Browsing: ರಾಜ್ಯ

ರಾಜ್ಯ

ಖಾಸಗಿ ಶಿಕ್ಷಣ ಶಾಲೆಗಳ ಆರ್ ಟಿ ಇ ಹಣ ಬಿಡುಗಡೆ

ಬೆಂಗಳೂರು, ಜೂ,17: ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ) ಅಡಿಯಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ದಾಖಲಾದ ವಿದ್ಯಸರ್ಥಿಗಳ ಶುಲ್ಕವನ್ನು ಮರುಪಾವತಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ ಅನ್ಬುಕುಮಾರ್ ಅವರು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆ 2009ರ ಸೆಕ್ಷನ್ 12 (1) ಸಿ ಅಡಿಯಲ್ಲಿ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ 2012-13ನೇ ಸಾಲಿನಿಂದ ಶೇ.25ರಷ್ಟು ವಿದ್ಯಾರ್ಥಿಗಳಿಗೆ ಉಚಿತವಾಗಿ ಸೀಟು ಹಂಚಿಕೆ ಮಾಡಿ,…

ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಮತ್ತಷ್ಟು ಇಳಿಮುಖ

ಬೆಂಗಳೂರು,ಜೂ,೧೫:ಲಾಕ್‌ಡೌನ್ ಎಫೆಕ್ಟ್ ಮತ್ತು ಕೊರೊನಾ ನಿಯಂತ್ರಣಕ್ಕೆ ತಗೆದುಕೊಂಡಿರುವ ಕೆಲ ನಿರ್ಧಾರಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಇಳಿಮುಖ ಕಾಣುತ್ತಿದೆ. ಇದರ ಪರಿಣಾಮವಾಗಿ ಮಂಗಳವಾರ ೫,೦೪೧ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ ೨೭,೭೭,೦೧೦ಕ್ಕೆ ಏರಿಕೆಯಾಗಿದೆ. ಕಳೆದ ೨೪ ಗಂಟೆಯಲ್ಲಿ ಮಹಾಮಾರಿಗೆ ೧೧೫ ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ ೩೩,೧೪೮ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ೯೮೫ ಮಂದಿಗೆ ಸೋಂಕು ದೃಢಪಟ್ಟಿದ್ದು,…

ಖಾಸಗಿ ಶಾಲೆಗಳ ಶುಲ್ಕವನ್ನುಸರ್ಕಾರ ನಿರ್ಧರಿಸಬೇಕು-ಸಿಎಂಗೆ ಸಿದ್ದು ಪತ್ರ

ಬೆಂಗಳೂರು, ಜೂ.೧೫:ಶೈಕ್ಷಣಿಕ ವರ್ಷ ಆರಂಭವಾಗಿರುವ ಈ ಸಂದರ್ಭದಲ್ಲಿ ಖಾಸಗಿ ಶಾಲೆಗಳ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಅವರು, ಪೋಷಕರು ಪಾವತಿಸಬೇಕಾದ ರಿಯಾಯ್ತಿ ಶುಲ್ಕವನ್ನು ಸರ್ಕಾರವೇ ನಿರ್ಧರಿಸಬೇಕು ಮತ್ತು ಸರ್ಕಾರದ ನಿರ್ಧಾರ ಕಟ್ಟುನಿಟ್ಟಿನ ಜಾರಿ ಆಗುವಂತೆ ಕ್ರಮ ವಹಿಸಬೇಕು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ತಡೆ ಹಿಡಿದಿರುವ ಸಂಬಳ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಖಾಸಗಿ ಶಾಲಾ ಆಡಳಿತ ಮಂಡಳಿಗಳು ಬ್ಯಾಂಕ್ಗಳಿಗೆ ಪಾವತಿಸಬೇಕಾದ…

