Browsing: ರಾಜ್ಯ

ರಾಜ್ಯ

ಆಧುನಿಕ ಭಾರತದ ಪಿತಾಮಹ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ : ಸಿಎಂ

ಬೆಳಗಾವಿ ಡಿ,17: ಡಾ: ಬಿ.ಆರ್. ಅಂಬೇಡ್ಕರ್ ಆಧುನಿಕ ಭಾರತದ ಪಿತಾಮಹ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ ಸೌಧ ಮುಂಭಾಗದಲ್ಲಿರುವ ಬಸ್ತವಾಡ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ .ಆರ್.ಅಂಬೇಡ್ಕರ್ ಅವರ ಪುತ್ಥಳಿಯನ್ನು ಅನಾವರಣಗೊಳಿಸಿ ಮಾತನಾಡಿದರು. ಅವರಿಂದಾಗಿ ನಾವು ಇಂದು ವಿಧಾನ ಸಭೆಯಲ್ಲಿ ಕೆಲಸ ಮಾಡುತ್ತಿದ್ದೇವೆ. ಸಂವಿಧಾನ ರಚನೆ, ಗಣತಂತ್ರ ತರದೇಹೋಗಿದ್ದರೆ ದೇಶದಲ್ಲಿ ಪ್ರಜಾಪ್ರಭುತ್ವ, ಕಾನೂನು ಸುವ್ಯವಸ್ಥೆ, ಶಾಂತಿ ಸಮೃದ್ಧಿ ಇರುತ್ತಿರಲಿಲ್ಲ ಎಂದರು. ಅವರು ರಚಿಸಿರುವ ಸಂವಿಧಾನ ಬಹಳ ಉತ್ಕೃಷ್ಟವಾಗಿರುವಂಥದ್ದು.…

23ರಂದು ಬೆಳಗಾವಿಯಲ್ಲಿ ಉದ್ಯೋಗ ಮೇಳ: ಡಾ. ಅಶ್ವತ್ಥನಾರಾಯಣ

ಬೆಳಗಾವಿ,ಡಿ,16: ಇಲ್ಲಿನ ಉದ್ಯಮ್ ಬಾಗ್ ನಲ್ಲಿ ಇರುವ ಗೋಗಟೆ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ರಾಜ್ಯ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಎಂಜಿನಿಯರಿಂಗ್, ಡಿಪ್ಲೊಮಾ ಮತ್ತು ಐಟಿಐ ಪದವೀಧರರಿಗೆ ಡಿ.23ರಂದು ಉದ್ಯೋಗ ಮೇಳ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ. ಜಿಲ್ಲೆಯ ಸಚಿವರು ಮತ್ತು ಜನಪ್ರತಿನಿಧಿಗಳ ಜತೆ ಶುಕ್ರವಾರ ಇಲ್ಲಿನ ಸುವರ್ಣ ಸೌಧದಲ್ಲಿ ಸಭೆ ನಡೆಸಿದ ಅವರು, ಈ ವಿಚಾರ ತಿಳಿಸಿದರು. ಓಲಾ, ಎಚ್ಪಿ ಸೇರಿದಂತೆ 34 ಕಂಪನಿಗಳು…

