Browsing: ರಾಜ್ಯ

ರಾಜ್ಯ

ಹಿರಿಯ ಪತ್ರಕರ್ತ ಗುಡಿಹಳ್ಳಿ ನಾಗರಾಜ್ ನಿಧನ

ಬೆಂಗಳೂರು,ಆ,26:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಮತ್ತು ಪ್ರೆಸ್ ಕ್ಲಬ್ ಮಾಜಿ ಉಪಾಧ್ಯಕ್ಷ ಹಾಗೂ ಹಿರಿಯ ಪತ್ರಕರ್ತ ಗುಡಿಹಳ್ಳಿಹಿರಿಯ ನಾಗರಾಜ್(66)  ನಿಧನರಾಗಿದ್ದಾರೆ.  ಮೈತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಗುಡಿಹಳ್ಳಿ ನಾಗರಾಜ್ ಪ್ರಜಾವಾಣಿ ಪತ್ರಿಕೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದವರು. ಕನ್ನಡ ಸಾಂಸ್ಕೃತಿಕ ಲೋಕದ ಜೊತೆ ನಿಕಟ ಒಡನಾಟ ಇರಿಸಿ ಕೊಂಡಿದ್ದ ಗುಡಿಹಳ್ಳಿ ನಾಗರಾಜ್, ವಿಶೇಷವಾಗಿ ಕನ್ನಡ ರಂಗಭೂಮಿ ಕುರಿತು ಬರೆದ ಲೇಖನಗಳು ಮತ್ತು ಕೃತಿಗಳು ಕನ್ನಡ ಸಾಹಿತ್ಯ ಲೋಕಕ್ಕೆ ಉತ್ತಮ ಕೊಡುಗೆಗಳನ್ನು ನೀಡಿದ್ದಾರೆ. ಒಂದು ರೀತಿಯಲ್ಲಿ…

ಕಾಂಗ್ರೆಸ್ ನನ್ನ ರೇಪ್ ಮಾಡ್ತಿದೆ ,ವಿವದಾತ್ಮಕ ಹೇಳಿಕೆ ನೀಡಿದ ಗೃಹಸಚಿವರು

ಬೆಂಗಳೂರು,ಆ,26: ಮೈಸೂರಿನಲ್ಲಿ ವಿದ್ಯಾರ್ಥಿನಿ ನಡೆದ ಸಾಮೂಹಿಕ ಅತ್ಯಾಚಾರದ ಬಗ್ಗೆ ಕಾಂಗ್ರೆಸ್ ನೀಡಿದ ಹೇಳಿಕೆಗೆ ಗೃಹಸಚಿವ ಅರಗ ಜ್ಞಾನೇಂದ್ರ ಕಾಂಗ್ರೆಸ್ ನನ್ನ ರೇಪ್ ಮಾಡ್ತಿದೆ ಎಂದು ವಿವದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಕುರತಂತೆ ಕಾಂಗ್ರೆಸ್‌ನ ಅಧಿಕೃತ ಟ್ವಿಟರ್‌ ಖಾತೆಯಿಂದ ಗುರುವಾರ ಟ್ವೀಟ್‌ ಮಾಡಿದ್ದು ‘ಕಾಂಗ್ರೆಸ್‌ನವರು ನನ್ನನ್ನು ರೇಪ್ ಮಾಡುತ್ತಿದ್ದಾರೆ’ ಎಂಬ ಗೃಹಸಚಿವರ ಹೇಳಿಕೆ ಅವರ ಅಸಹಾಯಕತೆ, ಅದಕ್ಷತೆ, ಅಯೋಗ್ಯತನ ಹಾಗೂ ವೈಫಲ್ಯವನ್ನು ಒಪ್ಪಿಕೊಂಡಂತಿದೆ ಎಂದು ಟೀಕಿಸಲಾಗಿದೆ. ಮಂತ್ರಿ ಸ್ಥಾನ ಪಡೆಯಲು ಲಾಭಿ ನಡೆಸುವುದಷ್ಟೇ ಅಲ್ಲ, ಪಡೆದ ಖಾತೆಯನ್ನು ಸಮರ್ಥವಾಗಿ…

