Browsing: ರಾಜ್ಯ

ರಾಜ್ಯ

ಬ್ಯಾರೇಜ್ ನಿರ್ಮಾಣಕ್ಕೆ ಭೂಮಿ ಪೂಜೆ

ಹುಬ್ಬಳ್ಳಿ ,ಜು.11: ಸಣ್ಣ ನೀರಾವರಿ ಇಲಾಖೆ ವತಿಯಿಂದ 94 ಲಕ್ಷ ರೂಪಾಯಿ ವೆಚ್ಚದಲ್ಲಿ ಹುಬ್ಬಳ್ಳಿಯ ಉಣಕಲ್ ಗ್ರಾಮದ ಸುಳ್ಳ ರಸ್ತೆಯಲ್ಲಿನ ಹಳ್ಳದ ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಭೂಮಿ ಪೂಜೆ ನೆರವೇರಿಸಿದರು.ಬ್ಯಾರೇಜ್ ನಿರ್ಮಾಣದಿಂದ ಸುತ್ತಮುತ್ತಲಿನ ಸುಮಾರು 74 ಎಕರೆ ಕೃಷಿ ಭೂಮಿಗೆ ನೀರು ಲಭಿಸಲಿದೆ. ಸ್ಥಳೀಯ ರೈತರು ಹಳ್ಳವನ್ನು ಹಾದು ಹೊಲಗಳಿಗೆ ತೆರಳಲು ರಸ್ತೆಯ ಅನುಕೂಲವಾಗಲಿದೆ. ಈ ಸಂದರ್ಭದಲ್ಲಿ ಹುಡಾ ಅಧ್ಯಕ್ಷ…

ಇಂಡಿ ತಾಲೂಕಿನ 23 ಕೆರಗಳ ತುಂಬಿಸುವ ಯೋಜನೆಗೆ ಅನುದಾನ ನೀಡಲು ಎಂ.ಬಿ ಪಾಟೀಲ್ ಮನವಿ

ಬೆಂಗಳೂರು,ಜು0 9. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ 23 ಕೆರೆಗಳನ್ನು ತುಂಬಿಸುವ ಯೋಜನೆಗೆ ಅನುದಾನ ಒದಗಿಸುವಂತೆ ಕೋರಿ ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಬೆಂಗಳೂರಿನಲ್ಲಿಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರನ್ನು ಭೇಟಿ ಮಾಡಿ ವಿನಂತಿಸಿದ್ದಾರೆ. ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಯಡಿಯೂರಪ್ಪನವರನ್ನು ಭೇಟಿ ಮಾಡಿ, ಚರ್ಚಿಸಿದ ಎಂ.ಬಿ.ಪಾಟೀಲ್‍ರವರು ಭೀಮಾನದಿ ಪಾತ್ರದಲ್ಲಿ ನೀರಿನ ಕೊರತೆಯ ಕಾರಣ ಇಂಡಿ ಭಾಗದ ಕೆಲವು ಪ್ರದೇಶಕ್ಕೆ ನೀರಾವರಿ ಸೌಕರ್ಯ ಕಲ್ಪಿಸಲಾಗಿಲ್ಲ. ನಾನು ಜಲಸಂಪನ್ಮೂಲ ಸಚಿವನಾಗಿದ್ದಾಗ ಕೃಷ್ಣಾ ನದಿ ನೀರನ್ನು ಎತ್ತಿ, ಭೀಮಾ ಭಾಗದ ಈ ಹಳ್ಳಿಗಳಿಗೆ…