ಪಿಜಿಗಳಲ್ಲಿರುವ ವಿದ್ಯಾರ್ಥಿಗಳಿಗೆ ಮನೆಗೆ ತೆರಳುವಂತೆ ಬಿಬಿಎಂಪಿ ಸೂಚನೆ

ಬೆಂಗಳೂರು, ಜೂ, ೧೫:ನಗರದಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ಸಡಿಲಿಕೆ ಮಾಡುತ್ತಿರುವ ಸರ್ಕಾರ ಈ ವೇಳೆ ಪಿಜಿಯಲ್ಲಿರುವ ವಿದ್ಯಾರ್ಥಿಗಳಿಗೆ ಮನೆಗೆ ತೆರಳುವಂತೆ ಬಿಬಿಎಂಪಿ ಸೂಚಿಸಿದೆ. ಯಾವುದೇ ಕಾರಣಕ್ಕೂ ಪಿಜಿಯಲ್ಲಿ ಇರುವ ಅವಕಾಶ ನೀಡಬಾರದು ಎಲ್ಲರನ್ನೂ ಅವರವರ ಊರುಗಳಿಗೆ ಕಳಿಸಿಕೊಡಿ ಎಂದು ಪಿಜಿ ಮಾಲೀಕರಿಗೆ ಬಿಬಿಎಂಪಿ ನೊಟೀಸ್ ಜಾರಿಮಾಡಿದೆ. ಒಂದು ವೇಳೆ ಅನಿವಾರ್ಯ ಕಾರಣಗಳಿಗಿಂದಾಗಿ ವಿದ್ಯಾರ್ಥಿಗಳನ್ನು ಪಿಜಿಯಲ್ಲಿ ಉಳಿಸಿಕೊಂಡಲ್ಲಿ ಪಿಜಿಯಲ್ಲಿ ವೈಯಕ್ತಿಕ ಆರೋಗ್ಯ ಮತ್ತು ಸ್ವಚ್ಛತೆಯ ಜವಾಬ್ದಾರಿ ಅವರದ್ದೇ ಆಗಿರುತ್ತದೆ. ೧೧೦ ಚದುರ ಅಡಿಯ ಕೊಠಡಿಯಲ್ಲಿ ಇಬ್ಬರಿಗಿಂತ ಹೆಚ್ಚು ಜನರಿಗೆ…

ಹೊರಗಿನಿಂದ ಬರುವವರಿಗೆ ಕೋವಿಡ್ ಪರೀಕ್ಷೆಗೆ ಆದ್ಯತೆ: ಬಿಬಿಎಂಪಿ

ಬೆಂಗಳೂರು.ಜೂ,೧೪: ಹೊರಗಿನಿಂದ ನಗರಕ್ಕೆ ಆಗಮಿಸುತ್ತಿರುವವರ ಸಂಖ್ಯೆ ಹೆಚ್ಚಾಗುಯತ್ತಿರುವ ಕಾರಣ ಕೋವಿಡ್ ಮತ್ತಷ್ಟು ಹರಡುವ ಸಾಧ್ಯತೆಗಳಿರುವ ಕಾರಣ ಹೊರಗಿನಿಂದ ಬರುವವರನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಆರೋಗ್ಯಾಧಿಕಾರಿಗಳಿವೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಸೂಚಿಸಿದ್ದಾಋಎ ಎಂಪಿ ವ್ಯಾಪ್ತಿಯಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳ ಪರಿಣಾಮಕಾರಿ ಅನುಷ್ಠಾನದ ಕುರಿತು ವರ್ಚುವಲ್ ರೂಪದಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಸಾರ್ವಜನಿಕರು ಕೋವಿಡ್ ನಿಯಂತ್ರಣ ನಿಯಮಗಳನ್ನು ಪಾಲಿಸಿದರೆ, ಮಾತ್ರ ಈ ಸೋಂಕಿನ ವಿರುದ್ಧದ ಹೋರಾಟ ಯಶಸ್ಸು ಕಾಣಲು ಸಾಧ್ಯ. ಕೋವಿಡ್ ಪರೀಕ್ಷೆ, ಕಂಟೈನ್ಮೆಂಟ್…

