಿ, ಡಾ.ಕೆ. ಸುಧಾಕರ್ ಗೋಪಾಲಯ್ಯ,ಕೆಎಸ್ ಈಶ್ವರಪ್ಪ ಎಂಟಿಬಿ ನಾಗರಾಜ್ ಎಸ್.…

ಅಕಾಶವಾಣಿಯನ್ನು ಕೇಂದ್ರ ಮುಚ್ಚುವ ಕೆಲಸ ಮಾಡುತ್ತಿದೆ; ಕೇಂದ್ರದ ವಿರುದ್ಧ ಎಚ್ ಡಿ ಕೆ ಆಕ್ರೋಶ

ಬೆಂಗಳೂರು, ಜ,28:ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡುವ ಸಕಲ ಪ್ರಯತ್ನವನ್ನೂ ಕೇಂದ್ರ ಸರಕಾರ ಮಾಡುತ್ತಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು ಕನ್ನಡದ ಕಾರ್ಯಕ್ರಮಗಳನ್ನು ಮೊಟಕುಗೊಳಿಸುತ್ತಿರುವ ಕೇಂದ್ರ ಸರ್ಕಾರ ಈಗ ನೇರವಾಗಿ ಕನ್ನಡದ ಎದೆ ಮೇಲೆ ಕಾಲಿಡುವ ದುಷ್ಟ ಸಂಚು ನಡೆಯುತ್ತಿರುವುದು ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಸೂರ್ಯೋದಯಕ್ಕೆ ಮುನ್ನವೇ ಪ್ರಸಾರ ಆರಂಭಿಸಿ ರಾತ್ರಿ 11ರ ತನಕ ಸತತ 18 ಗಂಟೆ ಕಾಲ ನಿರಂತರವಾಗಿ ಕನ್ನಡ…

ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ;ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಜ, 28:ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲವಾದರೂ ಎಲ್ಲರ ಹಾರೈಕೆಗಳು ಇನ್ನಷ್ಟು ಸ್ಪೂರ್ತಿಯಿಂದ ಮತ್ತು ಗಟ್ಟಿಯಾಗಿ ಅಭಿವೃದ್ಧಿಯತ್ತ ಕರ್ನಾಟಕವನ್ನು ಕೊಂಡೊಯ್ಯಲು ಸಂಕಲ್ಪ ಮಾಡಿರುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ,ಕರ್ನಾಟಕದ ಸಾಮಾನ್ಯ ಜನರಿಂದ ಹಿಡಿದು ಪಕ್ಷದ ಹಿರಿಯರು ಪದಾಧಿಕಾರಿಗಳು, ರಾಷ್ಟ್ರಪತಿಗಳು, ಪ್ರಧಾನಿ ನರೇಂದ್ರ ಮೋದಿಯವರು ಶುಭ ಕೋರಿ ಟ್ವೀಟ್ ಮಾಡಿದ್ದಾರೆ. ಕ್ಷೇತ್ರದ ಜನ ಶುಭಾಶಯಗಳನ್ನು ಕೋರಿದ್ದಾರೆ. ಅಮಿತ್ ಷಾ ಅವರು ಕರೆ ಮಾಡಿ ಶುಭಾಶಯ ತಿಳಿಸಿದ್ದಾರೆ. ಅವರೆಲ್ಲರಿಗೂ ಹೃದಯ ಪೂರ್ವಕ…