ನದಿ ಶುದ್ಧೀಕರಣಕ್ಕೆ 1500 ಕೋಟಿ: ಸಿ.ಪಿ ಯೋಗೇಶ್ವರ್

ರಾಮನಗರ ಜು 09: ವೃಷಬಾವತಿ ನದಿಯ ಕೊಳಚೆ ನೀರನ್ನು ಮುಂದಿನ 5 ವರ್ಷಗಳಲ್ಲಿ ರೂ.1500.00 ಕೋಟಿಗಳ ವೆಚ್ಚದಲ್ಲಿ ಮೂರನೇ ಹಂತದಲ್ಲಿ ಸಂಸ್ಕರಣೆ ಮಾಡಿ ಕೃಷಿಗೆ ಹಾಗೂ ಕೆರೆಗೆ ನೀರು ತುಂಬಿಸುವ ಯೋಜನೆಯನ್ನು ಅನುಷ್ಟಾನಗೊಳಿಸುವುದಾಗಿ ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಸಿ.ಪಿ.ಯೋಗೇಶ್ವರ ರವರು ಬಿಡದಿಯ ಈಗಲ್ಟನ್ ರೆಸಾರ್ಟನಲ್ಲಿ ನಡೆದ ಮಾಧ್ಯಮ ಗೋಷ್ಟಿಯಲ್ಲಿ ತಿಳಿಸಿದರು. ಸಚಿವ ಯೋಗೇಶ್ವವರ ರವರು ಇಂದು ಬೆಳಿಗ್ಗೆ ಬೆಂಗಳೂರಿನ ಮೈಸೂರು ರಸ್ತೆಯ ಶ್ರೀ ಗಾಳಿ ಆಂಜನೇಯ ದೇವಾಲಯದಿಂದ ಬಿಡದಿಯ ಬೈರಮಂಗಲ ಕೆರೆಯವರೆಗೂ ವೃಷಬಾವತಿ ನದಿಯನ್ನು…

ಸರ್ಕಾರಿ ಶಾಲೆಯಲ್ಲಿ ಹೆಚ್ಚುತ್ತಿರುವ ದಾಖಲಾತಿ- ಸುರೇಶ್ ಕುಮಾರ್ ಸಂತಸ

ಬೆಂಗಳೂರು,ಜು,08: ಬೆಂಗಳೂರಿನಂತಹ ಮಹಾನಗರದಲ್ಲೂ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರ್ಕಾರಿ ಶಾಲೆಗಳತ್ತ ವಿದ್ಯಾರ್ಥಿಗಳು ಮುಖ ಮಾಡುತ್ತಿರುವುದು ಸರ್ಕಾರಿ ಶಾಲೆಗಳ ಮೇಲೆ ಸಾರ್ವಜನಿಕರು ಭರವಸೆ ಹೊಂದಿರುವುದರ ದ್ಯೋತಕ ವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಗುರುವಾರ ಬೆಂಗಳೂರು ನಗರದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ನೆಲಗದೇರನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ  ಭೇಟಿ ನೀಡಿ ವಿದ್ಯಾರ್ಥಿಗಳ ಶಾಲಾ ದಾಖಲಾತಿ ಪ್ರಕ್ರಿಯೆಯನ್ನು ಪರಿಶೀಲಿಸಿದ ನಂತರ ಅವರು ಮಾತನಾಡಿದರು. ಅತ್ಯಂತ ಗುಣಮಟ್ಟದ ಶಿಕ್ಷಣ …

ಮೇಕ್ ಶಿಫ್ಟ್ ಆಸ್ಪತ್ರೆಯನ್ನು ಉದ್ಘಾಟಿಸಿದ ಸಿಎಂ

ಬೆಂಗಳೂರು ಜು, 7: ಕೋವಿಡ್ ಮೂರನೇ ಅಲೆ ಎದುರಿಸಲು ಮುಂಜಾಗ್ರತಾ ಕ್ರಮವಾಗಿ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಸಿಎಸ್ಆರ್ ನಿಧಿಯಡಿ 70 ಹಾಸಿಗೆಗಳ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಿಸಿರುವುದು ರಾಜ್ಯದಲ್ಲಿಯೇ ಪ್ರಥಮ ಹಾಗೂ ವಿನೂತನವಾಗಿದ್ದು, ನಾಲ್ಕು ಕೋಟಿ ರೂಪಾಯಿ ವೆಚ್ಚದಲ್ಲಿ ದೇಶದಲ್ಲಿಯೇ ಅತಿ ಶೀಘ್ರವಾಗಿ ನಿರ್ಮಾಣಗೊಂಡ ಮೊದಲ ಮೇಕ್ ಶಿಫ್ಟ್ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು. ದೊಡ್ಡಬಳ್ಳಾಪುರ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ 70 ಬೆಡ್…