ಬಾಕಿ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಆದ್ಯತೆ: ಬೊಮ್ಮಾಯಿ

ನವದೆಹಲಿ, ಆ, 26: ಸರ್ವೋಚ್ಛ ನ್ಯಾಯಾಲಯದಲ್ಲಿ ಸುದೀರ್ಘ ಕಾಲದಿಂದ ಬಾಕಿ ಉಳಿದಿರುವ ಜಲ ವಿವಾದಗಳಿಗೆ ಸಂಬಂಧಿಸಿದ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ರಾಜ್ಯ ಸರ್ಕಾರ ಎಲ್ಲ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಇಂದು ಬೆಳಿಗ್ಗೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕಾನೂನು ಮತ್ತು ತಾಂತ್ರಿಕ ತಜ್ಞರೊಂದಿಗೆ ಸುದೀರ್ಘ ಚರ್ಚೆ ನಡೆದಿದ್ದು, ಕೃಷ್ಣಾ ಮೇಲ್ದಂಡೆ ಯೋಜನೆ ಹಾಗೂ ತಮಿಳುನಾಡು ಸರ್ಕಾರ ಕೈಗೆತ್ತಿಕೊಂಡಿರುವ ಯೋಜನೆಗಳ ಕುರಿತು ಸರ್ವೋಚ್ಚ ನ್ಯಾಯಾಲಯಕ್ಕೆ…

ಜಿ.ಎಸ್.ಟಿ. ಪರಿಹಾರ  ಹಾಗೂ 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆಗೆ ಮನವಿ

ಬೆಂಗಳೂರು, ಆ, 26: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಕೇಂದ್ರ ಸರ್ಕಾರದಿಂದ ಜಿ.ಎಸ್.ಟಿ. ಪರಿಹಾರವನ್ನು ಇನ್ನೂ ಮೂರು ವರ್ಷಗಳಿಗೆ ಮುಂದುವರೆಸುವಂತೆ ಹಾಗೂ 15ನೇ ಹಣಕಾಸು ಆಯೋಗದ ಅನುದಾನ ಹಂಚಿಕೆ ಹೆಚ್ಚಿಸುವಂತೆ ಮನವಿ ಮಾಡಿದರು. ಕೋವಿಡ್ ಸಾಂಕ್ರಾಮಿಕ ದಿಂದಾಗಿ ರಾಜ್ಯಗಳ ತೆರಿಗೆ ಸಂಗ್ರಹ ಕಡಿಮೆಯಾಗಿದ್ದು, ಸಾಮಾನ್ಯ ಸ್ಥಿತಿಗೆ ಬರಲು ಕೆಲವು ವರ್ಷಗಳೇ ಬೇಕಾಗಬಹುದು. ಕಳೆದ ವರ್ಷ ಜಿ ಎಸ್ ಟಿ ಪರಿಹಾರ ಸಾಲ ಒದಗಿಸಲಾಗಿತ್ತು. ಈ ವರ್ಷವೂ…

1-8ನೇ ತರಗತಿ ಆರಂಭಕ್ಕೆ ಶೀಘ್ರ ತೀರ್ಮಾನ

ಬೆಂಗಳೂರು ,ಆ,23: ರಾಜ್ಯದಲ್ಲಿ ಇಂದಿನಿಂದ 9,10 ಮತ್ತು ಪಿಯುಸಿ ಭೌತಿಕ ತರಗತಿಗಳು ಆರಂಭವಾಗಿದ್ದು, 1-8 ನೇ ತರಗತಿ ಆರಂಭಿಸುವ ಬಗ್ಗೆಯೂ ತಜ್ಞರ ಸಲಹೆ ಕೇಳಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದಿನಿಂದ 9-12 ನೇ ತರಗತಿಗಳು ಆರಂಭದ ಹಿನ್ನೆಲೆಯಲ್ಲಿ ಮಲ್ಲೇಶ್ವರಂನ ಪದವಿ ಪೂರ್ವ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಕೊವಿಡ್ ಕಡಿಮೆಯಾದರೆ ಗಡಿ ಜಿಲ್ಲೆಗಳಲ್ಲೂ ಶಾಲೆ ಆರಂಭಿಸಲಾಗುವುದು. 1-8 ನೇ ತರಗತಿ ಆರಂಭಿಸುವ ಬಗ್ಗೆಯೂ ತಜ್ಞರ ಸಲೆಹ ಕೇಳಿದ್ದೇವೆ. ಅವರ…