ವ್ಯಾಕ್ಸಿನ್ ಬಗ್ಗೆ ಜಾಗೃತಿ ಮೂಡಿಸಿದ ತಹಶಿಲ್ದಾರ್ ರಘುಮೂರ್ತಿ

ಚಳ್ಳಕೆರೆ, ಜ,28:ವ್ಯಾಕ್ಸಿನ್ ಹಾಕಿಸಿದೆ ಹಠ ಮಾಡುತ್ತಿದ್ದವರಿಗ ತಹಶೀಲ್ದಾರ್ ಎನ್ .ರಘುಮೂರ್ತಿ ಹೂ ಮಾಲೆ ಹಾಕಿ ವ್ಯಾಕ್ಸಿನ್ ಜಾಗೃತಿ ಮೂಡಿಸಿ ವ್ಯಾಕ್ಸಿನ್ ಹಾಕಿಸುವ ಮೂಲಕ ಎಲ್ಲರ ಗಮನ ಸೆಳದಿದ್ದಾರೆ. ಹೌದು ತಾಲ್ಲೂಕು ನ್ನು ಸಂಪೂರ್ಣ ಕೋವಿಡ್ ವ್ಯಾಕ್ಸಿನ್ ಮುಕ್ತ ಮಾಡುವ ಉದ್ದೇಶದಿಂದ ಪ್ರತಿದಿನ ಬೆಳಂಬೆಳಗ್ಗೆ ಗ್ರಾಮೀಣ ಭಾಗಗಳಲ್ಲಿ ವ್ಯಾಕ್ಸಿನ್ ಜಾಗೃತಿ ಜತೆಗೆ ವ್ಯಾಕ್ಸಿನ್ ಹಾಕಿಸಿಕೊಳ್ಳದ ವ್ಯಕ್ತಿಗಳಿಗೆ ಬಲವಂತೆ ಮಾಡದೆ ವ್ಯಾಕ್ಸಿನ್ ಬಗ್ಗೆ ತಿಳಿ ಹೇಳಿ ವ್ಯಾಕ್ಸಿನ್ ಹಾಕಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗುರುವಾರ ಬೆಳಗ್ಗೆ ತಾಲ್ಲೂಕಿನ ನಾಯಕನಹಟ್ಟಿ ಹೋಬಳಿಯ ಗಜ್ಜಿಗನಾಹಳ್ಳಿ ಗ್ರಾಮದಲ್ಲಿ…

ವೀಕೆಂಡ್ ಕರ್ಪ್ಯೂ ರದ್ದು; ಘೋಷಣೆ

ಬೆಂಗಳೂರು,ಜ,21: ಕೊರೋನಾ ಹೆಚ್ಚಳವಾದ ಹಿನ್ನೆಲೆ ರಾಜ್ಯದಲ್ಲಿ ಜಾರಿಗೊಳಿಸಲಾಗಿದ್ದ ವೀಕೆಂಡ್ ಕರ್ಫ್ಯೂವನ್ನ ರದ್ಧುಗೊಳಿಸಿರುವುದಾಗಿ ಕಂದಾಯ ಸಚಿವ ಆರ್.ಅಶೋಕ್ ಘೋಷಣೆ ಮಾಡಿದ್ದಾರೆ. ಕೊರೋನಾ ನಿರ್ವಹಣೆ ಸಂಬಂಧ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಚಿವರು ತಜ್ಞರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದ್ದು ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್, ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಲಾಗಿದೆ. ಈವಾರದಿಂದಲೇ ವೀಕೆಂಡ್ ಕರ್ಫ್ಯೂ…

ರಾಜ್ಯದಲ್ಲಿ ಇನ್ನೊಂದು ವರ್ಷದಲ್ಲಿ ಎವಿಜಿಸಿ ನೀತಿ: ಅಶ್ವತ್ಥನಾರಾಯಣ

ಬೆಂಗಳೂರು,ಜ,20: ಡಿಜಿಟಲ್ ಮನೋರಂಜನಾ ಕ್ಷೇತ್ರವು ಅಗಾಧವಾಗಿ ಬೆಳೆಯುತ್ತಿದ್ದು, ಒಂದು ವರ್ಷದಲ್ಲಿ ನೂತನ `ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ನೀತಿ’ (ಎವಿಜಿಸಿ ಪಾಲಿಸಿ)ಯನ್ನು ರಾಜ್ಯದಲ್ಲಿ ಜಾರಿಗೆ ತರಲಾಗುವುದು ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಇಲ್ಲಿನ ಮಹದೇವಪುರದಲ್ಲಿ ದೇಶದ ಪ್ರಪ್ರಥಮ ಮತ್ತು ಏಷ್ಯಾದ ಅತಿದೊಡ್ಡ `ಅನಿಮೇಷನ್, ವಿಷುಯಲ್ ಎಫೆಕ್ಟ್ಸ್, ಗೇಮಿಂಗ್ ಮತ್ತು ಕಾಮಿಕ್ಸ್ ಉತ್ಕೃಷ್ಟತಾ ಕೇಂದ್ರ’ಕ್ಕೆ (ಎವಿಜಿಸಿ ಸೆಂಟರ್ ಆಫ್ ಎಕ್ಸಲೆನ್ಸ್) ಗುರುವಾರದಂದು ಚಾಲನೆ ನೀಡಿ ಮಾತನಾಡಿದ ಅವರು,…

ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಸಿಎಂ ಬೊಮ್ಮಾಯಿ

ಬೆಂಗಳೂರು,ಜ,೧೧: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೈದ್ಯರ ಸಲಹೆ ಮೇರೆಗೆ ಇಂದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.. ಲಘು ರೋಗಲಕ್ಷಣಗಳಿದ್ದು, ಮನೆಯಲ್ಲೇ ಐಸೋಲೇಟ್ ಆಗಿದ್ದ ಮುಖ್ಯಮಂತ್ರಿಗಳನ್ನು ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದು, ಕೆಲವೊಂದು ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ. ಸೋಮವಾರಸಿಎಂಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಇಂದು ಬೊಮ್ಮಾಯಿ ಮಗ ಮತ್ತು ಸೊಸೆಗೂ ಪಾಸಿಟಿವ್ ಬಂದಿದೆ. ಹಾಗಾಗಿ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಸಿಎಂ…

ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ವ್ಯವಸ್ಥೆ ಪರಿಶೀಲಿಸಿದ ಸಚಿವ ಅಶ್ವತ್ಥನಾರಾಯಣ

ಬೆಂಗಳೂರು,ಜ,08: ಕೊರೋನಾ ಮತ್ತು ಓಮೈಕ್ರಾನ್ ಸೋಂಕು  ಹೆಚ್ಚಳದಿಂದ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಉಂಟಾಗಲಿರುವ ಪರಿಸ್ಥಿತಿಯನ್ನು ಎದುರಿಸಲು ಇರುವ ವ್ಯವಸ್ಥೆ ಮತ್ತು ಮಾಡಿಕೊಳ್ಳಬೇಕಾದ ಸಿದ್ಧತೆಗಳನ್ನು ಕುರಿತು ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಶನಿವಾರ ಪರಾಮರ್ಶನಾ ಸಭೆ ನಡೆಸಿದರು. ನಂತರ ಕೆ.ಸಿ.ಜನರಲ್ ಆಸ್ಪತ್ರೆಗೆ ಕೂಡ ಭೇಟಿ ನೀಡಿ ವ್ಯವಸ್ಥೆಯನ್ನು ಪರಿಶೀಲಿಸಿದ ಅವರು, ಈ ಆಸ್ಪತ್ರೆಯಲ್ಲಿ ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿಯ ತೀವ್ರ ಕೊರತೆ ಇದ್ದು, ಈ ಸಂಬಂಧ ತ್ವರಿತವಾಗಿ ಪ್ರಸ್ತಾವನೆ…

ಪ್ರತಿಭೆಯ ವಿಕಾಸಕ್ಕೆ ಆಧುನಿಕ ಮಾಧ್ಯಮಗಳು ಪೂರಕವಾಗಬೇಕು- ಹಂಪ ನಾಗರಾಜಯ್ಯ

ಬೆಂಗಳೂರು ,ಜ,7-ಜಾಗತೀಕರಣದ ಈ ಸಂದರ್ಭದಲ್ಲಿ ನಮಗೆ ಲಭ್ಯವಿರುವ ಇಂದಿನ ಆಧುನಿಕ ಮಾಧ್ಯಮ ಗಳನ್ನು ಯುವ ಲೇಖಕರು ತಮ್ಮ ಪ್ರತಿಭೆಯ ವಿಕಾಸಕ್ಕೆ ಬಳಸಿಕೊಳ್ಳಬೇಕು ಎಂದು ಕನ್ನಡದ ಹಿರಿಯ ಸಾಹಿತಿ ನಾಡೋಜ ಹಂಪ ನಾಗರಾಜಯ್ಯ ಹೇಳಿದ್ದಾರೆ. ಅವರು ಇಂದು ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರಿನ ನಯನ ರಂಗಮಂದಿರದಲ್ಲಿ ಆಯೋಜಿಸಿದ್ದ 55 ಯುವ ಬರಹಗಾರರ ಚೊಚ್ಚಲ ಕೃತಿಗಳ ಲೋಕಾರ್ಪಣೆ ಮತ್ತು ಶಾಲಾ-ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡುತ್ತಿದ್ದರು. ಹಿಂದೆ ಇಂತಹ ಅನುಕೂಲಗಳು ಇರಲಿಲ್ಲ ಈ ರೀತಿಯ ಅದ್ದೂರಿಯ…