ಇಂದಿನಿಂದ ರಾಜ್ಯಾದ್ಯಂತ ಅನ್ ಲಾಕ್

ಬೆಂಗಳೂರು,05: ರಾಜ್ಯದಲ್ಲಿ ಕೊರೊನಾ ಕೊಂಚ ರಿಲೀಫ್​ ನೀಡಿದ್ದ ರಾಜ್ಯ ಸರ್ಕಾರ ಹಂತ ಹಂತವಾಗಿ ಅನ್​ಲಾಕ್​ ನಿಯಮಗಳನ್ನು ಜಾರಿಗೆ ತಂದಿತ್ತು. ಇದೀಗ ಜುಲೈ 5 ರಿಂದ ಅನ್​ಲಾಕ್​ 3.0 ಮಾಡಲು ಹೊರಟಿರುವ ಸರ್ಕಾರ ಕೆಲವು ನಿರ್ಭಂದಗಳೊಂದಿಗೆ ಅನ್​ಲಾಕ್​ ಘೋಷಣೆ ಮಾಡಿದೆ. ಅದರಂತೆ ಇಂದಿನಿಂದ ಇಡೀ ರಾಜ್ಯ ಎಂದಿನಂತೆ ಸಹಜವಾಗಿ ಇರಲಿದ್ದು, ಎಲ್ಲಾ ಚಟುವಟಿಕೆಗಳು ಕಾರ್ಯನಿರ್ವಹಿಸಲಿವೆ. ಈ ಅವಕಾಶ ಅಥವಾ ಅನುಮತಿ ಕೇವಲ 14 ದಿನಗಳ ಕಾಲ ಮಾತ್ರ ಇರಲಿದೆ. ಒಂದು ವೇಳೆ ಕೋವಿಡ್ ಪ್ರಕರಣಗಳ ಸಂಖ್ಯೆ ಈ ಸಮಯದಲ್ಲಿ…

ಎಸ್.ಎಸ್.ಎಲ್.ಸಿ.ಪರೀಕ್ಷೆ ನಡೆಯಬಾರದು; ವಿಶ್ವನಾಥ್

ಮೈಸೂರು, ಜು,೦4: ಎಸ್ ಎಸ್ ಎಲ್ ಸಿ‌ ಪರೀಕ್ಷೆ ಯಾವುದೇ ಕಾರಣಕ್ಕೂ ನಡೆಸಬಾರದು ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆಗ್ರಹಿಸಿದ್ದಾರೆ. ಅಕ್ಷರ ,ಆರೋಗ್ಯ ಚೆನ್ನಾಗಿದ್ದರೆ ಆಡಳಿತ ಚೆನ್ನಾಗಿರುತ್ತದೆ. ಮಗುವಿನ ಆರೋಗ್ಯ ಸುರಕ್ಷತೆ ಈಗ ಮುಖ್ಯ ನಂತರ ಶಿಕ್ಷಣ. ಇದನ್ನು ಅರ್ಥ ಮಾಡಿಕೊಳ್ಳದಿದ್ದರೆ ದೊಡ್ಡ ಅನಾಹುತವಾಗುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ಅವರು, ಎಚ್ಚರಿಸಿದರು. ಪಿಯುಸಿ ಪರಿಕ್ಷೆ ಬೇಡ ಅಂತಾ ಹೇಳಲಾಗಿದೆ. ಶಿಕ್ಷಣ ಸಮಿತಿಯ ವರದಿ ಏನು‌ ಹೇಳಿದೆ ? ನೀವು ಆರೋಗ್ಯ ಇಲಾಖೆಯ ಸಲಹೆ ತೆಗೆದುಕೊಂಡಿದ್ದೀರಾ ?…