ಇಂದಿನಿಂದ ಶಾಲಾ- ಕಾಲೇಜು ಆರಂಭ

ಬೆಂಗಳೂರು,ಆ23: ರಾಜ್ಯದಲ್ಲಿ ಕೋವಿಡ್ ದೃಢ ಪ್ರಮಾಣ ಶೇ 2ಕ್ಕಿಂತ ಹೆಚ್ಚಿರುವ ಐದು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ 9 ರಿಂದ 12 ರವರೆಗಿನ ಭೌತಿಕ ತರಗತಿಗಳು ಇಂದಿನಿಂದ ಆರಂಭವಾಗಲಿವೆ. ಶಾಲಾ–ಕಾಲೇಜುಗಳಲ್ಲಿ ಭೌತಿಕ ತರಗತಿಗಳ ಆರಂಭಕ್ಕೆ ಜಿಲ್ಲಾ ಆಡಳಿತಗಳು ಸಕಲ ತಯಾರಿ ನಡೆಸಿವೆ. ಈ ಕುರಿತು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ‘ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಕೋವಿಡ್‌ ದೃಢ ಪ್ರಮಾಣ ಶೇ 2ಕ್ಕಿಂತಲೂ ಹೆಚ್ಚು ಇದೆ. ಈ…

ಆಲಮಟ್ಟಿ ಡ್ಯಾಂಗೆ ಸಿಎಂ ಬೊಮ್ಮಾಯಿ ಅವರಿಂದ ಬಾಗಿನ

ಆಲಮಟ್ಟಿ,ಆ,21:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಉತ್ತರ ಕರ್ನಾಟಕದ ಜೀವ ನದಿ ಎನಿಸಿರುವ ಕೃಷ್ಣಾ ನದಿಗೆ ಸಾಂಪ್ರದಾಯಿಕವಾಗಿ ಬಾಗಿನ ಅರ್ಪಿಸಿದರು. ಆಲಮಟ್ಟಿಲಾಲಬಹಾದ್ದೂರ ಶಾಸ್ತ್ರಿ ಜಲಾಶಯಕ್ಕೆ ಭೇಟಿ ನೀಡಿ ಕೃಷ್ಣಾ ನದಿಗೆ ಬಾಗಿನ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು. ಸಚಿವರಾದ ಗೋವಿಂದ ಕಾರಜೋಳ, ಮುರುಗೇಶ್ ನಿರಾಣಿ, ಉಮೇಶ ಕತ್ತಿ, ಶಶಿಕಲಾ ಜೊಲ್ಲೆ, ಸಂಸದ ಪಿ.ಸಿ. ಗದ್ದಿಗೌಡರ,ಶಾಸಕ ವೀರಣ್ಣ ಚರಂತಿಮಠ, ಶಾಸಕರಾದ ದೊಡ್ಡನಗೌಡ ಪಾಟೀಲ್, ಬಸನಗೌಡ ಪಾಟೀಲ ಯತ್ನಾಳ, ಯಶವಂತರಾಯಗೌಡ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರ, ಅರುಣ ಶಾಹಪೂರ, ಶಿವಾನಂದ…

21 ರಂದು ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲಿರುವ ಸಿಎಂ

ಆಲಮಟ್ಟಿ; ಆ.೨೧ರಂದು ತುಂಬಿದ ಕೃಷ್ಣೆಯ ಜಲನಿ ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಲಮಟ್ಟಿಜಲಾಶಯಕ್ಕೆ ಗಂಗಾಪೂಜೆ, ಬಾಗಿನ ಅರ್ಪಿಸಿದ ನಂತರ ಪ್ರವಾಹಮತ್ತು ಕೋವಿಡ್ ಕುರಿತು ಸಭೆ ನಡೆಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಸುನಿಲಕುಮಾರ ಹೇಳಿದರು. ಶುಕ್ರವಾರ ಆಲಮಟ್ಟಿ ಜಲಾಶಯದ ಹಿಂಭಾಗದ ಬಾಗೀನ ಅರ್ಪಿಸುವಸ್ಥಳ ಹಾಗೂ ಹೆಲಿಪ್ಯಾಡಗೆ ಭೇಟಿ ನೀಡಿ ಅವರು ಮಾತನಾಡಿದರು. ಹೆಲಿಕಾಪ್ಟರ್ ಮೂಲಕ ಆಗಮಿಸುವ ಮುಖ್ಯಮಂತ್ರಿಯವರು ಹೆಲಿಪ್ಯಾಡ್‌ನಿಂದ ನೇರವಾಗಿ ಪ್ರವಾಸಿ ಮಂದಿರಕ್ಕೆ ಆಗಮಿಸುವರು, ಅವರೊಂದಿಗೆ ಸಚಿವರುಗಳು ಇರಲಿದ್ದು, ನಂತರ ಜಲಾಶಯಕ್ಕೆತೆರಳಿ ಬಾಗಿನ ಅರ್ಪಿಸುವರು. ಅವಳಿ ಜಿಲ್ಲೆಯ…