ಕೊರೊನಾ ದಿಂದ ಸಾವನ್ನಪ್ಪಿದ ಕುಟುಂಬಕ್ಕೆ ೧ ಲಕ್ಷ ರೂ ಪರಿಹಾರ

ಬೆಂಗಳೂರು, ಜೂ, ೧೪; ಕೊರೊನಾ ಸೋಂಕಿನಿಂದ ಮೃತಪಟ್ಟ ಕುಟುಂಬದ ದುಡಿಯುವ ಒಬ್ಬ ವ್ಯಕ್ತಿಗೆ ಒಂದು ಲಕ್ಷರೂಗಳನ್ನು ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ ಮೂಲಕ ಕೊರೊನಾದಿಂದ ಸತ್ತವರ ಕುಟುಂಬಗಳಿಗೆ ೧ಲಕ್ಷ ರೂ ನೀಡುವ ಘೋಷಣೆ ಮಾಡಿದ ಮೊದಲ ಸರ್ಕಾರ ಎಂಬ ಹೆಗ್ಗಳಿಕೆಗೆ ರಾಜ್ಯ ಸರ್ಕಾರ ಪಾತ್ರವಾಗಿದೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ ಅವರು, “ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದಲ್ಲಿ ಕೋವಿಡ್‌ನಿಂದ ದುಡಿಯುವ ವ್ಯಕ್ತಿ ಮೃತಪಟ್ಟಿದ್ದರೆ ಒಬ್ಬರಿಗೆ ಪರಿಹಾರವನ್ನು ನೀಡಲಾಗುತ್ತದೆ. ಇದರಿಂದ ಒಟ್ಟು ೨೦…

ಅಗಲಿದ ಪತ್ರಕರ್ತರಿಗೆ ಕೆಯುಡಬ್ಲ್ಯೂಜೆ ಶ್ರದ್ಧಾಂಜಲಿ

ಬೆಂಗಳೂರು,ಜೂ,14:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದ ಕೇಂದ್ರ ಕಚೇರಿಯಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. kuwj ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಎಚ್.ಎಸ್.ದೊರೆಸ್ವಾಮಿ, ನಾಡಿನ ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯ, ಹಿರಿಯ ಪತ್ರಕರ್ತರಾದ ಸುರೇಶ್ ಚಂದ್ರ, ದವಡಬೆಟ್ಟ ನಾಗರಾಜ್, ದಾವಣಗೆರೆಯ ಹೆಚ್.ಎನ್.ಮುನೇಶ್ ರವರಿಗೂ, ರಾಷ್ಟ ಪ್ರಶಸ್ತಿ ವಿಜೇತರಾದಂತ ಚಲನ ಚಿತ್ರನಟರಾದ ಸಂಚಾರಿ ವಿಜಯ್, ಕೆ.ಸಿ.ಎನ್.ಚಂದ್ರು ಅವರಿಗೆ ಒಂದು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘದ…

ವೃತ್ತ,ಮೇಲ್ಸೇತುವೆಗೆ ಡಾ. ಸಿದ್ದಲಿಂಗಯ್ಯ ನಾಮಕರಣ ಮಾಡಲು ಸಿಎಂಗೆ ರಾಮುಲು ಮನವಿ

ಬೆಂಗಳೂರು. ಜೂ.೧೪: ಸಾಮಾಜಿಕ ಸಮಾನತೆಗಾಗಿ ಕಾವ್ಯ, ಸಾಹಿತ್ಯಗಳನ್ನು ರಚಿಸಿ ಪ್ರೇರಣೆ ನೀಡಿ, ಜನಮಾನಸದಲ್ಲಿರುವ ಖ್ಯಾತ ಲೇಖಕ, ಕವಿ ಡಾ. ಸಿದ್ದಲಿಂಗಯ್ಯ ಅವರ ಸ್ಮರಣಾರ್ಥ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಪ್ರತಿಷ್ಠಿತ ವೃತ್ತ ಅಥವಾ ಮೆಲ್ಸೇತೆಗೆ ಡಾ. ಸಿದ್ದಲಿಂಗಯ್ಯ ಅವರ ನಾಮಕರಣ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಮಾಜ ಕಲ್ಯಾಣ ಖಾತೆ ಸಚಿವ ಬಿ. ಶ್ರೀರಾಮುಲು ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಡಾ.ಸಿದ್ದಲಿಂಗಯ್ಯ ಅವರ ನಿಧನದಿಂದ ಸಾಹಿತ್ಯಕ್ಷೇತ್ರಕ್ಕೆ ಹಾಗೂ ಇಡೀ ರಾಜ್ಯಕ್ಕೆ ಭರಿಸಲಾರದ ನಷ್ಟ ಉಂಟಾಗಿದೆ.…