ಸುಧೀಂದ್ರಹಾಲ್ದೊಡ್ಡೇರಿ ಇನ್ನೂ ನೆನಪು

ವಿಜ್ಞಾನಿ ಮತ್ತು ವಿಜ್ಞಾನ ವಿಷಯಗಳ ಅತ್ಯುತ್ತಮ ಕನ್ನಡದ ಸಮಕಾಲೀನ ಬರಹಗಾರರಾಗಿದ್ದ ಹಾಲದೊಡ್ಡೇರಿ ಸುಧೀಂದ್ರ ಇಂದು ನಮ್ಮನ್ನು ಅಗಲಿದ್ದಾರೆ. ಇಂದಿನ ಮಾಧ್ಯಮದ ಓದುಗರಿಗೆ ಮತ್ತು ವೀಕ್ಷಕರಿಗೆ ಭಾರತೀಯ ವಿಜ್ಞಾನದ ಸಾಧನೆ ಮತ್ತು ಪ್ರಯೋಗಗಳನ್ನು ಪರಿಚಯಿಸಲು ಸುಧೀಂದ್ರ ವಹಿಸುತ್ತಿದ್ದ ಆಸಕ್ತಿ, ಶ್ರದ್ಧೆ ಮತ್ತು ಅಧ್ಯಯನ ಅಸಾಧಾರಣವಾಗಿತ್ತು. ಸುಧೀಂದ್ರ ಹಾಲ್ದೊಡ್ಡೇರಿ 1961ರ ಡಿಸೆಂಬರ್ 3ರಂದು ಜನಿಸಿದರು. ಕನ್ನಡ ಪತ್ರಕರ್ತ ದಿವಂಗತ ನಾಗೇಶರಾಯರು ಇವರ ತಂದೆ. ಸುಧೀಂದ್ರ ಹಾಲ್ದೊಡ್ಡೇರಿ ತಂದೆಯವರು ಮನೆಗೆ ತರಿಸುತ್ತಿದ್ದ ದೇಶ-ವಿದೇಶಗಳ ಪತ್ರಿಕೆಗಳನ್ನು ಓದುತ್ತಾ ಬೆಳೆದರು. ಅವುಗಳಲ್ಲಿರುವ ವಿಜ್ಞಾನ…

ತೈಲಬೆಲೆ ಏರಿಕೆ ರಾಜ್ಯಸರ್ಕಾರಗಳ ಕೈಯಲ್ಲಿದೆ ; ನಿರ್ಮಲ ಸೀತಾರಾಮನ್

ಬೆಂಗಳೂರು,ಜು,02: ದೇಶದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ರಾಜ್ಯ ಸರ್ಕಾರಗಳು ಸೆಸ್,ತೆರಿಗೆ ದರಗಳನ್ನು ಕಡಿಮೆ ಮಾಡಿದರೆ ದರ ಕಡಿಮೆಯಸಗುತ್ತದೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು,ತೈಲ ಬೆಲೆ ಏರಿಕೆ ಸಂಬಂಧ,ರಾಜ್ಯ ಸರ್ಕಾರಗಳನ್ನ ಹೊಣೆ ಮಾಡಿದ್ದಾರೆ. ರಾಜ್ಯ ಸರ್ಕಾರಗಳ ಸೆಸ್ ಹೆಚ್ಚಳವಾಗಿದೆ. ರಾಜ್ಯಗಳು ತಮ್ಮ ತೆರಿಗೆ ಪಾಲು ಕಡಿಮೆ ಮಾಡಬಹುದು. ದರ ನಿಯಂತ್ರಣ ರಾಜ್ಯ ಸರ್ಕಾರಗಳ ಕೈಯಲ್ಲಿ ಇದೆ ಎಂದು ತಿಳಿಸಿದರು. ಕಚ್ಚಾ ತೈಲದ ಬೆಲೆ ತೀವ್ರ ಗತಿಯಲ್ಲಿ ಏರುತ್ತಿದೆ.…