ದೇವಸ್ಥಾನಗಳ ಸ್ವಚ್ಛತೆ, ಮೂಲ ಸೌಕರ್ಯಕ್ಕೆ ಆದ್ಯತೆ: ಜೊಲ್ಲೆ

ಬೆಂಗಳೂರು,ಆ,19: ರಾಜ್ಯದ ವಕ್ಫ್ ಆಸ್ತಿ ಕಬಳಿಕೆ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಗುರುವಾರ ವಿಕಾಸಸೌಧದಲ್ಲಿ ವಕ್ಫ್ ಮತ್ತು ಹಜ್ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮುಜರಾಯಿ ಹಾಗೂ ಹಜ್ ಮತ್ತು ವಕ್ಫ್ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ್ದೇನೆ. ರಾಜ್ಯದಲ್ಲಿ ವಕ್ಫ್ 105885 ಎಕರೆ ಜಮೀನು ಗುರುತಿಸಲಾಗಿದೆ. ರಾಜ್ಯದಲ್ಲಿ 32192 ವಕ್ಫ್ ಆಸ್ತಿ ನೊಂದಣಿಯಾಗಿದೆ. 8480 ಎಕರೆ ಒತ್ತುವರಿಯಾಗಿರುವ…

ಮಾತೃಭಾಷೆಯ ಮಹತ್ವವನ್ನು ಅರಿತ ಸಮುದಾಯ ಶ್ರೀಮಂತವಾಗಿ ಬೆಳೆಯುತ್ತದೆ: ಬೊಮ್ಮಾಯಿ

ಬೆಂಗಳೂರು, ಆ, 18: ಮಾತೃಭಾಷೆಯ ಮಹತ್ವವನ್ನು ಅರಿತ ಸಮುದಾಯ ಬಹಳ ಶ್ರೀಮಂತವಾಗಿ ಬೆಳೆಯುತ್ತದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯ ಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಆಯೋಜಿಸಿದ್ದ 2019- 20 ನೇ ಸಾಲಿನ ವಿವಿಧ ರಾಜ್ಯ ಪ್ರಶಸ್ತಿ ಹಾಗೂ ಬಸವ ರಾಷ್ಟ್ರೀಯ ಪ್ರಶಸ್ತಿ ಯನ್ನು ಪ್ರದಾನ ಮಾಡಿ ಅವರು ಮಾತನಾಡುತ್ತಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಾನವೀಯ ಮತ್ತು ಮಾತೃ ಮೌಲ್ಯಗಳ ಆಧಾರದ ಮೇಲೆ ಕಾರ್ಯನಿರ್ವಹಿಸಬೇಕು ಎಂದ ಮುಖ್ಯಮಂತ್ರಿಗಳು…