ಮೇಕೆದಾಟು ಯೋಜನಾ ವರದಿ ಕೇಂದ್ರಕ್ಕೆ ಸಲ್ಲಿಕೆ:ಕಾರಜೋಳ

ಬೆಳಗಾವಿ,ಡಿ,15: ಮೇಕೆದಾಟು ಯೋಜನೆಯ ವಿವರವಾದ ಯೋಜನಾ ವರದಿಯನ್ನು ಸಿದ್ದಪಡಿಸಲಾಗಿದೆ. ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯನ್ನು ಕಾವೇರಿ ನದಿಗೆ ಅಡ್ಡಲಾಗಿ ಆರ್ಕಾವತಿ ಹಾಗೂ ಕಾವೇರಿ ನದಿಯ ಸಂಗಮದ ಸಮೀಪದಲ್ಲಿ ನಿರ್ಮಿಸಿ, 67.16 ಟಿ.ಎಂ.ಸಿ ನೀರನ್ನು ಶೇಖರಿಸಲು ರೂ.9000.00 ಕೋಟಿ ಮೊತ್ತದ ಡಿ.ಪಿ.ಆರ್ ತಯಾರಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಅದು ಕೇಂದ್ರ ಸರ್ಕಾರದ ವಿವಿಧ ನಿರ್ದೇಶನಾಲಯಗಳಲ್ಲಿ ಪರಿಶೀಲನೆಯಲ್ಲಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ ಕಾರಜೋಳ ಇಂದು ವಿಧಾನಪರಿಷತ್ತಿನಲ್ಲಿ ತಿಳಿಸಿದರು. ಸದಸ್ಯರಾದ ಡಾ|| ತೇಜಸ್ವಿನಿಗೌಡ ಪ್ರಶ್ನೆಗೆ…

ನೇಕಾರರ ಉತ್ಪನ್ನಗಳಿಗೆ ಸುಸ್ಥಿರ ಮಾರುಕಟ್ಟೆ ಹಾಗೂ ದರ ಒದಗಿಸಲು ಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ

ಬೆಳಗಾವಿ, ಡಿ,16:ನೇಕಾರರ ಉತ್ಪನ್ನಗಳಿಗೆ ಸುಸ್ಥಿರ ಮಾರುಕಟ್ಟೆ ಹಾಗೂ ದರ ಒದಗಿಸಲು ಪೂರಕ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು. ಅವರು ಇಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ನೇಕಾರರ ಸಮಸ್ಯೆಗಳ ಕುರಿತು ಕರೆದ ಸಭೆಯಲ್ಲಿ ಮಾತನಾಡಿದರು. ನೇಕಾರರ ಬೇಡಿಕೆಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿಯವರು, ಸರ್ಕಾರದ ವಿವಿಧ ಇಲಾಖೆಗಳಿಗೆ ಅಗತ್ಯ ವಿರುವ ಬಟ್ಟೆ/ಸೀರೆಗಳನ್ನು ನೇಕಾರರ ಸಾಮರ್ಥ್ಯಕ್ಕೆ ಅನುಗುಣವಾಗಿ ಖರೀದಿಸಲು ಪ್ರಮಾಣವನ್ನು ನಿಗದಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಇದರೊಂದಿಗೆ ಕೈಮಗ್ಗ ಅಭಿವೃದ್ಧಿ ನಿಗಮದ ಮೂಲಕ…

ಕನ್ನಡ ಧ್ವಜಕ್ಕೆ ಬೆಂಕಿ; ಕನ್ನಡ ದ್ರೋಹಿಗಳ ವಿರುದ್ಧ ಕಠಿಣ ಕ್ರಮಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

ಬೆಂಗಳೂರು,ಡಿ,15: ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟು ಕರ್ನಾಟಕ ಮತ್ತು ಕನ್ನಡಿಗರನ್ನು ಕೆಣಕಿರುವ ಎಂಇಎಸ್‌ ಪುಂಡರ ವಿರುದ್ಧ ಕಠಿಣವಾಗಿ ವರ್ತಿಸುವಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸರಕಾರವನ್ನು ಒತ್ತಾಯ ಮಾಡಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು; ಬಹುಭಾಷಾ ಪ್ರೇಮ, ಸಾಮರಸ್ಯ ಕನ್ನಡಿಗರ ದೌರ್ಬಲ್ಯವಲ್ಲ, ಔದಾರ್ಯ ಎಂದಿರುವ ಅವರು. ಕೊಲ್ಲಾಪುರದಲ್ಲಿ ನಮ್ಮ ಧ್ವಜ ದಹನ ಮಾಡಿರುವುದು ಅತ್ಯಂತ ನೀಚತನದ ಪರಮಾವಧಿ. ಕನ್ನಡ ದ್ರೋಹಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ವರ್ತಿಸಬೇಕು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಎಂಇಎಸ್‌ ಪುಂಡರು ಕನ್ನಡ ಧ್ವಜಕ್ಕೆ ಅಪಮಾನ…