ವಚನ ಸಾಹಿತ್ಯ ಬೆಳಕಿಗೆ ತಂದವರು ಹಳಕಟ್ಟಿ;ಎಂ.ಬಿ.ಪಾಟೀಲ್

ವಿಜಯಪುರ ,ಜು,02: ಹರಿದು ಹಂಚಿ ಹೋಗಿದ್ದ ವಚನ ಸಾಹಿತ್ಯವನ್ನು ಹುಡುಕಿ ಪ್ರಕಟಿಸಿ, ಪ್ರಚಾರ ಮಾಡಿ, ಬೆಳಕಿಗೆ ತಂದವರು ವಚನಪಿತಾಮಹರೆಂದೇ ಖ್ಯಾತರಾದವರು ಡಾ.ಫ.ಗು.ಹಳಕಟ್ಟಿವರು ಎಂದು ಬಿ.ಎಲ್.ಡಿ.ಇ ಅಧ್ಯಕ್ಷ, ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ್ ಹೇಳಿದರು. ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ನಿಮಿತ್ತ ಬಿ.ಎಲ್.ಡಿ.ಇ ಸಂಸ್ಥೆ ಆವರಣದಲ್ಲಿರುವ ಅವರ ಸಮಾಧಿಗೆ ಪೂಜೆ ಸಲ್ಲಿಸಿ, ಮಾತನಾಡಿದ ಅವರು, ಬಸವಣ್ಣ ಹಾಗೂ ಬಸವಾದಿ ಶರಣರು ಬರೆದಂತದಹ ವಚನ ಕಟ್ಟುಗಳು ಕಲ್ಯಾಣ ಕ್ರಾಂತಿಯ ನಂತರ ಮಠ-ಮಂದಿರಗಳಲ್ಲಿ, ಗುಡಿ-ಗುಂಡಾರಗಳಲ್ಲಿ, ಅಂಗಡಿ-ಮನೆಗಳಲ್ಲಿ, ಅಲ್ಲಲ್ಲಿ ಜಗುಲಿಗಳಲ್ಲಿ ಇದ್ದವು. ವಕೀಲಿ ವೃತ್ತಿಯ ನಿಮಿತ್ತ…

ಸಲ್ಯೂಟ್ ವಾರಿಯರ್ಸ್‌ ಆಲ್ಬಂ ಸಾಂಗ್‌ಗೆ ಎಸ್‌ಪಿ, ಸಿಇಒ ಚಾಲನೆ

ಚಿತ್ರದುರ್ಗ,ಜೂ,28: ಸರ್ಕಾರ ಕೋರೋನಾ ಲಾಕ್‌ಡೌನ್ ಸಡಿಲಿಕೆ ಮಾಡಿರಬಹುದು ಆದರೂ ಜನರು ಮೂರನೇ ಅಲೆಯ ಬಗ್ಗೆ ಎಚ್ಚರಿಕೆಯಿಂದ ಇರಬೇಕು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ ಚಿತ್ರದುರ್ಗವನ್ನು ಕೊರೋನಾ ಮುಕ್ತ ಮಾಡಲು ಸನ್ನದ್ಧವಾಗಿದೆ ಈ ಹಿನ್ನೆಲೆಯಲ್ಲಿ ಸಲ್ಯೂಟ್ ವಾರಿಯರ್ಸ್‌ ಸಾಂಗ್ ಅದ್ಬುತವಾಗಿ ಮೂಡಿಬಂದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ ಹೇಳಿದರು. ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಕೊರೋನಾ ಕುರಿತ ಜಾಗೃತಿ ಗೀತೆ ಸಲ್ಯೂಟ್ ವಾರಿಯರ್ಸ್‌ ಕನ್ನಡ ಆಲ್ಬಂ ಸಾಂಗ್ ಶೂಟಿಂಗ್‌ಗಾಗಿ ಹಮ್ಮಿಕೊಂಡಿದ್ದ ಮೂಹೂರ್ತ ಸಮಾರಂಭ ಉದ್ಘಾಟಿಸಿ ಮಾತನಾಡಿದರು.…

ಬಿಡಿಎ ಉದ್ದೇಶಿತ ನಿವೇಶನ,ಪ್ಲಾಟ್ ಗಳ ಶುಲ್ಕಹಿಂಪಡಿಯಲು ಎಫ್ ಕೆಸಿಸಿ ಐ ಮನವಿ

ಬೆಂಗಳೂರು,ಜೂ,28:ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿವೇಶನ ಮತ್ತು ಪ್ಲಾಟ್ ಗಳ ಖರೀದಿ ಶುಲ್ಕ ಹೆಚ್ಚಳಕ್ಕೆ ಮುಂದಾಗಿದ್ದು ಅದನ್ನು ಹಿಂಪಡಿಯುವಂತೆ ಕರ್ನಾಟ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದೆ. ಕರ್ನಾಟಕ ವಾಣಿಜ್ಯ ಮತ್ತುಕೈಗಾರಿಕಾ ಮಹಾಸಂಸ್ಥೆ ಅಧ್ಯಕ್ಷ ಪೆರಿಕಲ್ ಎಂ ಸುಂದರ್ ರವರು ಇಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಕೋವಿಡ್-19 ಸಾಂಕ್ರಾಮಿಕ ರೋಗ 2ನೇ ಅಲೆಯಿಂದಾಗಿ ಕೈಗಾರಿಕೋದ್ಯಮಿಗಳು ವ್ಯಾಪಾರಸ್ಥರು, ಮಧ್ಯಮ ವರ್ಗದವರು ಹಾಗೂ ಜನಸಾಮಾನ್ಯರು ಈಗಾಗಲೇ ಆರ್ಥಿಕ ನಷ್ಟ ಅನುಭವಿಸಿದ್ದು,…