ಅಸಾಧ್ಯವನ್ನು ಸಾಧಿಸಿತೋರಿಸಿದಚನ್ನಯ್ಯ-ರೂಪಕಲಾ

ಶಿಕಾರಿಪುರ,ಆ,೧೮:ಮಂದಹಾಸ ದ ನಗುವ ಬೀರುವ ಸಂಸ್ಕಾರ ಅರಿತ ವ್ಯಕ್ತಿ ಮೀರಿದ ವ್ಯಕ್ತಿತ್ವದ ಪರಿಚಯದ ಶಿಕ್ಷಣದಿಂದ ಶಿಕ್ಷಕ ವೃತ್ತಿ ಅರಿತ ಚನ್ನಯ್ಯ ಸಾವು ಅನಿರೀಕ್ಷಿತ ನಾವು ಈ ಜ್ಞಾನ ದೇಗುಲದ ದೇವರನ್ನೇ ಕಳೆದು ಕೊಂಡಂತಾಗಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷೆ ಹಾಲಿ ಸದಸ್ಯೆ ರೂಪಕಲಾ ಹೆಗ್ಗಡೆ ಅಭಿಪ್ರಾಯಪಟ್ಟರು. ನಗರದ ಶ್ರಿ ಚನ್ನಮಲ್ಲಿಕಾರ್ಜುನ ಶಾಲೆಯಲ್ಲಿ ನೆಡೆದ ದಿ.ಚನ್ನಯ್ಯ ನವರ ಪುಣ್ಯ ಸ್ಮರಣೆ ನುಡಿ ನಮನ ವಿದ್ಯಾ ನಾವಿಕಾನಿಗೊಂದು ನಮನ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು . ಸ್ಥಿತಿವಂತರು .ಶಿಪಾರಸ್ಸು ಜನರು…

ಪೆಟ್ರೋಲ್ ಮೇಲಿನ ತೆರಿಗೆ ಕಡಿತ ಇಲ್ಲ-ಸಿಎಂ

ಬೆಂಗಳೂರು,ಆ,೧೮: ‘ರಾಜ್ಯದಲ್ಲಿ ಪೆಟ್ರೋಲ್ ಮೇಲಿನ ತೆರಿಗೆ ಕಡಿತ ಪ್ರಸ್ತಾಪ ಇಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ತಮಿಳುನಾಡಿನಲ್ಲಿ ಅಲ್ಲಿನ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ಮೇಲೆ ೩ ತೆರಿಗೆ ಕಡಿತ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಕಡಿತ ಮಾಡುವ ಚಿಂತನೆ ಇಲ್ಲ ಎಂದರು. ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಕೋವಿಡ್ ತಪಾಸಣೆಯ ನೆಗೆಟಿವ್ ವರದಿ ಕೊಡುತ್ತಿರುವುದು ನಮ್ಮ ಗಮನಕ್ಕೂ ಬಂದಿದೆ. ಬಸ್ ನಿಲ್ದಾಣ, ರೈಲು ನಿಲ್ದಾಣ ಮುಂತಾದ ಕಡೆ ಕೋವಿಡ್ ಪರೀಕ್ಷೆಯಲ್ಲಿ ದಂಧೆ…

ಪರಮಹಂಸದಂತೆ ಎತ್ತರಕ್ಕೆ ಏರಿ;ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ

ಬೆಂಗಳೂರು, ಆ, 16:ಡಾ: ರಾಜ್ ಕುಮಾರ್ ಲರ್ನಿಂಗ್ ಆ್ಯಪ್ ಮೂಲಕ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು ಸರಸ್ವತಿಯ ಪಾವಿತ್ರ್ಯತೆಯನ್ನು ಹೊಂದಿ ಪರಮಹಂಸದಂತೆ ಬಹಳ ಎತ್ತರಕ್ಕೆ ಏರಬಹುದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟರು. ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ರೂಪಿಸಲಾಗಿರುವ ಡಾ. ರಾಜ್ ಕುಮಾರ್ ಶೈಕ್ಷಣಿಕ ಆ್ಯಪ್ ನ್ನು ಇಂದು ಅವರು ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. 21 ನೇ ಶತಮಾನ ಜ್ಞಾನವಂತರಿಗೆ ಸೇರಿದ್ದು. ಜ್ಞಾನಕ್ಕೆ ಬೆಲೆ ಹಾಗೂ ಬಲ ಬಂದಿದೆ. ಜ್ಞಾನದ ಕ್ಷೇತ್ರಕ್ಕೆ ಡಾ:ರಾಜ್ ಕುಮಾರ್ ಅವರ ಆಪ್ ದೊಡ್ಡ ಕೊಡುಗೆ…