4,236 ಕೋಟಿ ಮೊತ್ತದ 87 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ

ಬೆಂಗಳೂರು,ಜ.7- ರಾಜ್ಯದಲ್ಲಿ ಕೈಗಾರಿಕೆಗಳ ಬೆಳವಣಿಗೆಗೆ ಮತ್ತಷ್ಟು ಉತ್ತೇಜನ ನೀಡಲು ಮುಂದಾಗಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು,₹4.236.26 ಕೋಟಿ ಮೊತ್ತದ 87 ಯೋಜನೆಗಳಿಗೆ ಅನುಮೋದನೆ ನೀಡಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರ ಅಧ್ಯಕ್ಷತೆಯಲ್ಲಿ  ನಡೆದ 128ನೇ ರಾಜ್ಯ ಮಟ್ಟದ ಏಕಗವಾಕ್ಷಿ ತೆರವು ಸಮಿತಿ (ಎಸ್‍ಎಲ್‍ಡಬ್ಲ್ಯೂಸಿಸಿ) ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ ಸಮಿತಿಯು ₹50 ಕೋಟಿಗೂ ಹೆಚ್ಚು ಹೂಡಿಕೆಯ 13 ಪ್ರಮುಖ ಬೃಹತ್ ಮತ್ತು ಮಧ್ಯಮ ಗಾತ್ರದ ಕೈಗಾರಿಕಾ…

ಆರ್ಥಿಕ ದುರ್ಬಲರ ಸಬಲೀಕರಣದಲ್ಲಿ ಸಹಕಾರ ಕ್ಷೇತ್ರದ ಪಾತ್ರ ಮಹತ್ವದ್ದು

ಬೆಂಗಳೂರು,ಜ,07: ಸಹಕಾರ ಕ್ಷೇತ್ರವನ್ನು ಕೇಂದ್ರ ಸರಕಾರವು ಪ್ರಮುಖವೆಂದು ಪರಿಗಣಿಸಿದ್ದು, ಸಮಾಜದಲ್ಲಿ ಆರ್ಥಿಕವಾಗಿ ದುರ್ಬಲರಾಗಿರುವವರ ಸಬಲೀಕರಣಕ್ಕೆ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಕರ್ನಾಟಕ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ, ಮಲ್ಲೇಶ್ವರದಲ್ಲಿ ಪ್ರಧಾನ ಕಚೇರಿ ಹೊಂದಿದ್ದು ಅಲ್ಲಿ ನಿರ್ಮಿಸಿರುವ ‘ಸೌರ್ಹಾದ ಸಹಕಾರಿ ಸೌಧ’ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, `ಬ್ಯಾಂಕುಗಳೇ ಸಮಾಜದಲ್ಲಿ ಎಲ್ಲರಿಗೂ ಆರ್ಥಿಕ ನೆರವನ್ನು ನೀಡುವುದು ಸಾಧ್ಯವಿಲ್ಲ. ಅಂತಹ ಕಡೆಗಳಲ್ಲಿ ಸಹಕಾರ ಸಂಘಗಳು ಸಾಲದ ಅಗತ್ಯವಿರುವವರ ನೆರವಿಗೆ ಧಾವಿಸುತ್ತಿದ್ದು, ಅಂಥವರನ್ನು…

ಸರ್ಕಾರದ ಸೇವೆ ಜನರ ಮನೆ ಬಾಗಿಲಿಗೆ: ಸಿ.ಎಂ. ಬೊಮ್ಮಾಯಿ

ಬೆಂಗಳೂರು, ಜ, 07 :ಸರ್ಕಾರದ ಸೇವೆ ಜನರ ಮನೆ ಬಾಗಿಲಿಗೆ ಮುಟ್ಟಿದಾಗ ಸರ್ಕಾರದ ಬಗ್ಗೆ ಜನರಲ್ಲಿ ವಿಶ್ವಾಸ ಮೂಡುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕೆಎಎಸ್ ಅಧಿಕಾರಿಗಳ ಸಂಘದ ಹೊಸ ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗೂ 2022ರ ದಿನಚರಿ ಮತ್ತು ಕ್ಯಾಲೆಂಡರ್ ನ್ನು ಬಿಡುಗಡೆ ಮಾಡಿ ಮಾತನಾಡಿದರು. ಕರ್ನಾಟಕವನ್ನು ದೇಶದ ನಂ.1 ರಾಜ್ಯವನ್ನಾಗಿಸಲು ಸರ್ವಪ್ರಯತ್ನಗಳನ್ನು ಮಾಡುವ ಕರೆ ನೀಡಿದರು. ಕೋವಿಡ್ ಒಡ್ಡಿರುವ ಸವಾಲುಗಳನ್ನು ಮೆಟ್ಟಿನಿಂತು ಸರ್ಕಾರದ ಕಾರ್ಯಕ್ರಮಗಳು ಜನರಿಗೆ ತಲುಪುವಂತಾಗಬೇಕು. ಗ್ರಾಮ ಮಟ್ಟದಲ್ಲಿ ಸರ್ಕಾರದ…