ಎಲ್ಲ ಜಿಲ್ಲೆಗಳಲ್ಲೂ ವಿವಿ ಸ್ಥಾಪನೆ; ಯುವಿಸಿಇ, ವಿಟಿಯು ಐಐಟಿ ಮಟ್ಟಕ್ಕೆ:ಅಶ್ವತ್ಥನಾರಾಯಣ

ಬೆಳಗಾವಿ,ಡಿ,14: ರಾಜ್ಯದಲ್ಲಿ ವಿಶ್ವವಿದ್ಯಾಲಯಗಳು ಇಲ್ಲದ ಜಿಲ್ಲೆಗಳಲ್ಲಿ ಆದಷ್ಟು ತ್ವರಿತವಾಗಿ ವಿ.ವಿ.ಗಳನ್ನು ಸ್ಥಾಪಿಸಲಾಗುವುದು. ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ತಲೆ ಎತ್ತಲಿರುವ ಈ ವಿ.ವಿ.ಗಳಲ್ಲಿ ಕುಲಪತಿಯೂ ಸೇರಿದಂತೆ ಗರಿಷ್ಠ 25 ಸಿಬ್ಬಂದಿ ಮಾತ್ರ ಇರಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಇಲ್ಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಆವರಣದಲ್ಲಿ ಬುಧವಾರ ನಡೆದ `ಜ್ಞಾನಯಜ್ಞ ಫೆಲೋಶಿಪ್ ವಿತರಣೆ ಮತ್ತು ವಿದ್ಯುನ್ಮಾನ ಪ್ರಮಾಣ ಪತ್ರಗಳ ಸೇವಾ ವ್ಯವಸ್ಥೆ’ (ಎಲೆಕ್ಟ್ರಾನಿಕ್ ಡಾಕ್ಯುಮೆಂಟರಿ ಡೆಲಿವರಿ) ಹಾಗೂ ಟ್ರ್ಯಾಕಿಂಗ್ ವ್ಯವಸ್ಥೆಯ ಉದ್ಘಾಟನೆ ನೆರವೇರಿಸಿ ಅವರು…

ಅತಿಥಿ ಉಪನ್ಯಾಸಕರ ಸಮಸ್ಯೆ: ತಿಂಗಳಲ್ಲಿ ಸಮಿತಿ ವರದಿ, ಬಳಿಕ ಪರಿಹಾರ

ಬೆಳಗಾವಿ,ಡಿ,14: ಸೇವಾಭದ್ರತೆ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸುತ್ತಿರುವ ರಾಜ್ಯದ 14 ಸಾವಿರ ಅತಿಥಿ ಉಪನ್ಯಾಸಕರ ಸಮಸ್ಯೆಗಳಿಗೆ ನ್ಯಾಯಯುತ ಪರಿಹಾರ ಕಲ್ಪಿಸುವ ಸಂಬಂಧ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಸಭೆ ನಡೆಯಿತು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸೇರಿದಂತೆ ಶಿಕ್ಷಕರು ಮತ್ತು ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರು ಕೂಡ ಭಾಗವಹಿಸಿದ್ದ ಈ ಸಭೆಯು, ಈ ಸಂಬಂಧ ರಚಿಸಲಾಗಿರುವ ಉನ್ನತ ಮಟ್ಟದ…

ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ನಿಧನ

ಚಿಕ್ಕಮಗಳೂರು,ಡಿ,14: ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಕವಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ (84 ವ) ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಕಳೆದ ಮೂರ್ನಾಲ್ಕು ದಿನದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಪತಿ, ಕವಿ ಪೂರ್ಣಚಂದ್ರ ತೇಜಸ್ವಿ ನಿಧನ ಬಳಿಕ ಚಿಕ್ಕಮಗಳೂರು ಮೂಡಿಗೆರೆಯ ಹ್ಯಾಂಡ್ ಪೋಸ್ಟ್ ನ ತೋಟದ ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು. ಅವರ ನೆಚ್ಚಿನ ಹವ್ಯಾಸಗಳ ಜೊತೆ ಕಾಫಿ ತೋಟವನ್ನು ಸಹ ನೋಡಿಕೊಂಡು ಹೋಗುತ್ತಿದ್ದರು. ಆದರೆ ಕಳೆದ…