23ರಿಂದ 8 ರಿಂದ 11ನೇ ಶಾಲೆಗಳ ಆರಂಭಕ್ಕೆ ಸರ್ಕಾರ ನಿರ್ಧಾರ

ಬೆಂಗಳೂರು,ಆ,16: ಇದೇ ತಿಂಗಳ 23ರಿಂದ ಶಾಲಾ-ಕಾಲೇಜುಗಳನ್ನು ಆರಂಭ ಮಾಡಲು ಸರಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳ ಜತೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಬಿ.ಸಿ.ನಾಗೇಶ್‌ ಅವರು; 8ರಿಂದ 11ನೇ ತರಗತಿಗಳ ಭೌತಿಕ ಪಾಠಗಳನ್ನು ಆರಂಭ ಮಾಡಲು ನಿರ್ಧರಿಸಲಾಗಿದ್ದು, ಮಕ್ಕಳನ್ನು ಶಾಲೆಗೆ ಕಳಿಸುವಂತೆ ಪೋಷಕರನ್ನು ಕೋರಿದರು. ರಾಜ್ಯದಲ್ಲಿ ಒಂದನೇ ತರಗತಿಯಿಂದಲೇ ಶಾಲೆ ಆರಂಭಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ಅಗಸ್ಟ್ 30 ರಂದು ತಜ್ಞರ ಸಲಹಾ ಸಮಿತಿ ಜತೆ ಚರ್ಚೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು…

ದೇಶಭಕ್ತಿ ಸಾರಿದ ಸಿದ್ಧಾರೂಢರು

ಬೆಂಗಳೂರು, ಆ,16″ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಸಿದ್ಧಾರೂಢರ ಪಾತ್ರ ಅವಿಸ್ಮರಣೀಯ” ಎಂದು ರಾಮೋಹಳ್ಳಿಯ ಶ್ರೀ ಸಿದ್ಧಾರೂಢ ಮಿಷನ್ ಆಶ್ರಮದ ಅಧ್ಯಕ್ಷ ಡಾ ಆರೂಢಭಾರತೀ ಸ್ವಾಮೀಜಿ ಹೇಳಿದರು. ರಾಮೋಹಳ್ಳಿಯ ತಮ್ಮ ಆಶ್ರಮದಲ್ಲಿ ನಡೆದ 75 ನೇ ವರ್ಷದ ಸ್ವಾತಂತ್ರ್ಯ ಸಂಭ್ರಮಾಚರಣೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. 1904 ರಲ್ಲಿ ಲೋಕಮಾನ್ಯ ಬಾಲಗಂಗಾಧರ ತಿಲಕರ ಸಮ್ಮುಖದಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಸ್ವಾತಂತ್ರ್ಯ ಹೋರಾಟಗಾರರ ಮಹಾ ಅಧಿವೇಶನದಲ್ಲಿ ಸಿದ್ಧಾರೂಢರು ಅಧ್ಯಕ್ಷರಾಗಿದ್ದರು. “ಜನನೀ ಜನ್ಮಭೂಮಿ ಸ್ವರ್ಗಕ್ಕಿಂತ ಶ್ರೇಷ್ಠ. ದೇಶವಿದ್ದರೆ ನಾವು ನೀವು ಧರ್ಮ ಭಾಷೆ ಮತ್ತೊಂದು. ನೆಲೆಯಿಲ್ಲದ…

ಕನಕಶ್ರೀ ಗಳಿಗೆ ಪಿತೃ ವಿಯೋಗ

ಚಿತ್ರದುರ್ಗ, ಆ,15:ಕಾಗಿನೆಲೆ ಕನಕ ಗುರುಪೀಠದ ಶ್ರೀ ಸಿದ್ದರಾಮಾನಂದ ಮಹಾ ಸ್ವಾಮೀಜಿ ಅವರ ಪೂರ್ವಾಶ್ರಮದ ಪಿತೃಗಳಾದ ಪೂಜ್ಯ ಕಲಮರಹಳ್ಳಿ ಮಹಾದೇವಪ್ಪ ನವರು ಶಿವೈಕ್ಯರಾದರು. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕಲಮರಹಳ್ಳಿ ಗ್ರಾಮದಲ್ಲಿ ನೆಲೆಸಿದ್ದ ಮಹಾದೇವಪ್ಪ ಅವರು ಹೃದಯಾಘಾತದಿಂದ ಭಾನುವಾರ ಶಿವೈಕ್ಯರಾಗಿದ್ದು ಪತ್ನಿ ಜಯಮ್ಮ, ಮಕ್ಕಳಾದ ಶ್ರೀಧರ್, ಪ್ರದೀಪಕುಮಾರ್, ರೂಪ ಅವರನ್ನು ಹಾಗೂ ತಂಗಿ, ತಮ್ಮ, ಅಣ್ಣ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.ಮೃತರ ಅಂತ್ಯ ಸಂಸ್ಕಾರ ಸ್ವಗ್ರಾಮ ಕಲಮರಹಳ್ಳಿಯಲ್ಲಿ ಸೋಮವಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಶ್ರೀ…