ನಾಳೆಯಿಂದ ಅನ್ ಲಾಕ್ ;ಜನರಿಗೆ ರಲೀಫ್

ಬೆಂಗಳೂರು,ಜೂ,13: ಕಳೆದ ಒಂದೂವರೆ ತಿಂಗಳಿಂದ ಲಾಕ್ ಡೌನ್ ನಿಂದ ಮನೆಯೊಳಗಿದ್ದ ಜನರಿಗೆ ರಿಲ್ಯಾಕ್ಷ ಸಿಗಲಿದೆ. ಹೌದು ನಾಳೆಯಿಂದ ಅನ್ ಲಾಕ್ ಆಗಲಿರುವ ಕೆಂಗೆಟ್ಟ ಜನರಿಗೆ ಅರ್ಧ ರಿಲೀಫ್ ಸಿಗಲಿದೆ.ನಾಳೆಯಿಂದ ಕೆಲ ಜಿಲ್ಲೆಗಳಿಗೆ ಲಾಕ್ಡೌನ್ನಿಂದ ಮುಕ್ತಿ ಕೊರೊನಾ ಕಡಿಮೆ ಮಾಡಲು ಕಳೆದೆರಡು ತಿಂಗಳಿಂದ ಜಾರಿಮಾಡಲಾಗಿರೋ ಲಾಕ್ಡೌನ್ಗೆ ನಾಳೆಯಿಂದ ಮೊದಲ ಹಂತದ ರಿಲೀಫ್ ಸಿಗಲಿದೆ. ಕೊರೊನಾ ಪಾಸಿಟಿವಿಟಿ ರೇಟ್ ಕಡಿಮೆಯಾಗಿರೋ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ 19 ಜಿಲ್ಲೆಗಳಲ್ಲಿ ಹಾಫ್ ಅನ್ಲಾಕ್ಗೆ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದರು, ಇದರನ್ವಯ ನಾಳೆ ಬೆಳಗ್ಗೆ…

ಶುಲ್ಕವಿವಾದ: ಸಚಿವರ ದ್ವಂದ್ವ ಹೇಳಿಕೆಗೆ ಪೋಷಕರ ಅಳಲು

ಬೆಂಗಳೂರು,೧೩:ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ಅಹಂಕಾರದ ಎಲ್ಲೆ ಮೀರಿದಂತೆ ಕಾಣುತ್ತಿದೆ ಅಥವಾ ಶಿಕ್ಷಣ ವ್ಯವಸ್ಥೆಯನ್ನೇ ಒಂದು ರೀತಿ ಕುಲಗೆಡುವ ವ್ಯವಸ್ಥಿತಿ ಸಂಚು ಎನ್ನುವಂತಿದೆ ಅವರ ನೀಡುವ ಪ್ರತಿ ಹೇಳಿಕೆಗಳು. ಹೌದು ಸುರೇಶ್ ಕುಮಾರ್ ಅವರ ಪ್ರತಿಬಾರಿಯ ಹೇಳಿಕೆಗಳು ಶಿಕ್ಷಣಕ್ಕೆ ಮಾದರಿಯಾಗುವ ಬದಲು ದ್ವಂದ್ವನಿಲುವುಗಳಾಗಿವೆ ಒಂದು ಬಾರಿ ಹೇಳಿದ ಹೇಳಿಕೆಗೂ ಇನ್ನೊಂದು ಬಾರಿ ನೀಡುವ ಹೇಳಿಕೆಗೂ ಗೊಂದಲಗಳು ಸೃಷ್ಟಿಯಾಗುತ್ತಿವೆ ಇದರಿಂದ ಸಾರ್ವಜನಿಕ ಶಿಕ್ಷಣಾಧಿಕಾರಿಗಳು ಕೂಡ ಒಂದು ರೀತಿ ಗರಬಡದವರಂತಾಗಿದ್ದಾರೆ. ರಾಜಧಾನಿಯ ಪ್ರತಿಷ್ಠಿತ ಶಾಲೆಗಳ ಶುಲ್ಕ ವಿಚಾರವಾಗಿ ಸಾರ್ವನಿಕರು…