ಅತಿಥಿ ಉಪನ್ಯಾಸಕರ ಬೇಡಿಕೆಗಳ ಅಧ್ಯಯನಕ್ಕೆ ಸಮಿತಿ ರಚನೆ

ಬೆಂಗಳೂರು,ಡಿ,13: ರಾಜ್ಯದಲ್ಲಿರುವ 14 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ನಾನಾ ಬೇಡಿಕೆಗಳನ್ನು ಕುರಿತು ಅಧ್ಯಯನ ನಡೆಸಿ, ವಿಸ್ತೃತ ವರದಿ ಸಲ್ಲಿಸಲು ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈ ಬಗ್ಗೆ ಸರಕಾರ ಸೋಮವಾರ ಆದೇಶ ಹೊರಡಿಸಿದ್ದು, ಇದರಲ್ಲಿ ಆರ್ಥಿಕ ಮತ್ತು ಕಾನೂನು ಇಲಾಖೆಯ ಕಾರ್ಯದರ್ಶಿಗಳು ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರು ಕೂಡ ಇರಲಿದ್ದಾರೆ. ಸಮಿತಿಯು ನಿಗದಿತ ಕಾಲಮಿತಿಯೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ. ಜೊತೆಗೆ, ವಿಧಾನ ಪರಿಷತ್ ಸಭಾಪತಿ…

ನಟ ಪುನೀತ್ ರಾಜ್‌ಕುಮಾರ್‌ಗೆ ಶೀಘ್ರದಲ್ಲೇ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು : ಸಿಎಂ

ಬೆಳಗಾವಿ,ಡಿ,೧೩: ಅಗಲಿದ ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದ್ದೇವೆ. ಪ್ರಶಸ್ತಿ ಪ್ರದಾನ ಮಾಡುವ ಕಾರ್ಯಕ್ರಮದ ದಿನಾಂಕ ಶೀಘ್ರ ಪ್ರಕಟ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ತಿಳಿಸಿದರು. ಸಂತಾಪ ಸೂಚಕದ ನಿರ್ಣಯದ ಮೇಲೆ ಮಾತನಾಡಿದ ಸಿಎಂ, ಅದೇ ರೀತಿ ಶೀಘ್ರದಲ್ಲೇ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡುತ್ತೇವೆ. ವಿಪಕ್ಷದ ನಾಯಕರು ಸಹ ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡುವಂತೆ ಪತ್ರ ಬರೆದಿದ್ದರು ಎಂದು ಹೇಳಿದರು. ಪ್ರತಿಭೆ ಮತ್ತು ಸಾಧಕರು ಅಲ್ಪಾಯುಷಿಗಳು…

ವರ್ಷದಲ್ಲಿ ಗಂಗೂಬಾಯಿ ಸಂಗೀತ ವಿವಿ ಪುನಶ್ಚೇತನ: ಅಶ್ವತ್ಥನಾರಾಯಣ

ಬೆಂಗಳೂರು,ಡಿ,12: ಮೈಸೂರಿನಲ್ಲಿರುವ ಗಂಗೂಬಾಯಿ ಸಂಗೀತ ವಿಶ್ವವಿದ್ಯಾಲಯವನ್ನು ಮುಂದಿನ ಒಂದು ವರ್ಷದಲ್ಲಿ ಜಾಗತಿಕ ಗುಣಮಟ್ಟದೊಂದಿಗೆ ಪುನಶ್ಚೇತನಗೊಳಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ನಗರದ ಗಾಯನ ಸಮಾಜದಲ್ಲಿ ನಡೆಯುತ್ತಿದ್ದ 51ನೇ ಸಂಗೀತ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಮಾತನಾಡಿದ ಅವರು, ವ್ಯಕ್ತಿಗಳು ನೆಮ್ಮದಿಯಿಂದ ಬದುಕಬೇಕಾದರೆ ಸಂಸ್ಕೃತಿ ಮತ್ತು ಸಂಸ್ಕಾರಗಳು ಬಹಳ ಮುಖ್ಯ ಎಂದರು. ಶಿಕ್ಷಣದಲ್ಲಿ ಭಾರತೀಯತೆ ಮತ್ತು ಸಂಸ್ಕೃತಿಯ ಇತರ ಅಂಶಗಳೆಲ್ಲವೂ ಇರಬೇಕೆನ್ನುವುದು ಸದಾಶಯವಾಗಿದೆ. ಏಕೆಂದರೆ, ಕೇವಲ ಶಾಲಾಕಾಲೇಜುಗಳ ಓದಷ್ಟೇ ಮುಖ್ಯವಲ್ಲ. ಇದನ್ನು ಮನಗಂಡೇ ಪ್ರಧಾನಿ…