ಓಮಿಕ್ರಾನ್ ಸೋಂಕು: ಅಂತರರಾಜ್ಯ ಗಡಿ ಬಂದ್ ಇಲ್ಲ

ಬೆಳಗಾವಿ,ಜ,05: ಕೊರೋನಾ ಮತ್ತು ಓಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದು ನಿಜವಾದರೂ ಬೆಳಗಾವಿ ಸೇರಿದಂತೆ ರಾಜ್ಯದ ಯಾವ ಕಡೆಗಳಲ್ಲೂ ಅಂತರರಾಜ್ಯ ಗಡಿಗಳನ್ನು ಬಂದ್ ಮಾಡುವ ಆಲೋಚನೆ ಸರಕಾರದ ಮುಂದಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಬುಧವಾರ ಇಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬಂದಿಳಿದಾಗ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಅಂತರರಾಜ್ಯ ಗಡಿಗಳಲ್ಲಿ ರಾಜ್ಯದೊಳಕ್ಕೆ ಬರುವವರನ್ನು ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ನಿಗಾ ವಹಿಸಲಾಗುವುದು. ಸೋಂಕಿತರು ಕಂಡುಬಂದರೆ ಅಂಥವರನ್ನು ಮಾತ್ರ ನಿಯಂತ್ರಿಸಲಾಗುವುದು. ಉಳಿದಂತೆ ಅಂತರರಾಜ್ಯ…

ರಾಜ್ಯಾದ್ಯಂತ ವಾರಾಂತ್ಯ ಕರ್ಪ್ಯೂ ಜಾರಿ

ಬೆಂಗಳೂರು, ಜ,4: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಅನ್ನು ಜಾರಿಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದ್ದಾರೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸುದೀರ್ಘ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿದ ಸಚಿವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ ಮೊದಲಿನಂತೆಯೇ ಮುಂದುವರಿಯುತ್ತದೆ ಎಂದಿದ್ದಾರೆ. ಕೋವಿಡ್ ತಾಂತ್ರಿಕ ಸಲಹಾ ಸಮಿತಿ…

ಗ್ರಾಮೀಣ ಪತ್ರಕರ್ತರ ಆರೋಗ್ಯ ಕಾರ್ಡು ಬಸ್‌ಪಾಸ್ ಸೌಲಭ್ಯಗಳಿಗೆ ಬಜೆಟ್‌ನಲ್ಲಿ ಆದ್ಯತೆ

*36 ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟನೆ ಕಲಬುರಗಿ, ಜ.04:ಸಣ್ಣ ಪತ್ರಿಕೆಗಳು ಪ್ರಸಾರದಲ್ಲಿ ಕಡಿಮೆ ಸಂಖ್ಯೆ ಹೊಂದಿದ್ದರೂ ಕೂಡ ಅಲ್ಲಿನ ಸುದ್ದಿ,ಲೇಖನ,ಅಂಕಣಗಳ ಮೌಲ್ಯ ದೊಡ್ಡದು.ಗ್ರಾಮೀಣ ಪತ್ರಕರ್ತರಿಗೆ ಆರೋಗ್ಯ ಕಾರ್ಡು, ಬಸ್‌ಪಾಸ್ ಸೇರಿದಂತೆ ಇತರ ಸೌಲಭ್ಯಗಳಿಗೆ ಬರುವ ಬಜೆಟ್‌‌ನಲ್ಲಿ ಆದ್ಯತೆ ನೀಡಲಾಗುವುದು.ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಂಡಳಿ ಹಾಗೂ ಕೋಶಕ್ಕೆ ವಾರಾಂತ್ಯದೊಳಗೆ ಪೂರ್ಣ ನೇಮಕಾತಿ ಮಾಡಿ 3 ಸಾವಿರ ಕೋಟಿ ರೂ.ಕ್ರಿಯಾ ಯೋಜನೆಯನ್ನು ಒಂದು ವರ್ಷದ ಅವಧಿಯೊಳಗೆ ಅನುಷ್ಠಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕರ್ನಾಟಕ ಕಾರ್ಯನಿರತ…

ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ: ಸಿಎಂ

ಕಲ್ಬುರ್ಗಿ, ಜ, 04 :ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಲ್ಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ 14000 ಹುದ್ದೆಗಳ ನೇಮಕಾತಿ ಆರ್ಥಿಕ ಅನುಮತಿ ನೀಡಲಾಗಿದೆ. ಶಿಕ್ಷಣ ಇಲಾಖೆಯಲ್ಲಿ 5000 ಹುದ್ದೆಗಳೂ ಸೇರಿದಂತೆ ವಿವಿಧ ಇಲಾಖೆಗಳಿಗೆ ಒಟ್ಟು 14000 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ತಿಳಿಸಿದರು. ಕೆಕೆಆರ್ ಡಿಬಿ ಬೋರ್ಡ್ ರಚನೆಯಾಗದಿರುವ ಬಗ್ಗೆ ಪ್ರತಿಕ್ರಯಿಸಿ…

ಕಲೆಗಳಲ್ಲಿ ವಿಶೇಷವಾದ ಕಲೆ ನಾಟಕ ಕಲೆ: ಕವಿ ಬಿ.ಆರ್‌ ಲಕ್ಷ್ಮಣ್‌ರಾವ್‌

ಬೆಂಗಳೂರು ಜ, 04: ಎಲ್ಲಾ ಕಲೆಗಳ ಸಮ್ಮಿಲನವನ್ನು ಹೊಂದಿರುವ ವಿಶೇಷವಾದ ಕಲೆ ನಾಟಕ ಕಲೆ. ಗ್ರಾಮಾಂತರ ಪ್ರದೇಶಗಳಿಗೂ ಹವ್ಯಾಸಿ ನಾಟಕ ಕಲೆಯನ್ನು ಪಸರಿಸುವ ನಿಟ್ಟಿನಲ್ಲಿ ಇತ್ತೀಚಿನ ಬೆಳವಣಿಗೆಗಳು ಸ್ವಾಗತಾರ್ಹ ಎಂದು ಖ್ಯಾತ ಕವಿ ಲಕ್ಷ್ಮಣ್‌ ರಾವ್‌ ಹೇಳಿದರು. ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಐಶ್ವರ್ಯ ಕಲಾನಿಕೇತನ ಸಂಸ್ಥೆ ಆಯೋಜಿಸಿದ್ದ ಆಷಾಢದ ಒಂದು ದಿನ ನಾಟಕ ಪ್ರದರ್ಶನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಲ್ಲಾ ಕಲೆಗಳನ್ನು ಮಿಳಿತಗೊಂಡಂತಹ ನಾಟಕ ಕಲೆ ಬಹಳ ಪ್ರಮುಖವಾದದ್ದು. ಕವಿಯಾಗಿ ನಾನು ಪ್ರಸಿದ್ದಿಯಾಗಿದ್ದರೂ ಒಂದೆರಡು…

ಕೋವಿಡ್ ತೊಲಗಿಸಲು ಪಣ ತೋಡೋಣ: ಸಿಎಂ

ಬೆಂಗಳೂರು, ಜ, 03: 2022ನ್ನು ಆರೋಗ್ಯಭರಿತ ಹಾಗೂ ಕೋವಿಡ್ ಮುಕ್ತ ವರ್ಷವನ್ನಾಗಿ ಮಾಡಲು ಸಂಕಲ್ಪ ತೋಡೋಣ. ಕೋವಿಡ್ ವಿರುದ್ದ ಒಟ್ಟಾಗಿ ಸಮರವನ್ನು ಸಾರಿ ತೊಲಗಿಸಲು ಪಣ ತೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕರೆ ನೀಡಿದರು. ಅವರು ಇಂದು ಅವರು ಇಂದು ಭೈರವೇಶ್ವರನಗರದ ಬಿಬಿಎಂಪಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಸ್ನಾತಕೋತ್ತರ ಕಾಲೇಜಿನಲ್ಲಿ 15-18 ವರ್ಷದೊಳಗಿನ ಶಾಲಾ ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಕರ್ನಾಟಕದಲ್ಲಿ ಅತ್ಯಂತ ಯಶಸ್ವಿಯಾಗಿ ಕೋವಿಡ್…

1 9 10 11 12 13 33
error: Content is protected !!