ಮೈಸೂರು ಜಿಲ್ಲಾಧಿಕಾರಿಯಾಗಿ ಸಿಂಧೂರಿ ಮರುನೇಮಕಕ್ಕೆ ಸಹಿ ಅಭಿಯಾನ

ಮೈಸೂರು,ಜೂ.೧೨: ಮೈಸೂರು ಜಿಲ್ಲಾಧಿಕಾರಿಯಾಗಿ ಮರು ನೇಮಕ ಮಾಡಬೇಕು ಎನ್ನುವ ಆನ್‌ಲೈನ್ ಸಹಿಸಂಗ್ರಹಣೆ ನಡೆಯುತ್ತಿದೆ. ಹೌದು ಚೇಂಜ್ ಆರ್ಗ್ ಎಂಬ ಈ ಆನ್‌ಲೈನ್ ಬ್ರಿಂಗ್ ಬ್ಯಾಂಕ್ ರೋಹಿಣಿ ಎಂಬ ಸಹಿ ಸಂಗ್ರಹ ಅಭಿಯಾನ ಸಾಮಾಜಿಕ ಜಾಲಗಣಗಳಲಿ ಆರಂಭವಾಗಿದ್ದು ಸರಿ ಸುಮಾರು ೨೭೦೦೦ ಕ್ಕೂ ಹೆಚ್ಚು ಮಂದಿ ಸಹಿ ಮಾಡಿದ್ದಾರೆ. ರೋಹಿಣಿ ಸಿಂಧೂರಿಯವರು ಖಡಕ್ ಅಧಿಕಾರಿಯಾಗಿದ್ದು, ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿ ಜನ ಮೆಚ್ಚುಗೆ ಗಳಿಸಿದ್ದಾರೆ. ಅದಕ್ಕಾಗಿ ಅವರು ಸಾಕಷ್ಟು ಅಭಿಮಾನಿಗಳನ್ನು ಗಳಿಸಿಕೊಂಡಿದ್ದಾರೆ. ಇದೀಗ ಅವರನ್ನು ವರ್ಗಾವಣೆ ಮಾಡಿರುವುದು ಅವರ…

ಬಿಎಸ್‌ವೈ ನಾಯಕತ್ವ ಬದಲಾವಣೆ ವಿಚಾರ ಎತ್ತಬೇಡಿ-ಕಲ್ಮಠಸ್ವಾಮೀಜಿ ಎಚ್ಚರಿಕೆ!

ಶಿವಮೊಗ್ಗ,ಜೂ,೧೨:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಕುರಿತಂತೆ ಯಾರು ಮಾತನಾಡಬಾರದು ಒಂದು ವೇಳೆ ಅಂತ ಕೇಸಲ ಮಾಡಿದರೆ ತಮ್ಮ ಮೇಲೆ ಕಲ್ಲು ಎತ್ತಿ ಹಕಿಕೊಂಡಂತೆ ಎಂದು ಬೆಕ್ಕಿನ ಕಲ್ಮಠದ ಮುರುಘಾ ರಾಜೇಂದ್ರ ಸ್ವಾಮೀಜಿ ಎಚ್ಚರಿಸಿದ್ದಾರೆ. ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ ಶ್ರೀಗಳ ಆರ್ಶೀವಾದ ಪಡೆದ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಗಳು ಯಡಿಯೂರಪ್ಪ ಉತ್ತಮ ಆಡಳಿತಗಾರ, ಹೋರಾಟದ ಹಿನ್ನೆಲೆಯಿಂದ ಬಂದವರು ಜನಪರ ಕೆಲಸ ನಿರ್ವಹಿಸುವ ಸಂದರ್ಭದಲ್ಲಿ ಈ ರೀತಿ ಹೇಳಿಕೆಗಳು ನೀಡುವ…