ಬೆಳಗಾವಿ ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಯ ನಿರೀಕ್ಷೆ;ಸಿ.ಎಂ

ಹುಬ್ಬಳ್ಳಿ, ಡಿ 12: ಬೆಳಗಾವಿ ಅಧಿವೇಶನದಲ್ಲಿ ಅರ್ಥಪೂರ್ಣ ಚರ್ಚೆಯನ್ನು ನಿರೀಕ್ಷಿಸುತ್ತಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಹುಬ್ಭಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಬೆಳಗಾವಿಯಲ್ಲಿ 2 ವರ್ಷಗಳ ನಂತರ ಅಧಿವೇಶನ ನಡೆಯಲಿದ್ದು, ಇದಕ್ಕಾಗಿ ಸರ್ಕಾರ ಸಂಪೂರ್ಣ ಸಿದ್ಧತೆಗಳನ್ನು ಕೈಗೊಂಡಿದೆ. ಅಧಿವೇಶನದಲ್ಲಿ ಅಭಿವೃದ್ಧಿಯ ಪರವಾದ ಹಾಗೂ ಜನರಿಗೆ ಉಪಯುಕ್ತವಾಗುವ ಚರ್ಚೆಯಾಗಬೇಕೆಂದು ಬಯಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು. ಮಹತ್ವದ ಹಾಗೂ ಅರ್ಥಪೂರ್ಣ ಚರ್ಚೆಗಳಾಗಬೇಕೆನ್ನುವುದು ಉತ್ತರ ಕರ್ನಾಟಕ ಭಾಗದ ಜನರ ಅಪೇಕ್ಷೆಯೂ ಹೌದು. ಸರ್ಕಾರವು ಸಮಗ್ರ ಕರ್ನಾಟಕ ಅದರಲ್ಲಿಯೂ ವಿಶೇಷವಾಗಿ ಉತ್ತರ…

ಬಿಡಿಎ ಸೇವೆಗಳೂ ಶೀಘ್ರವೇ `ಜನಸೇವಕ’ ವ್ಯಾಪ್ತಿಗೆ: ಡಾ.ಅಶ್ವತ್ಥನಾರಾಯಣ

ಬೆಂಗಳೂರು,ಡಿ,11: ಆಧಾರ್ ಕಾರ್ಡಿನಿಂದ ಹಿಡಿದು ಭೂ ಹಿಡುವಳಿ ಪ್ರಮಾಣ ಪತ್ರದವರೆಗೆ 79 ಅಗತ್ಯ ಸೇವೆಗಳನ್ನು ಜನರ ಮನೆ ಬಾಗಿಲಿಗೇ ತಲುಪಿಸುವ `ಜನಸೇವಕ’ ಯೋಜನೆ ವ್ಯಾಪ್ತಿಗೆ ಸದ್ಯದಲ್ಲೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಸೇವೆಗಳನ್ನೂ ಸೇರಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ತಾವು ಪ್ರತಿನಿಧಿಸುತ್ತಿರುವ ಮಲ್ಲೇಶ್ವರಂ ಕ್ಷೇತ್ರದಲ್ಲಿ ಇತ್ತೀಚೆಗೆ ಚಾಲನೆ ಕಂಡಿದ್ದ `ಜನಸೇವಕ’ ಕಾರ್ಯಕ್ರಮ ಕುರಿತಾದ ವಾರ್ಡ್ ವಾರು ಪ್ರತ್ಯೇಕ ಕಿರುಹೊತ್ತಿಗೆ ಬಿಡುಗಡೆ ಹಾಗೂ ಜನರಿಗೆ ಸಾಂಕೇತಿಕವಾಗಿ ಸೇವೆಗಳನ್ನು ಒದಗಿಸುವ ಕಾರ್ಯಕ್ರಮದ ನಂತರ ಅವರು ಮಾತನಾಡಿದರು.…