ಸ್ವಾತಂತ್ರ್ಯೋತ್ಸವದಲ್ಲಿ ನಾಡಿನ ಜನತೆಗೆ ಬಂಬರ್ ಕೊಡುಗೆ ಘೋಷಿಸಿದ ಸಿಎಂ

ಬೆಂಗಳೂರು, ಆ. ೧೫: ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ನಿರೀಕ್ಷೆಗೂ ಮೀರಿ ಹೊಸ ಯೋಜನೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೊಷಣೆ ಮಾಡಿದ್ದಾರೆ. ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಭಾನುವಾರ ದೇಶದ ೭೫ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದರು. ನಂತರ ನಾಡಿನ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಮೊದಲ ಬಾರಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ಮಾಡಿದರು. ಈ ವೇಳೆ ಹನ್ನೊಂದು ಹೊಸ ಯೋಜನೆಗಳನ್ನು ಸಿಎಂ…

ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 , ಪಿಯುಸಿ ತರಗತಿ ಪ್ರಾರಂಭ

ಬೆಂಗಳೂರು, ಆ, 14:ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ 9, 10 , ಪಿಯುಸಿ ತರಗತಿ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಶೇ. 2ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇರುವ ಜಿಲ್ಲೆಗಳಲ್ಲಿ ಹಾಗೂ ಗಡಿ ಭಾಗದ ತಾಲ್ಲೂಕಿನಲ್ಲಿ ಪರಿಸ್ಥಿತಿ ಅವಲೋಕಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಶಾಲೆಗಳಲ್ಲಿ ಶೇ. 2ಕ್ಕಿಂತ ಹೆಚ್ಚು ಪ್ರಕರಣ ವರದಿಯಾದರೆ,…

ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಇಡೀ ವರ್ಷ ಆಚರಿಸೋಣ :ಸಿಎಂ

ಬೆಂಗಳೂರು, ಆ,14 : ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಇಡೀ ವರ್ಷ ಆಚರಿಸೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಜನತೆಗೆ ಕರೆ ನೀಡಿದರು. ನಗರದ ವಿಧಾನಸೌಧದ ವೈಭವೋಪೇತ ಮೆಟ್ಟಿಲುಗಳ ಮೇಲೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು, ಸ್ವಾತಂತ್ರ್ಯ ನನ್ನ ಆ ಜನ್ಮ ಸಿದ್ಧ ಹಕ್ಕು ಎಂಬ ಗೋಪಾಲ ಕೃಷ್ಣ ಗೋಖಲೆಯವರ ವೀರೋಚಿತ…

ರಾಜ್ಯದ ಮುನ್ನಡೆಯ ಬಗ್ಗೆ ಸರ್ಕಾರದ ಚಿಂತನೆ: ಬೊಮ್ಮಾಯಿ

ಬೆಂಗಳೂರು, ಆ, 14:”75ನೇ ಸ್ವಾತಂತ್ರ್ಯೋತ್ಸವ ಆಚರಿಸುವ ಸೌಭಾಗ್ಯ ಒದಗಿಬಂದಿದೆ. ಕನ್ನಡ ನಾಡು, ನುಡಿ, ಸಾಹಿತ್ಯ, ಆಡಳಿತ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ದೇಶದಲ್ಲೇ ಮಾದರಿಯಾಗಿದೆ. 75 ವರ್ಷ ನಡೆದು ಬಂದ ದಾರಿ, ಇನ್ನೂ ನಡೆಯಬೇಕಾದ ದಾರಿಯ ಬಗ್ಗೆ ಚಿಂತನೆ ಮಾಡಬೇಕಿದೆ. ನಮ್ಮ ಸರ್ಕಾರ ಕೂಡ ಅದೇ ದಿಕ್ಕಿನಲ್ಲಿ ಚಿಂತನೆ ಮಾಡುತ್ತಿದೆ”- ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು “ಕೋವಿಡ್ ಮಾರ್ಗಸೂಚಿ ಪ್ರಕಾರ, ಅಂತರ ಕಾಪಾಡಿಕೊಂಡು ಸ್ವಾತಂತ್ರ್ಯ ದಿನ…

1 33 34 35 36 37 49
error: Content is protected !!