ಸಕಲ ಸರ್ಕಾರಿ ಗೌರವಗಳೊಂದಿಗೆ ಸಿದ್ದಲಿಂಗಯ್ಯ ಅಂತ್ಯಕ್ರಿಯೆ

ಬೆಂಗಳೂರು,ಜೂ,೧೨: ನಿನ್ನೆ ನಿಧನರಾದ ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಿತು. ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದ ಕಲಾ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು.ಇದಕ್ಕೂ ಮುನ್ನ ಸಾರ್ವಜಿನಕರ ದರ್ಶನಕ್ಕೆ ಕೆಲ ಕಾಲ ಅವಕಾಶ ಮಾಡಿಕೊಡಲಾಗಿತ್ತು.ಅಂತ್ಯಕ್ರಿಯೆ ವೇಳೆ ಆರ್ ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ, ಚೀಫ್ ಕಮಿಷನರ್ ಗೌರವ್ ಗುಪ್ತಾ, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಮತ್ತಿತರ ಗಣ್ಯರು ಭಾಗಿಯಾಗಿದ್ದರು. ಕೊರೊನಾ ಸೋಂಕಿಗೆ ತುತ್ತಾಗಿ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿದ್ದಲಿಂಗಯ್ಯ ಅವರು ಶುಕ್ರವಾರ…

ಶಿಕಾರಿಪುರ:ತೈಲಬೆಲೆ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ

ಶಿಕಾರಿಪುರ,ಜೂ,೧೨: ತೈಲಬೆಲೆ ಏರಿಕೆ ಖಂಡಿಸಿ ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಿತು. ಕೇಂದ್ರ ಸರ್ಕಾರದ ಬೆಲೆ ಏರಿಕೆ ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆಯನ್ನು ಖಂಡಿಸಿ ನಡೆಸಿದ ಈ ಬೃಹತ್ ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಣಿ ಮಾಲತೇಶ್,ಉಪಾಧ್ಯಕ್ಷ ಎಂ.ಅರುಣ್ ಕುಮಾರ್,ಜಿಲ್ಲಾ ಕಾರ್ಯದರ್ಶಿ ಬಂಡಾರಿ ಮಾಲತೇಶ್ ಪುರಸಭೆ ಸದಸ್ಯ ಗೋಣಿ ಪ್ರಕಾಶ್ ಖಚಾಂಜಿ ಮಂಜುನಾಥ್ ರಆವ್ ಸೇರಿದಂತೆ ವಿವಿಧ ಪದಾಧಿಕಾರಿಗಳು ಕಾರ್ಯಕರ್ತರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿಜೆಪಿ ಸರ್ಕಾರ ನಿರಂತರವಾಗಿ…

ಜೂನ್ 1 ರಿಂದ ಶೈಕ್ಷಣಿಕ ವರ್ಷ ಆರಂಭ; ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು,ಜೂ,12: ಈ ಬಾರಿಯ ಶೈಕ್ಷಣಿಕ ವರ್ಷ ಜುಲೈ 1 ರಿಂದ ಆರಂಭವಾಗಲಿದ್ದು,ಹೊಸ ಶೈಕ್ಷಣಿಕ ವರ್ಷದ ಮಾರ್ಗಸೂಚಿಗಳನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಕಳೆದ ವರ್ಷದಂತೆ ಈ ವರ್ಷವೂ ದೂರದರ್ಶನ ಚಂದನ ವಾಹಿನಿಯಲ್ಲಿ ಸಂವೇದನಾ ಕಾರ್ಯಕ್ರಮದ ಮೂಲಕ 1662 ವಿಡಿಯೋ ಪಾಠ ಬೋಧನಾ ನಡೆಯಲಿದೆ. ಎಫ್ಎಂ ರೇಡಿಯೋದಲ್ಲಿ ಆಡಿಯೋ ಪಾಠಗಳ ಪ್ರಸಾರ ನಡೆಯಲಿದೆ. ಕೇಂದ್ರ ಸರ್ಕಾರದ ದೀಕ್ಷಾ ಆ್ಯಪ್ ನಲ್ಲಿ 1 ರಿಂದ 10ನೇ ತರಗತಿ ಮಕ್ಕಳ ಪಠ್ಯಕ್ಕೆ ಸಂಬಂಧಿಸಿದ 22 ಸಾವಿರಕ್ಕೂ ಹೆಚ್ಚು ಕಂಟೆಂಟ್ ಗಳನ್ನು…