ಕಂಪನಿಗಳಿಗೆ ಸಾಮಾಜಿಕ ಒಳಗೊಳ್ಳುವಿಕೆ ದೃಷ್ಟಿಕೋನ ಮುಖ್ಯ: ಅಶ್ವತ್ಥನಾರಾಯಣ

ಬೆಂಗಳೂರು,ಡಿ,10:  ಕೇವಲ ವಾಣಿಜ್ಯ ಲಾಭದ ದೃಷ್ಟಿಯಿಂದ ಕಂಪನಿಗಳನ್ನು ನಡೆಸುವುದರ ಬದಲು ಸಮಾಜದ ಪ್ರತಿಯೊಬ್ಬರನ್ನೂ ಒಳಗೊಳ್ಳುವಂತಹ ದೃಷ್ಟಿಕೋನವು ಉದ್ಯಮಗಳಲ್ಲಿ ಬೇರೂರಬೇಕಾಗಿದೆ. ಇದರಿಂದ ಮಾತ್ರ ಸಮಾಜವು ಪ್ರಗತಿ ಸಾಧಿಸಬಲ್ಲದು ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪ್ರತಿಪಾದಿಸಿದ್ದಾರೆ. ನಗರದ ಖಾಸಗಿ ಹೋಟೆಲಿನಲ್ಲಿ ಶುಕ್ರವಾರ ನಡೆದ 12ನೇ ಸಿಎಸ್ಆರ್ ನಾಯಕತ್ವ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿರುವ ಯೂನಿಕಾರ್ನ್ ಕಂಪನಿಗಳಲ್ಲಿ ಶೇ.60ರಷ್ಟು ರಾಜ್ಯದಲ್ಲೇ ಇದ್ದು, ಇವು ಈಗ ಸಾಮಾಜಿಕ ವಲಯಗಳತ್ತಲೂ ಗಮನ ಹರಿಸುತ್ತಿರುವುದು ಸ್ವಾಗತಾರ್ಹ…

ಕರ್ನಾಟಕದಲ್ಲಿ ಮೊದಲ ಒಮೈಕ್ರಾನ್ ಪತ್ತೆ

ಬೆಂಗಳೂರು,ಡಿ,02: ಬೆಂಗಳೂರಿನ ಇಬ್ಬರಿಗೆ ಒಮೈಕ್ರಾನ್ ವೈರಸ್​  ತಗುಲಿದೆ. ಭಾರತದಲ್ಲಿ ಮೊದಲ ಒಮೈಕ್ರಾನ್ ಕೇಸ್ ಕರ್ನಾಟಕದಲ್ಲೇ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಸುಧಾಕರ್​ ತಿಳಿಸಿದ್ದಾರೆ. ಒಮೈಕ್ರಾನ್ ಬಂದಿರುವ ಇಬ್ಬರಿಗೂ 2 ಡೋಸ್ ಕೊರೊನಾ ಲಸಿಕೆ ಆಗಿದೆ. ಮೂರು ದಿನದಿಂದ ಅವರಿಬ್ಬರ ರಿಪೋರ್ಟ್ ಗೆ ಕಾಯುತ್ತಿದ್ದೆವು. ಕೇಂದ್ರ ಸರ್ಕಾರ ಎರಡೂ ಸ್ಯಾಂಪಲ್ ಗಳಲ್ಲಿ ಒಮಿಕ್ರಾನ್ ಪ್ರಬೇಧ ಇದೆ ಎಂದು ದೃಢಪಟ್ಟಿದೆ. ಕರ್ನಾಟಕದಲ್ಲಿ ವಿದೇಶದಿಂದ ಬಂದವರಿಗೆ ಬಹಳ ತುರ್ತಾಗಿ ಪರೀಕ್ಷೆಗಳನ್ನು ನಡೆಸುತ್ತಿರುವುದರಿಂದ ಒಮಿಕ್ರಾನ್ ಸೋಂಕನ್ನು ನಾವು ಬೇಗ ಕಂಡು…