ಜುಲೈ 19,22ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ

ಬೆಂಗಳೂರು,ಜೂ,28:ಕೊನೆಗೂ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಸಿಯೇ ತೀರಬೇಕೆಂದು ಹಠ ತೊಟ್ಟಿರುವ ಶಿಕ್ಷಣ ಸಚಿವರು ಪರೀಕ್ಷೆಗೆ ದಿನಾಂಕ ನಿಗದಿ ಮಾಡಿದ್ದಾರೆ. ಜುಲೈ 19 ಮತ್ತು 22 ರಂದು ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಂಡಿದ್ದು ಈ ಕುರಿತು ಇಂದು ಸುದ್ದಿಗೋಷ್ಟಿಯಲ್ಲಿ ವಿವರ ನೀಡಿದ್ದಾರೆ. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಜುಲೈ 19 ರಂದು…

ಮಲೇರಿಯಾ ನಿರ್ಮೂಲನಕ್ಕೆ ವಿದ್ಯಾರ್ಥಿಗಳ ಸಹಕಾರ ಮುಖ್ಯ

ಶಿಕಾರಿಪುರ,ಜೂ,೨೮: ಸಮುದಾಯದಲ್ಲಿ ಮಲೇರಿಯಾ ರೋಗವನ್ನು ನಿಯಂತ್ರಿಸಲು ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯವಾದದ್ದು ಎಂದು ಹಿರಿಯ ಆರೋಗ್ಯ ನಿರೀಕ್ಷಕ ಅಧಿಕಾರಿ ಸುರೇಶ್ ತಿಳಿಸಿದರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆರೋಗ್ಯ ಇಲಾಖೆ ಮತ್ತು ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದೊಂದಿಗೆ ನಡೆದ ೨೦೨೧ ನೇ ಸಾಲಿನ ತಾಲ್ಲೂಕು ಮಟ್ಟದ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ . ಮಲೇರಿಯಾ ರೋಗವು ಅನಾಫಿಲಿಸ್ ಹೆಣ್ಣುಸೊಳ್ಳೆ ಯಿಂದ ಹರಡುತ್ತಿದ್ದು ಸೊಳ್ಳೆ ನಿಯಂತ್ರಣಕ್ಕೆ ಸಮುದಾಯವು ಸತತವಾಗಿ ಇಲಾಖೆಯೊಂದಿಗೆ ಕೈಜೋಡಿಸಬೇಕು. ಈ ಸೊಳ್ಳೆಗಳು…

ಬೆಂಗಳೂರು ಮೂಲಭೂತ ಸೌಕರ್ಯಕ್ಕೆ ನಿರಂತರ ಶ್ರಮ; ಬಿಎಸ್ ವೈ

ಬೆಂಗಳೂರು,ಜೂ.27: ನಗರದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ವಿಧಾನಸೌಧದ ಬಾಂಕ್ವೆಟ್‍ನಲ್ಲಿ ಇಂದು ನಡೆದ ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ಕಾರ್ಯಕ್ರಮದಲ್ಲಿ ಅಂಚೆಚೀಟಿ ಬಿಡುಗಡೆ ಹಾಗೂ ಬೆಂಗಳೂರು ವಿವಿ ಆವರಣದಲ್ಲಿ ಕೆಂಪೇಗೌಡರ ಪುತ್ಥಳಿ ನಿರ್ಮಾಣಕ್ಕೆ ಚಾಲನೆ ನೀಡಿ ನಂತರ ಅವರು ಮಾತನಾಡಿದರು. ಬೆಂಗಳೂರನ್ನು ಮಾದರಿ ನಗರವನ್ನಾಗಿ ಮಾಡುವ ಸಂಕಲ್ಪ ತೊಡಲಾಗಿದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಹಲವಾರು ಯೋಜನೆಗಳನ್ನು ನೀಡಿದ್ದಾರೆ. ಪೆರಿಪರಲ್ ರಸ್ತೆ ನಿರ್ಮಾಣ, ಉಪನಗರ ರೈಲು ಯೋಜನೆ…