ದಲಿತ ಕವಿ ಸಿದ್ದಲಿಂಗಯ್ಯ ಇನ್ನಿಲ್ಲ

ಬೆಂಗಳೂರು,ಜೂ,11:ಕಳೆದ ಹಲವು ದಿನಗಳಿಂದ ಕೊರೊನಾ ಸೋಂಕಿನಿಂದ ನರಳುತ್ತಿದ್ದ ಡಾ.ಸಿದ್ದಲಿಂಗಯ್ಯ ಕೊನೆಯಿಸಿರೆಳದಿದ್ದಾರೆ. ಕೊರೊನಾ ಸೋಂಕು ದೃಡ ಪಟ್ಟ ನಂತರ ಅವರಿಗೆ ಬೆಡ್ ಸಿಗದೆ ಆಸ್ಪತ್ರೆ ಗಳಿಗೆ ಅಲೆದಾಡಿದ್ದರು.ಕಳೆದ ಹಲವು ದಿನಗಳಿಂದ ಖಾಸಗಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ನಿಧನ ಹೊಂದಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿದ್ದು ಅವರು ಸಾವಿರಾರು ಸಾಹಿತ್ಯಾಭಿಮಾನಿಗಳನ್ನು ಹೊಂದಿದ್ದರು. ಕವಿ ಸಿದ್ಧಲಿಂಗಯ್ಯನವರು ಬಡ ಕುಟುಂಬವೊಂದರಲ್ಲಿ  ದೇವಯ್ಯ ಮತ್ತು ವೆಂಕಟಮ್ಮನವರ ಪುತ್ರರಾಗಿ 1954 ರ ಫೆಬ್ರವರಿ 3 ರಂದು ರಾಮನಗರ…

ಇನ್ನೊ 3-4 ದಿನ ಸಹಕರಿಸಿ ,ಜನತೆಗೆ ಬೊಮ್ಮಾಯಿ ಮನವಿ

ಬೆಂಗಳೂರು,ಜೂ,11:ಕೋವಿಡ್ ನಿಯಂತ್ರಣಕ್ಕೆ ಬರುತ್ತಿರುವ ಈ ಸಂದರ್ಭದಲ್ಲಿ ಇನ್ನೊಂದು 3-4 ದಿನ ಮನೆಯಲ್ಲಿಯೇ ಇದ್ದು ಸಹಕಾರ ನೀಡಿ. ಲಾಕ್ಡೌನ್ ಗೆ ವಿನಾಯಿತಿ ನೀಡಿರುವುದು ಜೂನ್14 ರ ನಂತರ ಎಂಬುದನ್ನು ಅರ್ಥಮಾಡಿಕೊಳ್ಳಿ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ರಾಜ್ಯದ ಜನತೆಗೆ ಮಾಡಿಕೊಂಡ ಮನವಿ. ಶುಕ್ರವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಘೋಷಣೆ ಆಗಿರುವ ಲಾಕ್ಡೌನ್ ವಿನಾಯತಿ ಇಂದಿನಿಂದಲೇ ಜಾರಿಗೆ ಎಂಬಂತೆ ಜನ ವರ್ತಿಸುತ್ತಿದ್ದಾರೆ. ಮನೆಯಿಂದ ಹೊರ ಬರುತ್ತಿದ್ದಾರೆ. ಇದು ಸರಿಯಲ್ಲ…