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಕುರಿತು ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ : ಸಿಎಂ

ನವದೆಹಲಿ, ಡಿ,೨ :ಇದೇ ೬ ರಂದು ನಡೆಯಲಿರುವ ಮಹತ್ವದ ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವ ಕುರಿತು ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ , ಆರೋಗ್ಯ , ಕಾನೂನು ಸಚಿವರನ್ನು ಭೇಟಿಯಾದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದರು. ಕೃಷ್ಣಾ ಮೇಲ್ದಂಡೆ ಯೋಜನೆಯ ೨ ನೇ ನ್ಯಾಯಾಧಿಕರಣದ ಅಧಿಸೂಚನೆಯಲ್ಲಿ ನ್ಯಾಯಾಲಯದ ಆದೇಶದಂತೆ ಕೇಂದ್ರ ಸರ್ಕಾರ…

ಓಮೈಕ್ರಾನ್ ಆತಂಕ: ಸದ್ಯಕ್ಕೆ ಸಿನಿಮಾ, ಹೋಟೆಲ್, ಮಾಲ್ ಬಂದ್ ಇಲ್ಲ

ಬೆಂಗಳೂರು,ಡಿ,02: ಕೋವಿಡ್ ವೈರಾಣುವಿನ ಹೊಸ ರೂಪಾಂತರಿ ತಳಿ ಓಮೈಕ್ರಾನ್ ಆತಂಕ ಸೃಷ್ಟಿಸಿರುವುದು ನಿಜವಾದರೂ ಸದ್ಯಕ್ಕೆ ರಾಜ್ಯದಲ್ಲಿ ಚಿತ್ರ ಮಂದಿರ, ಹೋಟೆಲ್ ಮತ್ತು ಮಾಲ್ ಗಳನ್ನು ಮುಚ್ಚುವುದಿಲ್ಲ. ಆದರೆ, ಇಂತಹ ಸ್ಥಳಗಳಿಗೆ ಹೋಗುವವರಿಗೆ ಸದ್ಯದಲ್ಲೇ ಲಸಿಕೆ ಕಡ್ಡಾಯ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಇತ್ತೀಚೆಗೆ ವೈದ್ಯರನ್ನು ಕುರಿತು ನಿರ್ಮಿಸಿ, ಬಿಡುಗಡೆ ಮಾಡಿರುವ `ಪ್ರೇಮಂ ಪೂಜ್ಯಂ’ ಚಿತ್ರದ ನಾಯಕ ನಟ ಪ್ರೇಮ್ ಅವರು ಗುರುವಾರ ತಮ್ಮನ್ನು ಇಲ್ಲಿ ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ…

ಎನ್ಇಪಿ ಭಾರತ ಕೇಂದ್ರಿತ; ಸಂಶೋಧನೆ, ನಾವೀನ್ಯತೆಗೆ ಒತ್ತು;ಅಶ್ವತ್ಥ್ ನಾರಾಯಣ

ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ಭಾರತ ಕೇಂದ್ರಿತವಾಗಿದ್ದು, ಶಿಕ್ಷಣ ಕ್ರಮದಲ್ಲಿ ಸಂಶೋಧನೆ ಮತ್ತು ನಾವೀನ್ಯತೆಗಳಿಗೆ ಒತ್ತು ಕೊಡುವ ಮೂಲಕ ವಿದ್ಯಾರ್ಥಿಗಳ ಪರಿಪೂರ್ಣ ಬೆಳವಣಿಗೆಯನ್ನು ಗುರಿಯಾಗಿ ಹೊಂದಿದೆ. ಇದರ ಅನುಷ್ಠಾನದಲ್ಲಿ ರಾಜ್ಯವು ಇಡೀ ದೇಶಕ್ಕೆ ಮಾದರಿಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ. ಎಜುಕೇಷನ್ ಪ್ರೊಮೋಷನ್ ಸೊಸೈಟಿ ಆಫ್ ಇಂಡಿಯಾ (ಇಪಿಎಸ್ಐ), ಕುಪೇಕಾ ಮತ್ತು ಕಾಮೆಡ್-ಕೆ ಸಂಘಟನೆಗಳು ಜತೆಗೂಡಿ ಮಂಗಳವಾರ ಏರ್ಪಡಿಸಿದ್ದ `ಎನ್ಇಪಿ ಜಾರಿ: ಶಿಕ್ಷಣ ಸಂಸ್ಥೆಗಳಿಗಿರುವ ಅವಕಾಶಗಳು ಮತ್ತು ಸವಾಲುಗಳು’ ವಿಚಾರ ಗೋಷ್ಠಿಯಲ್ಲಿ…