ಎಲ್ಲಾ ದಿನಗಳಲ್ಲೂ ಜೋಗದ ಸಿರಿವೈಭವಕ್ಕೆ ಅವಕಾಶ;ಯೋಗೇಶ್ವರ್

ಬೆಂಗಳೂರು ,ಜೂ. 25: ವಿಶ್ವವಿಖ್ಯಾತ ​ ಜೋಗದ ಸಿರಿಯ ವೈಭವವನ್ನು ಇನ್ನೂ ವರ್ಷದ ಎಲ್ಲಾ ದಿನಗಳಲ್ಲೂ ನೋಡುವ ಯೋಜನೆ ರೂಪಿಸಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಪ್ರವಾಸಿ ತಾಣಗಳನ್ನು ನೋಡಲು ಕೇರಳ, ಮಹಾರಾಷ್ಟ್ರದಿಂದ ಎಲ್ಲಾ ಕಡೆ ಜನರ ಬರುತ್ತಾರೆ. ಪ್ರವಾಸೋದ್ಯಮದಿಂದ ರಾಜ್ಯಕ್ಕೆ 18 ರಷ್ಟು ಜಿಡಿಪಿ ಬರುತ್ತಿದೆ. ಜಿಡಿಪಿಯಲ್ಲಿ ನಾವು ದೇಶದಲ್ಲೇ ಮೂರನೇ ಸ್ಥಾನದಲ್ಲಿದ್ದೇವೆ. ಇನ್ಮುಂದೆ ಇನ್ನಷ್ಟು ಪ್ರವಾಸೋದ್ಯಮ ಇಲಾಖೆ ಬಲಿಷ್ಠಗೊಳಿಸುತ್ತೇವೆ ಎಂದರು. ಪ್ರವಾಸಿ ಗೈಡ್ ಗಳಿಗೆ ಪರಿಹಾರ ಲಾಕ್​ಡೌನ್​ನಿಂದಾಗಿ…

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ೧೪೯೨.೯೭ ಕೋಟಿ ರೂ. ಅನುಮೋದನೆ

ಬೆಂಗಳೂರು,ಜೂ,೨೫: ಕಲ್ಯಾಣ ಕರ್ನಾಟಕದ ಜನತೆಗೆ ಇದೊಂದು ಸಂತಸದ ಸುದ್ದಿ, ರಾಜ್ಯಪಾಲರು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಕ್ರಿಯಾಯೋಜನೆ ರೂಪಿಸಲು ೧೪೯೨.೯೭ ಕೋಟಿ ರೂ.ಗೆ ಅನುಮೋದನೆ ನೀಡಿದ್ದಾರೆ ಗಿರಿಜನ ಉಪಯೋಜನೆಗೆ ೧೦೦ ಕೋಟಿ ರೂ., ವಿಶೇಷ ಘಟಕ (ಎಸ್‌ಸಿಪಿ) ೩೦೦ ಕೋಟಿ ರೂ. ಹಾಗೂ ಸಾಮಾನ್ಯ ಯೋಜನೆಗೆ ೧೦೯೨.೯೭ ರೂ. ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ಅದರಂತೆ ಕ್ರಿಯಾಯೋಜನೆ ರೂಪಿಸಲು ರಾಜ್ಯಪಾಲರಿಂದ ಗ್ರೀನ್‌ಸಿಗ್ನಲ್ ದೊರೆತಿದೆ. ೨೦೨೧-೨೨ ನೇ ಸಾಲಿಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಒದಗಿಸಲಾಗಿರುವ ರೂ. ೧೪೯೨.೯೭…