ಕೆ.ಆರ್.ಎಸ್ ನಲ್ಲಿ ಬಿರುಕು..!! ಕಲ್ಲು ಗಣಿಗಾರಿಕೆಗಳು ತಂದಿಟ್ಟ ಆತಂಕ

writing-ಪರಶಿವ ಧನಗೂರು ಕೆಆರ್‌ಎಸ್ ಮೂರು ಪ್ರಮುಖ ನಾಲೆಗಳ ಮೂಲಕ ೧ಕೋಟಿ ಐವತ್ತು ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರುಣಿಸುತ್ತಿರುವ ರೈತರ ಜೀವನಾಡಿ. ಕರ್ನಾಟಕ ರಾಜ್ಯದ ರಾಜಧಾನಿ ಬೆಂಗಳೂರಿನ ಕೋಟ್ಯಂತರ ಜನರ ದಾಹ ತಣಿಸುತ್ತಿರುವ ಜೀವಜಲನಿಧಿ.. ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರಿನ ಕೋಟ್ಯಂತರ ಜನರು ಬೆಚ್ಚಿ ಬೀಳುವಂತೆ ಮಾಡಿರುವ ಈ ಸುದ್ಧಿ ನಿಜಕ್ಕೂ ಆಘಾತಕಾರಿಯಾಗಿಯೇ ಇದೆ. ಹಲವು ವರ್ಷಗಳಿಂದಲೂ ಗಾಳಿಸುದ್ಧಿಯಂತೆಯೇ ಅಂತೆ-ಕಂತೆ, ಕತೆಗಳಲ್ಲಿಯೇ ಅನುಮಾನಾಸ್ಪದವಾಗಿ ಜನರ ಬಾಯಿಂದ ಬಾಯಿಗೆ ಹರಿದಾಡುತ್ತಿತ್ತು. ಈಗ ಮಂಡ್ಯದ ಹಾಲಿ ಸಂಸದೆ ಸುಮಲತಾ ಅಂಬರೀಶ್ ಹೇಳಿಕೆಯೊಂದಿಗೆ…

ಆರ್ಥಿಕ ಸ್ಥಿತಿ ಹದಗೆಟ್ಟಿದ್ದರೂ ಬಡವರ ಅನುಕೂಲಕ್ಕೆ ಪ್ಯಾಕೇಜ್ ಘೋಷಣೆ-ಸಿಎಂ

ಹಾಸನ,ಜೂ,೧೧:ಕೊರೊನಾ ಸಂಕಷ್ಟ ಹಿನ್ನೆಲೆಯಲ್ಲಿ ಆರ್ಥಿಕ ಸ್ಥಿತಿ ಶೋಚನೀಯವಾಗಿದೆ ಆದರೂ ಬಡವರಿಗೆ ಅನಕೂಲವಾಗಬೇಕು ಎಂಬ ಕಾಣರಕ್ಕೆ ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಶುಕ್ರವಾರ ಬೂವನಹಳ್ಳಿ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರ ಅಪೇಕ್ಷೆಯಂತೆ ಸದ್ಯದಲ್ಲೇ ಹಾಸನ ಏರ್‌ಪೋರ್ಟ್ ಕೆಲಸ ಆರಂಭಿಸಲಾಗುವುದು.ಹಾಸನ ಜಿಲ್ಲೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಹೆಚ್ಚಿದೆ. ಸೋಂಕು ನಿಯಂತ್ರಣಕ್ಕೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಕೋವಿಡ್‌ನಿಂದ ಜನ ಸಾವಿಗೀಡಾಗುತ್ತಿರುವುದಕ್ಕೆ ಸರ್ಕಾರವೇ ಕಾರಣ ಎಂಬ…

11 ಜಿಲ್ಲೆಗಳಲ್ಲಿ ಲಾಕ್ ಡೌನ್ ವಿಸ್ತರಣೆ

ಬೆಂಗಳೂರು, ಜೂ,10:ತಜ್ಞರ ನೀಡಿರುವ ಸಲಹೆ ಮೇರೆಗೆ ಕೊರೊನಾ ಸೋಂಕು ಹೆಚ್ಚಿರುವ 12 ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದು ವರೆಲು ನಿರ್ಧರಿಸಾಗಿದೆ. ಈಗಿರುವ ನಿರ್ಭಂಧಗಳಲ್ಲಿ ಕೆಲವು ಮಾರ್ಪಾಡುಗಳನ್ನು ಸಡಿಲಿಕೆಗಳನ್ನು ಮಾಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ . ಸಿಎಂ ಯಡಿಯೂರಪ್ಪ ಸಭೆ ನಂತರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು,ಕೊರೊನಾ ವೈರಸ್ ಪಾಸಿಟಿವಿಟಿ ಹೆಚ್ಚಾಗಿರುವ 11 ಜಿಲ್ಲೆಗಳಲ್ಲಿ ಕಠಿಣ ಲಾಕ್‌ಡೌನ್ ವಿಸ್ತರಣೆ ಮಾಡುವುದಾಗಿ ಹೇಳಿದ್ದಾರೆ. ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಕೊಡಗು, ಚಾಮರಾಜನಗರ, ಮೈಸೂರು, ದಕ್ಷಿಣ ಕನ್ನಡ…

1 34 35 36 37 38 44
error: Content is protected !!