ರದಜ್ಯದಲ್ಲಿ ಲಾಕ್ ಡೌನ್ ಮಾಡುವ ಯಸವುದೇ ಪ್ರಸ್ತಾಪ ಇಲ್ಲ: ಸುಧಾಕರ್

ಬೆಂಗಳೂರು, ನ.29: ಓಮಿಕ್ರಾನ್ ರೂಪಾಂತರ ತಳಿ ಬಗ್ಗೆ ತೀವ್ರ ಆತಂಕ ಬೇಡ. ರಾಜ್ಯದಲ್ಲಿ ಲಾಕ್‌ಡೌನ್ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಕೆಲವರು ಲಾಕ್‌ಡೌನ್ ಆಗಲಿದೆ ಎಂಬ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹರಡುತ್ತಿದೆ. ಸಾರ್ವಜನಿಕರು ಇಂತಹ ಊಹಾಪೋಹಗಳಿಗೆ ಕಿವಿಗೊಡಬಾರದು. ಲಾಕ್‌ಡೌನ್ ಮಾಡುವ ಅಗತ್ಯವೇ ಇಲ್ಲ. ಸರ್ಕಾರದ ಮುಂದೆ ಅಂತಹ ಪ್ರಸ್ತಾಪವೂ ಇಲ್ಲ ಎಂದು ಅವರು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಇದನ್ನು ಮೂರನೇ ಅಲೆ…

ಕನ್ನಡ ಕಲಿತು ಕನ್ನಡಿಗರಾಗಿ:ಡಾ. ಆರೂಢಭಾರತೀ ಶ್ರೀ

ಬೆಂಗಳೂರು,ನ,29:ಕನ್ನಡಿಗರ ಕಲೆ ಸಂಸ್ಕೃತಿ ಇತಿಹಾಸ ಅಡಗಿರುವುದು ಕನ್ನಡ ಸಾಹಿತ್ಯದಲ್ಲಿ. ಕನ್ನಡ ಭಾಷೆಯನ್ನು ಸರಿಯಾಗಿ ಕಲಿಯದಿದ್ದರೆ ಕನ್ನಡ ಸಾಹಿತ್ಯವನ್ನು ತಿಳಿಯಲಾಗದು. ಕನ್ನಡ ನಾಡಿನಲ್ಲಿ ಹುಟ್ಟಿದವರು ಮಾತ್ರವಲ್ಲ, ಕನ್ನಡ ನೆಲಕ್ಕೆ ಬಂದ ವಲಸಿಗರೆಲ್ಲರೂ ಕನ್ನಡ ಭಾಷೆಯನ್ನು ಕಲಿತು ಕನ್ನಡಿಗರೆನಿಸಬೇಕು ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಶ್ರೀ ಆರೂಢಭಾರತೀ ಸ್ವಾಮೀಜಿ ಹೇಳಿದರು. ಅವರು ಭಾನುವಾರ ಕೆಂಗೇರಿಯ ಗಾಂಧಿ ನಗರದಲ್ಲಿ ರಾಮಸೇನೆ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್ ರಾಜ್‌ಕುಮಾರ್ ಮತ್ತು ರಾಮಸೇನಾ ಕಾರ್ಯಕರ್ತ ದಿ. ಜಗದೀಶ್…

1 11 12 13 14 15 33
error: Content is protected !!