ಕೃಷಿ ಸಚಿವರ ವರ್ತನೆಗೆ ಕಾಂಗ್ರೆಸ್ ಟೀಕೆ

ಬೆಂಗಳೂರು,ಜೂ,24: ಮುಂಗಾರು ಸಮಯದಲ್ಲಿ ಬಿತ್ತನೆ ಬೀಜ ಸಿಗದೆ ರೈತರು ಪರದಾಡುತ್ತಿದ್ದರೆ ಕೃಷಿ ಸಚಿವರು ಮೈಮರೆತು ಮಲಗಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ‘ಆಕ್ಸಿಜನ್, ಲಸಿಕೆಗಳ ನಂತರ ಈ ಸರ್ಕಾರದ ‘ಇಲ್ಲ’ಗಳ ಪಟ್ಟಿಗೆ ಹೊಸ ಸೇರ್ಪಡೆಯಾಗಿರುವುದು ಗೊಬ್ಬರ, ಬಿತ್ತನೆ ಬೀಜ. ಈ ಹದವಾದ ಮುಂಗಾರಿನ ವಾತಾವರಣದಲ್ಲಿ ರೈತರು ಬೆಳೆ ಹಾಕಲು ತುರಾತುರಿಯಲ್ಲಿದ್ದರೂ ಬಿತ್ತನೆ ಬೀಜ, ಗೊಬ್ಬರ ಸಿಗದೆ ಪರದಾಡುತ್ತಿದ್ದಾರೆ, ಕೃಷಿ ಸಚಿವ ಬಿ.ಸಿ.ಪಾಟೀಲ್‌ ಚಾದರ ಹೊದ್ದು ಮಲಗಿದ್ದಾರೆ. ಈ ಅಯೋಗ್ಯತನಕ್ಕೆ ಏಕೆ ಮಂತ್ರಿಗಿರಿ’…

೨೪ ಗಂಟೆಯೊಳಗೆ ಮಾಜಿ ಕಾರ್ಪೋರೇಟರ್ ಹತ್ಯೆ ಆರೋಪಿಗಳ ಬಂಧನ-ಸಿಎಂ

ಬೆಂಗಳೂರು ,ಜೂ, ೨೪: ಮಗರದ ಚಲವಾದಿಪಾಳ್ಯದಲ್ಲಿ ಕೊಲೆಯಾದ ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ೨೪ ಗಂಟೆಯೊಳಗೆ ಬಂಧಿಸುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಗೆ ಕಿಬ್ಬೊಟ್ಟೆಯ ಭಾಗಕ್ಕೆ ಡ್ರ್ಯಾಗರ್ ನಿಂದ ಮೂರು ಬಾರಿ ಇರಿದಿದ್ದ ಹಂತಕ, ಮತ್ತೊಬ್ಬ ಕತ್ತಿಗೆ ಹಾಕಿ ಒಂದೇ ಬಾರಿಗೆ ಕೊಯ್ದಿದ್ದ. ಕೋಳಿ ಕಟ್ ಮಾಡುವ ಮಚ್ಚಿನಿಂದ ತಲೆಗೆ ಹೊಡೆದು ಎಸ್ಕೇಪ್ ಆಗಿರೋ ದುಷ್ಕರ್ಮಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಕಿಬ್ಬೊಟ್ಟೆಯ ಬಳಿ…

ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ

ಬೆಂಗಳೂರು,ಜೂ,24:ಹಾಡು ಹಗಲೇ ಜನನಿನಿಡಿ ಪ್ರದೇಶದಲ್ಲಿ ಮಾಜಿ ಮಹಾನಗರ ಪಾಲಿಕೆ ಸದಸ್ಯೆ ರೇಖಾ ಕದಿರೇಶ್ ಅವರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘೋರ ಘಟನೆಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನಲ್ಲಿ ಜರುಗಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಅವರ ಕಚೇರಿ ಮುಂದೆಯೇ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಒಳಗಿದ್ದ ರೇಖಾ ಕದಿರೇಶ್ ಅವರನ್ನು ಹೊರಗೆ ಕರೆದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ತೀವ್ರ ಹಲ್ಲೆ ನಡೆಸಿದ್ದಾರೆ. ರಕ್ತಸ್ರಾವವಾಗಿ ಕೆಳಗೆ ಬಿದ್ದ ಅವರನ್ನು ಸ್ಥಳದಲ್ಲಿದ್ದವರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.ರೇಖಾ ಅವರು ಮೃತಪಟ್ಟ…

1 37 38 39 40 41 49
error: Content is protected !!